Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಉಜನಿ ಗ್ರಾಮದಲ್ಲಿರುವ ಪ್ರೇಮಾಂಜಲಿ ಪ್ರೌಢಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು ಸ್ವಾತಂತ್ರ್ಯ ದಿನಾಚರಣೆ ಪ್ರತಿಯೊಬ್ಬ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ಮಹನೀಯರ ತ್ಯಾಗ, ಬಲಿದಾನವನ್ನು ಸ್ಮರಿಸಿಕೊಳ್ಳುವ ದಿನ ಇದಾಗಿದೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ವಿಷಯವು ‘ವಿಕ್ಷಿತ್ ಭಾರತ,’ ಅಥವಾ ‘ಅಭಿವೃದ್ಧಿ ಹೊಂದಿದ ಭಾರತ’ ಆಗಿದೆ. ವಸಾಹತುಶಾಹಿ ಆಡಳಿತದಿಂದ ವಿಮೋಚನೆ ಪಡೆಯಲು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣತೆತ್ತ, ಬಲಿದಾನ ಮಾಡಿದ ಎಲ್ಲಾ ವೀರರನ್ನು ನೆನೆದು, ಅವರಿಗೆ ನಮನ ಸಲ್ಲಿಸಲು ಪ್ರತಿ ವರ್ಷ ಕೂಡ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ರಾಷ್ಟ್ರದ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ಎಂದು ಗುರುತಿಸಲಾಗಿದೆ ಎಂದು ಸಂದೇಶ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥರಾದ ಸಿಸ್ಟರ್ ಸರಿತಾ, ಸಿದ್ದಪ್ಪ, ಗಣಪತಿ, ರಫೀದ್, ವೆಂಕಟ್ ಪಾಟೀಲ್, ಸರೋಜಿನಿ ಹಾಗೂ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ: ಅರವಿಂದ್ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಕೊರಟಗೆರೆ: ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ, ಎಲ್ಲಿ ನೋಡಿದರೂ ಸಡಗರ ಸಂಭ್ರಮ ಕಂಡು ಬಂತು. ಪ್ರತಿಯೊಂದು ಮನೆಯಲ್ಲೂ ಅವರವರ ಅನುಕೂಲಕ್ಕೆ ತಕ್ಕಂತೆ ಭಕ್ತಾದಿಗಳು ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು. ಕರ್ನಾಟಕ ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಗೊರವನಹಳ್ಳಿಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಕಳೆಗಟ್ಟಿತು. ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ಅಲಂಕಾರ, ಪುಷ್ಪ ಅಲಂಕಾರದೊಂದಿಗೆ ತಾಯಿ ಮಹಾಲಕ್ಷ್ಮೀಗೆ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ, ಪಂಚಾಭಿಷೇಕ ನಡೆಯಿತು. