Author: admin

ತುಮಕೂರು: ಬಾಂಗ್ಲಾದೇಶದಲ್ಲಿ ಪ್ರಸ್ತುತ ಆರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿರುವ ಹಿಂದುಗಳ ಮೇಲೆ ಭಾರೀ ದೌರ್ಜನ್ಯ ನಡೆಯುತ್ತಿದೆ ಇದನ್ನು ತಪ್ಪಿಸಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ಸಮಿತಿ ಕಾರ್ಯಕರ್ತರು ಬಾಂಗ್ಲಾದೇಶದಲ್ಲಿರುವ ಹಿಂದುಗಳ ವ್ಯಾಪಾರ ವಹಿವಾಟು ಮನೆಗಳು ಆಗುವ ಆಸ್ತಿಪಾಸ್ತಿಯ ಮೇಲೆ ದಾಳಿ ನಡೆಯುತ್ತಿದ್ದು, ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಇದನ್ನು ತಡೆಗಟ್ಟುವ ನೈಟಿನಲ್ಲಿ ಹಾಗೂ ಅವರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಮನಹರಿಸಬೇಕೆಂದು ಒತ್ತಾಯಿಸಿದರು. ಮುಸ್ಲಿಂ ಫಂಡಮೆಂಟಲ್ ಗಳು ಅಶಾಂತಿಯಾವ ಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ. ಅದೇ ರೀತಿ ಬಾಂಗ್ಲಾದೇಶದಲ್ಲಿಯೂ ಕೂಡ ನಡೆಯುತ್ತಿದೆ ಎಂದು ಶಾಸಕ ಜ್ಯೋತಿ ಗಣೇಶ್ ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಿದ್ದಾರೆ ಎಂದು ಹೇಳಿದರು. ಏನೋ ಭಾರತದಲ್ಲಿರುವ ಬುದ್ಧಿಜೀವಿಗಳು ಯಾಕೆ ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಹಿಂದುಗಳ ರಕ್ಷಣೆ ಕುರಿತು ಮಾತನಾಡುತ್ತಿಲ್ಲ ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಮಗನ ಮದುವೆ ಸಂಭ್ರಮದಲ್ಲಿರುವ ತರುಣ್‌ ಸುಧೀರ್‌ ತಾಯಿ ಮಾಲತಿ ಸುಧೀರ್‌ ತಮ್ಮ ಬಹು ದಿನದ ಕನಸು ನನಸಾದ ಬಗ್ಗೆ ಮಾತನಾಡಿದ್ದಾರೆ. ‘ನನ್ನ ಮಗ ಇಷ್ಟು ಚೆನ್ನಾಗಿದ್ದಾನೆ, ಇಷ್ಟು ಸುಂದರವಾಗಿದ್ದಾನೆ. ಇಷ್ಟು ಕ್ರಿಯೆಟಿವ್ ಆಗಿದ್ದಾನೆ. ಅವನಿಗೆ ಯಾಕೆ ಕಂಕಣ ಬಲ ಕೂಡಿ ಬಂದಿಲ್ಲ. ಅವನಿಗೆ ಯಾಕೆ ಯಾರೂ ಇಷ್ಟವಾಗುತ್ತಿಲ್ಲ. ಇವನು ಯಾಕೆ ಮದುವೆ ಎನ್ನುವ ಬಂಧನಕ್ಕೆ ಹೋಗುತ್ತಿಲ್ಲ ಎನ್ನುವ ನೋವಿತ್ತು. ಹೀಗೆ ಇದ್ದು ಬಿಡ್ತಾನೋ ಅಂತಾ ಭಯ ಇತ್ತು. ಏನಪ್ಪಾ ಮೋದಿಯಾಗಿ ಬಿಡ್ತಿಯಾ ಅಂತಾ ನಾನೇ ಕೇಳುತ್ತಿದ್ದೆ. ಆದರೆ ಈಗ ಮದುವೆಯಾಗುತ್ತಿದ್ದಾನೆ. ಇದು ಬಹಳ ಸಂತೋಷ. ಬಹಳ ಹೆಮ್ಮೆ ಎಂದರು. ತಮ್ಮ ಸೊಸೆ ಸೋನಲ್ ಮೊಂಥೆರೋ ಬಗ್ಗೆ ಮಾತನಾಡಿದ ಅವರು, ಸೊಸೆ ಅಷ್ಟೊಂದು ಕ್ಲೋಸ್‌ ಆಗಿಲ್ಲ. ನಾರ್ಮಲ್‌ ಆಗಿ ಆಕೆ ಜೊತೆಗೆ ಮಾತನಾಡುತ್ತೇನೆ ಬಿಟ್ಟರೆ ಬೇರೆ ಏನನ್ನೂ ಇನ್ನೂ ಮಾತನಾಡಿಲ್ಲ. ಒಂದು ಎರಡು ಮೂರು ತಿಂಗಳ ಹಿಂದೆ ನನಗೆ ಗೊತ್ತಾಯ್ತು ಅಷ್ಟೇ. ಇವರು ಮದುವೆಯಾಗುತ್ತಾರೆ ಎಂದು, ಅವರ ಆತ್ಮೀಯ ಸ್ನೇಹಿತರೊಬ್ಬರಿಂದ ಈ ವಿಷಯ…

