Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ತುರುವೇಕೆರೆ: ಪ್ರತಿಯೊಬ್ಬರ ಜೀವನದಲ್ಲಿ ವಿದ್ಯಾರ್ಥಿ ಜೀವನ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರಸ್ತುತ ಸಂದರ್ಭದಲ್ಲಿ ನಾವು ಕೇವಲ ಒಂದು ಭಾಷೆಗೆ ಸೀಮಿತವಾಗಿರದೆ, ಹಲವು ಭಾಷಾಜ್ಞಾನವನ್ನು ಬೆಳೆಸಿಕೊಳ್ಳಬೇಕು. ಇದು ಮುಂದಿನ ವೃತ್ತಿ ಬದುಕಲ್ಲಿ ಬಹು ಮುಖ್ಯವಾದ ಪರಿಣಾಮವನ್ನು ಬೀರುತ್ತದೆ ಎಂದು ಗ್ಲೋಬಲ್ ಎಂಬಸ್ಸಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಗಂಗಾಧರ್ ದೇವರ ಮನೆ ತಿಳಿಸಿದರು. ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ಜಯಣ್ಣ ಕನ್ವೆನ್ಷನ್ ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ನಡೆದ ಸುಜ್ಞಾನ ನಿಧಿ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಶೀನಪ್ಪ ಎಂ. ಮಾತನಾಡಿ, ರಾಜ್ಯದಲ್ಲಿ 96,854 ವಿದ್ಯಾರ್ಥಿಗಳಿಗೆ ಇದುವರೆಗೆ ಶಿಷ್ಯವೇತನವನ್ನು ಪಡೆಯುತ್ತಿದ್ದು 114 ಕೋಟಿ ಮೊತ್ತ ಇದುವರೆಗೆ ವಿತರಿಸಲಾಗಿದೆ. ವಿದ್ಯಾರ್ಥಿಗಳು ಈ ಮೊತ್ತವನ್ನು ಉತ್ತಮ ರೀತಿಯಲ್ಲಿ ವಿನಿಯೋಗಿಸುವಂತೆ ಮಾರ್ಗದರ್ಶನ ನೀಡಿದರು. ತುರುವೇಕೆರೆಯ ಹಿರಿಯ ವಕೀಲರಾದ ಶ್ರೀಧನಪಾಲ್ ರವರು ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಮಂಜೂರಾತಿ ಪತ್ರ ವಿತರಿಸಿ, ವಿದ್ಯಾರ್ಥಿ ಜೀವನ ಅಮೂಲ್ಯವಾದದು ತಂದೆ…
ಪಾವಗಡ: ಅಪರಿಚಿತ ಮಹಿಳೆಯೊಬ್ಬರು ಪಾವಗಡ ಠಾಣೆ ಬಳಿ ಬಂದಿದ್ದು, ಅವರಿಗೆ ಊರು ಮತ್ತು ವಿಳಾಸ ಗೊತ್ತಿಲ್ಲ. ಮಾತನಾಡಲು ಬರುತ್ತಿಲ್ಲ. ಹೀಗಾಗಿ ಯಾವ ಊರು ಅಂತ ಬರೆಯಿರಿ ಎಂದಾಗ ಧಾರವಾಡ ಎಂದು ಬರೆದಿದ್ದಾರೆ. ಹೀಗಾಗಿ ಈ ಮಹಿಳೆಯ ಪರಿಚಯವಿದ್ದವರು ಪಾವಗಡ ಪೊಲೀಸ್ ಠಾಣೆ ಪಿ.ಐ.ಸುರೇಶ ಎಂ.ಆರ್. ಅವರ ಮೊಬೈಲ್ ನಂಬರ್ 9480802941 ಅಥವಾ 9611750273ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಮೂಡಾ ಪ್ರಕರಣವನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದರೆ, ಕಾನೂನು ಹೋರಾಟ ನಡೆಸುತ್ತೇವೆ. ಕಾನೂನು ಹೋರಾಟ ಪ್ರಾರಂಭವಾದ ಬಳಿಕ ಮುಂದಿನ ಬೆಳವಣಿಗೆ ಏನೆಂಬುದನ್ನು ಗಮನಿಸಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು ಎಂದು ಹೇಳಿದರು. ಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕು ಕೂಡ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಮುಂದಾಗಿಲ್ಲ. ಮೂಡಾ ವಿಚಾರದಲ್ಲಿ ತುರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ. ಜುಲೈ 26ರಂದು ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ಮನವಿ ಕೊಡುತ್ತಾರೆ. ಅದೇ ದಿನ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯುತ್ತಾರೆ. ಮುಖ್ಯ ಕಾರ್ಯದರ್ಶಿಯವರು ಹೋಗಿ ಸ್ಪಷ್ಟನೆ ನೀಡಿ ಬಂದಿದ್ದಾರೆ. ಅದೇದಿನ ಸಂಜೆ ಸಿಎಂ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ರಾಜ್ಯಪಾಲರು ಹೇಳಬೇಕಲ್ಲವೇ ಎಂದು…
ರಾಮನಗರ: ಚೆನ್ನಪಟ್ಟಣ ಉಪಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಚುನಾವಣಾ ಸಿದ್ಧತಾ ಭಾಗವಾಗಿ ಸಿ.ಪಿ.ಯೋಗೇಶ್ವರ್ ಬೆಂಬಲಿಗರು ಸಮಾನ ಮನಸ್ಕರರ ಸಮಾವೇಶ ಆಯೋಜಿಸಿದ್ದರು. ಇದೀಗ ಹೈಕಮಾಂಡ್ ಕರೆಯ ಹಿನ್ನೆಲೆ ಸಿ.ಪಿ.ಯೋಗೇಶ್ವರ್ ದೆಹಲಿಗೆ ತೆರಳಲಿದ್ದು, ಈ ಹಿನ್ನೆಲೆಯಲ್ಲಿ ಸಮಾನ ಮನಸ್ಕರರ ಸಮಾವೇಶ ಕೊನೆಯ ಕ್ಷಣಗಳಲ್ಲಿ ರದ್ದಾಗಿದೆ ಎಂದು ತಿಳಿದು ಬಂದಿದೆ. ರಾಮನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ‘ನಮ್ಮ ಶಾಸಕ ನಮ್ಮ ಹಕ್ಕು’ ಹೆಸರಲ್ಲಿ ಸಮಾನ ಮನಸ್ಕರರ ಹಾಗೂ ಯೋಗೇಶ್ವರ್ ಅಭಿಮಾನಿ ಬಳಗದಿಂದ ಸಮಾವೇಶ ಆಯೋಜಿಸಲಾಗಿತ್ತು. ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೆ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಲಾಗಿತ್ತು. ಚೆನ್ನಪಟ್ಟಣ ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಸಿ.ಪಿ.ಯೋಗೇಶ್ವರ್ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ದೋಸ್ತಿಗಳ ಮುಖಾಮುಖಿ ಸ್ಪರ್ಧೆಯಾದ್ರೆ, ಕಾಂಗ್ರೆಸ್ ಗೆ ಲಾಭವಾಗುವ ಲೆಕ್ಕಾಚಾರಗಳು ಕೇಳಿ ಬಂದಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೀದರ್: ಶನಿವಾರ ಸಂಜೆ ಬೀದರ್ ಜಿಲ್ಲೆಯಲ್ಲಿ ಲಘುಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ತೀವ್ರತೆ ದಾಖಲಾಗಿದೆ. ಹುಮನಾಬಾದ್ ತಾಲ್ಲೂಕಿನ ಸೀತಾಳಗೇರಾ, ತಾಳಮಡಗಿ ಹಾಗೂ ಬೀದರ್ ತಾಲ್ಲೂಕಿನ ಸಿರಕಟನಳ್ಳಿ, ರಂಜೋಳಖೇಣಿ ಗ್ರಾಮದಲ್ಲಿ ಶನಿವಾರ ಸಂಜೆ ಭೂಕಂಪನವಾಗಿದೆ. ಇದು ಲಘು ಭೂಕಂಪನವಾಗಿದ್ದು, ಯಾವುದೇ ಹಾನಿ ಉಂಟಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತೋವಿನಕೆರೆಯ ಪ್ರಾಥಮಿಕ ಪಾಠಶಾಲೆ 2024 ನೇ ಸಾಲಿನ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷೆ ಹಾಗೂ ಸದಸ್ಯರನ್ನು ಪೋಷಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಮಂಜುನಾಥ್ TA. ಅವರನ್ನು ಅಧ್ಯಕ್ಷರಾಗಿ ಮತ್ತು ವಸಂತ ಅವರನ್ನು ಉಪಾಧ್ಯಕ್ಷೆಯಾಗಿ ಆಯ್ಕೆ ಮಾಡಲಾಯಿತು. ಎಸ್ ಡಿ ಎಂ ಸಿ ರಚನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ವಿ.ನಟರಾಜುರವರ ಮಾರ್ಗದರ್ಶನದಲ್ಲಿ ಸಿ.ಎನ್. ದುರ್ಗಾ ಹೋಬಳಿಯ ಶಿಕ್ಷಣ ಸಂಯೋಜಕರಾದ ಕಾಮರಾಜು ಬಿ.ಆರ್. ಅವರ ನೇತೃತ್ವದಲ್ಲಿ ಹರ್ಷ ಟಿ.ಡಿ ಸಿಆರ್ಪಿ ತೋವಿನಕೆರೆ ಹಾಗೂ ಮುಖ್ಯ ಶಿಕ್ಷಕರಾದ ಸಿದ್ದಪ್ಪ ಅವರು ಎಸ್ ಡಿ ಎಂ ಸಿ ರಚನೆಯನ್ನು ಕೈಗೊಳ್ಳಲಾಯಿತು. ಸಂದರ್ಭದಲ್ಲಿ ಸದಸ್ಯರುಗಳಾದ ಸಿದ್ದಲಿಂಗಯ್ಯ ಬೋರಪ್ಪನಟ್ಟಿ, ಕರೀಂ ಸಾಬ್, ಸೂರೆನಹಳ್ಳಿ ಸಿದ್ದರಾಜು, ಜೋನಿಗರಲ್ಲಿ, ರವಿ, ಸಿಎಸ್ ಜಿ ಪಾಳ್ಯ ಶ್ರೀನಿವಾಸ್ ಎನ್, ತೋವಿನಕೆರೆ ಹನುಮಂತ್ ರಾಜು ಟಿವಿ, ತೋವಿನಕೆರೆ ಅನುಸೂಯ, ಬಂಡೆಹಳ್ಳಿ ರಾಧಾ, ಸುರೇನಹಳ್ಳಿ ಶಾರದಮ್ಮ, ತೋವಿನಕೆರೆ ನೇತ್ರಾವತಿ, ತೋವಿನಕೆರೆ ಶ್ವೇತಾ, ತೋವಿನಕೆರೆ ಲಕ್ಷ್ಮಿ ದೇವಿ, ತೋವಿನಕೆರೆ ಶಬಾನಾ ಬಾನು, ತೋವಿನಕೆರೆ ಬಸವರಾಜು, ಗೊಲ್ಲರಹಟ್ಟಿ…
ಪಾವಗಡ: ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಸುಪ್ರಸಿದ್ಧಿ ಹೊಂದಿರುವ ದೇವಸ್ಥಾನ ತುಮಕೂರು ಜಿಲ್ಲೆಯ ಪಾವಗಡ ಶನಿ ಮಹಾತ್ಮನ ಕ್ಷೇತ್ರ. ಗಡಿಭಾಗದಲ್ಲಿರುವ ಪಾವಗಡದ ಶನೇಶ್ವರ ದೇವಸ್ಥಾನ. ಇಲ್ಲಿನ ವಿಶೇಷವೇನೆಂದರೆ ಇಲ್ಲಿಗೆ ಬರುವ ಭಕ್ತಾದಿಗಳು ಬಹುತೇಕ ಉತ್ತರ ಕರ್ನಾಟಕ ಸೀಮಾಂಧ್ರ ಮತ್ತು ತೆಲಂಗಾಣದಿಂದ ಬರುತ್ತಾರೆ, ಇಲ್ಲಿಗೆ ಬರುವಂತಹ ಭಕ್ತಾದಿಗಳು ಶನಿ ದೋಷ ನಿವಾರಣೆಗೆ ದೇವಸ್ಥಾನದಲ್ಲಿ ಸರ್ವ ಸೇವೆ, ನವಗ್ರಹ ಪೂಜೆ ತೈಲಾಭಿಷೇಕ ಸೇರಿದಂತೆ ಮತ್ತಿತರ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳುತ್ತಾರೆ. ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ವಿವಿಧಡೆಯಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಶನೇಶ್ವರಸ್ವಾಮಿಯ ದರ್ಶನಕ್ಕೆ ಬರುತ್ತಾರೆ. ಸಾಮಾನ್ಯ ಜನರು, ರಾಜಕಾರಣಿಗಳು, ಸಿನಿಮಾ ತಾರೆಯರು, ಉದ್ಯಮಿಗಳು. ಸರ್ಕಾರಿ ಅಧಿಕಾರಿಗಳು ಎಲ್ಲ ವರ್ಗದವರು ಶನೇಶ್ವರ ಸ್ವಾಮಿ ದರ್ಶನ ಪಡೆಯುತ್ತಾರೆ. ಉದ್ಯೋಗ ಆಕಾಂಕ್ಷಿಗಳು, ಮಕ್ಕಳಿಲ್ಲದವರು, ಮದುವೆ ಯೋಗ ಇಲ್ಲದವರು ಸ್ವಾಮಿಯ ದೇವಾಲಯಕ್ಕೆ ಹರಕೆ ಹೊತ್ತು ಬರುತ್ತಾರೆ. 3 ತಿಂಗಳಲ್ಲಿ ಫಲ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಜನರಲ್ಲಿದೆ. ವಿಶಿಷ್ಟ ಶಕ್ತಿದೇವತೆ ಸೀತಲಾದೇವಿಯು ಸಹ ದೇವಸ್ಥಾನದ ಪ್ರಾಂಗಣದ ಸನ್ನಿಧಿಯಲ್ಲಿದೆ. ಸ್ವಾಮಿಯ ದರ್ಶನಕ್ಕೆ ಭಕ್ತರ…
ಮೈಸೂರು: ಆ ಬಂಡೆಯಿಂದಲೇ ಸಿದ್ದರಾಮಯ್ಯನವರಿಗೆ ಸಮಸ್ಯೆ ಇರುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿಕೆಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ ಬಂಡೆ ಸಿಎಂ ಸಿದ್ದರಾಮಯ್ಯನವರ ಜೊತೆಗಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ನಿಖಿಲ್, ನಿನ್ನೆ ಸಿದ್ದರಾಮಯ್ಯನವರ ಜೊತೆ ಈ ಬಂಡೆ ಇದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಆದರೆ ಆ ಬಂಡೆಯಿಂದಲೇ ಸಿದ್ದರಾಮಯ್ಯನವರಿಗೆ ಸಮಸ್ಯೆ. ಬಂಡೆಯೇ ಸಿದ್ದರಾಮಯ್ಯನವರಿಗೆ ಪ್ರಾಬ್ಲಂ ಎಂದು ಟಾಂಗ್ ನೀಡಿದರು. ಅದೇ ಬಂಡೆಯಿಂದ ತನಗೆ ಸಮಸ್ಯೆಯಾಗುತ್ತಿದೆ ಎಂಬುದು ಸ್ವತಃ ಸಿದ್ದರಾಮಣ್ಣನವರಿಗೂ ಗೊತ್ತು. ತನ್ನ ಜೊತೆಗಿರುವ ನಾಯಕರೇ ತನಗೆ ತೊಂದರೆ ಕೊಡುತ್ತಿದ್ದಾರೆ. ಯಾವ ಯಾವ ಕಾಂಗ್ರೆಸ್ ನಾಯಕರು ತನಗೆ ಸಮಸ್ಯೆಯಾಗಿದ್ದಾರೆ ಎಂಬುದು ಕೂಡ ಅವರಿಗೆ ತಿಳಿದಿದೆ ಎಂದು ನಿಖಿಲ್ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಳಗಾವಿ: ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ನೇತೃತ್ವದ ಪೊಲೀಸರ ತಂಡ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ಶನಿವಾರ ದಾಳಿ ನಡೆಸಿದ್ದು, ಜೈಲು ನಿಯಮದ ಪ್ರಕಾರ ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆದುಕೊಂಡರು. 260 ಪೊಲೀಸರು ದಾಳಿ ಏಕ ಕಾಲದಲ್ಲಿ ದಾಳಿ ನಡೆಸಿದ್ದು, ಈ ವೇಳೆ ಜೈಲಿನ ಒಳಗೆ ತಂಬಾಕು ಪಾಕೇಟ್, ಸಿಗರೇಟ್, ಮೂರು ಚಾಕುಗಳು, ಸ್ಮಾಲ್ ಹೀಟರ್ ವೈರ್ ಬಂಡಲ್, ಎಲೆಕ್ಟ್ರಿಕಲ್ ಒಲೆ ಸೇರಿ ಮತ್ತಿತರ ವಸ್ತುಗಳು ಪತ್ತೆಯಾಗಿದ್ದು, ಪತ್ತೆಯಾದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದರು. ನಸುಕಿನ ಜಾವ 5 ಗಂಟೆಗೆ ತಂಡದೊಂದಿಗೆ ಆಗಮಿಸಿದ ಕಮಿಷನರ್ ಸಂಪೂರ್ಣ ಪರಿಶೀಲನೆ ನಡೆಸಿದರು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಮುಂದಾಳತ್ವದಲ್ಲಿ ಗಂಟೆಗಟ್ಟಲೇ ಪರಿಶೀಲನೆ ನಡೆಸಿದ ಪೊಲೀಸರು ಮೆಟಲ್ ಡಿಟೆಕ್ಟರ್, ಶ್ವಾನದಳಗಳ ಮೂಲಕ ತಪಾಸಣೆ ನಡೆಸಿದರು. ಜೈಲಿನಲ್ಲಿ ನಿಷೇಧಿತ ಅಕ್ರಮ ವಸ್ತುಗಳ ಬಳಕೆ ಬಗ್ಗೆ ದೂರುಗಳು ಬಂದ ಹಿನ್ನೆಲೆ ಜೈಲಿನ ಮೇಲೆ ದಾಳಿ ನಡೆಸಿರುವುದಾಗಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದರಲ್ಲದೇ…
ವಯನಾಡ್: ಭೀಕರ ಭೂಕುಸಿತದಿಂದ 300ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಜನ ನೆಲೆ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಯನಾಡಿಗೆ ಶನಿವಾರ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ, ದುರಂತ ಸ್ಥಳವಾದ ಚೂರಲ್ ಮಲ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಸಮೀಕ್ಷೆ ವೇಳೆ ಪ್ರಧಾನಿ ಅವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಬಿಜೆಪಿ ಸಂಸದ ಸುರೇಶ್ ಗೋಪಿ ಇದ್ದರು. ವೈಮಾನಿಕ ಸಮೀಕ್ಷೆ ನಂತರ ಕಲ್ಪೆಟ್ಟಾದಲ್ಲಿರುವ ಎಸ್ ಕೆಎಂಜೆ ಹೈಯರ್ ಸೆಕೆಂಡರಿ ಶಾಲೆ ಸಮೀಪ ಹೆಲಿಕಾಪ್ಟರ್ ಬಂದಿಳಿಯಲಿದ್ದು, ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಕೆಲವು ಭೂಕುಸಿತ ಪೀಡಿತ ಪ್ರದೇಶಗಳಿಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…