Author: admin

ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಸಿದ್ದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಮುಖ್ಯ ಶಿಕ್ಷಕ ರಾಜಣ್ಣ ಎಸ್. ಮಾತನಾಡಿ,  ಅನೇಕ ಮಹನೀಯರ ಹೋರಾಟ ತ್ಯಾಗ ಬಲಿದಾನದಿಂದ ಭಾರತಕ್ಕೆ ಬ್ರಿಟೀಷರಿಂದ ನಮಗೆ ಸ್ವಾತಂತ್ರ್ಯ ದೊರೆತಿದೆ. ಭವ್ಯ ಭಾರತಕ್ಕಾಗಿ ಪ್ರತಿಯೊಬ್ಬರು ಸಂಕಲ್ಪ ಮಾಡಿದಾಗ ಮಾತ್ರ ಬಲಿಷ್ಠ ಭಾರತ ನಿರ್ಮಾಣ ಸಾಧ್ಯವಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಓದಬೇಕು. ಭಾರತದ ಇತಿಹಾಸವನ್ನು ಅರಿತು ಬೆಳೆಯಬೇಕು. ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಂಡು ವಿಶ್ವದ ನಾಯಕರನ್ನಾಗಿ ಭಾರತವನ್ನು ರೂಪಿಸಬೇಕು ಎಂದು ತಿಳಿಸಿದರು. ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ರಚನಾ ಸ್ಪರ್ಧೆಯಲ್ಲಿ ವಿಜೇತನಾಗಿರುವ ಶಾಲಾ ವಿದ್ಯಾರ್ಥಿಯಾದ ಜಶ್ವಂತ್ ಎಂ.  ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅದರಂತೆ  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿ ಮುಂದಣಯನ್ನು ಸನ್ಮಾನಿಸಲಾಯಿತು. ಶಾಲಾ ಭೂದಾನಿ ಕುಟುಂಬಸ್ಥರಾದ ಹನುಮಂತರಾಯಪ್ಪ ಮತ್ತು ಶಾಲಾ ಸಮಿತಿ ಅಧ್ಯಕ್ಷರು ಗೋಪಾಲಪ್ಪ ಈರ್ವರೂ ಸೇರಿ ಧ್ವಜಾರೋಹಣ ನೆರವೇರಿಸಿದರು.  ವಿದ್ಯಾರ್ಥಿಗಳು ಕವಾಯತು ಮೂಲಕ ಧ್ವಜ ವಂದನೆ ಸಲ್ಲಿಸಿದರು. ಗ್ರಾಮ…

Read More

ಕೊರಟಗೆರೆ: ತಾಲೂಕಿನ ಮಲ್ಲೇ ಕಾವು ಗ್ರಾಮದ ಸುವರ್ಣಮುಖಿ ಪ್ರೌಢಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ನೇಹ ಪ್ರಿಯ ಸಮೂಹದಿಂದ ಆನಂದ್ ಕುಮಾರ್, ಪ್ರಸನ್ನ ಕುಮಾರ್, ಸುಬ್ರಹ್ಮಣ್ಯ, ಶ್ರೀನಿವಾಸಯ್ಯ, ಮಧು, ಗೋವಿಂದರಾಜು ಮತ್ತು ಸುವರ್ಣಮುಖಿ ಪ್ರೌಢಶಾಲೆಯ ಮುಖ್ಯೋಪಾಧ್ಯಯರಾದ ಚಂದ್ರಶೇಖರ್, ಮಹದೇವಸ್ವಾಮಿ, ಸಂಧ್ಯಾ ರಾಣಿ, ಶ್ವೇತಾ ಸಂತೋಷ ಕುಮಾರಿ, ಲಕ್ಷ್ಮಿ, ಶೀಲಾವತಿ, ಕೊಂಡಮ್ಮ, ಶಿವಮ್ಮ, ಸುಧಾ ಶಿಕ್ಷಕರಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಮೂಹದವರಿಗೆ   ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್, ತುಮಕೂರು ಕಾರ್ಯದರ್ಶಿಯಾದ ಪ್ರವೀಣ್ ಕುಮಾರ್, ಪತ್ರಕರ್ತರ ಧ್ವನಿ ರಾಜ್ಯ ಕಮಿಟಿ, ಬಿ.