Author: admin

ತೆಲಂಗಾಣ: ಭಾರತೀಯ ಸಂಸ್ಕೃತಿಯಲ್ಲಿ ‘ಅತಿಥಿ ದೇವೋ ಭವ’ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟ ಮತ್ತು ಹೆಚ್ಚುತ್ತಿರುವ ಖರ್ಚು ವೆಚ್ಚಗಳಿಂದಾಗಿ ಮದುವೆ ಸಮಾರಂಭಗಳಲ್ಲಿ ಕರೆಯದೇ ಬರುವ ಅತಿಥಿಗಳು ಆಯೋಜಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾರೆ. ಇದೀಗ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಕಲ್ಯಾಣ ಮಂಟಪವೊಂದರ ಮುಂದೆ ಹಾಕಲಾಗಿರುವ ಬೋರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮಹಬೂಬಾಬಾದ್‌ ನ ಕಲ್ಯಾಣ ಮಂಟಪವೊಂದರ ಪ್ರವೇಶ ದ್ವಾರದಲ್ಲಿ ತೆಲುಗು ಭಾಷೆಯ ಎಚ್ಚರಿಕೆ ಫಲಕವೊಂದನ್ನು ಹಾಕಲಾಗಿದೆ. ಇದರಲ್ಲಿ, “ಆಹ್ವಾನವಿಲ್ಲದೇ ಮದುವೆ ಅಥವಾ ಶುಭ ಸಮಾರಂಭಗಳಿಗೆ ಬಂದು ಊಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಬರೆಯಲಾಗಿದೆ. ಈ ಎಚ್ಚರಿಕೆ ಫಲಕದ ಪ್ರಕಾರ, ಆಹ್ವಾನವಿಲ್ಲದೆ ಬರುವವರಿಗೆ 3 ತಿಂಗಳ ಜೈಲು ಶಿಕ್ಷೆ, 5,000 ರೂಪಾಯಿ ದಂಡ ವಿಧಿಸಲಾಗುವುದು ಅಂತಾ ಬರೆಯಲಾಗಿದೆ.  ಇದನ್ನು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 329 (ಹಳೆಯ ಐಪಿಸಿ ಸೆಕ್ಷನ್ 441 — ಕ್ರಿಮಿನಲ್ ಅತಿಕ್ರಮಣ) ಅಡಿಯಲ್ಲಿ ಜಾರಿಗೆ ತರಲಾಗುವುದು…

Read More

ತುರುವೇಕೆರೆ: ಒಳಮೀಸಲಾತಿಯನ್ನು ಜಾರಿಗೆ ತರದೆ ರಾಜ್ಯ ಸರ್ಕಾರವು ಏಕಾಏಕಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಖಂಡಿಸಿ, ಮಾದಿಗ ಸಮುದಾಯದ ಮುಖಂಡರು ತುರುವೇಕೆರೆ ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು. ಒಳಮೀಸಲಾತಿ ಅನ್ವಯ ಮಾಡದೆಯೇ ಸುಮಾರು 15 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಮಾದಿಗ ಸಮುದಾಯಕ್ಕೆ ಭಾರೀ ಅನ್ಯಾಯವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸಮುದಾಯದ ಹಿತರಕ್ಷಣೆ ಮಾಡಲು ವಿಫಲರಾಗಿರುವ ಮಾದಿಗ ಸಮುದಾಯದ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬೀದಿಗೆ ಬಂದು ಹೋರಾಟ ಮಾಡಬೇಕು ಎಂದು ಜಿಲ್ಲಾ ದಲಿತ ಸಂಘರ್ಷ ಸಮಿತಿಯ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್‌ ಒತ್ತಾಯಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾದಿಗ ಸಮುದಾಯವು ಕಾಂಗ್ರೆಸ್‌ಗೆ ಪೂರ್ಣ ಬೆಂಬಲ ನೀಡಿತ್ತು. ಆದರೆ ಈಗ ಸರ್ಕಾರವು ಸಮುದಾಯವನ್ನು ಕಡೆಗಣಿಸುತ್ತಿದೆ. ಸಚಿವರಾದ ಜಿ. ಪರಮೇಶ್ವರ ಹಾಗೂ ಎಚ್.ಸಿ. ಮಹದೇವಪ್ಪ ಅವರು ಮುಖ್ಯಮಂತ್ರಿಗಳ ಕೈಗೊಂಬೆಯಾಗಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಹೊಸ ನೇಮಕಾತಿ…

