Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ತುಮಕೂರು: ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್ ತುರ್ತು ಚಿಕಿತ್ಸೆ ಸೇವೆ ಮಾತ್ರ ನೀಡಲು ನಿರ್ಧಾರಿಸಲಾಗಿದೆ. ಭಾರತಿಯ ವೈದ್ಯಕೀಯ ಸಂಘದಿಂದ ಓಪಿಡಿ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ಓಪಿಡಿ ಬಂದ್ ಮಾಡಿ ಮುಷ್ಕರಕ್ಕೆ ಬೆಂಬಲ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಕೊರಟಗೆರೆ: ಮಾಜಿ ಮುಖ್ಯಮಂತ್ರಿ ದಿವಗಂತ ಡಿ.ದೇವರಾಜ ಅರಸುರವರ 109ನೇ ಜನ್ಮ ದಿನಾಚರಣೆಯನ್ನು ತಾಲ್ಲೂಕು ಮಟ್ಟದಲ್ಲಿ ಆಚರಿಸಲು ಪೂರ್ವ ಭಾವಿ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಲಾಗುತ್ತು. ದಿನಾಂಕ : 20.08.2024 ರಂದು ಕೊರಟಗೆರೆ ತಾಲ್ಲೂಕು ಕಛೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 9:30 ಗಂಟೆಗೆ ಶ್ರೀ ದಿವಂಗತ ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆಯನ್ನು ಆಚರಿಸಲು ತೀರ್ಮಾನಿಸಲಾಗಿದೆ. ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಂಘ ಸಂಸ್ಥೆಯ ಮುಖ್ಯಸ್ಥರುಗಳು, ಜನಾಂಗದ ಮುಖ್ಯಸ್ಥರುಗಳು ಮತ್ತು ಪತ್ರಿಕಾ/ಮಾಧ್ಯಮ ವರದಿಗಾರರು ಹಾಗೂ ಸಾರ್ವಜನಿಕರು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಕೆ. ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅನಂತ ರಾಜು ಆರ್ ಪತ್ರಿಕಾ ಪ್ರಕಟಣೆಯಲ್ಲಿ ಆಹ್ವಾನಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಕನ್ನಡ ಚಿತ್ರರಂಗಕ್ಕೆ ಹಲವು ಪ್ರಶಸ್ತಿಗಳು ಅರಸಿ ಬಂದಿದೆ. ಕಾಂತಾರ ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದ್ರೆ, ಅತ್ಯುತ್ತಮ ಕನ್ನಡ ಚಿತ್ರದ ರಾಷ್ಟ್ರೀಯ ಪ್ರಶಸ್ತಿ ಕೆಜಿಎಫ್-2ಗೆ ಲಭಿಸಿದೆ. ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆಯಾದ ಚಲನ ಚಿತ್ರಗಳಿಗೆ ಇಂದು ಪ್ರಶಸ್ತಿಗಳನ್ನು ಘೋಷಿಸಿದ್ದು, ಈ ಬಾರಿಯೂ ಸಹ ದಕ್ಷಿಣ ಭಾರತ ಚಿತ್ರರಂಗವೇ ಮೇಲುಗೈ ಸಾಧಿಸಿದೆ. ಹಲವು ಪ್ರಮುಖ ಪ್ರಶಸ್ತಿಗಳನ್ನು ದಕ್ಷಿಣ ಭಾರತ ಚಿತ್ರರಂಗ ಬಾಚಿಕೊಂಡಿದೆ. ಅತ್ಯುತ್ತಮ ನಟ ಮತ್ತು ನಟಿ, ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶಕ ಅಂಥಹಾ ಪ್ರಮುಖ ಪ್ರಶಸ್ತಿಗಳು ದಕ್ಷಿಣ ಭಾರತ ಚಿತ್ರರಂಗದ ಪಾಲಾಗಿವೆ. ಫೀಚರ್ ಫಿಲಂ ಕ್ಯಾಟಗರಿಯಲ್ಲಿ ಬರೋಬ್ಬರಿ 32 ಭಾಷೆಗಳ 309 ಸಿನಿಮಾಗಳು ಸ್ಪರ್ಧೆಗೆ ಅರ್ಜಿ ಸಲ್ಲಿಸಿದ್ದವು. ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ 27 ಪ್ರಶಸ್ತಿಗಳನ್ನು ನೀಡಲಾಗಿದ್ದು, ಪ್ರತಿ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಸಿನಿಮಾ,…
ಕೊಲ್ಕತ್ತಾದಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು(ಆಗಸ್ಟ್ 17) ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಪ್ರತಿಭಟನೆಗೆ ಕರೆ ಕೊಟ್ಟಿದೆ. ಐಎಂಎ ಕೊಟ್ಟಿರುವ ಕರೆಗೆ ಸರ್ಕಾರಿ ವೈಧ್ಯಾದಿಕಾರಿಗಳ ಸಂಘ, ಖಾಸಗಿ ಆಸ್ಪತ್ರೆ ಗಳ ಒಕ್ಕೂಟ ಮತ್ತು ಹಲವು ವೈದ್ಯಕೀಯ ಅಸೋಸಿಯೇಷನ್ಗಳು ಬೆಂಬಲ ಕೊಟ್ಟಿದ್ದು, ಶನಿವಾರ ಕರ್ನಾಟಕದಲ್ಲಿ ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಆಸ್ಪತ್ರೆ ಓಪಿಡಿ ಬಂದ್ ಆಗಲಿದೆ. ಅಂದರೆ 24 ಗಂಟೆಗಳ ಕಾಲ ಓಪಿಡಿ ಸೇವೆ ಸ್ಥಗಿತವಾಗಲಿದೆ. ಇದರಿಂದ ಮಕ್ಕಳು, ವಯಸ್ಸಾದವರಿಗೂ ಓಪಿಡಿ ಸೇವೆ ಇರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಿಬೇಕಾಗಿದೆ. ಮುಷ್ಕರಕ್ಕೆ ಯಾರೆಲ್ಲ ಬೆಂಬಲ..! IMA ವ್ಯಾಪ್ತಿಯ ವೈದ್ಯರ ಬೆಂಬಲ ಫನಾ ಬೆಂಬಲ ಖಾಸಗಿ ಆಸ್ಪತ್ರೆಗಳ ಒಕ್ಕೂಟ ಸರ್ಕಾರಿ ವೈದ್ಯಾಧಿಕಾರಿಗಳ ಅಸೋಸಿಯೇಷನ್ ಮಕ್ಕಳ ವೈದ್ಯರ ಅಸೋಸಿಯೇಷನ್ ಅರ್ಥೋಪಿಟಿಕ್ ಅಸೋಸಿಯೇಷನ್ ಮೆಡಿಕಲ್ ಕಾಲೇಜ್ ವೈದ್ಯರ ಅಸೋಸಿಯೇಷನ್ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಕೊಲ್ಕತ್ತಾದ ಮೃತ ವೈದ್ಯೆಯ ಸಾವಿಗೆ ನ್ಯಾಯ ಒದಗಿಸಬೇಕು. ಹಿಂಸಾಚಾರದ ವಿರುದ್ಧ ವೈದ್ಯರಿಗೆ ರಕ್ಷಣೆ ಒದಗಿಸಬೇಕು.…