ಜಿ.ಸಾಗರ್, ತುಮಕೂರು ನ್ಯೂಸ್ ಚಾನೆಲ್, ಟಾರ್ಗೆಟ್ ಟ್ರೂಥ್ ವರದಿಗಾರ ಕೊರಟಗೆರೆ ತಾಲೂಕ್, ರಘು ನಂದನ್ ಟಿ.ಆರ್.ನಟರಾಜ್, ಪ್ರಜಾವಾಣಿ ದಿನಪತ್ರಿಕ ವಿತರಕರು, ತಿಮ್ಮೇಗೌಡ ಅವರಿಗೆ ಸನ್ಮಾನವನ್ನು ಏರ್ಪಡಿಸಿದ್ದರು. ಮತ್ತು ಎಂಟನೇ ತರಗತಿ 9ನೇ ತರಗತಿ ಹತ್ತನೇ ತರಗತಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಿದ್ದರು. ವರದಿ: ಹನುಮಂತರಾಯಪ್ಪ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಪಾವಗಡ: ಇಂದು ಪಾವಗಡದ ಶಾಸಕರಾದ ಹೆಚ್.ವಿ.ವೆಂಕಟೇಶ್ ಅವರು ಶ್ರೀರಾಮಕೃಷ್ಣ ಸೇವಾಶ್ರಮದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯುತ್ತಿರುವ ಉತ್ತರ ಕರ್ನಾಟಕ ಹಾಗೂ ಕೇರಳದ ವಯನಾಡು ಪ್ರವಾಹ ಪರಿಹಾರ ಕಾರ್ಯಗಳ ಸಿದ್ಧತೆಯನ್ನು ವೀಕ್ಷಿಸಿದರು. ಸ್ವಾಮಿ ಜಪಾನಂದಜೀ ಮಹಾರಾಜ್ ರವರ ದೇಶವ್ಯಾಪಿ ಕಾರ್ಯಯೋಜನೆಗಳನ್ನು ಕಂಡು ಇದೇ ವೇಳೆ ಮುಕ್ತಕಂಠದಿಂದ ಅಭಿನಂದಿಸಿದರು ಪಾವಗಡ ತಾಲ್ಲೂಕಿನಲ್ಲಿ ಸ್ವಾಮಿ ಜಪಾನಂದಜೀ ಮಹಾರಾಜ್ ನಡೆದಾಡುವ ದೇವರಂತೆ ಕಾರ್ಯವಹಿಸುತ್ತಾ ನಾನಾ ರೀತಿಯ ಸೇವಾ ಯೋಜನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅಹರ್ನಿಷಿ ಸೇವೆಯನ್ನು ಸಲ್ಲಿಸುತ್ತಿರುವುದು ನಮ್ಮೆಲ್ಲರ ಭಾಗ್ಯವೇ ಸರಿ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ರಾಜಕೀಯ ಮುತ್ಸದ್ಧಿಗಳು ಹಾಗೂ ಇತರರು ಶಾಸಕರೊಂದಿಗೆ ಕೆಲಹೊತ್ತು ಸ್ವಾಮೀಜಿಯವರ ಕಾರ್ಯವೈಖರಿಯನ್ನು ವೀಕ್ಷಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು : ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಮುಗಿಸಿ ವಾಪಸ್ ಮನೆಗೆ ತೆರಳುವ ಸಂದರ್ಭದಲ್ಲಿ ಎರಡನೇ ತರಗತಿ ವಿದ್ಯಾರ್ಥಿ ಒಬ್ಬ ವಿದ್ಯುತ್ ತಂತಿತಗುಲಿ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿ ಎಚ್. ಕಾವಲ್ ಬಳಿ ನಡೆದಿದೆ. ಹೇಮಂತ್ 8 ಮೃತ ದುರ್ದೈವಿ ವಿದ್ಯಾರ್ಥಿಯಾಗಿದ್ದಾನೆ. ಹೆಚ್.ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ ಇಂದು ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಪಸ್ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ತಂತಿ ಬಿದ್ದಿತ್ತು, ಆಕಸ್ಮಾತ್ ಅದನ್ನು ಮುಟ್ಟಿದ ಸಂದರ್ಭದಲ್ಲಿ ಸ್ಥಳದಲ್ಲಿಯೇ ವಿದ್ಯುತ್ ಸ್ಪರ್ಶಿಸಿ ಆತ ಮೃತಪಟ್ಟಿದ್ದಾನೆ. ಹಲವು ಬಾರಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರೂ ಕೂಡ ಸರಿಪಡಿಸುವ ಪ್ರಯತ್ನದಲ್ಲಿ ಅಧಿಕಾರಿಗಳು ಮುಂದಾಗಿರಲಿಲ್ಲ ಈಗ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಸಿರಾ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಸುಮಾರು 30 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಅಂಗನವಾಡಿ ಕೇಂದ್ರವನ್ನು ಅದೇ ಸ್ಥಾನದಲ್ಲಿ ಪುನಃ ಸ್ಥಾಪಿಸುವಂತೆ ಒತ್ತಾಯಿಸಿ, ಬಹುಜನ ಸಮಾಜ ಪಾರ್ಟಿ(BSP) ತುಮಕೂರು ಘಟಕದ ನಗರಾಧ್ಯಕ್ಷ ದಿನೇಶ್ ಬಾಬು ಕೆ.ಬಿ. ಇವರ ನೇತೃತ್ವದಲ್ಲಿ ತುಮಕೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಘಟನೆಯ ವಿವರ: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ವಾರ್ಡ್ ನ ಕ್ಯಾತ್ಸಂದ್ರ ಕಾಲೋನಿ(ಸುಭಾಷ್ ನಗರ) 1992—93ನೇ ಸಾಲಿನಲ್ಲಿ ಸರ್ಕಾರಿ ಜಾಗದಲ್ಲಿ ರೋಜ್’ಗಾರ್ ಯೋಜನೆ ಅಡಿಯಲ್ಲಿ ಅಂಗನವಾಡಿ ನಿರ್ಮಿಸಿ ಸುಮಾರು 30 ವರ್ಷಗಳ ಕಾಲ ಸುಲಲಿತವಾಗಿ  ನಡೆಸಿಕೊಂಡು ಬರಲಾಗಿತ್ತು. ಕಳೆದೆರಡು ವರ್ಷಗಳಿಂದ ಕಟ್ಟಡ ಶಿಥಿಲಗೊಂಡ ಕಾರಣ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿಶು ಅಭಿವೃದ್ಧಿ ಇಲಾಖೆಯು ಅದೇ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ಅಂಗನವಾಡಿ ಕೇಂದ್ರವನ್ನು ನಡೆಸುತ್ತಿದೆ.  ಈ ನಡುವೆ ಶಿಶು ಅಭಿವೃದ್ಧಿ ಇಲಾಖೆ ಮತ್ತು ಸ್ಥಳೀಯರ ಮನವಿ ಮೇರೆಗೆ ತುಮಕೂರು ನಗರದ ಶಾಸಕ ಜ್ಯೋತಿ ಗಣೇಶ್ ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಲ್ಲಿ ನೂತನ ಕಟ್ಟಡ ಕಟ್ಟಲು ಶಂಕುಸ್ಥಾಪನೆ ನೆರೆವೇರಿಸಿದ್ದಾರೆ. ಆದರೆ ಶಿಶು…

