Author: admin

ತುಮಕೂರು:  ಜಿಲ್ಲಾ ಕೇಂದ್ರದಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಕುಳುವ ಸಮಾಜದ ಮುಖಂಡರ ಮನವಿ ಮೇರೆಗೆ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ರಾಜ್ಯ ಸಚಿವರು ಪಾಲ್ಗೊಳ್ಳಲಿರುವುದರಿಂದ ಆಗಸ್ಟ್ 19ರಂದು ಆಚರಿಸಬೇಕಿದ್ದ ಜಿಲ್ಲಾ ಮಟ್ಟದ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ  ಬೆಳಿಗ್ಗೆ 11:30 ಗಂಟೆಗೆ ಆಚರಿಸಲು ಅನುವು ಮಾಡಿಕೊಡಬೇಕೆಂದು  ಕುಳುವ ಸಮಾಜ ಮುಖಂಡರೆಲ್ಲ ಒಮ್ಮತದಿಂದ ಸಭೆಗೆ ಮನವಿ ಮಾಡಿದರು. ಮನವಿಗೆ ಒಪ್ಪಿಗೆ ಸೂಚಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಟೌನ್ ಹಾಲ್ ವೃತ್ತದಿಂದ ಎಂ.ಜಿ. ರಸ್ತೆ ಮಾರ್ಗವಾಗಿ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೂ ಶ್ರೀ ನುಲಿಯ ಚಂದಯ್ಯ ಅವರ  ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಬೇಕು.  ಮೆರವಣಿಗೆಯಲ್ಲಿ ಅತ್ಯುತ್ತಮ ಕಲಾ ಪ್ರದರ್ಶನ ನೀಡುವ…

Read More

ತುಮಕೂರು:  ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು ವಿದೇಶಿ ಉನ್ನತ ವ್ಯಾಸಂಗಕ್ಕಾಗಿ ನೇರ ಸಾಲದ ಯೋಜನೆಯಡಿ ಸಾಲ ಸೌಲಭ್ಯ ನೀಡಲು  ಜಿಲ್ಲೆಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗದ ವಿದ್ಯಾರ್ಥಿಗಳು   ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು 18 ರಿಂದ 38 ವರ್ಷದೊಳಗಿನವರಾಗಿದ್ದು, ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.  ಹಿಂದಿನ ವರ್ಷದಲ್ಲಿ ಕನಿಷ್ಟ ಶೇ.60 ಅಂಕ ಹಾಗೂ  ವಿದೇಶಿ ವಿಶ್ವ ವಿದ್ಯಾಲಯದಿಂದ ಆಫರ್ ಲೆಟರ್ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ. ಮೀರಿರಬಾರದು. ಈ ಸಾಲ ಸೌಲಭ್ಯ ಪಡೆಯುವ ಅರ್ಜಿದಾರರು ಸರ್ಕಾರವು ಅಂಗೀಕರಿಸಿದ ಅಲ್ಪಸಂಖ್ಯಾತ ವರ್ಗಗಳ ಪ್ರವರ್ಗ-1, 2ಬಿ, ಮತ್ತು 3ಬಿ ಗುಂಪಿಗೆ ಸೇರಿದವರಾಗಿರಬೇಕು. ಈ ಹಿಂದೆ ನಿಗಮದ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದವರಿಗೆ ಮತ್ತೊಮ್ಮೆ ಸಾಲ ಸೌಲಭ್ಯ ಪಡೆಯಲು ಅರ್ಹತೆ ಇರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಆಸ್ತಿ(ಕಟ್ಟಡ/ಜಮೀನು)ಯನ್ನು ನಿಗಮದ ಹೆಸರಿಗೆ ಅಡಮಾನ ಇಟ್ಟರೆ ಮಾತ್ರ ಸಾಲ ಸೌಲಭ್ಯ ಕಲ್ಪಿಸಲಾಗುವುದು(ಆಸ್ತಿಯ…

