Author: admin

ತುಮಕೂರು: ಸರ್ಕಾರದ ಎಲ್ಲ ಯೋಜನೆಗಳ ಸೌಲಭ್ಯಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸುವ ಕಾರ್ಯ ಮಾಡಬೇಕು ಎಂದು ತುಮಕೂರು ತಾಲ್ಲೂಕು ಪಂಚಾಯಿತಿಯ ಆಡಳಿತಾಧಿಕಾರಿ ಹಾಗೂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಾರದಮ್ಮ ತಿಳಿಸಿದರು. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ವತಿಯಿಂದ ನಗರದ ಎಂ.ಜಿ.ರಸ್ತೆಯ ಬಾಲ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉತ್ತಮ ಬಾಂಧವ್ಯ ಹೊಂದಿರಬೇಕು. ಸರ್ಕಾರ ರೂಪಿಸುವ ಎಲ್ಲ ಯೋಜನೆಗಳ ಕುರಿತು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ನರೇಗಾ, ಇ–ಸ್ವತ್ತು, ಜಲ್ಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ ಹಾಗೂ ಸಂಜೀವಿನಿ ಎನ್.ಆರ್.ಎಲ್.ಎಮ್. ಯೋಜನೆಗಳಿಂದ ದೊರೆಯುವಂತಹ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಪೂರ್ಣ ಪ್ರಮಾಣದಲ್ಲಿ ತಲುಪಿಸುವ ಕಾರ್ಯ ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಹೇಳಿದರು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಿ.ಸುರೇಶ್ಗೌಡ ಅವರು, ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಹಾಗೂ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಮಹಾತ್ಮ ಗಾಂಧೀಜಿ…

Read More

ತುಮಕೂರು: ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ 2024–25ನೇ ಸಾಲಿನ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಪ್ರವೇಶ ಬಯಸುವ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಸೆಪ್ಟೆಂಬರ್ 17 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2251736 ನ್ನು ಸಂಪರ್ಕಿಸಬೇಕೆಂದು ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿನ ಯುಜಿಸಿ ಅನುಮೋದಿತ ಕೋರ್ಸ್ ಗಳ ಜುಲೈ ಆವೃತ್ತಿಯ ಸ್ನಾತಕ/ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ನಿರ್ದೇಶಕ ಡಾ. ಆರ್. ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ.. ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್ಸಿ., ಎಂ.ಎ.. ಎಂ.ಸಿ.ಜೆ., ಎಂ.ಕಾಂ., ಎಂ.ಎಲ್.ಐ.ಎಸ್ಸಿ, ಎಂ.ಬಿ.ಎ., ಬಿ.ಎಸ್.ಡಬ್ಲ್ಯೂ/ಎಂ.ಎಸ್.ಡಬ್ಲ್ಯೂ/ಎA.ಸಿ.ಎ. ಹಾಗೂ ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತುಮಕೂರು ಕರಾಮುವಿ ಪ್ರಾದೇಶಿಕ ಕೇಂದ್ರ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: ೦೮೧೬-೨೯೫೫೫೮೦, ಮೊ.ಸಂ: ೯೮೪೪೫೦೬೬೨೯, ೯೮೮೬೧೧೨೪೩೪, ೭೩೪೯೪೭೪೩೩೯ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು: ಜಿಲ್ಲೆ ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ 78ನೇ ಸ್ವತಂತ್ರ್ಯ ದಿನಾಚರಣೆಯನ್ನ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆ. ಗೃಹರಕ್ಷಕದಳ, ಎನ್ ಸಿಸಿ ತಂಡ, ಸ್ಕೌಟ್ಸ್ &ಗೈಡ್ಸ್ ತಂಡಗಳಿಂದ ಪಥಸಂಚಲ ಧ್ವಜ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ಭಾರತ ಸರ್ವಜನಾಂಗದ ಶಾಂತಿಯ ತೋಟ, ಈ ದೇಶದಲ್ಲಿ ಹಲವಾರು ಜಾತಿಧರ್ಮಗಳು ಇದ್ದರೂ, ವಿವಿಧತೆಯಲ್ಲಿ ಏಕತೆಯನ್ನ ಕಾಣುತ್ತೇವೆ. ದೇಶದ ಐಕ್ಯತೆ ಸಾರ್ವಭೌಮವಿಷಯದಲ್ಲಿ ಪ್ರತಿಯೊಬ್ಬ ಭಾರತೀಯನೂ ಒಗ್ಗಟಿನಿಂದ ಇರಬೇಕು ಎಂದರು. ಅಂಗಾಂಗ ದಾನ ಶ್ರೇಷ್ಟದಾನವಾಗಿದೆ. ನಮ್ಮ ತಾಲ್ಲೂಕಿನ ಚಂದನ ಅಪಘಾತದಲ್ಲಿ ಮರಣಹೊಂದಿದರು ಅಂಗಾಂಗದಾನಮಾಡಿ ಹಲವರ ಬಾಳಿಗೆ ಬೆಳಕಾಗಿದ್ದಾರೆ. ಆಕಸ್ಮಿಕ ಸಾವು ಸಂಭವಿಸಿದಾಗ ಅಂಗಾಂಗಳನ್ನ ಮಣ್ಣುಪಾಲು ಮಾಡುವ ಬದಲು ಹಲವರಿಗೆ ಜೀವದಾನ ಮಾಡಬಹುದು, ಆದರಿಂದ ಅಂಗಾಂಗ ದಾನದ ಅರಿವುಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಕೆ.ಷಡಕ್ಷರಿ ಮಾತನಾಡಿ, ಭಾರತ ಪುಣ್ಯಭೂಮಿ ಈ ಪವಿತ್ರ ಭೂಮಿಸಲ್ಲಿ ಹುಟ್ಟಿದ ನಾವೇ ಪುಣ್ಯವಂತರು. ಸರ್ವರಿಗೂ ಸಮಪಾಲು ಸರ್ವರಿಗೂ…

