Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಕೋಲ್ಕತ್ತ: ಪಶ್ಚಿಮ ಬಂಗಾಳದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಿ ಕೋಲ್ಕತ್ತಾ ಹೈಕೋರ್ಟ್ ಆದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ವಿದ್ಯಾರ್ಥಿನಿ ಸಾವನ್ನು ಕೊಲೆ ಎಂದು ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿತ್ತು. ಇದಾದ ಬೆನ್ನಲ್ಲೇ ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಿತು. ಜತೆಗೆ ಬುಧವಾರ (ಆ. 14)ರೊಳಗಾಗಿ ಪ್ರಕರಣ ಕುರಿತ ಎಲ್ಲಾ ದಾಖಲೆಯನ್ನು ಸಿಬಿಐಗೆ ವಹಿಸುವಂತೆ ರಾಜ್ಯ ಪೊಲೀಸ್ಗೆ ಹೈಕೋರ್ಟ್ ನಿರ್ದೇಶಿಸಿದೆ. ಕೋಲ್ಕತ್ತ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ನೇತೃತ್ವದ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಘಟನೆ ನಡೆದ ನಂತರ ತಕ್ಷಣ ದೂರು ದಾಖಲಾಗದ ಕಾರಣ, ಇದೊಂದು ಅಸಹಜ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಸರ್ಕಾರ ಪರ ವಕೀಲರು ನ್ಯಾಯಾಲಯಕ್ಕೆ ಹೇಳಿದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪೀಠ, ‘ವಿದ್ಯಾರ್ಥಿನಿಯ ಮೃತ ದೇಹ ರಸ್ತೆಯಲ್ಲಿ ದೊರೆತಿಲ್ಲ. ಕಾಲೇಜಿನ ಪ್ರಾಚಾರ್ಯ ಅಥವಾ ಸೂಪರಿಂಟೆಂಡೆಂಟ್ ಅವರು ದೂರು ನೀಡಬಹುದಿತ್ತು’…
ಪಾವಗಡ: 2024 — 25 ನೇ ಸಾಲಿನ ತಾಲ್ಲೂಕಿನ ಕೋಟಗುಡ್ಡ ಸಹನಾ ಶಾಲೆಯ ವಿದ್ಯಾರ್ಥಿಗಳು ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಸಹನಾ ಶಾಲೆಯ ಆಡಳಿತಾಧಿಕಾರಿಗಳಾದ ಶ್ರೀನಿವಾಸ್ ರವರು ದೈಹಿಕ ಶಿಕ್ಷಕರಾದ ಮಲ್ಲಿಕಾರ್ಜುನ್ ಹಾಗೂ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿಜೇತ ಮಕ್ಕಳ ವಿವರ: ಪ್ರಾಥಮಿಕ ಶಾಲಾ ವಿಭಾಗದಲ್ಲಿ 100 ಮೀಟರ್ ಓಟ ಪ್ರಥಮ ಸ್ಥಾನ, 100 ಮೀಟರ್ ಓಟ ದ್ವಿತೀಯ ಸ್ಥಾನ , 200 ಮೀಟರ್ ಓಟ ಪ್ರಥಮ ಸ್ಥಾನ, 200 ಮೀಟರ್ ಓಟ ತೃತೀಯ ಸ್ಥಾನ, ಬಾಲಕರ ರಿಲೇ ಪ್ರಥಮ ಸ್ಥಾನ, ಗುಂಡು ಎಸೆತ ದ್ವಿತೀಯ ಸ್ಥಾನ, ಬಾಲಕರ ಉದ್ದ– ಜಿಗಿತ ದ್ವಿತೀಯ ಸ್ಥಾನ, ಬಾಲಕರ ಥ್ರೋಬಾಲ್ ಪ್ರಥಮ ಸ್ಥಾನ, ಬಾಲಕರ ಟೇಬಲ್ ಟೆನಿಸ್ ಪ್ರಥಮ ಸ್ಥಾನ, ಬಾಲಕರ ಬ್ಯಾಡ್ಮಿಂಟನ್ ಪ್ರಥಮ ಸ್ಥಾನ, ಬಾಲಕಿಯರ ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ , ಬಾಲಕಿಯರ…
