Author: admin

ಮುಂಬೈ: ಈ ಬಾರಿ ಮುಂಬೈನ ಲಾಲ್ಬಾಗ್ಚಾ ದಲ್ಲಿರುವ ಗಣೇಶನ ಮೂರ್ತಿ ಭಕ್ತರ ಕಣ್ಮನ ಸೆಳೆಯುತ್ತಿದೆ. ಇದಕ್ಕೆ ಕಾರಣ ಏನಂದ್ರೆ, ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರು ಮುಂಬೈನಲ್ಲಿರುವ ಪ್ರಸಿದ್ಧ ಲಾಲ್ಬಾಗ್ಚಾ ರಾಜ ವಿನಾಯಕನಿಗೆ 15 ಕೋಟಿ ಮೌಲ್ಯದ 20 ಕೆಜಿ ಚಿನ್ನದ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ. ಮುಂಬೈನ ದೊಡ್ಡ ದೊಡ್ಡ ಉದ್ಯಮಿಗಳು, ಚಲನ ಚಿತ್ರ ನಟ, ನಟಿಯರು, ರಾಜಕಾರಣಿಗಳು ಇಲ್ಲಿಗೆ ಭೇಟಿ ನೀಡಿ ಗಣೇಶನ ದರ್ಶನ ಪಡೆಯುತ್ತಾರೆ. ಒಟ್ಟು 10 ದಿನಗಳ ಕಾಲ ಅದ್ದೂರಿಯಾಗಿ ಗಣೇಶನ ಹಬ್ಬ ಆಚರಣೆ ನಡೆಯುತ್ತದೆ. ಮದುವೆಯಾದ ಬಳಿಕ ಅನಂತ್ ಅಂಬಾನಿ ದಂಪತಿಯ ಮೊದಲ ಚೌತಿ ಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ ಗಣೇಶನಿಗೆ 20 ಕೆಜಿ ಚಿನ್ನದ ಕಿರೀಟವನ್ನು ದಂಪತಿಗಳು ಕಾಣಿಕೆಯಾಗಿ ನೀಡಿ ದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ಟೀಮ್ ಇಂಡಿಯಾದ ಅದ್ಭುತ ಆಟಗಾರ ಮೊಹಮ್ಮದ್ ಶಮಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಇಬ್ಬರು ಬೌಲರ್ ಗಳು ನನ್ನ ಅಚ್ಚುಮೆಚ್ಚಿನ ಬೌಲರ್ ಗಳು ಎಂದು ತಿಳಿಸಿದ್ದಾರೆ. ಭಾರತೀಯ ತಂಡದಲ್ಲಿ ಜಹೀರ್ ಖಾನ್, ಅನಿಲ್ ಕುಂಬ್ಳೆ ಮತ್ತು ಹರ್ಭಜನ್ ಸಿಂಗ್ ಮತ್ತು ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೊದಲಾದ ಘಟನಾನುಘಟಿ ಬೌಲರ್ ಗಳಿದ್ದಾರೆ. ಆದ್ರೆ ಶಮಿ ಹೆಸರಿಸಿದ್ದು ಇವರ ಹೆಸರುಗಳನ್ನಲ್ಲ. ಮೊಹಮ್ಮದ್ ಶಮಿಗೆ ಈ ಇಬ್ಬರು ವೇಗಿಗಳೆಂದರೆ ಅಚ್ಚುಮೆಚ್ಚಂತೆ. ನನ್ನ ಲಿಸ್ಟ್ನಲ್ಲಿ ಬಹಳಷ್ಟು ಮಂದಿ ಅಚ್ಚುಮೆಚ್ಚಿನ ಬೌಲರ್ಗಳಿದ್ದಾರೆ. ಅದರಲ್ಲಿ ಪ್ರಮುಖವಾಗಿ ವಕಾರ್ ಯೂನಿಸ್ ಹಾಗೂ ಡೇಲ್ ಸ್ಟೇನ್ ನನ್ನ ಆಲ್ ಟೈಮ್ ಫೇವರಿಟ್ ಅಂತ ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ದೊಡ್ಡ ದೊಡ್ಡ ಟೀ ಬ್ರ್ಯಾಂಡ್ ಗಳು ಚಹಾ ಬೆಲೆಯನ್ನು