Subscribe to Updates
Get the latest creative news from FooBar about art, design and business.
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್ ಮುಖಂಡ ಒತ್ತಾಯ
- ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
- ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
Author: admin
ತುಮಕೂರು: ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು. ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಕೌಟುಂಬಿಕ ದೌರ್ಜನ್ಯ ತಡೆಕಾಯ್ದೆಯಡಿ ಮಹಿಳೆಯರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದರು. ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಗತಿ ಕಾರ್ಯಕ್ರಮಗಳ ಮಾಹಿತಿ ಪಡೆದ ಸಚಿವರು, ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ, ಜಿಲ್ಲಾ ಹಾಗೂ ತಾಲ್ಲೂಕು ಶಿಶುಪಾಲನಾ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಲಭ್ಯಗಳು ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ವರ್ಕಿಂಗ್ ವುಮೆನ್ಸ್ ಹಾಸ್ಟೆಲ್: ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸೂಕ್ತ ಜಾಗ ನೀಡಿದರೆ ನಗರದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಸ್ಥಾಪಿಸಲಾಗುವುದು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ರೀಲ್ಸ್ ಗೆ ಪ್ರೋತ್ಸಾಹಿಸಿ: ಗೃಹಲಕ್ಷ್ಮಿ ಯೋಜನೆ ಕುರಿತಂತೆ ರೀಲ್ಸ್ ಮಾಡುವ ಮಹಿಳೆಯರಿಗೆ…
ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದರು. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು. ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು…
ರಾಯಚೂರು: ಭಾರತ ಸರ್ಕಾರದ ರೈಲ್ವೆ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯದಲ್ಲಿ ಕೇಂದ್ರ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ರಾಯಚೂರು ನಗರದ ರೈಲ್ವೇ ನಿಲ್ದಾಣಕ್ಕೆ ಭೇಟಿ, ನೀಡಿ ಭಾರತ್ ಸ್ಟೇಷನ್ ಕಾಮಗಾರಿಯನ್ನು ಪರಿಶೀಲನೆ ಮಾಡಿದರು. ಈ ವೇಳೆ ಮಾತನಾಡಿ, ಅವರು ಕಾಮಗಾರಿಯು ಗುಣ್ಣಮಟ್ಟ ಹಾಗೂ ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳಿಸಬೇಕು. ನಗರದ ಬೇಡಿಕೆಗೆ ಅನುಗುಣವಾಗಿ ರೈಲು ನಿಲ್ದಾಣಗಳ ಮೂಲಸೌಕರ್ಯಗಳನ್ನು ಹೆಚ್ಚಿಸಿ, ಪ್ರಯಾಣಿಕರ ಸೌಕರ್ಯ, ಅನುಕೂಲ, ಸುರಕ್ಷತೆಗೆ ಆದ್ಯತೆ ನೀಡಲಾಗುವುದು. ಪಾರ್ಕಿಂಗ್, ಮಕ್ಕಳಿಗಾಗಿ ಆಟದ ವಲಯ, ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಸ್ಥಳಾವಕಾಶಗಳ ಇರಲಿದೆ.