Author: admin

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ತುಮಕೂರು ಮತ್ತು ಹೇಮಾವತಿ ನಾಗರಿಕ ಹಿತರಕ್ಷಣಾ ವೇದಿಕೆ (ರಿ), ಟೂಡಾ ಲೇಔಟ್, ಹೇಮಾವತಿ ಬಡಾವಣೆ, ರಾಜೀವ್ ಗಾಂಧಿನಗರ, ತುಮಕೂರು ಇವರುಗಳ ಸಹಯೋಗದೊಂದಿಗೆ 78ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಗುರುವಾರ ಬೆಳಗ್ಗೆ 8:15 ಗಂಟೆಗೆ ಆಯೋಜಿಸಲಾಗಿತ್ತು. ಪ್ರೊ. ಹೆಚ್. ಎಸ್. ಶಿವಯೋಗಿ, ವಿಶ್ರಾಂತ ಪ್ರಾಂಶುಪಾಲರು, (ನವೋದಯ ಪ್ರಥಮ ದರ್ಜೆ ಕಾಲೇಜು, ಚಿಕ್ಕನಾಯಕನಹಳ್ಳಿ, ತುಮಕೂರು) ಇವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಭಾರತೀಯರಾದ ನಾವು ಸ್ವಾತಂತ್ರ್ಯ ಸಿಕ್ಕ ದಿನವನ್ನು ಪ್ರತಿ ದಿನ ನೆನೆಯಬೇಕು. ಅದರ ಮಹತ್ವ ತಿಳಿಯಬೇಕು. ಸ್ವಾತಂತ್ರ್ಯೋತ್ಸವಕ್ಕಾಗಿ ಹೋರಾಡಿದ ಪ್ರಾಣತೆತ್ತ, ಬಲಿದಾನವಾದ ಎಲ್ಲಾ ವೀರರನ್ನು ನೆನೆದು ಅವರಿಗೆ ನಮನ ಸಲ್ಲಿಸಬೇಕಾಗಿದೆ. ಆದರೆ ಇಂದು ಕೇವಲ ಸ್ವಾತಂತ್ರೋತ್ಸವ ಆಚರಣೆಯ ದಿನ ಮಾತ್ರ ನೆನೆಯುತ್ತಿರುವುದು ನೋವಾಗುತ್ತಿದೆ. ಇಂದಿನ ಯುವ…

Read More

ತುಮಕೂರು: ಸ್ವಾತಂತ್ರ್ಯದ ನಂತರ ಭಾರತವು ಸ್ವಾವಲಂಬನೆಯನ್ನು ಕಂಡುಕೊಂಡಿದ್ದು, ವಿಶ್ವದ 5ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು. ಸಿದ್ಧಗಂಗಾ ಮಠದ ಆವರಣದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣಾ ನೆರವೇರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯದ ಬಳಿಕ ಬಡತನ ರೇಖೆಯಲ್ಲಿ ಗುರುತಿಸಿಕೊಂಡು, ಭಾರತವು ಅಭಿವೃದ್ಧಿಯತ್ತ ಸಾಗುವುದಿಲ್ಲ ಎಂದು ಹಲವು ದೇಶಗಳು ಭಾವಿಸಿದ್ದವು. ಕಳೆದ 77 ವರ್ಷಗಳಲ್ಲಿ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು 5ನೇ ಆರ್ಥಿಕ ದೇಶವಾಗಿ ಬೆಳೆದು ನಿಂತಿದೆ. ವಿದೇಶದಿಂದ ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳುತ್ತಿದ್ದ ನಾವು, ಆಹಾರ ಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ವಿದೇಶಗಳಿಗೆ ರಫ್ತು ಮಾಡುತ್ತಿದ್ದೇವೆ.‌ ವಿಶ್ವಕ್ಕೆ ತಾಂತ್ರಿಕ ಸಂಪನ್ಮೂಲ ಕಲ್ಪಿಸುವ ಶಕ್ತಿ ಗಳಿಸಿರುವ ಭಾರತವು ಬಲಿಷ್ಠ ದೇಶವಾಗಿದೆ ಎಂದು ಹೇಳಿದರು. ಚಂದ್ರನ ಬಳಿ ಹೋಗುವ ಸಾಧನೆಯನ್ನು ಮಾಡಿದ್ದೇವೆ. ಡಾ. ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟಂತಹ ಆಶಯಗಳನ್ನು ಈಡೇರಿಸಲು ಇನ್ನು ಸಾಧ್ಯವಾಗಿಲ್ಲವೇನು ಎಂದು ಅನ್ನಿಸುತ್ತಿದೆ. ಪ್ರತಿಯೊಬ್ಬರಿಗೂ ಸಮಾನತೆ, ಸ್ವಾತಂತ್ರ್ಯ ಹಕ್ಕುಗಳನ್ನು…

