Author: admin

ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಹಾಗೂ ವಿವಿಧ ರೀತಿಯ ಜ್ವರಗಳಿಂದ ಜನ ಪಟ್ಟಣದ ಸಾರ್ವಜನಿಕ ಆಸ್ಪಯತ್ರೆಯಲ್ಲಿ ಸಾಲುಗಟ್ಟಿ ಬೆಳಿಗ್ಗೆಯಿಂದ ಸಂಜೆವರೆಗೆ ಕಾದು ಚಿಕಿತ್ಸೆ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹದಗೆಟ್ಟ ನೈರ್ಮಲ್ಯ ವ್ಯವಸ್ಥೆಯಿಂದ ತಾಲ್ಲೂಕಿನ ರೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲಿಬೆಟ್ಟ ತಾಂಡ ಗ್ರಾಮದಲ್ಲಿ ಲಂಬಾಣಿ ಸಮುದಾಯದ 80 ಕ್ಕೂ ಹೆಚ್ಚು ಮನೆಗಳಿದ್ದರೂ ಸಹ ಸಿ.ಸಿ. ರಸ್ತೆ., ಚರಂಡಿ,ಬೀದಿ ದೀಪಗಳ ಭಾಗ್ಯವಂತೂ ಇಲ್ಲವೇ ಇಲ್ಲ ಇಲ್ಲಿಯ ಗ್ರಾಮಸ್ಥರು ಸಂಜೆಯಾದರೆ ಸಾಕು ಕತ್ತಲಲ್ಲೆ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದಲ್ಲದೇ ಮಳೆಗಾಲದಲ್ಲಿ ಕಲುಷಿತ ವಾತಾವರಣ ಸೃಷ್ಟಿಯಾಗಿದ್ದು ಎಲ್ಲೆಂದರಲ್ಲಿ ಚರಂಡಿ ನೀರು, ಮಳೆ ನೀರು ನಿಂತು ಫಾರ್ತೇನಿಯಂ ಗಿಡಗಳು ಬೆಳೆದು ಸೊಳ್ಳೆಗಳು ಉತ್ಪತ್ತಿಯಾಗಿ ಜನ ಡೆಂಘೀ ಭೀತಿಯಲ್ಲಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕುಪ್ಪಾಳು ಗ್ರಾಮ ಪಂಚಾಯಿತಿಗೆ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಕೊಂಡ್ಲಿಘಟ್ಟ ಕ್ಷೇತ್ರದ ಸದಸ್ಯೆ ಗಾಯತ್ರಿ ಮೈಲಾರ ಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಕರ ಡಾಳು ಕ್ಷೇತ್ರದ ಸದಸ್ಯೆ ಮಂಜುಳಾ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಕುಪ್ಪಾಳು ಗ್ರಾಮ ಪಂಚಾಯಿತಿಯನ್ನು ಮಾದರಿ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತೇವೆ. ಗ್ರಾಮೀಣ ಜನತೆಯ ಕುಂದು ಕೊರತೆಗಳನ್ನು ಆಲಿಸಿ ಸರಿಪಡಿಸುವುದಾಗಿ ಹೇಳಿದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ನ್ಯಾಕೆನಹಳ್ಳಿ ಸುರೇಶ್ ಮಾತನಾಡಿ, ಈ ಪಂಚಾಯಿತಿಯ ಎಲ್ಲಾ ಸದಸ್ಯರು ಒಗ್ಗಟ್ಟಿನಿಂದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ಗ್ರಾಮದ ಅಭಿವೃದ್ಧಿಗೆ ದುಡಿಯುತ್ತಾರೆ ಎಂದರು. ಮಾಜಿ ಅಧ್ಯಕ್ಷ ಮಹೇಶ್ ಮಾತನಾಡಿ, ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯ, ಶಾಲೆ, ಅಂಚೆ ಕಚೇರಿ, ರೈಲ್ವೆ ನಿಲ್ದಾಣ, ಆಸ್ಪತ್ರೆ, ಪಶು ಆಸ್ಪತ್ರೆಗಳು ಇವೆ, ನರೇಗಾ ಯೋಜನೆ ಮೂಲಕ ಶಾಲೆ, ಗ್ರಂಥಾಲಯ, ಶೌಚಾಲಯ ನಿರ್ಮಾಣ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.ಮಾಜಿ…

