Subscribe to Updates
Get the latest creative news from FooBar about art, design and business.
- ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
- ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
- ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
- ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
- ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
- ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
- ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
- ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
Author: admin
ವಾಷಿಂಗ್ಟನ್: ಭಾರತದ ರಾಜಕಾರಣದಲ್ಲಿ ಪ್ರೀತಿ, ಗೌರವ ಮತ್ತು ನಮ್ರತೆ ಕಾಣೆಯಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಟೆಕ್ಸಾಸ್ನಲ್ಲಿ ಇಂಡೊ-ಅಮೆರಿಕನ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಆರ್ಎಸ್ಎಸ್ ಭಾರತದ ಬಗ್ಗೆ ಏಕ ಪರಿಕಲ್ಪನೆ ಹೊಂದಿದೆ. ನಾವು ಬಹುವಿಧದ ವಿಚಾರಗಳ ಬಗ್ಗೆ ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು. ಬಹುತೇಕ ಅಮೆರಿಕದಂತೆಯೇ ಪ್ರತಿಯೊಬ್ಬರಿಗೂ ಸ್ಪರ್ಧೆಗೆ ಅವಕಾಶ ಸಿಗಬೇಕೆಂದು ನಾವು ನಂಬಿದ್ದೇವೆ. ಪ್ರತಿಯೊಬ್ಬರಿಗೂ ಕನಸು ಕಾಣಲು ಅವಕಾಶ ಕೊಡಬೇಕು. ಜಾತಿ, ಭಾಷೆ, ಧರ್ಮ, ಸಂಪ್ರದಾಯ ಮತ್ತು ಇತಿಹಾಸಗಳನ್ನು ಪರಿಗಣಿಸದೆ ಪ್ರತಿಯೊಬ್ಬರಿಗೂ ಅವಕಾಶ ನೀಡಬೇಕು ಎನ್ನುವುದರ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಅವರು ಹೇಳಿದರು. ಭಾರತದ ಪ್ರಧಾನಿ, ಸಂವಿಧಾನದ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂಬುದು ಜನರಿಗೆ ಅರ್ಥವಾಗಿದ್ದು, ಚುನಾವಣೆಯಲ್ಲಿ ಅದು ಬಹಿರಂಗವಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ಹಿರಿಯ ಪತ್ರಕರ್ತ, ವಸಂತ ನಾಡಿಗೇರ ಅವರು ಸೋಮವಾರ ಮುಂಜಾನೆ 3.15ರ ಸುಮಾರಿಗೆ ಹೃದಯಾಘಾತದಿಂದ ವಿಧಿವಶವಾಗಿದ್ದಾರೆ. ಸುಮಾರು ಮೂರು ದಶಕಕ್ಕೂ ಹೆಚ್ಚಿನ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದ ವಸಂತ ನಾಡಿಗೇರ ಅವರು, ಹಾವೇರಿ ಜಿಲ್ಲೆ ರಾಣೆಬೆನ್ನೂರಿನವರಾಗಿದ್ದಾರೆ. ವಸಂತ ನಾಡಿಗೇರ ಅವರು ರಸಾಯನ ಶಾಸ್ತ್ರದಲ್ಲಿ ಪದವಿ ಪಡೆದರಾದರೂ ಪತ್ರಿಕೋದ್ಯಮ ಸೆಳೆದಿತ್ತು. ಸಂಯುಕ್ತ ಕರ್ನಾಟಕದಲ್ಲಿ ವೃತ್ತಿ ಜೀವನ ಆರಂಭಿಸಿದ್ದ, ಅವರು ಪತ್ನಿ, ಪುತ್ರ, ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ವಿಜಯ ಕರ್ನಾಟಕ, ವಿಶ್ವವಾಣಿ ದಿನಪತ್ರಿಕೆಗಳಲ್ಲಿ ಕೆಲಸ ಮಾಡಿದ್ದ ಅವರು, ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬಳ್ಳಾರಿ: ಜೈಲಿನಲ್ಲಿ ನಟ ದರ್ಶನ್ ಟಿವಿ, ಸರ್ಜಿಕಲ್ ಚೇರ್ ಮತ್ತು ವೆಸ್ಟರ್ನ್ ಟಾಯ್ಲೆಟ್ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿದ ಬಳಿಕ ಇದೀಗ ಮತ್ತೊಂದು ಬೇಡಿಕೆಯಿಟ್ಟಿದ್ದಾರಂತೆ. ಜೈಲಿನಲ್ಲಿರುವ ದರ್ಶನ್ ಗೆ ಫಿಟ್ ನೆಸ್ ಕಾಯ್ದುಕೊಳ್ಳುವುದೇ ದೊಡ್ಡ ಚಿಂತೆಯಾಗಿದೆಯಂತೆ. ಹೀಗಾಗಿ ಅನ್ನಕ್ಕೆ ಬ್ರೇಕ್ ಹಾಕಿರುವ ದರ್ಶನ್, ಚಪಾತಿ, ಮುದ್ದೆ ಮತ್ತು ವಿಟಮಿನ್ಸ್ ಮಾತ್ರೆಗಳ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿ ನೀಡುತ್ತಿರುವ ಚಪಾತಿ ದರ್ಶನ್ ಗೆ ಸಾಕಾಗುತ್ತಿಲ್ಲ. ಹೀಗಾಗಿ ಹೆಚ್ಚಿನ ಚಪಾತಿ ನೀಡುವಂತೆ ಅಧಿಕಾರಿಗಳ ಬಳಿ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ. ಆದರೆ, ಜೈಲಿನ ಆಹಾರ ಮೆನು ಪ್ರಕಾರ ಪ್ರತಿ ಕೈದಿಗೆ ಇಂತಿಷ್ಟೇ ಆಹಾರ ನೀಡಬೇಕೆಂಬ ನಿಯಮವಿದೆ. ಆದರೆ, ಅದನ್ನು ಮೀರಿ ದರ್ಶನ್ ಹೆಚ್ಚಿನ ಚಪಾತಿಗೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಪರಿಶೀಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಹೇಳಲಾಗಿದೆ. ದೇಹದ ಫಿಟ್ ನೆಸ್ ನಿರ್ವಹಣೆ ಮಾಡಬೇಕಾಗುತ್ತದೆ. ಹೀಗಾಗಿ ಹೆಚ್ಚಿನ ಚಪಾತಿ ನೀಡಿ ಎಂದು ದರ್ಶನ್ ಮನವಿ ಮಾಡಿದ್ದಾರೆ. ದೇಹದ ತೂಕ ಕಳೆದುಕೊಳ್ಳುವ ಭಯ ದರ್ಶನ್ ಅವರಲ್ಲಿ ಕಾಡುತ್ತಿದೆ.…
