Author: admin

ಗಣೇಶ ಮೆರವಣಿಗೆ ಹಿನ್ನೆಲೆ, ನಾಗವಾರ ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ಬಂದ್​ ಆಗಲಿದ್ದು, ಪಾರ್ಕಿಂಗ್​ ನಿಷೇಧ ಮಾಡಲಾಗಿದೆ. ಕೆ.ಜಿ.ಹಳ್ಳಿ ಮತ್ತು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಟ್ಯಾನರಿ ರಸ್ತೆ ಮೂಲಕ ಗಣಪತಿ ಮೂರ್ತಿಗಳ ಮೆರವಣಿಗೆ ನಡೆಯಲಿದೆ. ಹೀಗಾಗಿ ಸೆಪ್ಟೆಂಬರ್​ 11 ರಂದು ಈ ರಸ್ತೆಯಲ್ಲಿ ಮಧ್ಯಾಹ್ನ 12:30 ರಿಂದ ರಾತ್ರಿ 1:00 ಗಂಟೆವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ನಾಗವಾರ ಮುಖ್ಯ ರಸ್ತೆ ಮತ್ತು ಟ್ಯಾನು / ಡೇವಿಸ್ ರೋಡ್ ಮುಖ್ಯ ರಸ್ತೆ ನೇತಾಜಿ ಜಂಕ್ಷನ್​ ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕ್ಲಾರ್ಕ್ ರಸ್ತೆ ಮೂಲಕ ಪಾಟರಿ ಜಂಕ್ಷನ್ ಕಡೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ. ರೋಜರ್ ರಸ್ತೆ, ಆರ್ಮ್ ಸ್ಟ್ರಾಂಗ್ ರಸ್ತೆ ಹಾಗೂ ಹಾಲ್ ರಸ್ತೆ ಕಡೆಯಿಂದ ಪಾಟರಿ ರಸ್ತೆ ಕಡೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಾಸ್ಕ್ ಜಂಕ್ಷನ್‌ನಿಂದ ಕ್ಲಾರೆನ್ಸ್ ಬ್ರಿಡ್ಜ್ ಮೂಲಕ ಪಾಟರಿ ರಸ್ತೆ ಕಡೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಾಸ್ಕ್ ಜಂಕ್ಷನ್‌…

Read More

ಜಿಮ್ ಟ್ರೇನರ್​ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನ ಆಗಿದೆ ಎನ್ನಲಾಗಿದೆ. ಬನಶಂಕರಿ ಪೊಲೀಸರು ಆರೋಪಿ ಅಶ್ವಿನ್​ನ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವ ಸರ್ಜಾಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿದ್ದ. ನಾಗೇಂದ್ರಗೆ ಸಾಥ್ ಕೊಟ್ಟಿದ್ದೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅನ್ನೋದು ತಿಳಿದು ಬಂದಿದೆ. ಇನ್ನು ಪ್ರಶಾಂತ್ ಪೂಜಾರಿ ಅವರು ಧ್ರುವ ಸರ್ಜಾಗೆ ಆಪ್ತರಾಗಿದ್ದರು. ಧ್ರುವ ಸರ್ಜಾಗೆ ಜಿಮ್​ನಲ್ಲಿ ಟ್ರೇನ್ ಮಾಡುತ್ತಿದ್ದುದು ಇದೇ ಪ್ರಶಾಂತ್. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್​ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ. ಹೀಗಾಗಿ ಹಲ್ಲೆಗೆ ಪ್ಲ್ಯಾನ್ ರೂಪಿಸಿದರು. ತಾವೇ ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ಸ್ನೇಹಿತರ ಕೈಯಲ್ಲಿ ಹಲ್ಲೆ ಮಾಡಿಸಿದ್ದರಂತೆ. ಕನಕಪುರ ಮೂಲದ ಹರ್ಷ…

Read More

ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದು, ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನ ಸೆಪ್ಟೆಂಬರ್ 13ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಕಡಿಮೆಯಾಗಲಿದೆ. ಮಲೆನಾಡು : ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಸೆಪ್ಟೆಂಬರ್ 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು. ಒಳನಾಡು : ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಯಚೂರು, ಯಾದಗಿರಿ,…

Read More

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ತನಿಖೆಯನ್ನು ಎನ್‌ ಐಎ ಕೈಗೊಂಡಿದ್ದು, ಚಾರ್ಜ್‌ಶೀಟ್‌ ನಲ್ಲಿ ಬಿಜೆಪಿ ಕಚೇರಿ ಸ್ಪೋಟಿಸುವ ಬಗ್ಗೆ ಸಂಚು ನಡೆಸಿದ್ದರು ಎಂಬ ಅಂಶ ಉಲ್ಲೇಖಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಜ್‌ಶೀಟ್‌ ನಲ್ಲಿ ಉಲ್ಲೇಖವಾಗಿರುವ  ಮಿಕ್ಕ ವಿಚಾರಗಳು ಗೊತ್ತಿಲ್ಲ ಎಂದರು. ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ಚಾರ್ಜ್‌ಶೀಟ್‌ ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಪ್ರತಿಕ್ರಿಯಿಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್‌ ಗು ಚಾರ್ಜ್‌ಶೀಟ್ ನೀಡಲಾಗುತ್ತದೆ. ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್‌ಶೀಟ್‌ ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್‌ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು. ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುತ್ತಾರೆ.‌ ಆ…

Read More

ಬೆಂಗಳೂರು: ಜನಪ್ರಿಯ ನಟನ ಆಪ್ತನ ಬಂಧನವಾಗಿದ್ದು,  ವ್ಯಕ್ತಿಯೊಬ್ಬನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯಕ್ಷನ್‌ ಪ್ರಿನ್ಸ್ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ವಿಚಾರಣೆ ಎದುರಿಸಿದ್ದ ಅಶ್ವಿನ್‌ನನ್ನು ತನಿಖೆಯ ಮುಂದಿನ ಹಂತವಾಗಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಮೇ 26ರ ರಾತ್ರಿ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಎಂಬಾತನ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದು, ಒಬ್ಬೊರಿಗೊಬ್ಬರು ಚೈನ್ ಲಿಂಕ್‌ ಎನ್ನುವಂತೆ ಇದೀಗ ಹಲ್ಲೆ ಪ್ರಕರಣದಲ್ಲಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನವಾಗಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ರುದ್ರಪ್ರಯಾಗ: ಕೇದಾರನಾಥದಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಪ್ರದೇಶದ ದುರ್ಗಾಭಾಯಿ ಖಾಪರ್ (50,) ಸಮನ್ ಭಾಯ್ (50), ಗುಜರಾತ್‌ನ ಭರತ್ ಭಾಯಿ ನಿರಾಲಾಲ್ (52) ಮತ್ತು ನೇಪಾಳದ ತಿತ್ಲಿ ದೇವಿ (70) ಮೃತಪಟ್ಟವರು ಎಂದು ತಿಳಿದು ಬಂದಿದೆ. ನಾಲ್ವರು ಯಾತ್ರಾರ್ಥಿಗಳು ಮೃತದೇಹಗಳನ್ನು ಅವಶೇಷಗಳಡಿಯಿಂದ ಮಂಗಳವಾರ ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅವಶೇಷಗಳಡಿಯಲ್ಲಿ ಇನ್ನಷ್ಟು ಯಾತ್ರಾರ್ಥಿಗಳು ಸಿಲುಕಿರುವ ಸಾಧ್ಯತೆಯಿದೆ ಎಂದು ರುದ್ರಪ್ರಯಾಗ ಪೊಲೀಸರು ತಿಳಿಸಿದ್ದಾರೆ. ಕೇದಾರನಾಥಕ್ಕೆ ಭೇಟಿ ನೀಡಿದ್ದ ಯಾತ್ರಾರ್ಥಿಗಳ ತಂಡವೊಂದು ಸೋಮವಾರ ರಾತ್ರಿ 7:20ರ ಸುಮಾರಿಗೆ ಹಿಂದಿರುಗುತ್ತಿದ್ದ ವೇಳೆ ಭೂಕುಸಿತಕ್ಕೆ ಸಿಲುಕಿಕೊಂಡಿದ್ದರು. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿತ್ತು. ಮಧ್ಯಪ್ರದೇಶದ ಗೋಪಾಲ್ (50) ಎಂಬವರ ಮೃತದೇಹ ಹೊರತೆಗೆಯಲಾಗಿತ್ತು. ಮೂವರನ್ನು ರಕ್ಷಣೆ ಮಾಡಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರನ್ನ ಪೊಲೀಸರು ಬಂಧಿಸಿದ್ದು, ಇದೀಗ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್ ಬಾಬು, ಕೆ.