Author: admin

ಬೆಂಗಳೂರು: ಜೈಲಿನಲ್ಲಿ ನಟ ದರ್ಶನ್ ಹಾಗೂ ಕುಖ್ಯಾತ ರೌಡಿಗಳಿಗೆ ರಾಜಾತಿಥ್ಯ ನೀಡಿದ ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕಾರಾಗೃಹಗಳು ಮತ್ತು ಸುಧಾರಣಾ ಸೇವೆಗಳ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅಧಿಕಾರಿಗಳನ್ನ ತರಾಟೆಗೆತ್ತಿಕೊಂಡಿದ್ದಾರೆ. ಇಂದು ಬೆಳಗ್ಗೆ ಜೈಲಿಗೆ ಭೇಟಿ ನೀಡಿದ ಅವರು, ನಿಮ್ಮ ಕೆಲಸಗಳಿಂದ ಹಿರಿಯ ಅಧಿಕಾರಿಗಳು ತಲೆ ತಗ್ಗಿಸುವಂತಾಗಿದೆ. ಈ ಘಟನೆಯಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲದೆ ಬೇರೆ ಖೆೈದಿ ಅಥವಾ ವಿಚಾರಣಾ ಖೆೈದಿಗಳಿಗೆ ಈ ರೀತಿಯ ರಾಜಾತಿಥ್ಯ ನೀಡಲಾಗಿದೆಯೇ?, ಬೇರೆ ಇನ್ನೇನಾದರೂ ಸವಲತ್ತು ಒದಗಿಸಲಾಗಿದೆಯೇ?, ಒಂದು ವೇಳೆ ಆ ರೀತಿಯ ಸೌಲಭ್ಯಗಳನ್ನು ಕೊಡುತ್ತಿದ್ದರೆ ತಕ್ಷಣ ನಿಲ್ಲಿಸಿ, ಇಲ್ಲದಿದ್ದರೆ ನಿಮ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು. ಪ್ರತಿ ಸಭೆಯಲ್ಲೂ ಸಹ ನಾವು ಪದೇಪದೇ ಜೈಲಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿಗಳಿಗೆ ತಿಳಿಸಿದ್ದೇವೆ. ಆದರೂ ಸಹ ಇಂತಹ ಕೆಲಸ ಮಾಡುತ್ತೀರಿ. ಯಾರು, ಎಷ್ಟೇ ದೊಡ್ಡವರಾದರೂ…

