Author: admin

ಪಾವಗಡ: ಆಂಧ್ರಪ್ರದೇಶದ ರೊದ್ದಂ ನಿಂದ ಕರ್ನಾಟಕದ ಕೊಡುಮಡುಗು ಗ್ರಾಮದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಕೊಡಮಡುಗು ಗ್ರಾಮದಿಂದ ಆಂಧ್ರ ಕಡೆ ಹೋಗುತ್ತಿದ್ದ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಂಧ್ರಪ್ರದೇಶದ ಪೆದ್ದಗುವ್ವಲಪಲ್ಲಿ ಗ್ರಾಮದ 56 ವರ್ಷದ ರಾಮಾಂಜನೇಯಲು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಬುಧವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಪಾವಗಡ ತಾಲೂಕಿನ ಕೊಡುಮಡುಗು ಗ್ರಾಮದ ಹೊರವಲಯದ ಆಂಧ್ರ ಮತ್ತು ಕರ್ನಾಟಕ ಗಡಿ ರೇಖೆಯ ಸಮೀಪದಲ್ಲಿ ಜರುಗಿದೆ. ರಾಮಾಂಜನೇಯಲು ಅವರ ಪುತ್ರ ಕೋಟೇಶ್ವರಲು ಅವರಿಗೂ ಸಹ ಗಂಭೀರ ಗಾಯಗಳಾಗಿದ್ದು,  ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಪಾತ್ರಪಲ್ಲಿ ಮೊದ್ಲೇಟಪ್ಪ ಅವರಿಗೂ ಸಹ ಕಾಲು ಮುರಿದು ಗಂಭೀರ ಗಾಯಗಳಾಗಿದ್ದು ಇವರನ್ನ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ರವಾನಿಸಲಾಗಿದೆ . ಘಟನಾ ಸ್ಥಳಕ್ಕೆ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಪಾವಗಡ: ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ತಪಾಸಣಾ ಅಭಿಯಾನ ಯೋಜನೆ ಮತ್ತು ಗರ್ಭಿಣಿ ಮಹಿಳೆಯ ಸೀಮಂತ  ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಸಿ.ಕೆ.ಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಇದೇ ವೇಲೆ ಆಸ್ಪತ್ರೆಯಲ್ಲಿ ಇರುವಂತಹ ವ್ಯವಸ್ಥೆಯನ್ನು ಕಂಡು ತಾಲೂಕು ವೈದ್ಯಾಧಿಕಾರಿ ಡಾ.ಕಿರಣ್ ಗೆ ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಇಷ್ಟು ಉತ್ತಮ ಸೌಲಭ್ಯಗಳಿದ್ದರೂ ಜನರಿಗೆ ಸೇವೆ ಮಾಡುವುದಕ್ಕೆ ಏನಾಗಿದೆ ಎಂದು ಪ್ರಶ್ನಿಸಿದರು. ಅದೇ ರೀತಿ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೆ ಜನರು ಸಮಸ್ಯೆಯನ್ನು ಅನುಭವಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸಿ ಮಾಹಿತಿ ನೀಡುವಂತೆ ಸೂಚಿಸಿದರು ಬಳಕೆ ಇಲ್ಲದ ಆಸ್ಪತ್ರೆಯ ಶೌಚಾಲಯ: ಸಿ.ಕೆ.ಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಶೌಚಾಲಯವನ್ನು ಗಮನಿಸಿದ ನಾಗಲಕ್ಷ್ಮೀ ಅವರು, ದಂಗಾಗಿದ್ದಾರೆ.   ಆಸ್ಪತ್ರೆ ಪ್ರಾರಂಭವಾದಾಗಿಂದ ಇಲ್ಲಿಯವರೆಗೂ ಆಸ್ಪತ್ರೆಯ ಶೌಚಾಲಯ ಬಳಸಿಯೇ ಇಲ್ಲ. ಈ ಬಗ್ಗೆ ಎಚ್ಚರಿಕೆ ನೀಡಿದ ಅವರು,  ಇದೇ…