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಕ್ಷೇತ್ರದಲ್ಲಿ ಮುಂಜಾನೆಯಿಂದಲೇ ದೇವಿ ದರ್ಶನಕ್ಕೆ ಭಕ್ತರು ಆಗಮಿಸಿದ್ದರು. ಪುಣ್ಯಕ್ಷೇತ್ರಕ್ಕೆ ಆಗಮಿಸಿದ ಎಲೆ ರಾಂಪುರ ಮಠದ ಶ್ರೀ ಹನುಮಂತನಾಥ ಸ್ವಾಮೀಜಿ ತಾಯಿಯ ದರ್ಶನ ಪಡೆದರು. ತಾಯಿಯ ದರ್ಶನವನ್ನು ಭಕ್ತಾದಿಗಳು ಕಣ್ತುಂಬಿಕೊಂಡರು. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬೆಳಗ್ಗೆ 5ಯಿಂದ ಸಂಜೆ 9 ಗಂಟೆವರೆಗೆ ದರ್ಶನದ ವ್ಯವಸ್ಥೆಯನ್ನು ಆಡಳಿತ ಮಂಡಳಿ ಮಾಡಿದೆ. ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
“ಪ್ರತಿಶೋಧ” ಎಂಬ ಕಥೆ, ಪುರಾತನ ಕಾಲದ ಸಾಂಸ್ಕೃತಿಕ ಮತ್ತು ಸಾಮಾಜಿಕ ಸನ್ನಿವೇಶವನ್ನು ಚಿತ್ರಿಸುತ್ತದೆ, ಮತ್ತು ಕಲೆಯ ಶ್ರೇಷ್ಠತೆಯ ಮೇಲೆ ಪ್ರಾಮುಖ್ಯತೆ ನೀಡುತ್ತದೆ. ಈ ಕಥೆ, ಕಲಾವಿದರ ಮೂಲಕ ತರ್ಕ ಮತ್ತು ನ್ಯಾಯವನ್ನು ಪ್ರತಿಪಾದಿಸುವ ಶ್ರೇಷ್ಠ ಉದಾಹರಣೆಯಾಗಿದೆ. ಕಲೆಯ ಪ್ರಭಾವ ಮತ್ತು ಸಾಮರ್ಥ್ಯ: ಕಥೆಯ ಪ್ರಮುಖ ಪಾತ್ರಗಳು ರಾಮಸೇನ ಮತ್ತು ವಿಷ್ಣುಸೇನ, ಅವರು ತಮ್ಮ ಚಿತ್ರಕಲೆಯ ಮೂಲಕ ಸಮುದಾಯದಲ್ಲಿ ಕೀರ್ತಿಯನ್ನೂ, ಪ್ರಭಾವವನ್ನೂ ಸಾಧಿಸಿದ್ದಾರೆ. ಈ ಕಾಲದಲ್ಲಿ, ಚಿತ್ರಕಲೆಯು ಸಾಮಾಜಿಕ ಇಷ್ಟಗಳು ಮತ್ತು ಪ್ರಭಾವವನ್ನು ನಿಭಾಯಿಸುವ ಶಕ್ತಿ ಹೊಂದಿತ್ತು. ರಾಮಸೇನ ಮತ್ತು ವಿಷ್ಣುಸೇನ ಅವರ ಕಲೆ, ಶ್ರೇಷ್ಠತೆಯನ್ನು ತಲುಪುವುದು ಮಾತ್ರವಲ್ಲದೆ, ಅವರು ಬರೆದ ಚಿತ್ರಗಳಲ್ಲಿ ನೈತಿಕ ಪಾಠಗಳನ್ನು ಓದುಗರಿಗೆ ನೀಡುತ್ತದೆ. ಮೋಸ ಮತ್ತು ಪ್ರತಿಶೋಧ: ಕಥೆಯ ಸೆಟ್ಟಿಂಗ್ ನಲ್ಲಿ, ತಂತ್ರ ಮತ್ತು ಮೋಸಗಳು ಶ್ರೇಷ್ಠ ಕಲೆಯ ಮೇಲೆ ನೆಲೆಸಿದ ಪ್ರಸ್ತಾಪವನ್ನು ಒಳಗೊಂಡಂತೆ, ಅನುಕೇತು ತನ್ನ ಚತುರತೆಯನ್ನು ಪ್ರದರ್ಶಿಸುತ್ತದೆ. ತನ್ನ ನಷ್ಟವನ್ನು ಮರೆಮಾಡಲು, ಅವನು ರಾಮಸೇನನ ಪ್ರತಿಷ್ಠಿತ ಚಿತ್ರಕಲೆಯು ಚಿತ್ರೀಕೃತವಾದ ಪಾರಿವಾಳಗಳನ್ನು ಹಕ್ಕಿಗಳು ಎಂದು ಹೋಲಿಸುತ್ತಾನೆ.…
ಭಾರತವನ್ನು ದೇವಾಲಯಗಳ ದೇಶ ಎಂದು ಕರೆಯಲಾಗುತ್ತದೆ. ಪವಾಡಗಳಿಂದ ಪ್ರಪಂಚದಾದ್ಯಂತ ಪ್ರಸಿದ್ಧವಾಗಿರುವ ಅನೇಕ ದೇವಾಲಯಗಳು ಇಲ್ಲಿವೆ. ವಿಶಿಷ್ಟವಾದ ಸಂಪ್ರದಾಯಗಳು ಮತ್ತು ನಂಬಿಕೆಗಳಿಗೆ ಹೆಸರುವಾಸಿಯಾದ ಇಂತಹ ಅನೇಕ ದೇವಾಲಯಗಳಿವೆ. ಅಂತಹ ಒಂದು ವಿಶಿಷ್ಟವಾದ ದೇವಾಲಯವು ಉತ್ತರಾಖಂಡದಲ್ಲಿದೆ. ಉತ್ತರಾಖಂಡದ ಬಾನ್ಸಿ ನಾರಾಯಣ ದೇವಾಲಯವು ಹಿಮಾಲಯದ ಮಡಿಲಲ್ಲಿರುವ ದೇವಾಲಯವಾಗಿದ್ದು, ತನ್ನ ವೈಶಿಷ್ಟ್ಯದಿಂದಾಗಿ ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ರಕ್ಷಾಬಂಧನದ ದಿನದಂದು ವರ್ಷಕ್ಕೊಮ್ಮೆ ಮಾತ್ರ ಈ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಈ ಕಾರಣಕ್ಕಾಗಿ ಇದು ನಿಗೂಢ ಮತ್ತು ಪವಿತ್ರ ತೀರ್ಥಯಾತ್ರೆ ಎಂದು ಪರಿಗಣಿಸಲಾಗಿದೆ. ಈ ದಿನ ಇಲ್ಲಿ ವಿಶೇಷ ಪೂಜೆಗಳು ಮತ್ತು ಕಾರ್ಯಕ್ರಮಗಳು ನಡೆಯುತ್ತವೆ. ಈ ದಿನ ಇಲ್ಲಿಗೆ ಬಂದು ಪೂಜಿಸುವುದು ವಿಶೇಷವಾಗಿ ಮಂಗಳಕರವೆಂದು ನಂಬಲಾಗಿದೆ ಮತ್ತು ಈ ದಿನವು ಭಗವಾನ್ ವಿಷ್ಣುವಿನ ವಿಶೇಷ ಅನುಗ್ರಹವನ್ನು ಪಡೆಯುವುದು ತುಂಬಾ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು ಇಲ್ಲಿ ಮಾಡುವ ಪೂಜೆ ಮತ್ತು ದರ್ಶನವು ವಿಶೇಷ ಧಾರ್ಮಿಕ ಮಹತ್ವವನ್ನು ಹೊಂದಿದೆ ಎಂದು ನಂಬಲಾಗಿದೆ. ರಕ್ಷಾಬಂಧನದ ದಿನದಂದು ಇಲ್ಲಿ ದರ್ಶನಕ್ಕಾಗಿ ಭಕ್ತಾದಿಗಳು ಉದ್ದನೆಯ ಸರತಿ ಸಾಲಿನಲ್ಲಿ…
ಮಧುಗಿರಿ: ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ತರುವ ಮೂಲಕ ಸಣ್ಣ ಸಣ್ಣ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವಕಾಶ ಕಲ್ಪಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು. ಪಟ್ಟಣದ ರಾಜೀವ ಗಾಂಧಿ ಕ್ರೀಡಾಂಗಣದಲ್ಲಿ ಗುರುವಾರ ಮಧುಗಿರಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು. ಕೆ. ಎನ್. ರಾಜಣ್ಣನವರು ಸಹಕಾರಿ ಕ್ಷೇತ್ರದಲ್ಲಿ ತಂದಿರುವ ಮೀಸಲಾತಿ ಇಡೀ ರಾಜ್ಯ ವ್ಯಾಪ್ತಿಗೆ ಅನ್ವಯವಾಗಲಿದ್ದು, ಸಣ್ಣ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸಿದೆ ಇದರಿಂದ ಡಾ. ಬಿ. ಆರ್. ಅಂಬೇಡ್ಕರ್ ರವರ ಆಶಯ ಸಾಕಾರಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು. ರಾಜಣ್ಣ ರವರು ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂದು ಸಂಕಲ್ಪಿಸಿದ್ದು, ಏಕಶಿಲಾ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಅಧಿಕಾರಿಗಳು ಮುತುವರ್ಜಿ ವಹಿಸಿ 18 ಎಕರೆ ಜಾಗ ನಿಗದಿಪಡಿಸಿದ್ದಾರೆ, ತಾಲೂಕಿನಲ್ಲಿ 67988 ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಅಡಿ 134 ಕೋಟಿ…