Read More

ತುಮಕೂರು: 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಕಚೇರಿಯ ಮುಂಭಾಗದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐಪಿಎಸ್ ರವರು ಧ್ವಜಾರೋಹಣ  ನೆರವೇರಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ  ಪೊಲೀಸ್ ಅಧೀಕ್ಷಕರುಗಳಾದ  ವಿ.ಮರಿಯಪ್ಪ, ಅಬ್ದುಲ್ ಖಾದರ್, ಕೆಎಸ್ಪಿಎಸ್, ಡಿಎಆರ್ ಅಧಿಕಾರಿಗಳು,  ನಗರದ ಪೊಲೀಸ್ ಅಧಿಕಾರಿಗಳು ಮತ್ತು  ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದು. ರಾಷ್ಟ್ರ ಧ್ವಜಕ್ಕೆ ಗೌರವ ಸೂಚಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನಾಳೆ ಗುರುವಾರ (ಆ. 15) ಸ್ವಾತಂತ್ರ್ಯ ದಿನಾಚರಣೆ ಇದೆ. ಭಾರತದ ಷೇರು ಮಾರುಕಟ್ಟೆಗೆ ಅಂದು ರಜೆ ಇದೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ ಎರಡೂ ಕೂಡ ಬಂದ್ ಆಗಿರಲಿವೆ. ಷೇರು ಮಾರುಕಟ್ಟೆಯ ಕೆಲವೇ ರಜಾ ದಿನಗಳಲ್ಲಿ ಆಗಸ್ಟ್ 15ರದ್ದೂ ಒಂದು. 2024ರಲ್ಲಿ ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 14 ಸಾರ್ವತ್ರಿಕ ರಜಾ ದಿನಗಳು ಷೇರುಪೇಟೆಗೆ ಇವೆ. ಈ ಆಗಸ್ಟ್ ತಿಂಗಳಲ್ಲಿ ಇದೊಂದೇ ರಜೆ ಇರುವುದು. ಸೆಪ್ಟಂಬರ್​ನಲ್ಲಿ ಯಾವ ರಜೆಯೂ ಇಲ್ಲ. ನಂತರ ರಜೆ ಸಿಗುವುದು ಅಕ್ಟೋಬರ್ ತಿಂಗಳಲ್ಲಿ, ನವೆಂಬರ್ ತಿಂಗಳಲ್ಲಿ ಮತ್ತು ಡಿಸೆಂಬರ್ ತಿಂಗಳಲ್ಲಿ. ಷೇರು ಮಾರುಕಟೆಯಲ್ಲಿ ಡಿಸೆಂಬರ್ 31ರವರೆಗೂ ಇರುವ ರಜಾ ದಿನಗಳು ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ ಅಕ್ಟೋಬರ್ 2: ಗಾಂಧಿ ಜಯಂತಿ ನವೆಂಬರ್ 1: ದೀಪಾವಳಿ ನವೆಂಬರ್ 15: ಗುರುನಾನಕ್ ಜಯಂತಿ ಡಿಸೆಂಬರ್ 25: ಕ್ರಿಸ್ಮಸ್ ಹಬ್ಬ ಈ ಮೇಲಿನವು ಸಾರ್ವತ್ರಿಕ ರಜಾ ದಿನಗಳು. ಇವುಗಳ ಜೊತೆಗೆ ಪ್ರತೀ ವಾರ ಶನಿವಾರ ಮತ್ತು…