Read More

ಮೆಟ್ರೋ ಮಾರ್ಗವನ್ನ ವಿಸ್ತರಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇದೀಗ ನಮ್ಮ ಮೆಟ್ರೋದ ಹಸಿರು ಮಾರ್ಗವನ್ನ ನಾಗಸಂದ್ರದಿಂದ ತುಮಕೂರು ರಸ್ತೆಯ ಮಾದಾವರ (BIEC) ದವರೆಗೆ ವಿಸ್ತರಿಸಿ, ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲು ಸಿದ್ಧತೆ ನಡೆದಿದೆ. ಈ ಮಾರ್ಗದಲ್ಲಿ ಮೆಟ್ರೋ ವಾಣಿಜ್ಯಾತ್ಮಕ ಕಾರ್ಯಾಚರಣೆ ಅಕ್ಟೋಬರ್‌ನಿಂದ ಪ್ರಾರಂಭವಾಗುವ ನಿರೀಕ್ಷೆ ಇದೆ. ಮೆಟ್ರೋ ಹಸಿರು ಮಾರ್ಗವನ್ನ ಮಾದಾವರದವರೆಗೆ ವಿಸ್ತರಣೆ ಮಾಡುತ್ತಿರುವ ಬಗ್ಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ (BMRCL)ನ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್‌ ರಾವ್‌ ದೃಢಪಡಿಸಿದ್ದಾರೆ. ಸದ್ಯ ಮೆಟ್ರೋದ 2ನೇ ಹಂತದ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಅದರ ಭಾಗವಾಗಿ ನಾಗಸಂದ್ರದಿಂದ ಮಾದಾವರದವರೆಗೆ 3 ಕಿಮೀ ವಿಸ್ತರಣೆ ಮಾಡಲಾಗುತ್ತಿದೆ.. ಹಸಿರು ಮಾರ್ಗವನ್ನ ವಿಸ್ತರಣೆ ಮಾಡಿದಾಗ ಹೊಸ ಮೂರು ಮೆಟ್ರೋ ಸ್ಟೇಷನ್‌ಗಳು ಸೇರ್ಪಡೆಯಾಗುತ್ತವೆ. ಮಂಜುನಾಥನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರಗಳಲ್ಲಿ ಮೆಟ್ರೋ ಸ್ಟೇಷನ್‌ಗಳು ಇರಲಿವೆ. ಮಾರ್ಗ ವಿಸ್ತರಣೆ, ಸ್ಟೇಷನ್‌ಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕ, ಮೆಟ್ರೋ ರೈಲ್ವೆ ಸೇಫ್ಟಿ ಆಯುಕ್ತರಿಂದ ಸುರಕ್ಷತೆಯ ಬಗ್ಗೆ ಸಮಗ್ರ ಪರಿಶೀಲನೆ ನಡೆಯಲಿದೆ. ಅವರಿಂದ ಒಪ್ಪಿಗೆ ಸಿಕ್ಕ…

