Author: admin

ಬಾಹ್ಯಾಕಾಶ ಯಾನಿಗಳು ಅಥವಾ ಗಗನಯಾತ್ರಿಗಳು ಎಷ್ಟು ವೇತನ ಪಡೆಯಬಹುದು? ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳುವ ವೇಳೆ ಮತ್ತು ಅಲ್ಲಿಂದ ಭೂಮಿಗೆ ಮರಳುವ ವೇಳೆ ಸದಾ ಜೀವ ಭಯದಲ್ಲೇ ಇರುವ ವಿಜ್ಞಾನಿಗಳಿಗೆ ಸಂಬಳ ಎಷ್ಟು ಗೊತ್ತೆ ? ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿ ಅಲ್ಲಿಯೇ ಸಿಕ್ಕಿಬಿದ್ದಿರುವ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್ ಮತ್ತಿತರರಿಗೆ ಕಳೆದ ವರ್ಷದ ವೇತನ ಶ್ರೇಣಿಯ ಅನ್ವಯ ವಾರ್ಷಿಕ 70 ಲಕ್ಷ ರು.ನಿಂದ 1.27 ಕೋಟಿ ರು.ವರೆಗೂ ವೇತನ ನಿಗದಿಪಡಿಸಲಾಗಿದೆ. ಆದರೆ ಈ ವೇತನ ಸೇನೆಯಿಂದ ಆಯ್ಕೆಯಾದ ಗಗನಯಾತ್ರಿಗಳಿಗೆ ಸ್ವಲ್ಪ ಕಡಿಮೆ ಇರುತ್ತದೆ. ಕಾರಣ, ಯಾತ್ರೆ ಬಳಿಕ ಅವರು ಸೇನೆಯ ಹುದ್ದೆಯಲ್ಲಿ ಮುಂದುವರೆಯುತ್ತಾರೆ. ಉದಾಹರಣೆಗೆ ಭಾರತೀಯ ಮೂಲದ ರಾಜಾ ಚಾರಿ ಅವರ ಮಾಸಿಕ ವೇತನ 8.92 ಲಕ್ಷ ರು.ನಷ್ಟಿದೆ. ಇನ್ನು ಯುರೋಪಿಯನ್ ಸ್ಪೇಸ್ ಏಜೆನ್ಸಿಯ ಗಗನಯಾತ್ರಿಗಳಲ್ಲಿ, ಆರಂಭಿಕ ಹಂತದಲ್ಲಿ ಮಾಸಿಕ 5.50 ಲಕ್ಷ ರು., ಬ್ರಿಟನ್‌ನಲ್ಲಿ 5.86 ಲಕ್ಷ ರು., ಫ್ರಾನ್ಸ್‌ನಲ್ಲಿ 7.23- 8.43 ಲಕ್ಷ ರು., ರಷ್ಯಾದಲ್ಲಿ 4.58…

Read More

ಕೋಲ್ಕತ್ತ: ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಪೊಲೀಸ್ ಆಯುಕ್ತ ವಿನಿತ್ ಗೋಯಲ್ ಅವರನ್ನು ಸುಳ್ಳುಪತ್ತೆ ಪರೀಕ್ಷೆಗೊಳಪಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಮಮತಾ ಬ್ಯಾನರ್ಜಿ ರಕ್ಷಿಸುತ್ತಿದ್ದಾರೆ. ಪ್ರಕರಣದ ನ್ಯಾಯಯುತ ತನಿಖೆಯಾಗಬೇಕಾದರೆ ಸರ್ವಾಧಿಕಾರಿ ಮಮತಾ ಬ್ಯಾನರ್ಜಿ ರಾಜೀನಾಮೆ ಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಘಟನೆಗಳು ಆತಂಕಕಾರಿಯಾಗಿವೆ. ಸಂವಿಧಾನವನ್ನು ಚೂರು ಚೂರು ಮಾಡುವಂತಿದೆ. ಈ ದೇಶದಲ್ಲಿ ವೈದ್ಯರಿದ್ದರೆ ಅದು ಮಮತಾ ಬ್ಯಾನರ್ಜಿ ಒಬ್ಬರೇ ಎನ್ನುವಂತಿದೆ, ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಈ ಹಿಂದೆ ಆತ್ಮಹತ್ಯೆ ಎಂದು ಹೇಳಿರುವ ಪೊಲೀಸ್ ಆಯುಕ್ತ ವಿನಿತ್ ಗೋಯಲ್ ಈ ಕೂಡಲೇ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ. ಸತ್ಯ ಹೊರಬರಬೇಕಾದರೆ ಮಮತಾ ಬ್ಯಾನರ್ಜಿ ಮತ್ತು…

Read More

ನವದೆಹಲಿ: ತುಮಕೂರು ಜಿಲ್ಲೆಯಲ್ಲಿ ಮತ್ತೆ ಎರಡು ರಸ್ತೆ ಕೆಳ ಸೇತುವೆ (ಆರ್‌ಯುಬಿ) ಹಾಗೂ ಒಂದು ರಸ್ತೆ ಮೇಲ್ಸೇತುವೆಯನ್ನು (ಆರ್ಒಬಿ) ರೈಲ್ವೆ ಇಲಾಖೆ ಮಂಜೂರು ಮಾಡಿದೆ. ಈ ಕಾಮಗಾರಿಗಳ ಮೊತ್ತ ರೂ.60 ಕೋಟಿ. ಕಾಮಗಾರಿಯ ಸಂಪೂರ್ಣ ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲಿದೆ ಎಂದು ರೈಲ್ವೆ ಹಾಗೂ ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. 13.44 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಲಿಪಾಳ್ಯ ರಸ್ತೆಯಲ್ಲಿ ಕೆಳ ಸೇತುವೆ, 36.62 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಂಚಗೆರೆ ಗೇಟ್ ನಲ್ಲಿ ರಸ್ತೆ ಮೇಲ್ಸೇತುವೆ ಹಾಗೂ ಬಂಡಿಹಳ್ಳಿ ರೋಡ್ ಗೇಟ್‌ನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಕೆಳ ಸೇತುವೆ ನಿರ್ಮಿಸಲಾಗುತ್ತದೆ ಎಂದು ಸೋಮಣ್ಣ ತಿಳಿಸಿದರು. ಐದು ಕಡೆಗಳಲ್ಲಿ 350 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಮೇಲ್ಸೇತುವೆ ಕಾಮಗಾರಿಗಳನ್ನು ರೈಲ್ವೆ ಇಲಾಖೆ ಜುಲೈ 15ರಂದು ಮಂಜೂರು ಮಾಡಿತ್ತು. ಈ ಯೋಜನೆಗಳ ಅನುಷ್ಠಾನಕ್ಕೆ ಭೂ ಸ್ವಾಧೀನಕ್ಕೆ ತಕ್ಷಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.…

