Subscribe to Updates
Get the latest creative news from FooBar about art, design and business.
- ‘ಗರ್ಭಿಣಿನೂ ಇಲ್ಲ, ಮಹಿಳೆಯೂ ಇಲ್ಲ… ಕಾರಿನಲ್ಲಿ ಒಬ್ಬರೇ ಇದ್ದಿದ್ದು!’: ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಿಚ್ಚಿಟ್ಟ ಬೆಂಗಳೂರು ಪೊಲೀಸರು
- ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ಜೂನ್ 3 ರಂದು ವಿಧಾನಸೌಧ ಸುತ್ತಮುತ್ತಲಿನ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
- ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್ ಮುಖಂಡ ಒತ್ತಾಯ
- ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!
- ಶಿಥಿಲಾವಸ್ಥೆಯ ಶಾಲಾ ಕಟ್ಟಡಗಳ ಮಾಹಿತಿಗೆ ಸೂಚನೆ
- ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ
- ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
Author: admin
ತುಮಕೂರು: ಕಾರ್ಮಿಕ ಇಲಾಖೆಯು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಜೇಷ್ಠತೆ ಆಧಾರದಲ್ಲಿ ಮೇಸನ್ ಕಿಟ್, ವೆಲ್ಡಿಂಗ್ ಕಿಟ್, ರೋಡ್ ಕನ್ಸಟಕ್ಷನ್ ಕಿಟ್ ಸೇರಿದಂತೆ ವಿವಿಧ ಟೂಲ್ ಕಿಟ್ ಗಳನ್ನು ವಿತರಿಸುತ್ತಿದ್ದು, ಸವಲತ್ತು ಪಡೆಯಲಿಚ್ಛಿಸುವ ಅರ್ಹ ಕಟ್ಟಡ ಕಾರ್ಮಿಕರು ಆಯಾ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಕಾರ್ಮಿಕ ಅಧಿಕಾರಿ ತೇಜಾವತಿ ತಿಳಿಸಿದ್ದಾರೆ. ಅರ್ಹ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರ ಚಾಲ್ತಿಯಲ್ಲಿರುವ ಗುರುತಿನ ಚೀಟಿಯೊಂದಿಗೆ ಸೆಪ್ಟೆಂಬರ್ 17ರೊಳಗಾಗಿ ತಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಾಯಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಕರ್ತವ್ಯ ನಿರ್ಲಕ್ಷ, ಸರ್ಕಾರಿ ಯೋಜನೆಗಳ ಪ್ರಗತಿ ಕುಂಠಿತ, ಯೋಜನಾನುಷ್ಠಾನದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು. ಜಿಲ್ಲಾ ಪಂಚಾಯತಿಯ ತಮ್ಮ ಕೊಠಡಿಯಲ್ಲಿಂದು ವಿವಿಧ ಯೋಜನೆಗಳ ಪ್ರಗತಿ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಆದ್ಯತೆ ಮೇರೆಗೆ ಕಾಯ್ದುಕೊಳ್ಳಲಾಗುತ್ತಿದೆ. ಕಳಪೆ ಕಾಮಗಾರಿಗಳು ಕಂಡು ಬಂದಲ್ಲಿ ತಾಲ್ಲೂಕು ಪಂಚಾಯತಿ ಅಥವಾ ಜಿಲ್ಲಾ ಪಂಚಾಯತಿ ಗಮನಕ್ಕೆ ತಂದಲ್ಲಿ ಕೂಡಲೇ ಕಳಪೆ ಕಾಮಗಾರಿಗೆ ಸಂಬಂಧಿಸಿದ ಗುತ್ತಿಗೆದಾರರ ವಿರುದ್ಧ ಕ್ರಮವಹಿಸಲಾಗುವುದೆಂದು ತಿಳಿಸಿದರು. ಕಾಮಗಾರಿಗಳ ಬಿಲ್ ಪಾವತಿ ವಿಳಂಬ ಕುರಿತು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಆರ್ಥಿಕ ವರ್ಷಾರಂಭದ ಮೊದಲ 3 ತಿಂಗಳು ಅನುದಾನದ ಬಳಕೆಯಾಗುವುದಿಲ್ಲ. ಮೊದಲ 3 ತಿಂಗಳ ಅವಧಿಯಲ್ಲಿ ಪ್ರಸಕ್ತ ವರ್ಷ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಕೆ, ಟೆಂಡರ್ ಪ್ರಕ್ರಿಯೆ, ವಿಸ್ತೃತ ಯೋಜನಾ ವರದಿ(ಡಿಪಿಆರ್)…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಮೇಷ ರಾಶಿ✨ ಇಂದು ನೀವು ಗುರಿಯನ್ನು ಸಾಧಿಸುವ ಕಡೆ ಹೆಚ್ಚು ಗಮನ ಕೊಡುವಿರಿ. ಯುವಕರು ಸಂದರ್ಶನಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಯಾವುದೇ ಅಕ್ರಮ ಚಟುವಟಿಕೆಗಳನ್ನು ತಪ್ಪಿಸಿ. ಕೌಟುಂಬಿಕ ವಾತಾವರಣ ಆಹ್ಲಾದಕರವಾಗಿರಬಹುದು.✨ ವೃಷಭ ರಾಶಿ ✨ ಇಂದು ನಿಮ್ಮ ಪ್ರೀತಿ ಪಾತ್ರರೊಡನೆ ಮನರಂಜನೆಯಲ್ಲಿ ಉತ್ತಮ ಸಮಯವನ್ನು ಕಳೆಯಬಹುದು. ವ್ಯವಹಾರದಲ್ಲಿ ಕೆಲವು ಹೊಸ…
ಚಿಕ್ಕ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರವರೆಗೂ ಕೇಕ್ ನ್ನು ಚಪ್ಪರಿಸಿಕೊಂಡು ತಿಂತಾರೆ. ಅದರಲ್ಲೂ ಈಗಂತೂ ಕೇಕ್ ಇಲ್ದೆ ಹೋದ್ರೆ ಬರ್ತೇಡೆ ಪಾರ್ಟಿಗಳನ್ನ ಊಹಿಸೋದು ಕೂಡ ಕಷ್ಟ. ಅಂತದ್ರಲ್ಲಿ ಇನ್ಮಂದೇ ಕರ್ನಾಟಕದಲ್ಲಿ ಕೇಕ್ ಸಿಗೋದಿಲ್ವಾ? ಅಚ್ಚರಿಯ ವಿಷ್ಯ ಅಂದ್ರೆ ಈಗಾಗಲೇ ಗೋಬಿ, ಕಬಾಬ್, ಬಾಂಬೆ ಮಿಠಾಯಿಗಳಿಗೆ ರಾಜ್ಯದಲ್ಲಿ ವಿಘ್ನ ಎದುರಾಗಿತ್ತು. ಅದ್ರೆ ಇದೀಗ ಕೇಕ್ ಗೂ ಸಹ ಸಂಕಷ್ಟ ಎದುರಾಗಿದೆ. ಕೇಕ್ನಲ್ಲಿ ಮನುಷ್ಯನ ಆರೋಗ್ಯಕ್ಕೆ ಹಾನಿಯಾಗುವ ಕೆಮಿಕಲ್ಸ್ ಪತ್ತೆಯಾಗಿದೆ ಎಂಬ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಆಘಾತಕಾರಿ ವಿಷ್ಯವೊಂದನ್ನ ಆಹಾರ ಮತ್ತು ಆರೋಗ್ಯ ತಜ್ಞರು ಪತ್ತೆ ಹಚ್ಚಿದ್ದಾರೆ. ವಿಶೇಷ ಅಂದ್ರೆ ಬಾಂಬೆ ಮಿಠಾಯಿಯಲ್ಲಿ ರೋಡಮೈನ್–ಬಿ ಎಂಬ ವಿಷಕಾರಿ ರಾಸಾಯನಿಕ ಅಂಶ ಇದ್ಯಂತೆ. ಅದಲ್ಲದೆ ಗೋಬಿ ತಯಾರಿಕೆಯಲ್ಲಿ ಬಳಸುವ ಕೃತಕ ಬಣ್ಣ, ರುಚಿಕಾರಕ, ಕಡಿಮೆ ಬೆಲೆಯ ಸಾಸ್ ಇವೆಲ್ಲಾ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂಬ ಮಾಹಿತಿ ನೀಡಿದ್ದಾರೆ. ಇಂಟರೆಸ್ಟಿಂಗ್ ಅಂದ್ರೆ ಇದ್ರಲೆಲ್ಲ ಸಿಂಥೆಟಿಕ್ ಬಣ್ಣಗಳನ್ನು ಅತಿ ಹೆಚ್ಚು ಬಳಸಲಾಗುತ್ತೆ. ಅದರಲ್ಲೂ…
ತಮ್ಮ ಬರ್ತ್ಡೇ ದಿನ ತಮ್ಮ ಮನೆಯ ಬಳಿಗೆ ಬರಬೇಡಿ ಎಂದು ಫ್ಯಾನ್ಸ್ ಗೆ ಮನವಿ ಮಾಡಲು ಸುದ್ದಿಗೋಷ್ಠಿ ಮಾಡಿದ್ದ ನಟ ಕಿಚ್ಚ ಸುದೀಪ್ ಅವರು ಈಗ ದರ್ಶನ್ ವಿಚಾರವಾಗಿಯೂ ರಿಯಾಕ್ಟ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಇದ್ದ ಫೋಟೋ ವೈರಲ್ ಆದ ನಂತರ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ನಾನು ಮೊದಲಿನಿಂದ ಮಾತನಾಡಿಕೊಂಡಿದ್ದರೆ ನಾನು ನಿಜವಾಗಲೂ ದರ್ಶನ್ ಅವರನ್ನು ಹೋಗಿ ಮಾತನಾಡಿಸುತ್ತಿದ್ದೆ. ನಾವಿಬ್ಬರೂ ಸರಿಯಿಲ್ಲ. ನಾಟಕೀಯವಾಗಿ ಇರೋಕೆ ಬರಲ್ಲ. ನಮ್ಮ ಇಬ್ಬರ ಟೇಸ್ಟ್ .. ರೂಟ್ ಎಲ್ಲ ಬೇರೆ ಬೇರೆ ಎಂದು ಹೇಳಿದ್ದಾರೆ. ಅವರಿಗೆ ಪಬ್ಲಿಕ್ ನಲ್ಲಿ ಅವಮಾನ ಆಗಿದ್ದಾಗ ನಾನು ಟ್ವೀಟ್ ಮಾಡಿದೆ. ಅದು ನನ್ನ ಕರ್ತವ್ಯ. ನನ್ನ ಜವಾಬ್ದಾರಿ ನನ್ನ ಮಗಳು. ಇನ್ನೊಬ್ಬರನ್ನು ಸರಿ ಮಾಡೋ ಶಕ್ತಿ ಇಲ್ಲ. ರೇಣುಕಾಸ್ವಾಮಿ ಕುಟುಂಬದ ನೋವು ಅವರಿಗೆ ಗೊತ್ತು ಎಂದು ಹೇಳಿದ್ದಾರೆ. ನಾನು ಕೂಡಾ…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಸದ್ಯ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದಾರೆ. ದರ್ಶನ್ ಕನ್ನಡಕ್ಕೆ ಸಿಕ್ಕಿದ್ದ ಸೂಪರ್ ಸ್ಟಾರ್. 