Author: admin

ಬೇಲೂರು: ಮರವೊಂದಕ್ಕೆ ಸಿಡಿಲು ಬಡಿದ ಪರಿಣಾಮ ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ 13 ಮಹಿಳೆಯರು ಸಿಡಿಲಿನ ಆಘಾತಕ್ಕೊಳಗಾದ ಘಟನೆ ಬೇಲೂರು ತಾಲ್ಲೂಕು ಅರೇಹಳ್ಳಿ ಹೋಬಳಿ ಕೋರಲುಗದ್ದೆ ಗ್ರಾಮದಲ್ಲಿ ನಡೆದಿದೆ. ಒಟ್ಟು 13 ಜನರು ಸಿಡಿಲಿನ ಆಘಾತಕ್ಕೊಳಗಾಗಿದ್ದು, ಈ ಪೈಕಿ ಲತಾ W/O ಪ್ರೇಮ್ ಕುಮಾರ್ ಎಂಬವರು ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯರು ಸಮೀಪದ ಜಮೀನನಲ್ಲಿ ಭತ್ತ ನಾಟಿ  ಮಾಡುತ್ತಿದ್ದ ವೇಳೆ ಏಕಾಏಕಿ ಮರದ ಕೊಂಬೆಗೆ ಸಿಡಿಲು ಬಡಿದಿದೆ. ಪರಿಣಾಮವಾಗಿ ಜಮೀನಿನಲ್ಲಿದ್ದವರು ಸಿಡಿಲಿನ ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಮಾಹಿತಿ ತಿಳಿದು ಭಾನುವಾರ ರಾತ್ರಿಯೇ ತಹಶೀಲ್ದಾರ್ ಮಮತ.ಎಂ, PSI ಸರ್ದಾರ್ ಪಾಷಾರವರೊಂದಿಗೆ ಆಸ್ಪತ್ರೆಗೆ ಧಾವಿಸಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ವಿದೇಶಿ ಪ್ರಜೆಗಳ ಡೆಟೆಕ್ಷನ್ ಸೆಂಟರ್ ಕೇಂದ್ರದಿಂದ ಇಬ್ಬರು ಪರಾರಿಯಾಗಿರುವ ಘಟನೆ ನಡೆದಿದ್ದು, ಇಬ್ಬರು ಮಹಿಳಾ ವಿದೇಶಿಗಳು ಪರಾರಿಯಾಗಿದ್ದಾರೆ. ತುಮಕೂರಿನ ದಿಬ್ಬೂರು  ಕೇಂದ್ರದಿಂದ ಮಹಿಳೆಯರು ಎಸ್ಕೇಪ್ ಆಗಿದ್ದು, ರೇಷ್ಮಾ (45),  ಲಿಝಾ (25) ತಪ್ಪಿಸಿಕೊಂಡವರು ಅಂತ ತಿಳಿದು ಬಂದಿದೆ. ವೀಸಾ ಅವಧಿ ಮುಗಿದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ನಿರಾಶ್ರಿತರ ಕೇಂದ್ರದಲ್ಲಿದ್ದರು ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ  ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಭಾರತದಲ್ಲಿರುವಷ್ಟು ವಿಶೇಷ, ವಿಚಿತ್ರ ಸಂಪ್ರದಾಯ ಆಚರಣೆಗಳು ಬೇರೆ ಎಲ್ಲಿಯೂ ನೀವು ನೋಡಲು ಸಾಧ್ಯವಾಗುವುದಿಲ್ಲ. ಕೆಲವೊಂದು ನಮ್ಮ ಊಹೆಗೂ ಮೀರಿರುವ ಅಚ್ಚರಿಗಳು, ಕುತೂಹಲಗಳಿಗೂ ಈ ದೇವಾಲಯಗಳೂ ಕಾರಣವಾಗುತ್ತದೆ. ತಮಿಳುನಾಡಿನಲ್ಲಿ ದೇವಾಲಯಗಳ ಸಂಖ್ಯೆಗೆ ಕಡಿಮೆ ಇಲ್ಲ. ಅತೀ ಹೆಚ್ಚು ದೇವಾಲಯಗಳಿರುವುದು ತಮಿಳುನಾಡಿನಲ್ಲಿಯೇ. ಏಲಿಯನ್‌ಗಳ ಕುರಿತು ಭಾರತದ ಇತಿಹಾಸದಲ್ಲಿಯೂ ಉಲ್ಲೇಖಗಳಿರುವುದನ್ನು ನೋಡಬಹುದು. ಅದರೆ ತಮಿಳುನಾಡಿನಲ್ಲಿ ಏಲಿಯನ್‌ಗೆ ದೇವಾಲಯವೇ ಇದೆ. ಹಾಗಾದ್ರೆ ಈ ದೇವಾಲಯ ಎಲ್ಲಿದೆ? ಯಾವ ಕಾರಣಕ್ಕೆ ನಿರ್ಮಿಸಲಾಗಿದೆ? ತಮಿಳುನಾಡಿನ ಸೇಲಂನಲ್ಲಿ ಲೋಕನಾಥನ್ ಎಂಬಾತ ಈ ಏಲಿಯನ್ ದೇವಾಲಯ ನಿರ್ಮಿಸಿದ್ದಾರೆ. ಮಲ್ಲಮೂಪ್ಪಂಪಟ್ಟಿಯ ರಾಮಗೌಂಡನೂರಿನ ನಿವಾಸಿ ಲೋಕನಾಥನ್ ಎಂಬ ವ್ಯಕ್ತಿ ಇದನ್ನು ನಿರ್ಮಿಸಿದ್ದಾನೆ ಎಂದು ತಿಳಿದುಬಂದಿದೆ. ಅವರು ಶ್ರೀ ಶಿವ ಕೈಲಾಸ ದೇವಾಲಯವನ್ನು ನಿರ್ಮಿಸಲು ಬಯಸಿದ್ದರು, ಅದಕ್ಕಾಗಿ ಅವರು ಎರಡು ವರ್ಷಗಳ ಹಿಂದೆ ನಿರ್ಮಾಣವನ್ನು ಪ್ರಾರಂಭಿಸಿದರು. ಆದರೆ ಲಿಂಗ ಕೆತ್ತೆನೆ ಕಾರ್ಯ ಇನ್ನೂ ಪ್ರಕ್ರಿಯೆಯಲ್ಲಿದೆ, ಅದನ್ನು ನೆಲ ಅಂತಸ್ತಿನಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ. ಆದರೆ ಏಲಿಯನ್ ಮುಖ ಹೋಲುವ ಪ್ರತಿಮೆಯನ್ನೂ ಸಹ ಸ್ಥಾಪಿಸಲಾಗಿದೆ. ನೆಲಮಾಳಿಗೆಯಲ್ಲಿ ಬೇರೆ ಬೇರೆ…