ಕೇಂದ್ರ ಕುಟುಂಬ ಕಲ್ಯಾಣ ಸಚಿವಾಲಯದ ಆಶ್ರಯದಲ್ಲಿ ನಡೆಸಿದ ರಾಷ್ಟ್ರೀಯ ಕುಟುಂಬ ಕಲ್ಯಾಣದ ಸಮೀಕ್ಷೆಯು ಭಾರತದ ರಾಜ್ಯಗಳಲ್ಲಿ ಮದ್ಯ ಬಳಕೆದಾರರ ಸಂಖ್ಯೆಯ ಬಗ್ಗೆ ಹಲವಾರು ಪ್ರಮುಖ ವಿಷಯಗಳನ್ನು ಬಹಿರಂಗಪಡಿಸಿದೆ. ಈ ಅಧ್ಯಯನದಲ್ಲಿ, ಆಲ್ಕೋಹಾಲ್ ಸೇವಿಸುವ ಜನರನ್ನು ಪುರುಷರು ಮತ್ತು ಮಹಿಳೆಯರು ಎಂದು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಆಶ್ಚರ್ಯಕರವಾಗಿ, ಭಾರತದಲ್ಲಿ, ನಗರಗಳಲ್ಲಿ ವಾಸಿಸುವವರಿಗಿಂತ ಹಳ್ಳಿಗಳಲ್ಲಿ ವಾಸಿಸುವ ಜನರು ಹೆಚ್ಚು ಮದ್ಯ ಸೇವಿಸುತ್ತಾರೆ. ಭಾರತದಲ್ಲಿ, 15 ವರ್ಷಕ್ಕಿಂತ ಮೇಲ್ಪಟ್ಟ 18.7% ಪುರುಷರು ಮತ್ತು 1.3% ಮಹಿಳೆಯರು ಮದ್ಯವ್ಯಸನಿಗಳು, ಮತ್ತು ನಗರ ಮತ್ತು ಗ್ರಾಮೀಣ ಪ್ರದೇಶಗಳಾಗಿ ವಿಂಗಡಿಸಿದರೆ, ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಮಹಿಳೆಯರಲ್ಲಿ 1.6% ಮದ್ಯವ್ಯಸನಿಗಳು ಮತ್ತು 0.6% ನಗರ ಮಹಿಳೆಯರು ಮದ್ಯವ್ಯಸನಿಗಳು. . ಪುರುಷರಿಗೆ ಸಂಬಂಧಿಸಿದಂತೆ, ನಗರ ಪುರುಷರಲ್ಲಿ 16.5% ಮತ್ತು ಗ್ರಾಮೀಣ ಪುರುಷರಲ್ಲಿ 19.9% ಮದ್ಯಪಾನ ಮಾಡುತ್ತಾರೆ. ರಾಜ್ಯಗಳಾಗಿ ವಿಂಗಡಿಸಿದಾಗ ಅರುಣಾಚಲ ಪ್ರದೇಶವು ಭಾರತದಲ್ಲಿ ಅತಿ ಹೆಚ್ಚು ಪುರುಷ ಕುಡುಕರನ್ನು ಹೊಂದಿರುವ ರಾಜ್ಯಗಳಲ್ಲಿ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ ಶೇ.52.6ರಷ್ಟು ಪುರುಷರು ಮದ್ಯವ್ಯಸನಿಗಳಾಗಿದ್ದಾರೆ. ನಂತರದ ಸ್ಥಾನದಲ್ಲಿ…
ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸಹಾಯ ಮಾಡಲು ಕೇಂದ್ರ ಸರ್ಕಾರವು 2018 ರಲ್ಲಿ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿ, ಬಡವರು ಐದು ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ. ಈ ಯೋಜನೆಯಲ್ಲಿ ಒಬ್ಬ ವ್ಯಕ್ತಿಯು ಒಂದು ವರ್ಷದಲ್ಲಿ ಎಷ್ಟು ಉಚಿತ ಚಿಕಿತ್ಸೆಯನ್ನು ಪಡೆಯಬಹುದು? ಯೋಜನೆಯ ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್ ಗೋಲ್ಡನ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ ತೋರಿಸುವ ಮೂಲಕ, ಫಲಾನುಭವಿಗಳು ಪಟ್ಟಿ ಮಾಡಲಾದ ಆಸ್ಪತ್ರೆಗಳಲ್ಲಿ ಐದು ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು. ಆಯುಷ್ಮಾನ್ ಗೋಲ್ಡನ್ ಕಾರ್ಡ್ ದೇಶಾದ್ಯಂತ 13,000 ಕ್ಕೂ ಹೆಚ್ಚು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಮಾನ್ಯವಾಗಿದೆ. ಆಯುಷ್ಮಾನ್ ಗೋಲ್ಡನ್ ಕಾರ್ಡ್ ಅನ್ನು ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಮಾಡಬಹುದು. ಈ ಕಾರ್ಡ್ ಕ್ಯಾನ್ಸರ್ ಮತ್ತು ಹೃದ್ರೋಗದಂತಹ ಗಂಭೀರ ಕಾಯಿಲೆಗಳು ಸೇರಿದಂತೆ ಸುಮಾರು 1500 ಕಾಯಿಲೆಗಳಿಗೆ ಚಿಕಿತ್ಸೆ ಸೌಲಭ್ಯವನ್ನು ಒದಗಿಸುತ್ತದೆ. ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ, ಫಲಾನುಭವಿ 5 ಲಕ್ಷ ರೂ.ಗಳವರೆಗೆ…
ಕನ್ನಡ ಚಿತ್ರರಂಗಕ್ಕೆ ಇರುವ ಕಂಟಕ ದೂರಾಗಲೆಂದು ಇತ್ತೀಚೆಗಷ್ಟೆ ಕಲಾವಿದರ ಸಂಘದ ವತಿಯಿಂದ ಹೋಮ, ಹವನ ವಿವಿಧ ರೀತಿಯ ಪೂಜೆಗಳನ್ನು ಮಾಡಿಸಲಾಯ್ತು. ನಟ ದೊಡ್ಡಣ್ಣ ದಂಪತಿ ಕಲಾವಿದರ ಪರವಾಗಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವು ಕಲಾವಿದರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಬಗ್ಗೆ ಚಿತ್ರರಂಗದಲ್ಲಿ ಹೆಚ್ಚಿನ ಟೀಕೆಗಳೇನೂ ವ್ಯಕ್ತವಾಗಿರಲಿಲ್ಲ. ಆದರೆ ಈಗ ಸಾಮಾಜಿಕ ಕಾರ್ಯಕರ್ತರೊಬ್ಬರು ಕಲಾವಿದರ ಸಂಘದ ವಿರುದ್ಧ ಭ್ರಷ್ಟಾಚಾರ, ಅನೀತಿ ಆರೋಪಗಳನ್ನು ಮಾಡಿದ್ದಾರೆ. ಅಲ್ಲದೆ ನಟ ದೊಡ್ಡಣ್ಣ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಾಮಾಜಿಕ ಹೋರಾಟಗಾರ, ರಾಜಕಾರಣಿ ಎನ್.ಆರ್.ರಮೇಶ್ ಈ ಬಗ್ಗೆ ಮಾತನಾಡಿದ್ದು, ‘ಸಹಕಾರ ಸಂಘಗಳ ನಿಯಮದ ಅನುಸಾರ ಕಲಾವಿದರ ಸಂಘಕ್ಕೆ ಚುನಾವಣೆಗಳನ್ನು ನಡೆಸಲಾಗಿಲ್ಲ. ಕಲಾವಿದರ ಸಂಘದ ಯಾವೊಬ್ಬ ಪದಾಧಿಕಾರಿಯೂ ಸಹ ಸೂಕ್ತವಾಗಿ ಜವಾಬ್ದಾರಿಗಳನ್ನು ನಿಭಾಯಿಸಿಲ್ಲ. ನಿಯಮದ ಪ್ರಕಾರ ಲೆಕ್ಕ ಪರಿಶೋಧನಾ ವರದಿಯನ್ನು ಸಹ ಸಲ್ಲಿಸಿಲ್ಲ. ದೊಡ್ಡಣ್ಣ ಕಲಾವಿದರ ಸಂಘದ ಖಜಾಂಚಿ ಆಗಿದ್ದಾರೆ ಆದರೆ ಉಳಿದ ಪದಾಧಿಕಾರಿಗಳು ಯಾರು? ಅವರ ಕಾರ್ಯವೇನು ಎಂಬುದು ಯಾರಿಗೂ ಗೊತ್ತಿಲ್ಲ’…
ತುಮಕೂರು: ಸಿರಾ ತಾಲ್ಲೂಕು ಹೊಯಿಲ್ ದೊರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡಕ್ಕೆ ಬಾಲಕನೊಬ್ಬ ಬಲಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ವಿದ್ಯುತ್ ಅವಘಡದಲ್ಲಿ ಬಾಲಕನೊಬ್ಬ ಸಾವನ್ನಪ್ಪಿದ ಬಗ್ಗೆ ನಮ್ಮತುಮಕೂರು ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಕೆ.ಟಿ. ತಿಪ್ಪೇಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಬೆಚ್ಚಿಬೀಳಿಸುವ ಮಾಹಿತಿ ನೀಡಿದ್ದಾರೆ. ಇಲ್ಲಿ ತೀರಾ ಅವೈಜ್ಙಾನಿಕವಾಗಿ ಟ್ರಾನ್ಸ್ ಫರ್ಮರ್ ಅಳವಡಿಸಿದ್ದು, ಬೆಸ್ಕಾಂನ ತಳಮಟ್ಟದ ಅಧಿಕಾರಿಗಳ ನಿರ್ಲಕ್ಷ ಹಾಗೂ ಮೇಲಿನ ಅಧಿಕಾರಿಗಳ ಬೇಜಾವ್ದಾರಿತನದಿಂದ ಒಂದು ಮಗುವಿನ ಜೀವ ಬಲಿಯಾಗಿದೆ. ಗ್ರಾಮಸ್ಥರು ಹಲವು ಬಾರಿ ಈ ಬಗ್ಗೆ SO / AEE ಗಮನಕ್ಕೆ ತಂದರೂ ಈ ಬಗ್ಗೆ ಗಮನಹರಿಸಿಲ್ಲ ಎನ್ನುವುದು ತಿಳಿದು ಬಂದಿದೆ. ತುಮಕೂರು ಜಿಲ್ಲೆಯಲ್ಲಿ ಒಟ್ಟಾರೆ ಕಳೆದ ಐದು ವರ್ಷಗಳಲ್ಲಿ ಈ ರೀತಿ ನಾಲ್ಕು ಮಕ್ಕಳು ಬಲಿಯಾಗಿದ್ದಾರೆ. ಆಯೋಗ ಈಗಾಗಲೇ ರಾಜ್ಯದ್ಯಂತ…
ತುಮಕೂರು: ಪ್ರಸಿದ್ಧ ನಟ ವಿಕ್ರಂ ರವಿಚಂದ್ರನ್ ಅವರ ಹುಟ್ಟುಹಬ್ಬದ ಅಂಗವಾಗಿ, ಅವರ ಸ್ನೇಹಿತರ ಬಳಗವು ಶೆಟ್ಟಿಹಳ್ಳಿಯಲ್ಲಿರುವ ಸ್ಪಂದನ ಅನಾಥಾಶ್ರಮದಲ್ಲಿ ಆಯೋಜಿಸಿತು. ಈ ಸಂದರ್ಭದಲ್ಲಿ ವಿಕ್ರಂರವರ ಆಪ್ತ ಸ್ನೇಹಿತರು, ಜಗದೀಶ್, ರಮೇಶ್, ಪರಮೇಶ್, ಸಿದ್ಧಲಿಂಗಪ್ಪ, ಬಾಬು ಮತ್ತು ಇತರ ಸದಸ್ಯರು ಭಾಗವಹಿಸಿದ್ದರು. ಅನಾಥಾಶ್ರಮದ ಮಕ್ಕಳಿಗೆ ವಿಶೇಷ ಭೋಜನವನ್ನು ವಿತರಿಸುವ ಮೂಲಕ ವಿಕ್ರಂ ಅವರ ಸ್ನೇಹಿತರು ಅವರು ಆಪ್ತವಾದ ಗೆಳೆಯನ ಜನ್ಮದಿನವನ್ನು ಸಾರ್ಥಕವಾಗಿ ಆಚರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮವಣ್ಣ ಅವರಿಗೆ ತುಮಕೂರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ನೀಡಲಾಗಿದ್ದ ಹಳೆಯ ಪರಿವೀಕ್ಷಣಾ ಕಟ್ಟಡವನ್ನು ದುರಸ್ತಿಗೊಳಿಸಿ ಕಚೇರಿಯನ್ನಾಗಿ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಸಚಿವ ಸೋಮಣ್ಣ ಅವರಿಗೆ ಕಚೇರಿಗೆ ಉಪಯೋಗಕ್ಕೆ ನೀಡಲು ನೀಡಲಾಗಿದ್ದ, ಅನುಮೋದನೆಯನ್ನು ಹಿಂಪಡೆಯಲಾಗಿದೆ ಎಂದು ಆಗಸ್ಟ್ 16 ರಂದು ಹೊರಡಿಸಲಾಗಿರುವ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ. ಆಗಸ್ಟ್ ೩ರಂದು ಸರಕಾರದ ಅಧೀನ ಕಾಯದರ್ಶಿ ಎಂ.ಜಿ. ರಾಜಶೇಖರ್ ಹೊರಡಿಸಿರುವ ಆದೇಶ ಪತ್ರದಲ್ಲಿ ವಿ. ಸೋಮಣ್ಣ ಅವರ ಅಧಿಕಾರಾವಧಿ ಮುಗಿಯುವವರೆಗೆ ಕಚೇರಿ ಉಪಯೋಗಕ್ಕಾಗಿ ನೀಡಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q