Author: admin

ಮಧುರೈ: ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ಮಧುರೈನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಪರಿಮಳಾ ಹಾಗೂ ಶರಣ್ಯಾ ಮೃತಪಟ್ಟವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಹಲವು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಗುರುವಾರ ಮುಂಜಾನೆ ನಡೆದ ಈ ಸ್ಫೋಟದ ಬೀಕರತೆಗೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು, ಹೊಗೆ ಆವರಿಸಿತ್ತು. ಒಳಗಿದ್ದವರನ್ನು ರಕ್ಷಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಧುರೈ ಜಿಲ್ಲಾಧಿಕಾರಿ ಎಂ.ಎಸ್. ಸಂಗೀತಾ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು:   ರಸ್ತೆಗುಂಡಿಗಳನ್ನು ವೈಜ್ಞಾನಿಕವಾಗಿ ಮುಚ್ಚಲು ಬಿಬಿಎಂಪಿ ಮುಂದಾಗಿದೆ. ಜೆಟ್ ಪ್ಯಾಚರ್ ಯಂತ್ರದ ಮೂಲಕ ರಸ್ತೆಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ನಡೆಸಿದೆ, ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಈ ಕಾರ್ಯ ನಡೆಸಲಾಗಿದೆ. ಪಂತರಪಾಳ್ಯ — ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಉಂಟಾಗಿದ್ದ ರಸ್ತೆಗುಂಡಿಯನ್ನು ಹೊಸ ಯಂತ್ರದ ಮೂಲಕ ಅಧಿಕಾರಿಗಳ ಸಮ್ಮುಖದಲ್ಲಿ ದುರಸ್ತಿಗೊಳಿಸಲಾಯಿತು. ತ್ವರಿತವಾಗಿ ಗುಂಡಿ ಮುಚ್ಚುವುದಲ್ಲದೆ ಮತ್ತೆ ಗುಂಡಿ ಉಂಟಾಗದಂತೆ ಈ ಮಾದರಿಯನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಆರ್.ನಗರ ವಲಯ ಆಯುಕ್ತ ಅಜಯ್, ಜೆಟ್ ಪ್ಯಾಚರ್ ಯಂತ್ರದ ಮೂಲಕ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚಬಹುದಾಗಿದೆ. ಒಂದು ಬಾರಿಗೆ 150 ರಿಂದ 180 ಚ.ಮೀ. ಅಗಲದ ಗುಂಡಿಗಳನ್ನು ಮುಚ್ಚಬಹುದಾಗಿದೆ. ಗುಂಡಿ ಮುಚ್ಚಿದ ಕೂಡಲೆ ವಾಹನಗಳು ಅದರ ಮೇಲೆ ಸರಾಗವಾಗಿ ಸಂಚಾರ ಮಾಡಬಹುದಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಕಳೆದ ರಾತ್ರಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು–ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಕಿಡಿಕಾರಿದ್ದಾರೆ. ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ ಎಂದಿರುವ ಎಚ್‌ಡಿ ಕುಮಾರಸ್ವಾಮಿ, ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್…

Read More

ರಾಯಚೂರು: ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿರುವ ಘಟನೆ ನಡೆದಿದೆ. ರಾಯಚೂರಿನ ತಿಮ್ಮಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿದೆ. ತಡರಾತ್ರಿಯಿಂದ ಬೆಳಿಗ್ಗೆವರೆಗೂ ಗಣೇಶ ಮೂರ್ತಿ ವಿಸರ್ಜನೆ ನಡೆದಿದ್ದು, ಮೆರವಣಿಗೆ ವೇಳೆ ಗಲಾಟೆಯಾಗಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಗಣೇಶ ವಿಸರ್ಜನೆ ವೇಳೆ ಮಂಡ್ಯದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗಣೇಶ ವಿಸರ್ಜನೆ ವೇಳೆ ಮಂಡ್ಯದಲ್ಲಿ ಹಿಂದು ಮುಸ್ಲಿಂ ಸಮುದಾಯದವರ ಮಧ್ಯೆ ಗಲಾಟೆ ನಡೆದಿದೆ. ಹಿಂದೂ ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲೆಸೆದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಗಣೇಶ ಮೂರ್ತಿ ಮೇಲೆ ಕಲ್ಲು, ಚಪ್ಪಲಿ ತೂರಾಡಿದ್ದಾರೆ. ಇದರಿಂದ ನಾಗಮಂಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಪೋಸ್ಟ್‌ನಲ್ಲಿ ಆರ್.ಅಶೋಕ ಅವರು, ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಸಹಿಸಲು ಸಾಧ್ಯವಿಲ್ಲದ್ದು. ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹದ್ದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ…