60ಕ್ಕು ಹೆಚ್ಚು ಸಿನಿಮಾಗಳಲ್ಲಿ ನಟಿಸಿರೋ ಮಾಸ್ ಹೀರೋ.. ಆದ್ರೆ ಆ ಒಂದು ಕೊಲೆ ದರ್ಶನ್ ಬಣ್ಣದ ಭವಿಷ್ಯವನ್ನೇ ಮುಗಿಸಿ ಬಿಡ್ತಾ? ಇಲ್ಲೊಬ್ಬ ಜ್ಯೋತಿಷಿ ದರ್ಶನ್ ಮುಂದಿನ ಜೀವನದ ಬಗ್ಗೆ ಜ್ಯೋತಿಷ್ಯ ನುಡಿದಿದ್ದಾರೆ. ನಟ ದರ್ಶನ್ ಗೆ ಕೆಟ್ಟ ಸಮಯ. ಕೊಲೆ ಆರೋಪದ ಸುಳಿಗೆ ಸಿಕ್ಕಿ ಒದ್ದಾಡುತ್ತಿರುವ ದರ್ಶನ್ ಗೆ ಹೇಗಾದ್ರು ಮಾಡಿ ಹೊರ ಬರಬೇಕು ಅನ್ನೋ ಹಂಬಲ, ಆದ್ರೆ ಅದಕ್ಕೆ ಸದ್ಯಕ್ಕೆ ಸರಿಯಾದ ಸಮಯ ಇಲ್ವಂತೆ. ದರ್ಶನ್ ಜೀವನದ ಸರಿಯಾದ ಟೈಂ ಶುರುವಾಗೋದು 2027ಕ್ಕೆ ಅಂತೆ. ಅಲ್ಲಿವರೆಗೂ ದರ್ಶನ್ ಜೈಲಿನಿಂದ ಹೊರಬರಲ್ವಾ ಅಂತ ಚಿಂತೆ ಬೇಡ, ಜೈಲಿನಿಂದ ಹೊರ ಬಂದ್ರೂ ಈ ಕೊಲೆ ಕೇಸ್ ಸಿಕ್ಕಾಪಟ್ಟೆ ಸ್ಟ್ರಾಂಗ್ ಆಗಿ ಟಾರ್ಚರ್ ಮಾಡುತ್ತೆ ಅಂತ ಕಾನೂನು ತಜ್ಞರು ಹೇಳುತ್ತಿದ್ದಾರೆ. ಇದಕ್ಕೆ ಸರಿಯಾಗಿ ಜೋತಿಷ್ಯಿ ಒಬ್ಬರು, ದರ್ಶನ್ಗೆ ರೈಟ್ ಟೈಂ ಬರೋದು 2027ಕ್ಕೆ…
ಖಾಸಗಿ ಸ್ಥಳಕ್ಕೆ ಹೋಗಿ ಅಲ್ಲಿಯೇ ಉಳಿದು ತಮ್ಮ ಆಪ್ತರ ಜೊತೆ ಸಮಯ ಕಳೆಯಬೇಕೆಂದರೆ OYO ರೂಮ್ ಗಳು ದೇಶಾದ್ಯಂತ ಬಹಳ ಜನಪ್ರಿಯವಾಗಿದೆ. ಜೋಡಿಗಳಿಗೆ ಪಕ್ಕಾ ನೆನಪಿಗೆ ಬರೋದೇ ಓಯೋ ರೂಮ್ಸ್. ಆದರೆ ಈ ರೂಮ್ ಗಳಿಗೆ ಓಯೋ ರೂಮ್ಸ್ ಎಂಬ ಹೆಸರು ಬಂದಿದ್ದು ಹೇಗೆ ಗೊತ್ತಾ? OYO ಎಂದರೆ “ಆನ್ ಯುವರ್ ಓನ್ ರೂಮ್ಸ್” ಎಂದು ಅರ್ಥ. ಅಂದರೆ ನೀವು ಒಮ್ಮೆ ಈ ರೂಂಗೆ ಭೇಟಿ ನೀಡಿದ ನಂತರ ಅದು ನಿಮ್ಮ ಮನೆ ಎಂದೇ ಭಾವಿಸಿಕೊಳ್ಳಿ ಎಂದು. OYO ಭಾರತದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಜಾಗತಿಕವಾಗಿ ಬ್ರಾಂಚ್ ಅನ್ನು ಹೊಂದಿದೆ. OYO ನಲ್ಲಿ ಕೊಠಡಿಯನ್ನು ಕಾಯ್ದಿರಿಸಲು ಹೆಚ್ಚಿನ ದಾಖಲೆಗಳನ್ನು ನೀಡುವ ಅಗತ್ಯವಿರುವುದಿಲ್ಲ ಅವಿವಾಹಿತ ದಂಪತಿಗಳಿಗೆ ಪ್ರಾಥಮಿಕ ಕಾಳಜಿಯೆಂದರೆ ಅವರ ವಾಸ್ತವ್ಯದ ಸಮಯದಲ್ಲಿ ಗೌಪ್ಯತೆ ಮತ್ತು ಭದ್ರತೆ. OYO ಕೊಠಡಿಗಳು ಸಾಮಾನ್ಯವಾಗಿ ಸುರಕ್ಷಿತ ಪರಿಸರವನ್ನು ಖಚಿತಪಡಿಸಿಕೊಳ್ಳಲು ವಿವೇಚನಾಯುಕ್ತ ಚೆಕ್–ಇನ್ಗಳು ಮತ್ತು ಅತಿಥಿ ಗೌಪ್ಯತೆಗೆ ಗೌರವದಂತಹ ಕ್ರಮಗಳನ್ನು ಅನುಸರಿಸುತ್ತವೆ. OYO ಮಾಲೀಕ ರಿತೇಶ್ ಅಗರ್ವಾಲ್…