Read More

ತುಮಕೂರು: ವಿದ್ಯಾರ್ಥಿ ಜೀವನದಲ್ಲಿ ಯಾವುದು ಕಠಿಣವಲ್ಲ. ಶ್ರದ್ಧೆ ಮತ್ತು  ಏಕಾಗ್ರತೆ ಇದ್ದರೆ ಎಲ್ಲವೂ ಸಾಧ್ಯ. ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಲು ಕಠಿಣ ಪರಿಶ್ರಮ ಪಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಜಿಲ್ಲೆಯ ಕುಣಿಗಲ್ ತಾಲ್ಲೂಕು ಭಕ್ತರಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ(ಪ.ಜಾ)ಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಅವರು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಕಿರು ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿರುವ ಮತ್ತು ವಿಷಯ ಗ್ರಹಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಏರ್ಪಡಿಸಿ ಪಠ್ಯಾಭ್ಯಾಸ ಮಾಡಿಸಬೇಕು ಎಂದು ಶಿಕ್ಷಕರಿಗೆ ಸೂಚನೆ ನೀಡಿದರಲ್ಲದೇ, ಶಾಲೆಯ ಆಡಳಿತಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ವಹಿಸದ ಶಾಲಾ ಮುಖ್ಯಸ್ಥರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು. ನಂತರ ಭಕ್ತರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕೊತ್ತಗೆರೆ ನಾಡ ಕಚೇರಿ, ಕುಣಿಗಲ್ ಪಟ್ಟಣದ ಮಹಾತ್ಮ ಗಾಂಧಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಣಿಗಲ್ ತಾಲೂಕು ಸಾರ್ವಜನಿಕ ಆಸ್ಪತ್ರೆ ಸೇರಿದಂತೆ  …

Read More

ತುಮಕೂರು:  ಭಾರತೀಯ ಹವಾಮಾನ ಇಲಾಖೆ ವರದಿಯಂತೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಇರುವುದರಿಂದ ಭಾರರೀ ಮಳೆಯಾಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿಂದು ಸಂಜೆ ನೀಡಿದ ತುರ್ತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ ಅವರು, ಮಳೆಯಿಂದ ಯಾವುದೇ ಜನ–ಜಾನುವಾರುಗಳಿಗೆ ಜೀವ ಹಾನಿಯಾಗದಂತೆ ನದಿ/ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ/ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನದಿ/ ಹಳ್ಳ/ ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಫೋಟೋ/ ಸೆಲ್ಫಿಗಳನ್ನು ತೆಗೆಯದಂತೆ ಯುವಕ/ ಯುವತಿಯರಿಗೆ ಮತ್ತು ಸಾರ್ವಜನಿಕರಿಗೆ ತಿಳಿ ಹೇಳಬೇಕು. ಭಾರೀ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರಬೇಕು ಹಾಗೂ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಗ್ರಾಮ…

Read More

ಉತ್ತಮ ದೇಹವನ್ನು ಹೊಂದಬೇಕು ಎಂಬ ಆಸೆ ಹೆಚ್ಚಾಗಿರುತ್ತದೆ. ಅದರಲ್ಲೂ ನಮ್ಮ ನೆಚ್ಚಿನ ಸೆಲೆಬ್ರಿಟಿಗಳು ಜಿಮ್‌ಗೆ (Gym) ಹೋಗುವುದನ್ನು ನೋಡಿದಾಗ ಹಾಗೂ ಸಾಮಾಜಿಕ ಜಾಲತಾಣಗಳ ವೀಕ್ಷಣೆಗಳಿಂದ ಪ್ರೇರಿತರಾಗಿ ಅನೇಕ ಮಂದಿ ಜಿಮ್‌ಗೆ ಸೇರುತ್ತಾರೆ. ಆದರೆ ನಮ್ಮ ದೇಹವು ನಾವು ಮಾಡುವ ಎಲ್ಲಾ ಚಟುವಟಿಕೆಗಳಿಗೆ ವಯಸ್ಸಿನ ಮಿತಿಗಳನ್ನು ಹೊಂದಿರುತ್ತದೆ. ಪ್ರತಿಯೊಬ್ಬರೂ ಜಿಮ್‌ಗೆ ಹೋಗಲು ಸರಿಯಾದ ವಯಸ್ಸು ಯಾವುದು ಎಂದು ತಿಳಿದಿರಬೇಕು. ಜಿಮ್‌ಗೆ ಸೇರಲು ಸರಿಯಾದ ವಯಸ್ಸು ಒಬ್ಬರ ದೈಹಿಕ ಪ್ರಬುದ್ಧತೆ ಮತ್ತು ಅನುಭವವನ್ನು ಅವಲಂಬಿಸಿರುತ್ತದೆ ಎಂದು ಡಾ. ದಿನೇಶ್ ಕಪೂರ್ ಹೇಳುತ್ತಾರೆ. 13-15 ವರ್ಷಗಳು: 13 ರಿಂದ 15 ವರ್ಷಗಳು ಒಬ್ಬರ ಜೀವನದ ಪ್ರಮುಖ ಅವಧಿಯಾಗಿದೆ. ಈ ಅವಧಿಯಲ್ಲಿ ದೇಹವು ಪ್ರೌಢಾವಸ್ಥೆಯನ್ನು ತಲುಪಿದಾಗ, ಅದು ಅನೇಕ ದೈಹಿಕ ಬದಲಾವಣೆಗಳಿಗೆ ಒಳಗಾಗುತ್ತದೆ. ಆದ್ದರಿಂದ 13 ರಿಂದ 15 ವರ್ಷದ ಮಕ್ಕಳು ಜಿಮ್‌ನಲ್ಲಿ ಭಾರ ಎತ್ತುವ ಬದಲು ಸರಳ ವ್ಯಾಯಾಮ ಮಾಡುವ ಮೂಲಕ ದೇಹವನ್ನು ಕಾಪಾಡಿಕೊಳ್ಳುವುದು ಉತ್ತಮ. ವಯಸ್ಸು 16-18: ದೇಹವು 16 ರಿಂದ 18 ವರ್ಷಗಳನ್ನು ತಲುಪುವ ಹೊತ್ತಿಗೆ,…