Read More

ಶ್ರವಣಬೆಳಗೊಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಗಳ ಅಭಿವೃದ್ಧಿ, ಆರ್ಥಿಕ ಸ್ವಾವಲಂಬನೆ, ಸಾಮಾಜಿಕ ಅಭಿವೃದ್ಧಿಗೆ ಪ್ರೋತ್ಸಾಹ ಹಾಗೂ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು. ಶ್ರೀಕ್ಷೇತ್ರ ಶ್ರವಣಬೆಳಗೊಳ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ವತಿಯಿಂದ ಶ್ರವಣಬೆಳಗೊಳದ ಯೋಜನೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸುಜ್ಞಾನ ನಿಧಿ ಶಿಷ್ಯವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದಿಂದ ನೈತಿಕತೆ, ಸಂಸ್ಕಾರ ಹಾಗೂ ಉತ್ತಮ ಮಾನವೀಯ ಮೌಲ್ಯಗಳನ್ನು ವಿದ್ಯರ‍್ಥಿಗಳಿಗೆ ಬಾಲ್ಯದಿಂದಲೇ ಕಲಿಸಬೇಕು ಎಂದರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಗಳಲ್ಲಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ, ಸಾಮಾಜಿಕ ಚಳುವಳಿಯನ್ನು ಮಾಡುತ್ತಿದ್ದು, ಕುಟುಂಬದ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಸಂಸ್ಥೆಯು ಸ್ವಸಹಾಯ ಸಂಘ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಗಳ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಿ, ಹೈನುಗಾರಿಕೆ, ಸಣ್ಣ ಉದ್ಯಮ ಸ್ಥಾಪಿಸಲು ಪ್ರೇರಣೆ ನೀಡುತ್ತಿದೆ. ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಲು ಶ್ರಮಿಸುತ್ತಿದೆ ಎಂದರು. ಅಂತರ್ಜಲ ವೃದ್ಧಿಸುವ ಸಲುವಾಗಿ…

Read More

ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಕೊರೆಕಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಷ್ಮಿನಗರ ಗ್ರಾಮದಲ್ಲಿ  ಮುಂಜಾನೆ ಕುಡಿಯುವ ನೀರಿನಲ್ಲಿ ಕಪ್ಪೆ ಮರಿಗಳು ಪ್ರತ್ಯಕ್ಷವಾಗಿದ್ದು, ನೀರಿನಲ್ಲಿ ಕಪ್ಪೆ ಮರಿಗಳನ್ನು ಕಂಡು ಜನರು ಕಂಗಾಲಾಗಿದ್ದಾರೆ. ಘಟನೆ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ದೇಶಪಾಂಡೆ ಜನರಿಗೆ ಉಡಾಫೆ ಉತ್ತರಗಳನ್ನು ನೀಡಿದರು. ಇದರಿಂದ ಆಕ್ರೋಶಗೊಂಡ ಸಾಮಾಜಿಕ ಹೋರಾಟಗಾರರಾದ ರತ್ನದೀಪ ಕಸ್ತೂರೆ ಮತ್ತು ಸುನಿಲ್ ಮಿತ್ರರವರ ನೇತೃತ್ವದಲ್ಲಿ ಜನರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಧಿಕ್ಕಾರ ಕೂಗಿದರು.ಈ ವೇಳೆ ಕಮಲನಗರ ತಹಸೀಲ್ದಾರ ಅಮಿತ ಕುಮಾರ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿ, ನೀರು ಪರಿಶೀಲಿಸಿ ಪಿ.ಡಿ. ಓ ಗೆ ತರಾಟೆಗೆ ತೆಗೆದುಕೊಂಡರು. ಮುಖಂಡ ರತ್ನದೀಪ ಕಸ್ತೂರೆ ಮಾತನಾಡಿ, ಕುಡಿಯುವ ನೀರಿನಲ್ಲಿ ಕಪ್ಪೆ ಮರಿಗಳು ಬಂದಿದ್ದು ವಿಷಾದನಿಯ ಸಂಗತಿಯಾಗಿದೆ. ಎಲ್ಲಾ ಓಣಿಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಎಲ್ಲಾ ಓಣಿಗಳಲ್ಲಿ ನೀರು ನಿಂತು ಗಬ್ಬು ನಾರುತ್ತಿವೆ, ಕೂಡಲೇ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವ…