Read More

ಬೆಂಗಳೂರು: ನಟ ದರ್ಶನ್ ಹಾಗೂ ವಿಲ್ಸನ್ ಗಾರ್ಡನ್ ನಾಗ ಜೈಲಿನಲ್ಲಿ ಭೇಟಿ ಮಾಡಿರುವ ಫೋಟೋ, ವಿಡಿಯೋ ವೈರಲ್ ಮಾಡಿರುವ ರೌಡಿ ವೇಲುಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ ಎಂದು ವರದಿಯಾಗಿದೆ. ಈ ಪೋಟೊಗಳನ್ನ ವೈರಲ್‌ ಮಾಡಿರೋದು ನೀನೆ ಎಂದು ನಾಗ ವೇಲು ಮೇಲೆ ಮುಗಿಬಿದ್ದು ಹಲ್ಲೆ ನಡೆಸಿದ್ದಾನೆ.  ಸಿದ್ದಾಪುರ ಮಹೇಶನ ಕೊಲೆ ಕೇಸಲ್ಲಿ ಜೈಲು ಸೇರಿದ್ದ ವೇಲು, ಈಗ ವಿಲ್ಸನ್ ಗಾರ್ಡನ್ ನಾಗನ ಕೋಪಕ್ಕೆ ಗುರಿಯಾಗಿದ್ದಾನೆ ಅಂತ ಹೇಳಲಾಗಿದೆ. ವಿಲ್ಸನ್ ಗಾರ್ಡನ್ ನಾಗ ಸೇರಿ ಒಟ್ಟು ಹತ್ತು ಜನರಿಂದ ವೇಲು ಮೇಲೆ ತೀವ್ರ ಹಲ್ಲೆ ನಡೆದಿದೆ ಅಂತ ಹೇಳಲಾಗಿದೆ. ಒಟ್ಟಿನಲ್ಲಿ ಡಿ ಬಾಸ್ ಕಾಲಿಟ್ಟ ಕಡೆಗಳೆಲ್ಲ, ಸಮಸ್ಯೆಗಳು ಸೃಷ್ಟಿಯಾಗ್ತಿವೆ. ಜೈಲಿನಲ್ಲಿ ಫೋಟೋ ವೈರಲ್ ಆದ ಹಿನ್ನೆಲೆ ದರ್ಶನ್ ಅವರಿಗೆ ಸದ್ಯ ಜಾಮೀನು ಸಿಗುವುದು ಕೂಡ ಅನುಮಾನ ಅಂತ ಹೇಳಲಾಗ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲ ಖೈದಿಗಳ ಸ್ವರ್ಗ. ದುಡ್ಡು ಕೊಟ್ಟರೆ ಅಲ್ಲಿ ಎಲ್ಲವೂ ಸಿಗುತ್ತದೆ ಎಂದು ಜೈಲಿನಿಂದ ಬಿಡುಗಡೆಯಾದ ಕೈದಿಯೊಬ್ಬ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾನೆ. ಜೈಲಿನಲ್ಲಿ ಎಲ್ಲರ ಕೈಯಲ್ಲಿ ಮೊಬೈಲ್ ಇರುತ್ತದೆ.  ಹಾಸಿಗೆಯ ಬೆಡ್ ಶೀಟ್ ನೊಳಗೆ ಮೊಬೈಲ್ ಅಡಗಿಸಿಡಲಾಗುತ್ತದೆ. ನೆಟ್ ವರ್ಕ್ ಸಿಗದಂತೆ ಜಾಮರ್ ಅಳವಡಿಸಿದ್ರೂ ಗೋಡೆಗೆ ಮೊಬೈಲ್ ತಾಗಿಸಿದ್ರೆ ನೆಟ್ ವರ್ಕ್ ಸಿಗುತ್ತದೆ ಎಂದು ಆ ವ್ಯಕ್ತಿ ಹೇಳಿದ್ದಾರೆ. ಬಡ್ಡಿ ದಂಧೆ ಇಲ್ಲಿ ನಡೆಯುತ್ತದೆ. ಎಣ್ಣೆ ಬೇಕಾ ..? ಗಾಂಜಾ ಬೇಕಾ..?  ಸಿಗುತ್ತದೆ. ಹೊರಗಡೆಯಿಂದ ಚಿಕನ್ ಮಟನ್ ತರಿಸಿಕೊಳ್ಳಬಹುದು. ನಾನು ಈ ಸೌಲಭ್ಯ ಪಡೆಯಲು 1.30 ಲಕ್ಷ ಕೊಟ್ಟಿದ್ದೇನೆ. ಯಾವ ರೂಮಿನಲ್ಲೂ ಸಿಸಿ ಕ್ಯಾಮೆರಾ ಇಲ್ಲ. ಹೊರಗಡೆ ಆವರಣದಲ್ಲಿ ಮಾತ್ರ ಇದೆ. 35 ಸಾವಿರ ಕೊಟ್ಟರೆ ಹುಡುಗಿಯರನ್ನೂ ಸಹ ಕಳುಹಿಸುತ್ತಾರೆ ಅಂತ ಖೈದಿ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ನವದೆಹಲಿ: ಟ್ರಕ್ ಹರಿದ ಪರಿಣಾಮ ಫುಟ್ಪಾತ್ ಮೇಲೆ ಮಲಗಿದ್ದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಮುಂಜಾನೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ. ನಿದ್ದೆಯ ಮತ್ತಿನಲ್ಲಿ ಟ್ರಕ್ ಚಲಾಯಿಸುತ್ತಿದ್ದ ಚಾಲಕ ಅಪಘಾತಕ್ಕೆ ಕಾರಣವಾಗಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ವೊಂದು ನೇರವಾಗಿ ಫುಟ್‌ ಪಾತ್‌ ಮೇಲೆ ಹತ್ತಿದ್ದು, ಅಲ್ಲಿ ಮಲಗಿದ್ದ ಐವರ ಮೇಲೆ ಹರಿದಿದೆ. ಈ ವೇಳೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಗೊಂಡವರನ್ನು ಶಾಸ್ತ್ರಿ ಪಾರ್ಕ್ ಕೊಳೆಗೇರಿ ನಿವಾಸಿಗಳಾದ ಮುಸ್ತಾಕ್ (35), ಗಾಂಧಿನಗರ ನಿವಾಸಿ ಕಮಲೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಅದರ ದಾಖಲೆಗಳ…