Read More

ನೆಲಮಂಗಲ: ಸರ್ಕಾರ ಬಡ ಮಕ್ಕಳಿಗೆಂದು ಅನ್ನದಾಸೋಹ ಯೋಜನೆ ಅಡಿಯಲ್ಲಿ ಬಿಸಿಯೂಟ ನೀಡಲು ಕೋಟ್ಯಾಂತರ ರೂಪಾಯಿ ಬರಿಸುತ್ತಿದ್ದರೆ, ಇಲ್ಲಿ ನಾಲ್ಕು ಜನ ಆ ಮಕ್ಕಳ ಅನ್ನಕ್ಕೆ ಕನ್ನ ಹಾಕಲು ಯತ್ನಿಸಿ ಸಿಕ್ಕಿಹಾಕಿಕೊಂಡಂತಹ ಘಟನೆ ನೆಲಮಂಗಲ ಹೃದಯ ಭಾಗದಲ್ಲಿರುವದಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜು ನಡೆದಿದೆ. ದಿನಾಂಕ 26.08.2024ರ ಸೋಮವಾರದಂದು ಮಧ್ಯಾಹ್ನ ಸರಿಸುಮಾರು 3:20 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ನೆಲಮಂಗಲದಲ್ಲಿ ಬಿಸಿಯೂಟ ವ್ಯವಸ್ಥೆಯಲ್ಲಿ ನಿರ್ವಹಣೆ ಮಾಡುವಂತಹ ಸಹ ಶಿಕ್ಷಕರಾದ ಸುದರ್ಶನ್, ದ್ವಿತೀಯ ದರ್ಜೆ ಸಹಾಯಕರಾದ ಸಿದ್ದಲಿಂಗ ಮೂರ್ತಿ ರವರುಗಳು ಆಹಾರ ಪದಾರ್ಥಗಳನ್ನ ಕದ್ದು ಸಾಗಿಸುವಾಗ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು ರವರ ಕಣ್ಣಿಗೆ ಬಿದ್ದಿದ್ದು ತಕ್ಷಣದಲ್ಲಿ ಎಚ್ಚೆತ್ತ ಶಂಕರ್ ಗೌಡ್ರು ರವರು ಅಕ್ಷರ ದಾಸೋಹ ವಿಭಾಗದ ಸಹ ನಿರ್ದೇಶಕರಿಗೆ ಕರೆ ಮಾಡಿ ದೂರನ್ನ ಹೇಳಿದ್ದು ತಕ್ಷಣವೇ ಸಹ ನಿರ್ದೇಶಕರಾದ ಶಿವಕುಮಾರ್ ರವರು ಕದ್ದು ಸಾಗಿಸುತ್ತಿದ್ದ ಪದಾರ್ಥಗಳನ್ನು ಮರಳಿ ಶಾಲೆಗೆ ತರುವಂತೆ ಹೇಳಿರುತ್ತಾರೆ, ಆದರೆ ಇಲ್ಲಿವರೆಗೂ…

