Author: admin

ಹಾಸನ: ಸೆಪ್ಟೆಂಬರ್ 15ರಂದು ಕರ್ನಾಟಕದ ಘನ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ, ಮಾನವ ಸರಪಳಿಯನ್ನು ನಿರ್ಮಿಸಿ, ಪ್ರಜಾಪ್ರಭುತ್ವದ ಮಹತ್ವವನ್ನು ಸಾರಲು ಕರೆ ನೀಡಲಾಗಿದೆ  ಎಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಹೇಳಿದರು. ಸೆಪ್ಟೆಂಬರ್ 15ರ ಭಾನುವಾರದಂದು ಬೆಳಗ್ಗೆ 8:30ರಿಂದ 9:30ರ ತನಕ ಮಾನವ ಸರಪಳಿ ನಿರ್ಮಿಸಲಾಗುತ್ತದೆ. ಅರಕಲಗೂಡು ತಾಲೂಕಿನ ಕಡೂರುಹೊಸಳ್ಳಿ ಗ್ರಾಮದಿಂದ ಈ ಸರಪಳಿ ಆರಂಭಗೊಳ್ಳಲಿದ್ದು, ಹಗರೆ, ಬೇಲೂರು, ಕೈಮರ ಚೆಕ್ ಪೋಸ್ಟ್, ಚಿಕ್ಕಮಗಳೂರು ಗಡಿ ಮೂಲಕ ಸುಮಾರು 114 ಕಿಲೋಮೀಟರ್‌ಗಳಷ್ಟು ಐತಿಹಾಸಿಕ ಮಾನವ ಸರಪಳಿ ನಿರ್ಮಾಣಗೊಳ್ಳಲಿದೆ ಎಂದು ತಿಳಿಸಿದರು. ಪ್ರಜಾಪ್ರಭುತ್ವದ ಮಹತ್ವದ ಕಾರ್ಯದಲ್ಲಿ ನಾವೆಲ್ಲರೂ ಕೈ ಜೋಡಿಸಿ, ಮಾನವ ಸರಪಳಿಯ ಭಾಗವಾಗೋಣ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯೋಣ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಇಂದು, ಚಂದ್ರನು ವೃಶ್ಚಿಕ ರಾಶಿಯ ನಂತರ ಧನು ರಾಶಿಗೆ ಚಲಿಸಲಿದ್ದಾನೆ. ಅಲ್ಲದೆ, ಈ ದಿನ ರಾಧಾ ಅಷ್ಟಮಿ ಹಬ್ಬವನ್ನು ಆಚರಿಸಲಾಗುತ್ತದೆ. ರಾಧಾ ಅಷ್ಟಮಿಯ ದಿನ ರವಿಯೋಗ, ಪ್ರೀತಿ ಯೋಗ, ಆಯುಷ್ಮಾನ್ ಯೋಗ ಮತ್ತು ಜ್ಯೇಷ್ಠ ನಕ್ಷತ್ರದ ಶುಭ ಸಂಯೋಗ ನಡೆಯುತ್ತಿದ್ದು, ಗ್ರಹಗಳ ಸ್ಥಾನ ಬದಲಾವಣೆಯಿಂದ ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ…