Read More

ಕೊಲ್ಕತ್ತಾ: ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿ ಸಂಜಯ್ ರಾಯ್ ವೈದ್ಯಯ ಮೇಲೆ ಅತ್ಯಾಚಾರ ಕೊಲೆ ನಡೆಸುವುದಕ್ಕೂ ಮುನ್ನ ಮತ್ತೊಬ್ಬ ಮಹಿಳೆಗೆ ಕಿರುಕುಳ ನೀಡಿದ್ದ ಎನ್ನುವ ಮಾಹಿತಿ ಬಯಲಾಗಿದೆ. ಆರೋಪಿ ಸಂಜಯ್ ರಾಯ್ ಭಾನುವಾರ ಪಾಲಿಗ್ರಾಫ್ ಪರೀಕ್ಷೆಯಲ್ಲಿ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.  ಸಂಜೋಯ್ ರಾಯ್ ಸುಳ್ಳು ಪತ್ತೆ ಪರೀಕ್ಷೆಯ ಸಮಯದಲ್ಲಿ ಅಪರಾಧಕ್ಕೆ ಕೆಲವು ಗಂಟೆಗಳ ಮೊದಲು ತಮ್ಮ ಸ್ನೇಹಿತನೊಂದಿಗೆ ರೆಡ್ ಲೈಟ್ ಪ್ರದೇಶಕ್ಕೆ ಭೇಟಿ ನೀಡಿದ್ದ ಎಂದು ಸಿಬಿಐ ಅಧಿಕಾರಿಗಳಿಗೆ ತಿಳಿಸಿದ್ದಾನೆ. ಆ ಪ್ರದೇಶದಲ್ಲಿ ಆತ ಯಾರೊಂದಿಗೂ ಲೈಂಗಿಕ ಸಂಬಂಧ ನಡೆಸಿರಲಿಲ್ಲವಂತೆ. ಆದ್ರೆ ಬೀದಿಯಲ್ಲಿ ಇನ್ನೊಬ್ಬ ಮಹಿಳೆಗೆ ಕಿರುಕುಳ ನೀಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೇ ಘಟನೆ ನಡೆದ ದಿನ  ಸಂಜಯ್ ರಾಯ್ ತನ್ನ ಗೆಳತಿಗೆ ವೀಡಿಯೊ ಕರೆ ಮಾಡಿ ಅವಳ ನಗ್ನ ಫೋಟೋಗಳನ್ನು ಕೇಳಿದನು.  ಘಟನೆ ನಡೆದ ರಾತ್ರಿ ಸಂಜಯ್ ರಾಯ್ ತನ್ನ ಸ್ನೇಹಿತನೊಂದಿಗೆ…

