Author: admin

ಬೀದರ್: ಸಂಸದರಾದ ಸಾಗರ್ ಈಶ್ವರ ಖಂಡ್ರೆ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ಬೀದರ್ ಜಿಲ್ಲಾ ಭಾಲ್ಕಿ ಪಟ್ಟಣದಲ್ಲಿರುವ ರೈಲ್ವೆ ಗೇಟ್ ಬಳಿ ಟ್ರಾಫಿಕ್ ಸಮಸ್ಯೆಯಿಂದಾಗಿ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿದರಲ್ಲದೇ ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಮನವಿ ಮಾಡಿಕೊಂಡರು. ಸಂಸದರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಮಸ್ತೆ ಪರಿಹಾರಕ್ಕೆ ಶೀಘ್ರವೇ ಕ್ರಮಕೈಗೊಳ್ಳುವ ಭರವಸೆ ನೀಡಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತಿಪಟೂರು: ನಗರ ವ್ಯಾಪ್ತಿಯ 30ನೇ ವಾರ್ಡ್ ನ ಟಿ.ಎಲ್.ಪಾಳ್ಯದಲ್ಲಿ ತಲೆಮಾರುಗಳಿಂದ ವಾಸಿಸುತ್ತಿರುವ ನಾಗರಿಕರು ಸರಕಾರದಿಂದ ಹಕ್ಕು ಪತ್ರ ಸಿಗದೇ ಪರದಾಡುತ್ತಿರುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸುಮಾರು 120 ಮನೆಗಳಿರುವ ಟಿ.ಎಲ್.ಪಾಳ್ಯ ಗ್ರಾಮದಲ್ಲಿ ಸುಮಾರು 400 ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ವಾಸಿಸುತ್ತಿದ್ದು, ಕೂಲಿ ನಾಲಿ ಮಾಡಿ ಪುಟ್ಟದೊಂದು ಸೂರು ಕನಸು ಕಂಡು ಕಟ್ಟಿರುವ ಮನೆಗಳಿಗೆ ನಗರ ಸಭೆ ವತಿಯಿಂದ ಮೂರು ನಾಲ್ಕು ವರ್ಷದಿಂದ ಎನ್ ಓ ಸಿ ನೀಡದೆ, ಮನೆಗಳಿಗೆ ವಿದ್ಯುತ್ ಸಂಪರ್ಕ ಕೂಡ ನೀಡಿಲ್ಲ. ಇದರಿಂದಾಗಿ ಶಾಲಾ– ಕಾಲೇಜು ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಟಾರ್ಚ್ ಹಾಗೂ ಮೇಣದಬತ್ತಿ ಮೊರೆ ಹೋಗುವಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ . ಇನ್ನು ಟಿ.ಎಲ್. ಪಾಳ್ಯದ ವಾಸಿಗಳಿಗೆ ಕುಡಿಯಲು ಶುದ್ಧ ನೀರು ಸಿಗದೆ ಅಕ್ಕ ಪಕ್ಕದಲ್ಲಿ ಇರುವ ಬಡಾವಣೆಗಳಿಂದ ನೀರು ತರಬೇಕಾಗಿದೆ. ನಗರಸಭೆ ವತಿಯಿಂದ ಕೊರೆಸಿರುವ ಕೊಳವೆ ಬಾವಿಯಿಂದ ಬಳಸಲು ಯೋಗ್ಯವಲ್ಲದ ನೀರು ಸರಬರಾಜು ಆಗುತ್ತಿದ್ದು, ಇದನ್ನೇ ಕುಡಿದು ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದಲ್ಲಿ ವಾಸ ಮಾಡುತ್ತಿರುವ…

Read More

ಇಂದು ನವದೆಹಲಿಯಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ ಸಿಂಗ್ ಚೌಹಾಣ್ ರನ್ನು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಭೇಟಿ ಮಾಡಿ, ರಾಜ್ಯದಲ್ಲಿ ಉಂಡೆ ಕೊಬ್ಬರಿಗೆ ಸಂಬಂಧ ಪಟ್ಟಂತೆ ನೆಪೆಡ್ ಸಂಸ್ಥೆಯಿಂದ ಪಾವತಿಸಬೇಕಾದ ರೂ.೬೯೧ ಕೋಟಿ ಹಣವನ್ನು ರಾಜ್ಯದ ಸಂಬಂಧಪಟ್ಟ ಖರೀದಿ ಎಜೆನ್ಸಿಗಳಿಗೆ ಮರು ಪಾವತಿಸಲು ಮನವಿಯನ್ನು ಸಲ್ಲಿಸಿದರು. ಇದರಿಂದ ಕರ್ನಾಟಕ ರಾಜ್ಯದಲ್ಲಿ ತುಮಕೂರು, ಮಂಡ್ಯ, ಹಾಸನ, ಮೈಸೂರು, ಚಾಮರಾಜ ನಗರ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆಂಗು ಬೆಳೆಯುವ ರೈತರ ಹಿತಾಶಕ್ತಿ ಕಾಪಾಡಲು ಅನುಕೂಲವಾಗುತ್ತದೆಯೆಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಿಗೆ ಕೇಂದ್ರ ಸಚಿವ ಸೋಮಣ್ಣನವರು ಮನವರಿಕೆ ಮಾಡಿ ಕೊಟ್ಟಿದ್ದಾರೆ. ವಿಶೇಷವಾಗಿ ತುಮಕೂರು ಜಿಲ್ಲೆ ಹೆಚ್ಚಿನ ಪ್ರಮಾಣದಲ್ಲಿ ಉಂಡೆ ಕೊಬ್ಬರಿ ಉತ್ಪಾದಕ ಜಿಲ್ಲೆಯಾಗಿದ್ದು, ಈ ಜಿಲ್ಲೆಯ ರೈತರಿಗೆ ಸಹಾಯ ಮಾಡುವಂತೆ ಕೇಂದ್ರ ಸಚಿವರು ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ರಾಜ್ಯ ರೈಲ್ವೆ ಮತ್ತು ಜಲಶಕ್ತಿ ಖಾತೆಯ ರಾಜ್ಯ…

Read More

ತುಮಕೂರು: ಹಿರೇಹಳ್ಳಿಯ ಐಸಿಎಆರ್–ಕೃಷಿ ವಿಜ್ಞಾನ ಕೇಂದ್ರ (ಕೆವಿಕೆ) ವತಿಯಿಂದ ಹಲಸಿನ ಹಣ್ಣಿನ ನೇರ ಮಾರಾಟವನ್ನು ವಿಶೇಷ ಕಾರ್ಯಕ್ರಮವನ್ನು ಕ್ಯಾತಸಂದ್ರ ಜೆಎಎಸ್ ಟೋಲ್ ಪ್ಲಾಜಾದಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ತುಮಕೂರಿನ ರೈತರಿಗೆ ತಮ್ಮ ಹಲಸಿನ ಹಣ್ಣುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಅಮೂಲ್ಯವಾದ ವೇದಿಕೆಯನ್ನು ಒದಗಿಸಿತು, ಮಧ್ಯವರ್ತಿಗಳನ್ನು ತಪ್ಪಿಸಿ ಮತ್ತು ಅವರ ಆದಾಯವನ್ನು ಹೆಚ್ಚಿಸಿತು. ಕಾರ್ಯಕ್ರಮವನ್ನು ಕೆವಿಕೆ ಹಿರೇಹಳ್ಳಿಯ ಮುಖ್ಯಸ್ಥ ಡಾ.ಎನ್.ಲೋಗಾನಂದನ್, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ (ಐಐಎಚ್‌ಆರ್) ಪ್ರಧಾನ ವಿಜ್ಞಾನಿ ಡಾ.ಜಿ.ಕರುಣಾಕರನ್ ಮತ್ತು ಶ್ರೀಮತಿ ಶಾರದಮ್ಮ, ತುಮಕೂರು ತೋಟಗಾರಿಕೆ ಉಪನಿರ್ದೇಶಕರು (ಡಿಡಿಎಚ್) ಉದ್ಘಾಟಿಸಿದರು. ಈ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ‘ಸಿದ್ದು’ ಹಲಸಿನ ಹಣ್ಣನ್ನು ಕತ್ತರಿಸುವ ಮೂಲಕ ಗುರುತಿಸಲಾಯಿತು. ಇದು ರೈತರಿಂದ ಗ್ರಾಹಕರ ನೇರ ಉಪಕ್ರಮಗಳ ಮಹತ್ವವನ್ನು ಒತ್ತಿಹೇಳುತ್ತದೆ. ನರಸಿಂಹಮೂರ್ತಿ, ಸುರೇಶ್, ಮಧು, ಲೋಕೇಶ್, ಕುಮಾರಯ್ಯ ಸೇರಿದಂತೆ ಸ್ಥಳೀಯ ರೈತರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಅವರು ತಮ್ಮ ಹಲಸಿನ ಉತ್ಪನ್ನಗಳನ್ನು ತ್ವರಿತವಾಗಿ ಮತ್ತು ನ್ಯಾಯಯುತ ಬೆಲೆಯಲ್ಲಿ ಮಾರಾಟ…