ಸಾರ್ವಜನಿಕರಿಂದ ಯಾವುದೇ ದೂರಗಳು ಬರದ ರೀತಿಯಲ್ಲಿ ನೋಡಿಕೊಳ್ಳಬೇಕು ಸ್ಥಳದಲ್ಲಿದ್ದ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಂಬಂಧಿಸಿದ ರೈಲ್ವೆ ಡಿಆರ್ಎಂ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಸಲಹಾ ಸಮಿತಿ ರಚಿಸಿ ಚರ್ಚಿಸಿ ಸ್ಥಳೀಯ ಮಟ್ಟದಲ್ಲಿ ಕೆಲ ತೀರ್ಮಾನಗಳನ್ನು ತಗೆದುಕೊಳ್ಳಬೇಕು. ಅವರಿಂದ ಸಲಹೆಗಳನ್ನು ಪಡೆದುಕೊಂಡರೆ ಜನರಿಗೆ ಇನ್ನಷ್ಟು ಅನುಕೂಲ ಆಗುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗಲಿದ್ದು, ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿಡದರು.…
ತುಮಕೂರು: ಸಿಎಂ ಚೇರ್ ಖಾಲಿ ಇಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯನವರು ಸಿಎಂ ಒಳ್ಳೆಯ ಕೆಲಸ ಮಾಡ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಒಂದೂ ಕೂಡ ಡಿಲೀಟ್ ಆಗಿಲ್ಲ, ಡಿಲೀಟ್ ಆಗಿರೋದು ತೋರಿಸಿ. ಯಾರು ಜಿಎಸ್ ಟಿ, ಇನ್ ಕಮ್ ಟ್ಯಾಕ್ಸ್ ಪೇ ಮಾಡ್ತಾರೆ ಅಂತಹವರದ್ದು ಆಗಿರಬಹುದು ಎಂದರು. ಅದು ಕೂಡ ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ಅದು ರಿಜಿಸ್ಟ್ರೇಷನ್ ಆಗಿ ಹಣ ತೆಗೆದುಕೊಂಡ ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದರು. ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದೆ. 12-13ನೇ ಕಂತಿನ ಹಣ ಸದ್ಯದಲ್ಲೆ ಬಿಡುಗಡೆ ಮಾಡಲಾಗುತ್ತದೆ ಎಂದರು. ಗೃಹಲಕ್ಷ್ಮೀ ಶುರುವಾಗಿ ಒಂದು ವರ್ಷದ ಸಂಭ್ರಮದಲ್ಲಿದ್ದು ತುಮಕೂರು ಜಿಲ್ಲೆಯಲ್ಲಿ ಇಲಾಖೆಯ ಪರಿಶೀಲನಾ ಸಭೆ ನಡೆಸಲು ಬಂದಿದ್ದೇನೆ.…
ಪ್ರೀತಿಯ ಭಾವವನ್ನು ವ್ಯಕ್ತಪಡಿಸಲು ಇರುವ ಅತ್ಯುತ್ತಮ ವಿಧಾನವೆಂದರೆ ಚುಂಬನ. ಸಂಗಾತಿಗೆ ನಿಮ್ಮ ಪ್ರೀತಿ, ವಾತ್ಸಲ್ಯದ ಭಾವನೆಗಳನ್ನು ಪ್ರಕಟಿಸಲು ಎದುರಾಗುವ ಉತ್ಕಟ ಬಯಕೆಯನ್ನು ಚುಂಬನದ ಮೂಲಕ ಸಾಧಿಸಬಹುದು. ಆದ್ರೆ ಚುಂಬನದಿಂದ ಒಂದಿಷ್ಟು ಹಾನಿ ಇದೆ ಎಂಬುದು ನಿಮಗೆ ಗೊತ್ತಾ? ಹೌದು ಚುಂಬನದಿಂದಾಗಿ ಬ್ಯಾಕ್ಟೀರಿಯಾ ಹರಡೋದು ಕಾಯಿಲೆಗೆ ಕಾರಣವಾಗಲಿದೆ. ಮೊನೊನ್ಯೂಕ್ಲಿಯೊಸಿಸ್ ಅಥವಾ ಮೊನೊವನ್ನು ಚುಂಬನ ಕಾಯಿಲೆ ಎಂದು ಕರೆಯಲಾಗುತ್ತದೆ. ಇದಕ್ಕೆ ಕಾರಣವಾದ ವೈರಸ್ ಸಾಮಾನ್ಯವಾಗಿ ಲಾಲಾರಸದ ಮೂಲಕ ಹರಡುತ್ತದೆ. ಇದು ತುಂಬಾ ಸಾಮಾನ್ಯವಾಗಿದೆ ಮತ್ತು ವಿವಿಧ ವಯಸ್ಸಿನ ಜನರ ಮೇಲೆ ಪರಿಣಾಮ ಬೀರಬಹುದು. ಇದು ಸಾಮಾನ್ಯವಾಗಿ ಹದಿಹರೆಯದವರು ಮತ್ತು ಯುವ ವಯಸ್ಕರಲ್ಲಿ ಕಂಡುಬರುತ್ತದೆ. ಮಾನೋನ್ಯೂಕ್ಲಿಯೊಸಿಸ್ ಒಂದು ವೈರಲ್ ಸೋಂಕು, ಇದು ಸಾಮಾನ್ಯವಾಗಿ ಎಪ್ಸ್ಟೀನ್–ಬಾರ್ ವೈರಸ್ (EBV) ನಿಂದ ಉಂಟಾಗುತ್ತದೆ, ಇದು ಎಲ್ಲಾ ಜನಸಂಖ್ಯೆಯ ಗುಂಪುಗಳಲ್ಲಿ ವ್ಯಾಪಕವಾಗಿ ಹರಡುತ್ತದೆ. StatPearls ನಲ್ಲಿ ಪ್ರಕಟವಾದ 2023 ರ ಸಂಶೋಧನೆಯ ಪ್ರಕಾರ, 15 ಮತ್ತು 24 ರ ನಡುವಿನ ವಯಸ್ಸಿನ ಜನರಲ್ಲಿ ಇದು ಹೆಚ್ಚಾಗಿ ಸಾಮಾನ್ಯವಾಗಿದೆ. ಮಾನೋನ್ಯೂಕ್ಲಿಯೊಸಿಸ್ನ ಪ್ರಾಥಮಿಕ…