ತುಮಕೂರು: ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತುಮಕೂರು ನಗರಸಭಾ ಹಾಗೂ ತುಮಕೂರು ನಗರಾಭಿವೃದ್ಧಿ ಮಾಜಿ ಅಧ್ಯಕ್ಷರಾದ ರೆಡ್ಡಿ ಚಿನ್ನ ಯಲ್ಲಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಮುರಳಿಧರ್ ಹಾಲಪ್ಪ, ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹ್ಮದ್, ದಿನೇಶ್ ಮುಂತಾದವರು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು : ಮದುವೆ ಹೆಸರಲ್ಲಿ ಅವಿವಾಹಿತರನ್ನೇ ಟಾರ್ಗೆಟ್ ಮಾಡ್ತಿದ್ದ ತಂಡವನ್ನು ತುಮಕೂರು ಜಿಲ್ಲೆ ಗುಬ್ಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ. ಸಂಪ್ರದಾಯದಂತೆ ಮದುವೆ ಮಾಡಿಕೊಂಡು ಹಣ–ಚಿನ್ನದೊಂದಿಗೆ ಪರಾರಿಯಾಗುತ್ತಿದ್ದರು. ತುಮಕೂರು ಸೇರಿದ್ದಂತೆ ರಾಜ್ಯದ ಹಲವು ಕಡೆ ಹಲವರನ್ನ ಯಾಮಾರಿಸಿದ್ದ ತಂಡವಾಗಿದೆ. ಏನಿದು ಪ್ರಕರಣ? ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅತ್ತಿಗಟ್ಟೆ ಗ್ರಾಮದಲ್ಲಿ ನಡೆದ ದೋಖಾ ಮದುವೆ ಇದಾಗಿದೆ. ಪಾಲಾಕ್ಷ್ಯ ಎಂಬುವರು ಮಗನಿಗೆ ಮದುವೆ ಮಾಡಲು ಹರಸಾಹಸ ನಡೆಸಿದ್ದರು. ದಯಾನಂದಮೂರ್ತಿ ಗೆ 34 ವರ್ಷ ದಾಟಿದ್ರೂ ಹೆಣ್ಣು ಸಿಗದೆ ನೊಂದಿದ್ದರು. ಅನೇಕ ಕಡೆ ಹೆಣ್ಣು ಹುಡುಕಿದ್ರೂ ಕಂಕಣ ಭಾಗ್ಯ ಕೂಡಿಬಂದಿರಲಿಲ್ಲ. ಹತ್ತಾರು ಮದುವೆ ಬ್ರೋಕರ್ ಗಳ ಮೂಲಕ ಹೆಣ್ಣು ಹುಡುಕಿಸಿದ್ದ ಪಾಲಾಕ್ಷ್ಯ, ಕುಷ್ಟಗಿ ಮೂಲದ ಬಸವರಾಜು ಮೂಲಕ ಲಕ್ಷ್ಮಿ ಎಂಬಾಕೆಯ ಪರಿಚಯವಾಗಿತ್ತು. ಮದುವೆ ಬ್ರೋಕರ್ ಕೆಲಸ ಮಾಡುತ್ತಿದ್ದ ಲಕ್ಷ್ಮಿ ಬಳಿ ಮಗನಿಗೆ ಹೆಣ್ಣು ತೋರಿಸುವಂತೆ ಪಾಲಾಕ್ಷ್ಯ ಕೇಳಿಕೊಂಡಿದ್ದರು . ಇವರ ಪರಿಸ್ಥಿತಿ ನೋಡಿ ಮೋಸ ಮಾಡುವ ತೀರ್ಮಾನ ಮಾಡಿದ ಲಕ್ಷ್ಮೀ, ಹುಬ್ಬಳ್ಳಿಯಲ್ಲಿ ಒಬ್ಬ…
ನವದೆಹಲಿ: ಪುರುಷನೊಬ್ಬ ಕಾರಿನೊಳಗೆ ಇಬ್ಬರು ಮಹಿಳೆಯರ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದು, ನಿಶಾಂತ್ ಶರ್ಮಾ (ಭಾರದ್ವಾಜ್) ಎಂಬ ಬಳಕೆದಾರ ಎಕ್ಸ್ ನಲ್ಲಿ ಈ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ–ಅಯೋಧ್ಯೆ ಎನ್ ಎಚ್ 27 ರಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರಿನಲ್ಲಿ ವ್ಯಕ್ತಿ ಇಬ್ಬರು ಮಹಿಳೆಯೊಂದಿಗೆ ಸರಸ ಸಲ್ಲಾಪದಲ್ಲಿ ನಿರತವಾಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್ ನ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯುಪಿ 33 ಎಎಲ್ 0011 ಲೈಸೆನ್ಸ್ ಬೋರ್ಡ್ ನಂಬರ್ ಅನ್ನು ಹೊಂದಿರುವ ಈ ಕಾರಿನೊಳಗೆ ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಾಹನವು ರಾಯ್ಬರೇಲಿ ಜಿಲ್ಲೆಯಲ್ಲಿ ನೋಂದಣಿಯಾಗಿದೆ ಎಂದು ಪೊಲೀಸರು ಪತ್ತೆ ಹಚ್ಚಿದ್ದು, ಸಾರ್ವಜನಿಕ ಸ್ಥಳದಲ್ಲಿ ಇಂತಹ ವರ್ತನೆ ತೋರಿದ ಹಿನ್ನೆಲೆ ಅವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು…
ಸರಗೂರು: ತಾಲೂಕು ಕೇಂದ್ರದಲ್ಲಿ ಸರ್ಕಾರದ ಎಲ್ಲಾ ಕಚೇರಿಗಳು ಕೇಂದ್ರ ಸ್ಥಾನದಲ್ಲಿ ಕಾರ್ಯನಿರ್ವಹಿಸುವಂತೆ ಕಚೇರಿಗಳನ್ನು ತೆರೆಯುವಂತೆ ಕ್ರಮ ಕೈಗೊಳ್ಳಬೇಕು. ಬಗರ್ ಹುಕುಂ ಜಮೀನಲ್ಲಿ ಕೃಷಿ ಮಾಡುತ್ತಾ ಕಳೆದ 50–60 ವರ್ಷಗಳಿಂದ ಸ್ವಾಧೀನನುಭವದಲ್ಲಿರುವ ರೈತರಿಗೆ ಅರಣ್ಯ ಹಾಗೂ ಕಂದಾಯ ಇಲಾಖಾಧಿಕಾರಿಗಳು ನೀಡುತ್ತಿರುವ ಕಿರುಕುಳ ತಪ್ಪಿಸಬೇಕು. ಕಂದಾಯ ಮತ್ತು ಅರಣ್ಯ ಜಂಟಿ ಸರ್ವೇ ನಡೆಸಿ ರೈತರಿಗೆ ಸಾಗುವಳಿ ಪತ್ರವನ್ನು ನೀಡಬೇಕು ಎಂದು ದಸಂಸ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ್ ಎಚ್ಚರಿಸಿದರು. ತಾಲ್ಲೂಕಿನ ಪಟ್ಟಣದ ದಸಂಸ (ಅಂಬೇಡ್ಕರ್ ವಾದ) ವತಿಯಿಂದ ಸೋಮವಾರದಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಕಾರರು ಜಮಾಯಿಸಿ ವಿವಿಧ ಘೋಷಣೆ ಕೂಗಿ ಸಭೆ ಕುರಿತು ಮಾತನಾಡಿದರು. ಭಾರತ ಹಳ್ಳಿಗಳ ದೇಶ ಹಳ್ಳಿ ಉದ್ದಾರ ಆಗದೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ, ಏಕೆಂದರೆ ದೇಶದ ಪ್ರತಿಯೊಬ್ಬ ಪ್ರಜೆಗಳ ಸರ್ಕಾರಿ ಮೂಲಭೂತ ಸೌಲಭ್ಯ ಮತ್ತು ಅಗತ್ಯ ವಸ್ತುಗಳ ಕೇಂದ್ರ ಸ್ಥಾನಗಳೇ ಹಳ್ಳಿಗಳು. ಪಟ್ಟಣಗಳು ಕೇವಲ ಆಡಳಿತ…
ಔರಾದ–ಬಿ ಪಟ್ಟಣದ ಎ.ಪಿ.ಎಂ.ಸಿ ಕ್ರಾಸ್ ಹತ್ತಿರ ಮೂರು ವರ್ಷದ ಮಗುವೊಂದು ತನ್ನ ಪಾಲಕರಿಂದ ಆಕಸ್ಮಿಕವಾಗಿ ದಾರಿ ತಪ್ಪಿ ಬಂದಿರುವ ಬಗ್ಗೆ ಮಾಹಿತಿಯ ಮೇರೆಗೆ ಎಸ್.ಜೆ.ಪಿ.