Author: admin

ಇ ಸಿಗರೇಟ್‌ ಮಾರಾಟಕ್ಕೆ ನಿಷೇಧವಿದ್ದರೂ ಮಣಿಪಾಲ ಭಾಗದಲ್ಲಿ ಮತ್ತೆ ಇ ಸಿಗರೇಟ್‌ ಹಾವಳಿ ಕಂಡು ಬರುತ್ತಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ ಸಿಗರೇಟ್‌ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್‌ ಉನೈಶ್‌(25)ಹಾಗೂ ಸಾವಿರಾರು ರೂ.ಮೌಲ್ಯದ ಇ ಸಿಗರೇಟ್‌ ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನಿಷೇಧಿತ ಇ ಸಿಗರೇಟ್‌ ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಮುಂಬಯಿಯಿಂದ ವಸ್ತುಗಳನ್ನು ಖರೀದಿಸುತ್ತಿದ್ದರು. ಕೂಲ್‌ ಡ್ರಿಂಕ್ಸ್‌, ಪಫ್ಯೂರ್ಮ್, ಲೈಟರ್‌ ಗಳಂತಹ ವಸ್ತುಗಳನ್ನು ಮುಂಬಯಿಯಿಂದ ಬಸ್‌ ಹಾಗೂ ರೈಲು ಮಾರ್ಗದ ಮೂಲಕ ಸುಲಭದಲ್ಲಿ ಉಡುಪಿ ಜಿಲ್ಲೆಗೆ ತಂದು ಇಲ್ಲಿ ಮಾರಾಟ ಮಾಡುತ್ತಿರುವ ಅಂಶವೂ ಬೆಳಕಿಗೆ ಬಂದಿದೆ. ಮಣಿಪಾಲದ ವ್ಯಾಪ್ತಿಯ ಕೆಲವೊಂದು ಅಂಗಡಿಗಳಲ್ಲಿ ಕೋವಿಡ್‌ ಅವಧಿಯಲ್ಲಿ ಇ ಸಿಗರೇಟ್‌ ಗಳನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತಿತ್ತು. ಮಣಿಪಾಲ ಪೊಲೀಸರು ನಿರಂತರ ದಾಳಿ ನಡೆಸಿ ಹಲವಾರು ವಸ್ತುಗಳನ್ನು ವಶಕ್ಕೆ ಪಡೆದು ದಂಡ ವಿಧಿಸಿದ್ದರು. ಬಳಿ ಇದರ ಮಾರಾಟ ಅಂಗಡಿಗಳಲ್ಲಿ ಇರಲಿಲ್ಲ. ಪ್ರಸ್ತುತ…

Read More

ಬೆಂಗಳೂರು ಅರ್ಥ್‌ ಮೂವರ್ಸ್ ಲಿಮಿಟಿಡ್‌ ನಲ್ಲಿ (ಬೆಮೆಲ್‌) ವಂದೇ ಭಾರತ್‌ ಸ್ಲೀಪರ್‌ ರೈಲು ನಿರ್ಮಾಣವಾಗಿದೆ. ಮುಂದಿನ ಮೂರು ತಿಂಗಳ ಒಳಗೆ ಸ್ಲೀಪರ್‌ ರೈಲು ಸಂಚಾರ ಆರಂಭಗೊಳ್ಳಲಿದೆ. ಅದಕ್ಕೂ ಮುನ್ನ ಪ್ರಾಯೋಗಿಕ ಸಂಚಾರ ನಡೆಯಲಿದೆ. ಗಂಟೆಗೆ 160 ಕಿ.ಮೀ. ವೇಗದಲ್ಲಿ ಚಲಿಸುವ ಸಾಮರ್ಥ್ಯವಿರುವ ಈ ರೈಲು, ಸುಧಾರಿತ ಅಪಘಾತ ಸುರಕ್ಷಾ ವಿನ್ಯಾಸವನ್ನು ಹೊಂದಿದೆ.ಜೊತೆಗೆ ರೈಲ್ವೆ ಬೋಗಿಗಳು ಐಷಾರಾಮಿ, ಸಕಲ ಸೌಲಭ್ಯದ ಸಂಚಾರಿ ಅನುಭವ ನೀಡಲಿವೆ. ವಂದೇ ಭಾರತ್‌ ಸ್ಲೀಪರ್‌ ರೈಲು ರಾತ್ರಿ ವೇಳೆ 800-1200 ಕಿ.ಮೀ. ದೂರ ಕ್ರಮಿಸಲು ಅನುಕೂಲವಾಗುಂತೆ ರೂಪಿಸಲಾಗಿದೆ. ವಂದೇ ಭಾರತ್‌ ಸ್ಲೀಪರ್‌ ರೈಲಿನಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ರಾಜಧಾನಿ ಎಕ್ಸ್‌ ಪ್ರೆಸ್‌ ರೈಲಿನ ದರಕ್ಕೆ ಸರಿಸಮವಾಗಿ ವಂದೇ ಭಾರತ್‌ ಸ್ಲೀಪರ್‌ ದರ ಇರಲಿದೆ ಎಂದು ಸಚಿವರು ಮಾಹಿತಿ ನೀಡಿದರು. ಈ ರೈಲಿನಲ್ಲಿ 16 ಬೋಗಿಗಳು ಇರಲಿದೆ. ಅವುಗಳಲ್ಲಿ ಥರ್ಡ್ ಎಸಿಯ 10 ಕೋಚ್‌ ಗಳು, ಸೆಕೆಂಡ್ ಎಸಿಯ 4 ಹಾಗೂ ಫಸ್ಟ್‌ ಎಸಿಯ ಒಂದು ಕೋಚ್ ಇರಲಿದೆ.…