ಮೈಸೂರಿನ ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಯುಜಿಸಿ ಅನುಮೋದಿತ ಕೋರ್ಸ್ ಗಳ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ, ಸ್ನಾತಕೋತ್ತರ, ಪಿ.ಜಿ ಸರ್ಟಿಫಿಕೇಟ್, ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕ ವಿವರ:- ಬಿ.ಎ-ರೂ.8,400/-., ಬಿ.ಕಾಂ.-ರೂ.8,900/-.,ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-12,400/-., ಬಿ.ಸಿ.ಎ/ಬಿ.ಎಸ್ಸಿ-ರೂ.23,900/-., ಬಿ.ಎಸ್.ಡಬ್ಲ್ಯೂ-ರೂ.12,900/-., ಎಂ.ಎ-ರೂ.10,600/-., ಎಂ.ಸಿ.ಜೆ-ರೂ.16,200/-., ಎಂ.ಕಾಂ-ರೂ.12,400/-., ಎಂ.ಬಿ.ಎ–ರೂ.29,900/-., ಎಂ.ಎಸ್ಸಿ/ಎಂ.ಸಿ.ಎ-ರೂ.29,700/-., ಎಂ.ಎಸ್.ಡಬ್ಲ್ಯೂ-ರೂ.21,300/-., ಎಂ.ಎಲ್.ಐ.ಎಸ್ಸಿ-ರೂ.18,150/-ಗಳಾಗಿರುತ್ತದೆ. ಮುಂದುವರೆದು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರಾಮುವಿಯಲ್ಲಿ ಪ್ರವೇಶಾತಿ ಪಡೆಯುವ ಕೆಲವೊಂದು ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ಮತ್ತು ಉಚಿತ ಪ್ರವೇಶಾತಿ ನೀಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC/NWKSRTC/KKRTC ನೌಕರರಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಕೋರ್ಸ್ ಗಳ ಬೋಧನಾ ಶುಲ್ಕದಲ್ಲಿ 10% ರಿಯಾಯಿತಿ ಇರುತ್ತದೆ. ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ಟ್ರಾನ್ಸ್ ಜೆಂಡರ್ /…
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡತನ ರೇಖೆಗಿಂತ ಕೆಳಗಿರುವವರಿಗೆ ಪಡಿತರ ಚೀಟಿ ನೀಡುತ್ತವೆ. ಫಲಾನುಭವಿಗಳ ಆಹಾರ ಭದ್ರತೆಗಾಗಿ ಉಚಿತ ಪಡಿತರವನ್ನು ಒದಗಿಸುತ್ತದೆ. ಆದರೆ ಈಗ ಭಾರತ ಸರ್ಕಾರ ಈ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಹೊರಟಿದೆ. ಈ ಹಿಂದೆ ಕೇಂದ್ರವು ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ನೀಡುತ್ತಿತ್ತು. ಆದರೆ ಇದೀಗ ಉಚಿತ ಅಕ್ಕಿ ಬದಲಿಗೆ 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಭಾರತ ಸರ್ಕಾರದ ಉಚಿತ ಪಡಿತರ ಯೋಜನೆಯಡಿ ದೇಶದ 90 ಕೋಟಿ ಜನರಿಗೆ ಉಚಿತ ಪಡಿತರವನ್ನು ನೀಡಲಾಗುತ್ತಿದೆ. ಆಯಾ ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ಪಡಿತರ ನೀಡುತ್ತಿದೆ. ಈ ಹಿಂದೆ ಲಾನುಭವಿಗಳಿಗೆ ಉಚಿತವಾಗಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಇದೀಗ ಕೆಲವು ಸುದ್ದಿಗಳ ಪ್ರಕಾರ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ ಬದಲು 9 ಅಗತ್ಯ ವಸ್ತುಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಇವುಗಳಲ್ಲಿ ಗೋಧಿ, ಕಾಳುಗಳು, ಧಾನ್ಯಗಳು, ಸಕ್ಕರೆ, ಉಪ್ಪು, ಸಾಸಿವೆ ಎಣ್ಣೆ, ಹಿಟ್ಟು, ಸೋಯಾಬೀನ್ ಮತ್ತು ಮಸಾಲೆಗಳು ಸೇರಿವೆ…