Read More

ಖ್ಯಾತ ನಟ ಡಾರ್ಲಿಂಗ್ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟಿ ಆಶಾ ಶರ್ಮಾ(88) ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಏಕ್ತಾ ಕಪೂರ್‌ ಅವರ ಖ್ಯಾತ ಕಾರ್ಯಕ್ರಮ ʻಕುಂಕುಮ್‌ ಭಾಗ್ಯʼ ಮೂಲಕ ಆಶಾ ಶರ್ಮಾ ಜನಪ್ರಿಯರಾಗಿದ್ದರು. ʻಕುಂಕುಮ್‌ ಭಾಗ್ಯʼ ಡ್ರಾಮಾ ಶೋ ಮೂಲಕ ಜನಪ್ರಿಯವಾಗಿದ್ದ ನಟಿ ಹೆಚ್ಚಾಗಿ ತಾಯಿ ಮತ್ತು ಅಜ್ಜಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಕೊನೆಯದಾಗಿ ಪ್ರಭಾಸ್‌ ಹಾಗೂ ಕೃತಿ ಸನೋನ್‌ ನಟನೆಯ ʻಆದಿಪುರುಷ್‌ʼ ಸಿನಿಮಾದಲ್ಲಿ ʻಶಬರಿʼ ಪಾತ್ರ ನಿರ್ವಹಿಸಿದ್ದರು. ಇವರ ಪಾತ್ರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಆಶಾ ಶರ್ಮಾ ನಿಧನಕ್ಕೆ ಸಿನಿ ಮತ್ತು ಟಿವಿ ಆರ್ಟಿಸ್ಟ್ಸ್ ಅಸೋಸಿಯೇಷನ್ ಎಕ್ಸ್‌ ಖಾತೆಯಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದೆ. ಜೊತೆಗೆ ಹಿರಿಯ ನಟಿ ಹೇಮಾ ಮಾಲಿನಿ, ಪ್ರೇಮ್ ಚೋಪ್ರಾ, ಅರುಣಾ ಇರಾನಿ ಮತ್ತು ನಿರುಪಾ ರಾಯ್ ಸೇರಿದಂತೆ ಬಾಲಿವುಡ್‌ನ ಹಿರಿಯ ನಟ–ನಟಿಯರು ಕಂಬನಿ ಮಿಡಿದಿದ್ದಾರೆ.…

Read More

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಕೊರಳಿಗೆ ಸುತ್ತಿಕೊಂಡಿರುವ ಕುಣಿಕೆ ಇನ್ನಷ್ಟು ಬಿಗಿಯಾಗುತ್ತಾ ಸಾಗುತ್ತಿದೆ. ದರ್ಶನ್ ಅನ್ನು ಪ್ರಕರಣದ ಎ1 ಆರೋಪಿಯನ್ನಾಗಿ ಮಾಡಲು ಪೊಲೀಸರು ಈಗಾಗಲೇ ಸಿದ್ಧರಾಗಿದ್ದಾರೆ. ಪೊಲೀಸರು ಚಾರ್ಜ್ ಶೀಟ್ ಸಲ್ಲಿಸುತ್ತಿದ್ದಂತೆ ತಮಗೆ ಜಾಮೀನು ಸಿಕ್ಕಿ ಬಿಡುತ್ತದೆ ಎಂಬ ನಿರೀಕ್ಷೆಯಲ್ಲಿ ದರ್ಶನ್ ಇದ್ದರು. ಆದರೆ ಈಗ ಎಲ್ಲವೂ ಉಲ್ಟಾ ಆಗಿದೆ. ದರ್ಶನ್ ಗೆ ಈ ಪ್ರಕರಣದಿಂದ ಮುಕ್ತಿ ಸಿಗುವುದು ಬಹಳ ಕಷ್ಟ ಎನ್ನಲಾಗುತ್ತಿದೆ. ಆದರೆ ಈ ಸಂಕಷ್ಟವನ್ನು ತಮಗೆ ತಾವೇ ತಂದುಕೊಂಡಿದ್ದಾರೆ ನಟ ದರ್ಶನ್. ದರ್ಶನ್ ಪರವಾಗಿ ಈ ಮೊದಲು ರಂಗನಾಥ ರೆಡ್ಡಿ ಹಾಗೂ ಅವರ ಸಹಾಯಕರು ವಾದಿಸುತ್ತಿದ್ದರು. ಅದಾದ ಬಳಿಕ ದರ್ಶನ್ ಪರವಾಗಿ ನಾಡಿನ ಹೆಸರಾಂತ ಕ್ರಿಮಿನಲ್ ವಕೀಲ ಸಿವಿ ನಾಗೇಶ್ ಅವರನ್ನು ನೇಮಿಸಲಾಯಿತು. ಸಿವಿ ನಾಗೇಶ್ ಅವರ ಸಹಾಯಕರು ದರ್ಶನ್ ಪರವಾಗಿ ಈಗಾಗಲೇ ಕೆಲವು ಅರ್ಜಿಗಳನ್ನು ದಾಖಲಿಸಿ ಹೈಕೋರ್ಟ್​ನಲ್ಲಿ ವಾದ ಮಂಡಿಸಿದ್ದರು. ಆದರೆ ಈಗ ಪ್ರಕರಣ ಜಟಿಲವಾದಂತೆ ಪ್ರಮುಖ ವಕೀಲರೊಬ್ಬರು ದರ್ಶನ್ ಪ್ರಕರಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.…

