Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. 1.08,2024 ರಲ್ಲಿ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕಾನೂನು ಚೌಕಟ್ಟಿನಲ್ಲಿ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿದ್ದೇವೆ. ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತವಾಗಿದೆ. ರಾಜ್ಯಪಾಲರು ಸಂವಿಧಾನ ವಿರೋಧಿ ಪತ್ರ ಕೊಟ್ಟಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ತಿಳಿಸಿದರು. ಶೋಕಾಸ್ ನೋಟಿಸ್ ಗೆ ಈಗಾಗಲೇ ಉತ್ತರ ನೀಡಲಾಗಿತ್ತು. ಇಂದು ನೇರವಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಪತ್ರ ಕಳುಹಿಸಿದ್ದಾರೆ. ಇದಕ್ಕೆ ಕಾನೂನಿನ ಮೂಲಕವೇ ಉತ್ತರ ಕೊಡುತ್ತೇವೆ. ಸರ್ಕಾರ ಇಂಥ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಹೊಸಪೇಟೆ: ತುಂಗಭದ್ರಾ ಡ್ಯಾಂಗೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಮಾಡೋದಕ್ಕೆ ಮೊದಲೇ ಹೇಳಿದ್ದೆ. ಅಗ ಅಧಿಕಾರಿಗಳು ಎಲ್ಲಾ ಸರಿ ಇದೆ ಅಂತಾ ಹೇಳಿದರು. ಅಂದು ಮುನ್ನೆಚ್ಚರಿಕೆ ತೆಗೆದುಕೊಂಡಿದಿದ್ದರೆ ಈ ಘಟನೆಗೆ ಕಾರಣ ಆಗುತ್ತಿರಲಿಲ್ಲ ಅಂತ ಡ್ಯಾಂ ಗೇಟ್ ತಜ್ಞ ಕನ್ನಯ್ಯ ನಾಯ್ಡು ಹೇಳಿದ್ದಾರೆ. ನಗರದ ಟಿಬಿಡ್ಯಾಂನ ಚಕ್ರವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ವಿಷಯ ತಿಳಿದ ನಂತರ ಮೂರು ರಾಜ್ಯಗಳ ನೀರಾವರಿ ಹಾಗೂ ಡ್ಯಾಂ ಅಧಿಕಾರಿಗಳ ಜತೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆಗೆ ಚರ್ಚೆ ಮಾಡಿ ಸಿಡಬ್ಲೂಸಿ ಅಪ್ರೂವಲ್ ತಗೊಂಡೆವು. ಶುಕ್ರವಾರ ರಾತ್ರಿ ನೀರಿನಲ್ಲಿ ಎಲಿಮೆಂಟ್ ಅಳವಡಿಕೆ ಯಶಸ್ಸು ಆಗಿದೆ. ಶನಿವಾರ ಎರಡು ಎಲಿಮೆಂಟ್ ಅಳವಡಿಕೆ ಮಾಡುತ್ತೇವೆ. ಸೋಮವಾರಕ್ಕೆ ಮಿಕ್ಕಿದ್ದು ಕೆಲಸ ಮುಗಿಯುತ್ತೆ ಅಂತ ತಿಳಿಸಿದ್ರು. ಜಲಾಶಯ ಒಂದು 100 ವರ್ಷ ಬಾಳಿಕೆ ಬರುತ್ತೆ. ಕ್ರಸ್ಟ್ ಗೇಟ್ ಗಳು 50 ವರ್ಷ ಗೇಟ್ ಬಾಳಿಕೆ ಬರುತ್ತೆ. ಸದ್ಯ ಟಿಬಿಡ್ಯಾಂ ಗೇಟ್ 70 ವರ್ಷ ಆಗಿದೆ. ಗೇಟ್ ಬದಲಿಸಿದರೆ, ಇನ್ನು 30…
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂದುಳಿದ ವರ್ಗಗಳ ವೇದಿಕೆ, ಕುರುಬರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಹೋರಾಟ ಆರಂಭಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಮೈಸೂರಿನ ನ್ಯಾಯಾಲಯದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ, ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಶಾಲಾ ಬಸ್ ಹರಿದು ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ವಿನಾಯಕನಗರದಲ್ಲಿ ನಡೆದಿದೆ. ತೇಜಸ್(14) ವರ್ಷದ ಬಾಲಕ ಮೃತ ದುರ್ದೈವಿಯಾಗಿದ್ದಾನೆ. ಬೈಕ್ ನಿಂದ ಬಾಲಕ ಆಯತಪ್ಪಿ ಕೆಳಗೆ ಬಿದ್ದಿದ್ದು, ಈ ವೇಳೆ ಬಸ್ ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೇಜಸ್ 9ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಬೈಕ್ ನಿಂದ ಬಿದ್ದ ವೇಳೆ ಬಾಲಕನ ತಲೆಯ ಮೇಲೆಯೇ ಬಸ್ ನ ಚಕ್ರ ಹರಿದಿದೆ. ಪರಿಣಾಮವಾಗಿ ಬಾಲಕ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ. ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ವಿದ್ಯುತ್ ಆಘಾತದಿಂದ ಇಬ್ಬರು ಯುವಕರು ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಪಾವಗಡ ತಾಲ್ಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಸರ್ವೇ ನಂಬರ್ 293 ರ ಜಮೀನಿನಲ್ಲಿ ನಡೆದಿದೆ. ಅನಿಲ್ ಕುಮಾರ್(29), ಪುಟ್ಟರಾಜು(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ರೈತಾಪಿವರ್ಗದವರಾಗಿದ್ದಾರೆ. ಸುಮಾರು 3 ಎಕರೆ ಜಮೀನಿನಲ್ಲಿ ಇವರು ಶೇಂಗಾ ಬಿತ್ತನೆ ಮಾಡಿದ್ದರು. ಕಾಡು ಪ್ರಾಣಿಗಳಿಂದ ಬೆಳೆ ಉಳಿಸಿಕೊಳ್ಳಲು ಪ್ರತಿನಿತ್ಯ ಹೊಲಕ್ಕೆ ಬಂದು ನೀರು ಹಾಯಿಸುತ್ತಿದ್ದರು. ಶುಕ್ರವಾರ ರಾತ್ರಿಯೂ ಹೊಲಕ್ಕೆ ಬಂದಿದ್ದರು. ರಾತ್ರಿ ವಿಪರೀತ ಮಳೆ ಕೂಡ ಇತ್ತು. ಬೆಳಗ್ಗಿನ ವೇಳೆ ಇಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಹೊಲಕ್ಕೆ ತಂತಿಬೇಲಿ ಕಟ್ಟಿದ್ದರು. ಆದರೆ ವಿದ್ಯುತ್ ಸಂಪರ್ಕಕೊಟ್ಟಿರಲಿಲ್ಲ, ಈ ಹುಡುಗರು ನಮಗೆ ಗೊತ್ತಿಲ್ಲದೆ ವಿದ್ಯುತ್ ಸಂಪರ್ಕ ಕೊಟ್ಟಿದ್ದರೋ ಗೊತ್ತಿಲ್ಲ ಅಂತ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಘಟನೆಯ ಮಾಹಿತಿ ತಿಳಿದು ಕೂಡಲೇ ಪಾವಗಡ ಅರಸೀಕೆರೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ತಾರಾಸಿಂಗ್ ಮತ್ತು ಮುಖ್ಯಪೇದೆ ಸಿದ್ದೇಶ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು…
