Author: admin

ಕೊರಟಗೆರೆ: ರಿಯಲ್ ಎಸ್ಟೇಟ್ ದಂಧೆಕೋರರಿಂದ ರಾಜಕಾಲುವೆ ಒತ್ತುವರಿಯ ಪರಿಣಾಮ ರಸ್ತೆ ಜಮೀನುಗಳಿಗೆ ನೀರು ನುಗ್ಗಿರುವ ಘಟನೆ ಕೊರಟಗೆರೆ ಪಟ್ಟಣದ ಮೂಡಲಪಣ್ಣೆ ಗ್ರಾಮದಲ್ಲಿ ನಡೆದಿದೆ. ರೈತರು ಸಾಲ ಸೋಲ ಮಾಡಿ ಬಿತ್ತನೆ ಮಾಡಿದ್ದ ಬೆಳೆ ಸಂಪೂರ್ಣ ಮಳೆಯ ನೀರಿಗೆ ಆಹುತಿಯಾಗಿದೆ.  20ಕ್ಕೂ ಹೆಚ್ಚು ಮನೆಗಳಿಗೆ ಓಡಾಡಲು ಇದ್ದ ರಸ್ತೆ ಕೂಡ ನಾಶವಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ದಂಧೆಕೋರರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.  ಕೊರಟಗೆರೆಯ 90% ಚರಂಡಿ ಕೊಚ್ಚೆ ನೀರು ಸೇರಿದಂತೆ ಗಂಗಾಧರೇಶ್ವರ ಕೆರೆ, ಗೊಬಲಕಟ್ಟೆ ಕೆರೆ, ಸೇರಿದಂತೆ ಇನ್ನೂ ನಾಲ್ಕೈದು ಕೆರೆ ನೀರು ಬಂದು ಓಡಾಡಲು ಆಗದಂತೆ ರಸ್ತೆ ಹಾಳಾಗಿದೆ. ನಕ್ಷೆಯಲ್ಲಿ ಇರುವಂತೆ ರಾಜಕಾಲುವೆ ಇದ್ದಿದ್ದರೆ ಈ ಪಜೀತಿ ಆಗುತ್ತಿರಲಿಲ್ಲ. ರಿಯಲ್ ಎಸ್ಟೇಟ್ ಉದ್ಯಮಿಗಳ ಲಾಭಕ್ಕಾಗಿ ಇಂತಹ ಅವ್ಯವಸ್ಥೆ ಸೃಷ್ಟಿಸಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ. ಈ  ದಾರಿಯಲ್ಲಿ ಶಾಲಾ ಕಾಲೇಜುಗಳಿಗೆ ಮಕ್ಕಳು ಹಾಗೂ ವಯೋವೃದ್ಧರು ಸಹ ಇದೆ ದಾರಿಯಲ್ಲಿ ಪ್ರತಿನಿತ್ಯ ಓಡಾಡಬೇಕು.  ಏನು…

Read More

ಬಹಳ ಹಿಂದೆ ಸೂರ್ಯಕೇತು ಎಂಬ ವ್ಯಕ್ತಿಯಿದ್ದ. ಇವನು ತುಂಬಾ ಬಡವ ಮತ್ತು ಮಹಾನ್ ದೈವಭಕ್ತ. ದೇವರ ಧ್ಯಾನಕ್ಕೆ ಕುಳಿತು ಬಹಳ ಹೊತ್ತು ಧ್ಯಾನ ಮಾಡಿ ನಂತರ ಸಿಕ್ಕ ಕೆಲಸ ಮಾಡಿಕೊಂಡು ಬಂದ ಹಣದಿಂದ ಜೀವನ ನಡೆಸುತ್ತಿದ್ದ. ಒಂದು ದಿನ ಅವನಿಗೆ ತಾನೂ ಕೂಡ ಶ್ರೀಮಂತನಾಗಬೇಕು ಎಂದು ಆಸೆ ಪಟ್ಟ ಅದಕ್ಕಾಗಿ ಯೋಚಿಸಿದ ದೇವರಲ್ಲಿ ಬೇಡಿದರೆ ತಾನೆ ದೇವರು ನಮಗೆ ಬೇಡಿದ್ದು ನೀಡುವುದು ನಾವು ಏನನ್ನೂ ಕೇಳಿಕೊಳ್ಳದಿದ್ದರೆ ನಮ್ಮ ಮೊರೆ ಅವನಿಗೆ ಹೇಗೆ ತಿಳಿಯುತ್ತದೆ ಎಂದು ಕೊಂಡು ಅಂದು ಬೆಳಗ್ಗೆ ಬೇಗ ಎದ್ದವನು ಬೇಗ ಸ್ನಾನ ಮುಗಿಸಿ ಧ್ಯಾನ ಮಾಡುತ್ತಾ ಅಮ್ಮಾ ದೇವಿ ಇಂದು ನನಗೆ ನಿಧಿ ಸಿಗುವಂತೆ ಮಾಡು ಎಂದು ಕೇಳಿಕೊಂಡು ಅಂದು ಕೆಲಸ ಹುಡುಕಿಕೊಂಡು ಹೊರಟ, ಅವನ ಮುಗ್ದ ಬೇಡಿಕೆಗೆ ಮನ ಸೋನ ದೇವಿ ತನ್ನ ಸೇವಕರಾದ ಭವ ಮತ್ತು ವಿಭ ಎಂಬುವರನ್ನು ಕಳುಹಿಸಿ ಸೂರ್ಯ ಕೇತುವಿಗೆ ನಿಧಿ ಸಿಗುವಂತೆ ಮಾಡಿಬನ್ನಿ ಎಂದು ಕಳುಹಿಸಿದಾಗ ಭವನು ಸೂರ್ಯಕೇತು ಬರವು ಜಾಗದಲ್ಲಿ…

Read More

ತುಮಕೂರು: ತುಮಕೂರು ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 27ರಂದು ಕರ್ನಾಟಕ ಲೋಕಸೇವಾ ಆಯೋಗವು 2023–24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಆಗಸ್ಟ್ 27ರ ಬೆಳಿಗ್ಗೆ 9 ರಿಂದ  ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.  ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು.  ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.…

Read More

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏಕಲವ್ಯ ಪ್ರಶಸ್ತಿ ನೀಡಲು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು ಇವರಿಂದ  ಅರ್ಜಿಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 18ರೊಳಗಾಗಿ  ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮಂಜುನಾಥ್(ಮೊ.ಸಂ.9741691379) ಅವರನ್ನು ಸಂಪರ್ಕಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಬೆಸ್ಕಾಂ ಶಿರಾ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಆಗಸ್ಟ್ 25ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮೇಲ್ಕುಂಟೆ, ನಾದೂರು, ಹೊಸಹಳ್ಳಿ, ಹೆಂದೊರೆ, ಹಂದಿಕುಂಟೆ ಪಂಚಾಯ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಈ. ಶಾಂತರಾಜು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ(ಯಾದವ) ಸಂಘದ ಸಹಯೋಗದಲ್ಲಿ ಆಗಸ್ಟ್ 26ರಂದು ಮಧ್ಯಾಹ್ನ 1 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಶ್ರೀ ಕೃಷ್ಣ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಕಾರ್ಯಕ್ರಮವನ್ನು ಉದ್ಘಾಟಿಸುವರು.  ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಜನಪ್ರತಿನಿಧಿಗಳು, ಗೊಲ್ಲ(ಯಾದವ) ಸಮುದಾಯದ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಏಳು ಮಂದಿ ಗೊಲ್ಲ(ಯಾದವ) ಸಮುದಾಯದ ಸಾಧಕರನ್ನು ಸನ್ಮಾನಿಸಲಾಗುವುದು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 11 ಗಂಟೆಗೆ ನಗರದ ಬಿ.ಜಿ.ಎಸ್ ವೃತ್ತದಿಂದ ಅಶೋಕ ರಸ್ತೆಯ ಮೂಲಕ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಜಾನಪದ ಕಲಾತಂಡಗಳೊಂದಿಗೆ ಅಲಂಕೃತ…

