Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಮಹಿಳೆಯೊಬ್ಬರು ಹಾಡಹಗಲೇ ಪತಿಯನ್ನು ಭೀಕರವಾಗಿ ಹತ್ಯೆಮಾಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಹತ್ಯೆಗೈದ ಆರೋಪಿ ಪತ್ನಿಯನ್ನು ಗಾಯತ್ರಿ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ಗಾಯತ್ರಿ ಮತ್ತು ಪತಿ ಸತ್ಯಪಾಲ್ ಗಳು ಆಗಾಗ ಜಗಳವಾಡುತ್ತಿದ್ದರು ಎನ್ನಲಾಗಿದೆ. ಎಂದಿನಂತೆ ಗುರುವಾರವೂ ಜಗಳವಾಡಿದ್ದು ಕೋಪಗೊಂಡ ಪತ್ನಿ ಪತಿಯನ್ನು ನೆಲಕ್ಕೆ ಉರುಳಿಸಿ, ಅವನ ಎದೆಯ ಮೇಲೆ ಕುಳಿತು, ತಲೆಗೆ ಇಟ್ಟಿಗೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾಳೆ.ಮಾತ್ರವಲ್ಲದೆ ಆತನ ಮೆದುಳನ್ನು ಹೊರ ತೆಗೆದಿದ್ದಾಳೆ ಎನ್ನಲಾಗಿದೆ. ಘಟನೆಯ ನಂತರ ಮಹಿಳೆ ಪೊಲೀಸರಿಗೆ ಶರಣಾಗಿದ್ದಾಳೆ.ಪ್ರಕರಣ ದಾಖಲಿಸಿದ ಪೋಲಿಸರು ಮೃತದೇಹವನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತ ಸತ್ಯಪಾಲ್ ಪತ್ನಿ ಗಾಯತ್ರಿ ಮತ್ತು ಮಕ್ಕಳು ಹಾಗೂ. ಸತ್ಯಪಾಲ್ ನ ವೃದ್ಧ ತಾಯಿಯೊಂದಿಗೆ ಶಹಜಹಾನ್ಪುರದ ಹತೌರಾ ಬುಜುರ್ಗ್ ಗ್ರಾಮದಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರಿನ ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಯುಜಿಸಿ ಅನುಮೋದಿತ ಕೋರ್ಸ್ ಗಳ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯಗಳ ದೂರ ಶಿಕ್ಷಣದ ಪದವಿ ಮತ್ತು ಸಾಂಪ್ರದಾಯಿಕ ವಿವಿಗಳು ನೀಡುವ ಶಿಕ್ಷಣ ಕ್ರಮಗಳ ಪದವಿಗಳಿಗೆ ಸಮನಾಗಿರುತ್ತದೆ. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ: ಬಿ.ಎ-ರೂ.8,400/-., ಬಿ.ಕಾಂ.-ರೂ.8,900/-.,ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-12,400/-., ಬಿ.ಸಿ.ಎ/ಬಿ.ಎಸ್ಸಿ-ರೂ.23,900/-., ಬಿ.ಎಸ್.ಡಬ್ಲ್ಯೂ-ರೂ.12,900/-., ಎಂ.ಎ-ರೂ.10,600/-., ಎಂ.ಸಿ.ಜೆ-ರೂ.16,200/-., ಎಂ.ಕಾಂ-ರೂ.12,400/-., ಎಂ.ಬಿ.ಎ–ರೂ.29,900/-., ಎಂ.ಎಸ್ಸಿ/ಎಂ.ಸಿ.ಎ-ರೂ.29,700/-., ಎಂ.ಎಸ್.ಡಬ್ಲ್ಯೂ-ರೂ.21,300/-., ಎಂ.ಎಲ್.ಐ.ಎಸ್ಸಿ-ರೂ.18,150/-ಗಳಾಗಿರುತ್ತದೆ. ಬೋಧನಾ ಶುಲ್ಕ ರಿಯಾಯಿತಿ:- ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ…