Read More

ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಹಾಗೂ ಅದರ ಎರಡು ಮರಿಗಳು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿವೆ. ಗ್ರಾಮದ ಹೊರವಲಯದಲ್ಲಿರುವ ಶಿವಣ್ಣ ಎಂಬುವವರಿಗೆ ಸೇರಿದ ಕುರಿ ರೊಪ್ಪಕ್ಕೆ ನುಗ್ಗಿದ ಚಿರತೆಯು ಕುರಿಗಳ ಮೇಲೆ ದಾಳಿ ಮಾಡಿದೆ. ಈ ವೇಳೆ ಚಿರತೆಯನ್ನು ಕಂಡು ಬೆಚ್ಚಿಬಿದ್ದ ಸ್ಥಳೀಯರು ಜೋರಾಗಿ ಕಿರುಚಾಡಿದ್ದಾರೆ. ಜನರ ಕೂಗಾಟ ಕೇಳಿ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ಧಾವಿಸಿ ಬಂದಾಗ, ಚಿರತೆ ಮತ್ತು ಅದರ ಎರಡು ಮರಿಗಳು ಅಲ್ಲಿಂದ ಓಡಿ ಹೋಗಿವೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯನ್ನು ಸೆರೆಹಿಡಿಯಲು ಗ್ರಾಮದ ಆಯಕಟ್ಟಿನ ಜಾಗದಲ್ಲಿ ಬೋನನ್ನು ಇರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಚಿರತೆಗಳ ಓಡಾಟದಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕೂಡಲೇ ಚಿರತೆ ಮತ್ತು ಅದರ ಮರಿಗಳನ್ನು ಸೆರೆಹಿಡಿದು ಸಂಘರ್ಷಕ್ಕೆ ಮುಕ್ತಿ ಹಾಡಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಅಂಗವಿಕಲ ಮತ್ತು ಬುದ್ಧಿಮಾಂದ್ಯ ಮಕ್ಕಳನ್ನು ಮನೆಯಿಂದ ಹೊರಗೆ ಬರದಂತೆ ಕಟ್ಟಿ ಹಾಕುವುದು ಅಥವಾ ಬಂಧಿಸಿಡುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಇಂತಹ ಕೃತ್ಯವೆಸಗುವವರು ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ನೂರುನ್ನೀಸಾ ಅವರು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಂಗಳವಾರ ನಡೆದ ‘ವಿಕಲಚೇತನ ಮಕ್ಕಳು ಹಾಗೂ ಆರೈಕೆದಾರರೊಂದಿಗಿನ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಆರೈಕೆ ಕಷ್ಟವೆನಿಸಿದರೆ ಅವರನ್ನು ಡೇ ಕೇರ್ ಸೆಂಟರ್‌ ಗಳು ಅಥವಾ ವಿಶೇಷ ವಸತಿ ಶಾಲೆಗಳಿಗೆ ಸೇರಿಸಬೇಕು. ಆದರೆ ಯಾವುದೇ ಕಾರಣಕ್ಕೂ ಅವರನ್ನು ಮನೆಯಲ್ಲಿ ಬಂಧಿಸಬಾರದು ಎಂದು ಸಲಹೆ ನೀಡಿದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಅಂಗವಿಕಲರಿಗೆ ಸಿಗುವ ಸೌಲಭ್ಯಗಳ ವಿತರಣೆಯಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಬೇಕು ಮತ್ತು ಸಾರಿಗೆ ವ್ಯವಸ್ಥೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದರು. ಮೊಬಿಲಿಟಿ ಇಂಡಿಯಾ ಸಂಸ್ಥೆಯ ಅಲ್ಬಿನಾ ಶಂಕರ್ ಅವರು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಸಾಮಾಜಿಕ…

Read More

ಕುಣಿಗಲ್: ತಾಲ್ಲೂಕಿನ ಉಜ್ಜಿನಿ ಗ್ರಾಮದಲ್ಲಿ ಒಂಟಿ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಮೈಮೇಲಿದ್ದ ಚಿನ್ನಾಭರಣಗಳನ್ನು ದೋಚಿರುವ ಆಘಾತಕಾರಿ ಘಟನೆ ನಡೆದಿದೆ. ನಾಗಮ್ಮ (70) ಕೊಲೆಯಾದ ದುರ್ದೈವಿ. ಇವರು ಮನೆಯಲ್ಲಿ ಒಬ್ಬರೇ ವಾಸವಿದ್ದರು. ಮಾರ್ಚ್ 9ರ ಸೋಮವಾರದಂದು ಈ ಕೃತ್ಯ ನಡೆದಿದ್ದು, ಮಂಗಳವಾರ ರಾತ್ರಿ ಅಕ್ಕಪಕ್ಕದ ನಿವಾಸಿಗಳು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ನಾಗಮ್ಮ ಅವರ ಮಗ ವರದರಾಜು ಅವರು ಮಾರ್ಚ್ 8ರಂದು ಮನೆಗೆ ಬಂದು ಸೋಲಾರ್ ಮತ್ತು ಪೈಪ್‌ ಲೈನ್ ಕೆಲಸ ಮುಗಿಸಿ ಅಂದೇ ಬೆಂಗಳೂರಿಗೆ ಮರಳಿದ್ದರು. ಇದನ್ನೇ ಹೊಂಚು ಹಾಕಿದ್ದ ಕಳ್ಳರು, ಸೋಮವಾರ ಮನೆಗೆ ನುಗ್ಗಿ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ. ನಂತರ ಅವರ ಮೈಮೇಲಿದ್ದ ಚಿನ್ನದ ಸರ, ಬಳೆ ಹಾಗೂ ಓಲೆಗಳನ್ನು ಕಿತ್ತುಕೊಂಡು, ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾರೆ. ನಾಗಮ್ಮ ಅವರು ಎರಡು ದಿನಗಳಿಂದ ಮನೆಯಿಂದ ಹೊರಗೆ ಬಾರದಿದ್ದನ್ನು ಗಮನಿಸಿದ ನೆರೆಹೊರೆಯವರು ಸಂಶಯಗೊಂಡು ಕಿಟಕಿಯಿಂದ ಇಣುಕಿ ನೋಡಿದ್ದಾರೆ. ಈ ವೇಳೆ ಅವರ ಮೃತದೇಹ ಕಂಡುಬಂದಿದೆ. ಕೂಡಲೇ ಕುಟುಂಬದವರಿಗೆ ಮತ್ತು…

Read More

ಕೊರಟಗೆರೆ: ತುಮಕೂರಿನ ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ನ ಗೌತಮ್ ಹಾಗೂ ಈತನ ಅಕ್ಕ ಶಿಲ್ಪ ದೌರ್ಜನ್ಯದಿಂದ ಚೀಟಿ ಹಣ ವಸೂಲಿ ಮಾಡಲು ನನ್ನ ಭಾವಚಿತ್ರವಿರುವ ಕರಪತ್ರಗಳನ್ನು ಕುರಂಕೋಟೆ ಗ್ರಾಮ ಹಾಗೂ ತಾಲೂಕಿನಾದ್ಯಂತ ಗೋಡೆಗಳಿಗೆ ಅಂಟಿಸಿ ಸೋಷಿಯಲ್ ಮೀಡಿಯಾದೊಂದಿಗೆ ಮಾನ ಹರಾಜು ಹಾಕಿ ವೈಯಕ್ತಿಕವಾಗಿ ನನ್ನ ಮತ್ತು ನನ್ನ ಕುಟುಂಬವನ್ನು ಮಾನಸಿಕವಾಗಿ ಹಿಂಸಿಸಿದ್ದಾರೆ ಎಂದು ನೊಂದ ವ್ಯಕ್ತಿ ಕುರಂಕೋಟೆ ಸಿದ್ದರಾಜು ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೨೦೨೩-೨೪ರಲ್ಲಿ ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಐದು ಲಕ್ಷ ಸಾಲ ಪಡೆದಿದ್ದೇನೆ, ಸಾಲ ಪಡೆಯುವ ವೇಳೆ ನಮ್ಮ ಗ್ರಾಮದ ಗೌತಮ್ ಎಂಬಾತನು ಮ್ಯಾನೇಜರ್ ಆಗಿದ್ದು, ೩.೫ ಲಕ್ಷ ವರೆಗೆ ವಾಪಸ್ ಲಿಮಿಟೆಡ್‌ ಗೆ ಪಾವತಿಸಿದ್ದೇನೆ ಎಂದು ಹೇಳಿದರು. ಬೈಕ್ ಅಪಘಾತವಾದ ಸಂದರ್ಭದಲ್ಲಿ ಗೌತಮ್ ರವರಿಗೆ ೬೫ ಸಾವಿರ ನಗದು ಹಣ, ಪೋನ್ ಪೇ ಮೂಲಕ ೧ ಲಕ್ಷ ಹಣ ಪಾವತಿಸಿದ್ದೇನೆ, ನೀಡಿದ ೬೫ ಸಾವಿರ ನಗದು ಹಣವನ್ನು ಲಿಮಿಟೆಡ್‌ ಗೆ ಸಂದಾಯ…

