Subscribe to Updates
Get the latest creative news from FooBar about art, design and business.
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್ ಮುಖಂಡ ಒತ್ತಾಯ
- ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
- ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
Author: admin
ಪಾವಗಡ: ಟಾಟಾ ಎಸ್ ವಾಹನ ಸಹಿತ ವ್ಯಕ್ತಿಯೊಬ್ಬರು ಸುಟ್ಟುಕರಕಲಾಗಿ ಪತ್ತೆಯಾಗಿರುವ ಘಟನೆ ಪಾವಗಡ ತಾಲೂಕಿನ ಬಳ್ಳಾರಿ ರಸ್ತೆಯ ವೀರಮ್ಮನಹಳ್ಳಿ ಗೇಟ್ ನಿಂದ ಪಲವಳಿಗೆ ಬರುವ ಮಾರ್ಗ ಮಧ್ಯದ ರೈಲ್ವೆ ಬ್ರಿಡ್ಜ್ ಸಮೀಪ ನಡೆದಿದೆ. ಶುಕ್ರವಾರ ಬೆಳಗ್ಗಿನ ಜಾವ 5 ಗಂಟೆಯ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯದ ಮಾಹಿತಿಯ ಪ್ರಕಾರ ಸುಟ್ಟು ಕರಕಲಾಗಿರುವ ವ್ಯಕ್ತಿ ಎನ್.ಹೊಸಕೋಟೆ ನಿವಾಸಿ ರವಿ ಕುಮಾರ್ ಅಂತ ಹೇಳಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯ ಬಳಿಕ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮರಿದಾಸನಹಳ್ಳಿ ಕ್ರೀಡಾಪಟುಗಳು ಪಾವಗಡ ಪಟ್ಟಣ ಪದವಿ ಪೂರ್ವ ಕಾಲೇಜು ಪ್ರತಿಸ್ಪರ್ಧಿಗಳ ಎದುರು ಗೆದ್ದು ಪ್ರಥಮ ಸ್ಥಾನ ಗಳಿಸಿದ್ದಾರೆ.. ಮರಿದಾಸನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ವಿದ್ಯಾರ್ಥಿಗಳ ಈ ಕ್ರೀಡಾ ಕ್ಷೇತ್ರದಲ್ಲಿನ ಸಾಧನೆ ಕಂಡು ಗ್ರಾಮಸ್ಥರು ಸಿಹಿ ತಿನಿಸಿ ಸಂಭ್ರಮಿಸಿದರು. ಜೊತೆಗೆ ಕುಣಿದು ಕುಪ್ಪಳಿಸಿದ್ದಾರೆ. ಕಬ್ಬಡಿ ತಂಡದಲ್ಲಿ ಕ್ಯಾಪ್ಟನ್ ವಿಶ್ವ, ಸೇರಿದಂತೆ ರಾಜು, ಭರತ್ ಪಟೇಲ್, ರಘು, ಧನಂಜಯ್ , ಗೌತಮ್, ಮಾರುತಿ, ಅಭಿ, ಕಿರಣ್, ಭರತ್ ಪಟೆಲ್, ನಿತಿನ್ , ಸಿದ್ದಾರ್ಥ ಇವರನ್ನು ಮರಿದಾಸನಹಳ್ಳಿ ಸರ್ಕಾರಿ ಕಾಲೇಜು ಪ್ರಾಂಶುಪಾಲರು ಆಂಜನೇಯಲು, ಟೀಮ್ ಮ್ಯಾನೇಜರ್ ಓಂಕಾರ್ , ಕೋಚ್ ಹರೀಶ್ ,ಅಭಿ ಭಾಗವಹಿಸಿದ್ದರು. ಹಳೆ ವಿದ್ಯಾರ್ಥಿಗಳ ಸಂಘದ ಪಧಾಧಿಕಾರಿಗಳು, ಗ್ರಾಮಸ್ಥರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರೋತ್ಸಾಹಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಪಾವಗಡ: ತಾಲೂಕಿನಲ್ಲಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪಾವಗಡ ತಾಲೂಕಿನಲ್ಲಿ ಹೆಚ್ಚಾಗಿ ಮಳೆ ಬಂದಂತಹ ಸಂದರ್ಭದಲ್ಲಿ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿರುವುದರಿಂದ ಬೆಳೆ ಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಬೆಳೆ ಹಾನಿಯಾದ 20 ರೈತರ ಪಟ್ಟಿಯನ್ನು ತಹಶೀಲ್ದಾರ್/ಗ್ರಾಮ ಪಂಚಾಯತಿ/ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ್ 3 ರಿಂದು ಪ್ರಕಟಿಸಲಾಗಿದೆ. ಈ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್/ತೋಟಗಾರಿಕೆ ಇಲಾಖೆಗಳ ತಾಲ್ಲೂಕು ಕಚೇರಿಗಳಿಗೆ 7 ದಿನಗಳೊಳಗಾಗಿ ಸಲ್ಲಿಸಬೇಕು. ಜೊತೆಗೆ ಪಟ್ಟಿಯಿಂದ ಯಾರಾದರೂ ಬಿಟ್ಟು ಹೋದಲ್ಲಿ ಅವರು ಸೂಕ್ತ ದಾಖಲೆಗಳೊಂದಿಗೆ ಮೇಲಿನ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಪಾವಗಡ ತಹಶೀಲ್ದಾರ್ ಹಾಗೂ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಿ ಎನ್ ವರದರಾಜು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿರಾಮ್ ಗ್ರೇಡ್ ಟು ತಹಶೀಲ್ದಾರ್ ಎನ್ ಮೂರ್ತಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ್ ಗೌಡ ಹಾಜರಿದ್ದರು ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಕಾರವಾರ: ವಿದ್ಯೆ ಕಲಿಸುವುದಷ್ಟೇ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ. ಪ್ರತಿಯೊಬ್ಬರೂ ಉನ್ನತ ಸ್ಥಾನ ಪಡೆಯುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ನಗರಸಭೆಯ ಅಧ್ಯಕ್ಷ ರವಿರಾಜ ಅಂಕೋಲೆಕರ ಹೇಳಿದರು. ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಉತ್ತರಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರವಾರ, ಕೆ.ಡಿ.ಸಿ.ಸಿ. ಬ್ಯಾಂಕ್ ಶಿರಸಿ (ಶಾಖೆ ಕಾರವಾರ) ಅಂಕೋಲಾ ಅರ್ಬನ್ ಕೋ. ಅಪರೇಟಿವ್ ಬ್ಯಾಂಕ್ ಅಂಕೋಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಕಾರವಾರ ತಾಲೂಕಿನ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಬೋಧನಾ ವೃತ್ತಿ ಅತ್ಯಂತ ಶ್ರೇಷ್ಟ್ರ ವೃತ್ತಿಗಳಲ್ಲಿ ಒಂದು ಎಂಬುದನ್ನು ಪರಿಗಣಿಸಿರುವ ದೇಶ ನಮ್ಮದು. ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದರ ಜತೆಗೆ ಸರಿ ತಪ್ಪುಗಳನ್ನು ತಿದ್ದುವ, ಅವರಲ್ಲಿನ ಆಸಕ್ತಿಗಳನ್ನು ವೃದ್ಧಿಸುವ ಮತ್ತು ಅವರ…