Read More

ರಕ್ಷಾ ಬಂಧನದಂದು ಸಹೋದರಿ ತನ್ನ ಸಹೋದರನಿಗೆ ರಕ್ಷೆ ದಾರ ಅಥವಾ ರಾಖಿಯನ್ನ ಕಟ್ಟಿ, ಅವನ ರಕ್ಷಣೆ ಸದಾ ತನ್ನ ಮೇಲಿರಲಿ ಎಂದು ಕೋರುತ್ತಾಳೆ. ಅದಕ್ಕೆ ಪ್ರತಿಯಾಗಿ ಸಹೋದರ..ತನ್ನ ಸಹೋದರಿಗೆ ಎಂದೆಂದಿಗೂ ಜೊತೆಗೆ ಇರುವ..ರಕ್ಷಣೆ ಮಾಡುವ ಭರವಸೆಯನ್ನ ಕೊಡುತ್ತಾನೆ. ಅಂದಹಾಗೇ, ಈ ಸಲ ರಕ್ಷಾ ಬಂಧನ ಹಬ್ಬ ಯಾವಾಗ? ಇತಿಹಾಸ ಏನು? ರಕ್ಷಾ ಬಂಧನ ಹಬ್ಬವನ್ನ ಈ ಸಲ ಆಗಸ್ಟ್‌ 19, ಸೋಮವಾರ ಆಚರಣೆ ಮಾಡಲಾಗುತ್ತಿದೆ. ಶ್ರಾವಣ ಮಾಸದ ಹುಣ್ಣಿಮೆಗೆ ವಿಶೇಷ ಪ್ರಾಶಸ್ತ್ಯವಿದ್ದು, ಅತ್ಯಂತ ಶುಭ ದಿನ ಎಂದು ಪರಿಗಣಿಸಲಾಗುತ್ತದೆ. ರಕ್ಷಾ ಬಂಧನ ಹಬ್ಬ ಪ್ರಾಮುಖ್ಯತೆ ಪಡೆದಿದ್ದು ಸುಮಾರು 16ನೇ ಶತಮಾನದಲ್ಲಿಯೇ ಆದರೂ, ನಿಜವಾಗಿ ರಕ್ಷಾ ಬಂಧನ ಶುರುವಾಗಿದ್ದು ಮಹಾಭಾರತ ಕಾಲದಿಂದ ಎಂದು ಹಿಂದುಗಳು ನಂಬುತ್ತಾರೆ. ಇದನ್ನು ಪ್ರಾರಂಭಿಸಿದ್ದು ಶ್ರೀಕೃಷ್ಣ ಎನ್ನಲಾಗುತ್ತದೆ…ಈ ಚೆಂದದ ಕಥೆ ಹೀಗಿದೆ ಓದಿ.. ʼಶ್ರೀ ಕೃಷ್ಣ, ಪಾಂಡವರು ಎಲ್ಲ ಒಟ್ಟಿಗೆ ಇದ್ದ ಸಂದರ್ಭದಲ್ಲಿ ಭಗವಂತ ಶ್ರೀಕೃಷ್ಣ ಗಾಳಿಪಟ ಹಾರಿಸುತ್ತಿರುತ್ತಾನೆ . ಆಗ ಗಾಳಿಪಟಕ್ಕೆ ಕಟ್ಟಿದ ನೂಲು ಕೃಷ್ಣನ ಬೆರಳನ್ನು…

