Author: admin

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.  60 ಲಕ್ಷ ‘ಬಿಪಿಎಲ್ ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಎಂದು ಸರ್ಕಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ ಬಿಪಿಎಲ್ ಕಾರ್ಡ್ ದಾರರಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದ ಮುಂದಾಗಿದ್ದು, ಈ ನಡುವೆ ಆರ್ .ಅಶೋಕ್ ಹೇಳಿಕೆ ಮಹತ್ವ ಪಡೆದಿದೆ. ಸಿದ್ದರಾಮಯ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ತೆರಿಗೆ ಹೆಚ್ಚಳ ಮಾಡಿದ್ರೂ ಸಂಬಳ ಕೊಡೋಕೆ ಆಗುತ್ತಿಲ್ಲ. ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಪಾರಾಗಲು 60 ಲಕ್ಷ ‘ಬಿಪಿಎಲ್ ಕಾರ್ಡ್’ ರದ್ದು ಮಾಡಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ ಅಂತ ಅವರು ಆರೋಪಿಸಿದ್ದಾರೆ. ಅವೈಜ್ಞಾನಿಕ ಗ್ಯಾರೆಂಟಿಗಳು, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಅಕ್ಷರಶಃ ಪಾಪರ್ ಆಗಿರುವ ಸರ್ಕಾರ ವರಮಾನ ಸಂಗ್ರಹಕ್ಕೆ ನಾನಾ ಮಾರ್ಗಗಳನ್ನ ಹುಡುಕಲು ಹೊರಟಿದೆ. ಸಂಪನ್ಮೂಲ ಕ್ರೋಢೀಕರಣಕ್ಕೆ ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ (BCG) ಎಂಬ ವಿದೇಶಿ ಕಂಪನಿಗೆ ಹತ್ತಾರು ಕೋಟಿ ಸಂಭಾವನೆ ಕೊಟ್ಟು ಈಗಾಗಲೇ…

Read More

ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಸೋಮವಾರ ಮಹತ್ವದ 3 ವಿಧೇಯಕಗಳಿಗೆ ಅಂಕಿತ ಹಾಕಿರುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದರು. ರಾಜ್ಯ ಸರ್ಕಾರದ 11 ಮಸೂದೆಗಳ ಪೈಕಿ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅನ್ಯಾಯ ತಡೆಗಟ್ಟುವ ಕ್ರಮಗಳು) ಮಸೂದೆ 2023, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮಸೂದೆ-2024 ಹಾಗೂ ಕರ್ನಾಟಕ ಪುರಸಭೆಗಳು (ಮುನ್ಸಿಪಾಲಿಟಿ) & ಇತರ ಕೆಲವು ಕಾನೂನು (ತಿದ್ದುಪಡಿ) ಮಸೂದೆ-2024ಕ್ಕೆ ಅಂಕಿತ ಹಾಕಿದ್ದಾರೆ. ಕಳೆದೆರಡು ವಾರಗಳ ಹಿಂದೆ ರಾಜ್ಯಪಾಲರು ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ನಡುವೆ ಕಾನೂನು ಸಂಘರ್ಷ ಹೆಚ್ಚಾಗಿತ್ತು. ಒಂದೆಡೆ ಮುಡಾ ಕದನದ ನಡುವೆಯೇ ಉಭಯ ಸದನಗಳಲ್ಲಿ ಅನುಮೋದನೆಗೊಂಡಿದ್ದ 11 ವಿಧೇಯಕಗಳನ್ನು ವಾಪಸ್ ಮಾಡಿದ್ದ ರಾಜ್ಯಪಾಲರ ನಡೆಗೆ ಸರ್ಕಾರ ತೀವ್ರವಾಗಿ ಖಂಡಿಸಿತ್ತು. ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳು ವಿಧೇಯಕ-2023, ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ಸಂಸ್ಥೆಗಳು ವಿಧೇಯಕ-2024, ಕರ್ನಾಟಕ ನಗರ ಯೋಜನೆ (ತಿದ್ದುಪಡಿ) ವಿಧೇಯಕ-2024, ಗದಗ -ಬೆಟಗೇರಿ ವ್ಯಾಪಾರ, ಸಾಂಸ್ಕೃತಿಕ ಮತ್ತು…