ಮುಧೋಳ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಹಿನ್ನೆಲೆ ನಾಲ್ವರ ವಿರುದ್ದ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸುನೀಲ ಜಾನಪ್ಪಗೋಳ(23), ಮಂಜುನಾಥ ಮ್ಯಾಗೇರಿ(32), ಸಚೀನ ಮ್ಯಾಗೇರಿ (24), ರವಿಚಂದ್ರ ತಳಗೇರಿ (23) ಎಂಬ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ತಾಲೂಕಿನ ಗ್ರಾಮವೊಂದರ ಬಾಲಕಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಯಾಗಿದ್ದು, ಬಾಲಕಿ ಶೌಚಕ್ಕೆ ತೆರಳಿದ್ದ ವೇಳೆ ಆರೋಪಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ನೊಂದ ಬಾಲಕಿಯನ್ನು ಪ್ರೀತಿಸು ಅಂತ ಗ್ರಾಮದ ಯುವಕ ಹಿಂದೆ ಬಿದ್ದಿದ್ದ. ಆದರೆ ಆಕೆ ನಿರಾಕರಿಸಿದ್ದಳು. ಆತನ ಕಾಟ ತಾಳಲಾರದೇ ಬಾಲಕಿ ತನ್ನ ಚಿಕ್ಕಮ್ಮನ ಮನೆಗೆ ತೆರಳಿದ್ದಳು. ಅಲ್ಲಿಗೂ ತೆರಳಿದ್ದ ಯುವಕ ತನ್ನ ಸ್ನೇಹಿತರ ನೆರವಿನೊಂದಿಗೆ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಒಬ್ಬ ಆರೋಪಿಯ ಬಂಧನಕ್ಕಾಗಿ ಶೋಧ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಸ್.ಎಸ್.ಎಲ್.ಸಿ (State Board, CBSC, ICSC), ಮೆಟ್ರಿಕ್ ನಂತರದ ಪ್ರೋತ್ಸಾಹ ಧನಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಿಂದಿನ ಸಾಲಿನ ಪ್ರೋತ್ಸಾಹ ಧನಕ್ಕೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವುಂತಿರಲಿಲ್ಲ. ಪ್ರಸಕ್ತ ಸಾಲಿಗೆ ಎಸ್.ಎಸ್.ಎಲ್.ಸಿ (State Board, CBSC, ICSC) ಎಲ್ಲಾ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ https://swdservices.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯನ್ನು ಹಾಗೂ ಅಗತ್ಯ ದಾಖಲಾತಿಗಳಿಗೆ ಸಂಬಂಧ ಪಟ್ಟ ಶಾಲಾ ಕಾಲೇಜಿನ ಪ್ರಾಂಶುಪಾಲರ ಸಹಿ ಹಾಗೂ ಮೊಹರನ್ನು ಪಡೆದು ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-1)…