Read More

ಮೆಪ್ಪಾಡಿ: ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬದ 9 ಸದಸ್ಯರನ್ನು ಕಳೆದುಕೊಂಡಿದ್ದ ಕೇರಳದ ಯುವತಿ ತಾನು ಪ್ರೀತಿಸಿದವನ ಸಾಂತ್ವಾನದಿಂದ ನೋವು ಮರೆಯುತ್ತಿದ್ದಳು. ಆದ್ರೆ, ಇದೀಗ ಆ ಯುವಕನೂ ಅಪಘಾತದಲ್ಲಿ ಮೃತಪಟ್ಟ ದುರಂತ ಘಟನೆ ನಡೆದಿದೆ. ಶ್ರುತಿ ತನ್ನವರನ್ನು ಕಳೆದುಕೊಂಡು ತಬ್ಬಲಿಯಾದ ಯುವತಿಯಾಗಿದ್ದಾಳೆ. ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಈಕೆ ತನ್ನ ಕುಟುಂಬದ 9 ಮಂದಿಯನ್ನು ಕಳೆದುಕೊಂಡಳು. ಈಕೆಗೆ ಡಿಸೆಂಬರ್ ನಲ್ಲಿ ಜೆನ್ಸನ್ ಎಂಬಾತನೊಂದಿಗೆ ವಿವಾಹ ನಿಶ್ಚಯವಾಗಿತ್ತು. ಆತ ಒಬ್ಬನಾದರೂ ಇದ್ದಾನೆ ಎನ್ನುವ ಧೈರ್ಯದಲ್ಲಿ ಆಕೆಯಿದ್ದಳು. ಆದ್ರೆ, ಮಂಗಳವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜೆನ್ಸನ್ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಕೊನೆಯುಸಿರೆಳೆದಿದ್ದಾನೆ. ಜೆನ್ಸನ್ ಹಾಗೂ ಶ್ರುತಿ ವಿವಾಹ ಸರಳವಾಗಿ ಆಚರಿಸಲು ಕುಟುಂಬಸ್ಥರು ತೀರ್ಮಾನಿಸಿದ್ದರಂತೆ. ಹೀಗಾಗಿ ಮದುವೆ ತಯಾರಿಗಳು ನಡೆಯುತ್ತಿದ್ದವು. ಈ ನಡುವೆ ಶ್ರುತಿ ಸಂಬಂಧಿಕರು ಹಾಗೂ ಜೆನ್ಸನ್ ಮದುವೆ ತಯಾರಿಗಾಗಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದ್ದು, ಜೆನ್ಸನ್ ಗಂಭೀರವಾಗಿ ಗಾಯಗೊಂಡಿದ್ದ. ಬುಧವಾರ…

Read More

ಬೆಂಗಳೂರು: ನಾವು ನಾಗಮಂಗಲದಲ್ಲಿದ್ದೇವೆಯೋ? ಪಾಕಿಸ್ತಾನದಲ್ಲೋ? ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ನಡೆಸಿದ್ದಾರೆ. ಪೆಟೋಲ್ ಬಾಂಬ್ ಸ್ಪೋಟಿಸಿ ತಲ್ವಾರ್ ಝಳಪಿಸಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನ. ಇದರ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊರಬೇಕು ಎಂದು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನಾಗಮಂಗಲದಲ್ಲಿ ನಿನ್ನೆ ಗಣೇಶನ ಮೆರವಣಿಗೆಯ ಸಂದರ್ಭದಲ್ಲಿ ನಡೆದಿರುವ ಅಹಿತಕರ ಘಟನೆಯ ಬಗ್ಗೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಘಟನೆಯ ಸಂದರ್ಭದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದ್ದು ಅವನ್ನು ಪರಿಶೀಲನೆ ನಡೆಸಲಾಗುವುದು. ಈ ಪ್ರಕರಣದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಿದ್ದೇನೆ. ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗಿದ್ದು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಮ್ಮ ನಾಗಮಂಗಲ ಶಾಂತಿ ಸೌಹಾರ್ದತೆಯ ತಾಣ. ಇಲ್ಲಿ ಯಾವುದೇ ಅನುಚಿತ ಘಟನೆಗೆ ಅವಕಾಶ ಮಾಡಿಕೊಡುವುದಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅಂಚೆ ಕಚೇರಿಯಿಂದ ಮಹಿಳೆಯರಿಗೆ ವಿಶೇಷ ಯೋಜನೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಪ್ರಾರಂಭಿಸಲಾಗಿದೆ. ಈ ಯೋಜನೆಯನ್ನು ವಿಶೇಷವಾಗಿ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಆರ್ಥಿಕ ಭದ್ರತೆಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ. 2023 ರ ಬಜೆಟ್ ನಲ್ಲಿ ಈ ಯೋಜನೆ ಮಂಡಿಸಲಾಯಿತು. ದೇಶದಲ್ಲಿ ವಾಸಿಸುವ ಮಹಿಳೆಯರು ಮತ್ತು ಹೆಣ್ಣು ಮಕ್ಕಳಿಗೆ ಸುರಕ್ಷಿತ ಮತ್ತು ಆಕರ್ಷಕ ಉಳಿತಾಯ ಆಯ್ಕೆಯನ್ನ ಈ ಯೋಜನೆ ಒದಗಿಸುತ್ತದೆ. ಪೋಸ್ಟ್ ಆಫೀಸ್ ಎಂಎಸ್‌ಎಸ್ಸಿ ಯೋಜನೆಯ ವೈಶಿಷ್ಟ್ಯಗಳು: ಅರ್ಜಿದಾರರು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಯೋಜನೆಯಲ್ಲಿ (ಎಂಎಸ್‌ಎಸ್ಸಿ ಯೋಜನೆ) ಕೇವಲ 2 ವರ್ಷಗಳವರೆಗೆ ಹೂಡಿಕೆ ಮಾಡಬಹುದು. ಈ ಯೋಜನೆಯಲ್ಲಿ, ಮಹಿಳೆಯರು ಮಾತ್ರ ತಮ್ಮದೇ ಆದ ಖಾತೆಯನ್ನು ತೆರೆಯಬಹುದು. ಎಂಎಸ್‌ಎಸ್ಸಿ ಯೋಜನೆಯಲ್ಲಿ ಲಭ್ಯವಿರುವ ಬಡ್ಡಿದರದ ಬಗ್ಗೆ ಮಾತನಾಡುವುದಾದರೆ, ವಾರ್ಷಿಕ 7.5% ಬಡ್ಡಿದರವನ್ನು ಒದಗಿಸಲಾಗುತ್ತದೆ, ಇದು ಬ್ಯಾಂಕಿನ ಎಫ್ಡಿ ಖಾತೆಯ ಮೇಲಿನ ಬಡ್ಡಿದರಕ್ಕಿಂತ ಹೆಚ್ಚಾಗಿದೆ. ಈಗ ಹೂಡಿಕೆಯ ಬಗ್ಗೆ ಮಾತನಾಡುವುದಾದರೆ, ನೀವು ಕನಿಷ್ಠ 1000 ರೂ.ಗಳಿಂದ ಹೂಡಿಕೆ ಮಾಡಲು ಪ್ರಾರಂಭಿಸಬಹುದು ಮತ್ತು ನೀವು ಗರಿಷ್ಠ…