Read More

ತಮಿಳು ನಟ ಜಯಂ ರವಿ ಸೆಪ್ಟೆಂಬರ್ 9 ರಂದು ತಮ್ಮ ಪತ್ನಿ ಆರತಿಗೆ ಡಿವೋರ್ಸ್‌ ನೀಡುವುದಾಗಿ ಘೋಷಿಸಿದ್ದಾರೆ. ಈ ವಿಷಯದ ಬಗ್ಗೆ ರವಿ ತಮ್ಮ ಎಕ್ಸ್ ಹ್ಯಾಂಡಲ್‌ʼನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಈ ಕಷ್ಟದ ಸಮಯದಲ್ಲಿ ಗೌಪ್ಯತೆ ಕಾಪಾಡಲು ವಿನಂತಿಸಿದ್ದಾರೆ. 2009ರಲ್ಲಿ ಮದುವೆಯಾಗಿದ್ದ ಈ ಜೋಡಿಗೆ ಆರವ್ ಮತ್ತು ಅಯಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದಾರೆ. “ಬಹಳಷ್ಟು ಯೋಚನೆ, ಚಿಂತನೆ ಮತ್ತು ಚರ್ಚೆಗಳ ನಂತರ ನಾನು ಆರತಿ ಜೊತೆಗಿನ ದಾಂಪತ್ಯವನ್ನು ಅಂತ್ಯಗೊಳಿಸುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತರಾತುರಿಯಿಂದ ತೆಗೆದುಕೊಂಡಿಲ್ಲ. ಇದು ವೈಯಕ್ತಿಕ ಕಾರಣಗಳಿಂದ ತೆಗೆದುಕೊಂಡ ನಿರ್ಧಾರವೆಂದು ನಾನು ನಂಬುತ್ತೇನೆ” ಎಂದಿದ್ದಾರೆ. ಇದಷ್ಟೇ ಅಲ್ಲದೆ, ಅಭಿಮಾನಿಗಳು ಮತ್ತು ಜನರು ತಮ್ಮ ಖಾಸಗಿತನವನ್ನು ಗೌರವಿಸುವಂತೆ ಜಯಂ ರವಿ ವಿನಂತಿಸಿದ್ದಾರೆ. “ಈ ಕಷ್ಟದ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬದ ಸದಸ್ಯರ ಗೌಪ್ಯತೆಯನ್ನು ಗೌರವಿಸಲು ನಾನು ನಿಮ್ಮೆಲ್ಲರನ್ನು ವಿನಂತಿಸುತ್ತೇನೆ. ಈ ವಿಷಯದ ಬಗ್ಗೆ ಯಾವುದೇ ಊಹೆಗಳು, ವದಂತಿಗಳು ಅಥವಾ ಆರೋಪಗಳನ್ನು ಮಾಡದಂತೆ ನಿಮ್ಮೆಲ್ಲರಲ್ಲಿ…

Read More

ರಾಜಕೀಯ ವಿದ್ಯಮಾನಗಳ ಬಗ್ಗೆ ಕರಾರುವಾಕ್ ಆಗಿ ಭವಿಷ್ಯ ನುಡಿಯುವ ಕೋಡಿ ಮಠದ ಶ್ರೀಗಳು ಇದೀಗ ಸಿದ್ದರಾಮಯ್ಯ ಭವಿಷ್ಯದ ಬಗ್ಗೆ ಮತ್ತು ದೇಶದಲ್ಲಿ ಆಗಬಹುದಾದ ಪ್ರಕೃತಿ ವಿನಾಶಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರಬಹುದು ಎಂಬ ಆತಂಕದ ನಡುವೆಯೇ ಕೋಡಿ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಆಕಾಶದಿಂದ ದೊಡ್ಡ ತೊಂದರೆಯಾಗಲಿದೆ. ಯುದ್ಧದಿಂದ ತೊಂದರೆಯಾಗಬಹುದು. ಮಳೆಯಿಂದಾಗಿ ಇನ್ನೂ ಅನಾಹುತವಾಗಬಹುದು. ಒಂದು ಆಘಾತಕಾರಿ ತೊಂದರೆಯಾಗಬಹುದು. ಅದು ರಾಜನ ಮೇಲೆ ಪರಿಣಾಮ ಬೀರುತ್ತದೆ. ಕೋರ್ಟ್ ನಲ್ಲಿದೆ. ಈಗ ಇದರ ಬಗ್ಗೆ ಹೇಳುವುದು ಬೇಡ. ನಾನು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಅಭಿಮನ್ಯುವಿನ ಬಿಲ್ಲನ್ನು ಕರ್ಣನ ಕೈಯಲ್ಲಿ ಮೋಸದಿಂದ ದಾರ ಕಟ್ ಮಾಡಿಸ್ತಾರೆ. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮ ಗೆದ್ದ. ಈಗ ಕೃಷ್ಣ ಇಲ್ಲ ದುರ್ಯೋಧನ ಗೆಲ್ತಾನೆ ಎಂದು ಹೇಳಬಲ್ಲೆ. ರಾಜ್ಯ ಮತ್ತು ಕೇಂದ್ರದಲ್ಲಿ ಇದೇ ಆಗುವುದು ಎಂದಿದ್ದಾರೆ. ಕೋಡಿ ಶ್ರೀಗಳು ಹೇಳಿದ ಭವಿಷ್ಯ ಅನೇಕ ಬಾರಿ ನಿಜವಾಗಿದ್ದು ಇದೆ.…