ತಿಪಟೂರು: ತಾಲ್ಲೂಕಿನ ಬಿದರೆಗುಡಿಯ ಬಿದಿರಾಂಬಿಕಾ ದೇವಸ್ಥಾನದ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ‘ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ’ ಇವರ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣದ ಅಡಿಯಲ್ಲಿ 2,000 ಸಸಿಗಳ ಗಿಡ ನಾಟಿ ಹಾಗೂ ತಾಲ್ಲೂಕಿನ ರೈತರಿಗೆ ಸಸಿ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣರವರು ಧ.ಗ್ರಾ.ಯೋಜನೆಯು ಬಡವರ ಅಶಕ್ತರ ನಿರ್ಗತಿಕರ ಬಾಳಿಗೆ ಬೆಳಕಾಗಲು ಅನೇಕ ಕಾರ್ಯಕ್ರಮಗಳನ್ನು ಸಂಘಟಿಸುವುದಲ್ಲದೇ ಪರಿಸರ ಸಂರಕ್ಷಣೆಯ ಮೂಲ ಉದ್ದೇಶದಿಂದ ಪ್ರಕೃತಿಯನ್ನು ಕಾಪಾಡಲು ಸಹಕರಿಸಬೇಕೆಂಬ ದ್ಯೇಯ ಉದ್ದೇಶದಿಂದ ಇದುವರೆಗೂ ರಾಜ್ಯಾದ್ಯಂತ 73 ಕೋಟಿಯಷ್ಟು ಗಿಡ ನಾಟಿ ಮಾಡಿದೆ. ಪ್ರಸ್ತುತ ವರ್ಷದಲ್ಲಿ ಯೋಜನೆಯು ರಾಜ್ಯಾದ್ಯಂತ 2 ಲಕ್ಷಕ್ಕೂ ಅಧಿಕ ಸಸಿಯನ್ನು ನಾಟಿ ಮಾಡಲು ಪರಿಸರ ಕಾರ್ಯಕ್ರಮ, ಕೆರೆಯಂಗಳದಲ್ಲಿ ಗಿಡನಾಟಿ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ ಎಂದು ತಿಳಿಸಿದರು. ಜೊತೆಗೆ ಪ್ರಸ್ತುತ ವರ್ಷ ತುಮಕೂರು–1 ಜಿಲ್ಲೆಯಾದ್ಯಂತ 20 ಸಾವಿರ ಸಸಿಗಳನ್ನು ನಾಟಿ ಮಾಡಿ ಪ್ರಕೃತಿಯನ್ನು ಕಾಪಾಡಲು ಕೊಡುಗೆ ನೀಡುತ್ತಿದೆ…
ಗೂಗಲ್ (google) ಸಂಸ್ಥೆಯು ಭಾರತದಲ್ಲಿ ಗೂಗಲ್ ಮ್ಯಾಪ್ಗಳಿಗಾಗಿ (Google Map) ಆರು ಹೊಸ ವೈಶಿಷ್ಟ್ಯಗಳನ್ನು ಅನಾವರಣಗೊಳಿಸಿದೆ. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಮತ್ತು ಸ್ಥಳೀಯ ಪಾಲುದಾರಿಕೆಗಳ ಮೇಲೆ ಕೇಂದ್ರೀಕರಿಸಿ ಈ ವೈಶಿಷ್ಟ್ಯಗಳನ್ನು ಪರಿಚಯಿಸಲಾಗುತ್ತಿದೆ. 1. ಕಿರಿದಾದ ರಸ್ತೆ ತಪ್ಪಿಸುವಿಕೆ ನಾಲ್ಕು ಚಕ್ರ ವಾಹನಗಳಿಗೆ ಸೂಕ್ತವಲ್ಲದ ರಸ್ತೆಗಳ ಮೂಲಕ ಸಂಚಾರವನ್ನು ತಡೆಯಲು, ಕಿರಿದಾದ ರಸ್ತೆಗಳನ್ನು ಗುರುತಿಸಲು ಮತ್ತು ಅವುಗಳನ್ನು ತಪ್ಪಿಸಲು ಗೂಗಲ್ ನಕ್ಷೆಗಳು ಈಗ ಎಐ ಅನ್ನು ಬಳಸುತ್ತವೆ. ಈ ವೈಶಿಷ್ಟ್ಯವು ರಸ್ತೆಯ ಅಗಲವನ್ನು ಅಂದಾಜು ಮಾಡಲು ಮತ್ತು ರೂಟಿಂಗ್ ಅಲ್ಗಾರಿದಮ್ಗಳನ್ನು ಪರಿಷ್ಕರಿಸಲು ಉಪಗ್ರಹ ಚಿತ್ರಣ, ಗಲ್ಲಿ ವೀಕ್ಷಣೆ ಡೇಟಾವನ್ನು ಬಳಸಿಕೊಳ್ಳುತ್ತದೆ. ಇದು ಆರಂಭದಲ್ಲಿ ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಎಂಟು ನಗರಗಳಲ್ಲಿ ಲಭ್ಯವಾಗಲಿದೆ. 2. ಫ್ಲೈಓವರ್ ನ್ಯಾವಿಗೇಷನ್ ಗೂಗಲ್ ನಕ್ಷೆಗಳು ಈಗ 40 ಭಾರತೀಯ ನಗರಗಳಲ್ಲಿ ಶಿಫಾರಸು ಮಾಡಲಾದ ಮಾರ್ಗಗಳಲ್ಲಿ ಫ್ಲೈಓವರ್ಗಳನ್ನು ಹೈಲೈಟ್ ಮಾಡುತ್ತವೆ. ಇದು ಚಾಲಕರು ಎತ್ತರದ ರಸ್ತೆ ಮಾರ್ಗಗಳಲ್ಲಿ ಸರಾಗವಾಗಿ ಸಾಗಲು ಸಹಾಯ ಮಾಡುತ್ತದೆ. 3. ಮೆಟ್ರೋ ಟಿಕೆಟ್ ಬುಕಿಂಗ್…
