Subscribe to Updates
Get the latest creative news from FooBar about art, design and business.
- ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು
- ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸ್ತನ್ಯಪಾನ ಅತ್ಯಗತ್ಯ: ಸಿ. ದೀಪಾ ಕರೆ
- ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ
- ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ
- ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ
- ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
- ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
- ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
Author: admin
ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆ ಮಾಡಿಸಿಕೊಂಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿರುವುದು ಲೋಕಾಯುಕ್ತ ಪೊಲೀಸರಿಗೆ ಇನ್ನು ಕಿವಿಗೆ ಕೇಳಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಾಯುಕ್ತ ಪೊಲೀಸರು ಕಾಂಗ್ರೆಸ್ ಸರ್ಕಾರದ ಕಾವಲು ಪಡೆಯಂತೆ ವರ್ತಿಸುತ್ತಿರುವುದು ಆಘಾತಕಾರಿ ವಿಷಯವಾಗಿದೆ. ಲೋಕಾಯುಕ್ತ ಪೊಲೀಸರು ಇಂತಹ ಗಂಭೀರ ವಿಷಯಗಳ ತನಿಖೆಯನ್ನು ನಡೆಸಲಾಗದಾಗ, ಲೋಕಾಯುಕ್ತವನ್ನು ವಿಸರ್ಜಿಸುವುದು ಒಳ್ಳೆಯದುʼ ಎಂದು ಯತ್ನಾಳ್ ಕೆಂಡಾಮಂಡಲವಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ಶಿವಾಜಿ ನಗರದ ಚರ್ಚ್ ನಲ್ಲಿ ಸಂತ ಮೇರಿ ಜಯಂತೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯನವರು ಮಾತನಾಡುತ್ತಿದ್ದ ವೇಳೆ ಅಜಾನ್ ಕೇಳಿ ಬಂದಿದ್ದು, ಈ ವೇಳೆ ಸಿಎಂ 3 ನಿಮಿಷಗಳ ಕಾಲ ಭಾಷಣ ನಿಲ್ಲಿಸಿದರು. ನಂತರ ಮಾತನಾಡುವಂತೆ ಶಾಸಕರು ಸನ್ನೆ ಮಾಡಿದ ಬಳಿಕ ಭಾಷಣ ಮುಂದುವರೆಸಿದ್ದಾರೆ. ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಇದೇ ವೇಳೆ ಸಿಎಂ ಕರೆ ನೀಡಿದರು. ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದು ಅವರು ಇದೇ ವೇಳೆ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಕೆನರಾ ಬ್ಯಾಂಕ್ ಮೇಲ್ಬಾಗದಲ್ಲಿ ಹರ್ಷಿಲ್ ಸೂಪರ್ ಮಾರ್ಕೆಟನ್ನು ಶ್ರೀ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ ಮತ್ತು ಶಾಸಕ ಹೆಚ್.ವಿ.ವೆಂಕಟೇಶ್ ರವರು ಭಾನುವಾರ ಉದ್ಘಾಟಿಸಿದರು. ಗ್ರಾಮಕ್ಕೆ ಇಂತಹ ಮಾರುಕಟ್ಟೆಗಳು ಅಗತ್ಯವಾಗಿದ್ದು, ವ್ಯವಸ್ಥಿತವಾಗಿ ಸೂಪರ್ ಮಾರ್ಕೆಟ್ ರಚನೆಯಾಗಿದೆ ಎಂದು ಮಾಜಿ ಶಾಸಕರಾದ ವೆಂಕಟರಮಣಪ್ಪ ತಿಳಿಸಿದರು. ಗೃಹಪಯೋಗಿಯ ಎಲ್ಲಾ ವಸ್ತುಗಳು ಒಂದೇ ಸೂರಿನಡಿ ದೊರೆಯುತ್ತಿದ್ದು, ಗ್ರಾಹಕರಿಗೆ ಹೆಚ್ಚು ಅನುಕೂಲಕವಾಗಿದೆ. ವಿದ್ಯಾರ್ಥಿಗಳು, ಗೃಹಿಣಿಯರು, ಪುರುಷರಿಗೆ ಮತ್ತು ವ್ಯಾಪಾರಿಗಳಿಗೆ ಅಗತ್ಯವಾದ ಎಲ್ಲಾ ವಸ್ತುಗಳ ಮಾರಾಟವಿದೆ. ಅಗತ್ಯ ಇರುವವರಿಗೆ ಮನೆ ಬಾಗಿಲಿಗೇ ಸರಕುಗಳನ್ನು ಪೂರೈಕೆ ಮಾಡಲಾಗುವುದು ಎಂದು ಮಾಲೀಕರಾದ ಟಿ.ಉಮೇಶ್ ತಿಳಿಸಿದ್ದಾರೆ. ನ್ಯಾಯಾಧೀಶರಾದ ಜಿ.ಮಂಜುನಾಥ, ಡಾ.ಹರೀಶ್, ಪಿಎಸ್ ಐ ಮಾಳಪ್ಪ ನಾಯ್ಕೋಡ್, ಎಸ್.ಟಿ.ನಾಗರಾಜು, ಪಿ.ಸಿ.ಗೋಪಿ, ಎಲ್.ಕೆ.ರಾಘವೇಂದ್ರ, ಭಾನುಪ್ರಕಾಶ್, ಎನ್.ಆರ್.ಅಶ್ವಥ್, ಜಿ.ಬಿ.ಸತ್ಯನಾರಾಯಣ, ಕೋಡಿಪಲ್ಲಿ ರಾಮಚಂದ್ರಪ್ಪ, ಎಂ.ಸಿ.ಜಯರಾಂ, ಷಂಶುದ್ದೀನ್ ಮುಂತಾದವರು ಬೇಟಿ ನೀಡಿ ಶುಭ ಹಾರೈಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣ್ವೀರ್ ಸಿಂಗ್ ಪೋಷಕರಾಗಿದ್ದಾರೆ. ದೀಪಿಕಾ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಿನ್ನೆಯಷ್ಟೇ ದೀಪಿಕಾ ಪಡುಕೋಣೆ ಮುಂಬೈನ ಅಂಬಾನಿ ಮಾಲೀಕತ್ವದ ಹೆಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆಪ್ಟೆಂಬರ್ 28ರಂದು ದೀಪಿಕಾಗೆ ಡೆಲಿವರಿ ಡೇಟ್ ಇತ್ತು. ನಿಗದಿಗಿಂತ 20 ದಿನ ಮೊದಲೇ ದೀಪಿಕಾ ರಣ್ವೀರ್ ಮನೆಗೆ ಗೌರಿಯ ಆಗಮನವಾಗಿದೆ. ಒಂದು ದಿನದ ಹಿಂದಷ್ಟೇ ದೀಪಿಕಾ ಪಡುಕೋಣೆ ತಮ್ಮ ಪತಿ ರಣ್ವೀರ್ ಸಿಂಗ್ ಹಾಗೂ ಕುಟುಂಬದವರ ಜೊತೆಗೆ ಬರಿಗಾಲಿನಲ್ಲಿ ಮುಂಬೈನ ಸಿದ್ಧಿವಿನಾಯಕ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಆದರೆ ಈ ಖುಷಿಯ ವಿಚಾರವನ್ನು ಇವರಿಬ್ಬರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲಿಯೂ ಪೋಸ್ಟ್ ಮಾಡಿಲ್ಲ, ಕೆಲ ದಿನಗಳ ಹಿಂದಷ್ಟೇ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅವರು ಜೊತೆಯಾಗಿ ಪ್ರಗ್ನೆನ್ಸಿ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಫೆಬ್ರವರಿಯಲ್ಲಿ ಪ್ರಗ್ನೆನ್ಸಿ ವಿಚಾರವನ್ನು ಘೋಷಣೆ ಮಾಡಿದ್ದರು. 2018ರಲ್ಲಿ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್…
48ರ ಹರೆಯದಲ್ಲೇ ಖ್ಯಾತ ಕಿರುತೆರೆ ನಟ ಇಹಲೋಕ ತ್ಯಜಿಸಿದ್ದು,ಕಿರುತೆರೆ ಲೋಕ ಶಾಕ್ ಆಗಿದೆ.ಹೃದಯ ಸ್ತಂಭನದಿಂದ ನಟ ವಿಕಾಸ್ ಸೇಥಿ (Vikas Sethi) ಅವರು ಭಾನುವಾರ(ಸೆ.8ರಂದು) ಮಲಗಿದ್ದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ದೇಹವನ್ನು ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 2000 ಇಸವಿಯ ಆರಂಭದಲ್ಲಿ ಹಿಂದಿ ಕಿರುತೆರೆಯಲ್ಲಿ ಜನಪ್ರಿಯತೆಯನ್ನು ಗಳಿಸಿದ ನಟ ವಿಕಾಸ್ ಸೇಥಿ. ʼಕ್ಯುಂಕಿ ಸಾಸ್ ಭೀ ಕಭಿ ಬಹು ಥಿʼ (Kyunki Saas Bhi Kabhi Bahu Thi), ʼಕಹಿಂ ತೊ ಹೋಗಾʼ (Kahiin To Hoga) ಧಾರಾವಾಹಿಗಳಲ್ಲಿನ ಅವರ ಅಭಿನಯ ಮನೆ -ಮನದ ಪ್ರೇಕ್ಷಕರನ್ನು ರಂಜಿಸಿತ್ತು. 