Read More

ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಲು ಅಮೆರಿಕಾ ಷಡ್ಯಂತ್ರ ಕಾರಣ ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಆರೋಪ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಶುರುವಾದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದು 500ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಭಾರತದಲ್ಲಿ ರಾಜಾಶ್ರಯ ಪಡೆದಿರುವ ಹಸೀನಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಬಾಂಗ್ಲಾದಲ್ಲಿ ಅರಾಜಕತೆ ಸೃಷ್ಟಿಯಾಗಲು ಹಾಗೂ ಪ್ರಧಾನಿ ಸ್ಥಾನದಿಂದ ತಾವು ಕೆಳಗಿಳಿಯಲು ಅಮೆರಿಕಾ ಷಡ್ಯಂತ್ರವೇ ಕಾರಣ ಎಂದಿದ್ದಾರೆ. ಎಕನಾಮಿಕ್‌ ಟೈಮ್ಸ್‌ಗೆ ಪ್ರತಿಕ್ರಿಯಿಸಿರೋ ಶೇಕ್‌ ಹಸೀನಾ, ನಾನು ಸೇಂಟ್​​ ಮಾರ್ಟಿನ್​ ದ್ವೀಪವನ್ನು ಬಿಟ್ಟುಕೊಟ್ಟಿದ್ದರೆ ಮತ್ತು ಬಂಗಾಳಕೊಲ್ಲಿಯ ಮೇಲೆ ಅಮೆರಿಕದ ಹಿಡಿತಕ್ಕೆ ಅವಕಾಶ ನೀಡಿದ್ದರೆ ನಾನು ಅಧಿಕಾರದಲ್ಲಿ ಉಳಿಯಬಹುದಿತ್ತು ಎಂದಿದ್ದಾರೆ. ಜೊತೆಗೆ . ನಾನು ದೇಶದಲ್ಲಿಯೇ ಉಳಿದಿದ್ದರೇ ಮತ್ತಷ್ಟು ಹಿಂಸಾಚಾರ ನಡೆಯುತ್ತಿತ್ತು. ಆದ್ದರಿಂದ ರಾಜೀನಾಮೆ ನೀಡಿದೆ ಎಂದು  ಹಸೀನಾ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ: ತಾಲೂಕಿನಲ್ಲಿ ಪ್ರಮುಖ ಬೆಳೆಯಾಗಿರುವಂತಹ ಶೇಂಗಾ ಬೆಳೆಗೆ ಸದ್ಯ ಕಾಡಂದಿಗಳ ಕಾಟ ಹೆಚ್ಚಾಗಿ ಬೆಳೆಯನ್ನು ನಾಶ ಮಾಡುತ್ತಿವೆ ಎಂದು  ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ಹೇಳಿದ್ದಾರೆ. ಗುಡ್ಲಹಳ್ಳಿ ಸರ್ವೆ ನಂಬರ್ 105ರಲ್ಲಿ ಪೂಜಾರಪ್ಪ ಅವರು ಶೇಂಗಾ ಬೆಳೆಯನ್ನು ಬೆಳೆದಿದ್ದು ಶುಕ್ರವಾರ ಮತ್ತು ಶನಿವಾರ ರಾತ್ರಿ ಕಾಡಂದಿಗಳು ಹೊಲಕ್ಕೆ ನುಗ್ಗಿ ಬೆಳೆಯನ್ನು ನಾಶ ಮಾಡಿವೆ. ಈ ಬಗ್ಗೆ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದ್ದು, ಅವರು ಇದು ಅರಣ್ಯ ಇಲಾಖೆಗೆ ಸಂಬಂಧಿಸಿದ ಪ್ರಕರಣವಾಗಿದೆ ಎಂದು ತಿಳಿಸಿದ್ದಾರೆ. ಅರಣ್ಯ ಇಲಾಖೆಯವರಿಗೆ ದೂರವಾಣಿ ಮೂಲಕ ಮಾಹಿತಿ ತಿಳಿಸಿದರೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಮಾಹಿತಿ ನೀಡಿದರೆ 15 ಸಾವಿರದಷ್ಟು ಪರಿಹಾರ ಬರುವುದು ಎಂದು ತಿಳಿಸಿದ್ದಾರೆ. ಈ ಬೆಳೆಗೆ ಲಕ್ಷಾಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದು ಪರಿಹಾರದ ಮೊತ್ತವನ್ನು 50 ಸಾವಿರದಿಂದ 1 ಲಕ್ಷದವರೆಗೂ ಹೆಚ್ಚಿಸಬೇಕೆಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ…

Read More

ಮಂಡ್ಯ: ರಾಜ್ಯ ಸರಕಾರ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಇದು ದೊಡ್ಡ ಅನಾಹುತ. 19ನೇ ಕ್ರಸ್ಟ್ ಗೇಟ್ ತೆರೆದುಕೊಂಡು ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಒಳ್ಳೆಯ ಮಳೆಯಾಗಿ ಜಲಾಶಯ ತುಂಬಿತ್ತು. ಈ ನೀರನ್ನೇ ನಂಬಿಕೊಂಡಿದ್ದ ರೈತರಿಗೆ ತೊಂದರೆ ಆಗಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು. 70 ವರ್ಷಗಳ‌ ಹಿಂದೆಯೇ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ನಾರಾಯಣಪುರ, ಆಲಮಟ್ಟಿ ಅಣೆಕಟ್ಟುಗಳಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸಲಾಗಿದೆ. ತುಂಗಭದ್ರಾ ಅಣೆಕಟ್ಟೆಯಲ್ಲಿ ಸ್ಟಾಪ್ ಲಾಕ್…