Read More

ಮುಂಬೈ: ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ನಡೆಸಿದ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ. ಮನೆಗೆ ಹೋಗಲು ನರ್ಸಿಂಗ್ ವಿದ್ಯಾರ್ಥಿನಿ ಆಟೋ ಹತ್ತಿದ್ದಳು. ದಾರಿ ಮಧ್ಯೆ ಆಟೋ ಚಾಲಕ ನೀಡಿದ ನೀರನ್ನು ಆಕೆ ಕುಡಿದಿದ್ದಳು. ಬಳಿಕ ಆಕೆ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಈ ವೇಳೆ ಆಟೋ ಚಾಲಕ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಪ್ರಜ್ಞೆ ಬಂದ ಬಳಿಕ ವಿದ್ಯಾರ್ಥಿನಿ ತನ್ನ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಬಳಿಕ ಆಟೋ ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಆಟೋ ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಿಸಿ ಕ್ಯಾಮರಾದಲ್ಲಿ ಕೃತ್ಯಕ್ಕೆ ಬಳಸಲಾದ ಆಟೋದ ಸುಳಿವು ದೊರಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಚೆನ್ನೈ: ಕಾಲಿವುಡ್ ನಟ ಬಿಜಿಲಿ ರಮೇಶ್ ಇಂದು ಬೆಳಗ್ಗೆ ನಿಧನರಾಗಿದ್ದು, ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜಿಲಿ ರಮೇಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ಬಿಜಿಲಿ ರಮೇಶ್ ಸಿನಿಮಾದಲ್ಲಿ ಪೋಷಕ ಪಾತ್ರಗಳು ಮತ್ತು ಯೂಟ್ಯೂಬ್‌ನಲ್ಲಿ ಪ್ರ್ಯಾಂಕ್ ವಿಡಿಯೋಗಳನ್ನು ಮಾಡಿ ಫೇಮಸ್ ಆಗಿದ್ದರು. ಕುಡಿತದ ಚಟಕ್ಕೆ ದಾಸರಾಗಿದ್ದ ಇವರು ಲಿವರ್ ಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾಗಿದ್ದರು. ಇದರೊಂದಿಗೆ ಆರ್ಥಿಕ ಸಂಕಷ್ಟವೂ ಕಾಡಿತ್ತು ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೀದರ: ನಗರದ ಭವಾನಿ ಮಂದಿರದಲ್ಲಿ ರವಿವಾರ ನೂತನವಾಗಿ ರಚನೆಯಾದ ಜಿಲ್ಲಾ ಉಪ್ಪಾರ ಸಮಾಜ ಸಂಘದ ಪದಾಧಿಕಾರಿಗಳ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಅಧ್ಯಕ್ಷ ತಾನಾಜಿ ಸಾಗರ್,ಗೌರವ ಅಧ್ಯಕ್ಷ ಜಗನಾಥ ಎಚ್ ಉಪ್ಪಾರ ಹಾಗೂ ಶಿವಾಜಿ ಭಾತಂಬ್ರಾ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಮಾರಂಭವನ್ನು ಉದ್ಘಾಟಿಸಿದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಗೌರವ ಅಧ್ಯಕ್ಷ ಶಿವಾಜಿ ಭಾತಂಬ್ರಾ, ನಮ್ಮ ಸಮಾಜ ಹಿಂದುಳಿದ ವರ್ಗಕ್ಕೆ ಸೇರಿದ್ದು ನಮ್ಮ ಸಮಾಜದ ತುಂಬಾ ಜನರು ಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ.ಆದರೂ ತಮ್ಮ ಮಕ್ಕಳ ಉಜ್ಜಲು ಭವಿಷ್ಯಕ್ಕಾಗಿ ಹಗಲಿರುಳೂ ಎನ್ನದೆ ಶ್ರಮಪಟ್ಟು ಮಕ್ಕಳಿಗೆ ಶಿಕ್ಷಣ ನೀಡಿ ಹೆಚ್ಚು ಅಂಕ ಪಡೆಯಲು ಕಾರಣಿಕರ್ತರಾದ ಪಾಲಕರ ಕಾರ್ಯಕ್ಕೆ ಶ್ಲಾಘನೀಯ ವ್ಯಕ್ತಪಡಿಸಿದ ಅವರು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ…

Read More

ಬೆಂಗಳೂರು: ನಟ ದರ್ಶನ್ ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವ ವಿಚಾರ ಚರ್ಚೆಯಾಗ್ತಿದೆ. ಈ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಗೃಹ ಸಚಿವರು, ಜೈಲು ಪ್ರಾಧಿಕಾರವು ಕೋರ್ಟಿನ ನಿರ್ದೇಶನ ಮೇರೆಗೆ ನಟ ದರ್ಶನ್ ಅನ್ನು ಸ್ಥಳಾಂತರ ಮಾಡಲಿದೆ. ವಿಚಾರಣಾ ಖೈದಿ ಆಗಿರುವ ಹಿನ್ನೆಲೆಯಲ್ಲಿ ಕೆಲವೊಂದು ನಿಯಮಗಳಡಿ ಸ್ಥಳಾಂತರ ಆಗಲಿದೆ. ಇನ್ನು ಎರಡು ಮೂರು ದಿನಗಳಲ್ಲಿ ದರ್ಶನ್ ಬೇರೆ ಜೈಲಿಗೆ ಶಿಫ್ಟ್ ಆಗಲಿದ್ದಾರೆ ಎಂದು ತಿಳಿಸಿದರು. ಪರಪ್ಪನ ಅಗ್ರಹಾರ ಜೈಲು ಮೂರು ವಿಭಾಗ ಮಾಡುವ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಭದ್ರತೆ ದೃಷ್ಟಿಯಿಂದ ಆಂತರಿಕ ಆಡಳಿತದ ಸೆಟಪ್ ಮಾಡಬಹುದು. ಜೈಲನ್ನು ಆದರೆ ಮೂರು ಭಾಗ ಮಾಡಲು ಆಗುವುದಿಲ್ಲ. ಬ್ಲಾಕ್ ವಾರು, ಬ್ಯಾರಕ್ ವಾರು ವಿಭಾಗಗಳಾಗಿ ಮಾಡಬಹುದು. ಅದು ಜೈಲು ಆಡಳಿತದವರಿಗೆ ಸಂಬಂಧಿಸಿದೆ ಎಂದು ಅವರು ಸ್ಪಷ್ಟಪಡಿಸಿದರು. ಸೋಮವಾರ ನಾನು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲಿಸಿದ್ದೇವೆ.…

