Subscribe to Updates
Get the latest creative news from FooBar about art, design and business.
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್ ಮುಖಂಡ ಒತ್ತಾಯ
- ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
- ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
Author: admin
ಪಾವಗಡ: ಇತಿಹಾಸ ಪ್ರಸಿದ್ದ ಅನ್ನಲಪುರಿ ಆಂಜನೇಯಸ್ವಾಮಿಯ ಶ್ರಾವಣ ಜಾತ್ರೆಗೆ ಶನಿವಾರ ನೆರವೇರಿತು. ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ ಭಕ್ತಾಧಿಗಳು ದೇವರ ದರ್ಶನ ಪಡೆದರು. ತಾಲ್ಲೂಕಿನ ವೈ.ಎನ್.ಹೊಸಕೋಟೆಯಿಂದ ಸುಮಾರು 5 ಕಿ.ಮೀ ದೂರದಲ್ಲಿ ಅಲಕೂರು ಆಂಜನೇಯಸ್ವಾಮಿ ದೇವಾಲಯವಿದ್ದು, ಪ್ರತಿವರ್ಷ ಶ್ರಾವಣದ ಕೊನೆಯ ಶನಿವಾರ ದಿನದಂದು ಈ ಕ್ಷೇತ್ರದಲ್ಲಿ ಜಾತ್ರೆ ನಡೆಯುತ್ತದೆ. ಈ ವರ್ಷವೂ ಭಕ್ತಾಧಿಗಳು ಎಂದಿನಂತೆ ಸಡಗರ ಸಂಭ್ರಮದಿಂದ ಜಾತ್ರೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಹರಕೆ ಹೊತ್ತ ಭಕ್ತಾಧಿಗಳು ಪಾಳಿಯಂತೆ ದೇವರಿಗೆ ವಿಳೇದೆಲೆ ಅಲಂಕಾರ ಮಾಡಿದರು. ಬೆಳ್ಳಿಕವಚ ಮತ್ತು ಹೂವಿನ ಅಲಂಕಾರದಲ್ಲಿ ದೇವರು ಕಂಗೊಳಿಸುತ್ತಿದ್ದರು. ಜಾತ್ರೆಯ ಅಂಗವಾಗಿ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಮತ್ತು ವಿಶೇಷ ಮಂಗಳಾರತಿಗಳನ್ನು ಪ್ರಧಾನ ಅರ್ಚಕರಾದ ಸತ್ಯನಾರಾಯಣಪ್ಪ ನೆರವೇರಿಸಿದರು. ಬೆಳಿಗಿನಿಂದಲೇ ಭಕ್ತರು ಸುಮಾರು ಅರ್ಧ ಕಿ.ಮೀ ದೂರ ಸಾಲುಕಟ್ಟಿ ನಿಂತು ದರ್ಶನ ಮಾಡಿದರು. ಹರಕೆ ಹೊತ್ತ ಹಲವು ಭಕ್ತರು ಕೇಂಶಕಂಡನ ಮಾಡಿಸಿಕೊಂಡು ಪೂಜೆ ಸಲ್ಲಿಸಿದರು. ಜಾತ್ರೆಯ ದಿನದಂದೇ ಹಲವು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜಾತ್ರೆಯಲ್ಲಿ…
ತುಮಕೂರು: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ತಿಳಿಸುವ ಉದ್ದೇಶದಿಂದ ಶಾಲಾ–ಕಾಲೇಜುಗಳಲ್ಲಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು. ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರ 155ನೇ ಜನ್ಮ ದಿನಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಹಾತ್ಮಾ ಗಾಂಧೀಜಿ ಅವರ ಬದುಕು, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಷ್ಯತೆ ನಿವಾರಣೆ ಮತ್ತು ಸ್ವಾತಂತ್ರ್ಯ ಚಳುವಳಿವಳಿಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ತಿಳಿಸುವ ಸಲುವಾಗಿ ಈ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಿಗೆ ಪ್ರತ್ಯೇಕ ವಿಷಯಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಬೇಕು ಎಂದು ತಿಳಿಸಿದ ಅವರು, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ…
ತುಮಕೂರು: ಗಣೇಶ ಚತುರ್ಥಿ ಅಂಗವಾಗಿ ಆಗಸ್ಟ್ 7ರಿಂದ ಪ್ರಾರಂಭಗೊಳ್ಳುವ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಉತ್ಸವಗಳ ಆಚರಣೆ ಸಂದರ್ಭಗಳಲ್ಲಿ ಆಯೋಜಕರು ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕಾಗಿ ಸ್ಥಳೀಯ ಪ್ರಾಧಿಕಾರದಿಂದ ಪಡೆದಿರುವ ಅನುಮತಿ ಪತ್ರವನ್ನು ಬೆಸ್ಕಾಂ ಕಚೇರಿಗೆ ಸಲ್ಲಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಯೋಜಕರು ಗಣಪತಿ ಪ್ರತಿಷ್ಠಾಪನಾ ಪೆಂಡಾಲ್ ಗಳಿಗೆ ಸುರಕ್ಷತೆಯಿಂದ ಕೂಡಿರುವ ಸೂಕ್ತ ವೈರಿಂಗ್ ಮಾಡಿಸಬೇಕು. ವೈರಿಂಗ್ ಸುರಕ್ಷತೆ ಬಗ್ಗೆ ಬೆಸ್ಕಾಂ ಸಿಬ್ಬಂದಿಗಳು ತಪಾಸಣೆ ನಡೆಸಿದ ನಂತರವಷ್ಟೇ ಅನುಮತಿ ಪತ್ರ ನೀಡಲಾಗುವುದು. ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅನುಮತಿ ಪಡೆಯದೆ ವಿದ್ಯುತ್ನಿಂದಾಗುವ ಅನಾಹುತಗಳಿಗೆ ಆಯೋಜಕರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಯೋಗ ಗುರು ಬಾಬಾ ರಾಮ್ದೇವ್ ಅವರಿಗೆ ಹೊಸ ಕಾನೂನು ಸಮಸ್ಯೆ ಎದುರಾಗಿದ್ದು, ಪತಂಜಲಿ ದಿವ್ಯ ಮಂಜನ್ ಹಲ್ಲಿನ ಪುಡಿ ಮೀನಿನ ಅಂಶ ಹೊಂದಿದೆ ಎಂದು ವಕೀಲರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪತಂಜಲಿ ಸಸ್ಯಹಾರಿ ಗುರುತಿನೊಂದಿಗೆ ಮುೂಲಿಕೆಗಳ ದಿವ್ಯ ಮಂಜನ್ ಹಲ್ಲಿನ ಪುಡಿ ಮಾರಾಟ ಮಾಡುತ್ತಿದೆ. ಆದರೆ ಈ ಉತ್ಪನ “ಸಮುದ್ರಫೇನ್’ ಎಂಬ ಮೀನಿನ ಅಂಶ ಒಳಗೊಂಡಿದೆ ಎಂದು ಅವರು ಆರೋಪಿಸಿದ್ದಾರೆ. ಈ ಸಂಬಂಧ ಪತಂಜಲಿ ಆಯುರ್ವೇದ, ಬಾಬಾ ರಾಮ್ ದೇವ್ ಮತ್ತು ಕೇಂದ್ರ ಸರಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ ವಿಚಾರಣೆಯನ್ನು ನ.28ಕ್ಕೆ ಮುಂದೂಡಿದೆ. ಪತಂಜಲಿಯ ದಿವ್ಯಾ ಮಂಜನ್ ಅವರ ಪ್ಯಾಕೇಜಿಂಗ್ ಹಸಿರು ಚುಕ್ಕೆಯನ್ನು ಹೊಂದಿದೆ, ಇದು ಸಸ್ಯಾಹಾರಿ ಉತ್ಪನ್ನಗಳನ್ನು ಸೂಚಿಸುವ ಸಂಕೇತವಾಗಿದೆ, ಆದರೆ ಪದಾರ್ಥಗಳ ಪಟ್ಟಿಯು ಹಲ್ಲಿನ ಪುಡಿಯಲ್ಲಿ ಸೆಪಿಯಾ ಅಫಿಸಿನಾಲಿಸ್ ಇದೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ವಕೀಲ ಯತಿನ್ ಶರ್ಮಾ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಿದ್ದಾರೆ. ಸಮುದ್ರಫೆನ್ ಪ್ರಾಣಿ ಆಧಾರಿತ ಉತ್ಪನ್ನವಾಗಿದ್ದು, ದಿವ್ಯ ಮಂಜನ್ನಲ್ಲಿ ಬಳಸಲಾಗಿದೆ ಎಂದು ರಾಮ್ದೇವ್ ಸ್ವತಃ ಯೂಟ್ಯೂಬ್…
ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಸಮಸ್ಯೆಗೆ ಒಂದು ಹಂತದ ನಾಂದಿ ಹಾಡಿದೆ ನಮ್ಮ ಮೆಟ್ರೋ. ಬೆಂಗಳೂರಿನಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಸಾರಿಗೆ ಸಂಸ್ಥೆ ಇದು. ಜಿಲ್ಲೆ ಜಿಲ್ಲೆಗಳಿಗೂ ನಮ್ಮ ಮೆಟ್ರೋ ವಿಸ್ತರಣೆಯಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಕೆಲಸ ಹುಡುಕುತ್ತಿರುವವರಿಗೆ ಒಂದೊಳ್ಳೆಯ ಅವಕಾಶವಾಗಿದೆ. ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಹ ಅಭ್ಯರ್ಥಿಗಳು, ಆಸಕ್ತರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಉತ್ತಮ ಸಂಬಳ ಅಂತು ಸಿಕ್ಕೆ ಸಿಗಲಿದೆ. ಒಟ್ಟು 58 ಪೋಸ್ಟ್ ಗಳಿದ್ದು, ಬೆಂಗಳೂರಿನಲ್ಲಿ ಕೆಲಸ ಸಿಗಲಿದೆ. ಸಹಾಯಕ ಭದ್ರತಾ ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇನ್ನು ಈ ಹುದ್ದೆಗೆ ಇರುವ ಸಂಬಳ30 ಸಾವಿರದಿಂದ 32 ಸಾವಿರ ಇದೆ. ಆಯ್ಕೆ ಪ್ರಕ್ರಿಯೆಯೂ ದೈಹಿಕ ಪರೀಕ್ಷೆ, ಹುದ್ದೆಗೆ ಬೇಕಾದ ಅರ್ಹತೆ, ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. english.bmrc.co.in ವೆಬ್ಸೈಟ್ಗೆ ಭೇಟಿ ನೀಡಬೇಕು. ಬಳಿಕ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ…
ಬೀದರ್: ನಗರದಲ್ಲಿ ರೂ.500ಮುಖ ಬೆಲೆಯ ನಕಲಿ ನೋಟಿನ ಹಾವಳಿ ಹೆಚ್ಚಾಗಿದ್ದು, ಶುಕ್ರವಾರ ಬೀದರ ನಗರದ ಹಳೆಯ ಬಡಾವಣೆಯಲ್ಲಿ ವೃದ್ಧರೊಬ್ಬರಿಗೆ ಚಿಲ್ಲರೆ ನೆಪದಲ್ಲಿ 500 ರೂಪಾಯಿ ನಕಲಿ ನೋಟು ಕೊಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ. ಅದೇ ರೀತಿಯಲ್ಲಿ ಕಿರಾಣಿ ಅಂಗಡಿಯಲ್ಲಿ ಗ್ರಾಹಕನ ಸೋಗಿನಲ್ಲಿ ಬಂದು ಸಾಮಾನು ಖರೀದಿಸಿ ನಕಲಿ ರೂ. 500 ನೋಟು ಕೊಟ್ಟಿರುವ ವಿಚಾರ ಬೆಳಕಿಗೆ ಬಂದಿರುವುದುದಾಗಿ ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಭೂಮಿಯ ಮೇಲಿನ ಅತ್ಯಂತ ನಿಶ್ಯಬ್ದ ಸ್ಥಳವನ್ನ USA ನಲ್ಲಿ ಸೃಷ್ಟಿಸಲಾಗಿದ್ದು, ಇಲ್ಲಿನ ಅನುಭವದಿಂದ ಜನ ಅಚ್ಚರಿಯ ಜೊತೆಗೆ ವಿಶಿಷ್ಟ ಅನುಭವಕ್ಕೆ ಒಳಗಾಗಿದ್ದಾರೆ. ಈ ಸ್ಥಳ ತುಂಬಾ ಮೌನವಾಗಿದ್ದು, ಮನುಷ್ಯ ಇದುವರೆಗೂ ಕೇಳಿರಲು ಸಾಧ್ಯವಿರದ ಅತಿ ಸಣ್ಣ ಶಬ್ಧವೂ ಇಲ್ಲಿ ಕೇಳಿಸುತ್ತದೆ. ಮಿನ್ನಿಯಾ ಪೋಲಿಸ್ — ಮಿನ್ನೇಸೋಟ ಎಂಬ USA ನಲ್ಲಿರುವ ಆರ್ಫೀಲ್ಡ್ ಲ್ಯಾಬೊರೇಟರೀಸ್ನಲ್ಲಿರುವ ಅನಿಕೋಯಿಕ್ ಟೆಸ್ಟ್ ಚೇಂಬರ್ ಈ ಅನುಭವ ನೀಡುತ್ತದೆ. ಇಲ್ಲಿ ಹೊರ ಜಗತ್ತಿನ ಸಂಪೂರ್ಣ ಶಬ್ದವನ್ನು ನಿಗ್ರಹಿಸಲು ವಿಶೇಷವಾಗಿ ಕೋಣೆಯನ್ನ ವಿನ್ಯಾಸಗೊಳಿಸಲಾಗಿದೆ. ಹೀಗಾಗಿ ಈ ಕೋಣೆಗೆ ಭೇಟಿ ನೀಡುವವರು, ಎಷ್ಟು ಸಣ್ಣ ಶಬ್ದವನ್ನು ಆಲಿಸಬಹುದು ಅಂದ್ರೆ, ತಮ್ಮ ರಕ್ತನಾಳಗಳ ಮೂಲಕ ರಕ್ತ ಹರಿಯುವ ಶಬ್ಧವನ್ನು ಕೇಳಲು ಸಾಧ್ಯವಾಗುತ್ತದೆ ಎಂದು ವರದಿ ಮಾಡಲಾಗಿದೆ. ಅಷ್ಟು ಮಾತ್ರವಲ್ಲದೇ ತಾವು ಮಿಟುಕಿಸುವ ಕಣ್ಣ ರೆಪ್ಪೆಗಳ ಸದ್ದನ್ನೂ ಕೇಳಬಹುದಂತೆ. ಹೀಗೆ ಈ ಕೋಣೆಯಲ್ಲಿ ಸಮಯ ಕಳೆದು ಬಂದವರು ತಮ್ಮ ವಿಚಿತ್ರ ಅನುಭವಗಳನ್ನು ಹೇಳಿಕೊಂಡಿದ್ದಾರೆ. ತಮಗೆ ಧಿಡೀರ್ ಅನಾರೋಗ್ಯವಾದಂತೆ, ವಿಚಿತ್ರ ಹಿಂಸೆಯದಂತೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.…
ಜ್ವರ, ಕೆಮ್ಮು, ನೆಗಡಿ, ಕಾಲು ಕೈ ನೋವು ಏನೇ ಬಂದ್ರು ಮೆಡಿಕಲ್ ಶಾಪ್ ಗಳಿಗೆ ಹೋಗಿ ಮೆಡಿಸಿನ್ ಹಾಗೂ ಆಯಂಟಿ ಬಯಾಟಿಕ್ ಮಾತ್ರೆ ನುಂಗುತ್ತಿದ್ದಾರೆ. ಮೆಡಿಕಲ್ ಶಾಪ್ಗಳು ಜನರು ಕೇಳುವ ಮಾತ್ರೆಗಳನ್ನ ವೈದ್ಯರ ಸಲಹೆ ಇಲ್ಲದೆ ನೀಡುತ್ತಿರುವುದು ಜನರ ಆರೋಗ್ಯಕ್ಕೆ ಕುತ್ತು ತರುತ್ತಿದೆ. ಜನರ ನಡೆ ಆರೋಗ್ಯ ಇಲಾಖೆ ಹಾಗೂ ವೈದ್ಯರ ಆತಂಕಕ್ಕೆ ಕಾರಣವಾಗುತ್ತಿದೆ. ಇತ್ತಿಚ್ಚಿಗೆ ಮಹಿಳೆಯು ಅಸುರಕ್ಷಿತ ಗರ್ಭಪಾತ ಮಾತ್ರೆಗನ್ನು ನುಂಗುತ್ತಿದ್ದು ವೈದ್ಯರ ಟೆನ್ಷನ್ಗೆ ಕಾರಣವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ (Health Department) ಕಡಿವಾಣಕ್ಕೆ ಹೊಸ ಅಸ್ತ್ರ ಪ್ರಯೋಗಿಸಿದೆ.ಇದನ್ನ ಬಂಡವಾಳ ಮಾಡಿಕೊಂಡ ಕೆಲವು ಮೆಡಿಕಲ್ ಶಾಪ್ಗಳು ಜನರು ಕೇಳುವ ಮಾತ್ರೆಗಳನ್ನ ವೈದ್ಯರ ಸಲಹೆ ಇಲ್ಲದೆ ನೀಡುತ್ತಿರುವುದು ಜನರ ಆರೋಗ್ಯಕ್ಕೆ ಕುತ್ತು ತರುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ಈಗ ಕಡಿವಾಣಕ್ಕೆ ಮುಂದಾಗಿದೆ. ವೈದ್ಯರ ಪ್ರಿಸ್ಕ್ರಿಪ್ಷನ್ಗೆ ನಿಗದಿತ ಸಮಯ ಫಿಕ್ಸ್ ಮಾಡಲು ಮುಂದಾಗಿದ್ದು ನಂತರದ ದಿನಗಳಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾತ್ರ ನೀಡುವುದಕ್ಕೆ ನಿರ್ಬಂಧಕ್ಕೆ ಮುಂದಾಗಿದೆ. ಔಷಧ ಮಳಿಗೆಗಳು ಕೌಂಟರ್ ಮೆಡಿಸಿನ್ ರೂಪದಲ್ಲಿ…