Read More

ಕರ್ನಾಟಕ ರಾಜ್ಯದಲ್ಲಿಂದ ನೆರೆಯ ಗೋವಾ ರಾಜ್ಯಕ್ಕೆ ರೈಲು ಸಂಚಾರ ಕಲ್ಪಿಸುವ ಮಾರ್ಗದಲ್ಲಿ ಗೂಡ್ಸ್ ರೈಲು ದೂಧ್ ಸಾಗರ ಬಳಿ ಹಳಿ ತಪ್ಪಿದೆ. ರೈಲು ಹಳಿಯಿಂದ ಗೂಡ್ಸ್ ರೈಲು ತೆರವು ಕಾರ್ಯಾಚರಣೆ ಕಾರ್ಯ ಮುಂದುವರೆದಿದ್ದು, ಇಂದು ಕೂಡ ಕರ್ನಾಟಕ – ಗೋವಾ ರೈಲು ಸಂಚಾರ ಇರುವುದಿಲ್ಲ ಎಂದು ನೈರುತ್ಯ ಇಲಾಖೆ ತಿಳಿಸಿದೆ. ಧೂದ್ ಸಾಗರ್ ಬಳಿ ಗೂಡ್ಸ್ ರೈಲು ಹಳಿ ತಪ್ಪಿದ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ದಿನಗಳಿಂದ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕರ್ನಾಟಕ ಮತ್ತು ಗೋವಾ ನಡುವಿನ ಎಲ್ಲ ರೈಲುಗಳ ಸಂಚಾರ ಬಂದ್ ಆಗಿತ್ತು. ಇಂದು ಶಾಲಿಮಾರ್ – ವಾಸ್ಕೋ ಡ ಗಾಮಾ ರೈಲು ಹುಬ್ಬಳ್ಳಿಯಲ್ಲಿ ನಿಲುಗಡೆಯಾಗಿದ್ದು, ಹುಬ್ಬಳ್ಳಿಯಿಂದ ರೈಲು ಪ್ರಯಾಣಿಕರಿಗೆ ಪರ್ಯಾಯವಾಗಿ ಬಸ್ಸಿನಲ್ಲಿ ಹೋಗುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 1,200 ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ವಾಯುವ್ಯ ರಸ್ತೆ ಸಾರಿಗೆ ನಿಗಮದ ಹುಬ್ಬಳ್ಳಿ ಗ್ರಾಮಾಂತರ ವಿಭಾಗದ 25 ಬಸ್‌ಗಳನ್ನು ವಿಶೇಷ ವ್ಯವಸ್ಥೆಯ ಮೂಲಕ ರೈಲು ಪ್ರಯಾಣಿಕರನ್ನು…

Read More

ಸಾನಿಯಾ ಮಿರ್ಜಾ ಪಾಕಿಸ್ತಾನದ ಕ್ರಿಕೆಟಿಗ ಶೋಯಿಬ್ ಮಲಿಕ್‌ ನಿಂದ ವಿಚ್ಛೇದನ ಪಡೆದಿದ್ದು, ದುಬೈನಲ್ಲಿ ತಮ್ಮ ಮಗನೊಂದಿಗೆ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಾರೆ. ಸಾನಿಯಾ ಮಿರ್ಜಾ ಯಾವಾಗ ಎರಡನೇ ಮದುವೆ ಮಾಡಿಕೊಳ್ಳುತ್ತಾರೆ ಎಂಬ ಚರ್ಚೆ ಆಗಾಗ ನಡೆಯುತ್ತಲೇ ಇರುತ್ತದೆ. ಇತ್ತೀಚೆಗಷ್ಟೇ ಸಾನಿಯಾ ಅವರು ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ ಅವರನ್ನು ವರಿಸುತ್ತಾರೆ ಎಂದು ಸುದ್ದಿಯಾಗಿತ್ತು. ಶಮಿ ಕೂಡ ತಮ್ಮ ಪತ್ನಿಗೆ ವಿಚ್ಛೇದನಾ ನೀಡಿದ್ದಾರೆ. ಇಬ್ಬರು ಒಂದೇ ಧರ್ಮದವರಾಗಿರುವುದರಿಂದ ಮದುವೆ ಆಗುತ್ತಾರೆ ಎಂಬ ಸುದ್ದಿ ಇತ್ತು. ಆದರೆ, ಇದು ಕೇವಲ ವದಂತಿಯಷ್ಟೇ ಎಂದು ಇಬ್ಬರು ತಾರೆಯರು ಸ್ಪಷ್ಟನೆ ನೀಡಿದ್ದಾರೆ. ಮದುವೆಯ ವದಂತಿ ನಡುವೆಯೇ ಸಾನಿಯಾ ಮಿರ್ಜಾ ಅವರ ಮಹತ್ವದ ಘೋಷಣೆ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ತಮ್ಮ ಇನ್ ​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಸಾನಿಯಾ ಅವರು ಟೆನ್ನಿಸ್ ತರಬೇತಿಯ ಬಗ್ಗೆ ಚರ್ಚಿಸಿದ್ದಾರೆ. ಸಾನಿಯಾ ಮಿರ್ಜಾ ಟೆನಿಸ್ ಅಕಾಡೆಮಿಯನ್ನು 2013ರ ಮಾರ್ಚ್ ತಿಂಗಳಲ್ಲಿ ಭಾರತೀಯ ಟೆನ್ನಿಸ್ ಆಟಗಾರರಿಗೆ ಉನ್ನತ ದರ್ಜೆಯ ಟೆನ್ನಿಸ್​ ತರಬೇತಿ ನೀಡುವ…