Read More

ವಿಜ್ಞಾನಿಗಳು ಮಂಗಳ ಗ್ರಹದ ಮೇಲೆ ದ್ರವ ನೀರಿನ ಜಲಾಶಯವನ್ನು ಕಂಡುಹಿಡಿದಿದ್ದಾರೆ. ಮಂಗಳ ಗ್ರಹದ ಮೇಲಿರುವ ಬಂಡೆಕಲ್ಲಿನ ಕೆಳಗಡೆ ಈ ಸರೋವರಗಳಿವೆ ಎಂದು ನಾಸಾ ತಿಳಿಸಿದೆ. ಈ ಆವಿಷ್ಕಾರಗಳು ನಾಸಾದ ಮಾರ್ಸ್ ಇನ್‌ಸೈಟ್ ಲ್ಯಾಂಡರ್‌ನಿಂದ ಡೇಟಾದ ಹೊಸ ವಿಶ್ಲೇಷಣೆಯಿಂದ ಬಂದಿವೆ. ಈ ಲ್ಯಾಂಡರ್‌ಅನ್ನು ನಾಸಾ 2018ರಲ್ಲಿ ಮಂಗಳ ಗ್ರಹಕ್ಕೆ ತಲುಪಿಸಿದೆ. ಈ ಲ್ಯಾಂಡರ್ ಭೂಕಂಪಮಾಪಕವನ್ನು ಕೂಡ ತೆಗೆದುಕೊಂಡುಹೋಗಿತ್ತು. ಇದು ಕೆಂಪು ಗ್ರಹದ ಆಳದಿಂದ ನಾಲ್ಕು ವರ್ಷಗಳ ಭೂಕಂಪನಗಳನ್ನು ಕೂಡ ದಾಖಲು ಮಾಡಿದೆ. ಆ ಭೂಕಂಪಗಳನ್ನು ವಿಶ್ಲೇಷಿಸುವುದು ಮತ್ತು ನಿಖರವಾಗಿ ಗ್ರಹವು ಹೇಗೆ ಚಲಿಸುತ್ತದೆ ಎನ್ನುವ ಪರಿಶೀಲನೆ ವೇಳೆ ದ್ರವ ನೀರಿನ “ಭೂಕಂಪನ ಸಂಕೇತಗಳನ್ನು” ಬಹಿರಂಗಪಡಿಸಿದೆ. ಮಂಗಳದ ಧ್ರುವಗಳಲ್ಲಿ ಹೆಪ್ಪುಗಟ್ಟಿದ ನೀರು ಮತ್ತು ವಾತಾವರಣದಲ್ಲಿ ಆವಿಯ ಪುರಾವೆಗಳಿದ್ದರೂ, ಗ್ರಹದಲ್ಲಿ ದ್ರವ ನೀರು ಕಂಡುಬಂದಿರುವುದು ಇದೇ ಮೊದಲಾಗಿದೆ ಸಂಶೋಧನೆಗಳು ನ್ಯಾಷನಲ್ ಅಕಾಡೆಮಿ ಆಫ್ ಸೈನ್ಸಸ್‌ನ ಪ್ರೊಸೀಡಿಂಗ್ಸ್‌ನಲ್ಲಿ ಪ್ರಕಟವಾಗಿವೆ. ಲ್ಯಾಂಡರ್ ನಾಲ್ಕು ವರ್ಷಗಳ ಕಾಲ “ಮಂಗಳ ಗ್ರಹದ ನಾಡಿ”ಯನ್ನು ಸದ್ದಿಲ್ಲದೆ ಆಲಿಸಿದ ನಂತರ, ಡಿಸೆಂಬರ್ 2022 ರಲ್ಲಿ…

