Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ತುಮಕೂರು: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆ ಅಪಘಾತಗಳು ಸಂಭವಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿದ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳಲ್ಲಿ ಒಟ್ಟು ೪೧ ಅಪಘಾತ ಸ್ಥಳಗಳನ್ನು ಗುರುತಿಸಲಾಗಿದೆ. ಅಪಘಾತ ಸ್ಥಳಗಳಲ್ಲಿ ಎಚ್ಚರಿಕೆ–ಸೂಚನಾ ಫಲಕಗಳು, ಸ್ಪೀಡ್ ಬ್ರೇಕರ್, ಮಾರ್ಗ ಸೂಚಕಗಳನ್ನು ಅಳವಡಿಸಿ ಅಪಘಾತ ಪ್ರಮಾಣ ತಗ್ಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಂತರ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಅವರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಿಸದ ಕಾರಣ ಹಾಗೂ ವಾಹನ ದಟ್ಟಣೆ ಹೆಚ್ಚಾಗುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ತಿಳಿಸಿದರು. ರಾಜ್ಯದ ವಿವಿಧ ಜಿಲ್ಲೆಯ ಸಾರಿಗೆಗಳು ಜಿಲ್ಲೆಯಲ್ಲಿರುವ ರಾಷ್ಟ್ರೀಯ…
ತುಮಕೂರು: ಮದ್ಯಪಾನ ಬಿಟ್ಟು ತಮ್ಮ ಕುಟುಂಬದ ಸದಸ್ಯರೊಂದಿಗೆ ಹೊಸ ಜೀವನ ಪ್ರಾರಂಭಿಸಿ, ಡಾ.ಡಿ.ವಿರೇಂದ್ರ ಹೆಗ್ಗಡೆರವರು ಸಮಾಜವನ್ನು ದೃಷ್ಟಿಯಲ್ಲಿಟ್ಟುಕೊಂಡು ಮದ್ಯ ಸೇವಿಸಿ ತಮ್ಮ ಜೀವನವನ್ನು ಹಾಳುಮಾಡಿಕೊಂಡ ಜನರನ್ನು ಒಂದೆಡೆ ಸೇರಿಸಿ 8 ದಿನಗಳ ಕಾಲ ಸಾರ್ವಜನಿಕರು, ದಾನಿಗಳ ಸಹಕಾರದೊಂದಿಗೆ ಶಿಬಿರ ಏರ್ಪಡಿಸಿ ಕುಡಿತವನ್ನು ಬಿಡಿಸಿ ಲಕ್ಷಾಂತರ ಜನರಿಗೆ ಉತ್ತಮ ಜೀವನವನ್ನು ಕಟ್ಟಿಕೊಟ್ಟವರು. ಜೀವನದಲ್ಲಿ ಆರೋಗ್ಯವೇ ಭಾಗ್ಯ, ಎಲ್ಲರೂ ಸೇವಾ ಕಾರ್ಯಗಳನ್ನು ಸದಾ ಮಾಡುತ್ತಿರಿ, ಈ ಶಿಬಿರದಿಂದ ಮಾನಸಿಕವಾಗಿ ಪರಿವರ್ತನೆ ಆಗಿದ್ದೀರಿ, ಈ ದೇಶಕ್ಕೆ ಆಸ್ತಿಯಾಗಿ ಉತ್ತಮ ಜೀವನವನ್ನು ನಡೆಸಿ ತಂದೆ ತಾಯಿಗೆ ಉತ್ತಮ ಮಗನಾಗಿ, ಹೆಂಡತಿಗೆ ಒಳ್ಳೆಯ ಜವಾಬ್ದಾರಿ ಗಂಡನಾಗಿ, ತಂದೆಯಾಗಿ ತಮ್ಮ ಮಕ್ಕಳೊಂದಿಗೆ ಜೀವನ ನಡೆಸಿ ಎಂದು ಹಿರೇಮಠದ ಡಾ.ಶ್ರೀ ಶ್ರೀ ಶಿವನಾಂದಶಿವಾಚಾರ್ಯಸ್ವಾಮೀಜಿಗಳು ಆಶೀರ್ವದಿಸಿದರು. ಭೀಮಸಂದ್ರ ಗಣಪತಿ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆದ ೧೮೩೩ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಬಸವಾರಾಧ್ಯರವರು ಎಲ್ಲರೂ ಜೀವನದಲ್ಲಿ ಮದ್ಯಪಾನ ಬಿಟ್ಟು…