ಹೆಚ್ಚಳ ಮಾಡಿದ್ದು, ಚಹಾ ಪ್ರಿಯರಿಗೆ ಬೆಲೆ ಏರಿಕೆ ಕೈಸುಡಲಿದೆ. ದೇಶದ ಎರಡು ಪ್ರಮುಖ ಪ್ಯಾಕೇಜ್ಡ್ ಟೀ ಮಾರಾಟ ಕಂಪನಿಗಳಾದ ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (HUL) ಮತ್ತು ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (TCPL) ಶೀಘ್ರದಲ್ಲೇ ಚಹಾದ ಬೆಲೆಗಳನ್ನು ಹೆಚ್ಚಿಸಲಿವೆ. ಚಹಾದ ಸ್ಟಾಕ್ ಕಡಿಮೆಯಾಗುವುದು ಮತ್ತು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಬೆಲೆ ಏರಿಕೆಗೆ ಕಾರಣವಂತೆ. ಹೀಗಾಗಿ ಗ್ರಾಹಕರಿಗೆ ಚಹಾವು ದುಬಾರಿಯಾಗಿರುತ್ತದೆ. ದೇಶದ ಅತಿ ದೊಡ್ಡ ಚಹಾ ಉತ್ಪಾದಿಸುವ ರಾಜ್ಯಗಳಾದ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಉತ್ಪಾದನೆಯಲ್ಲಿ ಕುಸಿತ ಕಂಡುಬಂದಿದೆ. ಜನವರಿಯಿಂದ ಜುಲೈವರೆಗೆ ಚಹಾ ಉತ್ಪಾದನೆ ಶೇ.13ರಷ್ಟು ಕುಸಿದಿದೆ. ಇದರಿಂದ ಚಹಾ ಬೆಲೆ ಏರಿಕೆಯಾಗುತ್ತಿದೆ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚೆನ್ನೈ: ಬಸ್ ಗೆ ಕಾಯುತ್ತಿದ್ದ ಮಹಿಳೆಗೆ ಲಿಫ್ಟ್ ಕೊಟ್ಟ ಇಬ್ಬರು ಯುವಕರು ಆಕೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ನಡೆದಿದೆ. ಸೆ.3ರಂದು ಕೆಲಸಕ್ಕೆ ತೆರಳಿದ್ದ 47 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯೊಬ್ಬರು ರಾತ್ರಿ ಮನೆಗೆ ತೆರಳಲು ಪುತ್ತಲೂರಿನಲ್ಲಿ ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ದ್ವಿಚಕ್ರವಾಹನದಲ್ಲಿ ಬಂದಿದ್ದ ರಾಯಂದೂರಿನ ಪ್ರವೀಣ್ (32) ಹಾಗೂ ರಾಜಕಪ್ಪೂರ್ (26) ಲಿಫ್ಟ್ ಕೊಡುವುದಾಗಿ ಹೇಳಿದ್ದಾರೆ. ಪ್ರವೀಣ್ ನ ಬೈಕ್ ನಲ್ಲಿ ಮಹಿಳೆ ತೆರಳಿದ್ದಾರೆ. ಇನ್ನೊಂದು ಬೈಕ್ ನಲ್ಲಿ ರಾಜಕಪ್ಪೂರ್ ಹಿಂಬಾಲಿಸಿದ್ದಾನೆ. ಪುತ್ತಲೂರು ದಾಟಿದ ನಂತರ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿದ ಕಾಮುಕರು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಳಗಾವಿ: ರಾಯಚೂರು ಹೆದ್ದಾರಿಯ ಕಮತಗಿ ಕ್ರಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಅಮರೇಶ ಬೆನಕನಾಳಮಠ(24), ಶರಣಯ್ಯ ಬೆನಕನಾಳಮಠ(14) ಮೃತ ಪಟ್ಟವರು ಅಂತ ತಿಳಿದು ಬಂದಿದೆ. ಇವರು ಇಳಕಲ್ ನಗರದ ಓಂಕಾರ ಟಾಕೀಜ್ ಸಮೀಪದ ನಿವಾಸಿಗಳು ಎಂದು ತಿಳಿದು ಬಂದಿದೆ. ಗಣೇಶ ಚುತುರ್ಥಿ ಹಬ್ಬಕ್ಕೆಂದು ತಮ್ಮನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆಯಲ್ಲಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಮೀನಗಡ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಇತ್ತೀಚೆಗಿನ ದಿನಗಳಲ್ಲಿ ಜನರು ವಿದೇಶಿ ಪ್ರವಾಸದ ಬಗ್ಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಆಧುನಿಕ ಜೀವನ ಜನರನ್ನು ವಿದೇಶಗಳತ್ತ ಸೆಳೆಯುತ್ತಿರುತ್ತದೆ. ಆದ್ರೆ ಕೆಲವೊಂದು ದೇಶಗಳಲ್ಲಿ ಪ್ರವಾಸೋದ್ಯಮ ಲೈಂಗಿಕತೆಯ ಮೇಲೆ ನಿಂತಿದೆ ಎನ್ನುವುದನ್ನು ತಿಳಿದುಕೊಳ್ಳಬೇಕಿದೆ. ಲೈಂಗಿಕತೆಯ ಮೇಲೆಯೇ ಪ್ರವಾಸೋದ್ಯಮ ನಡೆಸ್ತಾ ಇರುವ ದೇಶಗಳು ಯಾವುದು ಅಂತ ತಿಳಿದುಕೊಳ್ಳೋಣ: ನೆದರ್ಲ್ಯಾಂಡ್ಸ್: ಈ ದೇಶ ತನ್ನ ಪ್ರಾಕೃತಿಕ ಸೌಂದರ್ಯಕ್ಕಿಂತ ಲೈಂಗಿಕ ಪ್ರವಾಸೋದ್ಯಮಕ್ಕೆ ಹೆಚ್ಚು ಪ್ರಸಿದ್ಧವಾಗಿದೆ. ಇಲ್ಲಿ ರೆಡ್ ಲೈಟ್ ಡಿಸ್ಟ್ರಿಕ್ಟ್ ನಲ್ಲಿ ಕೆಳವರ್ಗದಿಂದ ಮೇಲ್ವರ್ಗದವರೆಗೂ ಲೈಂಗಿಕ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿರುತ್ತಾರೆ. ಫಿಲಿಪೈನ್ಸ್: ಫಿಲಿಪೈನ್ಸ್ ವೇಶ್ಯಾವಾಟಿಕೆ ಕಾನೂನುಬಾಹಿರವಾಗಿದೆ. ಆದರೂ ಇಲ್ಲಿ ಲೈಂಗಿಕ ಕಾರ್ಯಕರ್ತೆಯರು ಸಾಮಾನ್ಯವಾಗಿ ಸಿಗುತ್ತಾರೆ. ಇವರು ಬಾರ್ ಗರ್ಲ್ ರೀತಿಯಲ್ಲಿ ಐಡಿ ಟ್ಯಾಗ್ ಧರಿಸಿ ಬರುತ್ತಾರೆ. ಕೀನ್ಯಾ: ವೇಶ್ಯಾವಾಟಿಕೆ ಹೊಂದಿರುವ ಟಾಪ್-10 ದೇಶಗಳ ಪಟ್ಟಿಯಲ್ಲಿ ಕೀನ್ಯಾ ಇದೆ. ಇಲ್ಲಿನ ಬಡತನದಿಂದಾಗಿ ಲೈಂಗಿಕ ಪ್ರವಾಸೋದ್ಯಮ ಹುಟ್ಟಿಕೊಂಡಿದೆಯಂತೆ. ಲೈಂಗಿಕ ಪ್ರವಾಸೋದ್ಯಮ ಈ ದೇಶದ ಅತೀ ದೊಡ್ಡ ಆದಾಯದ ಮೂಲವಂತೆ. ಬ್ರೆಜಿಲ್: ಬ್ರೆಜಿಲ್ ನಲ್ಲಿ ವೇಶ್ಯಾವಾಟಿಕೆ ಕಾನೂನು ಬದ್ಧವಾಗಿ ನಡೆಯುತ್ತದೆ. ಆದ್ರೆ ವೇಶ್ಯಾ…