Read More

ಪಾವಗಡ: ಶಾಲಾ ಕಾಲೇಜು ಮಕ್ಕಳಿಗೆ ನೈತಿಕ ಮೌಲ್ಯ,ಪರೀಕ್ಷೆ ಭಯ,ಪೋಕ್ಸೋ ಸಂಬಂಧಿತ ಅರಿವಿನ ಕಾರ್ಯಕ್ರಮ ನಡೆಸುತ್ತಿರುವ ಸಮಾಜ ಸೇವಕ ಪಾವಗಡ ನವೀನ್ ಕಿಲಾರ್ಲಹಳ್ಳಿಯವರಿಗೆ ಶಾಸಕರು ಹೆಚ್.ವಿ.ವೆಂಕಟೇಶ್ ಅವರು ಬುಧವಾರ ಅವರ ನಿವಾಸಕ್ಕೆ ತೆರಳಿ ಅಭಿನಂದಿಸಿ ಗೌರವ ಸಲ್ಲಿಸಿದ ಕಾರ್ಯ ಸಮಾಜದಲ್ಲಿ ಪ್ರಶಂಸೆಗೆ ಪಾತ್ರವಾಯಿತು. ಯಾವುದೇ ಹಣದ ನಿರೀಕ್ಷೆ ಮಾಡದೆ ಸ್ವಂತ ಖರ್ಚಿನಲ್ಲಿ ಕರ್ನಾಟಕ ರಾಜ್ಯದ ಶಾಲಾ ಕಾಲೇಜು ಮಕ್ಕಳಿಗೆ ಜಾಗೃತಿ ಕಾರ್ಯ ಮಾಡುತ್ತಿರುವ ಮಾದರಿ ಕಾರ್ಯಕ್ರಮ ಅದೆಷ್ಟೋ ಮಕ್ಕಳ ಬದುಕಿನಲ್ಲಿ ಬದಲಾವಣೆ ತಂದಿದೆ ಎಂದು ತಾಲ್ಲೂಕಿನ ಜನತೆ ಈಗಾಗಲೇ ಮೆಚ್ಚುಗೆಯ ಮಹಾಪೂರವೇ ಹರಿಸಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ಶಾಸಕ ಹೆಚ್.ವಿ.ವೆಂಕಟೇಶ್ ಅವರು  ನವೀನ್ ಮಾಡುತ್ತಿರುವ ಸೇವೆ ಅನ್ಯರಿಗೆ ಪ್ರೇರಣೆಯಾಗಿದೆ. ಜೊತೆಗೆ ಅದ್ಭುತವಾಗಿ ಮೂಡಿ ಬರುತ್ತಿದೆ. ಕಾರ್ಯಕ್ರಮದ ಬಳಿಕ ಮಕ್ಕಳು ತಮ್ಮ ಅನುಭವಗಳನ್ನು ಹೇಳುತ್ತಿರುವುದನ್ನು ಕಣ್ಣಾರೆ ಕಂಡು  ನನಗೆ ತುಂಬಾ ಇಷ್ಟವಾಯಿತು.ಇಂತಹ ಕಾರ್ಯಕ್ರಮವನ್ನು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಮಾಡುತ್ತಿರುವುದು ನಮ್ಮ ತಾಲ್ಲೂಕಿಗೆ ಹೆಮ್ಮೆಯೆಂದರು. ನನ್ನಿಂದ ಯಾವುದೇ ರೀತಿಯ ಸಹಕಾರ ನೀಡಬೇಕೋ ನೀಡುತ್ತೇನೆ ಎಂದು ಪಾವಗಡ ತಾಲ್ಲೂಕಿನ…

Read More

ನಟ, ನಿರ್ದೇಶಕ, ಕಥೆಗಾರ, ಸ್ಯಾಂಡಲ್‌ವುಡ್‌ನ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 60ನೇ ವರ್ಷಕ್ಕೆ ಕಾಲಿಟ್ಟಿರುವ ರಮೇಶ್ ಅರವಿಂದ್, ಇನ್ನೂ ಯಂಗ್ ಆಯಂಡ್ ಎನೆರ್ಜೆಟಿಕ್ ಆಗಿದ್ದಾರೆ. ಈ ಸಂಭ್ರಮದ ನಡುವೆಯೇ ರಮೇಶ್ ಇದೀಗ ದರ್ಶನ್ ಕೇಸ್‌ ಬಗ್ಗೆ ಮಾತನಾಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಕೇಸ್‌ನ ಆರೋಪ ಹೊತ್ತು ಜೈಲು ಸೇರಿರುವ ದರ್ಶನ್ ಬಗ್ಗೆ ರಮೇಶ್ ಅರವಿಂದ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿ ಮೂವರು ದರ್ಶನ್‌ಗಳಿದ್ದಾರೆ ಅಂತ ರಮೇಶ್ ಹೇಳಿದ್ದಾರೆ. ಇಷ್ಟು ದಿನ ದರ್ಶನ್ ಬಗ್ಗೆ ನಾನೆಲ್ಲೂ ಮಾತಾಡಿರಲಿಲ್ಲ. ದರ್ಶನ್ ಅಂದಾಕ್ಷಣ ನನಗೆ ಸೂಪರ್ ಸ್ಟಾರ್ ದರ್ಶನ್ ನೆನಪಾಗ್ತಾರೆ. ವೀಕೆಂಡ್ ವಿಥ್ ರಮೇಶ್ ವೇದಿಕೆ ಮೇಲೆ ಕೂತಿದ್ದ ದರ್ಶನ್ ನೆನಪಾಗುತ್ತೆ ಅಂತ ರಮೇಶ್ ನೆನಪಿಸಿಕೊಂಡಿದ್ದಾರೆ. ನಿನ್ನೆಯ ದರ್ಶನ್, ಇವತ್ತಿನ ದರ್ಶನ್, ನಾಳೆಯ ದರ್ಶನ್ ಇದ್ದಾರೆ ಅಂತ ರಮೇಶ್ ಅರವಿಂದ್ ಹೇಳಿದ್ದಾರೆ. ನಿನ್ನೆಯ ದರ್ಶನ್ ಅವರನ್ನು ಸ್ಟಾರ್ ಆಗಿ ನೋಡಿದ್ವಿ. ಇವತ್ತಿಗೆ ದರ್ಶನ್‌ನ ಇಂಥದ್ದೊಂದು ಸಮಸ್ಯೆಯಲ್ಲಿ, ಪ್ರಕರಣದಲ್ಲಿ ನಾವು ನೋಡ್ತಿದ್ದೀವಿ ಅಂತ…

Read More

ಕನ್ನಡ ಮನರಂಜನಾ ವಾಹಿನಿ ಸ್ಟಾರ್ ಸುವರ್ಣ ಹೊಸ ರಿಯಾಲಿಟಿ ಶೋವನ್ನು ಇದೇ ವೀಕೆಂಡ್‌ ನಲ್ಲಿ ಆರಂಭ ಮಾಡುತ್ತಿದೆ.ವೀಕೆಂಡ್‌ ನಲ್ಲಿ ರಿಲ್ಯಾಕ್ಸ್ ಆಗಬೇಕು ಅನ್ನೋ ವೀಕ್ಷಕರಿಗೆ ಈ ಹೊಚ್ಚ ಹೊಸ ರಿಯಾಲಿಟಿ ಶೋ ಮೂಲಕ ಮಸ್ತ್ ಮನರಂಜನೆಯ ರಸದೌತಣ ನೀಡುವುದಕ್ಕೆ ಮುಂದಾಗಿದೆ ‘ಸುವರ್ಣ ಸೆಲೆಬ್ರಿಟಿ ಲೀಗ್’. ‘ಸುವರ್ಣ ಸೆಲೆಬ್ರಿಟಿ ಲೀಗ್’ ಕಿರುತೆರೆಯ ಫೇಮಸ್ ಸೆಲೆಬ್ರಿಟಿಗಳಿಗಾಗಿಯೇ ಆರಂಭಿಸುತ್ತಿರುವ ಹೊಸ ರೀತಿಯ ರಿಯಾಲಿಟಿ ಶೋ. ಈ ಶೋನಲ್ಲಿ ಸುಮಾರು ಎರಡು ತಂಡಗಳು ಇರುತ್ತವೆ. 10 ಮಂದಿ ಸೆಲೆಬ್ರಿಟಿಗಳು ಈ ಶೋಗಳಲ್ಲಿ ಭಾಗವಹಿಸುತ್ತಿದ್ದಾರೆ. ಸುಮಾರು 8 ವಾರಗಳ ಕಾಲ ಅಂದರೆ, ಎರಡು ತಿಂಗಳ ಕಾಲ ಕಿರುತೆರೆಯಲ್ಲಿ ಈ ಸಮರ ನಡೆಯಲಿದೆ. ಕೊನೆಯಲ್ಲಿ ಯಾವ ತಂಡ ‘ಸುವರ್ಣ ಸೆಲೆಬ್ರಿಟಿ ಲೀಗ್’ ಗೆಲ್ಲುತ್ತೆ? ಅನ್ನೋದು ಈ ಶೋನ ಅಂತಿಮ ಘಟ್ಟ. ‘ಸುವರ್ಣ ಸೆಲೆಬ್ರಿಟಿ ಲೀಗ್’ ಕಾರ್ಯಕ್ರಮದ ಶೈಲಿ ಏನಪ್ಪಾ ಅಂದರೆ, ಸೆಲೆಬ್ರಿಟಿಗಳ ಮೋಜು-ಮಸ್ತಿ, ತರ್ಲೆ ತುಂಟಾಟದ ಜೊತೆ ಪೈಪೋಟಿಯ ಮಹಾ ಯುದ್ಧವೇ ನಡೆಯಲಿದೆ. ಇನ್ನು ಈ ಕಾರ್ಯಕ್ರಮದ ಮತ್ತೊಂದು ವಿಶೇಷ…