Read More

ಚಿತ್ರದುರ್ಗದ ರೇಣುಕಾ ಸ್ವಾಮಿ ಕಿಡ್ನಾಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕಡೆ ರೇಣುಕಸ್ವಾಮಿ ಕರೆತರುವ ಮೊದಲು ಆರೋಪಿಗಳು ಆತನನ್ನ ತುಮಕೂರಿನ ಬಾರ್ ವೊಂದಕ್ಕೆ ಕರೆತಂದಿದ್ರಂತೆ. ತುಮಕೂರಿನ ರಂಗಾಪುರದ ದುರ್ಗಾ ಬಾರ್ ನಲ್ಲಿ ಆರೋಪಿಗಳು ಮದ್ಯ ಖರೀದಿಸಿದ್ದರು. ಮಧ್ಯಾಹ್ನದ ವೇಳೆಗೆ ತುಮಕೂರಿನ ಬಳಿ ಇಟಿಯೋಸ್ ಕಾರು ನಿಲ್ಲಿಸಿದ್ದಾರೆ. ಬಳಿಕ A4 ರಾಘವೇಂದ್ರ, A6 ಜಗ, A7 ಅನು ಕುಮಾರ್ ಹಾಗೂ ರೇಣುಕಾ ಸ್ವಾಮಿ ಕಾರಿನಿಂದ ಇಳಿದಿದ್ರು. ಬಳಿಕ ಕಾರಿನಿಂದ ಇಳಿದು ಬಾರ್ ಒಳಗೆ ಬರುತ್ತಿರುವ ದೃಶ್ಯ ಬಾರ್ ಹೊರಭಾಗದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾರ್ ಒಳಗೆ ಇದ್ದ ಕೌಂಟರ್ ನತ್ತ ನಾಲ್ಕು ಜನ ತೆರಳಿದ್ದರು. ಈ ವೇಳೆ ಎರಡು ಬಿಯರ್, ಎರಡು ಲೀಟರ್ ವಾಟರ್ ಬಾಟಲ್, ಸ್ನಾಕ್ಸ್ ಖರೀದಿಸಿದ್ದರು. ಬಾರ್ ಕ್ಯಾಶಿಯರ್ ಮಂಜುನಾಥ್ ಆರೋಪಿಗಳಿಗೆ ಮದ್ಯ ನೀಡಿದ್ದರು. ಪೊಲೀಸರು ಬಂದು ನನಗೆ ಸಿಸಿ ಕ್ಯಾಮೆರಾ ದೃಶ್ಯ ತೋರಿಸಿದ್ದಾಗಲೇ, ಇದು ರೇಣುಕಾ ಸ್ವಾಮಿ ಅಂತ ಗೊತ್ತಾಗಿದ್ದು ಅಂತ ಆ ದಿನದ ಇಂಚಿಂಚೂ…

Read More