Read More

ತಿಪಟೂರು ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲೂಕ್ ಸಂಚಾಲಕರಾದ ರಾಘವೇಂದ್ರ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ತಿಪಟೂರು ತಾಲ್ಲೂಕಿನ ಹೋಬಳಿ ಶಾಖೆ ರಚನೆ ಮಾಡುವ ಬಗ್ಗೆ ತೀರ್ಮಾನಿಸಲಾಯಿತು. ಇದೇ ವೇಳೆ  ತಿಪಟೂರು ತಾಲ್ಲೂಕು ಮಹಿಳಾ ಸಂಚಾಲಕಿಯಾಗಿ ಕವಿತಾ ವಿ. ಮತ್ತು ತಿಪಟೂರು ನಗರ ಘಟಕ ಸಂಚಾಲಕರಾಗಿ ರಮೇಶ್ ಮಾರನಗೆರೆ ಅವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೊಪ್ಪ ಶಾಂತಪ್ಪ, ಕುಪ್ಪಾಳು ರಂಗಸ್ವಾಮಿ, ಜಿಲ್ಲಾ ಸಂಘಟನಾ ಸಂಚಾಲಕರಾದಮತ್ತಿಹಳ್ಳಿ ಹರೀಶ್ ಗೌಡ, ಬಿಳಿಗೆರೆ ಚಂದ್ರಶೇಖರ್, ಟಿ.ಕೆ.ಕುಮಾರ್, ಮತೀಘಟ್ಟ ಶಿವಕುಮಾರ್ ಎ ಎಸ್ ಎಸ್ ಸಮಿತಿ ಅಧ್ಯಕ್ಷರು, ಬಿಳಿಗೆರೆ ಮಹದೇವ್, ಹಟ್ನ, ದಯಾನಂದ್, ಲಿಂಗದೇವರು, ಬಸವರಾಜ್, ದೇವರಾಜ್ ರಾಮನಾಯಕ್, ಸುರೇಶ್, ರಂಗಸ್ವಾಮಿ, ಹರೀಶ್, ಭಾಗವಹಿಸಿ ಸಭೆ ಯಶಸ್ವಿಗೊಳಿಸಲಾಯಿತು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಪಾವಗಡ: ಆಗಸ್ಟ್ 8ರಿಂದ 9ರವರೆಗೆ ಪಾವಗಡದಲ್ಲಿ ನಡೆದ ನಾಲಮಾಡಿಕೆ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಬಿ.ಕೆ ಹಳ್ಳಿ ಶಾಲೆಯ ವಿದ್ಯಾರ್ಥಿನಿಯರು ಬಾಲಕಿಯರ ಕಬ್ಬಡಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ. ಈ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕ ಸಿ.ಓಂಕಾರಪ್ಪ, ಸಹ ಶಿಕ್ಷಕರು, ಎಸ್.ಡಿ.ಎಂ.ಸಿ, ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ: ಮುಂಗಾರು ಹಂಗಾಮಿನ ಶೇಂಗಾ(ಮಳೆಆಶ್ರಿತ) ಬೆಳೆ ಸ್ಪರ್ಧೆಗೆ ಪಾವಗಡ ತಾಲೂಕಿನ ರೈತರಿಂದ ಆನ್‌’ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2024–25ನೇ ಸಾಲಿನಲ್ಲಿ ಕೃಷಿ ಪ್ರಶಸ್ತಿಯಡಿ ಮುಂಗಾರು ಬೆಳೆ ಸ್ಪರ್ಧೆಗೆ ಆಸಕ್ತ ರೈತರು, ರೈತ ಮಹಿಳೆಯರು Citizen Login ಅಥವಾ RSK Login ಮೂಲಕ ರೈತ ಸಂಪರ್ಕ ಕೇಂದ್ರ, ಸೇವಾಕೇಂದ್ರಗಳಲ್ಲಿ ಆ.31ರೊಳಗೆ ಕೃಷಿ ಇಲಾಖೆ ಕೆ–&ಕಿಸಾನ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ  ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಲು ಶುಕ್ರವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಪ್ರಕಟಣೆಯಲ್ಲಿ ಸಹಾಯಕ ನಿರ್ದೇಶಕ ಅಜಯ್ ಕುಮಾರ್ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ ಹಿರಿಯ ಹೋರಾಟಗಾರರಾದ ಕೆ.ವಿ.ದೊಡ್ಡನರಸಪ್ಪ ಕೊರಟಗೆರೆ ತಾಲ್ಲೂಕು ಆಡಳಿತದಿಂದ ಗೌರವ ಪೂರ್ವಕವಾಗಿ ತಹಶೀಲ್ದಾರ್ ಮಂಜುನಾಥ್ ಕೆ ಸನ್ಮಾನಿಸಿ ಗೌರವಿಸಿದರು. ಕೆ.ವಿ.ದೊಡ್ಡನರಸಪ್ಪರವರ ಮನೆಗೆ ತೆರಳಿ ತಾಲೂಕು ಮತ್ತು ಜಿಲ್ಲಾ ಆಡಳಿತದ ವತಿಯಿಂದ ಗೌರವ ಸಮರ್ಪಣೆಯನ್ನು ಅರ್ಪಿಸಲಾಯಿತು. ದೊಡ್ಡನರಸಪ್ಪನವರು ವಿದ್ಯಾರ್ಥಿ ಜೀವನದಲ್ಲಿದ್ದಾಗಲೇ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಸೆರೆವಾಸ ಅನುಭವಿಸಿ ಮಹಾತ್ಮ ಗಾಂಧೀಜಿಯವರ ಮಾರ್ಗದರ್ಶನವನ್ನು ಪಡೆದು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವಾತಂತ್ರ್ಯಕ್ಕೋಸ್ಕರ ದುಡಿದವರಾಗಿರುತ್ತಾರೆ. ಪ್ರತಿ ವರ್ಷವೂ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತಾಲೂಕು ಮತ್ತು ಜಿಲ್ಲಾ ಆಡಳಿತವು ನಮ್ಮ ಮನೆಗೆ ಬಂದು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸುತ್ತಾರೆ. ತಾಲ್ಲೂಕು ಮತ್ತು ಜಿಲ್ಲಾ ಆಡಳಿತಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ವಿ.ದೊಡ್ಡನರಸಪ್ಪ ತಿಳಿಸಿದರು. ತಹಶೀಲ್ದಾರ್ ಮಂಜುನಾಥ್ ಕೆ. ಅಂದಿನ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಮತ್ತು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಈ ಶುಭ ಸಂದರ್ಭದಲ್ಲಿ ಚನ್ನರಾಯನದುರ್ಗ ಹೋಬಳಿಯ ಉಪ ತಹಶೀಲ್ದಾರ್ ರಾಜು, ಗ್ರಾಮ…