ಯು ಘಟಕದ ಅಧಿಕಾರಿಯಾದ ವಾಶೀಂ ಪಟೇಲ್, ಪಿಎಸ್ ಐ, ಔರಾದ ಪೊಲೀಸ್ ಠಾಣೆ ಇವರು ಮಹಿಳಾ ಸಿಬ್ಬಂದಿಯೊಂದಿಗೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಮಗುವನ್ನು ತಮ್ಮ ಸುಪರ್ದಿಗೆ ಪಡೆದುಕೊಂಡು ಕೇವಲ ಒಂದು ಗಂಟೆಯೊಳಗೆ ಪೋಷಕರ ಮಡಿಲು ಸೇರಿಸಿದ್ದಾರೆ. ಮಗುವಿನ ಪಾಲಕರ ಬಗ್ಗೆ ಮಾಹಿತಿ ಪಡೆದು ಠಾಣೆಗೆ ಕರೆಸಿಕೊಳ್ಳಲಾಯಿತು. ಬಳಿಕ ಮಗು ತನ್ನ ಪಾಲಕರಿಗೆ ಗುರುತಿಸಿದ್ದರಿಂದ ಮಗುವನ್ನು ಪಾಲಕರ ಮಡಿಲಿಗೆ ಒಪ್ಪಿಸಲಾಯಿತು. ಪಾಲಕರಿಂದ ಬೇರ್ಪಟ್ಟ ಮಗುವಿನ ಪಾಲಕರಿಗೆ ಕೇವಲ ಒಂದು ಗಂಟೆಯ ಒಳಗಾಗಿ ಪತ್ತೆ ಹಚ್ಚಿ ಮರಳಿಸಿದ ಔರಾದ ಠಾಣೆಯ ಎಸ್.ಜೆ.ಪಿ.ಯು ಅಧಿಕಾರಿ ಹಾಗೂ ಸಿಬ್ಬಂದಿಯವರ ಕಾರ್ಯಕ್ಕೆ ಪ್ರದೀಪ ಗುಂಟಿ ಐ.ಪಿ.ಎಸ್, ಪೊಲೀಸ್ ವರಿಷ್ಠಾಧಿಕಾರಿಗಳು ಬೀದರ್ ಶ್ಲಾಘಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಪಾವಗಡ: ತಾಲೂಕು ವೈ.ಎನ್.ಹೊಸಕೋಟೆ ಹೋಬಳಿ ಮರಿದಾಸನ ಹಳ್ಳಿ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ಚರಂಡಿ ವ್ಯವಸ್ಥೆ ಮತ್ತು ಸಿಸಿ ರಸ್ತೆ ಇಲ್ಲದೆ ಜನರಿಗೆ ತುಂಬಾ ತೊಂದರೆಯಾಗುತ್ತಿದೆ. ಹೆಣ್ಣು ಮಕ್ಕಳು ಪಾತ್ರೆ ತೊಳೆಯುವ ನೀರು, ಬಟ್ಟೆ ಒಗೆಯುವ ನೀರು ಮತ್ತು ಬಚ್ಚಲು ನೀರು ಮುಖ್ಯರಸ್ತೆಯಲ್ಲಿ ನಿಂತು ದುರ್ವಾಸನೆ ಬೀರುತ್ತಿದ್ದು, ಗ್ರಾಮದ ವೃದ್ಧರು ಮಕ್ಕಳು ಜನಸಾಮಾನ್ಯರು ಓಡಾಡಲು ತುಂಬಾ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ವಕೀಲರು ಹಾಗೂ ಭಾರತೀಯ ಪರಿವರ್ತನ ಸಂಘ(ಬಿಪಿಎಸ್) ದ ರಾಜ್ಯಾಧ್ಯಕ್ಷರು ಆದ ಹರಿರಾಮ್ ಎ. ಹಾಗೂ ಕನ್ನಡ ಮತ್ತು ತೆಲುಗು ಚಲನಚಿತ್ರ ನಾಯಕ ನಟ ಹಾಗೂ ಸಾಮಾಜಿಕ ಹೋರಾಟಗಾರರಾದ ಚೇತನ್ ಅಹಿಂಸರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಪ್ರದೇಶದಲ್ಲಿ ಸೊಳ್ಳೆಗಳ ಕಾಟ ಜಾಸ್ತಿಯಾಗಿದ್ದು ಡೆಂಗ್ಯೂ ಮಲೇರಿಯಾ ಕಾಯಿಲೆಗಳು ಇತ್ತೀಚಿಗೆ ಹೆಚ್ಚಾಗಿದ್ದು, ಅದನ್ನು ತಡೆಗಟ್ಟಲು ಮರಿದಾಸನಹಳ್ಳಿ ಗ್ರಾಮದ ಜನರು ನೆಮ್ಮದಿ ಜೀವನ ಹಾಗೂ ಸುಸಜ್ಜಿತ ಆರೋಗ್ಯ ಕಾಪಾಡಿಕೊಳ್ಳಲು ಆದಷ್ಟು ಬೇಗ ಜನತಾ ಕಾಲೋನಿಯ ಮೂರು ವಠಾರಗಳಲ್ಲಿ ಚರಂಡಿ ವ್ಯವಸ್ಥೆ ಹಾಗೂ…