Read More

ತುರುವೇಕೆರೆ:  ನವೋದಯ ವಿದ್ಯಾಲಯ 2025–26ನೇ ಸಾಲಿನ 6ನೇ ತರಗತಿ ಪರೀಕ್ಷೆಗೆ ಪ್ರವೇಶ ಬಯಸುವ ವಿದ್ಯಾರ್ಥಿ ಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸೆ.16 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಆರ್.ಎಸ್. ಅಕ್ಷರ ಅಕಾಡಮಿ ಅಧ್ಯಕ್ಷರಾದ ನೆಮ್ಮದಿ ಗ್ರಾಮದ ಎ.ಎಸ್.ಮೂರ್ತಿ ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಜವಾಹರಲಾಲ್ ನವೋದಯ ವಿದ್ಯಾಲಯ ಭಾರತ ಸರ್ಕಾರದ ಒಂದು ಅತ್ಯುತ್ತಮ ಸಂಸ್ಥೆಯಾಗಿದೆ. 6ರಿಂದ  12ನೇ ತರಗತಿವರೆಗಿರುವ ಈ ಶಾಲೆಯಲ್ಲಿ ಉಚಿತ ಊಟ, ವಸತಿ ಸೌಕರ್ಯ, ಬಾಲಕ–ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಗಳು, ಕ್ರೀಡೆ ಮತ್ತು ಎನ್.ಸಿ.ಸಿ., ಎನ್.ಎಮ್.ಎಸ್., ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ಉತ್ತಮ ಶಿಕ್ಷಣಕ್ಕೆ ಉತ್ತೇಜನ ನೀಡುವಂತ ಅತ್ಯುತ್ತಮ ಶಾಲೆ ಇದಾಗಿದೆ. ಅಲ್ಲದೆ ಇಂತಹ  ಶಾಲೆಗಳಲ್ಲಿ ಓದಿ ಹೊರಬಂದ ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನಮಾನಗಳು ದೊರೆತಿವೆ. ಆ ನಿಟ್ಟಿನಲ್ಲಿ ಹೆಚ್ಚು ಗ್ರಾಮೀಣ ಭಾಗದ 5ನೇ ತರಗತಿ ವಿಧ್ಯಾರ್ಥಿಗಳ ಪೋಷಕರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು. ಅರ್ಜಿ ಸಲ್ಲಿಸುವವರು ನಿಮ್ಮ ಶಾಲಾ ಮುಖ್ಯೋಪಾಧ್ಯಾಯರ ಸಲಹೆ…

