Subscribe to Updates
Get the latest creative news from FooBar about art, design and business.
- ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!
- ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್ ನಲ್ಲಿ ಸೆರೆಯಾಯ್ತು ದೃಶ್ಯ!
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
Author: admin
ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಪಿ.ಯು.ಸಿ ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಸೆಪ್ಟೆಂಬರ್ 15ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in , bcwdhelpline@gmail.com, postmatrichelp@karnataka.gov.in ಅಥವಾ ಇಲಾಖಾ ಸಹಾಯವಾಣಿ ಸಂಖ್ಯೆ. 8050770005, ಅಥವಾ ದೂ.ಸಂ. 1902ನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗ ಸಾಲ, ಗಂಗಾಕಲ್ಯಾಣ ನೀರಾವರಿ, ಅರಿವು-ಶೈಕ್ಷಣಿಕ ಸಾಲ(ಹೊಸತು ಹಾಗೂ ನವೀಕರಣ), ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲು ಅಂಬಿಗರು, ಬೆಸ್ತರು, ಗಂಗಾಮತಸ್ಥರು ಹಾಗೂ ಅದರ ಉಪಜಾತಿಗೆ ಸೇರಿದವರಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಗಸ್ಟ್ 31ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್: https://ambigaradevelopment.karnataka.gov.in ಅಥವಾ ನಿಗಮದ ದೂ.ವಾ.ಸಂ.080-22864099 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂ. 0816-2005008ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ.ವಿ. ವೆಂಕಟರಾಜು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಇಂದು ಬೆಳಗ್ಗೆ ಸುಮಾರು 2 ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಗೆ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಜಿಲ್ಲೆಯ ಗುಬ್ಬಿ ಪಟ್ಟಣದಿಂದ ಹೊರವಲಯದಲ್ಲಿರುವ ಬಿದರೆ –ಗುಬ್ಬಿ ಸಂಪರ್ಕ ರಸ್ತೆಯಲ್ಲಿ ಇರುವ ರೈಲ್ವೆ ಅಂಡರ್ ಪಾಸ್ ನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಸಂಚರಿಸುವ ವೇಳೆ ಸಿಲುಕಿಕೊಂಡಿತ್ತು. ಬಸ್ಸಿನ ಒಳಗೆ ಇದ್ದಂತ ಪ್ರಯಾಣಿಕರನ್ನು ಸುರಕ್ಷಿತ ಜಾಗಕ್ಕೆ ತಲುಪಿಸಲು ಅಗ್ನಿಶಾಮಕ ದಳ ಪ್ರಯತ್ನಪಟ್ಟರು. ಇದರಿಂದಾಗಿ ಕೆಲಕಾಲ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಸುಮಾರು ಆರು ಅಡಿಯಷ್ಟು ನೀರು ನಿಂತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತಿಪಟೂರು: ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ವೃದ್ಧ ದಂಪತಿಗೆ ಸೇರಿದ ಮನೆಯೊಂದು ಕುಸಿದು ಬಿದ್ದ ಘಟನೆ ತಾಲೂಕಿನ ಹೊನ್ನವಳ್ಳಿ ಹೋಬಳಿಯ ಮಾಯಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚನ್ನಬಸಮ್ಮw/o ರಾಜಣ್ಣ (68) ಇವರ ಮನೆ ಕುಸಿತಗೊಂಡಿದ್ದು, ಅದೃಷ್ಟವಶಾತ್ ವಯೋ ವೃದ್ಧ ದಂಪತಿಗಳು ಪ್ರಾಣಾಪಾಯದಿಂದ ಪರಾರಾಗಿದ್ದಾರೆ. ಈ ದಂಪತಿಗೆ ಈ ಮನೆ ಬಿಟ್ಟರೆ ಬೇರೆ ಯಾವುದೇ ಮನೆ ಇಲ್ಲ. ಘಟನೆಯಿಂದಾಗಿ ಸುಮಾರು ಲಕ್ಷ ರೂಪಾಯಿಯ ಗೃಹೋಪಯೋಗಿ ವಸ್ತುಗಳು ನಾಶವಾಗಿದೆ. ಈ ದಂಪತಿಯನ್ನು ಯಾರು ಪೋಷಣೆ ಮಾಡುವವರು ಇಲ್ಲ. ಕೂಲಿಯಿಂದ ಜೀವನ ಸಾಗಿಸುತ್ತಿದ್ದು, ಈ ಇಬ್ಬರೇ ಈ ಮನೆಯಲ್ಲಿ ವಾಸವಾಗಿದ್ದಾರೆ. ಈಗ ಮನೆಯ ಆಚೆ ವಾಸವಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ತಾಲೂಕು ಆಡಳಿತ ಇಲ್ಲಿಗೆ ಭೇಟಿ ಕೊಟ್ಟು, ಸ್ಥಳ ಪರಿಶೀಲನೆ ಮಾಡಿ ವೃದ್ಧ ದಂಪತಿಗಳಿಗೆ ಆಸರೆ ಆಗಬೇಕಾಗಿದೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಬಿಗ್ ಬಾಸ್ ಕನ್ನಡ ಹಿಂದಿರುವ ಅಗೋಚರ ಧ್ವನಿ ಯಾರದ್ದು ? ಹೀಗೊಂದು ಪ್ರಶ್ನೆ ನೋಡುಗರನ್ನು ಒಂದಲ್ಲಾ ಒಂದು ದಿನ ಕಾಡಿರುತ್ತದೆ. ಮೊದಲ ಸೀಸನ್ನಿಂದ ಈ ಸೀಸನ್ವರೆಗೂ 3 ಮಂದಿ, ಬಿಗ್ ಬಾಸ್ ಆಗಿ ಕಾರ್ಯಕ್ರಮಕ್ಕೆ ದನಿ ನೀಡಿದ್ದಾರೆ. ಆದರೆ ಪ್ರತಿದಿನ ಎಲ್ಲರೂ ಇವರ ದನಿ ಕೇಳುತ್ತಿದ್ದರೇ ಹೊರತು ಇವರ ಬಗ್ಗೆ ಮಾಹಿತಿ ಇರಲಿಲ್ಲ. ವೀಕ್ಷಕರಿಗಾಗಿ ಬಿಗ್ ಬಾಸ್ ಹಿನ್ನೆಲೆ ಧ್ವನಿ ನೀಡಿದ್ದ, ನೀಡುತ್ತಿರುವ ಕಲಾವಿದರ ಬಗ್ಗೆ ಇಲ್ಲಿದೆ ಒಂದಿಷ್ಟು ಮಾಹಿತಿ. ಬಿಎಂ ವೆಂಕಟೇಶ್ 2015ರಲ್ಲಿ ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ಬಿಗ್ ಬಾಸ್ ಸೀಸನ್ 3ಕ್ಕೆ ಬಿಎಂ ವೆಂಕಟೇಶ್ ಬಿಗ್ ಬಾಸ್ ಆಗಿ ಧ್ವನಿ ನೀಡಿದ್ದರು. ವೆಂಕಟೇಶ್ ಅವರನ್ನು ಅನೇಕ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನೋಡಿದ್ದೇವೆ. ಜೀ ಕನ್ನಡದಲ್ಲಿ ಪ್ರಸಾರವಾಗಿದ್ದ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ವೆಂಕಟೇಶ್ ಝೇಂಡೆ ಪಾತ್ರದಲ್ಲಿ ನಟಿಸಿದ್ದರು. ವೆಂಕಟೇಶ್ ಡಡ್ಬಿಂಗ್ ಕಲಾವಿದರಾಗಿ ಕೂಡಾ ಗುರುತಿಸಿಕೊಂಡಿದ್ದಾರೆ. ಅಮಿತ್ ಭಾರ್ಗವ್ ಕನ್ನಡಕ್ಕಿಂತ ಹೆಚ್ಚಾಗಿ ತಮಿಳಿನಲ್ಲಿ ಗುರುತಿಸಿಕೊಂಡಿದ್ದಾರೆ. ಅಮಿತ್ ಮೊದಲ ಬಾರಿಗೆ 2010ರಲ್ಲಿ ಉದಯ…
ಒಂದು ಮಗುವೂ ಹುಟ್ಟದ ದೇಶವಿದೆ. ಇಲ್ಲಿ ಮಕ್ಕಳ ಜನನವನ್ನು ನಿಷೇಧಿಸಲಾಗಿದೆ. ಮಕ್ಕಳಿಗೆ ಜನ್ಮ ನೀಡುವ ಆಸ್ಪತ್ರೆಗಳಾಗಲಿ ಅಥವಾ ಪುರುಷರು ಮತ್ತು ಮಹಿಳೆಯರಿಗೆ ಅಂತಹ ಯಾವುದೇ ಹಕ್ಕುಗಳಿಲ್ಲ. ಆ ದೇಶದ ಹೆಸರು ವ್ಯಾಟಿಕನ್ ಸಿಟಿ. ವ್ಯಾಟಿಕನ್ ಸಿಟಿ ವಿಶ್ವದ ಅತ್ಯಂತ ಚಿಕ್ಕ ದೇಶ. ಕ್ರಿಶ್ಚಿಯನ್ ಧರ್ಮದ ಸರ್ವೋಚ್ಚ ನಾಯಕರು ಇಲ್ಲಿ ವಾಸಿಸುತ್ತಿದ್ದಾರೆ. ಇದು ಅವರ ಅಧಿಕೃತ ನಿವಾಸ. ಪುರೋಹಿತರು ಮಾತ್ರ ಅಲ್ಲಿ ವಾಸಿಸುತ್ತಾರೆ. ಅಂದರೆ, ಪುರುಷರು ಮಾತ್ರ ಅಲ್ಲಿ ವಾಸಿಸುತ್ತಾರೆ. ಅಲ್ಲಿ ಎಲ್ಲರೂ ಬ್ರಹ್ಮಚಾರಿಗಳು. ಈ ಸ್ಥಳವು ಪ್ರಪಂಚದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ. ವ್ಯಾಟಿಕನ್ ಸಿಟಿ ಪಾದ್ರಿಗಳು ಧರ್ಮದ ಕಾರಣದಿಂದ ಮದುವೆಯಾಗಲು ಅಥವಾ ಮಕ್ಕಳನ್ನು ಹೊಂದಲು ಅನುಮತಿಸುವುದಿಲ್ಲ. ಇಲ್ಲಿ ಒಟ್ಟು 800 ಜನರು ವಾಸಿಸುತ್ತಿದ್ದಾರೆ. ಅವರಲ್ಲಿ ಕೇವಲ 30 ಮಹಿಳೆಯರಿದ್ದಾರೆ ಮತ್ತು ಅವರೂ ತಮ್ಮ ಜೀವನದುದ್ದಕ್ಕೂ ಅಲ್ಲಿಯೇ ಇರುವುದಿಲ್ಲ. ಇಲ್ಲಿ ಮಹಿಳೆಯರಿಗೆ ಹಾಗೂ ಪುರುಷರಿಗೆ ಡ್ರೆಸ್ ಕೋಡ್ ಇದೆ. ಮಿನಿ ಸ್ಕರ್ಟ್ಗಳು, ಶಾರ್ಟ್ಸ್ ಅಥವಾ ತೋಳಿಲ್ಲದ ಉಡುಪುಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಅಲ್ಲಿ…
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಯಕಯೋಗಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಡಿ.ವೈ.ಎಸ್.ಪಿ ಗಿರೀಶ್ ಎಸ್.ವಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಾಮದಾರಿ ಸಮಾಜದ ಉಪಾಧ್ಯಕ್ಷ ಸುನೀಲ್ ಸೋನಿ ಮಾತನಾಡಿ, ನಾರಾಯಣ ಗುರುಗಳ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳುವುದರಲ್ಲಿ ನಾವು ಹಿಂದಿದ್ದೇವೆ. ಮುಂದೆಯಾದರೂ ಅವರ ತತ್ವಗಳನ್ನು ಅಳವಡಿಸಿಕೊಂಡು ಅಖಂಡ ಭಾರತವನ್ನು ನಿರ್ಮಿಸೋಣ ಎಂದರು. ಕನ್ನಡ ಸಾಹಿತ್ಯ ಪರಿಷತ್ತ್ನ ತಾಲೂಕಾಧ್ಯಕ್ಷ ರಾಮಾ ನಾಯ್ಕ ಮಾತನಾಡಿ, ನಾರಾಯಣ ಗುರುಗಳು ಒಂದೇ ಜಾತಿಗೇ ಸಿಮೀತರಾದವರಲ್ಲ ಇಡೀ ಜಗತ್ತಿನ ಗುರುಗಳು ಆದರಿಂದ ಎಲ್ಲ ಸಮುದಾಯದವರು ಒಗ್ಗೂಡಿ ಗುರುಗಳ ಜಯಂತಿ ಆಚರಿಸಬೇಕು, ಇವರ ತತ್ವ, ಸಿದ್ದಾಂತಗಳ ಪರಿಪಲನೆಯಲ್ಲಿ ಎಲ್ಲರೂ ನಡೆಯೋಣ ಎಂದರು. ಪ್ರೊ. ಎಮ್. ಜಿ. ನಾಯ್ಕ ಬ್ರಹ್ಮಶ್ರೀ ನಾರಾಯಣಗುರು ಅವರ ಕುರಿತು ಉಪನ್ಯಾಸ ನೀಡಿ, ಕೇರಳದಲ್ಲಿ ಅಂಟಿಕೊಂಡಿದ್ದ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಶ್ರಮಿಸಿದವರು, ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು,…
ತಿಪಟೂರು: ತಾಲೂಕಿನ ಹಾಲ್ಕುರಿಕೆ ವೃತ್ತದ ಹಾಲ್ಕುರಿಕೆ ಅಂಗನವಾಡಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಕೆ. ಷಡಕ್ಷರಿ ಶಾಸಕರು ತಿಪಟೂರು ವಿಧಾನಸಭಾ ಕ್ಷೇತ್ರ ಹಾಗೂ ಅಧ್ಯಕ್ಷರು ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್, ರವರ ಉಪಸ್ಥಿತಿಯಲ್ಲಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಕಟ್ಟಡವನ್ನು ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ಸುದರ್ಶನ್ ಅವರು, ನಿರೂಪಣಾಧಿಕಾರಿಗಳಾದ ದಿನೇಶ್ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಲೋಕೇಶ್, ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು, ಇಲಾಖಾ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರು ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗ ಸಾಲ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ ಗಳ ಸಹಯೋಗದೊಂದಿಗೆ), ಅರಿವು-ಶೈಕ್ಷಣಿಕ ಸಾಲ(ಹೊಸತು ಹಾಗೂ ನವೀಕರಣ), ವಿದೇಶಿ ವ್ಯಾಸಂಗ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಮತ್ತು ಸಹಾಯಧನದ ಸೌಲಭ್ಯ ಒದಗಿಸಲು ಸೇವಾಸಿಂಧು ಪೋರ್ಟಲ್ ಮೂಲಕ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದವರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಗಂಗಾಕಲ್ಯಾಣ ಯೋಜನೆಯ ಸೌಲಭ್ಯ ಪಡೆಯಲು 18 ರಿಂದ 55 ವಯೋಮಿತಿಯೊಳಗಿನವರಾಗಿದ್ದು, ಒಂದೇ ಕಡೆ ಹೊಂದಿ ಕೊಂಡಂತೆ 2 ಎಕರೆ ಜಮೀನು ಹೊಂದಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ. ಹಾಗೂ ನಗರ ಪ್ರದೇಶದವರಿಗೆ 1,20,000 ರೂ.ಗಳ ಒಳಗಿರಬೇಕು. ಅರಿವು ಯೋಜನೆಯ ಸೌಲಭ್ಯಕ್ಕಾಗಿ 18 ರಿಂದ 30 ವರ್ಷ ವಯೋಮಿತಿಯೊಳಗಿದ್ದು, ವಾರ್ಷಿಕ ವರಮಾನ ರೂ.3.50ಲಕ್ಷಗಳ ಮಿತಿಯಲ್ಲಿರಬೇಕು. ಸ್ವಾವಲಂಬಿ ಸಾರಥಿ ಯೋಜನೆಯ ಸೌಲಭ್ಯಕ್ಕಾಗಿ 18 ರಿಂದ 45 ವರ್ಷ ವಯೋಮಿತಿಯೊಳಗಿರಬೇಕು. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣ…
ತುಮಕೂರು: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024–25ನೇ ಸಾಲಿಗಾಗಿ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ಸಿಖ್ಖಲಿಗಾರ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿ ಸಾಲ/ ಸಹಾಯಧನ ಸೌಲಭ್ಯ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆರ್ಥಿಕ ಸಬಲೀಕರಣ ಹೊಂದಲಿಚ್ಛಿಸುವ ಸಿಖ್ಖಲಿಗಾರ(ಸಿಖ್ ಜನಾಂಗದವರಿಗೆ ಮಾತ್ರ) ಸಮುದಾಯದವರು ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸಹಾಯಧನ ಸೌಲಭ್ಯ ಪಡೆಯ ಬಯಸುವ ಮಹಿಳಾ ಸ್ವಸಹಾಯ ಗುಂಪುಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರು ಮಾತ್ರ ಈ ಸೌಲಭ್ಯ ಪಡೆಯಬಹುದು. ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕಾಗಿ ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಜನಾಂಗದವರಾಗಿರಬೇಕು. ಸಾಲ/ಸಹಾಯಧನ ಸೌಲಭ್ಯ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತ ಸಮುದಾಯದವರು ಜಾಲತಾಣ kmdconline.karnataka.gov.in ಮೂಲಕ ಆಗಸ್ಟ್ 31ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಇಂದಿರಾ ಕಾಲೇಜು…