ಪಾವಗಡ: ಕಾಡುಪ್ರಾಣಿಗಳು ರೈತರ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ. ಆದ್ದರಿಂದ ಸರ್ಕಾರವು ತಕ್ಷಣ ರೈತರ ನೆರವಿಗೆ ಬಂದು ಬೆಳೆ ನಷ್ಟ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಪೂಜಾರಪ್ಪ ನೇತೃತ್ವದಲ್ಲಿ ಪ್ರತಿಭಟಿಸಿ ನಂತರ ತಾಲ್ಲೂಕು ಕಚೇರಿಯ ಗ್ರೇಟ್-2 ತಹಶೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಪತ್ರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಪೂಜಾರಪ್ಪ, ತಾಲ್ಲೂಕಿನ ಕಸಬಾ ಹೋಬಳಿಯ ಗುಂಡಾರ್ಸಹಳ್ಳಿ ಗ್ರಾಮದ ಸರ್ವೆ ನಂಬರಿನ 105ರಲ್ಲಿ ಒಟ್ಟು 5 ಎಕರೆ ಜಮೀನಿನಲ್ಲಿ ಶೇಂಗಾ ಬೆಳೆಯನ್ನು ಬೆಳೆಯಲಾಗಿದ್ದು ಇದರಲ್ಲಿ ಎಕರೆಗಿಂತ ಹೆಚ್ಚು ಜಮೀನಿನಲ್ಲಿ ಬೆಳೆದ ಶೇಂಗಾ ಬೆಳೆಯನ್ನು ಜಿಂಕೆ, ಕಾಡು ಹಂದಿ ಆಗ ನವಿಲುಗಳು ಪ್ರತಿದಿನ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇನ್ನು ಈ ಬಗ್ಗೆ ಕೃಷಿ, ಮತ್ತು ತೋಟಗಾರಿಕೆ ಅಧಿಕಾರಿಗಳಿಗೆ ತಿಳಿಸಿದರೆ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎನ್ನುತ್ತಿದ್ದಾರೆ. ಅರಣ್ಯ ಇಲಾಖೆ…
ತುಮಕೂರು: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಕೆಲವು ತಪ್ಪು ಮಾಹಿತಿಗಳನ್ನು ಕೊಟ್ಟಿರುವುದು ಗಮನಕ್ಕೆ ಬಂದಿರುತ್ತದೆ. ಇನ್ನುಮುಂದೆ ಈ ರೀತಿಯಾದರೆ ಸಹಿಸುವುದಿಲ್ಲ. ಸಭೆಗೆ ಬರುವ ಮುನ್ನ ಇಲಾಖೆಯ ತಯಾರಿ ಮಾಡಿಕೊಂಡು ಬರಬೇಕು. ಸಭೆಯಲ್ಲಿ ಸರಿಯಾದ ಉತ್ತರ ನೀಡದಿದ್ದಲ್ಲಿ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಜವಾಬ್ಧಾರಿಯಿಂದ ಬರಬೇಕು ಎಂದು ಗೃಹ ಸಚಿವ ಪರಮೇಶ್ವರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2024–25ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಬಳಿಕ ಅಧಿಕಾರಿಗಳಿಗೆ ಕೆಲ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಭೆಯಲ್ಲಿ ಚರ್ಚಿಸಲಾದ ಅಂಶಗಳನ್ನು ಬರೆದುಕೊಳ್ಳದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ಗಂಭೀರವಾಗಿ ಪರಿಗಣಿಸದಿದ್ದರೆ ಕಷ್ಟವಾಗುತ್ತದೆ. ಆಡಳಿತ ಚುರುಕಾಗಬೇಕು. ಚುನಾವಣೆ ಎಲ್ಲ ಮುಗಿದಿವೆ. ಜನರ ಕೆಲಸ ಮಾಡದಿದ್ದರೆ ಇನ್ನು ಏನು ಮಾಡುತ್ತೀರಿ ಇಂದು ಆಕ್ರೋಶ ವ್ಯಕ್ತಪಡಿಸಿದರು. ಕಟ್ಟುನಿಟ್ಟಾಗಿ ತೆರಿಗೆ ಸಂಗ್ರಹ ಮಾಡಬೇಕು. ಗುಣಮಟ್ಟದ ಶಿಕ್ಷಣ ಬಹಳ ಮುಖ್ಯ. ಶಿಕ್ಷಕರು ಸರಿಯಾಗಿ ಶಾಲೆಗಳಿಗೆ ಬರುವುದಿಲ್ಲ, ಪಾಠವನ್ನು ಮಾಡುವುದಿಲ್ಲ. ಡಿಡಿಪಿಐ ಮತ್ತು ಬಿಇಒ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು…