Subscribe to Updates
Get the latest creative news from FooBar about art, design and business.
- ಕಲಬುರಗಿ: ಮಗನ ಕಣ್ಣೆದುರೇ ಭೀಮಾ ನದಿಯಲ್ಲಿ ಮುಳುಗಿ ತಂದೆ ಸಾವು; ಮೊಬೈಲ್ ನಲ್ಲಿ ಸೆರೆಯಾಯ್ತು ದೃಶ್ಯ!
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
Author: admin
ಪಾವಗಡ: ತಾಲ್ಲೂಕಿನ ರ್ಯಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿ ತಾಂಡದಲ್ಲಿ ಇತ್ತೀಚಿಗೆ ಕಲುಷಿತ ಆಹಾರ ಸೇವಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಾಂಡದ ರೋಗಿಗಳನ್ನು ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್ ರವರು ಭೇಟಿಯಾಗಿ ಆರೋಗ್ಯ ವಿಚಾರಿಸಿ ಘಟನೆಯ ಕುರಿತು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ವರದರಾಜು , ಕಾರ್ಯ ನಿರ್ವಾಹಕ ಅಧಿಕಾರಿ ಜಾನಕಿ ರಾಮ್ ರವರು ಮತ್ತು ಹಲವು ಮುಖಂಡರು ಉಪಸ್ಥಿತರಿದ್ದರು. ವರದಿ: ನಂದೀಶ್ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಒಂದೇ ದಿನ ರಾತ್ರಿ ಸುರಿದ ಭಾರೀ ಮಳೆಗೆ ಜಯಮಂಗಲಿ ನದಿ ಮೈತುಂಬಿ ಹರಿಯುತ್ತಿದೆ. ಇದು ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ ಭಾಗದಲ್ಲಿ ಹರಿಯುವ ನದಿಯಾಗಿದೆ. ಮಧುಗಿರಿ ತಾಲ್ಲೂಕಿನ ವೀರೇನಹಳ್ಳಿ– ಕಾಳೇನಹಳ್ಳಿ ನಡುವಿನ ರಸ್ತೆ ಜಲಾವೃತಗೊಂಡಿದೆ. ತೋಟ- ಹೊಲಗಳು ಜಲಾವೃತವಾಗಿದ್ದು ಜಯಮಂಗಲಿ ನದಿ ತುಂಬಿ ಹರಿದಿದ್ದಕ್ಕೆ ರೈತರಲ್ಲಿ ಸಂತಸ ಮೂಡಿದೆ. ತುಮಕೂರು ಜಿಲ್ಲಾದ್ಯಾಂತ ಕಳೆದ ರಾತ್ರಿ ಧಾರಾಕಾರ ಮಳೆಯಾಗಿದೆ. ತುಂಬಿ ಹರಿದ ಹಳ್ಳ ಕೊಳ್ಳಗಳು ತುಮಕೂರು ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಸಾಕಷ್ಟು ಅನಾಹುತ ಸಂಭವಿಸಿವೆ. ಹಳ್ಳ ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಬಹುತೇಕ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ನಂದಿಹಳ್ಳಿ ಯಿಂದ ಗೊಲ್ಲರಹಟ್ಟಿಗೆ ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದಿದೆ. ಕೊರಟಗೆರೆ ತಾಲೂಕು ಹಾಗೂ ಮಧುಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಹರಿಯುವ ಜಯಮಂಗಲಿ ನದಿ ನೀರು ಉಕ್ಕಿ ಹರಿಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಡೆಯುತ್ತಿದ್ದ ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ ಮುಖಂಡ ರವಿಚಂದ್ರನ್ ಮೃತಪಟ್ಟವರಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುದ್ದಿಗೋಷ್ಠಿಯನ್ನುದ್ದೇಶಿಸಿ ರವಿಚಂದ್ರನ್ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಅವರು ಎದೆನೋವು ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ. ತಕ್ಷಣವೇ ಅವರನ್ನು ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಣೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತಿಪಟೂರು: ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ತಿಪಟೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಶಾಸಕ ಕೆ.ಷಡಕ್ಷರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ತಿಪಟೂರು ಗ್ರಾಮದೇವತೆ ಶ್ರೀಕೆಂಪಮ್ಮ ದೇವಿ ದೇವಾಲಯದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಕೋಡಿಸರ್ಕಲ್, ದೊಡ್ಡಪೇಟೆ, ಬಿ.ಹೆಚ್.ರಸ್ತೆ ಮೂಲಕ ನಗರಸಭಾ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರಸಲ್ಲಿಸಲಾಯಿತು. ತಿಪಟೂರು ತಹಶೀಲ್ದಾರ್ ಪವನ್ ಕುಮಾರ್ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಪ್ರಾಮಾಣಿಕವಾಗಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನ ವಿರುದ್ಧ ರಾಜ್ಯಪಾಲ ನೀಡಿರುವ ಪ್ರಾಸಿಕ್ಯೂಷನ್ ದೋಷಪೂರಿತವಾಗಿದೆ. ಸಂವಿಧಾನಬದ್ಧವಾಗಿ ಆಡಳಿತ ನಡೆಸಬೇಕಾದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯಪಾಲರ ಮೇಲೆ ಒತ್ತಡ ಹೇರಿ, ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಮಾಡಿದ್ದಾರೆ ಎಂದರು. ಸಿದ್ದರಾಮಯ್ಯನವರಿಗೆ ತೊಂದರೆಯಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ನಮ್ಮ ಸರ್ಕಾರ 136 ಜನ ಚುನಾಯಿತ ಶಾಸಕರೊಂದಿಗೆ ಆಡಳಿತ…