Read More

ತುಮಕೂರು: ಬೆಸ್ಕಾಂ  ಗ್ರಾಮೀಣ ಉಪ ವಿಭಾಗ–1ರ ಕೆಐಎಡಿಬಿ ವಸಂತನರಸಾಪುರ ಹಾಗೂ ಬೆಳಧರ ಉಪಸ್ಥಾವರಗಳ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಆಗಸ್ಟ್ 25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಸಂತನರಸಾಪುರ, ವಸಂತನರಸಾಪುರ ಕೈಗಾರಿಕಾ ಪ್ರದೇಶ ಹಾಗೂ ಸದರಿ ಉಪಸ್ಥಾವರದ ಗ್ರಾಮ ಪಂಚಾಯಿತಿಯ ಹಳ್ಳಿಗಳಲ್ಲಿ ಹಾಗೂ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಚಿನಿಗಾ, ಚಿನಿಗಾಗೇಟ್, ಸೀತಕಲ್ಪಾ ಳ್ಯ, ಸಿಂಗೋನಹಳ್ಳಿ, ಗೇರಹಳ್ಳಿ, ಲಿಂಗಾಪುರ, ಕುರುಡೀರಯ್ಯನಹಟ್ಟಿ, ಹೊಸಹಳ್ಳಿ, ಅಮಲಾಪುರ ಹಾಗೂ ಓಬಳಾಪುರ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ತುಮಕೂರು ನಗರದ ವಿದ್ಯಾನಿಧಿ ಪಿಯು ಕಾಲೇಜು ಬಳಿ ಕಾಲೇಜಿನ ಸಹಪಾಠಿಯನ್ನು ಮಾತನಾಡಿಸಿದ ಎಂಬ ವಿಚಾರಕ್ಕೆ ಯುವಕರ ನಡುವೆ ಗಲಾಟೆ ನಡೆದಿದ್ದು  ವಿದ್ಯಾರ್ಥಿಯೊಬ್ಬನಿಗೆ ಗುಂಪೊಂದು ಮನಬಂದಂತೆ ಹಲ್ಲೆ ನಡೆಸಿದೆ. ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜಯವರ್ಧನ್ ಹಲ್ಲೆಗೆ ಒಳಗಾದ ವಿದ್ಯಾರ್ಥಿಯಾಗಿದ್ದು,  ವಿದ್ಯಾನಿಧಿ ಕಾಲೇಜಿನಲ್ಲಿ 2nd ಪಿಯುಸಿ ಓದುತ್ತಿದ್ದಾನೆ. ಮನೋಜ್ ಹಾಗೂ ಗಣೇಶ್ ಎಂಬುವರಿಂದ ಹಲ್ಲೆ ನಡೆದಿದೆ. ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಡಿಗ್ರಿ ಮಾಡುತ್ತಿರುವ ಮನೋಜ್ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬಳನ್ನ ಪ್ರೀತಿಸುತ್ತಿದ್ದನು. ಆ ವಿದ್ಯಾರ್ಥಿನಿಯ ಜೊತೆ ಜಯವರ್ಧನ್ ಮಾತನಾಡ್ತಾನೆ ಎಂಬ ವಿಚಾರಕ್ಕೆ ಗಲಾಟೆ ನಡೆದಿದೆ. ನಮ್ಮ ಹುಡುಗಿಯ ಜೊತೆ ಯಾಕೆ ಮಾತನಾಡ್ತಿಯಾ ಅಂತ ಜಯವರ್ಧನ್ ಗೆ ಪೋನ್ ನಲ್ಲಿ ಬೆದರಿಕೆ ಹಾಕಿದ್ದ ಮನೋಜ್, ಇಷ್ಟಲ್ಲದೆ ಕಾಲೇಜು ಬಳಿ ಬಂದು ತನ್ನ ಸ್ನೇಹಿತ ಗಣೇಶ್ ಎಂಬಾತನ ಜೊತೆ ಸೇರಿ ಜಯವರ್ಧನ್ ಮೇಲೆ ಹಲ್ಲೆ ಮಾಡಿದ್ದಾನೆ. ಜಯವರ್ಧನ್ ಮುಖಕ್ಕೆ ಗುದ್ದಿ ಮನಬಂದಂತೆ ಹಲ್ಲೆ ನಡೆಸಿರುವ ಮನೋಜ್ ನನ್ನ ನೋಡಿದ ಕಾಲೇಜಿನ ಬಸ್ ಚಾಲಕರು ಕೂಡಲೇ…

Read More

ತುಮಕೂರು: ವಿಶ್ವ ಹಿರಿಯನಾಗರಿಕರ ದಿನಾಚರಣೆ ಅಂಗವಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಆಗಸ್ಟ್ 30ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲೆಯ ಹಿರಿಯನಾಗರಿಕರಿಗಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದೆ. ಕ್ರೀಡಾ ವಿಭಾಗದಲ್ಲಿ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಾಲ್ ಇನ್ ದಿ ಬಕೆಟ್ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಏಕಪಾತ್ರಾಭಿನಯ, ಗಾಯನ (ಜನಪದ ಅಥವಾ ಭಾವಗೀತೆ) ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, 60 ರಿಂದ 70 ವರ್ಷ ಹಾಗೂ 70ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕ ಮಹಿಳಾ/ಪುರುಷರಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಸಲಾಗುವುದು. ಆಸಕ್ತ ಹಿರಿಯನಾಗರಿಕರು ಆಗಸ್ಟ್ 29ರೊಳಗಾಗಿ ಹಿರಿಯನಾಗರಿಕರ ಸಹಾಯವಾಣಿ ಕೇಂದ್ರದ ಕಚೇರಿ, ಹಳೇ ಮಹಿಳಾ ಠಾಣೆಯ ಆವರಣ, ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗ, ತುಮಕೂರು ಇಲ್ಲಿಗೆ ಆಧಾರ್ ಕಾರ್ಡ್ ನೊಂದಿಗೆ ಖುದ್ದು ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ: 8792040146ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ನಿಟ್ಟಿನಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ಹೈಕಮಾಂಡ್ ಬಳಿ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಂಪುಟ ಪುನಾರಚನೆ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ. ರಾಜ್ಯ ಸಚಿವ ಸಂಪುಟದಲ್ಲಿ ಐದಾರು ಸಚಿವರಿಗೆ ಕೊಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೊಸಬರಿಗೆ ಮಣೆ ಹಾಕುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಚರ್ಚಿಸಲು ಮತ್ತೊಮ್ಮೆ ದೆಹಲಿಗೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ವರದಿಯಾಗಿದೆ. ಎರಡು ತಿಂಗಳ ಬಳಿಕ ಸಚಿವ ಸಂಪುಟ ಪುನಾರ್ಚನೆ ಸಾಧ್ಯತೆ ಇದೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ನಿರ್ಧರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More