ಮೀರತ್: ನಡುರಸ್ತೆಯಲ್ಲಿ ಬಾಲಕಿಯನ್ನು ಆಕೆಯ ಅಣ್ಣನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ನಾಗ್ಲಾ ಶೇಖು ಗ್ರಾಮದಲ್ಲಿ ನಡೆದಿದೆ. ಹತ್ಯೆಗೀಡಾದ ಬಾಲಕಿಯನ್ನು ಅನ್ಯಧರ್ಮದ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ಈ ಮರ್ಯಾದಾ ಹತ್ಯೆ ನಡೆದಿದೆ.ಹತ್ಯೆಯ ದೃಶ್ಯವನ್ನು ನೆರೆಹೊರೆಯವರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿ ಹಿಂದೂ ಯುವಕನನ್ನು ಪ್ರೀತಿಸಿ, ಆತನೊಂದಿಗೆ ಓಡಿಹೋಗಲು ಪ್ಲಾನ್ ಮಾಡಿದ್ದಾಳೆ ಎಂದು ಗೊತ್ತಾಗುತ್ತಿದ್ದಂತೆ ಸಿಟ್ಟಿಗೆದ್ದ ಅಣ್ಣ ಹಾಡಹಗಲೇ ನಡುರಸ್ತೆಯಲ್ಲಿ ಆಕೆಯನ್ನು ಭೀಕರವಾಗಿ ಕೊಲೆಮಾಡಿದ್ದಾರೆ. ಆರೋಪಿಯನ್ನು 20 ವರ್ಷದ ಹಸೀನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಸೀನ್ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಮೃತ ಯುವತಿ ಮುಸ್ಲಿಂ ಕುಟುಂಬಕ್ಕೆ ಸೇರಿದವಳಾಗಿದ್ದು,ಆಕೆ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದಳು.ಇದರಿಂದ ಮರ್ಯಾದೆಗೆ ಅಂಜಿ ಆಕೆಯನ್ನು ಕೊಲೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಧುಗಿರಿ: ರಾಜ್ಯದಲ್ಲಿ ರುವ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷರೂ ಗಳ ವರೆಗೂ ಸಾಲ ನೀಡಲಾಗುತ್ತದೆ ಎಂದು ಸಹಕಾರಿ ಸಚಿವರಾದ ಕೆ.ಎನ್.ರಾಜಣ್ಣ ತಿಳಿಸಿದರು.ತಾಲೂಕಿನ ಕಸಬಾ ಹೋಬಳಿ ಯಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಸಂಘ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘ ಬಿಜವರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ನೂತನ ಗೋದಾಮುಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿ,ಕ್ಷೇತ್ರದಲ್ಲಿನ ಪಹಣಿ ಹೊಂದಿರುವ ಎಲ್ಲಾರಿಗೂ ಜಾತಿ ಪಕ್ಷ ನೋಡದೆ ಸಾಲ ನೀಡಲಾಗಿದೆ. ರಾಜ್ಯದ ಸಹಕಾರ ಸಂಘಗಳಿಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಹೊರಟಿರುವುದು ಕ್ರಾಂತಿಕಾರಕ ತೀರ್ಮಾನ ಇದರಿಂದ ಅವಕಾಶ ವಂಚಿತರಿಗೆ ಅವಕಾಶ ದೊರೆಯುವ೦ತಾಗುತ್ತದೆ. ಹಾಲು