Read More

ಬೀದರ್: ಜಿಲ್ಲಾ ಔರಾದ ತಾಲೂಕಿನ ಬೆಳಕುಣಿ ಚೌಧರಿ ಗ್ರಾಮ ಪಂಚಾಯಿತಿಯಲ್ಲಿ 78ನೆಯ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಪರಮೇಶ್ವರ ಮೆತ್ರೆ, ಗ್ರಾ.ಪಂ. ಸದಸ್ಯರು ದೇವಿದಾಸ ಮಾಳಗೆ, ಗ್ರಾಪಂ ಸದಸ್ಯರು ಕರಬಸಪ್ಪಾ ಸೊರಾಳೆ, ಮಾಜಿ ಗ್ರಾಪಂ ಸದಸ್ಯ ಎಮ್.ಡಿ ನಯೂಮ್, ಎಸ್ ಡಿ ಎಮ್ ಸಿ.ಅಧ್ಯಕ್ಷ ಮಹೇಶ ಚಾಂಬೋಳೆ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ನಾಡಿನಾದ್ಯಂತ ಇಂದು ನಮ್ಮ ದೇಶದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ಶ್ರಾವಣ ಮಾಸವೂ ಹೌದು. ಚಿನ್ನಾಭರಣ ಖರೀದಿ ಮಾಡುವ ಮನಸ್ಸು ಮಾಡುವುದು ಸಹಜ. ವಿವಿಧ ನಗರಗಳಲ್ಲಿ ಚಿನ್ನ ಬೆಳ್ಳಿ ಧಾರಣೆ ಎಷ್ಟಿದೆ ಎಂಬ ಕುತೂಹಲ ತಣಿಸುವ ವಿವರ ಇಲ್ಲಿದೆ. ಬೆಂಗಳೂರು ಚಿನಿವಾರ ಪೇಟೆಯಲ್ಲಿ ನಿನ್ನೆ ವಹಿವಾಟು ಕೊನೆಗೊಂಡಾಗ ಸ್ಟಾಂಡರ್ಡ್ ಚಿನ್ನ (99.5 ಪರಿಶುದ್ಧ) 10 ಗ್ರಾಂಗೆ 72,600 ರೂಪಾಯಿ ಇತ್ತು. ಆಭರಣ ಚಿನ್ನದ ದರ ಗ್ರಾಂಗೆ 6,715 ರೂಪಾಯಿ ಇತ್ತು. ಇನ್ನು ಬೆಳ್ಳಿ ಸ್ಪಾಟ್ಗೆ ಕಿಲೋ ಒಂದರ ದರ 82,900 ರೂಪಾಯಿ ಇತ್ತು. ಇದೇ ವೇಳೆ ಮುಂಬಯಿಯ ಚಿನಿವಾರ ಪೇಟೆಯಲ್ಲಿ ಬೆಳ್ಳಿದರ ಕಿಲೋಗೆ 80,921 ರೂಪಾಯಿ ಇತ್ತು. ಸ್ಟಾಂಡರ್ಡ್ ಚಿನ್ನದ (99.5 ಪರಿಶುದ್ಧ) ದರ 10 ಗ್ರಾಂಗೆ 70,510 ರೂಪಾಯಿ, ಅಪರಂಜಿ ಚಿನ್ನ 10 ಗ್ರಾಂಗೆ 70,793 ರೂಪಾಯಿ ಇತ್ತು. ಬೆಂಗಳೂರು, ಮಂಗಳೂರು, ಮೈಸೂರಿಗಳಲ್ಲಿ ಇಂದು ಅಪರಂಜಿ ಚಿನ್ನ (24 carat gold rate)ದ ದರ ಬೆಂಗಳೂರು- 71,500 ರೂಪಾಯಿ. ಮಂಗಳೂರು- 71,500…

Read More