Read More

ಮಾತೃ ಹೃದಯದಿ ಹುದುಗಿದ‌‌ ಮಾತೃತ್ವದ ಕನ್ನಡ ಅಕ್ಷರ ತಿದ್ದಿ ತೀಡಿ ಬಿತ್ತಿದ ಗುರುವರ್ಯರಾದ ಕನ್ನಡ ಭಾಷೆಯ ಶಿಕ್ಷಕರಿಗೆ, ಆಂಗ್ಲರ ಪ್ರಭಾವದಿ ತಳವೂರಿದ ಇಂಗ್ಲೀಷ್ ಭಾಷೆಯ ಇಪ್ಪತ್ತಾರು ಅಕ್ಷರಗಳ ಸರಳತೆಯ ನುಡಿಗಳು ಮಸ್ತಕಕೆ ತುಂಬಿದ ಇಂಗ್ಲಿಷ್ ಭಾಷಾ ಶಿಕ್ಷಕರಿಗೆ ರಾಷ್ಟ್ರೀಯ ಭಾಷೆಯ ಹಿಂದಿಯ ಅಕ್ಷರಗಳ ರಾಷ್ಟ್ರೀಯ ಪ್ರೇಮವ ಹೃದಯಕೆ ಹತ್ತಿರ ತಂದು ಹಿಂದಿಯ ಹಂಬಲ ಹಿಡಿಸಿದ ಹಿಂದಿ ಭಾಷೆಯ ಶಿಕ್ಷಕರಿಗೆ,  ಬದುಕಿನ ವ್ಯವಹಾರಗಳ ಸರಳತೆಯ ಸೂತ್ರಗಳನ್ನು ಒಳ್ಳೇಯದು ಕೂಡಿಸಿ ಕೆಟ್ಟದ್ಧನ್ನು ಕಳೆಯಲು ಗುಣಗಳು ಗುಣಿಸಿ ಸಹಾಯು ಭಾಗಿಸುವ. ಸುಹಾಸವ ಕಲಿಸಿದ  ಗಣಿತ ಶಿಕ್ಷಕರಿಗೆ. ಕಡಿಮೆ ಶ್ರಮದಿ ಹೆಚ್ಚಿನ ಕೆಲಸ ಪಡೆಯಲು  ಅಜ್ಞಾನವ ಅಳಿಸಿ ವೈಜ್ಞಾನಿಕತೆ ತುಂಬಿದ ಸತ್ಯದ ದರ್ಶನ ಮಾಡಿಸಿರುವ ಆರೋಗ್ಯದ ಅರಿವನು ಮೂಡಿಸಿರುವ ವಿಜ್ಞಾನ ಶಿಕ್ಷಕರಿಗೆ,  ಜಗವು ಆಳಿ ಅಳಿದ ಉಳಿದ ಸಾಮ್ರಾಜ್ಯವು ಶೂರರ ಧೀರರು ಹೀಗೆ ಇತ್ತು ಎಂದು ಇತಿಹಾಸ ತಿಳಿಸಿರುವ ಸಮಾಜ ವಿಜ್ಞಾನ ಶಿಕ್ಷಕರಿಗೆ. ದೈಹಿಕ ಮಾನಸಿಕ ಆರೋಗ್ಯಕೆ ದೇಹವು ದಂಡಿಸಿವ ಯೋಗದ ಮಾರ್ಗವು ನೀಡಿ ಕ್ರೀಢೆಯು ಬದುಕಿನ…

Read More

ಪ್ರತಿ ವರ್ಷದಂತೆ ಈ ಬಾರಿಯೂ ಎಲ್ಲೆಡೆ ಗಣೇಶ ಉತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಗಣೇಶ ಚತುರ್ಥಿಯನ್ನು ಯಾಕೆ ಆಚರಿಸುತ್ತೇವೆ, ಇದರ ಹಿಂದಿರುವ ಕಥೆಯ ಬಗ್ಗೆ ಪಂಚಾಂಗಕರ್ತ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮಾ ಅವರು ವಿವರಿಸಿದ್ದಾರೆ. ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ವಿನಾಯ ಮೂರ್ತಿ ಪ್ರತಿಷ್ಠಾಪನೆಗೆ ಅಂತಿಮ ಹಂತದ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಗಣೇಶ…

Read More