Read More

ಮೆಟ್ರೋ ರೈಲು ನಿಗಮವು (BMRCL) ಅತ್ಯಧಿಕ ಪ್ರಯಾಣಿಕರ ಸಂಚಾರದಲ್ಲಿ ಹೊಸ ದಾಖಲೆ ಬರೆದಿದೆ. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ, ಸ್ವಾತಂತ್ರ್ಯ ದಿನಾಚರಣೆ ಹಾಗೂ ಸಾಲು ಸಾಲು ರಜಾದಿನಗಳು ಇರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಒಂದೇ ದಿನದಲ್ಲಿ 9.17ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 2011ರಿಂದ ನಮ್ಮ ಮೆಟ್ರೋ ಸಂಚಾರ ಆರಂಭವಾದಾಗಿನಿಂದ ಈವರೆಗೆ ಪ್ರತಿನಿತ್ಯ ಸರಾಸರಿ 6.36 ಲಕ್ಷ ಜನರು ಸಂಚಾರ ಮಾಡುತ್ತಾರೆ. ಕಳೆದ 2024ರ ಆಗಸ್ಟ್6, 2024 ರಂದು ನಮ್ಮ ಮೆಟ್ರೋ ರೈಲಿನಲ್ಲಿ 8.26 ಲಕ್ಷ ಪ್ರಯಾಣಿಕರು ಸಂಚಾರ ಮಾಡಿ ಈವರೆಗಿನ ಅತ್ಯಧಿಕ ದಾಖಲೆ ನಿರ್ಮಿಸಲಾಗಿತ್ತು. ಆದರೆ, ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಆ.14ರಂದು ಊರಿನತ್ತ ಹೋಗುವವರ ಸಂಖ್ಯೆ ಹೆಚ್ಚಾಗಿದ್ದರಿಂದ ನಮ್ಮ ಮೆಟ್ರೋದಲ್ಲಿ ಸಂಚಾರ ಮಾಡಿದ ಪ್ರಯಾಣಿಕ ಸಂಖ್ಯೆಯೂ ಹೆಚ್ಚಾಗಿದೆ. ಜೊತೆಗೆ, ಲಾಲ್‌ಬಾಗ್‌ನಲ್ಲಿ ಆಯೋಜನೆ ಮಾಡಲಾಗಿರುವ ಫ್ಲವರ್ ಶೋ ಕಾರ್ಯಕ್ರಮ ವೀಕ್ಷಣೆಗೆ ಹೋಗುವವರ ಸಂಖ್ಯೆಯೂ ಅಧಿಕತವಾಗಿದೆ. ಈ ಹಿನ್ನೆಲೆಯಲ್ಲಿ ಆ.14ರಂದು ಬರೋಬ್ಬರಿ 9.17 ಲಕ್ಷ ಪ್ರಯಾಣಿಕರು ಸಂಚಾರ ಮಾಡುವ…