ಕಾರವಾರ: ದೇಶದ ಅಭಿವೃದ್ಧಿ ರಾಜಕಾರಣಿಗಳಿಂದ, ಬೇರೆ ಬೇರೆ ವ್ಯವಸ್ಥೆಯಿಂದ ಆಗಿದೆ ಎಂದು ಅಂದುಕೊAಡಿದ್ದರೆ ಅದು ತಪ್ಪು, ದೇಶದ ಅಭಿವೃದ್ಧಿಗೆ ನಿಜವಾಗಿಯೂ ಕಾರಣರಾದವರು ಶಿಕ್ಷಕರು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ಎಸ್. ವೈದ್ಯ ಹೇಳಿದರು. ಅವರು ಗುರುವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ, ಲಯನ್ಸ್ ಕ್ಲಬ್ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಹೊನ್ನಾವರದ ಮೂಡಗಣಪತಿ ಸಬಾಭವನದಲ್ಲಿ ನಡೆದ ಡಾ. ಸರ್ವಪಲ್ಲಿ ರಾಧಾಕೃಷ್ಣರವರ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯಾವುದೇ ವ್ಯಕ್ತಿ ಎಷ್ಟೇ ಎತ್ತರಕ್ಕೆ ಏರಿದರು, ತನಗೆ ವಿದ್ಯೆ ಕಲಿಸಿದ ಶಿಕ್ಷಕರಿಗೆ ತಲೆ ಬಾಗುತ್ತಾನೆ, ಕೈ ಮುಗಿಯುತ್ತಾನೆ. ಶಿಕ್ಷಕರಿಗೆ ದೇಶದ ಮೂಲೆ ಮೂಲೆಯಲ್ಲಿಯು ಆಸ್ತಿ ಇದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳೆಲ್ಲಾ ಅವರಿಗೆ ವಿದ್ಯಾರ್ಥಿಗಳಾಗಿದ್ದು, ಅವರದೇ ಆಸ್ತಿಯಾಗಿದ್ದಾರೆ. ಶಿಕ್ಷಕರು ಯಾವಾಗಲು ಗುರುಗಳೇ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಮೇಷ ರಾಶಿ : ಮೇಷ ರಾಶಿಯವರಿಗೆ ಈ ದಿನ ಉತ್ತಮವಾಗಲಿದೆ.ಹಣ ಬರಲಿದೆ. ಸದ್ಯಕ್ಕೆ ಯಾವುದೇ ರೀತಿಯ ಹೂಡಿಕೆಯನ್ನು ತಪ್ಪಿಸಿ. ನ್ಯಾಯಾಲಯದಲ್ಲಿ ಜಯವನ್ನು ಪಡೆಯಬಹುದು. ಆರೋಗ್ಯ ಉತ್ತಮವಾಗಿರಲಿದೆ. ಇಂದು ಭೂಮಿ ಅಥವಾ ವಾಹನ ಖರೀದಿಗೆ ಶುಭ ದಿನವಾಗಿದೆ. ನೀವು ಶೈಕ್ಷಣಿಕ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ. ಇಂದಿನ ಅದೃಷ್ಟ-…
ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5 ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ – ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ – ಇಡೀ ಶಿಕ್ಷಕ ಸಮೂಹ ಎಲ್ಲರನ್ನೂ ಗೌರವ ಮತ್ತು ಪ್ರೀತಿ ಪೂರ್ವಕವಾಗಿ ನೆನೆಯುತ್ತಾ…….. ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ ಎತ್ತಿ – ಮನ ಬಿಚ್ಚಿ – ಮುಂದಿನ 25 ವರ್ಷಗಳಲ್ಲಿ ಮೌಲ್ಯಯುತ ಬಲಿಷ್ಠ ಭಾರತ ನಿರ್ಮಾಣವಾಗಲು…….. ಅಕ್ಷರ ಕಲಿಸುವವರು ನೀವಲ್ಲವೇ – ಅಧ್ಯಯನ ಮಾಡಲು ಮಾರ್ಗ ಸೂಚಿಸುವವರು ನೀವಲ್ಲವೇ – ಚಿಂತಿಸಲು ಪ್ರೇರೇಪಿಸುವವರು ನೀವಲ್ಲವೇ – ಅನ್ಯಾಯದ ವಿರುದ್ಧ ಸಿಡಿದೇಳಲು ಪ್ರೋತ್ಸಾಹಿಸುವವರು ನೀವಲ್ಲವೇ – ಬದುಕು ರೂಪಿಸಿಕೊಳ್ಳಲು ಸಹಾಯ ಮಾಡುವವರು ನೀವಲ್ಲವೇ…… ಭ್ರಷ್ಟ ವ್ಯವಸ್ಥೆಯ ವಿರುದ್ಧ ನೀವೇ ಮೌನವಾದರೆ, ಮೌಢ್ಯಗಳ ವಿರುದ್ಧ ನೀವೇ ಮೌನವಾದರೆ, ಜಾತಿ ಪದ್ದತಿಯು ವಿರುದ್ಧ ನೀವೇ ಮೌನವಾದರೆ, ಚುನಾವಣಾ ಅಕ್ರಮಗಳ ವಿರುದ್ಧ ನೀವೇ ಮೌನವಾದರೆ ಸಮಾಜದ ಭವಿಷ್ಯವೇನು…… ಸತ್ಯದ ಪರವಾಗಿ ಮಾತನಾಡಲು ಹೇಳಿ ಕೊಟ್ಟವರು ನೀವು, ದೇಶ ಭಕ್ತಿಯ ಪಾಠ ಮಾಡಿದವರು ನೀವು, ಮಾನವೀಯ ಮೌಲ್ಯಗಳನ್ನು ಬಿತ್ತಿದವರು ನೀವು, ಸಂವಿಧಾನ…
ಈ ದಿನ ಶಿಕ್ಷಕರ ದಿನ. ನಾವು ಗುರುಗಳನ್ನು ಸ್ಮರಿಸುವ ದಿನ. ಈ ದಿನವು ಗುರುಗಳಿಗೆ ಅಥವಾ ಶಿಕ್ಷಕರಿಗೆ, ಗೌರವ ಸಲ್ಲಿಸಲು ವಿಶೇಷವಾಗಿ ಮೀಸಲಾಗಿದ್ದು, ಅವರ ಕುರಿತಾದ ಸ್ಮರಣೆ ಮತ್ತು ಗೌರವಕ್ಕೆ ಉದ್ದೇಶಿತವಾಗಿದೆ. ನೂರಾರು ವಿದ್ಯಾರ್ಥಿಗಳಿಗೆ ದಾರಿ ತೋರಿಸುವ ಗುರುಗಳು ಅನೇಕ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಮಾರ್ಗದರ್ಶನವನ್ನೂ ಕೊಡುಗೆಯಾಗಿ ನೀಡುತ್ತಾರೆ. ವಿದ್ಯೆ ಕಲಿಸಿದ ಗುರುಗಳಿಗೆ ಸಾಷ್ಟಾಂಗ ಪ್ರಣಾಮಗಳು. ನೀವು ಸದಾ ನಮ್ಮ ನೆನಪಿನಂಗಳದಲ್ಲಿ ಶಾಶ್ವತವಾಗಿ ನೆಲೆಸುವಂತೆ ಮಾಡಿ ಹೋಗಿದ್ದೀರಿ. ನೀವು ನೀಡಿದ ಸಂದೇಶ, ಮಾರ್ಗದರ್ಶನಗಳು ವಿದ್ಯೆ ಕಲಿತು ಸಮಾಜದಲ್ಲಿ ನಾವು ಉತ್ತಮ ಪ್ರಜೆಗಳಾಗಿ ಬಾಳಲು ಸಹಕಾರಿಯಾಗಿದೆ. – ರಹಮತ್ ಉಲ್ಲಾ ಪಿ. ಹಳೆಯ ವಿದ್ಯಾರ್ಥಿ ಹಾಗೂ ಕಲಾವಿದರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
“ಆಚಾರ್ಯ ದೇವೋ ಭವ” ಎಂಬ ಶ್ಲೋಕವು ನಮಗೆ ಶಿಕ್ಷಕರಿಗೆ ಸಲ್ಲುವ ಗೌರವವನ್ನು ಸ್ಮರಿಸುವಂತೆ ಮಾಡುತ್ತದೆ. ಸಮಾಜದ ನಿರ್ಮಾಣಕಾರರಾಗಿ, ಮಕ್ಕಳ ಜೀವನದ ರಚನೆಗೆ ಅನೇಕ ವಿಧಗಳಲ್ಲಿ ತಾತ್ತ್ವಿಕವಾಗಿ, ಬೌದ್ಧಿಕವಾಗಿ, ನೈತಿಕವಾಗಿ ಆಧಾರವನ್ನು ನೀಡುವವರು ಶಿಕ್ಷಕರು. ಅವರ ಮಾರ್ಗದರ್ಶನವು ಕೇವಲ ಪಠ್ಯಾಭ್ಯಾಸದ ಸೀಮಿತದಲ್ಲಿ ನಿಲ್ಲದೆ, ಜೀವನದ ಮೌಲ್ಯಗಳನ್ನು