ಆರ್.ನಗರದ ಶಂಕರ ಬಂಧಿತ ಆರೋಪಿಗಳಾಗಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಆರೋಪಿಗಳಾದ ಅಭಿಷೇಕ್‌, ವೀರೇಶ್‌ ಸೇರಿದಂತೆ ಒಟ್ಟು 12 ಆರೋಪಿಗಳನ್ನು ಮಂಡ್ಯ ಜಿಲ್ಲೆ ಪೊಲೀಸರು ಬಂಧಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಜೈಪುರ: ಸರಕು ಸಾಗಣೆ ಕಾರಿಡಾರ್‌ ನ ಹಳಿಗಳ ಮೇಲೆ ಎರಡು ಸಿಮೆಂಟ್ ಬ್ಲಾಕ್‌ಗಳನ್ನು ಇಡುವ ಮೂಲಕ ಸರಕು ರೈಲನ್ನು ಹಳಿ ತಪ್ಪಿಸುವ ಯತ್ನ ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ನಡೆದಿದೆ. ತಲಾ 70 ಕೆ.ಜಿ. ತೂಕದ ಸಿಮೆಂಟ್‌ ಬ್ಲಾಕ್‌ ಗಳಿಗೆ ಗೂಡ್ಸ್‌ ರೈಲು ಡಿಕ್ಕಿ ಹೊಡೆದಿದೆ. ಆದರೆ, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ. ‘ಭಾನುವಾರ ಕೆಲವು ದುರ್ಷ್ಕಮಿಗಳು ಸರಕು ಸಾಗಣೆ ಕಾರಿಡಾರ್‌ನ ಹಳಿಗಳ ಮೇಲೆ ಎರಡು ಸಿಮೆಂಟ್‌ ಬ್ಲಾಕ್‌ಗಳನ್ನು ಇಟ್ಟಿದ್ದಾರೆ. ಗೂಡ್ಸ್‌ ರೈಲು ಅದಕ್ಕೆ ಡಿಕ್ಕಿ ಹೊಡೆದಿದೆ’ ಎಂದು ವಾಯುವ್ಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಸರಕು ಸಾಗಣೆ ಕಾರಿಡಾರ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ರಾಮನಗರ: ಚನ್ನಪಟ್ಟಣದ ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಎಸ್.ರಾಜು ಮೇಲೆ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದ್ದು, ಮಹಿಳೆಯೊಬ್ಬರು ಅಕ್ಕೂರು ಠಾಣೆಯಲ್ಲಿ ದೂರು ನೀಡಿದ್ದಾರೆ. 2 ದಿನದ ಹಿಂದೆ ಗಣೇಶ ವಿಸರ್ಜನೆ ವೇಳೆ ರಾಜು ನನ್ನ ಮೈ ಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದು, ನನ್ನ ಮನೆ ಮುಂದೆಯೇ ನನ್ನ ಫೋಟೋ ತೆಗೆದು ರೇಗಿಸಿ ಕಿರುಕುಳ ನೀಡಿದ್ದಾನೆ ಅಂತ ದೂರಿನಲ್ಲಿ ಹೇಳಲಾಗಿದೆ. ಗಣೇಶ ಮೂರ್ತಿ ಮೆರವಣಿಗೆ ದಿನ ರಾತ್ರಿ 11:30ರ ಸಮಯದಲ್ಲಿ ಮನೆಯ ಎದುರು ರಸ್ತೆಯಲ್ಲಿ ನಿಂತಿದ್ದ ವೇಳೆ  ಆರೋಪಿ ಬಂದು, ಯಾವಗ ಬಂದೆ ಬೇಬಿ ಎಂದು ಪ್ರಶ್ನಿಸಿ, ಹೆಗಲ ಮೇಲೆ ಕೈ ಹಾಕಿ ಖಾಸಗಿ ಅಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದು, ಬಳಿಕ ಮಹಿಳೆಯ ಫೋಟೋ ತೆಗೆದು ಬೇರೆಯವರಿಗೂ ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೂಡ ಕರೆ ಮಾಡಿ, ಕಾಫಿ ಡೇ ಗೆ ಹೋಗೋಣ ಅಂತ ಕರೆದು ಕಿರುಕುಳ ನೀಡಿದ್ದು, ಹಲವು ಬಾರಿ ಮೈಕೈ ಮುಟ್ಟಿ ಮಹಿಳೆಯ ಗೌರವಕ್ಕೆ ಚ್ಯುತಿ ತಂದಿದ್ದಾನೆ…

Read More

ಪಾವಗಡ: 202–25 ನೇ ಸಾಲಿನ ತಾಲ್ಲೂಕಿನ ಕಸಬಾ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಗೌಡೇಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಬಾಲಕರ ವಾಲಿಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ತಾಲ್ಲೂಕು  ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಒಂದು ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ತಿಮನೇಶಪ್ಪ, ಸಹ ಶಿಕ್ಷಕರು, ದೈಹಿಕ ಶಿಕ್ಷಕರ ಹಾಗೂ  ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More