ಔರಾದ: ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ 78ನೇಯ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದಂತ ವೈದ್ಯಾಧಿಕಾರಿಗಳಾದ ರೇಣುಕಾ ನಾಗರಾಳಕರ್ ಧ್ವಜಾರೋಣ ನೆರವೇರಿಸಿದರು. ಆಡಳಿತ ವೈದ್ಯಾಧಿಕಾರಿಗಳಾದ ಡಾ.ಅಬ್ದುಲ್ ವಾಜಿದ್ ರವರು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಗುರು ಅಂಕಲಗಿ ವೈಜಿನಾಥ ಚನ್ನಶೆಟ್ಟಿ ಗೋರಕ್ ನಾಥ್ ಮಚ್ಚೆಂದರ್ ಪಾಂಡು ಅರುಣ್ ಕುಮಾರ್ ಆಕಾಶ್ ಶ್ರೀಕಾಂತ್ ಟಿಎಂ ಮಚ್ಚಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೀದರ್: ಜಿಲ್ಲಾಡಳಿತ ವತಿಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವ ಈಶ್ವರ್ ಖಂಡ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಜಿಲ್ಲೆಯ ಜನರಿಗೆ ಹಾಗೂ ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಸ್ವಾತಂತ್ರ್ಯ ಸಂಭ್ರಮಾಚರಣೆ – 2024 ಹಿನ್ನೆಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ಕೇಂದ್ರ ಸಚಿವಾಲಯ ಕೊಡಮಾಡುವ ‘ವಿಶಿಷ್ಟ ಸೇವಾ ಪದಕ’ ಮತ್ತು ‘ಶ್ಲಾಘನೀಯ ಸೇವಾ ಪದಕ’ಕ್ಕೆ ಕರ್ನಾಟಕ ರಾಜ್ಯದಿಂದ 19 ಮಂದಿ ಭಾಜನರಾಗಿದ್ದಾರೆ. ಕೇಂದ್ರ ಗೃಹ ಇಲಾಖೆಯುವ ಕೊಡಮಾಡುವ ಪುರಸ್ಕಾರಗಳಿಗೆ ಈ ಕೆಳಗಿನ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯು ಪಾತ್ರರಾಗಿದ್ದಾರೆ. ಯಾರು ಯಾವ ಪುರಸ್ಕಾರ ಪಡೆಯಲಿದ್ದಾರೆ ಎಂಬ ಮಾಹಿತಿ, ಪಟ್ಟಿ ಇಲ್ಲಿದೆ. ವಿಶಿಷ್ಟ ಸೇವಾ ಪದಕ ಪುರಸ್ಕೃತರು * ಚಂದ್ರಶೇಖರ್ ಎಂ, IPS, ADGP, ISD, ಬೆಂಗಳೂರು ಶ್ಲಾಘನೀಯ ಸೇವಾ ಪದಕ ಪುರಸ್ಕೃತರು * ಜೋಶಿ ಶ್ರಿನಾಥ್ ಮಹಾದೇವ, IPS ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ (ಬೆಂಗಳೂರು) * ಸಿ.ಕೆ. ಬಾಬಾ, IPS ಪೊಲೀಸ್ ಅಧೀಕ್ಷಕರು (ಬೆಂಗಳೂರು ಗ್ರಾಮಾಂತರ) * ರಾಮಗೊಂಡ ಬಿ.ಬಸರಗಿ, ಅಪರ ಪೊಲೀಸ್ ಅಧಿಕ್ಷರು (ಬಳ್ಳಾರಿ ಜಿಲ್ಲೆ) * ಎಂ.ಡಿ.ಶರತ್, ಪೊಲೀಸ್ ಅಧೀಕ್ಷರು, ಸಿಐಡಿ (ಬೆಂಗಳೂರು) * ವಿ.ಸಿ.ಗೋಪಾಲರೆಡ್ಡಿ, DCP, ಸಿಎಆರ್ ಪಶ್ಚಿಮ (ಬೆಂಗಳೂರು ನಗರ) *…

Read More