Read More

ಬಳ್ಳಾರಿ: ಸಾರ್ವಜನಿಕರಿಗೆ ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ನೀಡಬೇಕು. ಬ್ಯಾಂಕ್ ಸೌಲಭ್ಯ ನೀಡುವಲ್ಲಿ ವಿಳಂಬವಾದಲ್ಲಿ ಆಯಾ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಎಲ್ಲಾ ಬ್ಯಾಂಕ್ ವ್ಯವಸ್ಥಾಪಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಡಿ ಸೌಲಭ್ಯ ಪಡೆಯುವಲ್ಲಿ ಬಳ್ಳಾರಿ ಜಿಲ್ಲೆ ಕಡಿಮೆ ಪ್ರಗತಿ ಸಾಧಿಸಿದೆ. ರಾಜ್ಯದ ಇತರೆ ಜಿಲ್ಲೆಗಳು ಹೆಚ್ಚು ಹೆಚ್ಚು ಪ್ರಗತಿ ಸಾಧಿಸುವಲ್ಲಿ ಯಶಸ್ವಿಯಾಗಿವೆ. ಮುಂಬರುವ ದಿನಗಳಲ್ಲಿ ಬಳ್ಳಾರಿ ಜಿಲ್ಲಿಯೂ ಪ್ರಗತಿ ಸಾಧಿಸುವಲ್ಲಿ ಬ್ಯಾಂಕ್ ಗಳ ಸಹಕಾರ ಅತಿ ಅಗತ್ಯವಿದೆ ಎಂದು ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನವನ್ನು ಜಿಲ್ಲೆಯ ಗ್ರಾಮೀಣ ಮತ್ತು ನಗರ…

Read More

ವಿಜಯಪುರ: ಇದೇ ಮಾರ್ಚ್ 18 ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ನಡೆಸಬೇಕೆಂದು ಪರೀಕ್ಷೆಗೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಸೂಚನೆ ನೀಡಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮದಿರದಲ್ಲಿ ಮಂಗಳವಾರ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಜಿಲ್ಲಾ ಮಟ್ಟದ  ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿ ಹಾಗೂ ನಿರ್ವಹಣೆ ಕುರಿತ ಸಲಹೆ ನೀಡಿದರು. ಸಿಸಿಟಿವಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಪರಿಶೀಲನೆ ನಡೆಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ತನ್ಮೂಲಕ  ಪರೀಕ್ಷೆಯ ಪಾವಿತ್ರ್ಯತೆ ಕಾಯ್ದುಕೊಳ್ಳಬೇಕು ಎಂದರು. ಬಿಇಒ,  ತಹಶೀಲ್ದಾರ್ ಅವರು ತಾಲೂಕಿನಲ್ಲಿ ಸಭೆ ನಡೆಸಿ ಅಗತ್ಯ ಸೂಚನೆ ನೀಡಬೇಕು. ಮೈಕ್ರೊ ಪ್ಲ್ಯಾನಿಂಗ್ ಮಾಡಿಕೊಳ್ಳಬೇಕು ಪರೀಕ್ಷಾ ಪ್ರಕ್ರಿಯೆಯಲ್ಲಿ ಲೋಪ-ದೋಷಗಳಾಗಬಾರದು.‌ ಆರೋಗ್ಯ ಇಲಾಖೆಯಿಂದ ಅಗತ್ಯ ಸಿಬ್ಬಂದಿ ನಿಯೋಜಿಸಬೇಕು ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ…