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಸಂವಿಧಾನ ಬಾಹಿರವಾಗಿದೆ ಹಾಗೂ ರಾಜ್ಯಪಾಲರ ಈ ನಿರ್ಧಾರವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ತುಮಕೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಮಾಜಿ ಶಾಸಕ ಗೌರಿಶಂಕರ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್ ಹಾಗೂ ತುಮಕೂರು ನಡುವಿನ ರಸ್ತೆಯಲ್ಲಿ ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಿದರು. ಸಿದ್ದರಾಮಯ್ಯ ಅಂತಹ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಕಾನೂನು ಬಾಹಿರವಾದದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಕೂಡಲೇ ರಾಜ್ಯಪಾಲರು ಹಿಂಪಡೆಯಬೇಕೆಂದು ಆಗ್ರಹಿಸಿ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಮುಖಂಡರು ಹೆಬ್ಬೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಹೆಬ್ಬೂರು ಸರ್ಕಲ್ ನಲ್ಲಿ ಬೃಹತ್ ಬೃಹತ್ ಪ್ರತಿಭಟನೆ ನಡೆಸಿದ ಬಳಿಕ ಮೆರವಣಿಗೆ ನಡೆಸಿ ರಾಜ್ಯಪಾಲರ ನಡೆ ತೀವ್ರವಾಗಿ ಖಂಡಿಸಿದರು. ಬಳಿಕ ಹೆಬ್ಬೂರಿನಿಂದ ತುಮಕೂರಿನ ವರೆಗೆ ಬೃಹತ್ ಬೈಕ್ ರ್ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ…
ಕ್ಯಾನ್ಸರ್ ನ ಅನೇಕ ಪ್ರಕಾರಗಳಿಂದ ಜನ ಇಂದು ನರಳುತ್ತಿದ್ದಾರೆ. ಕೆಲವರು ಆರಂಭದಲ್ಲೇ ಪತ್ತೆ ಮಾಡಿ ಚಿಕಿತ್ಸೆಗೆ ಒಳಗಾಗಿದ್ದರೆ ಮತ್ತೆ ಕೆಲವರು ಕ್ಯಾನ್ಸರ್ ಕೊನೆಯ ಹಂತ ತಲುಪಿದಾಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುತ್ತಾರೆ. ಕ್ಯಾನ್ಸರ್ ನಲ್ಲಿ ಹತ್ತು ಹಲವು ವಿಧವಿದ್ದರೂ ಎಲ್ಲದಕ್ಕೂ ಒಂದೇ ರೀತಿಯ ಚಿಕಿತ್ಸಾ ಕ್ರಮ ನೋಡಹುದು. ಅದ್ರಲ್ಲೂ ಇತ್ತೀಚಿಗೆ ಯುವ ಜನತೆ ಕ್ಯಾನ್ಸರ್ಗೆ ತುತ್ತಾಗುತ್ತಿರುವುದು ಮತ್ತೊಂದು ಆತಂಕಕ್ಕೆ ಕಾರಣ. ನೀವು ತುಟಿ ಕ್ಯಾನ್ಸರ್ ನ ಬಗ್ಗೆ ಕೇಳಿದ್ದೀರಾ? ಬಹುಪಾಲು ಮಂದಿ ಈ ಕುರಿತು ಕೇಳಿರುವುದಿಲ್ಲ. ನಿಮ್ಮ ತುಟಿಗಳ ಮೇಲೆ ಕ್ಯಾನ್ಸರ್ ಕೋಶಗಳು ಬೆಳೆಯಲು ಆರಂಭಿಸುವ ಒಂದು ಪ್ರಕಾರವಾಗಿದೆ. ಆದರೆ ಈ ಪ್ರಕಾರವು ಆರಂಭಿಕ ಹಂತದಲ್ಲೇ ತಿಳಿದುಬರುವುದರಿಂದ ಚಿಕಿತ್ಸೆಯೂ ಸುಲಭವಾಗುತ್ತದೆ. ಅಮೆರಿಕದಲ್ಲಿ ಒಟ್ಟು ಕ್ಯಾನ್ಸರ್ ಪೀಡಿತರಲ್ಲಿ ಶೇ.0.6ರಷ್ಟು ಮಂದಿ ಈ ತುಟಿಗಳ ಕ್ಯಾನ್ಸರ್ ಹೊಂದಿದ್ದಾರೆ. ಇನ್ನು ಇಡೀ ವಿಶ್ವದಲ್ಲಿ ಪ್ರತಿ ವರ್ಷ ಸುಮಾರು 40 ಸಾವಿರ ಮಂದಿ ಈ ಕಾಯಿಲೆಯಿಂದ ಬಳಲುತ್ತಾರೆ ಎಂದು ವರದಿಯಾಗಿದೆ. ಆರಂಭಿಕ ಹಂತದಲ್ಲಿ ತುಟಿಯ…
