Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಮೇಗಳಪಾಳ್ಯ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕೇಂದ್ರೀಯ ಪಠ್ಯಕ್ರಮದ ಎಡಿಪೈ ಶಾಲೆಯ ಕಟ್ಟಡ ನಿರ್ಮಾಣದ ಭೂಮಿಪೂಜೆ ಭಾನುವಾರದಂದು ನೆರವೇರಿತು. ನೇಕಾರ ಎಜುಕೇಷನ್ ಟ್ರಸ್ಟ್ ನ ವತಿಯಿಂದ ಸ್ಥಾಪನೆಗೊಳುತ್ತಿರುವಈ ಶಾಲೆಯು ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಬೇಕು ಎಂದು ನ್ಯಾಯಾಧೀಶರಾದ ಜೆ.ಎ.ಮಂಜುನಾಥ ತಿಳಿಸಿದರು. ಶಾಲೆ ಕಟ್ಟುವುದು ಸುಲಭ ಆದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಟ್ಟು ಉತ್ತಮ ಜ್ಞಾನವಂತರನ್ನಾಗಿಸುವುದು ಶ್ರಮದ ವಿಷಯ. ಈ ಕಾರ್ಯದದಲ್ಲಿ ಟ್ರಸ್ಟಿನ ಎಲ್ಲಾ ಪದಾಧಿಕಾರಿಗಳು ಯಶಸನ್ನು ಸಾಧಿಸಲಿ ಎಂದು ಹಾರೈಸುತ್ತೇನೆ ಎಂದರು. ಶ್ರೀ ಚೌಡೇಶ್ವರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಉಮೇಶ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಸಂಸ್ಥೆಗಳನ್ನು ಕಟ್ಟಿಬೆಳೆಸುವುದು ಸುಲಭದ ಮಾತಲ್ಲ. ಗೆಳೆಯರು ಆ ಕಾರ್ಯಕ್ಕೆ ಕೈಹಾಕಿ ಶ್ರಮಿಸುತ್ತಿದ್ದಾರೆ. ನಮ್ಮ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು. ಎಡಿಫೈ ಶಿಕ್ಷಣ ಸಂಸ್ಥೆಯ ಅಭಿಷೇಕ್ ಶರ್ಮ ಮಾತಾನಾಡಿ ಈ ಪ್ರದೇಶವು ಶಾಲೆಯ ರಚನೆಗೆ ಸೂಕ್ತವಾಗಿದ್ದು, ಪರಿಸರದ ನಡುವೆ ವಿದ್ಯಾರ್ಜನೆ ಉತ್ತಮವಾಗಿರುತ್ತದೆ ಎಂದರು. ನೇಕಾರ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ…
ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 91 86185 14684ಈ ನಂಬರ್ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು…
ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ನಿನ್ನೆ (ಆಗಸ್ಟ್ 09) ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ದುನಿಯಾ ವಿಜಯ್ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ಇದು. ಬಿಡುಗಡೆ ಆದ ಮೊದಲ ದಿನ ಮಿಶ್ರ ಪ್ರತಿಕ್ರಿಯೆಗಳನ್ನು ಈ ಸಿನಿಮಾ ಪಡೆದುಕೊಂಡಿದೆ. ಪ್ರೇಕ್ಷಕರು ‘ಸಲಗ’ದೊಂದಿಗೆ ಹೋಲಿಸಿ ನೋಡುತ್ತಿದ್ದಾರೆ. ಪತ್ರಿಕೆಗಳಲ್ಲಿ ನೆಗೆಟಿವ್ ವಿಮರ್ಶೆಗಳು ಪ್ರಕಟವಾಗಿವೆ. ಇದರ ನಡುವೆಯೂ ಉತ್ತಮ ಮೊತ್ತವನ್ನೇ ‘ಭೀಮ’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕಲೆ ಹಾಕಿದೆ. ಸುಮಾರು 150 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಸುಮಾರು 9 ರಿಂದ 10 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಮೊದಲ ದಿನ 9-10 ಕೋಟಿ ಗಳಿಕೆ ಮಾಡಿರುವುದು ‘ಭೀಮ’ ಪಾಲಿಗೆ ಬಹಳ ಒಳ್ಳೆಯ ಮೊತ್ತವೇ ಆಗಿದೆ. ‘ಭೀಮ’ ಸಿನಿಮಾ, ಡ್ರಗ್ಸ್ ವಿರುದ್ಧ ನಿಲವು ತಳೆದ ಲೋಕಲ್ ರೌಡಿಯೊಬ್ಬನ ಕತೆ ಒಳಗೊಂಡಿದೆ. ಬೆಂಗಳೂರಿನಲ್ಲಿ ಗಾಂಜಾ ಹೇಗೆ ಪ್ರಸಾರ ಆಗುತ್ತಿದೆ, ಹೇಗೆ ಯುವಕರು ನಶೆಯ ಜಾಲದೊಳಕ್ಕೆ ಬೀಳುತ್ತಿದ್ದಾರೆ ಎಂಬುದನ್ನು…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲು ಪಾಲಾಪಾಗಿದೆ. ಇನ್ನು ದರ್ಶನ್ನನ್ನು ಹೊರತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.ವಿಜಯಲಕ್ಷ್ಮಿ ಪತಿಗಾಗಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ಮತ್ತೊಂದೆಡೆ ಅಭಿಮಾನಿಗಳು ಕೂಡ ಹಲವೆಡೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಸಹ ಮಾಡಿಸುತ್ತಿದ್ದಾರೆ. ನಟ ದರ್ಶನ್ ಯಾವಾಗ ಬಿಡುಗಡೆ ಆಗುತ್ತಾರೆ ಎಂದು ದೇವಸ್ಥಾನದ ಅರ್ಚಕರೇ ದೈವದ ಮೊರೆ ಹೋಗಿರುವ ಘಟನೆ ನಡೆದಿದೆ. ಹಾಗಾದರೆ ದೈವ ನುಡಿದ ಭವಿಷ್ಯ ಏನು ಎಂದು ಇಲ್ಲಿ ತಿಳಿಯಿರಿ. ಬೆಂಗಳೂರಿನ ಬಾಪೂಜಿನಗರದ ಶಾರದಾಂಬೆ ದೇವಸ್ಥಾನದ ಅರ್ಚಕರ ಮಗಳ ಮೂಲಕ ಕುಟ್ಟೊ ಕಲ್ಲು ಮೂಲವಾಗಿ ದರ್ಶನ್ ಬಗ್ಗೆ ಓಂ ಶಕ್ತಿ ಶಾರದಾಂಬೆ ದೇವಿ ಭವಿಷ್ಯ ನುಡಿದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸದ್ಯ ಓಂ ಶಕ್ತಿ ಶಾರದಾಂಬೆ ಬಿಸುವ ಕಲ್ಲು ಮೂಲಕ ಭವಿಷ್ಯ ನುಡಿದ ದೈವ, ದರ್ಶನ್ ಸದ್ಯ ಮೀನ ರಾಶಿಯಲ್ಲಿದ್ದಾರೆ. ಯಾವುದಕ್ಕೂ ಗ್ರಹಚಾರ ಸರಿಯಾಗಿಲ್ಲ. ಗುರುಬಲ ಇಲ್ಲದೇ ಇರುವುದರಿಂದ ಕೆಟ್ಟ ದೆಸೆ ನಡೆಯುತ್ತಿದೆ, ಶನಿ ಬಂದು ಕೂತಿದ್ದಾನೆ…
ಭಾರತದಲ್ಲಿ ರಮ್ ಮದ್ಯವನ್ನು ಬಡವರ ಮದ್ಯ ಎಂದೇ ಕರೆಯುತ್ತಾರೆ. ಇಲ್ಲೊಂದು ಬೆಲ್ಲದ ರಮ್ ಕುಡಿಯಲು ಸಿದ್ಧವಾಗಿದೆ. ಭಾರತದಲ್ಲಿ ಹಲವು ಬ್ರ್ಯಾಂಡ್ ರಮ್ಗಳಿವೆ. ಇದೀಗ ಭಾರತ ತನ್ನದೇ ಆದ ವಿಶೇಷ ರಮ್ ತಯಾರಿಸಿದೆ. ಇದು ನಮ್ಮ ಮೈಸೂರಿನ ನಂಜನಗೂಡಿನಲ್ಲಿ ಉತ್ಪಾದನೆಯಾಗಿದೆ ಅನ್ನೋದು ಮತ್ತೊಂದು ವಿಶೇಷ. ಬರೋಬ್ಬರಿ 8 ವರ್ಷಗಳ ಸತತ ಪರಿಶ್ರಮದ ಮೂಲಕ ಇದೀಗ ಕನ್ನಡ ಹೆಸರಿನ ಅಂತಾರಾಷ್ಟ್ರೀಯ ಬ್ರ್ಯಾಂಡ್ ಹುಲಿ ರಮ್ ಬಿಡುಗಡೆಗೆ ಸಜ್ಜಾಗಿದೆ. ಇದೇ ಮೊದಲ ಭಾರಿಗೆ ಭಾರತ ಬೆಲ್ಲದ ಡಿಸ್ಟಿಲ್ಲರ್ ಮೂಲಕ ಈ ಮದ್ಯ ತಯಾರಿಸಲಾಗಿದೆ. ನಂಜನಗೂಡಿನಲ್ಲಿ ಈ ವಿಶೇಷ ಮದ್ಯ ತಯಾರಾಗಿದೆ. ಆಗಸ್ಟ್ 15ರಂದು ಈ ಮದ್ಯ ದೇಶಾದ್ಯಂತ ಮಾರುಕಟ್ಟೆಗೆ ಪ್ರವೇಶಿಸಲಿದೆ. ಈ ಕುರಿತು ಅರುಣ್ ಅರಸ್ ಹಾಗೂ ಚಂದ್ರಾ ಎಸ್ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹುಲಿ ರಮ್ ಭಾರತದಲ್ಲಿ ಉತ್ಪಾದನೆಯಾದ ರಮ್. ಇದು ಹುಲಿ ಕನ್ನಡ ಪದ. ಭಾರತದಲ್ಲಿ ಮೊದಲ ಬಾರಿಗೆ ತಯಾರಾದ ಮೈಕ್ರೋ ಡಿಸ್ಟಲರಿಯಲ್ಲಿ ತಯಾರಿಸಿದ ವಿಶ್ವದರ್ಜೆಯ ಬೆಲ್ಲದ ರಮ್ ಇದಾಗಿದೆ. ನಮ್ಮ…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ & ಗ್ಯಾಂಗ್ ಜೈಲುಪಾಲಾಗಿದೆ. ಇನ್ನು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಮಹತ್ವದ ಸಾಕ್ಷ್ಯಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ. ದರ್ಶನ್ನ್ನು ಹೊರತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪಯತ್ನಗಳನ್ನು ಮಾಡುತ್ತಿದ್ದಾರೆ. ಇದೀಗ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲುಪಾಲಾಗಿ ಒಂದೂವರೇ ತಿಂಗಳು ಕಳೆದಿದ್ದು, ಚಾರ್ಜ್ಶೀಟ್ ಕೂಡ ಸಲ್ಲಿಕೆಯಾಗಿಲ್ಲ. ಆದರೆ ದರ್ಶನ್ಗೆ ಜಾಮೀನು ಸಿಗುತ್ತಾ.. ಇಲ್ಲವಾ? ಅನ್ನುವುದು ಇದೀಗ ತುಂಬಾ ಪ್ರಮುಖವಾಗಿದ್ದು, ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಲೇ ಇದೆ. ಹಿರಿಯ ಪೊಲೀಸ್ (ನಿವೃತ್ತ ಪೊಲೀಸ್) ಅಧಿಕಾರಿ ಲೋಕೇಶ್ವರ್ ಎಂಬುವವರು ಹೇಳುವ ಪ್ರಕಾರ, “ಈ ಪ್ರಕರಣ ಒಂದು ವಿಶೇಷ ಪ್ರಕರಣ ಆಗಿದೆ. ಆದ್ದರಿಂದ ದರ್ಶನ್ಗೆ ಜಾಮೀನು ಸಿಗುವುದು ತುಂಬಾ ಕಷ್ಟ,” ಎಂದು ಹೇಳಿದ್ದಾರೆ. ಇನ್ನು ಈಗಾಲೇ ಪ್ರಕರಣದ ಪ್ರಮುಖ ಸಾಕ್ಷಿಗಳನ್ನು ಪೊಲೀಸರು ಕೆಲಹಾಕಿದ್ದು, ಇವುಗಳು ಬಲಿಷ್ಠವಾಗಿವೆ. ಟೆಕ್ನಿಕಲ್ ಎವಿಡೆನ್ಸ್ ಕೂಡ ಪ್ರಬಲವಾಗಿವೆ ಎನ್ನಲಾಗುತ್ತಿದೆ. ನಟ ದರ್ಶನ್ ಈ…
ನವದೆಹಲಿ: ರಷ್ಯಾದ ರಕ್ಷಣಾ ಸಚಿವಾಲಯವು ಈ ವರ್ಷದ ಏಪ್ರಿಲ್ನಿಂದ ಭಾರತ ಸೇರಿದಂತೆ ಇತರೆ ದೇಶಗಳ ನಾಗರಿಕರನ್ನು ಸೇನೆಗೆ ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಿದೆ ಎಂದು ಅಲ್ಲಿನ ರಾಯಭಾರ ಕಚೇರಿ ಮಾಹಿತಿ ನೀಡಿದೆ. ಉಕ್ರೇನ್ ನಲ್ಲಿ ರಷ್ಯಾ ನಡೆಸುತ್ತಿರುವ ವಿಶೇಷ ಸೇನಾ ಕಾರ್ಯಾಚರಣೆಯಲ್ಲಿ ಭಾರತೀಯ ಪ್ರಜೆಗಳು ಮೃತಪಟ್ಟಿರುವುದು ದುರದೃಷ್ಟಕರ ಎಂದು ರಷ್ಯಾದ ರಾಯಭಾರ ಕಚೇರಿ ಸಂತಾಪ ಸೂಚಿಸಿದೆ. ಅಲ್ಲದೇ ರಷ್ಯಾದ ಸಶಸ್ತ್ರ ಪಡೆಗಳಿಗೆ ಭಾರತೀಯರ ನೇಮಕಾತಿಯನ್ನು ನಿಲ್ಲಿಸಲಾಗಿದೆ ಎಂದು ಹೇಳಿದೆ. ರಷ್ಯಾ ಸೇನೆಗೆ ಸೇರಲು ಸ್ವಯಂಪ್ರೇರಣೆಯಿಂದ ಒಪ್ಪಂದಕ್ಕೆ ಸಹಿ ಹಾಕಿರುವ ಮತ್ತು ಭಾರತಕ್ಕೆ ಮರಳಲು ಬಯಸುವ ಭಾರತೀಯ ಪ್ರಜೆಗಳ ಗುರುತಿಸುವಿಕೆ ಮತ್ತು ಬಿಡುಗಡೆಗೊಳಿಸುವಿಕೆಗೆ ಸಂಬಂಧಿಸಿ ಉಭಯ ದೇಶಗಳು ನಿಕಟ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ರಾಯಭಾರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ 69 ಭಾರತೀಯ ಪ್ರಜೆಗಳು ರಷ್ಯಾದ ಸೇನೆಯಿಂದ ಬಿಡುಗಡೆಗಾಗಿ ಕಾಯುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಶುಕ್ರವಾರ ಲೋಕಸಭೆಯಲ್ಲಿ ತಿಳಿಸಿದ್ದಾರೆ. ಭಾರತೀಯರನ್ನು ಶೀಘ್ರವೇ ಬಿಡುಗಡೆಗೊಳಿಸುವ ಕುರಿತು ರಷ್ಯಾ ಭರವಸೆ ನೀಡಿದೆ ಎಂದು ಮೋದಿ…
ನವದೆಹಲಿ: ಮಾಜಿ ವಿದೇಶಾಂಗ ಸಚಿವ ಕೆ.ನಟ್ವರ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಹಿನ್ನೆಲೆ ದೆಹಲಿ ಬಳಿಯ ಗುರುಗ್ರಾಮ್ ನ ಮೇದಾಂತ ಆಸ್ಪತ್ರೆಯಲ್ಲಿ ಕಳೆದೆರಡು ವಾರಗಳಿಂದ ದಾಖಲಾಗಿದ್ದ ಅವರು ಕೊನೆಯುಸಿರೆಳೆದಿದ್ದಾರೆ. 1931ರಲ್ಲಿ ಸಿಂಗ್ ಅವರು ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ಜನಿಸಿದ್ದರು. ಅವರು ವೃತ್ತಿ ರಾಜತಾಂತ್ರಿಕರಾಗಿ ಕಾರ್ಯನಿರ್ವಹಿಸಿದ್ದರು. ನಟ್ವರ್ ಸಿಂಗ್ ವಿದೇಶಿ ವ್ಯವಹಾರಗಳ ಸೂಕ್ಷ್ಮ ವಿಷಯಗಳ ಬಗ್ಗೆ ಬರೆಯುತ್ತಿದ್ದ ಲೇಖನಗಳಿಂದಲೂ ಜನಪ್ರಿಯತೆ ಗಳಿಸಿದ್ದರು. ತಮ್ಮ ವಿಶಿಷ್ಟ ವೃತ್ತಿಜೀವನದ ಅವಧಿಯಲ್ಲಿ ಅವರು ಅನೇಕ ಗೌರವಗಳಿಗೆ ಪಾತ್ರರಾಗಿದ್ದರು. ಅವರ ಸೇವೆಗಾಗಿ 1984ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಅನುಭವಿ ರಾಜಕಾರಣಿ, ಕೆ.ನಟ್ವರ್ ಸಿಂಗ್ ಅವರು ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ–1 ಸರ್ಕಾರದ 2004-05ರ ಅವಧಿಯಲ್ಲಿ ಭಾರತದ ವಿದೇಶಾಂಗ ಸಚಿವರಾಗಿದ್ದರು. 1966ರಿಂದ 1971ರವರೆಗೆ ಪ್ರಧಾನಿ ಇಂದಿರಾ ಗಾಂಧಿಯವರ ಅವಧಿಯಲ್ಲಿ ಸಿಂಗ್ ಪಾಕಿಸ್ತಾನಕ್ಕೆ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದು ಹೋದ ಪರಿಣಾಮ ಅಪಾರ ನೀರು ಡ್ಯಾಂನಿಂದ ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭಾನುವಾರ ಮಧ್ಯಾಹ್ನ ಹೊಸಪೇಟೆಗೆ ಆಗಮಿಸಲಿದ್ದಾರೆ. ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದಿರುವ ಡಿಕೆಶಿ, ಇದಕ್ಕೂ ಮೊದಲು ಚೈನ್ ಲಿಂಕ್ ಮುರಿದಿರುವ ಕುರಿತು ಅಧಿಕಾರಿಗಳಿಂದ ವರದಿ ಕೇಳಿದ್ದಾರೆ. ಕೊಪ್ಪಳ–ಹೊಸಪೇಟೆ ಗಡಿಯ ಮುನಿರಾಬಾದ್ನಲ್ಲಿ ತುಂಗಭದ್ರಾ ಡ್ಯಾಂ ಇದೆ. ಶನಿವಾರ ಮಧ್ಯರಾತ್ರಿ ಡ್ಯಾಂನ ಕ್ರೆಸ್ಟ್ ಗೇಟ್ ನಂಬರ್ 19ರ ಚೈನ್ ಲಿಂಕ್ ಮುರಿದು ಹೋಗಿದೆ. ಆದ್ದರಿಂದ ಜಲಾಶಯದ ನೀರು ವ್ಯರ್ಥವಾಗಿ ನದಿಗೆ ಹರಿದು ಹೋಗುತ್ತಿದೆ. ಸದ್ಯ ಜಲಾಶಯದಿಂದ ತುಂಗಭದ್ರಾ ನದಿಗೆ 1.35 ಲಕ್ಷ ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ. ಗೇಟ್ ನಂಬರ್ 19ರ ಮೇಲೆ ಒತ್ತಡ ಹೆಚ್ಚಾಗಿದ್ದು, ಈ ಒಂದು ಗೇಟ್ನಿಂದಲೇ 35 ಸಾವಿರ ಕ್ಯುಸೆಕ್ಗೂ ಅಧಿಕ ನೀರು ನದಿಗೆ ಹೋಗುತ್ತಿದೆ. ಗೇಟ್ ಮುರಿದಿರುವ ಪರಿಣಾಮ ಭಾನುವಾರ…
ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಹಾಗೂ ತುಳುನಾಡಿ ನಟಿ ಸೋನಲ್ ಮೊಂಥೆರೋ ಅವರ ವಿವಾಹ ಕಾರ್ಯಕ್ರಮ ಹಿಂದೂ ಸಂಪ್ರದಾಯದಂತೆ ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಇಂದು ನಡೆಯಿತು. ಈ ವಿವಾಹ ಕಾರ್ಯಕ್ರಮದಲ್ಲಿ ಸಿನಿತಾರೆಯರ ದಂಡೇ ಪಾಲ್ಗೊಂಡಿತ್ತು. ಅಲ್ಲದೇ ನಾನಾ ಪಕ್ಷಗಳ ರಾಜಕೀಯ ನಾಯಕರು ಕೂಡ ಭಾಗಿಯಾಗಿದ್ದರು. ಹಿರಿಯ ನಟಿ ಗಿರಿಜಾ ಲೋಕೇಶ್, ಸುಧಾರಾಣಿ, ಮಾಳವಿಕಾ ಹಾಗೂ ಅವಿನಾಶ್, ಯೋಗಿ ದ್ವಾರಕೀಶ್, ರಾಕ್ ಲೈನ್ ವೆಂಕಟೇಶ್ ವಿಶೇಷವಾಗಿ ಟಾಲಿವುಡ್ನ ನಟ ಜಗಪತಿ ಬಾಬು ಈ ಜೋಡಿಗೆ ಶುಭ ಹಾರೈಸಿದರು. ಖ್ಯಾತ ಗಾಯಕ ವಿಜಯ್ ಪ್ರಕಾಶ್ , ರವಿಚಂದ್ರನ್ ಸಹೋದರ ಬಾಲಾಜಿ, ಸಾಧು ಕೋಕಿಲ, ತನಿಷಾ ಕುಪ್ಪಂಡ, ನಿರೂಪಕ ನಿರಂಜನ್ ದೇಶಪಾಂಡೆ, ನಟ–ನಿರ್ದೇಶಕ ರಘು ರಾಮ್, ಗೋಲ್ಡನ್ ಸ್ಟಾರ್ ಗಣೇಶ್, ತಾರಾ ಅನುರಾಧಾ, ವಿನೋದ್ ರಾಜ್, ಮೇಘನಾ ಗಾಂವ್ಕರ್ ಸೇರಿದಂತೆ ಹಲವಾರು ಗಣ್ಯರು ಆಗಮಿಸಿ ವಧುವರರಿಗೆ ಶುಭ ಹಾರೈಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…