Read More

ಧಾರವಾಡ: ದೇಶದ ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆದರೆ ಈ ಹಿಂದೆ ದಿನಪತ್ರಿಕೆ ಮತ್ತು ಟಿವಿ ಚಾನೆಲ್‍ ಗಳಲ್ಲಿ ಸೀಮಿತ ಅವಕಾಶವಿತ್ತು. ಇದೀಗ ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದಂತಾಗಿದ್ದು, ನೈಜ ಪ್ರಜಾಪ್ರಭುತ್ವ ಸಾಧಿಸಿದಂತಾಗಿದೆ ಎಂದು ಕವಿವಿ ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಎ.ಎಸ್.ಬಾಲಸುಬ್ರಮಣ್ಯ ಅವರು ಅಭಿಪ್ರಾಯಪಟ್ಟರು. ಅವರು ಇಂದು (ಮಾ.10) ಬೆಳಿಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮದ ವಿಭಾಗದ ಸಹಯೋಗದಲ್ಲಿ ಕವಿವಿ ಕನಕ ಅಧ್ಯಯನ ಪೀಠದ ಸಭಾಂಗಣದಲ್ಲಿ ಮೀಡಿಯಾ ಫೆಸ್ಟ್ 2026 ರ ಅಂಗವಾಗಿ ಆಯೋಜಿಸಿದ್ದ ವಿಚಾರಸಂಕಿರಣದಲ್ಲಿ ಪತ್ರಿಕೋದ್ಯಮದಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ವಿಷಯಗಳ ವಿಶ್ವಾಸಾರ್ಹತೆ ವಿಷಯದ ಕುರಿತು ಮಾತನಾಡಿದರು. ಪತ್ರಿಕೆ, ರೇಡಿಯೋ, ಟಿವಿ ಚಾನೆಲ್‍ಗಳಿಗಿಂತ ಸೋಷಿಯಲ್ ಮೀಡಿಯಾ ಈಗ ಜನಪ್ರಿಯವಾಗಿದೆ. ಅದರ ಮುಂದುವರಿದ ಭಾಗವಾಗಿ ಕೃತಕ ಬುದ್ಧಿಮತ್ತೆ, ರೋಬೋಟ್ ತಂತ್ರಜ್ಞಾನ ಪ್ರವರ್ಧಮಾನಕ್ಕೆ ಬಂದಿದೆ. ಅಂತರ್ಜಾಲ ಮತ್ತು ಸಾಮಾಜಿಕ ಜಾಲತಾಣಗಳಿಂದಾಗಿ ತಕ್ಷಣದ ಸಂವಹನ…

Read More

ಧಾರವಾಡ: ಸ್ಪರ್ಧಾತ್ಮಕತೆಯನ್ನು ಹೊಂದಿದ ಕ್ಷೇತ್ರ ಪತ್ರಿಕೋದ್ಯಮವಾಗಿದೆ. ದಿನಪತ್ರಿಕೆಗಳು ದಿನನಿತ್ಯ ಸುದ್ಧಿ, ಜಾಹೀರಾತು, ಪ್ರಕಟಣೆಯಲ್ಲಿ ಪಾರದರ್ಶಕತೆ ಹಾಗೂ ಸಮಾಜದ ಅನೇಕ ಸವಾಲುಗಳನ್ನು ಎದುರಿಸುತ್ತವೆ. ಪತ್ರಕರ್ತರು ಪಾರದರ್ಶಕವಾಗಿ ಸುದ್ದಿಗಳನ್ನು ಪ್ರಕಟಿಸುವದರಿಂದ ಅನೇಕ ಸಾಮಾಜಿಕ ತೊಡಕುಗಳು ನಿವಾರಣೆಯಾಗಲು ಸಾಧ್ಯವಾಗುತ್ತದೆ ಎಂದು  ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಶಂಕರೆಪ್ಪ ವಣಿಕ್ಯಾಳ ಅವರು ಹೇಳಿದರು. ಅವರು ಇಂದು (ಮಾ.10) ಮಧ್ಯಾಹ್ನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮದ ವಿಭಾಗದ ಸಹಯೋಗದಲ್ಲಿ ಕವಿವಿ ಕನಕ ಅಧ್ಯಯನ ಪೀಠದ ಸಭಾಂಗಣದಲ್ಲಿ ಆಯೋಜಿಸಿದ್ದ ಮೀಡಿಯಾ ಫೆಸ್ಟ್ 2026 ರ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ  ಸಮಾರಂಭದಲ್ಲಿ  ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಪತ್ರಕರ್ತರು ತಮ್ಮ ಪಕ್ಷಾತೀತ ಮತ್ತು ನಿರ್ಭಿಡೆಯ ಕೆಲಸದಿಂದ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದಾರೆ. ವ್ಯವಸ್ಥೆಯ ಅಂಕುಡೊಂಕು ತಿದ್ದಲು ಪ್ರತಿನಿತ್ಯ ಅವರು ಪ್ರಕಟಿಸುವ ವಿವಿಧ ರೀತಿಯ ಸುದ್ದಿಗಳು ಸಹಕಾರಿಯಾಗಿವೆ. ಪತ್ರಕರ್ತನಿಗೆ ಅನ್ಯಾಯ, ಅವ್ಯವಸ್ಥೆ ಎದುರಿಸುವ ತಾಕತ್ತು ಇರಬೇಕು. ಯಾವುದೇ ಮುಲಾಜುಗಳಿಗೆ ಒಳಗಾಗದೇ ಸದಾಕಾಲ ಸತ್ಯದ ಪರವಾಗಿ ನಿಲ್ಲಬೇಕು. ಇದು ಪತ್ರಿಕೋದ್ಯಮದ ವೃತ್ತಿಪರತೆಯನ್ನು ಮತ್ತು…

Read More