ತುಮಕೂರು: ಮುಂಬರಲಿರುವ ಗಣೇಶನ ಹಬ್ಬದಲ್ಲಿ ಪರಿಸರಸ್ನೇಹಿ ಗಣಪತಿಗಳನ್ನು ಇಟ್ಟು, ಪೂಜಿಸಿ, ಕೆರೆಕಟ್ಟೆಗಳನ್ನ ಸಂರಕ್ಷಿಸಿ, ಯಾವುದೇ ವಾಯುಮಾಲಿನ್ಯ, ಜಲ ಮಾಲಿನ್ಯ, ಮಣ್ಣಿನ ಮಾಲಿನ್ಯ, ಮಾಡದಂತೆ ದೇವರನ್ನು ಪ್ರಾರ್ಥಿಸಿ, ಪರಿಸರದ ಜೊತೆಗೆ ನಮ್ಮ ಹಬ್ಬಗಳು ಸಹ ಸಾಗಲಿ ಎಂದು ಕರ್ನಾಟಕ ಜ್ಞಾನವಿಜ್ಞಾನ ಸಮಿತಿ ಮತ್ತು ಕರ್ನಾಟಕ ಸರ್ವೋದಯ ಮಂಡಳಿಯ ಜಿಲ್ಲಾಧ್ಯಕ್ಷರಾದ ಡಾ.ಎಚ್.ಕೆ.ಎಸ್. ಸ್ವಾಮಿ ಹಾರೈಸಿದ್ದಾರೆ. ಬರಲಿರುವ ಗಣೇಶನ ಹಬ್ಬಕ್ಕೆ ಈಗಾಗಲೇ ಬಣ್ಣ ಬಣ್ಣದ ವೈವಿಧ್ಯಮಯವಾದ ಗಣಪತಿಗಳನ್ನ ಕಲಾವಿದರು ತಯಾರು ಮಾಡಿ ಇಟ್ಟಿದ್ದಾರೆ, ಒಂದೇ ಸಾರಿ ಅವು ಮಾರುಕಟ್ಟೆಗೆ ಬಂದು ಲಗ್ಗೆ ಹಾಕುತ್ತವೆ. ಅದರಲ್ಲಿ ಬೇಕಾದಷ್ಟು ಬಣ್ಣಗಳನ್ನ ಹಚ್ಚಿ, ಅವು ಕೆಲವು ರಾಸಾಯನಿಕಗಳು ಇರಬಹುದು, ಇನ್ನೂ ಕೆಲವು ನೈಸರ್ಗಿಕವಾಗಿರಬಹುದು. ಅವೆರಡರ ವ್ಯತ್ಯಾಸ ತಿಳಿಯದಲೇ ಜನ ರಾಸಾಯನಿಕ ಇರುವ ಗಣಪತಿಗಳನ್ನೇ ಕೊಂಡು ಪೂಜೆ ಮಾಡಿ, ಒಂದೇ ದಿವಸದಲ್ಲಿ ಅಥವಾ ಮೂರನೇ ದಿವಸದಲ್ಲಿ ಸುತ್ತಮುತ್ತಲಿರುವ ಕೆರೆಗಳಿಗೆ, ನದಿಗಳಿಗೆ, ಸಮುದ್ರಗಳಿಗೆ ಬಿಡುತ್ತಿರುವುದರಿಂದ ನೀರಿನಲ್ಲಿ ಬಣ್ಣಗಳು ಕರಗಿ ಅಲ್ಲಿರುವ ಜಲಪ್ರಾಣಿಗಳಿಗೆ ವಿಷವಾಗಿ, ಅವುಗಳು ಸಾವನ್ನಪ್ಪುವುದನ್ನು ನಾವು ತಡೆಯಬೇಕು ಎಂದರು. ಹಬ್ಬ ಮಾಡುವ…
ತುಮಕೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ “ಕನ್ನಡ ನಡೆ ಶಾಲಾ ಕಾಲೇಜು ಕಡೆ” ಸಾಹಿತ್ಯ ದೀವಿಗೆ ಸಾಪ್ತಾಹಿಕ ೫ನೇ ಕಾರ್ಯಕ್ರಮ ತುಮಕೂರು ಕಸಬಾ, ಸಿದ್ಧಾರ್ಥನಗರದ, ಸಿದ್ಧಾರ್ಥ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಕುವೆಂಪುರವರ ಬಗ್ಗೆ ಕವಿ, ವಿದ್ವಾಂಸರಾದ ಮಹದೇವಯ್ಯ ಚಿಕ್ಕನಾರವಂಗಲರವರು ಮಾತನಾಡುತ್ತಾ ಕುವೆಂಪುರವರು ಪ್ರೌಢಶಾಲೆಯವರೆಗೆ ವಿಜ್ಞಾನ ವಿಷಯವನ್ನು ಇಂಗ್ಲೀಷ್ ಮಾಧ್ಯಮದಲ್ಲಿ ಓದಿದರೂ, ತಮ್ಮ ಗುರುಗಳ ಪ್ರೇರಣೆಯಿಂದ ಕನ್ನಡ ಎಂ.