Read More

ಕೃಷ್ಣರಾಜಪೇಟೆ: ನಮ್ಮ ಪೂರ್ವಿಕರು ಆಚರಿಸಿಕೊಂಡು ಬರುತ್ತಿರುವ ಗಣೇಶೋತ್ಸವ ಹಬ್ಬವು ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಆನಂದೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು. ಕೃಷ್ಣರಾಜಪೇಟೆ ಪಟ್ಟಣದ ನಾಗಮಂಗಲ ರಸ್ತೆಯಲ್ಲಿರುವ ಗಣಪತಿ ಪೆಂಡಾಲ್ ನಲ್ಲಿ  ಹಿಂದೂ ಮುಸ್ಲಿಮರು ಶ್ರದ್ಧಾ ಭಕ್ತಿಯಿಂದ ಗಣೇಶೋತ್ಸವ ಆಚರಿಸಿದ್ದು, ಈ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಗಣೇಶೋತ್ಸವವನ್ನು ಸ್ವಾತಂತ್ರ್ಯ ಪ್ರೇಮಿಗಳನ್ನು ಎಚ್ಚರಿಸಲು ಸಂಪರ್ಕ ಸೇತುವೆಯಾಗಿ ಗಣೇಶನನ್ನು ಆರಾಧಿಸಿ ಉತ್ಸವ ಮಾಡಿದರು. ಇಂದಿನ ದಿನಮಾನದಲ್ಲಿ ಒಡೆದ ಮನಸ್ಸುಗಳನ್ನು ಒಗ್ಗೂಡಿಸಲು, ಹಿಂದೂ ಮುಸ್ಲಿಂ ಬಾಂಧವರಲ್ಲಿ ಭಾವೈಕ್ಯತೆಯ ಸಂದೇಶವನ್ನು ಸಾರಲು ಗಣೇಶೋತ್ಸವ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತಿದೆ. ಇಂದು ಕೃಷ್ಣರಾಜಪೇಟೆ ಪಟ್ಟಣದ ಎಲ್ಲ ಮುಸ್ಲಿಂ ಯುವಕ ಬಂದವರು ಗಣೇಶನನ್ನ ಪೂಜೆ ಮಾಡಿ, ಮಜ್ಜಿಗೆ ಪಾನಕ ಜ್ಯೂಸ್ ವಿತರಿಸಿ ಪರಸ್ಪರ ಶುಭಾಶಯಗಳು ವಿನಿಮಯ ಮಾಡಿಕೊಳ್ಳುತ್ತಿರುವುದು ಇಡೀ ನಾಗರಿಕ ಸಮಾಜವೇ ಮೆಚ್ಚುವ ಸಂಗತಿ ಆಗಿದೆ ಎಂದು ಆನಂದೇಗೌಡ ಹೇಳಿದರು. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್…