2021ರಲ್ಲಿ, ನಟ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದರು. ಆಗಾಗ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಫಿಟ್ನೆಸ್ ಮತ್ತು ಸ್ಪೂರ್ತಿದಾಯಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ವಿಕಾಸ್ ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು ಮತ್ತು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದ್ದರು. ಸ್ವಲ್ಪ ಸಮಯದ ಹಿಂದೆ ಅವರು ನಿರ್ಮಾಪಕರಾಗಿ ಸಿಕೆ ಪಿಕ್ಚರ್ಸ್ ಎನ್ನುವ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ್ದರು…
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರು ಬಳ್ಳಾರಿ ಜೈಲಿಗೆ ಸೇರ್ಪಡೆಯಾದ ಬಳಿಕ ಪಿಪಿಸಿ ಅಕೌಂಟ್ ನಲ್ಲಿ ಎಷ್ಟು ಹಣ ಖರ್ಚು ಮಾಡಿದ್ದಾರೆ ಎನ್ನುವ ಮಾಹಿತಿ ವರದಿಯಾಗಿದೆ. ಕಳೆದ 9 ದಿನಗಳಲ್ಲಿ ದರ್ಶನ್ 735 ರೂಪಾಯಿ ಹಣವನ್ನು ಖರ್ಚು ಮಾಡಿದ್ದಾರೆ. ಈ ಪೈಕಿ ಬಹುತೇಕ ಹಣವನ್ನು ಕಾಫಿ, ಟೀಗಾಗಿ ಖರ್ಚು ಮಾಡಿದ್ದಾರೆ ಎಂದು ಜೈಲು ಕ್ಯಾಂಟೀನ್ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಪರಪ್ಪನ ಅಗ್ರಹಾರದಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಜೊತೆಗೆ ರೌಂಡ್ ಟೇಬಲ್ ಪಾರ್ಟಿ ಮಾಡಿದ್ದರು. ಕೈಯಲ್ಲಿ ಸಿಗರೇಟ್, ಇನ್ನೊಂದು ಕೈಯಲ್ಲಿ ಕಾಫಿ ಮಗ್ ಹಿಡಿದುಕೊಂಡು ಬಿಂದಾಸ್ ಆಗಿ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದಿದ್ದರು. ವಿಐಪಿ ಸೆಲ್ ನಿಂದ ವಿಡಿಯೋ ಕಾಲ್ ಮೂಲಕ ಮಾತನಾಡಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು. ಹೀಗಾಗಿ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಮಾಡಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಬೆಳಗಾವಿ: ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತಿಸುತ್ತೇನೆ ಎಂದು ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರ ಪಶ್ನೆಗಳಿಗೆ ಉತ್ತರಿಸಿದ ಅವರು, ಬೆಳಗಾವಿ ಜಿಲ್ಲೆಯ ಯಾರೇ ಮುಖ್ಯಮಂತ್ರಿಯಾದರೂ ನಾನು ಸ್ವಾಗತಿಸುತ್ತೇನೆ, ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿದೆ ಎಂದು ತಿಳಿಸಿದರು. ಬಿಜೆಪಿಯ ಪ್ರಭಾವಿ ನಾಯಕರಾಗಿದ್ದ ಲಕ್ಷ್ಮಣ್ ಸವದಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ ಸಚಿವ ಸ್ಥಾನ ಅವರಿಗೆ ಇನ್ನೂ ಸಿಕ್ಕಿಲ್ಲ. ಈ ನಡುವೆ ಸತೀಶ್ ಜಾರಕಿಹೊಳಿ ಸಿಎಂ ಆಗೋದಾದ್ರೆ ನನ್ನ ಬೆಂಬಲವಿದೆ. ಬೆಳಗಾವಿಯವರು ಯಾರೇ ಸಿಎಂ ಆಗುವುದಿದ್ದರೂ ನನ್ನ ಬೆಂಬಲವಿದೆ ಅಂತ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಚರ್ಚೆಯಲ್ಲಿರುವ ಸಂದರ್ಭದಲ್ಲೇ ಸತೀಶ್ ಜಾರಕಿಹೊಳಿ ತೆರೆಮರೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಟವಲ್ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಕ್ಷ್ಮಣ್ ಸವದಿ ಬೆಳಗಾವಿ ಜಿಲ್ಲೆಯಿಂದ ಯಾರೇ ಸಿಎಂ ಆದರೂ ನನ್ನ ಬೆಂಬಲವಿದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರ–ಮುಡಾದಿಂದ ಒಂದೇ ದಿನ 848 ನಿವೇಶನಗಳು ಹಂಚಿಕೆಯಾಗಿದೆ ಎನ್ನುವ ಮಾಹಿತಿ ಗೊತ್ತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಒಂದೇ ದಿನ ಇಷ್ಟೊಂದು ನಿವೇಶನಗಳು ಹಂಚಿಕೆಯಾಗಿರುವುದು ನನಗೆ ಹೊಸ ವಿಚಾರ. ಮುಡಾ ಪ್ರಕರಣದಲ್ಲಿ ತನಿಖೆಗೆ ನ್ಯಾಯಾಂಗ ಆಯೋಗ ರಚನೆಯಾದ ಮೇಲೆ ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಏನೇ ಇದ್ದರೂ ಆಯೋಗವೇ ವಿಚಾರಣೆ ನಡೆಸಬೇಕು. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಸರ್ಕಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ. 2022 ರಲ್ಲಿ ಆಗಿನ ಮುಡಾ ಅಧ್ಯಕ್ಷರಾಗಿದ್ದ ರಾಜೀವ್ ಅವರು ಒಂದೇ ದಿನ 848 ನಿವೇಶನಗಳನ್ನು ಹಂಚಿಕೆ ಮಾಡಿರುವುದು ನನಗೆ ತಿಳಿದಿಲ್ಲ. ಈ ಬಗ್ಗೆ ಕಾರ್ಯದರ್ಶಿಗಳಿಗೆ ಪತ್ರ ರವಾನೆಯಾಗಿದ್ದರೆ ಅದನ್ನು ಪರಿಶೀಲಿಸಲಾಗುವುದು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಮೇಷ ರಾಶಿ:✨ ಮೇಷ ರಾಶಿಯವರ ಜೀವನದ ಫಲಾನುಫಲ ಈ ದಿನ ಈ ರೀತಿಯಾಗಿದೆ. ಮಕ್ಕಳಿಂದ ಗೌರವ ಲಭಿಸಬಹುದು ಆರ್ಥಿಕ ನಷ್ಟವನ್ನು ಅನುಭವಿಸಬಹುದು ಎಚ್ಚರದಿಂದಿರಿ. ವೃಷಭ ರಾಶಿ:✨ ಹಣಕಾಸಿನಲ್ಲಿ ತೊಂದರೆ ಬರಬಹುದು. ಚಿನ್ನದ ವ್ಯಾಪಾರಿಗೆ ನಷ್ಟವಾಗುತ್ತದೆ. ಆರೋಗ್ಯದ ಕಡೆ ಗಮನ ಹರಿಸಿ ಮಿಥುನ ರಾಶಿ: ✨ ಮಿಥುನ ರಾಶಿಯವರು…
ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸಿದ್ರೆ ತಪ್ಪೇನು? ಜಪಾನ್ ನಲ್ಲಿ ಮಾಡಲ್ವಾ?: ಗೋವಿಂದ ಕಾರಜೋಳ ವಿವಾದಾತ್ಮಕ ಹೇಳಿಕೆ
ಬೆಂಗಳೂರು: ವಿದ್ಯಾರ್ಥಿಗಳು ಶಾಲೆಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪೇನು? ಜಪಾನ್ ನಲ್ಲಿ ಮಾಡುತ್ತಾರಲ್ವಾ? ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಇದೇ ಪ್ರಕರಣದ ಬಗ್ಗೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಜಪಾನ್ ನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುತ್ತಾರೆ. ನಾನು ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ನನ್ನ ವಸತಿ ನಿಲಯವನ್ನು ಗುಡಿಸಿ ಸ್ವಚ್ಛಗೊಳಿಸುತ್ತಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಚ ಮಾಡಿದ್ದನ್ನು ದೊಡ್ಡ ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ. ವಿದ್ಯಾರ್ಥಿಗಳು ಪೊರಕೆ ಹಿಡಿಯುವುದು ಅಪರಾಧ ಎನ್ನುವ ರೀತಿ ಕಾಣುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ಸ್ವಚ್ಚತೆ ಕೆಲಸ ಕೀಳು ಎಂಬ ಭಾವನೆ ಮೂಡುತ್ತಿದೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…