ತುಮಕೂರು:  ಅನೇಕ ತಿಂಗಳಿನಿಂದ‌ ಸಾರ್ವಜನಿಕ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಚಿರತೆ ಸೆರೆಗಾಗಿ ಬೋನು ಇಡಲಾಗಿತ್ತು. ಬೋನಿಗೆ ಬಿದ್ದ ಸುಮಾರು 1.5 ವರ್ಷದ ಗಂಡು‌ ಚಿರತೆಯಾಗಿದೆ. ಈ ಚಿರತೆ ಕಳೆದ ಎರಡ್ಮೂರು ತಿಂಗಳಿನಿಂದ ಹೊನ್ನುಡಿಕೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಂಡಿತ್ತು. ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದ ಗ್ರಾಮಸ್ಥರ ಮನವಿ ಮೇರೆಗೆ ಡಿಎಫ್ಒ ಅನುಪಮಾ ನೇತೃತ್ವದಲ್ಲಿ, ಎಸಿಎಫ್ ಮಹೇಶ್ ಮಾಲಗತಿ ಆರ್ ಎಫ್ ಒ ನಿಮತಾ, ಡಿಆರ್ ಎಫ್ ರಬ್ಬನಿ ತಂಡದಿಂದ ಚಿರತೆ ಸೆರೆ ಕಾರ್ಯಚರಣೆ ನಡೆದಿತ್ತು. ಚಿರತೆ ಭೀತಿಯಿಂದ ಇಲ್ಲಿನ ಸ್ಥಳೀಯರು ಆತಂಕಕ್ಕೀಡಾಗಿದ್ದರು. ಇದೀಗ ಅರಣ್ಯಾಧಿಕಾರಿಗಳು ಚಿರತೆಯನ್ನ ಯಶಸ್ವಿಯಾಗಿ ಸೆರೆ ಹಿಡಿದಿದ್ದು, ಹೀಗಾಹಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆಪ್ಟೆಂಬರ್ 15ರಂದು ಸಮಾಜ ಕಲ್ಯಾಣ ಇಲಾಖೆಯು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಸಂವಿಧಾನ ಪೀಠಿಕೆ ಬೋಧನೆ, 90 ಕಿಲೋ ಮೀಟರ್ ಮಾನವ ಸರಪಳಿಯನ್ನು ನಿರ್ಮಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಹೆಚ್ಚು ಅರಿವು ಮೂಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು, ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿಯ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿಯ ನಂದಿಹಳ್ಳಿ ಗ್ರಾಮದವರೆಗೆ ಈ ಮಾನವ ಸರಪಳಿಯನ್ನು ನಿರ್ಮಿಸಲಾಗುವುದು ಎಂದರು. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು ಜಿಲ್ಲೆಯ ಜನತೆ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಅಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು. ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು, ವಿವಿಧ ಸಂಘ–ಸಂಸ್ಥೆಗಳು ಹಾಗೂ…

Read More