ಭುವನೇಶ್ವರ : ಹೊಟೇಲ್ ನಲ್ಲಿ ಇಬ್ಬರು ಯುವತಿಯರ ಜೊತೆಗೆ ಸರಸವಾಡುತ್ತಿದ್ದ ಪತಿಯನ್ನು ಪತ್ನಿ ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ಭುವನೇಶ್ವರದ ಪಾಟಿಯಾ ಪ್ರದೇಶದಲ್ಲಿ ನಡೆದಿದೆ. ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಹೋಗಿದ್ದ ಪತ್ನಿ ಇನ್ಫೋಸಿಟಿ ಪೊಲೀಸರ ಸಹಕಾರದೊಂದಿಗೆ ಹೊಟೇಲ್ ಗೆ ನುಗ್ಗಿದ್ದಾಳೆ. ಮುಂಜಾನೆ 3 ಗಂಟೆಯ ವೇಳೆಗೆ ಆಕೆಯ ಪತಿ ಇಬ್ಬರು ಬೆಂಗಾಲಿ ಯುವತಿಯರೊಂದಿಗೆ ಸರಸ ಸಲ್ಲಾಪದಲ್ಲಿ ನಿರತನಾಗಿದ್ದ. ಈ ವೇಳೆ ರೆಡ್ ಹ್ಯಾಂಡ್ ಆಗಿ ಪತ್ನಿ ಹಾಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ದಾಳಿ ವೇಳೆ ಹೊಟೇಲ್ ನಲ್ಲಿ ಮದ್ಯದ ಬಾಟಲಿಗಳು, ಆಕ್ಷೇಪಾರ್ಹ ವಸ್ತುಗಳು ಸಿಕ್ಕಿವೆ. ತನ್ನ ಪತಿ ಇಂಜಿನಿಯರ್ ಆಗಿದ್ದ ಇದೀಗ ಆತ ತನ್ನ ವೃತ್ತಿ ಬದಲಿಸಿದ್ದಾನೆ. ಸೆಕ್ಸ್ ದಂಧೆ ನಡೆಸ್ತಾ ಇದ್ದಾನೆ ಎನ್ನುವ ಶಂಕೆ ಇದೆ ಅಂತ ಮಹಿಳೆ ಆರೋಪಿಸಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಆರೋಪಿ ಪತಿ ಹಾಗೂ ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಪತಿ ಸದ್ಯ ರ್ಯಾಪರ್ ಆಗಿ ಕೆಲಸ…
ಕಲಬುರಗಿ: ಆಟೋ ಚಾಲಕರ ಸಂಘದ ಮುಖಂಡರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ವೇಳೆ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳ ಜತೆಗೆ ಟಿಪ್ಪು ಸುಲ್ತಾನ್ ಫೋಟೊ ಇರಿಸಿ ಪೂಜಿಸಿದ ಘಟನೆ ನಗರದ ಹುಮನಾಬಾದ್ ರಿಂಗ್ ರೋಡ್ ಸಮೀಪ ನಡೆದಿದೆ. ಧ್ವಜಸ್ತಂಭದ ಬದಿಯಲ್ಲಿ ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇರಿಸಿ ಪೂಜಿಸುವ ಶಿಷ್ಟಾಚಾರವಿದೆ. ಆದರೆ, ಆಟೋ ಸಂಘದವರು ಟಿಪ್ಪು ಫೋಟೊ ಕೂಡ ಇರಿಸಿ ಪೂಜೆ ಸಲ್ಲಿಸಿದ್ದರು. ವಿಷಯ ತಿಳಿದು ಸಬ್ ಅರ್ಬನ್ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಟಿಪ್ಪು ಫೋಟೋ ತೆಗೆಯುವಂತೆ ಸೂಚಿಸಿದರು. ತೆಗೆಯುವುದಾದರೆ ಮೂವರ ಫೋಟೊಗಳನ್ನೂ ತೆಗೆಯುತ್ತೇವೆ. ಟಿಪ್ಪು ಫೋಟೊ ಮಾತ್ರ ತೆಗೆಯುವುದಿಲ್ಲ ಎಂದು ಸಂಘದವರು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಪೊಲೀಸರು ಗೊಂದಲದಲ್ಲಿ ಸಿಲುಕಿದರು. ಧ್ವಜಸ್ತಂಭದ ಬಳಿ ಟಿಪ್ಪು ಫೋಟೊ ಇರಿಸಿದ್ದನ್ನು ತೆರವುಗೊಳಿಸಿದ್ದೇವೆ. ಯಾರಾದರೂ ಮುಂದೆ ಬಂದು ದೂರು ದಾಖಲಿಸಿದರೆ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಶತಮಾನ ಕಂಡ ಶಾಲಾ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಧ್ವಜಾರೋಹಣವನ್ನು ಗ್ರಾಮಪಂಚಾಯಿತಿ ಅಧ್ಯಕ್ಷ ಸೈಯದ್ ಶಾನವಾಜ್ ನೆರವೇರಿಸಿದರು. ಎಲ್ಲಾ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ನಡೆಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಇದೇ ಸಂದರ್ಭದಲ್ಲಿ ಪಿಡಿಓ ಶ್ರೀರಾಮನಾಯ್ಕ, ಬಾಲಕರ ಶಾಲೆಯ ಮುಖ್ಯ ಶಿಕ್ಷಕ ಐ.