Read More

ತುಮಕೂರು: ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ೭೦ ಆಯ್ದ ಸರ್ಕಾರಿ ಶಾಲೆಗಳಿಗೆ ಇಂಡಿಯಾ ಲಿಟರೆಸಿ ಪ್ರಾಜೆಕ್ಟ್ (ILP) ಹಾಗೂ EPSON ಸಂಸ್ಥೆಗಳ ಸಹಕಾರದಿಂದ ಸ್ಮಾರ್ಟ್ ಕ್ಲಾಸ್ ಪರಿಕರಗಳನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳನ್ನು ಬಹು ಆಯಾಮ ಕಲಿಕಾ ಅಂಗಳವಾಗಿ ಪರಿವರ್ತಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ ತಿಳಿಸಿದರು. ಜಿಲ್ಲೆಯ ಗುಬ್ಬಿ ತಾಲ್ಲೂಕು ಪೆದ್ದನಹಳ್ಳಿ ಗ್ರಾಮ ಪಂಚಾಯತಿ ಕೆ.ಮತ್ತಿಘಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಅನುಭವಾತ್ಮಕ ಕಲಿಕೆಗೆ ಪೂರಕವಾಗುವಂತೆ ಲ್ಯಾಪ್ ಟಾಪ್, ಪ್ರೊಜೆಕ್ಟರ್, ಸ್ಪೀಕರ್ಸ್, ಪಿಪಿಟಿ ಆಧಾರಿತ ಡಿಜಿಟಲ್ ಕಂಟೆಂಟ್, ಸ್ಕ್ರೀನ್, ಸುಮಾರು 200 ವಿಜ್ಞಾನ ಪರಿಕಲ್ಪನೆಗಳನ್ನು ವಿವರಿಸಬಹುದಾದ, 150 ಅಧಿಕ ಪ್ರಯೋಗಗಳನ್ನು ಮಾಡಿಸಬಹುದಾದ ವಿಜ್ಞಾನ ಪ್ರಯೋಗ ಕಿಟ್ಗಳನ್ನು ಪ್ರತಿ ಶಾಲೆಗೆ 2 ಕಿಟ್ನಂತೆ 70 ಶಾಲೆಗಳಿಗೆ ನೀಡಲಾಗಿದೆ ಎಂದು ತಿಳಿಸಿದರು. ಕಲರ್ ಕೋಡಿಂಗ್ ಮಾಡಲಾದ ಸುಮಾರು 350 ಕ್ಕೂ ಅಧಿಕ ಪುಸ್ತಕಗಳು, ಬುಕ್ ರ‍್ಯಾಕ್, ರಿಜಿಸ್ಟರ್ ಪುಸ್ತಕ, ಮುಂತಾದ ಪರಿಕರಗಳನ್ನು…

Read More

ತುಮಕೂರು: ರಾಜ್ಯ ಸರ್ಕಾರಿ ನೌಕರರ ಸಂಘದ ‘ನಮ್ಮಭಿಮಾನದ ಅಭಿನಂದನೆ’ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುತ್ತಿದ್ದು, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸೇರಿದಂತೆ ಹಲವು ಗಣ್ಯರಿಗೆ  ಅಭಿನಂದನೆ ಸಲ್ಲಿಸಿ ಸರ್ಕಾರಿ ನೌಕರರ ಕುಂದುಕೊರತೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುತ್ತಿದ್ದು, ಕಾರ್ಯಕ್ರಮದಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು  ಭಾಗವಹಿಸಿ ಯಶ್ವಸಿಗೊಳಿಸುವಂತೆ ಕರ್ನಾಟಕ  ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ಎನ್.ನರಸಿಂಹರಾಜು ಕರೆ ನೀಡಿದ್ದಾರೆ. ಬೆಂಗಳೂರು ನಗರದ ಅರಮನೆ ಮ್ಯೆದಾನದಲ್ಲಿ ಆಗಸ್ಟ್ 17ರ ಶನಿವಾರ ಬೆಳಗ್ಗೆ 10ಕ್ಕೆ ಆಯೋಜಿಸಲಾಗಿರುವ ‘ನಮ್ಮಭಿಮಾನದ ಅಭಿನಂದನೆ’ ಸಮಾರಂಭದ ಕುರಿತು ವಿವಿಧ  ಶಾಖೆಗಳ ಅಧ್ಯಕ್ಷರು, ಮತ್ತು ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳಿಗೆ ಮಾಹಿತಿ ನೀಡಲಾಗಿದೆ. ಸರ್ಕಾರಿ ನೌಕರರ ಸಂಘದಿಂದ ನೀಡಿರುವ ಪೋಸ್ಟರ್‌ ಗಳನ್ನು ಎಲ್ಲಾ ಸರ್ಕಾರಿ ಕಛೇರಿ/ ಸಂಸ್ಥೆಗಳಲ್ಲಿ ಅಂಟಿಸುವ ಮೂಲಕ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ನೀಡಲಾಗುತ್ತಿದ್ದು,  ರಾಜ್ಯ ಸಂಘದಿAದ ನೀಡಲಾಗಿರುವ ಇಮೇಜ್ ಅನ್ನು ಎಲ್ಲ ನೌಕರರು ತಮ್ಮ ಭಾವಚಿತ್ರ ಸಮೇತ ಮೊಬೈಲ್ ಡಿಪಿಯಲ್ಲಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬೆಂಗಳೂರಿನಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗ ಭೇಟಿ ಮಾಡಿ ಸರ್ಕಾರಿ ಸಾಗುವಳಿ ಜಮೀನನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಲಾಯಿತು. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸರ್ಕಾರಿ ಸಾಗುವಳಿ ಜಮೀನುಗಳನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಮಾರ್ಗಸೂಚಿ ನೀಡಬೇಕೆಂದು ಮನವಿ ಮಾಡಲಾಯಿತು. ನಂತರ ಚಿಕ್ಕಮಗಳೂರು ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಹಿಂದೆ ಭೂಮಿ ಸಾಗುವಳಿ ಮಾಡುತ್ತಿದ್ದು ಸಾಗುವಳಿ ಚೀಟಿ ಮತ್ತು ಪಹಣಿ ಕೂಡ ನೀಡಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ಇಲಾಖೆಯ ಬಹಳಷ್ಟು ಪ್ರದೇಶಗಳನ್ನು ಪರಿಭಾವಿತರಣ್ಯ ಎಂದು ವರ್ಗಾವಣೆ ಮಾಡಿ ಕೆಲವೊಂದು ಮಂಜೂರು ಜಮೀನುಗಳನ್ನು ಅರಣ್ಯ ಎಂದು ಪರಿಗಣಿಸಿರುತ್ತಾರೆ.                                                                    ಇತ್ತೀಚಿಗೆ  ಅರಣ್ಯ ಸಚಿವರು ಅರಣ್ಯ  ಜಮೀನನ್ನು ಕುಲ್ಲಾ ಮಾಡಬೇಕೆಂದು ಆದೇಶಿಸಿದ್ದು ಮಂಜೂರಾದ ಜಮೀನುಗಳನ್ನು ಹೆಚ್ಚಾಗಿ ಮಧ್ಯಮ ಮತ್ತು ಸಣ್ಣ ವರ್ಗದ ರೈತ ಬೆಳೆಗಾರರು ಹೊಂದಿದ್ದು ಒತ್ತುವರಿ ತೆರವಿನಿಂದ ಜೀವನೋಪಾಯಕ್ಕೆ ತೊಂದರೆಯಾಗುತ್ತದೆ ರೈತ ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದಾಗ , ಅಲ್ಲೇ ಇದ್ದ   ನ್ಅರಣ್ಯ…