Read More

ಭಾರತದ ಧ್ವಜ ಸಂಹಿತೆ 2002ರ ನಿಯಮದ ಪ್ರಕಾರ ಧ್ವಜವನ್ನು ಆಚರಿಸಲು ಅದರದ್ದೇ ಆದ ನಿಯಮಗಳಿದ್ದು, ಭಾರತೀಯ ನಾಗರಿಕರಾದ ನಾವು ಆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದು ಕಡ್ಡಾಯ. ಇಲ್ಲದಿದ್ದರೆ ಜೈಲೂಟ ಗ್ಯಾರಂಟಿ. ರಾಷ್ಟ್ರಧ್ವಜವನ್ನು ಹಾರಿಸುವ ನಿಯಮಗಳು: ಧ್ವಜ ಸಂಹಿತೆ 2002ರ ಪ್ರಕಾರ, ತ್ರಿವರ್ಣ ಧ್ವಜ 3:2 ಅನುಪಾತದಲ್ಲಿ ಇರಬೇಕು. ತಿರಂಗಾವನ್ನು ತಲೆಕೆಳಗಾಗಿ ಪ್ರದರ್ಶಿಸಬಾರದು. ಕೇಸರಿ ಬಣ್ಣವು ಮೇಲಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ. ಮೇಲೆ ಕೇಸರಿ, ಮಧ್ಯ ಬಳಿ, ಕೆಳಗೆ ಹಸಿರು ಬಣ್ಣ ಇರಬೇಕು. ಧ್ವಜವು ಗೌರವ ಸ್ಥಾನದಲ್ಲಿರಬೇಕು. ಧ್ವಜ ಹರಿದಿರಬಾರದು ಹಾಗೂ ಕೊಳಕು ಆಗಿರಬಾರದು. ಅದರ ಮೇಲೆ ಏನೂ ಬರೆಯಬಾರದು ಅಥವಾ ಮುದ್ರಿಸಬಾರದು. ಬೇರೆ ಯಾವುದೇ ಧ್ವಜವನ್ನೂ ತ್ರಿವರ್ಣ ಧ್ವಜಕ್ಕೆ ಸಮನಾಗಿ ಮತ್ತು ಎತ್ತರದಲ್ಲಿ ಹಾರಿಸಬಾರದು. ಬಾವುಟದ ಮಧ್ಯಭಾಗದಲ್ಲಿ 24 ಗೆರೆಗಳ ಅಶೋಕ ಚಕ್ರ ಹೊಂದಿರಬೇಕು. ಅದು ಕಡು ನೀಲಿಯದ್ದಾಗಿರಬೇಕು. ಒಂದು ವೇಳೆ ಮನೆಯಲ್ಲಿ ಧ್ವಜ ಹಾರಿಸುತ್ತಿದ್ದರೆ, ಧ್ವಜ ವಾಲದಂತೆ ಮತ್ತು ನೆಲ ಅಥವಾ ನೀರಿಗೆ ತಾಗದಂತೆ ನೋಡಿಕೊಳ್ಳಬೇಕು. ತ್ರಿವರ್ಣ ಧ್ವಜವನ್ನು ಲಂಬವಾಗಿ…

Read More

ಕಲಾವಿದರ ಸಂಘದ ಕಟ್ಟಡದಲ್ಲಿ ಹಲವು ಬಗೆಯ ಪೂಜೆ ಮಾಡಲಾಗಿದೆ. ಇದರಲ್ಲಿ ಅನೇಕ ಕಲಾವಿದರು ಭಾಗಿ ಆಗಿದ್ದಾರೆ. ನಟ ಜಗ್ಗೇಶ್​ ಕೂಡ ಆಗಮಿಸಿ ಈ ಪೂಜೆಯ ಬಗ್ಗೆ ಮಾತನಾಡಿದ್ದಾರೆ. ಇಂದು (ಆ.14) ನಡೆದ ಪೂಜೆ ದರ್ಶನ್​ ಸಲುವಾಗಿ ಮಾಡಿದ್ದು ಎಂಬ ಗುಮಾನಿ ಕೂಡ ಇದೆ. ಆ ಕುರಿತಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಜಗ್ಗೇಶ್​ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ನನಗೆ ಕೂಡ ಆರಂಭದಲ್ಲಿ ಅದೇ ರೀತಿಯ ಮಾಹಿತಿ ಬಂತು. ದರ್ಶನ್​ಗಾಗಿ ಪೂಜೆ ಆಗಿದ್ದರೆ ನಾನು ಕೂಡ ಬರುತ್ತಿರಲಿಲ್ಲ. ಅದು ಬೇರೆ ಆಯಾಮ ಪಡೆದುಕೊಳ್ಳುತ್ತಿತ್ತು. ಆದರೆ ಇದು ಅದಲ್ಲ. ಕಲಾವಿದರ ಒಳಿತಿಗಾಗಿ ಈ ಪೂಜೆ ನಡೆದಿದೆ. ಕೆಲವರಿಗೆ ಮಾಹಿತಿ ಕೊರತೆ ಆಗಿರಬಹುದು. ಹಾಗಾಗಿ ಅಪಾರ್ಥ ಮಾಡಿಕೊಂಡಿದ್ದಾರೆ. ಅನೇಕರು ಬೇರೆ ವಲಯಗಳಿಂದ ನನಗೆ ಫೋನ್​ ಮಾಡಿ ಕೇಳಿದರು. ನನಗೂ ಅನುಮಾನ ಬಂತು. ವಿಚಾರಿಸಿದಾಗ ಆ ಥರ ಅಲ್ಲ ಎಂಬುದು ಗೊತ್ತಾದಮೇಲೆ ನಾನು ಕೂಡ ಬಂದೆ’ ಎಂದು ಜಗ್ಗೇಶ್​ ಹೇಳಿದ್ದಾರೆ. ‘ನಾಗದೇವರು ಸಲಹೆ ನೀಡಿದೆ. ತಂದೆ-ತಾಯಿ ಮುಂದಿನ…