Read More

ಬೀದರ್:  ಜಿಲ್ಲಾ ಪೊಲೀಸರು 10 ದ್ವಿಚಕ್ರ ವಾಹನ ಕಳ್ಳತನ ಮತ್ತು ಒಂದು ಕುರಿ ಕಳವು ಪ್ರಕರಣವನ್ನು ಭೇದಿಸಿದ್ದು, 16 ಲಕ್ಷಕ್ಕೂ ಅಧಿಕ ಮೌಲ್ಯದ ದ್ವಿಚಕ್ರ ವಾಹನ, ಕುರಿ ವಶಪಡಿಸಿಕೊಂಡು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ ಮೇಲಾಧಿಕಾರಿಗಳ ಮಾರ್ಗದರ್ಶನದಂತೆ, ಚಂದ್ರಕಾಂತ್ ಪೂಜಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಬೀದರ್ ರವರ ಮುಂದಾಳತ್ವದಲ್ಲಿ ಭಾಲ್ಕಿ ಉಪ ವಿಭಾಗದ ಶಿವಾನಂದ್ ಪವಾಡ ಶೆಟ್ಟಿ, DySP ಭಾಲ್ಕಿ, ಅಮರೇಶ್, ಪಿ.ಐ ಬಾಲ್ಕಿ ನಗರ, ಗುರುಪಾದ, ಸಿಪಿಐ ಬಾಲ್ಕಿ ಗ್ರಾಮೀಣ ವೃತ್ತ, ಅಮರೆಪ್ಪ, ಸಿಪಿಐ ಕಮಲ ನಗರ ವೃತ್ತ ಇವರ ನೇತೃತ್ವದಲ್ಲಿ ಚಂದ್ರಶೇಖರ್, ಪಿಎಸ್ ಐ, ಕಮಲ ನಗರ ಪೊಲೀಸ್ ಠಾಣೆ, ಬಾಲಾಜಿ, ಪಿಎಸ್ ಐ ಇವರನ್ನೊಳಗೊಂಡ ನುರಿತ ಅಧಿಕಾರಿ ಸಿಬ್ಬಂದಿಯ ತಂಡ ಕಾರ್ಯಾಚರಣೆ ನಡೆಸಿ 10 ದ್ವಿಚಕ್ರ ವಾಹನಗಳನ್ನು ವಶ ಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಅದರಂತೆ ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕುರಿಗಳ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿ 28 ಕುರಿಗಳನ್ನು ಮತ್ತು ಒಂದು…

Read More

ಮಾರುಕಟ್ಟೆಯಲ್ಲಿ ಹಲವು ರೀತಿಯ ಪಾನ್‌ ಗಳು ಲಭ್ಯವಿವೆ. ಚಾಕೊಲೇಟ್ ಪಾನ್, ಫೈರ್ ಪಾನ್, ಐಸ್ ಸ್ಮೋಕ್ ಪಾನ್ ಹೀಗೆ ಹಲವು ಬಗೆಯ ಎಲೆಗಳಿವೆ. ಇದು ನೂರಾರು ಅಥವಾ ಸಾವಿರಾರು ವೆಚ್ಚವಾಗಬಹುದು. ಆದರೆ ನೀವು ಎಂದಾದರೂ ಲಕ್ಷ ರೂಪಾಯಿಯ ಪಾನ್ ತಿಂದಿದ್ದೀರಾ..? ನೀವು ಎಂದಾದರೂ ಒಂದು ಲಕ್ಷ ರೂಪಾಯಿ ಮೌಲ್ಯದ ಪಾನ್ ತಿಂದಿದ್ದೀರಾ? ಇಷ್ಟೊಂದು ಬೆಲೆ ಪಾನ್​ ಇರುತ್ತಾ ಎಂದು ಎಂದಾದರೂ ಕೇಳಿದ್ದೀರಾ? ಅದಕ್ಕೆಲ್ಲಾ ಉತ್ತರ ಇಲ್ಲಿದೆ. ಮುಂಬೈನಲ್ಲಿ ಒಂದು ಪಾನ್​ ಅಂಗಡಿ ಇದೆ. ಅಲ್ಲಿ ಒಂದು ಲಕ್ಷ ರೂಪಾಯಿ ಬೆಲೆಬಾಳುವ ಪಾನ್​ ಸಿಗುತ್ತದೆ. ಈ ಅಂಗಡಿಯ ಮಾಲೀಕ ನೌಶಾದ್ ಶೇಖ್, ಇವರು ಎಂಬಿಎ ಮಾಡಿದ್ದಾರೆ. ಹಲವಾರು ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಸಂಬಳದ ಕೆಲಸ ಸಿಕ್ಕಿತು. ಆದರೆ ಅವರು ತಮ್ಮದೇ ಆದದನ್ನು ಬ್ಯುಸಿನೆಸ್​ ಪ್ರಾರಂಭಿಸುವ ಗುರಿಯನ್ನು ಬೆನ್ನತ್ತಿದರು. 1 ಲಕ್ಷ ಬೆಲೆಯ ಪಾನ್ ​ಗೆ ರಾಯಲ್ ಲುಕ್ ನೀಡುವ ಮೂಲಕ ತಮ್ಮ ಪೂರ್ವಜರ ವ್ಯವಹಾರವನ್ನು ಮುಂದುವರೆಸಿದರು. ತಮ್ಮ ಅಂಗಡಿಗೆ ‘ದಿ ಪ್ಯಾನ್ ಸ್ಟೋರಿ’…