ಕಗ್ಗೊಲೆಗೊಳಿಸುವ ಮಹತ್ವದ ಕೆಲಸವನ್ನು ಮಾಡುತ್ತದೆ. ಶಿಕ್ಷಕರ ಪಾತ್ರ: ಪ್ರತಿಯೋರ್ವ ವಿದ್ಯಾರ್ಥಿಯ ಜೀವನದಲ್ಲಿ, ಶಿಕ್ಷಕರು ಅವರ ಮೊದಲ ನೈತಿಕ ಮಾರ್ಗದರ್ಶಕರು. ಒಂದು ಸರಿಯಾದ ನಿಲುವಿನೊಂದಿಗೆ ಬೋಧನೆಯಿಂದ ಭವಿಷ್ಯವನ್ನು ರೂಪಿಸುವ ಶಕ್ತಿ ಶಿಕ್ಷಕರ ಹಸ್ತದಲ್ಲಿದೆ. ಕನ್ನಡದ ಅಕ್ಷರಗಳಿಗೆ ಜೀವ ತುಂಬಿದ ಕನ್ನಡ ಮೇಷ್ಟ್ರು, ನಿಖರ ಲೆಕ್ಕಾಚಾರವನ್ನು ಕಲಿಸಿದ ಗಣಿತ ಮೇಷ್ಟ್ರು, ಭೂತಕಾಲವನ್ನು ತಿಳಿಯದವರು ಭವಿಷ್ಯವನ್ನು ರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದ ಸಮಾಜ ಶಾಸ್ತ್ರ ಮೇಷ್ಟ್ರು—ಅವರಿಂದ ನಾವು ಕೇವಲ ಪುಸ್ತಕದ ಜ್ಞಾನವನ್ನೇ ಅಲ್ಲ, ಬಾಳಿನ ಪಾಠವನ್ನೂ ಕಲಿಯುತ್ತೇವೆ. ಮಾತೃಭಾಷೆಯ ಮಹತ್ವ: ಈಗ ಜಗತ್ತಿನಲ್ಲಿ ಇಂಗ್ಲಿಷ್ ಭಾಷೆ ಮುಖ್ಯವಾದರೂ, ಶಿಕ್ಷಕರು ನಮಗೆ ಎಂದಿಗೂ ಮಾತೃಭಾಷೆಯ ಪ್ರಾಮುಖ್ಯತೆಯನ್ನು ತಿಳಿಸುತ್ತಾರೆ. ಒಬ್ಬ ಶಿಕ್ಷಕ ಮಾತೃಭಾಷೆಯ…
ತುಮಕೂರು: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಜಿಲ್ಲಾಧಿಕಾರಿಯವರ ಕಾರ್ಯಾಲಯದಲ್ಲಿ ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನೀರಿನ ಯಂತ್ರಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ಸ್ಪೋಟಗೊಂಡಿದ್ದವು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿದ್ದ ಯಶಶ್ವಿಯಾಗಿವೆ. ಸೆ.6ರಂದು ಚಾಲನೆ ನೀಡಲಾಗುತ್ತಿದೆ. ಈ ನೀರನ್ನು ವಾಣಿವಿಲಾಸ ಸಾಗರ ಅಣೆಕಟ್ಟೆಗೆ 1500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಆ ಭಾಗಕ್ಕೆ ಉಪಯೋಗವಾಗಲಿದೆ. ಮುಂದಿನ ವರ್ಷ ಅರಸಿಕೆರೆ, ತಿಪಟೂರು ಭಾಗದಲ್ಲಿನ ಕಾಮಗಾರಿ ಪೂರ್ಣಗೊಳ್ಳಲಿದ್ದು ತುಮಕೂರಿಗೆ ನೀರು ಬರಲಿದೆ ಎಂದು ತಿಳಿಸಿದರು. ಪರಮಶಿವಯ್ಯನವರು ಹಾಸನ, ಚಿಕ್ಕಮಗಳೂರು, ತುಮಕುರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಯಲುಸೀಮೆ ಪ್ರದೇಶಗಳಿಗೆ ಕುಡಿಯುವ ನೀರಿನ ಯೋಜನೆ ಮಾಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದಕ್ಕೆ ನೇತ್ರಾವತಿಯ ತಿರುವು ಎಂದು ಹೆಸರಿಟ್ಟಿದ್ದರು. ಇದಕ್ಕೆ ಮಂಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರಿಂದ ಯೋಜನೆ ಕೈ ಬಿಡುವ…