Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಮೈಸೂರು: ನನ್ನ ವಿರುದ್ಧದ ಆರೋಪಗಳನ್ನು ಎದುರಿಸುತ್ತೇನೆ, ರಾಜಕೀಯ ಹಾಗೂ ಕಾನೂನಿನ ಮೂಲಕ ಪ್ರತ್ಯುತ್ತರ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ ತಮ್ಮ ನಿವಾಸದ ಬಳಿ ಪತ್ರಕರ್ತರ ಜೊತೆಗೆ ಅವರು ಮಾತನಾಡಿದರು. ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಹಲವು ವಿಚಾರಗಳನ್ನು ಬಿಚ್ಚಿಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರಗಳನ್ನು ಜನರ ಮುಂದೆ ಇಡುತ್ತೇನೆ ಎಂದು ಅವರು ತಿಳಿಸಿದರು. ವಿಜಯೇಂದ್ರ, ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ ಏನೇನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಕೆಲವು ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಮಾತನಾಡುತ್ತೇನೆ. ಇನ್ನೂ ಕೆಲವು ಹಗರಣಗಳು ಬಾಕಿ ಇವೆ ಎಂದು ಸಿಎಂ ಹೇಳಿದರು. ಬಿಜೆಪಿ- ಜೆಡಿಎಸ್ನವರು ಪಾದಯಾತ್ರೆ ಮಾಡಿದ್ದಕ್ಕೆ ನಾವು ಜನಾಂದೋಲನ ಸಮಾವೇಶ ಮಾಡಿದೆವು. ಅವರು ಮಾಡುತ್ತಿರುವ ಆರೋಪ ಸುಳ್ಳು ಎಂದು ತಿಳಿಸಲು ಜನಾಂದೋಲನ ಸಮಾವೇಶ ನಡೆಸಿದೆವು. ನನಗೆ ಮಸಿ ಬಳಿಯಲು ವಿರೋಧ ಪಕ್ಷದವರು ಪ್ರಯತ್ನ ಪಡುತ್ತಿದ್ದಾರೆ. ರಾಜ್ಯದ ಜನರ ಆಶೀರ್ವಾದದಿಂದ ಬಂದ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ಶಿವಮೊಗ್ಗ: ಬಿ.ವೈ.ವಿಜಯೇಂದ್ರ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂಬ ಯತ್ನಾಳ್ ಆರೋಪಕ್ಕೆ ಬಿಜೆಪಿಯವರು ಮೊದಲು ಉತ್ತರ ಕೊಡಲಿ ಅಂತ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸಹ ಹೋರಾಟ ಮಾಡುತ್ತೇವೆ. ನ್ಯಾಯಾಂಗ ಹೋರಾಟ ಮಾಡುತ್ತೇವೆ. ಬಿಜೆಪಿಯವರ ವಿರುದ್ದ ಜನರ ಬಳಿ ಹೋಗುತ್ತೇವೆ. ಅವರ ಕಾಲದಲ್ಲಿ 25 -– 30 ಹಗರಣ ನಡೆದಿವೆ ಅದನ್ನು ಜನರ ಮುಂದೆ ತಿಳಿಸುತ್ತೇವೆ ಎಂದು ಅವರು ಹೇಳಿದರು. ಮುಡಾ ಹಗರಣ ನಡೆದಾಗ ಬಿಜೆಪಿಯವರೇ ಅಧ್ಯಕ್ಷರಾಗಿದ್ದರು. ಅವರ ಪಕ್ಷದ ಶಾಸಕರೇ ಇದ್ದರು. ಮುರುಗೇಶ ನಿರಾಣಿ, ಕುಮಾರಸ್ವಾಮಿ ವಿರುದ್ದ ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು. ಆ ಪ್ರಕರಣ ಏನಾಯ್ತು? ಕೋವಿಡ್ ವೇಳೆ ಎರಡು ಸಾವಿರ ಕೋಟಿ ಹಗರಣ ಆಗಿದೆ. ಯಡಿಯೂರಪ್ಪ, ಸುಧಾಕರ್ ಹಗರಣ ಮಾಡಿದ್ದಾರೆ ಎಂದು ಯತ್ನಾಳ್ ಆರೋಪ ಮಾಡಿದ್ದಾರೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ. ಬಿಜೆಪಿಯವರು ವಿನಾಃ ಕಾರಣ ಹೋರಾಟ ಮಾಡುತ್ತಿದ್ದಾರೆ. 40…