Read More

ತುಮಕೂರು: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ೨೦೨೪-೨೫ನೇ ಸಾಲಿಗೆ ವಿವಿಧ ಯೋಜನೆಗಳಡಿ ಸೇವಾಸಿಂಧು ತಂತ್ರಾಂಶದ ಮೂಲಕ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ, ಗಂಗಾಕಲ್ಯಾಣ, ಅರಿವು–ಶೈಕ್ಷಣಿಕ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)ಗಳಡಿ ಸಾಲ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ತುಮಕೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.kssd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೩೨, ೮೦೫೦೭೭೦೦೦೪, ೮೦೫೦೭೭೦೦೦೫ ಅಥವಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ ೦೮೧೬-೨೦೦೫೦೦೮ನ್ನು ಸಂಪರ್ಕಿಸಬೇಕೆಂದು ನಿಗಮದ ಪಡೆದುಕೊಳ್ಳಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಿರಿಯನಾಗರಿಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ, ಹಿರಿಯನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಹಿರಿಯನಾಗರಿಕರಿಗೆ ೬ ವೈಯಕ್ತಿಕ ಹಾಗೂ ಹಿರಿಯನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ೧ ಸಂಸ್ಥೆ ಸೇರಿ ಒಟ್ಟು ೭ ಪ್ರಶಸ್ತಿಗಳನ್ನು ನೀಡಲಾಗುವುದು. ಆಸಕ್ತ ಹಿರಿಯ ನಾಗರಿಕರು/ಸಂಸ್ಥೆಗಳು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಎಂ.ಜಿ.ರಸ್ತೆ, ತುಮಕೂರು ಇವರಿಂದ ಅರ್ಜಿ ಪಡೆದು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ ೩೧ರೊಳಗಾಗಿ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಇಲಾಖೆಯ ಜಿಲ್ಲಾ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂ.ವಾ. ಸಂಖ್ಯೆ: ೦೮೧೬-೨೨೭೦೦೨೯ನ್ನು ಸಂಪರ್ಕಿಸಿ ಪಡೆಯಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಚಿದಾನಂದ ಮೂರ್ತಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಷನ್, ವಿ.ಎಂ.ಏ.ಪಿ.ಎಸ್. ಟೆಕ್ ಇಂಡಿಯಾ ಪ್ರೈ.ಲಿ. ಹಾಗೂ ಕರ್ನ್-ಲೀರ‍್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗಾರ್ಥಿಗಳಿಗಾಗಿ ಆಗಸ್ಟ್ 13ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. ಐ.ಟಿ.ಐ, ಡಿಪ್ಲೊಮಾ, ಯಾವುದೇ ಪದವಿ, ಎಂಎಸ್ಸಿ, ಬಿಎಡ್. ಹಾಗೂ ಎಂಕಾಂ. ಪಾಸಾದ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂಖ್ಯೆ ೦೮೧೬-೨೨೭೮೪೮೮, ೯೦೭೧೦೨೧೧೪೩ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಗೆ ವಿವಿಧ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ ಅರ್ಹರಿಗೆ ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಫಾರಂಗೇಟ್ ಘಟಕ, ಕಡಿಮೆ ವೆಚ್ಚದಲ್ಲಿ ಹಣ್ಣು ಮಾಗಿಸುವ ಘಟಕ ನಿರ್ಮಾಣಕ್ಕೆ ಸಹಾಯಧನ ಕಲ್ಪಿಸಲಾಗುವುದು. ನೀರಿನಲ್ಲಿ ಕರಗುವ ರಸಗೊಬ್ಬರ ಘಟಕ, ಲಘು ಪೋಷಕಾಂಶಗಳ ಮಿಶ್ರಣ ಘಟಕ, ಹವಾಮಾನ ಆಧಾರಿತ ಘಟಕ, ಸೋಲಾರ್ ಪಂಪ್‌ಸೆಟ್, ಬೆಳೆ/ಹಣ್ಣು/ಹೂ ಹೊದಿಕೆ ಮತ್ತು ಮೋಹಕ/ಚಿಗುಟಾದ ಬಲೆಗಳ ಸೌಲಭ್ಯಕ್ಕಾಗಿ ಆರ್ಥಿಕ ನೆರವು ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಪಹಣಿ, ಆಧಾರ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ತಾಲ್ಲೂಕು ಹಿರಿಯ ಸಹಾಯಕ ನಿರ್ದೇಶಕ ಕಚೇರಿ ಅಥವಾ ಗ್ರಾಮ ಪಂಚಾಯತಿ ಕಚೇರಿಗಳಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತುಮಕೂರು: ೦೮೧೬-೨೨೭೯೭೦೫, ಗುಬ್ಬಿ: ೦೮೧೩೧-೨೨೨೬೫೯, ಶಿರಾ: ೦೮೧೩೫-೨೭೬೩೧೦, ಕುಣಿಗಲ್: ೦೮೧೩೨-೨೨೧೯೮೧, ತಿಪಟೂರು: ೦೮೧೩೪-೨೫೧೪೨೪, ಚಿಕ್ಕನಾಯಕನಹಳ್ಳಿ: ೦೮೧೩೩-೨೬೭೪೫೭, ಮಧುಗಿರಿ: ೦೮೧೩೭-೨೮೨೪೧೭, ತುರುವೇಕೆರೆ: ೦೮೧೩೯-೨೮೮೩೫೦, ಕೊರಟಗೆರೆ: ೦೮೧೩೮-೨೩೨೯೨೦, ಪಾವಗಡ-೦೮೧೩೬-೨೪೪೦೬೪ನ್ನು ಸಂಪರ್ಕಿಸಬಹುದೆAದು ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ…