ಎ.ನಾರಾಯಣಪ್ಪ ಹಾಗೂ ಎಲ್ಲಾ ಶಿಕ್ಷಕರು ಮತ್ತು ಗ್ರಾಮಸ್ಥರು ಇದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದಲ್ಲಿ ಇಂದು ಅಪಾರ ಸಂಖ್ಯೆಯ ಭಕ್ತರು ವರಮಹಾಲಕ್ಷ್ಮಿ ದರ್ಶನ ಪಡೆದರು. ಕೊರಟಗೆರೆ ತಾಲ್ಲೂಕಿನ ಗೊರವನಹಳ್ಳಿ ವರಮಹಾಲಕ್ಷ್ಮಿ ದೇಗುಲಕ್ಕೆ ಇಂದು ಬೆಳಗ್ಗೆಯಿಂದಲೂ ಸಾವಿರಾರು ಮಂದಿ ಭಕ್ತರು ಪೂಜಿಸಲಿಸುತ್ತಿದ್ದಾರೆ. ಅಲ್ಲದೆ ಬೆಳಗ್ಗೆ 5ರಿಂದಲೂ ವಿಶೇಷ ಕುಂಕುಮಾರ್ಚನೆ ವಿವಿಧ ಹೋಮ ಹವನಗಳನ್ನು ನಡೆಸಲಾಗುತ್ತಿದೆ. ದೇಗುಲದ ಕಾರ್ಯಕಾರಿ ಸಮಿತಿ ವತಿಯಿಂದ ಭಕ್ತರ ಅನುಕೂಲಕ್ಕಾಗಿ ಪೂರಕ ವ್ಯವಸ್ಥೆ ಮಾಡಲಾಗಿದೆ. ಬರುವ ಭಕ್ತರಲ್ಲರಿಗೂ ಭೋಜನದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಬೆಂಗಳೂರು ನೆರೆಯ ಆಂಧ್ರಪ್ರದೇಶ ಸೇರಿದಂತೆ ವಿವಿಧ ಜಿಲ್ಲೆಗಳಿಂದಲೂ ಕೂಡ ಭಕ್ತರು ಬಂದು ದರ್ಶನ ಪಡೆಯುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20, 21 ಹಾಗೂ 22 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಪ್ರಾರಂಭಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು ಕನ್ನಡ ಎಂದ ತಕ್ಷಣ ಎಲ್ಲರಿಗೂ ಮನಸ್ಸಿನಲ್ಲಿ ಸಂತೋಷ, ಮಂಡ್ಯ ಜಿಲ್ಲೆಯಲ್ಲಿ ಇದು ಮೂರನೇ ಬಾರಿ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರಕಿರುವುದು ಸಂತೋಷದ ವಿಷಯವಾಗಿದೆ ಎಂದರು. ಇಂದು ಆಯೋಜಿಸಿರುವ ಸಭೆಯು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡುವ ಕಾರ್ಯಕ್ರಮವಾಗಿದೆ. ಸಮಿತಿಯಲ್ಲಿರುವ ಪ್ರತಿಯೊಬ್ಬರು ಯಾವುದೇ ಲೋಪ ಉಂಟಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ. ಶಾಸಕರು ಹಾಗೂ ಇನ್ನಿತರ ಗಣ್ಯರನ್ನು ಸಮಿತಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬೇರೆ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಗಳಿಂದ ಕನ್ನಡಾಭಿಮಾನಿಗಳನ್ನು ಆಗಮಿಸುವಂತೆ ಸಮ್ಮೇಳನವನ್ನು ಸಜ್ಜುಗೊಳಿಸೋಣ, ಪ್ರತಿಯೊಬ್ಬರಿಗೂ ಆಹ್ವಾನ ನೀಡೋಣ ಎಂದರು. ಎಲ್ಲಾ ಸಮಿತಿಯು ಸಮನ್ವಯದಿಂದ ಕಾರ್ಯನಿರ್ವಹಿಸೋಣ ಯಾವುದೇ ಗೊಂದಲ ಇದ್ದರೆ…