Read More

ಹೊಸಪೇಟೆ (ವಿಜಯನಗರ): ಗುಂಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ನಗರಸಭೆ 7ನೇ ವಾರ್ಡ್‌ನ ಅನಂತಶಯನಗುಡಿಯಲ್ಲಿ ನಡೆದಿದ್ದು, ಘಟನೆ ಹಿನ್ನೆಲೆ ಸೋಮವಾರ ನಗರಸಭೆ ಸದಸ್ಯರು ನಗರಸಭಾ ಕಚೇರಿ ಮುಂಭಾಗ ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಪಕ್ಷಾತೀತವಾಗಿ ಧರಣಿ ನಡೆಸಿದ ಸದಸ್ಯರು ಪೌರಾಯುಕ್ತ ಚಂದ್ರಪ್ಪ ಅವರ ಅಮಾನತಿಗೆ ಒಕ್ಕೊರಲ ಒತ್ತಾಯ ಮಾಡಿದರು. ಸದ್ಯ ನಗರಸಭೆಯಲ್ಲಿ ಅಧ್ಯಕ್ಷರಿಲ್ಲ, ಜಿಲ್ಲಾಧಿಕಾರಿ ಅವರೇ ಆಡಳಿತಾಧಿಕಾರಿ ಆಗಿದ್ದು, ಅವರ ಅಧಿಕಾರ ಅವಧಿಯಲ್ಲಿ ಮಗು ಸತ್ತಿದೆ, ಸ್ವತಃ ಡಿ.ಸಿ ಅವರೇ ಸ್ಥಳಕ್ಕೆ ಬರಬೇಕು, ಅಲ್ಲಿಯವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಸದಸ್ಯರು ಪಟ್ಟು ಹಿಡಿದರು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಧರಣಿ ಸ್ಥಳಕ್ಕೆ ಮಧ್ಯಾಹ್ನ 1 ಗಂಟೆಯಾದರೂ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಬರಲಿಲ್ಲ, ಪೌರಾಯುಕ್ತರು, ಶಾಸಕರು ಸಹ ಬರಲಿಲ್ಲ. ಹೀಗಾಗಿ ಸಂಜೆಯವರೆಗೂ ಧರಣಿ ಮುಂದುವರಿಸಲು ಸದಸ್ಯರು ನಿರ್ಧರಿಸಿದರು. 7ನೇ ವಾರ್ಡ್ ಸದಸ್ಯೆ ಕನಕಮ್ಮ ಅವರು 15 ದಿನದ ಹಿಂದೆಯೇ ಜನವಸತಿ ಪ್ರದೇಶದಲ್ಲಿ ಖಾಸಗಿ ಸ್ಥಳದಲ್ಲಿ ಇರುವ ಗುಂಡಿಯ ಬಗ್ಗೆ ಆಯುಕ್ತರಿಗೆ ದೂರು ಕೊಟ್ಟಿದ್ದರು…