Read More

ಶಿರಸಿ: ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 35 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ಹಂಪನಕಟ್ಟಾ ಲೈಟ್ ಹೌಸ್ ಹಿಲ್ ರಸ್ತೆಯ ಬಿ.ಐ.ಮೊಹಮ್ಮದ್‌ ರಫೀಕ್ ವಂಚನೆಗೊಳಗಾದ ವ್ಯಕ್ತಿಯಾಗಿದ್ದು, ತಾಲ್ಲೂಕಿನ ಹುಲೇಕಲ್ ಸಮೀಪದ ಹೆಂಚರಟಾದ ಅಬ್ದುಲ್ ಮತಿನ‌್ ಅಬ್ದುಲ್ ಗಫಾರ ಸಾಬ್, ಅಬ್ದುಲ್ ರೆಹಮಾನ್‌ ಅಬ್ದುಲ್ ಗಫಾರ್‌ ಸಾಬ್ ಹಾಗೂ ನಾಝೀಯಾ ಅಬ್ದುಲ್ ಮತೀನ್ ವಂಚನೆ ಎಸಗಿದ ಆರೋಪಿಗಳಾಗಿದ್ದಾರೆ. ಈ ಮೂವರು ರಫೀಕ್ ಗೆ  ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ 35  ಲಕ್ಷ ರೂ. ಪಡೆದು, ಅಂಗಡಿ ಕೊಡಿಸದೇ, ಪಡೆದ ಹಣವನ್ನು ಹಿಂದಿರುಗಿಸದೇ ಮೋಸ ಮಾಡಿದ್ದಾರೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ನವದೆಹಲಿ: ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದ ಹನ್ನೊಂದು ಬಾಂಗ್ಲಾದೇಶಿ ಪ್ರಜೆಗಳ ಬಂಧಿಸಲಾಗಿದೆ ಎಂದು ಗಡಿ ಭದ್ರತಾ ಪಡೆ BSF ಭಾನುವಾರ ತಿಳಿಸಿದೆ. ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಮೇಘಾಲಯದ ಅಂತರರಾಷ್ಟ್ರೀಯ ಗಡಿಯ ಮೂಲಕ ಭಾರತಕ್ಕೆ ನುಸುಳಲು ನುಸುಳುಕೋರರು ಯತ್ನಿಸಿದ್ದರು. ಸದ್ಯ ಅವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ರಾಜ್ಯ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ. ಭಾರತಕ್ಕೆ ನುಸುಳುತ್ತಿದ್ದ 11 ಬಾಂಗ್ಲಾದೇಶಿ ಪ್ರಜೆಗಳನ್ನು ಗಡಿಯಲ್ಲಿ ಬಂಧಿಸಲಾಗಿದೆ. ಪಶ್ಚಿಮ ಬಂಗಾಳ ಮತ್ತು ತ್ರಿಪುರಾ ಗಡಿಯಿಂದ ತಲಾ ಇಬ್ಬರನ್ನು ಬಂಧಿಸಲಾಗಿದ್ದು, ಮೇಘಾಲಯ ಗಡಿಯಿಂದ ಏಳು ಮಂದಿಯನ್ನು ಬಂಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಭತ್ತ ನಾಟಿ ಮಾಡಿ ಕೃಷಿಕರೊಂದಿಗೆ ಆತ್ಮೀಯವಾಗಿ ಬೆರೆತರು. ಸಚಿವರಿಗೆ  ನಿಖಿಲ್ ಕುಮಾರಸ್ವಾಮಿ ಸಾಥ್ ನೀಡಿದರು. ಇದೇ ವೇಳೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ,  2018ರಲ್ಲಿ ನಾನು ಸಿಎಂ ಆಗಿದ್ದಾಗ ಇದೇ ಸೀತಾಪುರ ಗ್ರಾಮದಲ್ಲೇ ಭತ್ತ ನಾಟಿ ಮಾಡಿದ್ದೆ. ಅಂದು ಕೂಡ ಆಗಸ್ಟ್ 11ರಂದೇ ಭತ್ತದ ನಾಟಿ ಮಾಡಿದ್ದೆ. ಈಗ ಅದೇ ದಿನಾಂಕದಲ್ಲಿ ಮತ್ತೆ ಭತ್ತ ನಾಟಿ ಮಾಡಿದೇನೆ. ಇದು ಕಾಕತಾಳೀಯ ಅನ್ನಿಸುತ್ತಿದೆ. ಈಗ ಕೇಂದ್ರ ಸಚಿವನಾಗಿ, ಮಂಡ್ಯ ಜಿಲ್ಲೆ ಸಂಸದನಾಗಿ ಭತ್ತ ನಾಟಿ ಮಾಡಿದ್ದೇನೆ. ಇದಕ್ಕಿಂತ ಮಹಾಭಾಗ್ಯ ಏನಿದೆ? ಎಂದರು. ರೈತ ಮಹಿಳೆಯರ ಜತೆಗೂಡಿ ಭತ್ತದ ನಾಟಿ ಮಾಡಿದ್ದೇನೆ. ಈ ಭಾಗದ ರೈತರು ನಾಯಕರು ಮತ್ತೆ ನಾಟಿಗೆ ಬನ್ನಿ ಎಂದು ಪ್ರೀತಿಯಿಂದ ಕರೆದರು. ಸಿಎಂ ಆಗಿದ್ದಾಗ ಮೊದಲ ಬಾರಿಗೆ ನಾಟಿ ಮಾಡಿದ್ದೆ. ಈಗ ಕೇಂದ್ರದ ಮಂತ್ರಿ ಆಗಿದ್ದೇನೆ. ರೈತರಿಗೆ ಆತ್ಮಸೈರ್ಯ ತುಂಬಲು ಈ…