Read More

ಶತಮಾನಗಳಿಂದ ಧೂಪದ್ರವ್ಯವು (ಊದುಬತ್ತಿ) ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಅವಿಭಾಜ್ಯ ಅಂಗವಾಗಿದೆ. ಧೂಪದ್ರವ್ಯದ ಪರಿಮಳವನ್ನು ಧಾರ್ಮಿಕ ಸಮಾರಂಭಗಳು ಮತ್ತು ದೈನಂದಿನ ದಿನಚರಿಗಳ ವಾತಾವರಣವನ್ನು ಹೆಚ್ಚಿಸಲು ಬಳಸಲಾಗುತ್ತದೆ. ವಾಸ್ತವವಾಗಿ, ಏರ್ ಫ್ರೆಶನರ್‌ ಗಳು ಮತ್ತು ಪರಿಮಳಯುಕ್ತ ಮೇಣದಬತ್ತಿಗಳ ಆಗಮನದ ಹೊರತಾಗಿಯೂ, ಧೂಪದ್ರವ್ಯ ಕಡ್ಡಿಗಳನ್ನು ಆಧುನಿಕ ಭಾರತದಲ್ಲಿ ಇನ್ನೂ ವ್ಯಾಪಕವಾಗಿ ಬಳಸಲಾಗುತ್ತಿದೆ. ಆದಾಗ್ಯೂ, ಧೂಪದ್ರವ್ಯದ ಕಡ್ಡಿಗಳ ಹೆಚ್ಚಿದ ಜನಪ್ರಿಯತೆಯು ಅವುಗಳ ಸಂಭಾವ್ಯ ಅಪಾಯಗಳ ಬಗ್ಗೆಯೂ ಗಮನ ಸೆಳೆಯುತ್ತಿದೆ. ತಪ್ಪಾಗಿ ಬಳಸಿದಾಗ, ಅದು ಆರೋಗ್ಯ ಮತ್ತು ಸುರಕ್ಷತೆಗೆ ಗಮನಾರ್ಹ ಅಪಾಯವನ್ನು ಉಂಟುಮಾಡಬಹುದು. ಅವುಗಳ ಸುರಕ್ಷಿತ ಬಳಕೆಯನ್ನು ಖಚಿತಪಡಿಸಿಕೊಳ್ಳಲು ಅಗರಬತ್ತಿಗಳನ್ನು ಬಳಸುವುದರಲ್ಲಿ ಮಾಡಬೇಕಾದ ಮತ್ತು ಮಾಡಬಾರದ ವಿಷಯಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ಪೂಜೆಯ ಸಮಯದಲ್ಲಿ ಎಷ್ಟು ಅಗರಬತ್ತಿಗಳನ್ನು ಬೆಳಗಿಸಬೇಕು? ಶಿವನಿಗೆ: 3 ಅಗರಬತ್ತಿಗಳು ವಿಷ್ಣುವಿಗೆ: 1 ಅಗರಬತ್ತಿ ಲಕ್ಷ್ಮಿ ದೇವಿಗೆ: 1 ಅಗರಬತ್ತಿ ಗಣೇಶನಿಗೆ: 5 ಅಗರಬತ್ತಿಗಳು ಕಾಲ–ಭೈರವರಿಗೆ: 8 ಅಗರಬತ್ತಿಗಳು ಕಾಳಿ ದೇವಿಗೆ: 8 ಅಗರಬತ್ತಿಗಳು ದುರ್ಗಾಮಾತೆಗೆ: 5 ಅಥವಾ 9 ಅಗರಬತ್ತಿಗಳು ಹನುಮಂತನಿಗೆ: 6…