ತಾಂತ್ರಿಕ ದೋಷದಿಂದ ಅಥವಾ ಫ್ಲೈಟ್ ನಲ್ಲಿದ್ದ ಪ್ರಯಾಣಿಕರಲ್ಲಿ ಯಾರಿಗಾದರೂ ಹುಷಾರು ತಪ್ಪಿದರೆ ಫ್ಲೈಟ್ ಎಮರ್ಜೆನ್ಸಿ ಲ್ಯಾಂಡ್ ಆಗುವುದನ್ನು ನೋಡುತ್ತೇವೆ, ಆದರೆ ತಲೆಯಲ್ಲಿ ಹೇನು ಇದ್ದಿದ್ದಕ್ಕೆ ಫ್ಲೈಟ್ ಎಮರ್ಜೆನ್ಸಿ ಲ್ಯಾಂಡ್ ಆಗಿದೆ ಗೊತ್ತಾ? ಏನು…! ಹೇನು ಇದ್ದಿದ್ದಕ್ಕೆ ಪ್ಲೈಟ್ ಎಮರ್ಜೆನ್ಸಿ ಲ್ಯಾಂಡ್ ಆಯ್ತಾ? ಲಾಸ್ ಏಂಜಲೀಸ್ ನಿಂದ ಹೊರಟ ಏರ್ ಲೈನ್ಸ್ ಪ್ರಯಾಣಿಕರ ತಲೆಯಲ್ಲಿ ಹೇನು ಇದ್ದಿದ್ದಕ್ಕೆ ಫೀನಿಕ್ಸ್ನಲ್ಲಿ ಎಮರ್ಜೆನ್ಸಿ ಲ್ಯಾಂಡ್ ಅಗಿದ್ದು, ಇದನ್ನು ಟಿಕ್ ಟಾಕ್ ಯೂಸರ್ ಈ ವೀಡಿಯೋ ಶೇರ್ ಮಾಡಿದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವ್ಯೂವ್ಸ್ ಕೂಡ ಪಡೆದಿತ್ತು. ಮಹಿಳೆಯೊಬ್ಬರ ತಲೆಯಲ್ಲಿ ಹೇನು ಇರುವ ಕಾರಣಕ್ಕೆ ಎಮರ್ಜೆನ್ಸಿ ಲ್ಯಾಂಟ್ ಆದ ಪ್ಲೈಟ್ 12 ಗಂಟೆ ಗಂಟೆ ಅಲ್ಲಿಯೇ ಇತ್ತು, ಇದರಿಂದಾಗಿ ಪ್ರಯಾಣಿಕರು ಪರಿದಾಡಬೇಕಾದ ಪರಿಸ್ಥಿತಿ ಉಂಟಾಗಿತ್ತು ಎಂದು ಆ ಟಿಕ್ ಟಾಕ್ ಬಳಕೆದಾರ ಹೇಳಿದ್ದಾರೆ. ವೈದ್ಯಕೀಯ ಕಾರಣಕ್ಕೆ ಫ್ಲೈಟ್ ಅನ್ನು ತುರ್ತಾಗಿ ಇಳಿಸಲಾಯ್ತು ಎಂದು ಕಾರಣ ನೀಡಿದರು. ಅಲ್ಲಾ ತಲೆಯಲ್ಲಿ ಹೇನು ಕಂಡು ಈ ರೀತಿ ಎಮರ್ಜೆನ್ಸಿ…
ತುಮಕೂರು: ಎರಡು ಕಾರುಗಳ ನಡುವೆ ಭೀಕರ ಅಪಘಾತದಲ್ಲಿ ಒಟ್ಟು ಐವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಹಾಗೂ ಕಾಟಗಾನಹಟ್ಟಿ ಬಳಿ ನಡೆದಿದೆ. ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟಿದ್ದು ಸಿಂಧೂ ಎಂಬ ಮಹಿಳೆಯೊಬ್ಬರನ್ನು ಗುರುತಿಸಲಾಗಿದೆ. ಇನ್ನುಳಿದವರ ಹೆಸರು ಪತ್ತೆಯಾಗಿಲ್ಲ. ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದೆ. ಒಂದು ಕಾರಿನಲ್ಲಿದ್ದ ಮೂವರು ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮಾರುತಿ ಕಾರು ತುಮಕೂರು ಕಡೆಯಿಂದ ಬರುತ್ತಿತ್ತು, ಟಾಟಾ ಟಿಯಾಗೋ ಮಧುಗಿರಿ ಕಡೆಯಿಂದ ತುಮಕೂರು ಕಡೆ ಹೋಗುತ್ತಿದ್ದ ವೇಳೆ ಈ ಭೀಕರ ಅಪಘಾತ ನಡೆದಿದೆ. ಸ್ಥಳಕ್ಕೆ ಮಧುಗಿರಿ ಪಿಎಸ್ ಐ ವಿಜಯ್ ಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಯೋಗೇಶ್ ಪುತ್ರ ಸಿಂಧೂ (12), ಸೇರಿ ಒಂದೇ ಕುಟುಂಬದ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಸಿಯಾಜ್ ಕಾರಿನಲ್ಲಿ ತೆರಳುತ್ತಿದ್ದ ಮೃತ ಯೋಗೇಶ್ ಕುಟುಂಬ, ಊರಿನಲ್ಲಿ ಹಬ್ಬ ಮುಗಿಸಿಕೊಂಡು ವೈ.ಎನ್. ಹೊಸಕೋಟೆ ಕಡೆಯಿಂದ ಬೆಂಗಳೂರಿಗೆ ಹೊಗುತ್ತಿತ್ತು. ಯೋಗೇಶ್ ಕುಟುಂಬ ಬೆಂಗಳೂರಿನ ಜೆಪಿ ನಗರದಲ್ಲಿ ವಾಸವಾಗಿದ್ದರು.…