Read More

ತಿಪಟೂರು:  ತಿಪಟೂರ್ ನಗರದ ಜನರಿಗೆ ನಗರಸಭೆ ಕಲುಷಿತ ನೀರನ್ನು ಕುಡಿಸುತ್ತಿದ್ದು, ತಾಲ್ಲೂಕಿನ ಈಚನೂರು ಗ್ರಾಮದ ಕೆರೆಗೆ ಕಳೆದ ನಾಲ್ಕೈದು ವರ್ಷಗಳಿಂದ ನಗರ ಸಭೆ ಕಲುಷಿತ ನೀರನ್ನು ಕಳುಹಿಸುತ್ತಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ಶಾಸಕರು ಹಾಗೂ ಮಾಜಿ ಶಾಸಕರ ಗಮನಕ್ಕೆ ಈ ವಿಚಾರವನ್ನು ಸಾಕಷ್ಟು ಬಾರಿ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಬಗ್ಗೆ ಯಾರೂ ಯಾವುದೇ ಸ್ಪಷ್ಟನೆ ಕೂಡ ನೀಡುತ್ತಿಲ್ಲ ಅಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಕೆರೆಗೆ ಅಧಿಕಾರಿಗಳು ಕಲುಷಿತ ನೀರು ಬಿಡುತ್ತಿದ್ದಾರೆ. ಈ ಕಲುಷಿತ ನೀರನ್ನು ಕುಡಿದು ಇಪ್ಪತ್ತು ಕುರಿಗಳು ಸಾವನ್ನಪ್ಪಿದ ಘಟನೆ ಕೂಡ ನಡೆದಿದೆ ಅಂತ ಇಲ್ಲಿನ ಸಾರ್ವಜನಿಕರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆರೆಯಲ್ಲಿ   ಕಲುಷಿತ ನೀರು ಸಂಗ್ರಹವಾಗುತ್ತಿರುವುದನ್ನು ತಡೆಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಹೇಮಾವತಿ ನೀರು ಹಾಗೂ ನಗರದ ಯುಜಿಡಿಯ ಕಲುಷಿತ ನೀರು ಈಚನೂರು ಕೆರೆಗೆ ಒಟ್ಟಿಗೆ ಸಂಗ್ರಹವಾಗ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಸ್ಥಳೀಯ ಜನಪ್ರತಿನಿಧಿಗಳು ಈ…

Read More

ಕೊರಟಗೆರೆ:  ಜೆಡಿಎಸ್ ತೊರೆದು ನಾಲ್ವರು ಜೆಡಿಎಸ್ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಘಟನೆ ಕೊರಟಗೆರೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ವೇಳೆ  ನಡೆದಿದೆ. ತೆರವಾಗಿದ್ದ ಕೊರಟಗೆರೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು  ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ  ಕುತೂಹಲ ಕೆರಳಿಸಿತ್ತು. ಮೀಸಲಾತಿ ಆಯ್ಕೆ, ಕೊನೆಗೂ ಪರಿಶಿಷ್ಟ ಮಹಿಳಾ ಅಭ್ಯರ್ಥಿ ಪಟ್ಟಿ ಬಿಡುಗಡೆಯಾಗಿದೆ. ಪರಿಶಿಷ್ಟ ಮಹಿಳಾ ಅಭ್ಯರ್ಥಿ ಒಬ್ಬರೇ ಇದ್ದ ಕಾರಣ  ಅಧ್ಯಕ್ಷರ ಆಯ್ಕೆಯಲ್ಲಿ  ಅದೃಷ್ಟ ಅನಿತಾ ಕೈ ಹಿಡಿದಿದ್ದು, ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಉಸ್ಮಾಪಾರಿಯಾ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದರು. ಪಟ್ಟಣ ಪಂಚಾಯತಿ 14 ತಿಂಗಳ ಅವಧಿಗೆ  ಅಧ್ಯಕ್ಷ , ಉಪಾಧ್ಯಕ್ಷರ ಚುನಾವಣೆ ನೆಡೆಯಿತು. ಕಾಂಗ್ರೆಸ್ ಪಕ್ಷದ ಐದು ಜನ ಸದಸ್ಯರೊಂದಿಗೆ ಪಕ್ಷೇತರ ಅಭ್ಯರ್ಥಿ ನಟರಾಜ ಸೇರಿದಂತೆ ಮೂರು ಜನ ಜೆಡಿಎಸ್ ಸದಸ್ಯರ ಒಮ್ಮತದಿಂದ  ಅವಿರೋಧವಾಗಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಆಯ್ಕೆಯಾಯಿತು. ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಜೆಡಿಎಸ್ ಸದಸ್ಯರಿಗೆ ಹಾಗೂ…

