Author: admin

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳನ್ನು (ಕೆಪಿಎಸ್) ಆರಂಭಿಸುವ ಸರ್ಕಾರದ ನಿರ್ಧಾರದ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಕಳೆದ ಮೂರು ವರ್ಷಗಳಲ್ಲಿ 31 ಹೊಸ ಕೆಪಿಎಸ್ ಶಾಲೆಗಳನ್ನು ಸ್ಥಾಪಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಎಂಎಲ್‌ ಸಿ ಹನುಮಂತ್ ನಿರಾಣಿ ಮತ್ತು ಕಾಂಗ್ರೆಸ್ ಎಂಎಲ್‌ಸಿ ಬಿಲ್ಕಿಸ್ ಬಾನು ಅವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, 2022 ರಿಂದ 2025ರ ಅವಧಿಯಲ್ಲಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳನ್ನು ವಿಲೀನಗೊಳಿಸುವ ಮೂಲಕ ಈ ಶಾಲೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದರು. ಒಟ್ಟು 131 ಕೆಪಿಎಸ್ ಶಾಲೆಗಳು: 2018 ರಿಂದ 2025 ರವರೆಗೆ 35 ಉರ್ದು ಮಾಧ್ಯಮ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗಿತ್ತು. 2025–26ನೇ ಸಾಲಿನಲ್ಲಿ ಸುಮಾರು 100 ಉರ್ದು ಮಾಧ್ಯಮ ಮತ್ತು ಮೌಲಾನಾ ಆಜಾದ್ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಒಟ್ಟು ಸಂಖ್ಯೆ 131ಕ್ಕೆ ಏರಿಕೆಯಾಗಿದೆ. ದ್ವಿಭಾಷಾ ಶಿಕ್ಷಣ:…

Read More

ತುಮಕೂರು: ನಾಗಮೋಹನ್ ದಾಸ್ ಆಯೋಗ ನೀಡಿರುವ ಒಳಮೀಸಲಾತಿ ವರದಿಯನ್ನು ‘ಅವೈಜ್ಞಾನಿಕ’ ಎಂದು ಖಂಡಿಸಿರುವ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ, ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಸಜ್ಜಾಗಿದೆ. ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಯವರ ನೇತೃತ್ವದಲ್ಲಿ ಮಾರ್ಚ್ 25ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಈ ಪ್ರತಿಭಟನೆ ನಡೆಯಲಿದೆ. ಜಿಲ್ಲಾ ಛಲವಾದಿ ಮಹಾಸಭಾದ ವತಿಯಿಂದ ಈ ಹೋರಾಟಕ್ಕೆ ಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಜನರು ಭಾಗವಹಿಸುವಂತೆ ಕರೆ ನೀಡಲಾಗಿದೆ. ನಾಳೆ ಪೂರ್ವಭಾವಿ ಸಭೆ: ಈ ಬೃಹತ್ ಪ್ರತಿಭಟನೆಯ ಸಿದ್ಧತೆಗಾಗಿ ತುಮಕೂರು ಜಿಲ್ಲೆಯ ಸಮುದಾಯದ ಪ್ರಮುಖರ ಪೂರ್ವಭಾವಿ ಸಭೆಯನ್ನು ಫೆಬ್ರವರಿ 17ರ ಮಂಗಳವಾರದಂದು ಆಯೋಜಿಸಲಾಗಿದೆ. ನಗರದ ಆದರ್ಶ ನಗರದಲ್ಲಿರುವ ‘ದಲಿತ ಛಲವಾದಿ ಭವನ’ದಲ್ಲಿ (ಟುಡಾ ಕಚೇರಿ ಎದುರು) ಬೆಳಿಗ್ಗೆ 10:30ಕ್ಕೆ ಸಭೆ ನಡೆಯಲಿದೆ. ಸಮುದಾಯದ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ನಡೆಯುತ್ತಿರುವ ಈ ಹೋರಾಟದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಮುಖಂಡರು, ರಾಜಕಾರಣಿಗಳು, ನಿವೃತ್ತ ನೌಕರರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ…