Read More

ಯಾದಗಿರಿ: ತಂಜಿಮ್ ಉಲ್ ಮುಸ್ಲೆಮಿನ್ ಮತ್ತು ಬೈತುಲ್ ಮಾಲ್ ಜಿಲ್ಲಾ ಅಧ್ಯಕ್ಷ, ನಗರದ ಕಾಂಗ್ರೆಸ್ ಮುಖಂಡ ಲಾಯಕ್ ಹುಸೇನ್ ಬಾದಲ್ ಮಂಗಳವಾರ ನಿಧನರಾಗಿದ್ದಾರೆ. 69 ವರ್ಷ ವಯಸ್ಸಿನ ಲಾಯಕ್ ಹುಸೇನ್ ಬಾದಲ್ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಮೂವರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಪ್ರಾರ್ಥನೆಯನ್ನು ಮಂಗಳವಾರ ಸಂಜೆ 5 ಗಂಟೆಗೆ ಅಸರ್ ಮಸೀದಿ ಚೌಕ್ ಹುಸೇನಿ ಆಲಂ ಗಾಂಧಿ ಚೌಕ್ ಸಮೀಪ ಸಲ್ಲಿಸಲಾಗುವುದು. ಹಜರತ್ ಸೈಯದ್ ಶಾ ಜೀವನ್ ಶಾ ಖಬರಸ್ತಾನ್ ದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಪಾವಗಡ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲ್ಲೂಕಿನ ವೈ.ಎನ್.ಹೊಸಕೋಟೆಯ ವಾಸವಿ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಧಾ–ಕೃಷ್ಣ ವೇಷ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು150 ಮಕ್ಕಳು ರಾಧಾ ಮತ್ತು ಶ್ರೀಕೃಷ್ಣವೇಷವನ್ನು ಧರಿಸಿಕೊಂಡು ಬಂದಿದ್ದು ಈ ದೃಶ್ಯ ಗಳು ತುಂಬಾ ಆಕರ್ಷಣೀಯ ವಾಗಿದ್ದವು. ಬಾಲಕರು ಕೃಷ್ಣ ನಾಗಿ, ಬಾಲಕಿಯರು ರಾಧೆಯಾಗಿ ವೇಷಧರಿಸುವ ಮೂಲಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬ ಕ್ಕೆ ಮೆರುಗನ್ನು ನೀಡಿದರು. ಶಾಲೆಯಲ್ಲಿ ಮಕ್ಕಳು ಹಾಡು, ನೃತ್ಯ, ಮೊಸರು ಕುಡಿಕೆ ಹೊಡೆಯುವ ಮೂಲಕ ಸಂಭ್ರಮಿಸಿದರು. ಆಡಳಿತ ಮಂಡಳಿಯ ನಿರ್ದೇಶಕರು ಹಾಗು ಆಡಳಿತಾಧಿಕಾರಿಗಳಾದ ಶ್ರೀನಿವಾಸ್ ರವರು ಹಾಗು ಶಿಕ್ಷಕರು ಪೋಷಕರು ಮಕ್ಕಳ ಜೊತೆ ಸಂಭ್ರಮಿಸಿ ಶುಭಾಶಯಗಳನ್ನು ಕೋರಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More