Read More

ತುಮಕೂರು:  ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಗುಲಿ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಮಲ್ಲಸಂದ್ರ ಬಳಿಯ ಅದಲಾಪುರ ಗ್ರಾಮದಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಅಡಗೂರು ಗ್ರಾಮದ  ಮದನ್ (24), ಮೃತ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದೆ.  ನಿನ್ನೆ ರೋಟಿಯಿಂದ ತೆಂಗಿನಮರದಲ್ಲಿ ಕಾಯಿ ಕೀಳುತ್ತಿದ್ದ ವೇಳೆ ತೆಂಗಿನಮರದ ಪಕ್ಕದಲ್ಲಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರ್ಪಡೆಯಾದ ಕುಸ್ತಿಪಟು ವಿನೇಶ್‌ ಫೋಗಟ್‌(Vinesh Phogat) ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ಚುನಾವಣ ಪ್ರಚಾರ ಆರಂಭಿಸಿರುವ ವಿನೇಶ್‌, ಐಒಎ ಅಧ್ಯಕ್ಷೆ ಪಿ.ಟಿ.ಉಷಾ(PT Usha) ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಪ್ಯಾರಿಸ್‌ ಒಲಿಂಪಿಕ್ಸ್‌ ವೇಳೆ ನಾನು(ವಿನೇಶ್‌) ನಿರ್ಜಲೀಕರಣದಿಂದ ಆಸ್ಪತ್ರೆ ಸೇರಿದ್ದಾಗ ಪಿಟಿ ಉಷಾ ಅವರು ಆರೋಗ್ಯ ವಿಚಾರಿಸುತ್ತಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ರಾಜಕೀಯ ಉದ್ದೇಶಕ್ಕೋಸ್ಕರ ತೆಗೆದ ಫೋಟೊ ಎಂದು ವಿನೇಶ್‌ ಹೇಳಿದ್ದಾರೆ. ಸ್ಥಳೀಯ ಸುದ್ದಿ ವಾಹಿನಿಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ವಿನೇಶ್‌, “ನನಗೆ ಪ್ಯಾರಿಸ್‌ನಲ್ಲಿ ಯಾವ ಬೆಂಬಲ ಸಿಕ್ಕಿದೆ ಎಂದು ನನಗೆ ತಿಳಿದಿಲ್ಲ. ಪಿಟಿ ಉಷಾ ಮೇಡಂ ನನ್ನನ್ನು ಅಂದು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಒಂದು ಫೋಟೋ ಕ್ಲಿಕ್ಕಿಸಲಾಯಿತು. ಈ ಫೋಟೊವನ್ನು ಉಷಾ ಮೇಡಂ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ಆದರೆ, ಈ ಫೋಟೊದ ಹಿಂದೆ ರಾಜಕೀಯ ನಟನೆ ಇತ್ತು” ಎಂದು ವಿನೇಶ್‌ ಆರೋಪ ಮಾಡಿದ್ದಾರೆ. ಅಂದು ವಿನೇಶ್‌ರನ್ನು ಭೇಟಿಯಾಗಿ ಆರೋಗ್ಯ…