Read More

ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯಿತಿಯನ್ನು ಸರ್ಕಾರವು ಪುರಸಭೆಯಾಗಿ ಮೇಲ್ದರ್ಜೆಗೇರಿಸಿದ್ದು, ಈ ಸಂಬಂಧ ವಾರ್ಡ್‌ಗಳ ಮರು ವಿಂಗಡಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಬದಲಾವಣೆಯಿಂದಾಗಿ ಪಟ್ಟಣದ ವಾರ್ಡ್‌ಗಳ ಸಂಖ್ಯೆ 15ರಿಂದ 23ಕ್ಕೆ ಏರಿಕೆಯಾಗಿದೆ. ಈ ಹಿಂದೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 14,000 ಜನಸಂಖ್ಯೆ ಇತ್ತು. ಈಗ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳನ್ನು ಸೇರ್ಪಡೆಗೊಳಿಸಿರುವುದರಿಂದ ಒಟ್ಟು ಜನಸಂಖ್ಯೆ 26,530ಕ್ಕೆ ಏರಿಕೆಯಾಗಿದೆ. ಹೊಸದಾಗಿ 8 ವಾರ್ಡ್‌ಗಳನ್ನು ರಚಿಸಲಾಗಿದ್ದು, ಒಟ್ಟು ವಾರ್ಡ್‌ಗಳ ಸಂಖ್ಯೆ 23 ತಲುಪಿದೆ. ಸೇರ್ಪಡೆಯಾದ ಪ್ರದೇಶಗಳು: ಹಳೆಯ 15 ವಾರ್ಡ್‌ಗಳನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು, ಹೊಸ ವಾರ್ಡ್‌ಗಳಿಗಾಗಿ ಜಟ್ಟಿ ಅಗ್ರಹಾರ, ಹುಲಿಕುಂಟೆ ಮತ್ತು ಹಂಚಿಹಳ್ಳಿ ಗ್ರಾಮ ಪಂಚಾಯಿತಿಗಳ ಕೆಲವು ಭಾಗಗಳನ್ನು ಪುರಸಭೆ ವ್ಯಾಪ್ತಿಗೆ ಸೇರಿಸಲಾಗಿದೆ. 16ನೇ ವಾರ್ಡ್‌ನಿಂದ ಹಿಡಿದು 23ನೇ ವಾರ್ಡ್‌ವರೆಗೆ ಹೊಸ ಪ್ರದೇಶಗಳನ್ನು ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ದೇವರಹಳ್ಳಿ, ಕಾಮೇನಹಳ್ಳಿ, ಅಗ್ನಿಶಾಮಕ ಠಾಣೆ ಪ್ರದೇಶ, ಓಬಳದೇವರಹಳ್ಳಿ, ಕಣ್ವ ಲೇಔಟ್, ಮಲ್ಲೇಶಪುರ ಸೇರಿದಂತೆ ಹಲವು ಬಡಾವಣೆಗಳು ಸೇರಿವೆ. ಸ್ಥಳೀಯರ ಆಕ್ಷೇಪ ಮತ್ತು…

Read More

ತುಮಕೂರು: ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೂಟಿಂಗ್ ರೇಂಜ್, ಟೆನಿಸ್, ಬ್ಯಾಸ್ಕೆಟ್ ಬಾಲ್ ಅಂಕಣಗಳು ಹಾಗೂ ಅಮಾನಿಕೆರೆಯಲ್ಲಿ ಕಯಾಕಿಂಗ್ ಮತ್ತು ಕ್ಯಾನೋಯಿಂಗ್ ಜಲಕ್ರೀಡಾ ಕೇಂದ್ರಗಳನ್ನು ಭಾನುವಾರ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಲೋಕಾರ್ಪಣೆಗೊಳಿಸಿದರು. ಜಿಲ್ಲಾಡಳಿತ, ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು ಮಹಾನಗರ ಪಾಲಿಕೆ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಈ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವರು ಜಿಲ್ಲೆಯ ಕ್ರೀಡಾಪಟುಗಳು ಇದರ ಸದುಪಯೋಗ ಮಾಡಿಕೊಳ್ಳುವಂತೆ ಶುಭ ಹಾರೈಸಿದರು. ಕಾರ್ಯಕ್ರಮದ ನಡುವೆ ಅಪಘಾತದಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳು ಮೃತಪಟ್ಟ ಸುದ್ದಿ ತಿಳಿದ ಗೃಹ ಸಚಿವರು ಯಾವುದೇ ವೇದಿಕೆ ಭಾಷಣ ಮಾಡದೆ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿವಿಧ ವಸತಿಗೃಹಗಳ ಶಂಕುಸ್ಥಾಪನೆ, ನಿವೃತ್ತ ಪೊಲೀಸರಿಗೆ ಜಮೀನು ಹಸ್ತಾಂತರ ಮೊದಲಾದ ಅಭಿವೃದ್ಧಿ ಕಾಮಗಾರಿಗಳನ್ನು ಮುಂದೂಡಿ ಘಟನಾ ಸ್ಥಳದ ಪರಿಶೀಲನೆಗೆ ತೆರಳಿದರು. ಅಮಾನಿಕೆರೆಯಲ್ಲಿ ಜಲಕ್ರೀಡೆ: ಅಮಾನಿಕೆರೆಯಷ್ಟು ವಿಶಾಲವಾದ ಸುಂದರ ಕೆರೆ ಎಲ್ಲ ಜಿಲ್ಲೆಗಳಲ್ಲಿ ಇಲ್ಲ. ಇರುವ ಅವಕಾಶಗಳನ್ನು ಇಲ್ಲಿ…

Read More

ಸರಗೂರು:  ತಾಲ್ಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ರಾಗಿ ಮೆದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಮಾರು 5 ಎಕರೆ ರಾಗಿ ಮೆದೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಗ್ರಾಮದ ಮಂಜುನಾಥ್,&ಬಸವರಾಜು, ಎಂಬುವರಿಗೆ ಸೇರಿದ ಎರಡು ರಾಗಿ ಮೆದೆಗಳು ಶನಿವಾರ ಮಧ್ಯಾಹ್ನ ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ರಾಗಿ ಮದೆ ಭಸ್ಮವಾಗಿದೆ. ಮನೆಯ ಹಿತ್ತಲಿನಲ್ಲಿ 15 ದಿನಗಳ ಹಿಂದೆ  ಕಟಾವು ಮಾಡಿ ರಾಗಿ ಮೆದೆಯನ್ನು ಹಾಕಲಾಗಿತ್ತು, ಆದರೆ ಇಂದು  ಮೆದೆಗೆ ಬೆಂಕಿ ಬಿದ್ದು ರಾಗಿ ಮೆದೆ ಸಂಪೂರ್ಣ ಭಸ್ಮವಾಗಿದೆ. ತಕ್ಷಣ ಅಕ್ಕಪಕ್ಕದ ಮನೆಯವರು ಬಂದು ಬೆಂಕಿಯನ್ನು ನಂದಿಸಲು ಶ್ರಮ ಪಟ್ಟರೂ  ಬೆಂಕಿ ಹುರಿಯು ಹೆಚ್ಚಾಗಿ ರಾಗಿ ಮೆದೆ ಸಂಪೂರ್ಣ ಭಸ್ಮವಾಗಿದೆ. ಇದೆ ಸಂದರ್ಭದಲ್ಲಿ ರೈತ ಮಂಜುನಾಥ್, ಮಾತನಾಡಿ ನಾವು ಕಷ್ಟಪಟ್ಟು ಕೃಷಿ ಮಾಡಿ, ರಾಗಿ ಬೆಳೆದು ಮೆದೆ ಹಾಕಿ ಎರಡು ಮೂರು ದಿನಗಳಲ್ಲಿ ರಾಗಿ ಒಕ್ಕಣೆ ಮಾಡಬೇಕಿತ್ತು, ಅಂತಹದರಲ್ಲಿ ಮೆದೆಗೆ ಬೆಂಕಿ ಬಿದ್ದು ರಾಗಿ ಮೆದೆ ಸಂಪೂರ್ಣ ಭಸ್ಮವಾಗಿದೆ. ಈ ರೀತಿ ಆಗಿರುವುದರಿಂದ ನಮಗೆ ನಷ್ಟವಾಗಿದೆ…

Read More

ತುಮಕೂರು: ಪರಿಶಿಷ್ಟ ಜಾತಿಗಳ (SC) ಒಳ ಮೀಸಲಾತಿ ಕುರಿತಾದ ದೀರ್ಘಕಾಲದ ವಿವಾದವನ್ನು ಬಗೆಹರಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 27ರಂದು ವಿಶೇಷ ಸಭೆ ಕರೆದಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಶನಿವಾರ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಇರುವ ಗೊಂದಲ ಮತ್ತು ವಿವಾದಗಳಿಗೆ ಮಾರ್ಚ್ 27ರ ಸಭೆಯಲ್ಲಿ ಪರಿಹಾರ ಸಿಗುವ ಸಾಧ್ಯತೆಯಿದೆ. ಮೀಸಲಾತಿ ಸಮಸ್ಯೆ ಬಗೆಹರಿದ ತಕ್ಷಣವೇ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಲಿದೆ. ವಿಶೇಷವಾಗಿ ಪೊಲೀಸ್ ಇಲಾಖೆಯಲ್ಲಿ ಸುಮಾರು 8,000 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಈ ಸಭೆಯು ಒಳ ಮೀಸಲಾತಿ ಹೋರಾಟಗಾರರ ನಿರೀಕ್ಷೆಗಳನ್ನು ಪೂರೈಸುತ್ತದೆಯೇ ಮತ್ತು ನೇಮಕಾತಿ ಪ್ರಕ್ರಿಯೆಗೆ ವೇಗ ನೀಡುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಕಾಂಗ್ರೆಸ್ ಪಕ್ಷವು ಜನರಲ್ಲಿ ಭೀತಿ ಹುಟ್ಟಿಸುವ ಮೂಲಕ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಅಸ್ಸಾಂನ ಸಿಲ್ಚಾರ್‌ನಲ್ಲಿ ಸುಮಾರು 23,550 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಜಗತ್ತಿನಲ್ಲಿ ನಡೆಯುತ್ತಿರುವ ಯುದ್ಧಗಳ ತಾಪ ದೇಶದ ಜನರ ಮೇಲೆ ತಟ್ಟದಂತೆ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ವಹಿಸುತ್ತಿದೆ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಜನರಲ್ಲಿ ಭಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಮೋದಿ ಟೀಕಿಸಿದರು. “ಕಾಂಗ್ರೆಸ್‌ಗೆ ದೇಶದ ಅಥವಾ ಅಸ್ಸಾಂನ ಅಭಿವೃದ್ಧಿಯ ಬಗ್ಗೆ ಯಾವುದೇ ದೂರದೃಷ್ಟಿಯಿಲ್ಲ. ಅವರಿಗೆ ಗೊತ್ತಿರುವುದು ಮೋದಿಯನ್ನು ನಿಂದಿಸುವುದು ಮತ್ತು ವದಂತಿಗಳನ್ನು ಹರಡಿ ಜನರನ್ನು ದಾರಿ ತಪ್ಪಿಸುವುದು ಮಾತ್ರ” ಎಂದು ಕಿಡಿಕಾರಿದರು. ಸ್ವಾತಂತ್ರ್ಯಾನಂತರ ದಶಕಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್, ಬರಾಕ್ ಕಣಿವೆಯ ಅಭಿವೃದ್ಧಿಯನ್ನು ಕಡೆಗಣಿಸಿತ್ತು. ಆದರೆ…

Read More

ಬೆಂಗಳೂರು: ದೇಶದಲ್ಲಿ ಅಡುಗೆ ಅನಿಲ (LPG), ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಿದೆ ಎಂಬುದು ಕೇವಲ ವದಂತಿ. ಕಾಂಗ್ರೆಸ್ ಪಕ್ಷವು ರಾಜಕೀಯ ಲಾಭಕ್ಕಾಗಿ ಜನರಲ್ಲಿ ಗೊಂದಲ ಮೂಡಿಸಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಇಂಧನ ಕೊರತೆಯಾಗುತ್ತದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರು ಒಬ್ಬ ಅಪ್ರಬುದ್ಧ ನಾಯಕ ಎಂದು ಜೋಶಿ ಟೀಕಿಸಿದರು. ಸಿಲಿಂಡರ್ ಕೊರತೆ ಇದೆ ಎಂದು ಮುಷ್ಕರಕ್ಕೆ ಕರೆ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ದುರ್ದೈವದ ಸಂಗತಿ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಬಾರದು ಎಂದರು. ಮೊದಲು ಭಾರತ 20–22 ದೇಶಗಳಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ತರಿಸಿಕೊಳ್ಳುತ್ತಿತ್ತು, ಈಗ ಅದನ್ನು 40 ದೇಶಗಳಿಗೆ ಹೆಚ್ಚಿಸಲಾಗಿದೆ. ಇದರಿಂದಾಗಿ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ.  ಗ್ಯಾಸ್ ಕೊರತೆಯಾಗಬಹುದು ಎಂಬ ಆತಂಕದಿಂದ ಜನರು ಅಗತ್ಯಕ್ಕಿಂತ…

Read More

ಫರೂಕಾಬಾದ್ (ಉತ್ತರ ಪ್ರದೇಶ): ಅಡುಗೆ ಅನಿಲ (LPG) ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 75 ವರ್ಷದ ವೃದ್ಧರೊಬ್ಬರು ತಲೆತಿರುಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಮೊಹಲ್ಲಾ ಮಣಿಹರಿಯ ನಿವಾಸಿ ಮುಖ್ತಾರ್ ಅನ್ಸಾರಿ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರ ಬೆಳಗ್ಗೆ ಲಾಲ್ ಸರಾಯ್‌ನಲ್ಲಿರುವ ಗ್ಯಾಸ್ ಏಜೆನ್ಸಿಯ ಗೋದಾಮಿನ ಮುಂದೆ ಸಿಲಿಂಡರ್ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಏಕಾಏಕಿ ತಲೆತಿರುಗಿ ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಮುಖ್ತಾರ್ ಅನ್ಸಾರಿ ಅವರು ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ. ಈ ಘಟನೆಯ ಕುರಿತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಿಲಿಂಡರ್‌ಗಾಗಿ ಸಾಲಿನಲ್ಲಿ ನಿಂತು ವೃದ್ಧರೊಬ್ಬರು ಸಾವನ್ನಪ್ಪಿರುವುದು ಅತ್ಯಂತ ದುರದೃಷ್ಟಕರ. ಬಿಜೆಪಿ ನಾಯಕರು ತಮ್ಮ ಸರ್ಕಾರದ ತಪ್ಪುಗಳಿಂದ ಜನರ ಜೀವ ಹೋಗುತ್ತಿರುವುದನ್ನು ಒಪ್ಪಿಕೊಳ್ಳಬೇಕು” ಎಂದು…

Read More

ಬೀದರ್: ದೇಶದಲ್ಲಿ ಸದ್ಯ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೀವ್ರ ಕೊರತೆಯು ಕೇಂದ್ರದ ಬಿಜೆಪಿ ಸರ್ಕಾರವೇ ಹರಿಬಿಟ್ಟಿರುವ ಬಿಕ್ಕಟ್ಟು ಎಂದು ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೀದರ್‌ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಉದ್ಯಮಿ ಸ್ನೇಹಿತರನ್ನು ಓಲೈಸಲು ದೇಶದ ವಿದೇಶಾಂಗ ನೀತಿಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಪರಿಸ್ಥಿತಿ ಇರುವಾಗ ಪ್ರಧಾನಿ ಮೋದಿ ಅವರು ಇಸ್ರೇಲ್‌ಗೆ ಭೇಟಿ ನೀಡುವ ಅಗತ್ಯವೇನಿತ್ತು? ಅವರು ಇರಾನ್ ನಾಯಕರ ಮೇಲಿನ ದಾಳಿಯನ್ನು ಖಂಡಿಸದೆ ಕೇವಲ ಪ್ರಶಸ್ತಿ ಪಡೆಯಲು ಆಸಕ್ತಿ ತೋರಿದರು ಎಂದು ಟೀಕಿಸಿದರು. ದೇಶದ ಹಿತಕ್ಕಿಂತ ಹೆಚ್ಚಾಗಿ ಇಬ್ಬರು-ಮೂವರು ಉದ್ಯಮಿ ಗೆಳೆಯರಿಗಾಗಿ ವಿದೇಶಾಂಗ ನೀತಿಯನ್ನು ಬಲಿಕೊಡಲಾಗಿದೆ. ಇದರ ಪರಿಣಾಮವಾಗಿ ಇಂದು ದೇಶದ ಜನತೆ ಎಲ್‌ಪಿಜಿ ಕೊರತೆ ಅನುಭವಿಸುವಂತಾಗಿದೆ ಎಂದರು. ಕಳೆದ 14 ದಿನಗಳಿಂದ ಯುದ್ಧ ನಡೆಯುತ್ತಿದ್ದರೂ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಜೈಶಂಕರ್ ಅಥವಾ…

Read More