Read More

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ತೂಗುದೀಪ ಅವರು ಜೈಲಿನೊಳಗೆ ವಿಐಪಿ ಟ್ರೀಟ್ ಮೆಂಟ್ ಪಡೆಯುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ನಡುವೆ ಜೈಲಿನ ಸಿಬ್ಬಂದಿಗಳೇ ನಟ ದರ್ಶನ್ ಗೆ ಮಿಲ್ಟ್ರಿ ಹೋಟೆಲ್ ನಿಂದ ಬಿರಿಯಾನಿ, ಎಣ್ಣೆ ಸರಬರಾಜು ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.ವೈರಲ್ ಆಗಿರುವ ಚಿತ್ರವನ್ನು ಕಾರಾಗೃಹ ಇಲಾಖೆ ಗಮನಿಸಿದ್ದು, ಉನ್ನತ ಅಧಿಕಾರಿಗಳಿಗೆ ಸಮನ್ಸ್ ನೀಡಿದೆ. ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಏಳು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದು, ತನಿಖಾ ವರದಿ ಕೇಳಿದೆ.ಇನ್ನೂ ವೈರಲ್ ಆಗಿರುವ ಈ ಚಿತ್ರದಲ್ಲಿ ದರ್ಶನ್ ಜೈಲಿನೊಳಗಿನ ಉದ್ಯಾನವನದಲ್ಲಿ ಕುಳಿತು ಪಾನೀಯ ಮತ್ತು ಸಿಗರೇಟಿನೊಂದಿಗೆ ವಿಶ್ರಾಂತಿ ಪಡೆಯುತ್ತಿರುವುದನ್ನು ಕಾಣಬಹುದು. ಕೆಲವು ಕೈದಿಗಳು ಸಹ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.ದರ್ಶನ್ ಬಳಿ ಕುಳಿತಿರುವ ವ್ಯಕ್ತಿಗಳಲ್ಲಿ ಒಬ್ಬರು (ಕಪ್ಪು ಶರ್ಟ್ ಧರಿಸಿ) ಕುಖ್ಯಾತ ಇತಿಹಾಸ ಶೀಟರ್ ವಿಲ್ಸನ್ ಗಾರ್ಡನ್ ನಾಗಾ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವಿಲ್ಸನ್ ಗಾರ್ಡನ್ ನಾಗ…

Read More

ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಬಳಕೆಯಲ್ಲಿರುವ ಜನಪ್ರಿಯ ಮೆಸೇಜಿಂಗ್ ಆ್ಯಪ್ ಟೆಲಿಗ್ರಾಂನಲ್ಲಿ, ನಿಯಂತ್ರಕರ ಕೊರತೆಯಿಂದಾಗಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎನ್ನುವ ಆರೋಪದ ಮೇಲೆ ಟೆಲಿಗ್ರಾಂ ಸಿಇಒ ಪಾವೆಲ್ ಡುರೊವ್ ಅವರನ್ನು ಪ್ಯಾರಿಸ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪ್ಯಾರಿಸ್ ನ ಹೊರವಲಯದಲ್ಲಿರುವ ಬೋರ್ಗೆಟ್ ವಿಮಾನ ನಿಲ್ದಾಣಕ್ಕೆ ಖಾಸಗಿ ಜೆಟ್ ನಲ್ಲಿ ಬಂದಿಳಿದ ಪಾವೆಲ್ ಅವರನ್ನು ಶನಿವಾರ ಸಂಜೆ ಪೊಲೀಸರು ಬಂಧಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಪ್ರಾಥಮಿಕ ತನಿಖೆಗಾಗಿ ಫ್ರಾನ್ಸ್ ಪೊಲೀಸರು ಅರೆಸ್ಟ್ ವಾರೆಂಟ್ ಹೊರಡಿಸಿದ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ. ರಷ್ಯಾ, ಉಕ್ರೇನ್, ಸೋವಿಯತ್ ಯುನಿಯನ್ ದೇಶಗಳಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಟೆಲಿಗ್ರಾಂ ಶತಕೋಟಿಗೂ ಹೆಚ್ಚು ಬಳಕೆದಾರರನ್ನು ಹೊಂದಿದೆ ಪಾವೆಲ್ ಬಂಧನದ ಕುರಿತು ಇದುವರೆಗೆ ಟೆಲಿಗ್ರಾಂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅಲ್ಲದೆ ಫ್ರೆಂಚ್ ಆಂತರಿಕ ಸಚಿವಾಲಯ ಮತ್ತು ಪೊಲೀಸರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ರಾಯಿಟರ್ಸ್ ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More