Read More

ತುಮಕೂರು: ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಂಸ್ಥೆ ವತಿಯಿಂದ ನೂತನ ಜಿಲ್ಲಾ ಸಮಿತಿ  ರಚನೆ ಸಭೆಯು ಬಿಎಚ್ ರಸ್ತೆಯ ಸಿ ಏನ್ ವಿ ಚೇಂಬರ್ಸ್ ನ ಸಭಾಂಗಣದಲ್ಲಿ ನಡೆಯಿತು. ದೇಶದಲ್ಲಿ ಸುಮಾರು 900ಕ್ಕೂ ಹೆಚ್ಚು ಮಾನವ ಹಕ್ಕುಗಳ ಸಂಘಗಳಿವೆ ಚಿಕ್ಕಮಗಳೂರಿನಲ್ಲಿ ಅನಧಿಕೃತವಾಗಿದ್ದ ಮನೆ ಕಳೆದುಕೊಂಡವರಿಗೆ ಈ ಸಂಸ್ಥೆಯು ಮನೆ ಕಟ್ಟಿಸಿ ಕೊಟ್ಟಿದೆ. ಬಾಲಕಾರ್ಮಿಕರನ್ನು ರಕ್ಷಿಸಿ ಅಕ್ರಮ ಮೈನಿಂಗ್ ಗಣಿಗಾರಿಕೆ ವಿಚಾರದಲ್ಲಿ ಎರಡು ಕಡೆ ಮೇಲಾಧಿಕಾರಿಗಳಿಂದ ಗಣಿಗಾರಿಕೆಯನ್ನು ನಿಲ್ಲಿಸಲಾಗಿರುತ್ತದೆ. ಕಾನೂನು ಸಲಹೆಗಾರರಾದ ದೀಪಕ್ ಡಿ ಕಾರ್ಯಕ್ರಮದಲ್ಲಿ ಮಾತನಾಡಿ,  ಸಂಸ್ಥೆಯ ರಿಜಿಸ್ಟ್ರೇಷನ್ ನಂಬರ್ ಅಳವಡಿಸದೆ ಇರುವುದು ಕಾಣುತ್ತಿದ್ದು ಇದು ಸಂಘದ ನೋಂದಣಿ ಬಗ್ಗೆ ಅನುಮಾನಕ್ಕೆ ಆಸ್ಪದ ಆಗುತ್ತದೆ ಆದ್ದರಿಂದ ನೊಂದಣಿ ಸಂಖ್ಯೆಯನ್ನು ಇನ್ನು ಮುಂದೆ ದಾಖಲಿಸಿ ಎಂದರು. ರಾಜ್ಯ ಕಾರ್ಯಧ್ಯಕ್ಷ, ಕಾನೂನು ಸಲಹೆಗಾರ ಅನಿಲ್ ಕುಮಾರ್  ಉದ್ಘಾಟನೆ ನಂತರ ಮಾತನಾಡಿ,  ಅಂಬೇಡ್ಕರ್ ರವರುನೀಡಿದ ಸಂವಿಧಾನದಲ್ಲಿ ವಾಕ್ ಸ್ವಾತಂತ್ರ, ಧಾರ್ಮಿಕ ಸ್ವಾತಂತ್ರ್ಯ, ಶೈಕ್ಷಣಿಕ ಸ್ವಾತಂತ್ರ್ಯ ಸಂವಿಧಾನಿಕವಾಗಿ, NHRIC ಕಾರ್ಯನಿರ್ವಹಿಸುತ್ತಿದೆ. ಇತ್ತೀಚೆಗೆ ಧಾರವಾಡ ಮತ್ತು ಕಲ್ಬುರ್ಗಿ ಹೈಕೋರ್ಟ್…