Read More

ಬೀದರ್: ಜಿಲ್ಲೆಯ ಹುಲಸೂರಿನಲ್ಲಿ  ಪತ್ರಕರ್ತರೆಂದು ಹೇಳಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತರಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಹುಲಸೂರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಬೇಲೂರು ಗ್ರಾಮದ ನಿವಾಸಿ ಸುಧಾಕರ ಸೂಯ೯ವಂಶಿ ಹಾಗೂ ಬೇಟಬಾಲಕುಂದಾ ಗ್ರಾಮದ ನಿವಾಸಿ ವಿಶ್ವನಾಥ ಸಂಗಪ್ಪ ಕರಸಂಗ್ ವಿರುದ್ಧ ಪ್ರಕರಣ ದಾಖಲಾಗಿದೆ. ಪತ್ರಕರ್ತರ ಹೆಸರಿನಲ್ಲಿ ಬೆದರಿಕೆ ಆರೋಪ ಇಬ್ಬರ ವಿರುದ್ಧ ಹುಲಸೂರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೌರ್ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಪತ್ರಕರ್ತರ ಹೆಸರಿನಲ್ಲಿ ಈ ಇಬ್ಬರು ಆರೋಪಿಗಳು ಶಾಲೆಯ ದೃಶ್ಯವನ್ನು ಸೆರೆ ಹಿಡಿದು ಹಾಗೂ ಪೋಟೊ ತೆಗೆದು ಶಿಕ್ಷಕರಿಗೆ ಹೆದರಿಸುತ್ತಿದ್ದರು. ಶಾಲೆಯ ಸುರಕ್ಷಿತೆ ಮತ್ತು ಶಾಂತಿಗೆ ಭಂಗವನ್ನುಂಟು ಮಾಡುವ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದು ಶಿಕ್ಷಕ ಸುಧಾಕರ ಮಹೇಂದ್ರಕರ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಅಲ್ಲದೆ ಆರೋಪಿತರು ಬೇಲೂರು ಗೌರ್ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ತಾವು ಪತ್ರಕರ್ತರೆಂದು ಹೇಳಿ ಜನರಿಗೆ ಹೆದರಿಸಿ ಸಮಾಜದಲ್ಲಿ ಶಾಂತಿಗೆ ಭಂಗ ತರುವಂತಹ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ ಎಂದು…

Read More