Read More

ತುಮಕೂರು: ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 15ರಂದು ಜಿಲ್ಲಾ ಮಟ್ಟದ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ತಿಳಿಸಿದರು. ಉಪವಿಭಾಗಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆ ವತಿಯಿಂದ ಟೌನ್ ಹಾಲ್, ಚರ್ಚ್ ಸರ್ಕಲ್, ಭದ್ರಮ್ಮ ವೃತ್ತ, ಶಿವಕುಮಾರ ಸ್ವಾಮೀಜಿ ವೃತ್ತ ಸೇರಿ ನಗರ ಪ್ರಮುಖ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕೆಂದು ಪಾಲಿಕೆಗೆ ಜವಾಬ್ದಾರಿವಹಿಸಿದರು. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಂದು ಸಂಜೆ 4:30 ಗಂಟೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುರೇಶ್ ಸಭೆಗೆ ಮಾಹಿತಿ ತಿಳಿಸಿದರಲ್ಲದೆ, ಪ್ರೌಢಶಾಲಾ ವಿದ್ಯಾರ್ಥಿಗಳಿಂದ 9 ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ 3 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು. ತೋಟಗಾರಿಕೆ ಇಲಾಖೆಯಿಂದ ಕ್ರೀಡಾಂಗಣದಲ್ಲಿ ಕಾರ್ಯಕ್ರಮದ ವೇದಿಕೆ ಮುಂಭಾಗ ಹೂವಿನ ಕುಂಡ ಹಾಗೂ ಅಲಂಕಾರಿಕ ಗಿಡಗಳ ವ್ಯವಸ್ಥೆ ಮಾಡಲು ಸೂಚನೆ…

Read More