Read More

ಗ್ರಾಹಕರು ಖಾದಿ ಅಂಗಡಿಯಲ್ಲಿ ರಾಷ್ಟ್ರಧ್ವಜ ಕೊಳ್ಳುವುದರ ಜೊತೆ ಜೊತೆಗೆ ತಮ್ಮ ದಿನನಿತ್ಯ ಬಳಕೆಗೂ ಸಹ ಖಾದಿ ವಸ್ತ್ರಗಳನ್ನ ಬಳಕೆ ಮಾಡುವುದನ್ನು ಹೆಚ್ಚಿಸಿಕೊಳ್ಳಬೇಕು. ಇದರಿಂದ ರಾಷ್ಟ್ರಪ್ರೇಮವನ್ನ, ಗ್ರಾಮೀಣ ಜನರಿಗೆ ತೋರುವ ಸಹಕಾರವನ್ನ, ತಮ್ಮ ಮೈಮೇಲೆ ಧರಿಸಿ, ಗ್ರಾಮೀಣ ಉದ್ಯೋಗಸ್ಥರಿಗೆ ನಮ್ಮ ಸಹಕಾರದ ಹಸ್ತವನ್ನ ಚಾಚಿದಂತಾಗುತ್ತದೆ ಎಂದು ಕರ್ನಾಟಕ ಜ್ಞಾನವಿಜ್ಞಾನ ಸಮಿತಿ ಮತ್ತು ಕರ್ನಾಟಕ ಸರ್ವೋದಯ ಮಂಡಳಿಯ ಜಿಲ್ಲಾಧ್ಯಕ್ಷರಾದ ಡಾ. ಎಚ್. ಕೆ. ಎಸ್. ಸ್ವಾಮಿ ತಿಳಿಸಿದರು. ನಗರದಲ್ಲಿರುವ ಪ್ರತಿಯೊಂದು ಖಾದಿ ಅಂಗಡಿಯಲ್ಲೂ ಸಹ ಚರಕವನ್ನ ಪ್ರದರ್ಶನಕ್ಕೆ ಇಟ್ಟು, ದಾರ ತಯಾರಿಸುವುದನ್ನು ಜನರಿಗೆ ತೋರಿಸಿಕೊಟ್ಟರೆ, ಖಾದಿ ಬಗ್ಗೆ ಅಭಿಮಾನ ಹೆಚ್ಚಾಗಿ, ಇನ್ನು ಹೆಚ್ಚಾಗಿ ಖಾದಿಯನ್ನ ಬಳಕೆ ಮಾಡಲು ಪ್ರಾರಂಭಿಸುತ್ತಾರೆ. ಆದ್ದರಿಂದ ಪ್ರತಿ ಖಾದಿ ಅಂಗಡಿಯಲ್ಲೂ ಸಹ ಚರಕವನ್ನು ಇಟ್ಟು, ಅವುಗಳ ಪ್ರದರ್ಶನ ಮತ್ತು ಬಳಕೆಯನ್ನ ಜನಸಾಮಾನ್ಯರಿಗೆ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಿಕೊಡಬೇಕು ಎಂದು ವಿನಂತಿಸಿಕೊಂಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದಲ್ಲಿ ಮಾತ್ರ ಜನರು ಬಾವುಟ ಖರೀದಿಗೆ ಖಾದಿ ಅಂಗಡಿಗೆ ಬರುವುದು ಸಾಮಾನ್ಯ, ಆದರೆ ಇನ್ನುಳಿದ ದಿನಗಳಲ್ಲಿ…

Read More