Read More

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದು, ಗೃಹಜ್ಯೋತಿ ಯೋಜನೆ, ಜಾರಿಯಾದ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಹೊರಡಿಸಲಾಗಿದೆ. ಈ ಯೋಜನೆಯಡಿ, ಇಂಧನ ಇಲಾಖೆ ಹೊಸ ಸೌಲಭ್ಯವನ್ನು ಪರಿಚಯಿಸಿದ್ದು, ಮನೆ ಬದಲಾಯಿಸಿದ ಗ್ರಾಹಕರಿಗೂ ಉಚಿತ ವಿದ್ಯುತ್ ಸೌಲಭ್ಯ ಪಡೆಯುವ ಅವಕಾಶವನ್ನು ನೀಡಲಾಗಿದೆ. ವಿವರಗಳು: ಹಳೆಯ ಆರ್‌ಆರ್ ಸಂಖ್ಯೆಯ ಡಿ–ಲಿಂಕ್: * ಮನೆ ಬದಲಾಯಿಸಿದ ಗ್ರಾಹಕರು ಹಳೆಯ ಮನೆಯ ಆರ್ ಆರ್ (ರಿಜಿಸ್ಟರ್ಡ್ ಕನೆಕ್ಟರ್) ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಡಿ–ಲಿಂಕ್ ಮಾಡಬಹುದು. * ಈ ಸೇವೆಯನ್ನು ಪಡೆಯಲು, ಸೇವಾ ಸಿಂಧು ಪೋರ್ಟಲ್‌ನಲ್ಲಿ ಲಭ್ಯವಿರುವ https://sevasindhu.karnataka.gov.in/GruhaJyothi_Delink/GetAadhaarData.aspx ವೆಬ್ ಸೈಟ್ ಗೆ ಲಾಗಿನ್ ಮಾಡಬೇಕು. * ಪೋರ್ಟಲ್ ಓಪನ್ ಆಗದಿದ್ದಲ್ಲಿ, Cache Memory Clear ಮಾಡುವ ಮೂಲಕ ಮತ್ತೆ ಪ್ರಯತ್ನಿಸಬಹುದು. ಹೊಸ ಆರ್.ಆರ್. ಸಂಖ್ಯೆಯ ಲಿಂಕ್: * ಹಳೆಯ ಆರ್‌ಆರ್ ಸಂಖ್ಯೆಯನ್ನು ಡಿ-ಲಿಂಕ್ ಮಾಡಿದ ನಂತರ, ಹೊಸ ಮನೆಯಲ್ಲಿ ಲಭ್ಯವಿರುವ ಆರ್‌ಆರ್ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬಹುದು. * ಡಿ–ಲಿಂಕ್ ಮಾಡದಿದ್ದರೆ, ಹೊಸ ಮನೆಯ ಆರ್.ಆರ್.…

Read More

ಚಿಕ್ಕನಾಯಕನಹಳ್ಳಿ: ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮೇಲನಹಳ್ಳಿ ಚಿಕ್ಕನಾಯಕನಹಳ್ಳಿ ಇಲ್ಲಿಗೆ ಚಿರತೆ ಮರಿಗಳೊಂದಿಗೆ ಕಳೆದ ಒಂದು ತಿಂಗಳಿಂದ ಶಾಲೆ ಹತ್ತಿರ ಬಂದು ಹೋಗುತ್ತಿತ್ತು. ಇದೀಗ ಅಂತಿಮವಾಗಿ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಬಿದ್ದಿದೆ. ನಿರಂತರ ಚಿರತೆ ಸಂಚಾರದಿಂದ ಆತಂಕಕ್ಕೀಡಾಗಿದ್ದ ಶಾಲೆಯ ಮಕ್ಕಳು ಹಾಗೂ ಸಾರ್ವಜನಿಕರು ಚಿರತೆಯನ್ನು ಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದರು. ಅಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಬೋನ್ ಇರಿಸಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ರಾತ್ರಿ ವೇಳೆ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಬಿದ್ದಿದೆ. ಚಿರತೆ ಸೆರೆಯಿಂದಾಗಿ ವಿದ್ಯಾರ್ಥಿಗಳು ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಅರಣ್ಯ ಇಲಾಖೆಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More