Read More

ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಹೆಚ್ಚಿನ ಶುಲ್ಕದ ಬರೆ ಬೀಳಲಿದೆ. ಜೋಗ ನಿರ್ವಹಣಾ ಪ್ರಾಧಿಕಾರ ವತಿಯಿಂದ ಸುಮಾರು 183.7 ಕೋಟಿ ರೂ. ವೆಚ್ಚದಲ್ಲಿ ಜಲಪಾತದ ಆವರಣವನ್ನು ಅಂತರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ಮೂಲ ಸೌಕರ್ಯ ಪೂರ್ಣವಾಗುವ ಮೊದಲೇ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ.ಜಲಪಾತ ವೀಕ್ಷಣೆಗೆ ಈ ಹಿಂದೆ ಬಸ್ ಗೆ 150ರೂ. ಇದ್ದ ಪ್ರವೇಶ ಶುಲ್ಕವನ್ನು 200 ರೂ.ಗೆ ಹೆಚ್ಚಳ ಮಾಡಲಾಗಿದೆ. ಟಿಟಿ, ಮಿನಿ ಬಸ್ ದರ 100 ರಿಂದ 150 ರೂ. ಗೆ ಹೆಚ್ಚಳವಾಗಿದೆ. ಆಟೋರಿಕ್ಷಾ 30 ರಿಂದ 40ರೂ., ಬೈಕ್ ಗೆ 20 ರಿಂದ 30 ರೂ. ಗೆ ಶುಲ್ಕ ಹೆಚ್ಚಳ ಮಾಡಲಾಗಿದೆ. ಪ್ರವಾಸಿಗರಿಗೆ 10ರೂ ಪ್ರವೇಶ ದರವಿದ್ದು, ಅದನ್ನು 20 ರೂ. ಗೆ ಹೆಚ್ಚಳ ಮಾಡಲಾಗಿದೆ. 6-16 ವರ್ಷದೊಳಗಿನ ಮಕ್ಕಳಿಗೆ 10 ರೂ. ಶುಲ್ಕ ನಿಗದಿ ಮಾಡಲಾಗಿದೆ. ಕ್ಯಾಮೆರಾ ತೆಗೆದುಕೊಂಡು ಹೋದರೆ 100 ರೂ., ಡ್ರೋನ್ ಗೆ 500…