ಬೆಂಗಳೂರು: ರೇಣುಕಾಸ್ವಾಮಿ ಕೇಸ್ ಗೆ ಸಂಬಂಧಿಸಿದಂತೆ ಇಂದು ನಟ ಚಿಕ್ಕಣ್ಣ ಹೇಳಿಕೆ ದಾಖಲು ಮಾಡಲಾಗುತ್ತಿದೆಯಂತೆ ಹತ್ಯೆಯ ದಿನ ಸ್ಪೋನಿ ಬ್ರೂಕ್ ಪಬ್ ನಲ್ಲಿ ನಟ ದರ್ಶನ್, ಪ್ರದೋಷ್ ಜೊತೆಗೆ ಚಿಕ್ಕಣ್ಣ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ನಂತರ ಚಿಕ್ಕಣ್ಣ ತನ್ನ ಮನೆಗೆ ಹೋಗಿದ್ದರು. ಈ ಬಗ್ಗೆ ಪೊಲೀಸರ ಮುಂದೆ ಚಿಕ್ಕಣ್ಣ ಹೇಳಿಕೆ ದಾಖಲು ಮಾಡಿದ್ದರು, ಇದೀಗ ಕೋರ್ಟ್ ನಲ್ಲಿ ಜಡ್ಜ್ ಮುಂದೆ ಚಿಕ್ಕಣ್ಣ ಹೇಳಿಕೆ ದಾಖಲಿಸಲಿದ್ದಾರೆ. ಆ ದಿನ ಪಾರ್ಟಿ ಮುಗಿಸಿ ಚಿಕ್ಕಣ್ಣ ಸೀದಾ ತನ್ನ ಮನೆಗೆ ತೆರಳಿದ್ದರು. ದರ್ಶನ್ ಜೊತೆಗೆ ಚಿಕ್ಕಣ್ಣ ಶೆಡ್ ಗೆ ಹೋಗಿರಲಿಲ್ಲ. ಹಾಗಾಗಿ ಈ ಕೇಸ್ ನಲ್ಲಿ ಚಿಕ್ಕಣ್ಣ ಅವರ ಪಾತ್ರವಿರಲಿಲ್ಲ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಶಾಲೆಯ ಕಾರ್ಯಕರ್ತೆ ಹಾಗೂ ಸಿಬ್ಬಂದಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆಯನ್ನು ಬಡಿಸಿ, ಪ್ರಾರ್ಥನೆ ಮಾಡಿಸಿ ವಿಡಿಯೋ ಮಾಡಿಸಿಕೊಂಡ ಬಳಿಕ ಕೈಯಿಂದ ಮೊಟ್ಟೆಯನ್ನು ಕಿತ್ತುಕೊಂಡ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮಕ್ಕಳ ಕೈಯಿಂದ ಅಂಗನವಾಡಿ ಸಿಬ್ಬಂದಿ ಮೊಟ್ಟೆಯನ್ನು ಕಿತ್ತುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಗುಂಡೂರು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತು ಮಾಡಲಾಗಿದೆ. ಮಕ್ಕಳು ಆಸೆಯಿಂದ ಮೊಟ್ಟೆ ತಿನ್ನಲು ತಟ್ಟೆಗೆ ಕೈ ಹಾಕಿದಾಗ ಅಡುಗೆ ಸಿಬ್ಬಂದಿ ಮಕ್ಕಳ ಕೈಯಿಂದ ಮೊಟ್ಟೆ ಕಸಿದುಕೊಳ್ಳುತ್ತಿದ್ದಾರೆ. ಈ ವೇಳೆ ಮಕ್ಕಳು ನಿರಾಸೆಯಿಂದ ನೋಡುತ್ತಿರುವ ದೃಶ್ಯ ಸಾರ್ವಜನಿಕರ ಮನಕರಗಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿತ್ರದುರ್ಗ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮ, ಅದು ಹಿಂದೂ ಧರ್ಮದ ಭಾಗವಲ್ಲ ಎಂದು ಸಾಣೇಹಳ್ಳಿ ತರಳಬಾಳು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಹೊಳಲ್ಕೆರೆಯಲ್ಲಿ ನಡೆದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ 30ನೇ ಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ ಭಾಗ ಲಿಂಗಾಯತ ಧರ್ಮ ಎನ್ನುವುದು ಸರಿಯಲ್ಲ ಎಂದರು ಹಿಂದೂ ಧರ್ಮದಲ್ಲಿರುವ ವೇದ, ಪುರಾಣಗಳು, ಶಾಸ್ತ್ರಗಳು, ಲಿಂಗಾಯತ ಧರ್ಮದ ಮೂಲಗಳಲ್ಲ ಎಂದಿರುವ ಅವರು, ಹಿಂದೂ ಎನ್ನುವುದು ಅನೈತಿಕ, ಅನಾಚಾರಗಳಿಂದ ಒಳಗೊಂಡಿದೆ. ಇಂಥ ಧರ್ಮವನ್ನು ಶರಣರು ನಿರಾಕರಿಸಿ ಜಾತ್ಯತೀತ ತತ್ವಗಳನ್ನು ಒಳಗೊಂಡ ಲಿಂಗಾಯತ ಧರ್ಮವನ್ನು ಒಪ್ಪಿಕೊಂಡಿದ್ದಾರೆ. ವಚನಗಳಲ್ಲಿ ಲಿಂಗಾಯತ ಧರ್ಮದ ಸಾರವನ್ನು ನಾಡಿಗೆ ಬಿತ್ತರಿಸಿ ಸಾಕ್ಷಾತ್ಕರಿಸಿದ್ದಾರೆ. ಹಾಗಾಗಿ ಯಾವತ್ತೂ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವೇ ಹೊರತು ಹಿಂದೂ ಧರ್ಮಕ್ಕೆ ಸಂಬಂಧಿಸಿಲ್ಲ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿಕ್ಕಬಳ್ಳಾಪುರ: ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೆ ಸ್ಫೋಟಕ ಭವಿಷ್ಯ ಹೇಳಿದ್ದು, ದೇಶದಲ್ಲಿ ಜಲಕಂಟಕ, ಅಗ್ನಿ ಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆಯಂತೆ! ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಕೋಡಿ ಮಠದ ಶ್ರೀಗಳು, ಶ್ರಾವಣ ಮಾಸದಲ್ಲಿ ದೇಶದಲ್ಲಿ ಅವಘಡಗಳು ಸಂಭವಿಸಲಿವೆ ಎಂದು ಆಘಾತಕಾರಿಯಾದ ಭವಿಷ್ಯ ನುಡಿದಿದ್ದಾರೆ. ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣುಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆಯಂತೆ, ರಾಜ್ಯದಲ್ಲಿ ಅತಿವೃಷ್ಟಿಯಾಗುವ ಸಾಧ್ಯತೆ ಇದೆಯಂತೆ. ಕೋಧಿನಾಮ ಸಂವತ್ಸರ ಆರಂಭವಾಗಿದ್ದು, ದೇಶದಲ್ಲಿ ಜಲ, ಅಗ್ನಿ, ವಾಯು ಕಂಟಕಗಳು ಹೆಚ್ಚಾಗಲಿವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
‘ಡ್ರೆಸ್ಸಿಂಗ್ ನ ಸಂತೋಷವು ಒಂದು ಕಲೆ’ ಎಂದು ಬರೆದುಕೊಂಡು ಬಾಲಿವುಡ್ ನ ಖ್ಯಾತ ನಟಿ ಫೋಟೋವೊಂದನ್ನು ಶೇರ್ ಮಾಡಿದ್ದು, ಈ ಫೋಟೋ ಇದೀಗ ಇಂಟರ್ ನೆಟ್ ನಲ್ಲಿ ಬೆಂಕಿ ಹಚ್ಚಿದೆ. ನಟಿ ನಿಖಿತಾ ಘಾಗ್ ಈ ಫೋಟೋವನ್ನು ಹಂಚಿಕೊಂಡಿದ್ದು, ಸದಾ ಫ್ಯಾಷನ್ ಲೋಕದಲ್ಲಿ ಸುದ್ದಿಯಾಗುತ್ತಿರುವ ಇವರು ಅರೆಬೆತ್ತಲೆ ಫ್ಯಾಶನ್ ನಿಂದ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಅವರು ಶೇರ್ ಮಾಡಿರುವ ಫೋಟೋದಲ್ಲಿ ಟಾಪ್ ಲೆಸ್ ಫೋಟೋಶೂಟ್ ನಲ್ಲಿ, ಅರ್ಧ–ಬೀಜ್ ಟ್ರೆಂಚ್ ಕೋಟ್ ಧರಿಸಿ ಬೆತ್ತಲೆ ದೇಹವನ್ನು ಪ್ರದರ್ಶಿಸಿದ್ದಾರೆ. ಈ ಫೋಟೋಗೆ ಸಾಕಷ್ಟು ಜನರು ತಮ್ಮದೇ ರೀತಿಯಲ್ಲಿ ಕಾಮೆಂಟ್ ಹಾಕಿದ್ದಾರೆ. ಕೆಲವರು ನಟಿಯ ಲುಕ್ ನ್ನು ಹೊಗಳಿದ್ದಾರೆ. ಇನ್ನು ಕೆಲವರು ಬೆತ್ತಲೆ ಪ್ರದರ್ಶನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂದಹಾಗೆ, ನಟಿ ನಿಖಿತಾ ಘಾಗ್ ಅವರು ಬೆಕಾಬೂ 3, ಫುಹ್ ಸೆ ಫ್ಯಾಂಟಸಿ, ನಶಿಲಾ ಹುಸ್ನ್ ಮತ್ತು ಹಲವು ಸಿನಿಮಾ ಸೇರಿದಂತೆ ಸಿರೀಸ್ ನಲ್ಲಿ ಕೆಲಸ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಮೈಸೂರು: ಕಳೆದ 7 ದಿನಗಳಿಂದಲೂ ಆರಂಭವಾಗಿರುವ ಬಿಜೆಪಿ—ಜೆಡಿಎಸ್ ದೋಸ್ತಿಗಳ ಪಾದಯಾತ್ರೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಬೃಹತ್ ಸಮಾವೇಶದ ಮೂಲಕ ಅಂತ್ಯ ಕಾಣಲಿದೆ. ಕಾಂಗ್ರೆಸ್ ಜನಾಂದೋಲನ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಬಿಜೆಪಿ—ಜೆಡಿಎಸ್ ದೋಸ್ತಿಗಳ ಬೃಹತ್ ಸಮಾವೇಶ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ. ಇನ್ನೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಆಗರ್ವಾಲ್ ಕೂಡ ಆಗಮಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರಸ್ತೆಯಲ್ಲಿ ಕಸ ಎಸೆದದ್ದನ್ನು ಪ್ರಶ್ನಿಸಿದ ಮನೆ ಮಾಲಿಕನನ್ನು ಬಾಡಿಗೆದಾರ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಪ್ಪ(70) ಕೊಲೆಯಾದವರು. ತುಮಕೂರು ಜಿಲ್ಲೆ ಶಿರಾ ಮೂಲದ ಪುನೀತ್(24) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಸಿದ್ದಪ್ಪ ಅವರು ಹಿಮಾಲಯ ಡ್ರಗ್ಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಬಳಿಕ ಮಾದನಾಯಕನಹಳ್ಳಿಯಲ್ಲಿ ಮನೆ ಕಟ್ಟಿಕೊಂಡು ಕೆಲವು ಮನೆಗಳನ್ನು ಬಾಡಿಗೆಗೆ ನೀಡುತ್ತಿದ್ದರು. ಈ ಮನೆಯನ್ನು ಪುನೀತ್ ಮತ್ತು ಆತನ ತಾಯಿ ಬಾಡಿಗೆಗೆ ಪಡೆದುಕೊಂಡಿದ್ದರು ಎನ್ನಲಾಗಿದೆ. ಘಟನೆ ನಡೆದ ದಿನ ಸಿದ್ದಪ್ಪ ವಾಕಿಂಗ್ ಹೋಗಿ ಬರುತ್ತಿದ್ದರು. ಈ ವೇಳೆ ಪುನೀತ್ ಕಸ ತುಂಬಿದ್ದ ಕವರ್ ನ್ನು ರಸ್ತೆಯಲ್ಲೇ ಎಸೆದಿದ್ದು, ಗುಟ್ಕಾ ತಿಂದು ರಸ್ತೆಯಲ್ಲೇ ಉಗಿದಿದ್ದ. ಇದನ್ನು ನೋಡಿ ಕೋಪಗೊಂಡ ಸಿದ್ದಪ್ಪ ಆತನಿಗೆ ಬೈದಿದ್ದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿದ ಸಿದ್ದಪ್ಪ ಮನೆಗೆ ಹೋಗಿ ಮಚ್ಚು ತಂದಿದ್ದು, ಸಿದ್ದಪ್ಪ ಅವರ ಕತ್ತಿಗೆ ಮಚ್ಚಿನಿಂದ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ, ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ…
ನವದೆಹಲಿ: ಧೈರ್ಯವಿದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ನಪುಂಸಕನ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನಿಸುತ್ತಾನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯಾರ ಮಗನನ್ನು ಬೆಳೆಸಬೇಕು ಎಂಬುದನ್ನು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು ಹಾಗೂ ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್.. ಹುಷಾರ್ ಎಂದು ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟಿದ್ದಾರೆ. ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು ಕಷ್ಟವಾಗುತ್ತದೆ. ನಮ್ಮ ಕುಟುಂಬದ ವಿರುದ್ಧ ನೀನು ಏನೆಲ್ಲಾ ಸಂಚು ಮಾಡಿದೆ? ರೇವಣ್ಣ ಕುಟುಂಬ ಮುಗಿಸಲು ಏನು ಕುತಂತ್ರ ಮಾಡಿದೆ ಎನ್ನುವುದು ನನಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…