ರಾಖಿ ಹಬ್ಬದ ದಿನದಂದೇ ಆಕಾಶದಲ್ಲಿ ಅಪರೂಪದ ವಿಸ್ಮಯ ಘಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿ ಆಗಸ್ಟ್ 19ರ ರಾಖಿ ಹುಣ್ಣಿಮೆಯಂದು ಆಕಾಶದಲ್ಲಿ ನೀಲಿ ಚಂದ್ರ ನೋಡಲು ಕಾಣಸಿಗಲಿದ್ದಾನೆ. ಅತ್ಯಪರೂಪದ ”ಸೂಪರ್ ಬ್ಲೂ ಮೂನ್”ಗೆ ಕ್ಷಣಗಣನೆ ಆರಂಭವಾಗಿದೆ. ಸೂಪರ್ಮೂನ್ಗಳು ಸಾಮಾನ್ಯವಾಗಿ ವರ್ಷಕ್ಕೆ 3-4 ಬಾರಿ ಸಂಭವಿಸುತ್ತವೆ.ಈ ತಿಂಗಳು, ಸೂಪರ್ ಮೂನ್ ಮತ್ತು ಬ್ಲೂ ಮೂನ್ ಒಂದುಗೂಡುವ ಅಪರೂಪದ ಖಗೋಳ ಘಟನೆಯನ್ನು ನಾವು ವೀಕ್ಷಿಸಬಹುದು. ಈ ಅಪರೂಪದ ಖಗೋಳ ವಿದ್ಯಮಾನವನ್ನು ಹಲವು ವರ್ಷಗಳಿಗೊಮ್ಮೆ ಮಾತ್ರ ಕಾಣಬಹುದು ಎಂದು ವಿಜ್ಞಾನಿಗಳು ಹೇಳಿದ್ದಾರೆ. ಸಾಮಾನ್ಯವಾಗಿ, ಆಗಸ್ಟ್ನಲ್ಲಿ ಬರುವ ಹುಣ್ಣಿಮೆಯನ್ನು ‘ಸ್ಟರ್ಜನ್ ಮೂನ್ ಎಂದು ಕರೆಯಲಾಗುತ್ತದೆ. ಸೂಪರ್ ಬ್ಲೂ ಮೂನ್ ಆಗಸ್ಟ್ನಲ್ಲಿ ಕಾಣಿಸಿಕೊಳ್ಳುವುದರಿಂದ ಇದನ್ನು ‘ಸ್ಟರ್ಜನ್ ಮೂನ್ ಎಂದೂ ಕರೆಯಲಾಗುತ್ತದೆ. ಚಂದ್ರನು ಭೂಮಿಗೆ ಹತ್ತಿರ ಬಂದಾಗ ಈ ಸೂಪರ್ ಮೂನ್ಗಳು ರೂಪುಗೊಳ್ಳುತ್ತವೆ. ಚಂದ್ರನು ಭೂಮಿಗೆ 90 ಪ್ರತಿಶತದಷ್ಟು ಹತ್ತಿರ ಬಂದಾಗ ಸೂಪರ್ ಮೂನ್ ಸಂಭವಿಸುತ್ತದೆ. ಸೂಪರ್ಮೂನ್ ಎಂಬ ಪದವನ್ನು ಖಗೋಳಶಾಸ್ತ್ರಜ್ಞ ರಿಚರ್ಡ್ ನೊಲ್ಲೆ ಅವರು 1979 ರಲ್ಲಿ ಸೃಷ್ಟಿಸಿದ್ದರು.…
ಹಬ್ಬಗಳು, ಸಮಾರಂಭಗಳು ಮತ್ತು ಮೆರವಣಿಗೆಗಳಲ್ಲಿ ಲೇಸರ್ ಗಳು, ಡಿಜೆಗಳ ಬಳಕೆಯ ಬಗ್ಗೆ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಹಬ್ಬಗಳು, ಸಮಾರಂಭಗಳು ಮತ್ತು ಮೆರವಣಿಗೆಗಳಲ್ಲಿ ಲೇಸರ್ ಗಳು, ಡಿಜೆಗಳ ಬಳಕೆಯ ಕುರಿತು ಬಾಂಬೆ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಈಗ ಬಾಂಬೆ ಹೈಕೋರ್ಟ್ ಈ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿದೆ. ಅಖಿಲ ಭಾರತ ಗ್ರಾಹಕ ಪಂಚಾಯತ್ ಪರವಾಗಿ ಬಾಂಬೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಲೇಸರ್ ಕಿರಣಗಳು ಮತ್ತು ಡಿಜೆಗಳನ್ನು ಹೆಚ್ಚಾಗಿ ಹಬ್ಬಗಳಲ್ಲಿ ಬಳಸಲಾಗುತ್ತದೆ. ಇದು ಅನೇಕ ಜನರ ದೃಷ್ಟಿ ಮತ್ತು ಶ್ರವಣ ಸಾಮರ್ಥ್ಯದ ಮೇಲೆ ಪರಿಣಾಮ ಬೀರಿದೆ. ಕೆಲವರು ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿದ್ದಾರೆ. ಆದ್ದರಿಂದ, ಲೇಸರ್ ಕಿರಣಗಳು ಮತ್ತು ಡಿಜೆಗಳ ಬಳಕೆಗೆ ಸಂಬಂಧಿಸಿದಂತೆ ಸೂಕ್ತ ಆದೇಶಗಳನ್ನು ಹೊರಡಿಸಬೇಕೆಂದು ಅರ್ಜಿದಾರರು ಒತ್ತಾಯಿಸಿದ್ದಾರೆ. ಡಿಜೆಗಳು, ದೊಡ್ಡ ಸಂಗೀತ ಮತ್ತು ಲೇಸರ್ ಬೆಳಕು ಸಾಕಷ್ಟು ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತವೆ. ಡಿಜೆ ಅನೇಕ ಜನರ ಹೃದಯ ಬಡಿತವನ್ನು ವೇಗವಾಗಿ ಮಾಡುತ್ತದೆ. ಡಿಜೆಗಳಿಂದ ಉತ್ಪತ್ತಿಯಾಗುವ ತೀವ್ರವಾದ…