Read More

ಮುಖ ಮಲ್ಟಿಪ್ಲೆಕ್ಸ್ ಆಪರೇಟರ್ ಪಿವಿಆರ್ ಐನಾಕ್ಸ್ ಈ ಆರ್ಥಿಕ ವರ್ಷದಲ್ಲಿ ಕಾರ್ಯನಿರ್ವಹಿಸದ ತನ್ನ 70 ಸ್ಕ್ರೀನ್‌ಗಳನ್ನು ಬಂದ್ ಮಾಡಲು ನಿರ್ಧರಿಸಿದೆ. ಅದರ ಇತ್ತೀಚಿನ ವಾರ್ಷಿಕ ವರದಿಯ ಪ್ರಕಾರ ಮುಂಬೈ, ಪುಣೆ ಮತ್ತು ವಡೋದರದಂತಹ ಪ್ರಮುಖ ಸ್ಥಳಗಳಲ್ಲಿ ಕಾರ್ಯನಿರ್ವಹಿಸದ ಸ್ಕ್ರೀನ್ ಗಳನ್ನು ಮುಚ್ಚಲಾಗುತ್ತದೆ. “ನಮ್ಮ ಕಂಪನಿಯ ಮಧ್ಯಮ ಮತ್ತು ದೀರ್ಘಾವಧಿಯ ಕಾರ್ಯತಂತ್ರವು ದಕ್ಷಿಣ ಭಾರತದಲ್ಲಿ ಚಲನಚಿತ್ರಗಳಿಗೆ ಹೆಚ್ಚಿನ ಬೇಡಿಕೆ ಮತ್ತು ಇತರ ಪ್ರದೇಶಗಳಿಗೆ ಹೋಲಿಸಿದರೆ ಕಡಿಮೆ ಸಂಖ್ಯೆಯ ಮಲ್ಟಿಪ್ಲೆಕ್ಸ್ ಗಳ ಕಾರಣದಿಂದಾಗಿ ಅಲ್ಲಿ ಪರದೆಗಳ ಸಂಖ್ಯೆಯನ್ನು ವಿಸ್ತರಿಸುವುದನ್ನು ಒಳಗೊಂಡಿರುತ್ತದೆ. ನಮ್ಮ ಒಟ್ಟು ಸ್ಕ್ರೀನ್ ಸೇರ್ಪಡೆಗಳಲ್ಲಿ ಸರಿಸುಮಾರು 40% ದಕ್ಷಿಣ ಭಾರತದಿಂದ ಬರುತ್ತದೆ ಎಂದು ನಾವು ಅಂದಾಜಿಸಿದ್ದೇವೆ, “ಎಂದು ಕಂಪನಿ ಹೇಳಿದೆ. ವರದಿ ಪ್ರಕಾರ ಪಿವಿಆರ್ ಐನಾಕ್ಸ್ ಈ ವರ್ಷ 130 ಹೊಸ ಸ್ಕ್ರೀನ್‌ಗಳನ್ನು ತೆರೆಯಿತು. ಆದರೆ ಕಡಿಮೆ ಪ್ರದರ್ಶನದ ಕಾರಣದಿಂದಾಗಿ 85 ಸ್ಕ್ರೀನ್ ಗಳನ್ನು ಮುಚ್ಚಿದೆ. ಆರ್ಥಿಕ ವರ್ಷ 24 ರಲ್ಲಿ ಪಿವಿಆರ್ ಐನಾಕ್ಸ್ ನ ನಿವ್ವಳ ಸಾಲವು ₹1,294 ಕೋಟಿ ಆಗಿತ್ತು.…

Read More

ಪೆರ್ನಾಜೆ: “ಸ್ವರಸಿಂಚನ” ಸಂಗೀತ ಶಾಲೆ ವಿಟ್ಲ ಮತ್ತು ಪಡಿಬಾಗಿಲು ಶಾಖೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನ ಪೂಜಾ ಕಾರ್ಯಕ್ರಮದ ಪ್ರಯುಕ್ತ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ಆಗಸ್ಟ್ 25 ರಂದು ನಡೆದ ಭಕ್ತಿ ಗಾನ ಸಂಗೀತ ಕಾರ್ಯಕ್ರಮ ನಡೆಯಿತು. ದೇಗುಲದ ವ್ಯವಸ್ಥಾಪಕರಾದ ಕೇಶವ ಆರ್.ವಿ.ದೀಪ ಪ್ರಜ್ವಲನೆ ಮಾಡಿ  ಮಾತನಾಡಿ, ಸಂಗೀತ ಶಿಕ್ಷಕಿಯ ಮಾರ್ಗದರ್ಶನದಲ್ಲಿ ಉತ್ತಮ ರೀತಿಯಲ್ಲಿ ವೈವಿಧ್ಯಮಯ ವಿನ್ಯಾಸದಲ್ಲಿ ಸುಂದರ ಹಾಡುಗಳ ಜೋಡಣೆಯಲ್ಲಿ ಪ್ರತಿಭೆಗಳು ಹೊರ ಹೊಮ್ಮುತಿರುವುದನ್ನು ಕಂಡಾಗ ಮನ ತುಂಬಿ ಬರುತ್ತದೆ. ಹಾಗೆ ಈ ವಿದ್ಯಾರ್ಥಿಗಳಿಗೆ ಮುಂದೆ ಉತ್ತಮ ಭವಿಷ್ಯ ಇದೆ ಎಂದು ಮೆಚ್ಚುಗೆಯ ನುಡಿಯನ್ನು ನುಡಿದರು. ವಿಠಲ ಬಾಲಿಕ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಕೆ. ಕೃಷ್ಣ ಭಟ್ , ಗೋಪಾಲಕೃಷ್ಣ ನಾಯಕ್ ಪಾಡಿಬಾಗಿಲು, ವಿಟ್ಲ ಸುಪ್ರ ಜೀತ್ ಐಟಿಐ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ರಘುರಾಮ ಶಾಸ್ತ್ರಿ ಕೋಡಂದೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಸಿಂಚನ ಲಕ್ಷ್ಮಿ ಕೋಡಂದೂರು ಪ್ರಾರ್ಥನೆ ಮಾಡಿದರು. ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರು ಸ್ವಾಗತಿಸಿದರು. ಪದ್ಮರಾಜ್ ಚಾರ್ವಾಕ…