Read More

ದುಬೈನ ರಾಜಕುಮಾರಿಯು ತನ್ನ ಬ್ರಾಂಡ್ ಮಹ್ರಾ M1 ಅಡಿಯಲ್ಲಿ “ಡಿವೋರ್ಸ್‌” ಎನ್ನುವ ಹೆಸರಿನ ಹೊಸ ಸುಗಂಧ ದ್ರವ್ಯಗಳ ಬ್ರ್ಯಾಂಡ್‌ಅನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ದುಬೈ ಆಡಳಿತಗಾರ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರ 30 ವರ್ಷದ ಮಗಳು ಶೇಖಾ ಮಹ್ರಾ ಅಲ್ ಮಕ್ತೂಮ್ ಅವರು ಸೋಮವಾರ ಇನ್ಸ್‌ಟಾಗ್ರಾಮ್‌ನಲ್ಲಿ ಇದರ ಟೀಸರ್ ಅನ್ನು ಹಂಚಿಕೊಂಡಿದ್ದಾರೆ. ಆಕೆಯ ಪೋಸ್ಟ್‌ನಲ್ಲಿ ಕಪ್ಪು ಬಣ್ಣದ ಬಾಟಲ್‌ನ ಮೇಲೆ ಡಿವೋರ್ಸ್‌ ಎನ್ನುವ ಪದಗಳನ್ನು ತೋರಿಸಿದೆ. ಇದು ಆಕೆಯ ವೈಯಕ್ತಿಕ ಜೀವನದ ಸದ್ಯದ ಸ್ಥಿತಿಯನ್ನೂ ತೋರಿಸಿದೆ. ಇದಕ್ಕೂ ಒಂದು ದಿನ ಮುಂಚೆ ಪ್ರಕಟ ಮಾಡಿದ ವಿಡಿಯೋದಲ್ಲಿ ಒಡೆದ ಗಾಜು, ಕಪ್ಪು ದಳಗಳು ಮತ್ತು ಕಪ್ಪು ಪ್ಯಾಂಥರ್ ಅನ್ನು ಒಳಗೊಂಡಿತ್ತು. ಶೇಖಾ ಮಹಾರಾ ತಮ್ಮ ಪತಿಯನ್ನು ಇನ್ಸ್‌ ಟಾಗ್ರಾಮ್‌ ನಲ್ಲಿಯೇ ಸಾರ್ವಜನಿಕವಾಗಿ ವಿಚ್ಛೇದನ ನೀಡಿದ ಬೆನ್ನಲ್ಲಿಯೇ ‘ಡಿವೋರ್ಸ್‌’ ಹೆಸರಿನ ಪರ್ಫ್ಯೂಮ್‌ ಬ್ರ್ಯಾಂಡ್‌ ಅನ್ನು ಬಿಡುಗಡೆ ಮಾಡಿದ್ದಾರೆ. ಇನ್ಸ್‌ಟಾಗ್ರಾಮ್‌ನಲ್ಲಿ ಬರೆದ ಪೋಸ್ಟ್‌ನಲ್ಲಿ, ‘ಪ್ರೀತಿಯ ಪತಿ, ನೀವು ಇತರ ಸಹಚರರೊಂದಿಗೆ ನಿರತರಾಗಿರುವ ಕಾರಣ, ನಾನು…

Read More

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ. ಸರ್ಕಾರ ಪತನಕ್ಕೆ ಟೈಮ್‌ ಬಾಂಬ್ ಫಿಕ್ಸ್ ಆಗಿದೆ.‌ ಸಂಕ್ರಾಂತಿ ದೂರ ಆಯ್ತು, ದೀಪಾವಳಿ ಒಳಗೆ ಕಾಂಗ್ರೆಸ್, ಸಿದ್ದರಾಮಯ್ಯ ಸರ್ಕಾರ ಢಮಾರ್ ಆಗುತ್ತೆ ಎಂದು ಬಿಜೆಪಿ ನಾಯಕರ ಹೇಳಿಕೆ ಕುರಿತು ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ಬಿಜೆಪಿಯವರು ಇನ್ನೂ ನಾಲ್ಕು ದೀಪಾವಳಿ ಕಾಯಬೇಕು. ಅಲ್ಲಿಯವರೆಗೆ ಮನೆಯಲ್ಲಿ ದೀಪಾವಳಿ ಮಾಡೋಕೆ ಹೇಳಿ ಎಂದು ಮಧುಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಒಳ್ಳೆಯವರನ್ನ ಕೆಳಗಿಳಿಸಲು ಕುತಂತ್ರ ಇರುತ್ತೆ, ಬಿಜೆಪಿಯವರು ನಿಸ್ಸಿಮರು.ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ.ಬಾಂಬೆ ಬಾಯ್ಸ ಅಂತಾ ನೀವೆ ಎಲ್ಲ ಹಾಕಿದ್ರಿ‌ ಇಂತಹ ಸಂಪ್ರದಾಯ ಬೇಕಾ ನಮಗೆ ಎಂದು ಮಧುಬಂಗಾರಪ್ಪ ಪ್ರಶ್ನಿಸಿದರು. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಯಾರಿಂದಲೂ ಸಾಧ್ಯವಿಲ್ಲ. ಕೋರ್ಟ್ ಅನ್ನುವುದು ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ. ನ್ಯಾಯಿಕ ವಿಚಾರಣೆ ನಡೆದುಕೊಂಡು ಹೋಗುತ್ತದೆ. ಅವರು…

Read More