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಸಂಸ್ಥೆಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ಬಿಜೆಪಿ ಸಂಸದ ಲೆಹರ್ ಸಿಂಗ್ ಸಿರೋಯಾ ಅವರು ಸೋಮವಾರ ಆರೋಪಿಸಿದ್ದಾರೆ. ಸಿದ್ಧಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಕಲಬುರಗಿಯ ಪಾಲಿ, ಸಂಸ್ಕೃತ ಮತ್ತು ತುಲನಾತ್ಮಕ ತತ್ತ್ವಶಾಸ್ತ್ರದ ಇಂಟರ್ ನ್ಯಾಶನಲ್ ಇನ್ ಸ್ಟಿಟ್ಯೂಟ್ ಗೆ 19 ಎಕರೆ ಸರ್ಕಾರಿ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ ಎಂದು ಹೊಸ ದಾಖಲೆಗಳು ಬಹಿರಂಗಪಡಿಸುತ್ತಿವೆ. ಈ ಕುರಿತು ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಒತ್ತಾಯಿಸಿದ್ದಾರೆ. ಅದರ ಟ್ರಸ್ಟಿಗಳಲ್ಲಿ ಖರ್ಗೆ ಅವರ ಪತ್ನಿ, ಅಳಿಯ ಮತ್ತು ಇಬ್ಬರು ಪುತ್ರರು ಇದ್ದಾರೆ. ಖರ್ಗೆ ಅವರ ಅಳಿಯ ಹಾಗೂ ಹಾಲಿ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಪಾಲಿ ಸಂಸ್ಥೆಯ ಕಾರ್ಯದರ್ಶಿಯಾಗಿದ್ದಾರೆ ಎಂದು ಸಿರೋಯಾ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಮಹಾರಾಷ್ಟ್ರ: ರೈಲಿನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿರುವ ಎಂಬ ಶಂಕೆಯಿಂದ ವೃದ್ಧನೊಬ್ಬನಿಗೆ ಸಹಪ್ರಯಾಣಿಕರು ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದಲ್ಲಿ ಧುಲೆ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ. ಜಲಗಾಂವ್ ಜಿಲ್ಲೆಯ ನಿವಾಸಿ ಅಶ್ರಫ್ ಮುನ್ಯಾರ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಮಾಲೆಗಾಂವ್ ನಲ್ಲಿರುವ ತಮ್ಮ ಮಗಳ ಮನೆಗೆ ಧುಲೆ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಎರಡು ದೊಡ್ಡ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ಅಶ್ರಫ್ ಮುನ್ಯಾರ್ ಮಾಂಸವನ್ನು ತಂದಿದ್ದರು. ಇದನ್ನು ಗಮನಿಸಿದ ಸುಮಾರು ಹನ್ನೆರಡು ಜನರಿದ್ದ ತಂಡ ವಿಚಾರಣೆ ನಡೆಸಿ, ವೃದ್ಧ ಎಂದೂ ನೋಡದೇ ಅಮಾನವೀಯವಾಗಿ ಥಳಿಸಿದ್ದಾರೆ. ಮಗಳ ಕುಟುಂಬಕ್ಕಾಗಿ ಮಾಂಸ ತೆಗೆದುಕೊಳ್ಳುತ್ತಿದ್ದೇನೆ ಎಂದು ವೃದ್ಧ ಪರಿಪರಿಯಾಗಿ ಬೇಡಿದರೂ ಗುಂಪು ವೃದ್ಧನನ್ನು ಮತ್ತಷ್ಣು ಕೆಣಕಿ ಪ್ರಶ್ನಿಸಿದ್ದಾರೆ. ಯಾವ ಮಾಂಸ ಎಂದು ಕೇಳಿದ್ದಾರೆ. ಈ ವೇಳೆ ವೃದ್ಧ ಇದು ಕೋಣದ ಮಾಂಸ ಎಂದು ಹೇಳಿದ್ದಾರೆ. ಈ ವೇಳೆ ದುಷ್ಕರ್ಮಿಗಳು ನಾವು ಅದನ್ನು ಪರೀಕ್ಷಿಸಿದ ನಂತರ ಯಾವುದರ ಮಾಂಸ ಎಂದು ಗೊತ್ತಾಗುತ್ತದೆ ಎಂದು ಅಮಾನವೀಯವಾಗಿ ಹಲ್ಲೆ…
ಗುಜರಾತ್: ಭಾರತೀಯ ಕೋಸ್ಟ್ ಗಾರ್ಡ್ ನ ಹೆಲಿಕಾಪ್ಟರ್ ಗುಜರಾತ್ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಅದರಲ್ಲಿದ್ದ ಇಬ್ಬರು ಪೈಲಟ್ ಗಳು ಸೇರಿ ಮೂವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಒಬ್ಬ ಸಿಬ್ಬಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೋಸ್ಟ್ ಗಾರ್ಡ್ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮುಲಕ ನಾಪತ್ತೆಯಾದ ಸಿಬ್ಬಂದಿಯನ್ನು ಹುಡುಕಾಟ ನಡೆಸಲಾಗುತ್ತಿದೆ. ಹೆಲಿಕಾಪ್ಟರ್ ಅವಶೇಷಗಳು ಪತ್ತೆಯಾಗಿದ್ದು, ಸಿಬ್ಬಂದಿಯ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q