ತುಮಕೂರು: ದೇವಸ್ಥಾನ, ಜಾತ್ರೆ, ಹಬ್ಬ ಮತ್ತಿತರ ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳಿಗೆ ವಿತರಿಸಲಾಗುವ ಪ್ರಸಾದ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದ್ದಾರೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ–2006ರಡಿ ದೇವಸ್ಥಾನ ಹಾಗೂ ಜಾತ್ರಾ ಮಹೋತ್ಸವಗಳಲ್ಲಿ ಪಾಲಿಸಬೇಕಾದ ಮಾನದಂಡಗಳ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇವಸ್ಥಾನ ಹಾಗೂ ಜಾತ್ರಾ ಮಹೋತ್ಸವ, ಹಬ್ಬ–ಹರಿದಿನಗಳಲ್ಲಿ ಭಕ್ತಾದಿಗಳು/ಸಾರ್ವಜನಿಕರಿಗೆ ಪ್ರಸಾದ ವಿತರಿಸಲು ಆಹಾರ ತಯಾರಿಸುವವರು ಕಡ್ಡಾಯವಾಗಿ ಆಹಾರ ಪರವಾನಗಿ ಪಡೆದುಕೊಳ್ಳಬೇಕು. ಪಡೆದಿರುವ ಆಹಾರ ಪರವಾನಗಿಯನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರದರ್ಶಿಸಬೇಕು. ಆಹಾರ ತಯಾರಿಸುವ ಜಾಗ ಶುಚಿತ್ವದಿಂದ ಕೂಡಿರಬೇಕು. ಆಹಾರ ತಯಾರಿಕೆಗೆ ಬಳಸುವ ಪದಾರ್ಥಗಳು ಎಫ್.ಎಸ್.ಎಸ್.ಎ. ಲೈಸನ್ಸ್ ಪಡೆದಿದ್ದು, ಅವಧಿ ಮುಗಿದಿರುವ ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಪ್ರಸಾದ ತಯಾರಿಕೆಯಲ್ಲಿ ಬಳಸಬಾರದು ಎಂದು ಸೂಚನೆ ನೀಡಿದ್ದಾರೆ. ಜಾತ್ರೆ/ ಊರ ಹಬ್ಬಗಳಲ್ಲಿ ಆಹಾರ ವಿತರಣೆಗೆ ಸಂಬಂಧಿಸಿದಂತೆ ಆಹಾರ ತಯಾರಿಸುವವರು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದರೊಂದಿಗೆ ಏಪ್ರಾನ್, ಕೈಗವಸು, ಮುಖಗವಸು, ತಲೆಗೆ ಕೂದಲುಗಳನ್ನು ಮುಚ್ಚುವಂತಿರುವ ಟೋಪಿ, ಕಾಲುಗಳಿಗೆ…
ತುಮಕೂರು: ಮಹಾರಾಷ್ಟದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 12ರಂದು ನಡೆಯಲಿರುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಯಾತ್ರೆ ಕೈಗೊಳ್ಳಲಿಚ್ಛಿಸುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳಿಂದ ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 5ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 10 ರಿಂದ 14ರವರೆಗೆ ನಡೆಯುವ ದಮ್ಮ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಳುಹಿಸಿಕೊಡಲು ಸಾರಿಗೆ ವ್ಯವಸ್ಥೆ/ರೈಲಿನ ವ್ಯವಸ್ಥೆ ಕಲ್ಪಿಸುವ ಸಂಬಂಧ ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ https://swdservices.karnataka.gov.in/ ಗೆ ಭೇಟಿ ನೀಡಿ ಸೆಪ್ಟೆಂಬರ್ 5ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…