Read More

ತುಮಕೂರು: ತುಮಕೂರು ನಗರದ ಹನುಮಂತಪುರದ ಬಳಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಆ್ಯಂಬುಲೆನ್ಸ್ ವೊಂದು ಪರದಾಡಿದ ಘಟನೆ ನಡೆದಿದೆ. ಸುಮಾರು 15 ನಿಮಿಷಕ್ಕೂ ಹೆಚ್ಚು ಸಮಯ ಆ್ಯಂಬುಲೆನ್ಸ್ ಟ್ರಾಫಿಕ್ ನಲ್ಲಿ ಸಿಲುಕಿದೆ. ಹನುಮಂತದ ಬ್ರಿಡ್ಜ್ ಬಳಿ ನಾಲ್ಕು ಕಡೆಯಿಂದ ಬರುವ ವಾಹನಗಳಿಂದ ಉಂಟಾದ ಟ್ರಾಫಿಕ್ ಜಾಮ್ ನಡುವೆ ಆ್ಯಂಬುಲೆನ್ಸ್ ಸಿಲುಕಿತು. ಸುಮಾರು ಅರ್ಧ ಕಿ.ಮೀ. ದೂರದವರೆಗೂ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾಷ್ಟ್ರೀಯ ಹೆದ್ದಾರಿ ಶಿರಾ ಭಾಗದಿಂದ ತುಮಕೂರು ನಗರದ ಕಡೆಗೆ ಆ್ಯಂಬುಲೆನ್ಸ್ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಟ್ರಾಫಿಕ್ ನಿಯಂತ್ರಿಸುವಲ್ಲಿ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವಹಿಸಿದ ಹಿನ್ನೆಲೆ ಈ  ಘಟನೆ ನಡೆದಿದೆ. ಟ್ರಾಫಿಕ್ ಸಮಸ್ಯೆ ಉಂಟಾಗುವ ಸ್ಥಳದಲ್ಲಿ ಸಿಬ್ಬಂದಿ ನಿಯೋಜನೆಯಾಗದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಹನುಮಂತಪುರದ ಬಳಿ ಬೆಳಗಿನ ಸಮಯ ನಿತ್ಯ ಟ್ರಾಫಿಕ್ ಜಾಮ್  ಉಂಟಾಗುತ್ತಿದೆ. ಬೆಳಿಗ್ಗಿನ ಸಮಯದಲ್ಲಿ ಪೊಲೀಸ್ ಸಿಬ್ಬಂದಿ ಇಲ್ಲದೆ ನಿತ್ಯ ಟ್ರಾಫಿಕ್ ಜಾಮ್ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಮಂಗಳೂರು: 47 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್ ಐಆರ್ ದಾಖಲಾಗಿದೆ. ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರು ದಾಖಲಿಸಿದ್ದಾರೆ. 2023ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ದೌರ್ಜನ್ಯದ ಫೋಟೋ, ಸೆಲ್ಫಿ ವೀಡಿಯೋ ಮಾಡಿ ಬ್ಲಾಕ್‌ ಮೇಲ್‌ ಮಾಡಿದ್ದಾರೆಂದು ಸಹ ಆರೋಪಿಸಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಐಪಿಸಿ ಸೆಕ್ಷನ್‌ 417, 354ಎ, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಉಪನ್ಯಾಸಕ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಘಟನೆ ಸಂಬಂಧ ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಉಪನ್ಯಾಸಕನ ವಿರುದ್ಧ ಎಫ್ ಐಆರ್ ದಾಖಲಿಸಿ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಹೆಸರಾಂತ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ ಮದುವೆಯಾಗುವುದಾಗಿ ನಂಬಿಸಿ ತಾನು ಕಾರ್ಯ ನಿರ್ವಹಿಸುತ್ತಿರುವ ಕಾಲೇಜಿನ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ವಂಚಿಸಿರುವುದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಅರ್ಥವಾಗದ ವಿಷಯಗಳ ಕುರಿತು ಪಾಠ ಹೇಳುವುದಾಗಿ ನಂಬಿಸಿ ಪುಸಲಾಯಿಸಿ, ಸ್ನೇಹ ಬೆಳಸಿಕೊಂಡ ಉಪನ್ಯಾಸಕ ನಂತರ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಶಿವಮೊಗ್ಗದ ಮಹಿಳಾ ಠಾಣೆಯ ಪೊಲೀಸರು ಯುವತಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ಪುನೀತ್‌ ನನ್ನು ಬಂಧಿಸಿದ್ದು, ಎಫ್ ಐಆರ್ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿನ ಪಾದಾಚಾರಿ ಮಾರ್ಗದಲ್ಲಿರುವ ಬೀದಿ ಬದಿ ಅಂಗಡಿಗಳನ್ನು ತೆರವು ಮಾಡಲು ಪಾಲಿಕೆ ಬಿಬಿಎಂಪಿ ಮುಂದಾಗಿದೆ. ಬೆಂಗಳೂರು ನಗರದಲ್ಲಿ ಹರಡಿರುವ ಪ್ರಮುಖ ರಸ್ತೆಗಳಲ್ಲಿನ ಬದಿಯಲ್ಲಿರುವ ಬೀದಿಬದಿ ಅಂಗಡಿಗಳ ತೆರವಿಗೆ ಬೆಂಗಳೂರು ಮಹನಾಗರ ಸಿದ್ಧತೆ ಮಾಡಿಕೊಳ್ಳುತ್ತಿದೆ. ನಗರದಲ್ಲಿ ಸುಮಾರು 1,200 ಕಿ.ಮೀ.ಗೂ ಅಧಿಕ ಉದ್ದದ ಪ್ರಮುಖ ರಸ್ತೆಗಳಿವೆ. ಈ ರಸ್ತೆಗಳ ಎರಡೂ ಬದಿಯಲ್ಲಿ ಬೀದಿಬದಿ ವ್ಯಾಪಾರಿಗಳು ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡಿದ್ದಾರೆ. ಇದೀಗ ಈ ರೀತಿ ಪ್ರಮುಖ ರಸ್ತೆಯ ಫುಟ್‌ ಪಾತ್ ಮೇಲಿನ ಅಂಗಡಿ ಮುಂಗಟ್ಟುಗಳನ್ನು ತೆರವು ಮಾಡಲು ಪಾಲಿಕೆ ಮುಂದಾಗುತ್ತಿದೆ. ಕೆ.ಆರ್.ಮಾರುಕಟ್ಟೆ, ಮಲ್ಲೇಶ್ವರ ಮಾರುಕಟ್ಟೆ, ಚಿಕ್ಕಪೇಟೆ, ಜಯನಗರ ಶಾಪಿಂಗ್ ಕಾಂಪ್ಲೆಕ್ಸ್, ಹೆಬ್ಬಾಳ ಹೂವಿನ ಮಾರುಕಟ್ಟೆ, ಮಡಿವಾಳ ಮಾರುಕಟ್ಟೆ ಹೀಗೆ ನಗರದ ಮಾರುಕಟ್ಟೆಗಳಿಗೆ ಹೊಂದಿರುವ ರಸ್ತೆಗಳ ಫುಟ್‌ಪಾತ್ ಮೇಲೆ ಹೆಚ್ಚು ಬೀದಿಬದಿ ವ್ಯಾಪಾರಿಗಳಿದ್ದಾರೆ. ಇದರಿಂದಾಗಿ ಪಾದಾಚಾರಿಗಳಿಗೆ ಸಮಸ್ಯೆ ಆಗುತ್ತಿದೆ ಎನ್ನುವುದು ಪಾಲಿಕೆ ವಾದ. ಹೀಗಾಗಿ ತೆರವು ಮಾಡಿ ಪಾದಾಚಾರಿಗಳಿಗೆ ಅನುವು ಮಾಡಿಕೊಡಬೇಕು ಎನ್ನುವುದು ಹೈಕೋರ್ಟ್ ನಿದರ್ಶನ ಅಂತ ಪಾಲಿಕೆ ಅಧಿಕಾರಿಗಳು ಹೇಳುತ್ತಿದ್ದಾರೆ.…

Read More