Read More

ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ ಎರಡು ಕಂತುಗಳಲ್ಲಿ…

Read More

ತುಮಕೂರು: ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ೬,೯೨,೫೦೮ ಪಡಿತರ ಚೀಟಿಗಳ ಪೈಕಿ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ರದ್ದುಪಡಿಸಬೇಕೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಸೂಚಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆದಾಯ ತೆರಿಗೆ ಪಾವತಿ ಮಾಡುವ, ಕುಟುಂಬದ ಆದಾಯ ೧.೨೦ ಲಕ್ಷಕ್ಕಿಂತ ಹೆಚ್ಚಿರುವ, ಸರ್ಕಾರಿ  ನೌಕರರು, ೩ ಹೆಕ್ಟೇರ್‌ ಗಿಂತ ಹೆಚ್ಚು ಭೂಮಿ ಹೊಂದಿರುವ ಪಡಿತರ ಚೀಟಿಗಳನ್ನು ರದ್ದುಪಡಿಸಲು ಹಿಂದಿನ ಸಭೆಯಲ್ಲಿ ಸೂಚಿಸಲಾಗಿದ್ದರೂ ಕೇವಲ ೯೮,೮೯೩ ಪಡಿತರ ಚೀಟಿಗಳನ್ನು ಮಾತ್ರ ರದ್ದುಪಡಿಸಲಾಗಿದೆ. ಉಳಿದ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಅವರಿಗೆ ಸೂಚನೆ ನೀಡಿದರು. ವಸತಿ ರಹಿತ ಬಡವರು, ನಿರ್ಗತಿಕ ಫಲಾನುಭವಿಗಳಿಗೆ ಬಸವ, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ, ಪ್ರಧಾನಮಂತ್ರಿ ಅವಾಸ್ ಸೇರಿ ವಿವಿಧ ವಸತಿ ಯೋಜನೆಗಳಡಿ ವಸತಿ ಕಲ್ಪಿಸಲು ೨೦೧೫ ರಿಂದ ೨೦೨೩ರವರೆಗೆ ೫೨೮೨೩ ಮನೆಗಳನ್ನು…

Read More

ತುಮಕೂರು: ಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಸೆಪ್ಟಂಬರ್ 14ರಂದು ರಾಷ್ಟ್ರೀ ಲೋಕ್ ಆದಾಲತ್ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ  ಪ್ರಕರಣಗಳನ್ನು ಕಡಿಮೆ ಮಾಡುವುದು ಮತ್ತು ಸಾರ್ವಜನಿಕರು ನ್ಯಾಯಾಲಯಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಲೋಕ್ ಆದಾಲತ್‌ಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಳೆದ ಜುಲೈ ತಿಂಗಳಲ್ಲಿ ನಡೆದ ಲೋಕ್ ಆದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಬಾಕಿ ಇದ್ದ ೯೭೭೧೯ ಪ್ರಕರಣಗಳ ಪೈಕಿ  ೧೦೨೦೩ ಪ್ರಕರಣಗಳನ್ನು ಹಾಗೂ ೧೬೬೩೨೮ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು. ಲೋಕ್ ಅದಾಲತ್‌ನಲ್ಲಿ  ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ಎಲ್ಲಾ ರೀತಿಯ…

Read More

ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರ ಗುರುವಾರ ಬೆಳಿಗ್ಗೆ 9 ಗಂಟೆಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ‘78ನೇ ಸ್ವಾತಂತ್ರ್ಯ ದಿನಾಚರಣೆ–2024’  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ಸಂಸದರಾದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ  ಅವರು ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡಿ, ಗೌರವರಕ್ಷೆ ಸ್ವೀಕರಿಸುವರು. ಸಹಕಾರ ಸಚಿವ ಕೆ.ಎನ್. ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ತುಮಕೂರು ನಗರ ವಿಧಾನಸಭಾ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ.ಕಾರಜೋಳ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್. ಮಂಜುನಾಥ್, ಶಾಸಕರಾದ ಡಾ:…

Read More