ಬಿಹಾರ: ಯೂಟ್ಯೂಬ್ ನೋಡಿ ಬಾಲಕನಿಗೆ ನಕಲಿ ವೈದ್ಯನೊಬ್ಬ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಪರಿಣಾಮವಾಗಿ 15 ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ. ಅಜಿತ್ ಕುಮಾರ್ ಪುರಿ ಎಂಬ ನಕಲಿ ವೈದ್ಯ ಈ ಕೃತ್ಯ ಎಸಗಿದ್ದು, ಬಾಲಕ ಸಾವನ್ನಪ್ಪಿದ ಬೆನ್ನಲ್ಲೇ ಈತ ತಲೆಮರೆಸಿಕೊಂಡಿದ್ದಾನೆ. ವಾಂತಿ ಮತ್ತು ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕನನ್ನು ಮಧುರಾದಲ್ಲಿರುವ ಅಜಿತ್ ಕುಮಾರ್ ಪುರಿಯ ಕ್ಲಿನಿಕ್ ಗೆ ದಾಖಲಿಸಲಾಗಿತ್ತು. ಬಾಲಕನನ್ನು ಕುಟುಂಬದವರ ಒಪ್ಪಿಗೆ ಇಲ್ಲದೆಯೇ ಅಜಿತ್ ಕುಮಾರ್ ಪುರಿ ಶಸ್ತ್ರ ಚಿಕಿತ್ಸೆ ನಡೆಸಲು ಆರಂಭಿಸಿದ್ದಾನೆ. ಯೂಟ್ಯೂಬ್ ನಲ್ಲಿ ನೋಡುತ್ತಾ, ಶಸ್ತ್ರ ಚಿಕಿತ್ಸೆ ನಡೆಸುತ್ತಿರುವುದನ್ನು ನೋಡಿ ಕುಟುಂಬಸ್ಥರು ಪ್ರಶ್ನಿಸಿದಾಗ, ಡಾಕ್ಟರ್ ನಾನಾ ನೀವಾ ಎಂದು ಗದರಿದ್ದ. ಆದರೆ ಸ್ವಲ್ಪ ಹೊತ್ತಲ್ಲೇ ಬಾಲಕನ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ. ಆತನನ್ನು ತಕ್ಷಣವೇ ಕುಟುಂಬಸ್ಥರು ಪಾಟ್ನಾದ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದ್ದಾರೆ. ಆದರೆ ಮಾರ್ಗ ಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಬಾಲಕನ ಸಾವಿನ ನಂತರ ಪುರಿ ಸ್ಥಳದಿಂದ ಪರಾರಿಯಾಗಿದ್ದಾನೆ, ಕುಟುಂಬದವರು ಪೊಲೀಸ್ ದೂರು ದಾಖಲಿಸಿದ್ದಾರೆ.…
ಕಾರವಾರ: ಗಣೇಶನ ಹಬ್ಬ ಒಂದು ಗೂಡಿಸುವ ಪರಂಪರೆಯನ್ನ ಹೊಂದಿದೆ. ಆದರೆ, ಗಣೇಶನ ಹಬ್ಬದ ವಿಚಾರವಾಗಿ ನಡೆದ ಗಲಾಟೆ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆಯೊಂದು ವರದಿಯಾಗಿದೆ. ಗಣೇಶ ಚತುರ್ಥಿ ಆಚರಣೆಯ ಹಳೆಯ ಖರ್ಚಿನ ವಿಚಾರಕ್ಕೆ ಇಲ್ಲಿನ ಸಾಯಿಕಟ್ಟಾದಲ್ಲಿ ಶನಿವಾರ ಕುಟುಂಬವೊಂದರ ನಡುವೆ ಕಲಹ ನಡೆದು, ಯುವಕನೊಬ್ಬ ತನ್ನ ಸೋದರ ಸಂಬಂಧಿಯನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ. ಶಿರಸಿ ಅಯ್ಯಪ್ಪ ನಗರದ, ಹಾನಗಲ್ನಲ್ಲಿ ಸರ್ವೇಯರ್ ಆಗಿದ್ದ ಸಂದೇಶ ಪ್ರಭಾಕರ ಬೋರಕರ್ (31) ಹತ್ಯೆಯಾದವರು. ಅವರ ಸಹೋದರನ ಪುತ್ರ ಮನೀಷ್ ಬೋರಕರ್ ಹತ್ಯೆಗೈದ ಆರೋಪಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮನೀಷ್ ಸೇರಿ ಅವರದೇ ಕುಟುಂಬದ ಐವರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿರಸಿ ಮೂಲದ ಒಂದೇ ಕುಟುಂಬಕ್ಕೆ ಸೇರಿದ್ದ ಹಲವರು ಗಣೇಶ ಚತುರ್ಥಿ ಆಚರಣೆಗೆ ಸೇರಿದ್ದ ವೇಳೆ ಹಳೆಯ ಖರ್ಚಿನ ರೂಪಾಯಿ 8 ಸಾವಿರ ಹಣದ ವಿಚಾರವಾಗಿ ಕಲಹ ನಡೆದಿತ್ತು. ಈ ವೇಳೆ ಸಂದೇಶ ಎಂಬುವವರ ಹತ್ಯೆ ನಡೆದಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಪುಣೆ: ಪತ್ನಿಯ ಕಿರಿ ಕಿರಿ ಕೇಳಲಾಗದೇ ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಬಳಿಕ ಭಾರೀ ನೀರಿನ ಹರಿವು ಇದ್ದ ನದಿಯಲ್ಲಿ ವ್ಯಕ್ತಿ ಕೊನೆಗೂ ಪವಾಡದಂತೆ ಬದುಕಿ ಬಂದಿದ್ದಾನೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ಪಿಂಪಿರಿ-ಚಿಂಚ್ವಾಡ ಮೂಲದ ಅಬಾಸಾಹೇಬ ಕೇಶವ ಪವಾರ್ ಎಂಬಾತನಿಗೆ ಪತ್ನಿ ಬೈದಿದ್ದು, ಪತ್ನಿಯ ಬೈಗಳಿಂದ ಬೇಸತ್ತು ವಾಲ್ಹೇಕರವಾಡಿ ಪ್ರದೇಶದ ಜಾದವ್ ಘಾಟ್ನಲ್ಲಿ ಪಾವನಾ ನದಿಗೆ ಹಾರಿದ್ದರು. ಇದರಿಂದ ಆತಂಕಗೊಂಡ ಕುಟುಂಬಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಚಿಂಚ್ವಾಡದ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ. ನದಿಯಲ್ಲಿ ತೀವ್ರ ಹುಡುಕಾಟ ನಡೆಸಿದರೂ ಕೇಶವ್ ಪತ್ತೆಯಾಗಲಿಲ್ಲ, ನದಿ ದಡದಲ್ಲಿ ಗಿಡವೊಂದಕ್ಕೆ ಬಟ್ಟೆ ಸಿಕ್ಕಿಹಾಕಿ ಕೊಂಡಿರುವುದು ಪತ್ತೆಯಾಗಿತ್ತು. ಮರ ಪೊದೆ ಎಲ್ಲ ಕಡೆಯೂ ಹುಡುಕಾಟ ನಡೆಸಲಾಯಿತು. ಅಣೆಕಟ್ಟಿನಿಂದ 4000 ಕ್ಯೂಸೆಕ್ ನೀರನ್ನು ಬಿಟ್ಟಿದ್ದರಿಂದ ನದಿಯಲ್ಲಿ ಹೆಚ್ಚಿನ ಹರಿವು ಇತ್ತು. ನದಿಗೆ ಹಾರಿದ ಪವಾರ್, ಉತ್ತಮ ಈಜುಪಟು ಆಗಿದ್ನಂತೆ. ಹೀಗಾಗಿ ಆತ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಲ್ಲಾದರೂ…