Read More

ತುಮಕೂರು: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗಳು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕು ರಾಮಶೆಟ್ಟಿಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 206 ಅಂಡರ್ ಪಾಸ್ ಬಳಿ ನಡೆದಿದೆ. ಮಗಳು ವೀಣಾ(16) ಮತ್ತು ಆಕೆಯ ತಾಯಿ ಕಮಲಮ್ಮ (42) ಮೃತ ಮಹಿಳೆಯಾಗಿದ್ದಾರೆ ಇಂದು ಬೆಳಿಗ್ಗೆ 9 ಗಂಟೆ ವೇಳೆಯಲ್ಲಿ  ಮಗಳನ್ನು ಶಾಲೆಗೆ ಬಿಡಲು ಹೋಗುವಾಗ ಹಿಂಬದಿಯಿಂದ ಬಂದ ಗೀತಾಂಜನೇಯ ಗಾರ್ಮೆಂಟ್ಸ್ ಹೆಸರಿನ ಬಸ್  ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪಾದಚಾರಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ತಿಪಟೂರು ಆಸ್ಪತ್ರೆಗೆ  ಕಳುಹಿಸಲಾಗಿದೆ. ಘಟನೆ ಸಂಬಂಧ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿ ಸ್ಥಳದಲ್ಲಿದ್ದವರು ಪ್ರತಿಭಟನೆ ನಡೆಸಿದರು. ಈ ನಡುವೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ತಳ್ಳಾಟ ನೂಕಾಟ ನಡೆಯಿತು. ಹಿಂದೆ ಹಲವಾರು ಬಾರಿ ಈ ಭಾಗದ ಗ್ರಾಮಸ್ಥರು ಅಂಡರ್…

Read More

ತುಮಕೂರು: ನಿನ್ನೆ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟ ಸ್ಥಳಕ್ಕೆ ಇಂದು ಗೃಹ ಸಚಿವ ಜಿ. ಪರಮೇಶ್ವರ್‌ ಭೇಟಿ ನೀಡಿ ಮಾಹಿತಿ ಪಡೆದರು. ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಅಲ್ಲದೆ ಶವಾಗಾರಕ್ಕೆ ತೆರಳಿ ಸಂತ್ರಸ್ಥರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ಸಂದಭದಲ್ಲಿ ಪತ್ರಕತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಪಘಾತಗಳು, ಪ್ರಾಣ ಕಳೆದುಕೊಂಡವರ ಸಂಖ್ಯೆ. ಶೇ.50ರಷ್ಟು ಕಡಿಮೆಯಾಗಿದೆ. ರಸ್ತೆ ಅಪಘಾತಗಳ ಸಂಖ್ಯೆ ನಿಯಂತ್ರಿಸಲು ಕ್ರಮ ಕೈಗೊಳ್ಳಲು ಗೃಹ ಇಲಾಖೆಯಿಂದ ಸರಕಾರಕ್ಕೆ 100 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆಗೆ ಕಳುಹಿಸಿಕೊಡಲಾಗಿದೆ ಎಂದರು. ರಾಜ್ಯದಲ್ಲಿ ಅಪಘಾತಗಳಿಂದ ಸಾವಿರಾರು ಮಂದಿ ಮೃತಪಟ್ಟಿದ್ದಾರೆ. ಕಾಂಗ್ರೆಸ್‌ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಿಯಂತ್ರಿಸಲು ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯೊಂದಿಗೆ ಚಚಿಸಲಾಗುತ್ತಿದೆ. ಎಲ್ಲೆಲ್ಲಿ ತಿರುವುಗಳಿವೆ ಅಲ್ಲಿ ಅಪಘಾತಗಳು ಆಗದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು. ಮೈಸೂರು-ಬೆಂಗಳುರು ರಸ್ತೆ ನಿಮಾಣ ಮಾಡಿದ ನಂತರ ಕೇವಲ 4 ತಿಂಗಳಲ್ಲೇ 100ಕ್ಕೂ ಹೆಚ್ಚು ಮಂದಿ ಅಪಘಾತದಲ್ಲಿ…

Read More

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಸೆ.12 ರವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಇಂದು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು. ಪ್ರಕರಣದ ಎಲ್ಲ 17 ಆರೋಪಿಗಳನ್ನು ಜೈಲುಗಳಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಲಾಯ್ತು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ. ಇನ್ನೂ ಈ ಪ್ರಕರಣ ಸಂಬಂಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ ಕೊಲೆ ಆರೋಪ ಹೊತ್ತ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More