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ತೊಡರನಾಳು ಗ್ರಾಮದಲ್ಲಿ ಸುರಿದ ಭಾರೀ ಮಳೆಗೆ ಗ್ರಾಮದ ಮಹಾಂತೇಶ ಎನ್ನುವ ರೈತರ ಜಮೀನಿನಲ್ಲಿ ಬೆಳೆದು ನಿಂತಿದ್ದ ರಾಗಿ ಬೆಳೆಗೆ ಹಾನಿಯಾಗಿದೆ. ಊರು ಪಕ್ಕಾದಲ್ಲಿ ಹರಿಯುವ ಒಂದು ಹಳ್ಳದ ನೀರನ್ನು, ಪಕ್ಕದ ಜಮೀನಿನ ಮಾಲೀಕರು ಸ್ವಾಭಾವಿಕ ವಾಗಿ ಹರಿಯುತ್ತಿದ್ದ ಹಳ್ಳವನ್ನು ಮಾರ್ಗ ಬದಲಾವಣೆ ಮಾಡಿ ಹಾನಿಯಾಗಿರುವ ಜಮೀನಿನ ನೇರಕ್ಕೆ ಹಳ್ಳ ತೊಡಿಸಿರುವುದೇ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಗೂಳೂರು ಗ್ರಾಮ ಪಂಚಾಯತ್ ನಲ್ಲಿ ವಿಶಿಷ್ಟ ರೀತಿಯಲ್ಲಿ ಸ್ವಾತಂತ್ರ ದಿನವನ್ನು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ SSLC—PUC ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಶೇಷವಾಗಿ ತರಕಾರಿಯಲ್ಲಿ ಮಾಡಲಾದ ಭಾರತ ದೇಶ ಮತ್ತೆ ಬಾವುಟದ ಕಲಾಕೃತಿ ಜನ ಮನ ಸೆಳೆಯಿತು. ಸಮಾರಂಭದಲ್ಲಿ ಅಧ್ಯಕ್ಷರಾದ ರೇಣುಕಮ್ಮ ಮತ್ತು ಉಪಾಧ್ಯಕ್ಷರಾದ ನವೀನಗೌಡ ಹಾಗೂ ಸರ್ವ ಸದಸ್ಯರು ಹಾಗೂ ಗ್ರಾಮದ ಮುಖಂಡರು, ಸಾರ್ವಜನಿಕರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಆದ ಡಿ.ಷoಷೀರ್ ರವರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ರಕ್ಷಾಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. 2024ರಲ್ಲಿ ರಕ್ಷಾಬಂಧನವನ್ನು ಸೋಮವಾರ, ಆಗಸ್ಟ್ 19ರಂದು ಆಚರಿಸಲಾಗುವುದು. ಈ ದಿನ ಸಹೋದರಿಯರು ತಮ್ಮ ಸಹೋದರರ ಆರತಿ ಬೆಳಗಿ, ಪ್ರೀತಿಯ ಪ್ರತೀಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದವನ್ನೂ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ರಕ್ಷಾಬಂಧನದಿಂದ ಸಹೋದರ–ಸಹೋದರಿಯರ ನಡುವೆ ಪ್ರೀತಿ ಹೆಚ್ಚಾಗುವುದರೊಂದಿಗೆ ಅವರ ನಡುವೆ ಇರುವ ಕೊಡು–ಕೊಳ್ಳುವ ಲೆಕ್ಕಾಚಾರ ಕಡಿಮೆಯಾಗುತ್ತದೆ. ಈ ಹಬ್ಬವು ಇಬ್ಬರಿಗೂ ಈಶ್ವರನತ್ತ ಪ್ರಯಾಣಿಸುವ ಅವಕಾಶ ಒದಗಿಸುತ್ತದೆ. ಇತಿಹಾಸದ ಪುಟಗಳಲ್ಲಿ ರಕ್ಷಾಬಂಧನ: 1. ಪಾತಾಳದಲ್ಲಿನ ಬಲಿರಾಜನ ಕೈಗೆ ಲಕ್ಷ್ಮೀಯು ರಾಖಿಯನ್ನು ಕಟ್ಟಿ ಅವನನ್ನು ತನ್ನ ಸಹೋದರನನ್ನಾಗಿ ಮಾಡಿಕೊಂಡಳು ಮತ್ತು ನಾರಾಯಣನನ್ನು ಮುಕ್ತಗೊಳಿಸಿದಳು. ಆ ದಿನ ಶ್ರಾವಣ ಹುಣ್ಣಿಮೆ ಇತ್ತು. 2. ಇಂದ್ರ ಮತ್ತು ದೈತ್ಯರ ನಡುವೆ 12 ವರ್ಷಗಳಿಂದ ಘೋರ ಯುದ್ಧ ನಡೆದಿತ್ತು. ದೈತ್ಯರು ಗೆಲ್ಲುತ್ತಿದ್ದರು, ಇಂದ್ರನ ಶಕ್ತಿ ಕುಸಿಯುತ್ತಿತ್ತು. ಇಂದ್ರನು ಯುದ್ಧದಿಂದ ಹಿಂದೆ ಸರಿದು…
ತುಮಕೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಬರುವ ಹಾಗೂ ನಗರದಲ್ಲಿ ಓಡಾಡುವಂತಹ ಮಹಿಳೆಯರ ಮೈ ಮೇಲಿನ ಚಿನ್ನಾಭರಣಗಳನ್ನು ದೋಚಲು ಹೊಂಚು ಹಾಕುವ ಕಳ್ಳ ಕಾಕರ ಮೇಲೆ ಹದ್ದಿನ ಕಣ್ಣು ಇರಿಸುವ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಖುದ್ದು ತುಮಕೂರು ನಗರದ ರಸ್ತೆಗಳಲ್ಲಿ ತಮ್ಮ ಅಧಿಕಾರಿಗಳು ತಂಡದೊಂದಿಗೆ ಸಂಚರಿಸಿದರು. ಸಂಜೆಯ 6:30 ರಿಂದ ನಗರದ ಬದಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ ಚಂದ್ರಶೇಖರ್, ಸೇರಿದಂತೆ ಸಬ್ ಇನ್ಸ್ ಪೆಕ್ಟರ್ ಗಳು ,ಇನ್ಸ್ಪೆಕ್ಟರ್ ಗಳು ಕಾಲ್ನಡಿಗೆಯಲ್ಲಿ ಸಾಗಿದರು. ಬಿ.ಹೆಚ್. ರಸ್ತೆಯಲ್ಲಿರುವ ಮಹಾಲಕ್ಷ್ಮಿ ದೇಗುಲ ಸೇರಿದಂತೆ ವಿವಿಧ ದೇವಸ್ಥಾನಗಳ ಬಳಿ ಕಾಲ್ನಡಿಗೆಯಲ್ಲಿ ಸಾಗಿದ ಪೊಲೀಸ್ ವರಿಷ್ಠಾಧಿಕಾರಿ ಮಹಿಳೆಯರ ಚಿನ್ನಾಭರಣ ದೋಚುವ ಕಳ್ಳ ಕಾಕರಿಗೆ ಪರೋಕ್ಷವಾಗಿ ಬಿಸಿಮುಟ್ಟಿಸಿದರು. ವಿವಿಧ ದೇಗುಲಗಳ ಬಳಿ ತೆರಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ, ಚಿನ್ನಾಭರಣವನ್ನು ಹಾಕಿಕೊಂಡು ಓಡಾಡುತ್ತಿದ್ದ ಮಹಿಳೆಯರನ್ನು ಕರೆಸಿ ಜಾಗ್ರತೆಯಿಂದ ಇರುವಂತೆ ಸೂಚಿಸಿದರು. ಇನ್ನು ಸಂಚಾರಿ ನಿಯಮ ಉಲ್ಲಂಘಿಸಿ ಓಡಾಡುತ್ತಿದ್ದ ದ್ವಿಚಕ್ರ ವಾಹನ…
ತುಮಕೂರು: ನಗರದ ಸರಕಾರಿ ಪ್ರವಾಸಿ ಮಂದಿರದಲ್ಲಿ ಸಂಸದ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಕಚೇರಿ ಉಪಯೋಗಕ್ಕೆ ನೀಡಿ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆದಿರುವುದರಲ್ಲಿ ರಾಜಕೀಯ ಕೈವಾಡವಿದೆ ಎಂದು ವಿಧಾನಸಭೆ ಜೆಡಿಎಸ್ ವಿರೋಧಪಕ್ಷದ ನಾಯಕ ಸುರೇಶ್ ಬಾಬು ಅನುಮಾನ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಈ ಆದೇಶ ವಾಪಸ್ ಪಡೆದಿರುವುದರಲ್ಲಿ ರಾಜಕೀಯ ಅಡಗಿದೆಯೇ, ಅಥವಾ ಕಚೇರಿಯನ್ನು ಕೊಟ್ಟು ಅದನ್ನು ವಾಪಸ್ ಪಡೆಯುವುದು ಒಂದು ದಂಧೆಯಾಗಿದೆಯೇ ಎಂದು ಅನುಮಾನ ವ್ಯಕ್ತವಾಗಿದೆ. ಸರಕಾರ ಒಂದು ನಿಯಮ ಇಟ್ಟುಕೊಂಡಿರಬೇಕು, ಇದ್ರಲ್ಲಿ ಕೈವಾಡವಿದೆಯೆ ಎಂದು ಅನುಮಾನ ಮೂಡಿದೆ. ಇದ್ರಲ್ಲಿ ರಾಜಕೀಯ ಬೆರೆಸದೆ ಗೌರವಯುತವಾಗಿ ಸರಕಾರ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸಂಸದರು ಮತ್ತು ಸಚಿವರಾಗಿರುವ ವಿ.ಸೋಮಣ್ಣ ಸರಕಾರದ ಒಂದು ಅಂಗವಾಗಿದ್ದಾರೆ. ಈ ಸ್ಥಳವು ಸಂಸದರ ಕಚೇರಿಗೆ ಸಹಕಾರಿಯಾಗಿತ್ತು. ಸರಕಾರಿ ಐಬಿ ಬಳಕೆಯಲ್ಲಿರಲಿಲ್ಲ. ಏನೂ ಕೂಡ ಉಪಯೋಗ ಆಗುತ್ತಿರಲಿಲ್ಲ. ಶಿಥಿಲಗೊಂಡಿತ್ತು. ಜಿಲ್ಲಾಧಿಕಾರಿಗಳು ಗುರುತಿಸಿ, ಸರಕಾರದ ಆದೇಶದ ಮೇರೆಗೆ ಲೋಕಸಭೆ ಸದಸ್ಯರು ಮತ್ತು ಕೇಂದ್ರದ ಸಚಿವರಿಗೆ ಕಚೇರಿಗೆ ಉಪಯೋಗಿಸಲು ಆದೇಶ ಹೊರಡಿಸಲಾಗಿತ್ತು…