ಎ., ಓದಿ ಕನ್ನಡ ಕೀರ್ತಿ ಪತಾಕೆ ಮುಗಿಲೆತ್ತರಕ್ಕೆ ಏರಿಸಿದ ಅಗ್ರಮಾನ್ಯ ಕವಿಗಳು ಕುವೆಂಪುರವರು. ಚಿಕ್ಕಂದಿನಿಂದಲು ಕೆಲವು ನಿರ್ಧಿಷ್ಟ ತತ್ವಗಳನ್ನು ಪಾಲಿಸಿಕೊಂಡು ಬಂದವರು. ತಾತ್ವಿಕ ಧೋರಣೆಗಳಿಗೂ ಬದುಕಿನ ಇರುವ ವಿಭಿನ್ನತೆ ಕುವೆಂಪುರವರಲ್ಲಿದ್ದಂತಹ ವೈಶಿಷ್ಠ್ಯತೆ ಇವರ ಮಾತು ಕೃತಿ ಒಂದೇ ಆಗಿತ್ತು. ಜೀವನದ ಮೌಲ್ಯಗಳನ್ನು ತರದ ಮನಸ್ಸಿನಿಂದ ಸ್ವಾಗತಿಸುತ್ತಿದ್ದರು. ಕನ್ನವೆಂದರೆ ಕುವೆಂಪು, ಕುವೆಂಪು ಎಂದರೆ ಕನ್ನಡ ಎಂಬಂತೆ ಇವರ ವೃತ್ತಿ ಸೇವೆ, ಸಾಹಿತ್ಯ ಸೇವೆ, ಜನಸಾಮಾನ್ಯರ ಅಪಾರ ಪ್ರೀತಿ, ಪ್ರಕೃತಿ ಬಗ್ಗೆ ಇದ್ದ…
ತುಮಕೂರು: ಪ್ರಾಯೋಗಿಕ ನಾಟಕಗಳನ್ನು ಪೇಕ್ಷಕರ ಮಂದೆ ಕಟ್ಟಿಕೊಡುವುದು ನಿರ್ದೇಶಕನಿಗೆ ಸವಾಲಿನ ಕೆಲಸ. ಸಾಮಾಜಿಕ, ಅದರಲ್ಲಿಯೂ ಪ್ರಾಯೋಗಿಕ ನಾಟಕಗಳಲ್ಲಿ ಸಂಭಾಷಣೆ, ಅಭಿನಯ, ಕಲಾವಿದರ ಭಾವಾಭಿನಯ ಎಲ್ಲವೂ ಒಟ್ಟಿಗೆ ಕೂಡಿದರೆ ಮಾತ್ರ ಪ್ರೇಕ್ಷಕರನ್ನು ಹಿಡಿದಿಡಲು ಸಾಧ್ಯ ಕಲಾಶ್ರೀ ಡಾ.ಲಕ್ಷ್ಮಣದಾಸ್ ಅಭಿಪ್ರಾಯಪಟ್ಟಿದ್ದಾರೆ ನಗರದ ಕನ್ನಡ ಭವನದಲ್ಲಿ ಗ್ರಾಮೀಣ ಕ್ರಿಯಾತ್ಮಕ ರಂಗ ತಂಡ(ರಿ), ತುಮಕೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಾಹಿತಿ ಪ್ರೊ.ಹೆಚ್.ಎಸ್.ವೆಂಕಟೇಶಮೂರ್ತಿ ಅವರ ಕುಣಿ ಕುಣಿ ನವಿಲೆ ನಾಟಕವನ್ನು ಸಮ್ಮತ ಥಿಯೇಟರ್ ನ ಯಶವಂತ ಡಿ.ನಿರ್ದೇಶಿಸಿದ್ದು, ರಂಗ ನಿರ್ವಹಣೆ ಸುನಿಲ್ ಚೇತನ್ ಅವರದ್ದು, ನವೀನ್ ಭೂಮಿ ನಿನಾಸಂ ಅವರ ಬೆಳಕಿನ ವಿನ್ಯಾಸ ಮಾಡಿದ್ದು, ಪ್ರಸಾದನ ಹಂಸ ಪ್ರಿಯ, ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು, ಪೌರಾಣಿಕ ನಾಟಕಗಳಲ್ಲಿ ಪದ್ಯ, ಕಂದ ಪದ್ಯಗಳ ಮೂಲಕ ಹೇಗೋ ನಾಟಕವನ್ನು ತೂಗಿಸಬಹುದು. ಆದರೆ ಸಾಮಾಜಿಕ ನಾಟಕಗಳಲ್ಲಿ ಕಥಾವಸ್ತುವೇ ಪ್ರಧಾನವಾಗಿರುವ ಕಾರಣ. ಕಲಾವಿದರು ಭಾವ ತುಂಬಿ ಅಭಿನಯಿಸಿದಾಗ ಮಾತ್ರ ಪ್ರೇಕ್ಷಕರಿಂದ ಚಪ್ಪಾಳೆ ಗೌರವ ಸಿಗಲು ಸಾಧ್ಯ ಎಂದರು. ಶಿವಕುಮಾರ್…
ಕೋಲ್ಕೊತ್ತಾ: ಕರ್ತವ್ಯದಲ್ಲಿದ್ದ ವೈದ್ಯಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ತೀವ್ರತೆ ಪಡೆಯುತ್ತಿದೆ. ಮರಣೋತ್ತರ ಪರೀಕ್ಷೆಯಲ್ಲಿ ಭೀಕರ ಅಂಶಗಳು ಬಯಲಾಗಿದ್ದುದೆ. ಕೋಲ್ಕೊತ್ತಾದ ಆರ್ ಜಿಕರ್ ಹಾಸ್ಪಿಟಲ್ ನಲ್ಲಿ 31 ವರ್ಷದ ಡ್ಯೂಟಿ ಡಾಕ್ಟರ್ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ವೈದ್ಯೆಯ ಕಣ್ಣು, ಬಾಯಿ ಮತ್ತು ಖಾಸಗಿ ಅಂಗಾಂಗದಲ್ಲಿ ರಕ್ತ ಸೋರಿಕೆಯಾಗುತ್ತಿತ್ತು. ಅವಳ ತುಟಿ, ಹೊಟ್ಟೆ ಮತ್ತು ತೊಡೆಯಲ್ಲಿ ಗಾಯದ ಗುರುತುಗಳಿವೆ. ಈ ಎಲ್ಲಾಅಂಶಗಳನ್ನೂ ಈಗ ಪೊಲೀಸರು ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಇದೀಗ ವೈದ್ಯಕೀಯ ಕಾಲೇಜಿನಲ್ಲಿ ಪ್ರತಿಭಟನೆ ಜೋರಾಗಿದ್ದು, ಪ್ರಿನ್ಸಿಪಾಲ್ ರಾಜೀನಾಮೆ ನೀಡಿದ್ದಾರೆ. ಬೆಳಗಿನ ಜಾವ 3 ರಿಂದ 6 ಗಂಟೆಯೊಳಗಾಗಿ ಕೃತ್ಯ ನಡೆದಿದೆ. ಕರ್ತವ್ಯದಲ್ಲಿದ್ದ ವೈದ್ಯೆ ಊಟ ಮಾಡಿದ ಬಳಿಕ ಕೆಲವು ಹೊತ್ತು ವಿಶ್ರಾಂತಿ ಪಡೆಯಲು ಸೆಮಿನಾರ್ ಹಾಲ್ ಗೆ ಹೋಗಿದ್ದಾಗ ಆರೋಪಿ ಕೃತ್ಯವೆಸಗಿದ್ದಾನೆ. ಬಳಿಕ ತನ್ನ ಮನೆಗೆ ಹೋಗಿದ್ದ ಆರೋಪಿ ಕೆಲವು ಕಾಲ ಮಲಗಿ ನಿದ್ರೆ ಮಾಡಿದ್ದಾನೆ. ಬಳಿಕ ತನ್ನ ಬಟ್ಟೆಗಳನ್ನೆಲ್ಲಾ ತೊಳೆದು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ. ಆದರೆ…
ಪಾವಗಡ: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಎಮ್ಮೆಯನ್ನು ಚಿರತೆಯೊಂದು ಕೊಂದು ತಿಂದ ಘಟನೆ ಸೋಮವಾರ ಬೆಳಗಿನ ಜಾವ 3:30ರ ಸಂದರ್ಭದಲ್ಲಿ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದ ಅಗಸರ ತಿಮ್ಮಣ್ಣ ಎನ್ನುವರ ಜಮೀನಿನಲ್ಲಿ ಜರಗಿದೆ. ಎಂದಿನಂತೆ ಭಾನುವಾರವು ಸಹ ತಮ್ಮ ಜಮೀನಿನಲ್ಲಿ ಇರುವಂತಹ ಕೊಟ್ಟಿಗೆ ಬಳಿ ಎಮ್ಮೆಯನ್ನು ಕಟ್ಟಿ ಹಾಕಿ ಕೊಟ್ಟಿಗೆಯಲ್ಲಿ ಮಲಗಿದ್ದರು ರಾತ್ರಿ ಏಕಾಏಕಿ ಚಿರತೆಯೊಂದು ದಾಳಿ ನಡೆಸಿ ಎಮ್ಮೆಯನ್ನು ಅಟ್ಟಾಡಿಸಿಕೊಂಡು ಸಾಯಿಸಿ ಸಂಪೂರ್ಣ ಹಿಂಭಾಗವನ್ನು ಕಿತ್ತು ತಿಂದಿದೆ. ಕಳೆದ ಮೂರು ತಿಂಗಳ ಹಿಂದೆಯಷ್ಟೇ ಹಸುವಿನ ಕರುವೂಂದನ್ನು ಹುಣಸೆ ಮರದ ಮೇಲಕ್ಕೆ ಎಳೆದೊಯ್ದು ತಿಂದಿತ್ತು. ಅದಾದ ಬಳಿಕ ಈಗ ಎಮ್ಮೆಯ ಮೇಲೆ ಚಿರತೆ ದಾಳಿ ನಡೆಸಿರುವುದು ಈ ಭಾಗದ ರೈತರಲ್ಲಿ ಆತಂಕವನ್ನು ಹೆಚ್ಚಿಸಿದೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇದೇ ಸಂದರ್ಭದಲ್ಲಿ ಅಗಸರ ತಿಮ್ಮಣ್ಣ ಮನವಿ ಮಾಡಿಕೊಂಡಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತಂಗಲ್ಲಪಲ್ಲಿ: ನವಿಲು ಕರಿ ಮಾಡುವುದು ಹೇಗೆ ಅಂತ ವಿಡಿಯೋ ಪೋಸ್ಟ್ ಮಾಡಿದ ಯೂಟ್ಯೂಬರ್ ವೊಬ್ಬ ಇದೀಗ ಜೈಲು ಸೇರಿದ್ದು, ರಾಷ್ಟ್ರಪಕ್ಷಿಯನ್ನು ಕೊಂದು ಅಡುಗೆ ಮಾಡಿದ ಯೂಟ್ಯೂಬರ್ ಇದೀಗ ಜೈಲು ಕಂಬಿ ಎಣಿಸುತ್ತಿದ್ದಾನೆ. ಪ್ರಣಯ ಕುಮಾರ್ ಎಂಬಾತ ನವಿಲು ಕರಿ ರೆಸಿಪಿ ಹೆಸರಿನಡಿ ವಿಡಿಯೋ ಮಾಡಿದ್ದ. ಈ ವಿಡಿಯೋ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿ ಕ್ರಮಕ್ಕೆ ಆಗ್ರಹಿಸಿದ್ದರು. ಈ ಬಗ್ಗೆ ಸಿರಿಸಿಲ್ಲಾ ಜಿಲ್ಲೆಯ ಎಸ್ಪಿ ರಾಜಣ್ಣ ಪ್ರಕರಣ ದಾಖಲಿಸಿ, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಪ್ರಣಯ್ಕುಮಾರ್ ಯೂಟ್ಯೂಬ್ ಚಾನೆಲ್ ನನ್ನು ಪರಿಶೀಲನೆ ನಡೆಸಿದ ವೇಳೆ ಕಾಡು ಹಂದಿಯ ಕರಿ ಮಾಡುವುದು ಹೇಗೆ ಅಂತಲೂ ಈತ ವಿಡಿಯೋ ಮಾಡಿರುವುದು ಬಯಲಾಗಿದೆ. ಸದ್ಯ ಈ ವಿಡಿಯೋವನ್ನು ಯೂಟ್ಯೂಬ್ ನಿಂದ ತೆಗೆದು ಹಾಕಲಾಗಿದ್ದು, ಆತನ ವಿರುದ್ಧ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಕ್ರಿಯೇಟರ್ಸ್ ಗೆ ಇದೊಂದು ಎಚ್ಚರಿಕೆಯ ಕರೆಗಂಟೆಯಾಗಿದೆ. ಯಾವುದೇ ವಿಡಿಯೋಗಳನ್ನು ಪೋಸ್ಟ್ ಮಾಡಬೇಕಾದರೂ, ನಮ್ಮ ನೆಲದ ಕಾನೂನು ಅರಿತು ವಿಡಿಯೋಗಳನ್ನು ಪೋಸ್ಟ್ ಮಾಡಬೇಕಿದೆ.…
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮಾಂಥೆರೋ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ ನಟ ದರ್ಶನ್ ಅವರ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ. ವರದಿಗಳ ಪ್ರಕಾರ, ಇಂದು ಅಥವಾ ನಾಳೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಆಶೀರ್ವಾದ ಪಡೆಯಲಿದ್ದಾರೆ ಎಂದು ಹೇಳಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಲುಕಿದ್ದಾರೆ. ಮದುವೆಯ ದಿನ ತರುಣ್ ಸುಧೀರ್ ಮತ್ತು ನಟಿ ಸೋನಲ್ ದರ್ಶನ್ ಅವರ ಅನುಪಸ್ಥಿತಿಯನ್ನು ನೆನೆದು ಭಾವುಕರಾಗಿದ್ದರು. ತರುಣ್ ಸುಧೀರ್ ಮತ್ತು ನಟಿ ಸೋನಲ್ ಜೋಡಿ ಒಂದಾಗಲು ನಟ ದರ್ಶನ್ ಅವರು ಕಾರಣರಾಗಿದ್ದರು. ಹೀಗಾಗಿ ಮೊದಲ ಆಮಂತ್ರಣ ಪತ್ರಿಕೆ ನಟ ದರ್ಶನ್ ಅವರಿಗೆ ನೀಡಲಾಗಿತ್ತು. ಇದೀಗ ಪರಪ್ಪನ ಅಗ್ರಹಾರಕ್ಕೆ ತೆರಳಿ ಆಶೀರ್ವಾದ ಪಡೆಯಲು ಜೋಡಿ ಮುಂದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಓದಲು ಅಂತ ಶಾಲೆಗೆ ಬರುವ ವಿದ್ಯಾರ್ಥಿಗಳು ತರಗತಿಯಲ್ಲೇ ಸರಸ ಸಲ್ಲಾಪದಲ್ಲಿ ತೊಡಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋ ಕಂಡು ಪೋಷಕರು ಆತಂಕ್ಕೀಡಾಗುವಂತಾಗಿದೆ. ನಿಶಾಂತ್ ಶರ್ಮಾ (ಭಾರದ್ವಾಜ್) ಎಂಬ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಇರಿಸುಮುರುಸು ಉಂಟಾಗುವಂತಹ ವರ್ತನೆಯಲ್ಲಿ ತೊಡಗಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಒಬ್ಬಳು ಹುಡುಗಿ ಮತ್ತು ಹುಡುಗ ತರಗತಿಯಲ್ಲಿ ತಮ್ಮ ಸಹಪಾಠಿಗಳ ಎದುರೇ ಸರಸ ಸಲ್ಲಾಪದಲ್ಲಿ ತೊಡಗಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಕಲಿಕೆಗೆ ಬರುವ ವಿದ್ಯಾರ್ಥಿಗಳು ತಮ್ಮ ಸಣ್ಣ ವಯಸ್ಸಿನಲ್ಲೇ ಈ ರೀತಿಯ ವರ್ತನೆ ತೋರುತ್ತಿರುವ ವಿಡಿಯೋ ವೈರಲ್ ಆಗಿರುವುದು ಪೋಷಕರು ಆತಂಕಪಡುವಂತೆ ಮಾಡಿದೆ. हमारे देश का भविष्य आगे बढ़ रहा है, मां बापू का नाम रोशन कर रहा है, इस लिए क्लासरूम में ही काम चल रहा है!#viralvideo pic.twitter.com/ESDx8TNlhK — निशान्त शर्मा (भारद्वाज) (@Nishantjournali) August 11, 2024 ನಮ್ಮತುಮಕೂರಿನ ಕ್ಷಣ…