Read More

ಕನ್ನಡದಲ್ಲಿ ಬಿಗ್ ಬಾಸ್ ಸೀಸನ್ 11 ಯಾವಾಗ ಶುರುವಾಗುತ್ತೆ ಎಂದು ವೀಕ್ಷಕರು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ಇದೀಗ ಬಿಗ್ ಅಪ್ಡೇಟ್ ಒಂದು ಲೀಕ್ ಆಗಿದೆ. ಬಿಗ್ ಬಾಸ್ 10ನೇ ಸೀಸನ್ ಮುಗಿದು ವರ್ಷವಾಗುತ್ತಾ ಬಂತು ಇನ್ನೇನು ಕೆಲವೇ ತಿಂಗಳಿನಲ್ಲಿ 1 ವರ್ಷ ಪೂರೈಸಲಿದೆ. ಈ ನಡುವೆ ಬಿಗ್ ಬಾಸ್ ಸೀಸನ್ 11 ಗೆ ಭರ್ಜರಿ ತಯಾರಿ ಆರಂಭವಾಗಿದೆ. ಕನ್ನಡ ಬಿಗ್ ಬಾಸ್ ಸೀಸನ್ 11ರ ಮೊದಲ ಪ್ರೋಮೋ ಶೂಟಿಂಗ್ ಮಾಡಿ ಮುಗಿಸಲಾಗಿದ್ದು, ಬಿಡುಗಡೆಗೆ ಎದುರು ನೋಡುತ್ತಿರುವ ಕಾರಣ ಎಡಿಟಿಂಗ್ ಟೇಬಲ್ ಸೇರಿದೆಯಂತೆ. ಈ ಬಾರಿ ಪ್ರೋಮೋವನ್ನು ಹೈದರಾಬಾದ್ ನಲ್ಲಿ ಶೂಟಿಂಗ್ ಮಾಡಲಾಗಿದೆಯಂತೆ. ಎಂದಿನಂತೆ ನಟ ಕಿಚ್ಚ ಸುದೀಪ್ ಅವರು ಈ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಎಡಿಟಿಂಗ್ ಹಂತದಲ್ಲಿರುವ ಪ್ರೋಮೋ ಆಗಸ್ಟ್ ಕೊನೆಯ ವಾರ ಅಥವಾ ಸೆಪ್ಟೆಂಬರ್ 2ನೇ ವಾರದ ಒಳಗೆ ಬಿಡುಗಡೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆಯಂತೆ. ಸೆಪ್ಟೆಂಬರ್ 29ರಂದು ಬಿಗ್ ಬಾಸ್ ಸೀಸನ್ 11 ಆರಂಭಿಸಲು ತಂಡ ಮತ್ತು ಕಲರ್ಸ್ ಕನ್ನಡ…