Read More

ಪಾವಗಡ: ಭಾರತದ 78ನೇಯ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕರೆಕೊಟ್ಟಿರುವ ಹರ್ ಗರ್ ತಿರಂಗ ಅಭಿಯಾನದ ಪ್ರಯುಕ್ತ ಬುಧವಾರ ಮಧ್ಯಾಹ್ನ ಒಂದು ಗಂಟೆಯ ಸಂದರ್ಭದಲ್ಲಿ ಪಾವಗಡ ಪಟ್ಟಣದ ತುಮಕೂರು ರಸ್ತೆಯಲ್ಲಿರುವಂತಹ ಭಾರತೀಯ ಜನತಾ ಪಕ್ಷದ ಮಂಡಲ ಕಚೇರಿಯ ಬಳಿ ತಾಲೂಕು ಬಿಜೆಪಿ ಅಧ್ಯಕ್ಷ ರಂಗಣ್ಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ 78ನೇ ಸ್ವತಂತ್ರ ದಿನೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಅಂತಹ ಸುಸಂದರ್ಭದಲ್ಲಿ ಭಾರತದ ಐಕ್ಯತೆಯ ಬಗ್ಗೆ ಮತ್ತು ಭಾರತ ದೇಶದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನ ನೆನೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರಲ್ಲಿ ದೇಶಭಕ್ತಿಯ ದ್ವೀಪವನ್ನು ಉಜ್ವಲಿಸುವ ನಿಟ್ಟಿನಲ್ಲಿ ಮನೆಮನೆಗಳ ಮೇಲೆ ತಿರಂಗ ಧ್ವಜವನ್ನು ಹಾರಿಸಲು ಸರ್ಕಾರ ಕರೆ ಕೊಟ್ಟಿದ್ದು, ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು  ಮನವಿ ಮಾಡಿಕೊಂಡರು ಬೈಕ್ ರ‍್ಯಾಲಿಯು ಪಟ್ಟಣದ ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಶನಿ ಮಹಾತ್ಮ ವೃತ್ತ ಸೇರಿದಂತೆ ವಿವಿಧ ರಸ್ತೆಗಳಲ್ಲಿ ನಡೆಸಲಾಗಿದೆ ಈ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಆಲ್ಕುಂದಿರಾಜ್, ನವೀನ್ ಸೀತಾರಾಂ, ಶಿವಕುಮಾರ್ ಸಾಕೇಲ್,ರಾಮಾಂಜಿ,…