ಆಗಸ್ಟ್ 21, 2024 ರ ಬುಧವಾರ ಭಾರತ್ ಬಂದ್ ಬಗ್ಗೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಚರ್ಚೆ ಭರದಿಂದ ಸಾಗಿದೆ. ಕಾರಣವೇನು ಗೊತ್ತೆ ? ಅಂದು ಯಾವ ಸೇವೆಗಳು ಲಭ್ಯವಾಗಲಿದೆ ? ಯಾವ ಸೇವೆಗಳು ಇರುವುದಿಲ್ಲ ? ಎಲ್ಲಾ ಮಾಹಿತಿ ಇಲ್ಲಿದೆ ನೋಡಿ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ಮೀಸಲಾತಿ ಬಚಾವೋ ಸಂಘರ್ಷ ಸಮಿತಿ ಈ ಬಂದ್ ಗೆ ಕರೆ ನೀಡಿದೆ. ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠವು ಆಗಸ್ಟ್ 1, 2024 ರಂದು ಮಹತ್ವದ ತೀರ್ಪನ್ನು ನೀಡಿತು. ಎಸ್ಸಿ ಮತ್ತು ಎಸ್ಟಿ ಗುಂಪುಗಳಲ್ಲಿ ಉಪ-ವರ್ಗಗಳನ್ನು ರಚಿಸಲು ಅವರು ರಾಜ್ಯಗಳಿಗೆ ಅವಕಾಶ ನೀಡಿದರು, “ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ಸಿಗಬೇಕು” ಎಂದು ಹೇಳಿದರು. ಈ ನಿರ್ಧಾರವು ವ್ಯಾಪಕ ಚರ್ಚೆಗೆ ಕಾರಣವಾಗಿದೆ ಮತ್ತು ಭಾರತ್ ಬಂದ್ಗೆ ಕರೆ ನೀಡಿದೆ ಎಂದು ವರದಿಯಾಗಿದೆ. ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸುವುದು ಮತ್ತು ಅದನ್ನು…
ಕೊರಟಗೆರೆ: 25 ಎಕರೆ ಜಮೀನಿಗಾಗಿ ಗೊಲ್ಲ–ದಲಿತ ಸಮುದಾಯದ ಜನರ ನಡುವೆ ಸಂಘರ್ಷ ಉಂಟಾದ ಘಟನೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಸಂಕೇನಹಳ್ಳಿಯ ಗ್ರಾಮದ ಸರಕಾರಿ ಗೋಮಾಳದಲ್ಲಿ ನಡೆದಿದೆ. ಸಂಕೇನಹಳ್ಳಿ ಗ್ರಾಮದ ಸರ್ವೆ ನಂ.15 ಮತ್ತು 16ರಲ್ಲಿನ 25 ಎಕರೇ ಗೋಮಾಳ ಜಮೀನಿದೆ. 25 ಎಕರೆ ಗೋಮಾಳದ ಜಮೀನಿಗೆ ಸಂಕೇನಹಳ್ಳಿಯ 20 ಜನ ದಲಿತ ಕುಟುಂಬ ಅರ್ಜಿ ಸಲ್ಲಿಸಿದೆ. ಕಳೆದ 70 ವರ್ಷದಿಂದ ಸಂಕೇನಹಳ್ಳಿಯ 75 ದಲಿತ ಕುಟುಂಬಗಳಿಗೆ ಸ್ಮಶಾನವೇ ಇಲ್ಲದೇ ಪರದಾಡುತ್ತಿದ್ದಾರೆ. ಅತ್ತ ಗೋಮಾಳದ ಜಮೀನು ಮೇವಿಗಾಗಿ ಉಳಿಸಿಕೊಳ್ಳಲು ಗೊಲ್ಲ ಸಮುದಾಯದ ಅಲೆದಾಡುತ್ತಿದೆ. ಉಳುಮೆ ಮಾಡಲು ಗೋಮಾಳದ ಜಮೀನು ಪಡೆಯಲು ದಲಿತ ಕುಟುಂಬಗಳ ಪರದಾಡುತ್ತಿದೆ. ಒಟ್ಟಿನಲ್ಲಿ 40 ವರ್ಷದ ಗೊಲ್ಲ ಮತ್ತು ದಲಿತರ ನಡುವಿನ ಸಂಘರ್ಷಕ್ಕೆ ಪರಿಹಾರವೇ ಇಲ್ಲದಂತಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…