Read More

ಬೆಂಗಳೂರು: ಅರಣ್ಯ, ಪರಿಸರ ಮತ್ತು ಜೀವಿ ಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆ ಅವರನ್ನು ಮಂಗಳವಾರ, ವಿಧಾನ ಸೌಧದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಭೇಟಿಯಾಗಿ “ಚಿಣ್ಣರ ವನ ದರ್ಶನ” ಮತ್ತು “ಸಸ್ಯಶಾಮಲ” ಕಾರ್ಯಕ್ರಮಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದರು. ಸಭೆಯ ಮುಖ್ಯ ಉದ್ದೇಶ ಈ ಕಾರ್ಯಕ್ರಮಗಳನ್ನು ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ವಿಸ್ತರಿಸುವುದಾಗಿತ್ತು. ಈ ಸಂಬಂಧ, ಆಯೋಗದ ಸದಸ್ಯರು, ಈ ಕಾರ್ಯಕ್ರಮಗಳಿಗೆ ಇರುತ್ತಿರುವ ಮಿತಿಯನ್ನು ಹೆಚ್ಚಿಸುವ ಕುರಿತು ಸಚಿವರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರ್ ಗೌಡ ರಾಮತ್ನಾಳ, ಶಶಿಧರ್ ಕೋಸಂಬೆ, ಮತ್ತು ಡಾ. ತಿಪ್ಪೇಸ್ವಾಮಿ ಕೆ.ಟಿ. ಉಪಸ್ಥಿತರಿದ್ದರು. ಸಭೆಯು ಸಕಾರಾತ್ಮಕವಾಗಿ ಮುಗಿದಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಗೆ ಈ ಕಾರ್ಯಕ್ರಮಗಳು ಹೇಗೆ ಉಪಯೋಗಿಯಾಗುತ್ತವೆ ಎಂಬ ವಿಷಯದಲ್ಲಿ ಸದರಿ ಮಂಡಳಿಯು ಆತ್ಮವಿಶ್ವಾಸ ವ್ಯಕ್ತಪಡಿಸಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಯುವತಿಯೊಬ್ಬಳು ಬೆಂಗಳೂರಿನಲ್ಲಿ ರೈಲಿಗೆ ಸಿಕ್ಕಿ ಸಾವಿಗೆ ಶರಣಾಗಿರುವ ಘಟನೆ ನಡೆದಿದೆ. ಲಿಖಿತ ಗೇಸರ್ (25) ಸಾವಿಗೆ ಶರಣಾದ ಯುವತಿಯಾಗಿದ್ದಾಳೆ. ಈಕೆ ಇತ್ತೀಚೆಗೆ ಈಕೆಯ ಅಕ್ಕ—ಭಾವನ ಜೊತೆಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ಸಮೀಪದಲ್ಲಿ ವಾಸವಾಗಿದ್ದಳು. 10 ದಿನಗಳ ಹಿಂದೆಯಷ್ಟೇ ಲಿಖಿತ ಬೆಂಗಳೂರಿಗೆ ಬಂದಿದ್ದಳು. ಇಂದು ಬೆಳಗ್ಗೆ 9 ಗಂಟೆಗೆ ಮನೆಯ ಸಮೀಪವಿರುವ ರೈಲ್ವೆ ನಿಲ್ದಾಣದ ಹಳಿ ಬಳಿ ಹೋಗಿ ರೈಲಿನಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಪ್ರೇಮವೈಫಲ್ಯದ ಹಿನ್ನೆಲೆ ಲಿಖಿತ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಳು. ಹೀಗಾಗಿ ವಾತಾವರಣ ಬದಲಾಗಲಿ ಅಂತ ಅಕ್ಕ-ಭಾವ ತಮ್ಮ ಮನೆಗೆ ಕರೆಸಿಕೊಂಡಿದ್ದರು. ಆದರೆ ಇದೀಗ ಆಕೆ ಸಾವಿನ ಮೊರೆ ಹೋಗಿದ್ದಾಳೆ ಎನ್ನುವ ಶಂಕೆ ವ್ಯಕ್ತವಾಗಿದೆ. ಯಶವಂತಪುರ ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮೃತ ದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಂಗಳೂರು: ಮೊನ್ನೆ ಸುರಿದ ಬಾರಿ ಮಳೆಗೆ ಇಡಿ ನಗರ ತತ್ತರಿಸಿ ಹೋಗಲು ಬೀದಿ ಬದಿ ಅಂಗಡಿಗಳೇ ಕಾರಣ ಎನ್ನಲಾಗಿದ್ದು, ಅತೀ ಶೀಘ್ರವೇ ಫುಟ್ ಪಾತ್ ಅಂಗಡಿಗಳ ತೆರವು ಕಾರ್ಯಾಚರಣೆಗೆ ಮುಂದಾಗಲಿದ್ದಾರೆ ಎಂದು ತಿಳಿದು ಬಂದಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಪಾದಚಾರಿ ಮಾರ್ಗಗಳಲ್ಲಿ ಅಕ್ರಮವಾಗಿ ಹಾಕಿಕೊಂಡಿರುವ ಅಂಗಡಿಗಳ ತೆರವು ಕಾರ್ಯಚರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ರಾಜಕಾಲುವೆ ನೀರು ಉಕ್ಕಿ ಹರಿಯಲು ಕಾರಣ ಎನ್ನುವುದು ಪತ್ತೆಯಾಗಿರುವುದರಿಂದ ಅವರು ಅಕ್ರಮ ಮಳಿಗೆಗಳ ತೆರವಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪುಟ್ಪಾತ್ ಅಂಗಡಿಗಳು ತಮ್ಮ ಅಂಗಡಿಯ ತ್ಯಾಜ್ಯ ಗಳನ್ನು ರಾಜಕಾಲುವೆ ಗೆ ಬೇಕಾಬಿಟ್ಟಿ ಎಸೆಯುತ್ತಿರುವುದರಿಂದ ಡ್ರೈನೇಜ್ ಬ್ಲಾಕ್ ಅಗಿದೆ. ಅದೇ ರೀತಿ ಎಳನೀರು ವ್ಯಾಪಾರಿಗಳು ಖಾಲಿ ಬುರುಡೆಗಳನ್ನೂ ಚರಂಡಿಗೆ ಎಸೆದಿರುವುದು ಕಂಡು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More