Read More

ತುಮಕೂರು: ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ತುಮಕೂರು ನಗರದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ನ ಪದಾಧಿಕಾರಿಗಳು ಹಾಗೂ ಸದಸ್ಯರು ಕ್ಯಾಂಡಲ್ ಲೈಟ್ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ವೈದ್ಯರು ದೀಪ ಬೆಳಗಿಸಿ ಅತ್ಯಾಚಾರ ಹಾಗೂ ಕೊಲೆಗೆ ಹಿಡಾದ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿ ಕೋರಿದರು ಅಲ್ಲದೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಚ್ಚಿನಿಂದ ಹೊಡೆದು ಮಗನಿಂದಲೇ ತಂದೆಯ ಭೀಕರ ಕೊಲೆ ನಡೆದಿರೋ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ವೆಂಕಟಪ್ಪ (75), ಕೊಲೆಯಾದ ದುರ್ದೈವಿಯಾಗಿದ್ದಾನೆ.ಸಿದ್ದಪ್ಪ (45), ತಂದೆಯನ್ನ ಕೊಲೆಗೈದ ಪಾಪಿ ಮಗನಾಗಿದ್ದಾನೆ. ಮೂರೂವರೆ ಎಕರೆ ಆಸ್ತಿ ಹೊಂದಿದ್ದ ವೆಂಕಟ್ಟಪ್ಪ, ಇತ್ತಿಚೆಗೆ ಜಮೀನು ಮಾರಾಟ ಮಾಡಿದ್ದನು. ಮಾರಾಟ ಮಾಡಿದ್ದ ಜಮೀನಿನ 25 ಲಕ್ಷ ಹಣವನ್ನ ಮಗಳಿಗೆ ಕೊಟ್ಟಿದ್ದನು ಹಾಗೂ ಜಮೀನನ್ನು ಸಹ ಮಗಳ ಹೆಸರಿದೆ ಬರೆದುಕೊಟ್ಟಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ತಂದೆ ಮಗನ ಜೊತೆ ಹಲವು ಬಾರಿ ಗಲಾಟೆ ನಡೆದಿತ್ತು. ಗ್ರಾಮದ ಹಿರಿಯರ ಸಮ್ಮುಖದಲ್ಲಿ ಹಲವು ಬಾರಿ ನ್ಯಾಯ ಪಂಚಾಯತಿ ಕೂಡಾ ಮಾಡಲಾಗಿತ್ತು. ನ್ಯಾಯ ಪಂಚಾಯತಿ ಮಾಡಿದ್ರು ಸಹ ಮಗನಿಗೆ ಆಸ್ತಿ, ಹಣ ನೀಡಲು ತಂದೆ ವೆಂಕಟಪ್ಪ, ಹಿಂದೇಟು ಹಾಕಿದ್ದನು.  ಇದರಿಂದ ಬೇಸತ್ತು ತಂದೆಯನ್ನ ಮಗ ಸಿದ್ದಪ್ಪ, ತಲೆಗೆ ಮಚ್ಚಿನಿಂದ ಬಲವಾಗಿ ಹೊಡೆದು ಕೊಲೆ ಮಾಡಿ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಎಎಸ್ ಪಿ ಮರಿಯಪ್ಪ ಹಾಗೂ…

Read More

ಸರಗೂರು:  ಅಧಿಕಾರಿಗಳು ಸಭೆಗೆ ಬರುವಾಗ ಇಲಾಖೆಯ ಸಂಪೂರ್ಣ ಮಾಹಿತಿಯೊಂದಿಗೆ ಬಂದಲ್ಲಿ ಸಮಸ್ಯೆ ಬಗೆಹರಿಸಲು ಸಾಧ್ಯ. ಆದರೆ ಅಪೂರ್ಣ ಮಾಹಿತಿಯೊಂದಿಗೆ ಬಂದರೆ ಸಭೆ ಮಾಡುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ಶಾಸಕ ಅನಿಲ್ ಚಿಕ್ಕಮಾದು ತರಾಟೆಗೆ ತೆಗೆದುಕೊಂಡ ಘಟನೆ ಮಂಗಳವಾರ ನಡೆಯಿತು. ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಅಕ್ರಮ ಸಕ್ರಮ ಸಭೆಯಲ್ಲಿ ಮಾತನಾಡಿದರು. ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಸರ್ಕಾರಿ, ಗೋಮಾಳ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಬೇಕೆಂದರೆ ಜಮೀನಿಗೆ ಸಂಬಂಧಿಸಿದ ಕಡತಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತಯಾರಿಸಿ ಸೂಕ್ತ ಕಡತ ದೊಂದಿಗೆ ಬಂದರೆ ಸಾಗುವಳಿ ನೀಡಲು ಸಾಧ್ಯ ಆದರೆ ಅಧಿಕಾರಿಗಳು ಅಪೂರ್ಣ ದಾಖಲೆಗಳೊಂದಿಗೆ ಸಭೆಗೆ ಬಂದರೆ ರೈತರಿಗೆ ಯಾವ ರೀತಿ ಅನುಕೂಲ ಮಾಡಲು ಸಾಧ್ಯ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರದ ಮಾರ್ಗ ಸೂಚಿ ಪ್ರಕಾರ ಕ್ಷೇತ್ರದಲ್ಲಿ ಸಾವಿರಕ್ಕೂ ಹೆಚ್ಚು ರೈತರಿಗೆ ವಿತರಣೆ ಮಾಡಿದ್ದೇನೆ ಅದರೂ 50, 53, 57 ನಮೂನೆ ಅರ್ಜಿ ಸಲ್ಲಿಸಿದ ಇನ್ನೂ ಸಾಕಷ್ಟು ಅರ್ಜಿಗಳು…

Read More