ತುಮಕೂರು: ಪಠ್ಯಕ್ಕೆ ಸಂಬಂಧಿಸಿದ ಉತ್ತಮ ವಿಚಾರ ಸೇರಿದಂತೆ ಸದುದ್ದೇಶಗಳಿಗೆ ಮಾತ್ರ ಮೊಬೈಲ್ ಬಳಕೆ ಮಾಡಬೇಕೆಂದು ಮಕ್ಕಳಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ನ್ಯಾಯಾಧೀಶರಾದ ನೂರುನ್ನೀಸಾ ಕರೆ ನೀಡಿದರು. ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ತುಮಕೂರು ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಹಾಗೂ ಊರುಕೆರೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿಂದು ಊರುಕೆರೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ–2024ರ ಪ್ರಯುಕ್ತ ಹಮ್ಮಿಕೊಂಡಿದ್ದ ತಾಯಿಯ ಹೆಸರಿನಲ್ಲಿ ಗಿಡನೆಡುವ ಮತ್ತು ಪ್ರತಿಜ್ಞಾವಿಧಿ ಬೋಧಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಾಲಾ-ಕಾಲೇಜಿನ ಮಕ್ಕಳಿಗೆ ಪೋಕ್ಸೋ ಕಾಯ್ದೆ, ಜೀವನದ ಮೌಲ್ಯಗಳ ಬಗ್ಗೆ ಶಿಕ್ಷಕರು/ಪೋಷಕರು ತಿಳುವಳಿಕೆ ನೀಡಬೇಕು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎಲ್. ಚೇತನ್ಕುಮಾರ್ ಮಾತನಾಡಿ, ಗರ್ಭಿಣಿ, ಬಾಣಂತಿ ಹಾಗೂ ಕಿಶೋರಿಯರು ಪೌಷ್ಟಿಕಯುಕ್ತ ಆಹಾರವನ್ನು ಸೇವಿಸಬೇಕು ಎಂದು ತಿಳಿಸಿದರು. ತಾಲ್ಲೂಕು ಪಂಚಾಯಿತಿ…
ಬೆಂಗಳೂರು: ರಾಜ್ಯದ ಜನರ ಆಶೀರ್ವಾದ ಪಡೆದು ಅಸ್ಥಿತ್ವಕ್ಕೆ ಬಂದಿರುವ ಪ್ರಜಾತಂತ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ–ಜೆಡಿಎಸ್ ಪಕ್ಷಗಳು ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ಹಾಗೂ ರಾಜ್ಯಪಾಲರ ನಡೆಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು. ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ಧನಾ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ಪ್ರಕರಣಗಳ ತನಿಖೆಗೆ ರಾಜ್ಯಪಾಲರು ಅನುಮತಿ ನೀಡದೆ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಅವರ ವಿರುದ್ಧದ ನಿರಾಧಾರ ಆರೋಪಗಳನ್ನು ಕೂಲಂಕುಶವಾಗಿ ಪರಿಶೀಲಿಸದೇ, ಏಕಾಏಕಿಯಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಒಕ್ಕೊರಲಿನಿಂದ ಖಂಡಿಸಲಾಯಿತು. ಬಳಿಕ ರಾಜಭವನದವರೆಗೆ ಕಾಲ್ನಡಿಗೆ ಜಾಥ ನಡೆಸಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಡಾ.ಹೆಚ್.ಸಿ.ಮಹದೇವಪ್ಪ, ಕೃಷ್ಣಬೈರೇಗೌಡ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಡಾ.ಶರಣಪ್ರಕಾಶ್ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಭೈರತಿ ಸುರೇಶ್, ಜಮೀರ್ ಅಹ್ಮದ್, ಎನ್.ಎಸ್.ಬೋಸರಾಜ್, ಸುಧಾಕರ್, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ…
ರೈಲಿನಲ್ಲಿ ಮದ್ಯ ಒಯ್ಯಲು ಅವಕಾಶವಿದೆಯಾ, ಇದ್ದರೆ ಎಷ್ಟು ಬಾಟಲಿ ಒಯ್ಯಬಹುದು? 1989ರ ರೈಲು ಆಯಕ್ಟ್ ಹೇಳುವುದೇನು? ಈ ನಿಯಮ ಈಗಲೂ ಇದೆಯಾ? ಇಲ್ಲಿದೆ ವಿವರ.ಕಿ ರೈಲಿನಲ್ಲಿ ಮದ್ಯ ಒಯ್ಯಲು ಅವಕಾಶವಿದೆಯಾ ಅನ್ನೋದು ಹಲವರ ಪ್ರಶ್ನೆ. ಹಲವರು 1989ರ ಭಾರತೀಯ ರೈಲ್ವೇ ಆ್ಯಕ್ಟ್ ಮುಂದಿಟ್ಟು ರೈಲಿನಲ್ಲಿ ಗರಿಷ್ಠ 2 ಲೀಟರ್ ಮದ್ಯ ಒಯ್ಯಲು ಅವಕಾಶವಿದೆ ಅನ್ನೋ ವಾದ ಮುಂದಿಡುತ್ತಾರೆ. ಆದರೆ ನಿಜಕ್ಕೂ 2 ಲೀಟರ್ ಮದ್ಯ ಒಯ್ಯಲು ಅವಕಾಶವಿದೆಯಾ? ಭಾರತೀಯ ರೈಲಿನಲ್ಲಿ ಮದ್ಯ ಒಯ್ಯಲು ಅವಕಾಶವಿಲ್ಲ. ಮದ್ಯಕ್ಕೆ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ತೊಟ್ಟು ಹನಿ ಮದ್ಯವನ್ನು ಭಾರೀಯ ರೈಲಿನಲ್ಲಿ ಒಯ್ಯಲು ಅವಕಾಶವಿಲ್ಲ. ಸೀಲ್ಡ್ ಬಾಟಲ್ ಇದ್ದರೂ ಭಾರತೀಯ ರೈಲಿನಲ್ಲಿ ಪ್ರಯಾಣಿಕರು ಮದ್ಯ ಒಯ್ಯಲು ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ದುಬಾರಿ ದಂಡ ಹಾಗೂ ಜೈಲು ಶಿಕ್ಷೆಗೂ ಗುರಿಯಾಗುವ ಸಾಧ್ಯತೆ ಇದೆ.ಮದ್ಯದ ಬಾಟಲಿ ಅಥವಾ ಮದ್ಯದ ಜೊತೆ ರೈಲಿನಲ್ಲಿ ಸಿಕ್ಕಿಬಿದ್ದರೆ ಕನಿಷ್ಠ 1,000 ರೂಪಾಯಿ ದಂಡ, ಗರಿಷ್ಠ 3 ವರ್ಷದ ವರೆಗೆ ಜೈಲು…