Read More

ಗಾಳಿಪಟ, ಗಣೇಶ ಮತ್ತೆ ಬಂದ, ಮನಸಾರೆ, ಕೃಷ್ಣ ನೀ ಲೇಟಾಗಿ ಬಾರೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಸುಂದರಿ ನೀತು ಇದೀಗ ಟಾರೋಕಾರ್ಟ್ ರೀಡಿಂಗ್, ಹೀಲಿಂಗ್, ಷಾಮನಿಸಂ ಸೇರಿದಂತೆ ಹಲವು ದೊಡ್ಡ ವಿದ್ಯೆಗಳನ್ನು ಕಲಿಯುತ್ತಿದ್ದಾರೆ. ಈ ವಿದ್ಯೆಯಿಂದ ತಮ್ಮ ಜೀವನದಲ್ಲಿ ನಡೆಯುತ್ತಿರುವ ಘಟನೆ ಮಾತ್ರವಲ್ಲ ಇನ್ನಿತರರಿಗೂ ಸಹಾಯ ಮಾಡುತ್ತಿದ್ದಾರೆ.’ತಂದೆ ತೀರಿಕೊಂಡು ಒಂದು ವರ್ಷ ಆಮೇಲೆ ನಿದ್ರೆಯಲ್ಲಿ ಏನೋ ಕಪ್ಪು ಕಾಣಿಸುತ್ತಿದೆ ನಾನು ಗಾಬರಿ ಆಗುತ್ತಿದ್ದೀನಿ ಉಸಿರು ಗಟ್ಟುತ್ತಿದೆ. ಮಲಗಿ 10 ನಿಮಿಷಕ್ಕೆ ಈ ರೀತಿ ಆಗುತ್ತಿತ್ತು, ಇದನ್ನು ಮತ್ತೊಬ್ಬರ ಜೊತೆ ಚರ್ಚೆ ಮಾಡಿದರೆ ಭ್ರಮೆ ಎನ್ನುತ್ತಿದ್ದರು. ಈ ಘಟನೆ ಬಗ್ಗೆ ಪ್ರಾಣಿಕ್ ಹೀಲರ್ ಜೊತೆ ಮಾತನಾಡಿದ ಮೇಲೆ ತಿಳಿಯಿತು. ಆ ಕಪ್ಪು ನನ್ನ ತಂದೆ ಅವರು ಸತ್ತ ಮೇಲೆ ಮುಕ್ತಿ ಸಿಕ್ಕಿಲ್ಲ ಎಂದು ತಿಳಿಯಿತು. ಗುರುವಾಯುರ್ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದರೆ ಒಳ್ಳೆಯದಾಗುತ್ತದೆ ಎಂದರು. ಅಲ್ಲಿ ಪೂಜೆ ಮುಗಿಸಿದ ಮೇಲೆ ಮತ್ತೆ ಕಪ್ಪು ಕಾಣಿಸಿಕೊಳ್ಳಲಿಲ್ಲ. ಯಾವಾಗ ಕಪ್ಪು ಕಾಣಿಸಿಕೊಳ್ಳುವುದು ಸ್ಟಾಪ್ ಆಯ್ತು…

Read More

ಮೇ ತಿಂಗಳಲ್ಲಿ ಹಲವಾರು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಯಾಕೆ ಗೊತ್ತೆ ? ಕರ್ನಾಟಕ ರಾಜ್ಯ ಸರ್ಕಾರ ಇವಾಗ ಡಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾಗಿದ್ದು ಇಲ್ಲಿವರೆಗೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಒಂದು ಕುಟುಂಬದಲ್ಲಿ ಒಂದು ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ ಏನಿಲ್ಲ ಅಂದರೂ 5000 ಪಡೆಯಬಹುದು ಹಾಗಾಗಿ ತುಂಬಾ ಜನರು ಅಕ್ರಮವಾಗಿ ರೇಷನ್ ಕಾರ್ಡ್ ಗಳನ್ನು ಮಾಡಿಸಿದ್ದು ಹಾಗೂ ಶ್ರೀಮಂತರು ಹಾಗೂ ಜಿಎಸ್ಟಿ ಕಟ್ಟುವವರು ಕೂಡ ರೇಷನ್ ಕಾರ್ಡ್ ಹೊಂದಿದ್ದಾರೆ. ಅಂತವರ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವ ಪ್ರಕ್ರಿಯೆ ನಮ್ಮ ಕರ್ನಾಟಕದಲ್ಲಿ ನಡೆದಿದೆ. ವರ್ಷಕ್ಕೆ ಮೂರು ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿದವರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಇದು ರೇಷನ್ ಕಾರ್ಡ್ ನಲ್ಲಿ ನಿಯಮ ಉಲ್ಲಂಘನೆ ಆಗುತ್ತದೆ ಹಾಗಾಗಿ ಅಂಥವರ ರೇಷನ್ ಕಾರ್ಡ್ ಕೂಡ ರದ್ದು ಮಾಡಲಾಗುತ್ತಿದೆ. ನಗರ…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಮೇಷ ರಾಶಿ: ಅನಿರೀಕ್ಷಿತ ತೊಂದರೆಗಳು ಎದುರಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಜಾಗೃತರಾಗಿ ನಿಮ್ಮ ಸ್ನೇಹಿತರೊಡನೆ ಆಗಲಿ ಬಂಧುಗಳೊಡನೆ ಆಗಲಿ ಮಾತನಾಡುವುದು ಒಳಿತು. ಅನೇಕ ಕಷ್ಟಗಳನ್ನು ಎದುರಿಸುವ ಸಾಧ್ಯತೆ!ಈ ದಿನದಲ್ಲಿ ಯಾವುದೇ ಕಷ್ಟಗಳಿದ್ದರೂ ಪರಿಹಾರ ಆಗಬೇಕು ಅನ್ನುವುದಾದರೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ವೀಳ್ಯದೆಲೆಯ ಆಹಾರವನ್ನು ಮಾಡಿ  ಪುರೋಹಿತರಿಗೆ ನೀಡಿ…

Read More

ದಾಳಿಕೋರರು ಮತ್ತು ಸ್ಕ್ಯಾಮರ್ಗಳು ತಮ್ಮ ಗ್ರಾಹಕರನ್ನ ಗುರಿಯಾಗಿಸಲು ಬಳಸುವ ಸಾಮಾನ್ಯ ಹಗರಣಗಳಲ್ಲಿ ‘ಮೊಬೈಲ್ ಅಪ್ಲಿಕೇಶನ್ ಹಗರಣ’ ಒಂದಾಗಿದೆ. ಈ ಹಗರಣವು ನಿಮ್ಮ ಚಟುವಟಿಕೆಗಳನ್ನ ಮೇಲ್ವಿಚಾರಣೆ ಮಾಡುವುದು ಮತ್ತು ವೈಯಕ್ತಿಕ ಮಾಹಿತಿಯನ್ನ ಕದಿಯುವುದಕ್ಕಿಂತ ಹೆಚ್ಚಿನದನ್ನು ಮಾಡಬಹುದು. ಬ್ಯಾಂಕಿಂಗ್ ವಿವರಗಳು, ಲಾಗಿನ್ ರುಜುವಾತುಗಳು ಮುಂತಾದ ಸೂಕ್ಷ್ಮ ಮಾಹಿತಿಯನ್ನು ಕದಿಯುವುದು ಇಂತಹ ಹಗರಣಗಳ ವ್ಯಾಪಕ ಅನ್ವಯವಾಗಿದೆ. ಈ ಮಾರ್ಗಸೂಚಿಯಲ್ಲಿ, ಮೊಬೈಲ್ ಅಪ್ಲಿಕೇಶನ್ ಹಗರಣಗಳ ಮೂಲಭೂತ ಅಂಶಗಳು, ಅವು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಸುರಕ್ಷಿತವಾಗಿರಲು ಸರ್ಕಾರ ಹಂಚಿಕೊಂಡ ಕೆಲವು ಸಲಹೆಗಳನ್ನು ನಾವು ವಿವರಿಸುತ್ತೇವೆ. ಮೊಬೈಲ್ ಅಪ್ಲಿಕೇಶನ್ ಹಗರಣ, ಉಲ್ಲೇಖಿಸಿದಂತೆ, ಮಾಲ್ವೇರ್-ಪೀಡಿತ ಅಪ್ಲಿಕೇಶನ್ ಆಗಿದ್ದು, ಇದು ನಿಮ್ಮ ಡೇಟಾವನ್ನ ಸ್ಟೀಮ್ ಮಾಡಲು ಮತ್ತು ಲಾಗಿನ್ ರುಜುವಾತುಗಳನ್ನ ಮತ್ತು ಪ್ರೀಮಿಯಂ ಸೇವೆಗಳಿಗೆ ಸ್ವಯಂ-ಚಂದಾದಾರರಾಗಲು ವಿನ್ಯಾಸಗೊಳಿಸಲಾಗಿದೆ. ಈ ಅಪ್ಲಿಕೇಶನ್’ಗಳನ್ನ ನೀವು ಸ್ವೀಕರಿಸಿದ ಯಾದೃಚ್ಛಿಕ ಲಿಂಕ್’ಗಳಂತಹ ವಿವಿಧ ವಿಧಾನಗಳಿಂದ ಅಥವಾ ಚಂದಾದಾರಿಕೆಗಳನ್ನ ಬೈಪಾಸ್ ಮಾಡಲು ಅಥವಾ ಅಪ್ಲಿಕೇಶನ್’ನ ಕಾರ್ಯಕ್ಷಮತೆಯನ್ನ ಸುಧಾರಿಸಲು ಹೆಚ್ಚುವರಿ ವೈಶಿಷ್ಟ್ಯಗಳನ್ನ ಪಡೆಯಲು ಬಳಕೆದಾರರು ಮಾಡುವ ಮೂರನೇ ಪಕ್ಷದ ಸ್ಥಾಪನೆಗಳಂತಹ ವಿವಿಧ…

Read More

ಕನ್ನಡಕಗಳನ್ನ ತೆಗೆದುಹಾಕಲು ಸಹಾಯ ಮಾಡುವ ಹೊಸ ಕಣ್ಣಿನ ಹನಿಗಳನ್ನ ಭಾರತದ ಔಷಧ ನಿಯಂತ್ರಣ ಸಂಸ್ಥೆ ಅನುಮೋದಿಸಿದೆ. ಮುಂಬೈ ಮೂಲದ ಎಂಟೋಡ್ ಫಾರ್ಮಾಸ್ಯುಟಿಕಲ್ಸ್ ಪ್ರೆಸ್ಬಿಯೋಪಿಯಾ ಚಿಕಿತ್ಸೆಗಾಗಿ ಪ್ರೆಸ್ವು ಐ ಡ್ರಾಪ್ಸ್ ಅನ್ನು ಅಭಿವೃದ್ಧಿಪಡಿಸಿದೆ, ಇದು ವಿಶ್ವಾದ್ಯಂತ 1.09 ಬಿಲಿಯನ್ ಮತ್ತು 1.80 ಬಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತದೆ. ವಯಸ್ಸಾದಂತೆ ಪ್ರೆಸ್ಬಿಯೋಪಿಯಾ ಸ್ವಾಭಾವಿಕವಾಗಿ ಸಂಭವಿಸುತ್ತದೆ, ಇದು ನಿಕಟ ವಸ್ತುಗಳ ಮೇಲೆ ಕೇಂದ್ರೀಕರಿಸಲು ಕಷ್ಟವಾಗುತ್ತದೆ. ಇದು ಸಾಮಾನ್ಯವಾಗಿ 40ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭವಾಗುತ್ತದೆ ಮತ್ತು ಸುಮಾರು 60ರ ದಶಕದ ಅಂತ್ಯದವರೆಗೆ ಹದಗೆಡುತ್ತದೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ವಿಷಯ ತಜ್ಞರ ಸಮಿತಿ (SEC) ಈ ಹಿಂದೆ ಉತ್ಪನ್ನವನ್ನು ಶಿಫಾರಸು ಮಾಡಿದ ನಂತರ ಇಎನ್ಟಿಒಡಿ ಫಾರ್ಮಾಸ್ಯುಟಿಕಲ್ಸ್ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ನಿಂದ ಅಂತಿಮ ಅನುಮೋದನೆ ಪಡೆಯಿತು. 40 ವರ್ಷಕ್ಕಿಂತ ಮೇಲ್ಪಟ್ಟ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ವಯಸ್ಸಿಗೆ ಸಂಬಂಧಿಸಿದ ದೃಷ್ಟಿ ಸ್ಥಿತಿಯಾದ ಪ್ರೆಸ್ಬಿಯೋಪಿಯಾ ಹೊಂದಿರುವ ಜನರಲ್ಲಿ ಓದುವ…

Read More

ತುಮಕೂರು:  ಸರ್ಕಾರವು ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆಯ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆರ್ಥಿಕ ವರ್ಷದ ಪ್ರಾರಂಭವಾದ 30 ದಿನಗಳೊಳಗೆ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಿದ್ದು, ಈ ಅವಧಿಯನ್ನು ಸೆಪ್ಟೆಂಬರ್ 14ರವರೆಗೆ ವಿಸ್ತರಿಸಿದೆ. ಆಸ್ತಿ ತೆರಿಗೆ ಪಾವತಿ ಅವಧಿ ವಿಸ್ತರಣೆಯಾಗಿರುವ ಬಗ್ಗೆ ಕರಪತ್ರಗಳನ್ನು ಹಂಚಲು, ಕಸದ ಗಾಡಿಗಳಲ್ಲಿ ಪ್ರಚುರಪಡಿಸಲು, ನಗರದ ಎಲ್ಲಾ ಎಲ್‌ ಇಡಿ ಪರದೆಗಳಲ್ಲಿ ಪ್ರದರ್ಶಿಸಲು ಕ್ರಮಕೈಗೊಳ್ಳಬೇಕೆಂದು ಸ್ಥಳೀಯ ಆಡಳಿತ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯಿತಿ ವತಿಯಿಂದ ಅಮೃತ ನಗರೋತ್ಥಾನ ಯೋಜನೆಯಡಿ ಎಂ.ಬಿ.ಬಿ.ಎಸ್/ಬಿ.ಇ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಇತ್ತೀಚಿನ 2 ಭಾವಚಿತ್ರ, ಅಂಗವಿಕಲರಾದಲ್ಲಿ ದೃಢೀಕರಣ ಪತ್ರವನ್ನು ಲಗತ್ತಿಸಿ, ಪ್ರಕಟಣೆ ಪ್ರಕಟಗೊಂಡ 15 ದಿನದೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More