ಉತ್ಪಾದಕ ಸಂಘಗಳಿಗೆ ಹಾಲು ಸರಬರಾಜು ಮಾಡುತ್ತಿದ್ದರು. ರಾಜ್ಯದಲ್ಲಿ ಅಂದಾಜು 85,000 ರೈತರಿಗೆ ಹಾಲು ಉತ್ಪಾದಕರ ಸಂಘದ ಸದಸ್ಯತ್ವ ನೀಡಿಲ್ಲ. ಈ ಹಿನ್ನಲೆ ಯಲ್ಲಿ ಅವರಿಗೆ ಸದಸ್ಯತ್ವ ನೀಡುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ. ಸದಸ್ಯತ್ವ ಪಡೆಯುದಿದ್ದರೆ 5 ರೂ. ಪ್ರೋತ್ಸಾಹ ಧನ ಸಿಗುವುದಿಲ್ಲ ಇದೇ ಅಲ್ಲದೆ ಯಶಸ್ವಿನಿ ಯೋಜನೆಯ ವ್ಯಾಪ್ತಿಗೆ ಒಳಪಡುವುದಿಲ್ಲ. ತಾಲೂಕಿನಲ್ಲಿ 1355 ಜನರ…
U/A ಸರ್ಟಿಫಿಕೇಟ್ ಪಡೆದ “ಅಡವಿ” ಕನ್ನಡ ಚಲನಚಿತ್ರ ಬೆಳ್ಳಿ ತೆರೆಯ ಮೇಲೆ ಮಿಂಚಲು ಸಿದ್ಧವಾಗಿದೆ. ನಿರ್ಮಾಪಕ ಟೈಗರ್ ನಾಗರಾಜು ಅವರ ಕಟ್ಟುದೊರೆ ಮತ್ತು ತಳಹದಿಯ ಕಠಿಣ ಶ್ರಮದ ಫಲವಾಗಿ ಈ ಚಿತ್ರವು ಪ್ರೇಕ್ಷಕರ ಮುಂದೆ ಪ್ರದರ್ಶನವಾಗಲಿದೆ. ಈ ಚಿತ್ರವು ವಿಶಿಷ್ಟ ಕಥಾವಸ್ತು ಮತ್ತು ಕಲಾತ್ಮಕ ಪ್ರಸ್ತುತಿ ಮೂಲಕ ಕನ್ನಡ ಚಲನಚಿತ್ರರಂಗದಲ್ಲಿ ಹೊಸ ಬೆಳಕು ಮೂಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. “ಅಡವಿ” ಚಲನಚಿತ್ರದ ವಿವರ: ಶೀರ್ಷಿಕೆ: “ಅಡವಿ” ನಿರ್ಮಾಪಕ: ಟೈಗರ್ ನಾಗರಾಜು (ಜಟ್ಟಿ ಅಗ್ರಹಾರದ ನಾಗರಾಜು) ಸೆನ್ಸರ್ ಸೀಟಿಫಿಕೇಟ್: U/A ಚಿತ್ರದ ವಿಷಯ: “ಅಡವಿ” ಚಿತ್ರವು ನೈಸರ್ಗಿಕ ದೃಶ್ಯಾವಳಿ ಮತ್ತು ಸ್ಪಷ್ಟ ಕಥಾವಸ್ತುಗಳನ್ನು ಒಳಗೊಂಡಿದ್ದು, ಕನ್ನಡ ಚಲನಚಿತ್ರರಂಗದಲ್ಲಿ ಹೊಸ ಬೆಳಕು ಮೂಡಿಸುವ ನಿರೀಕ್ಷೆಯಿದೆ. ಪ್ರಸ್ತುತಿ: ಚಿತ್ರವು ಕನ್ನಡ ಚಿತ್ರೋದ್ಯಮಕ್ಕೆ ತನ್ನ ವಿಶಿಷ್ಟ ಶೈಲಿಯ ಮೂಲಕ ಕೊಡುಗೆ ನೀಡುತ್ತಿದೆ. ಆಕರ್ಷಣೀಯತೆ: ಚಿತ್ರವು ವಿಶಿಷ್ಟ ಕಥಾಹಂದರ ಮತ್ತು ಕಲಾತ್ಮಕ ಶ್ರೇಷ್ಠತೆಯನ್ನು ಹೊಂದಿದ್ದು, ಪ್ರೇಕ್ಷಕರಲ್ಲಿ ಹೆಚ್ಚಿನ ಕುತೂಹಲವನ್ನು ಉಂಟುಮಾಡುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ನಮ್ಮ ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿ ನಿರಂತರ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಶಾಲಾ ಕಾಲೇಜು ಹಾಗೂ ಸಂಸ್ಥೆಗಳಲ್ಲಿ ರಜೆಯನ್ನು ಕೂಡ ಘೋಷಿಸಿದೆ. ಇದು ನಿರಂತರ ಮಾಧ್ಯಮದಲ್ಲಿ ಕೇಳುತ್ತಿರುವ ಕಾಣುತ್ತಿರುವ ಸುದ್ದಿ. ಪ್ರಕೃತಿ ವಿಕೋಪಗಳಿಂದಾಗಿ ನಮ್ಮ ಸುತ್ತಮುತ್ತಲು ದುರಂತಗಳು ದೈನಂದಿನವಾಗಿ ಏರುತ್ತಿವೆ, ಹೆಚ್ಚಿನ ಮಳೆ, ಭೂಮಿ,ಗುಡ್ಡ ಬೆಟ್ಟಗಳ ಕುಸಿತ, ನದಿ ಕೆರೆಗಳು ತುಂಬಿ ತುಳುಕುತ್ತಿದೆ. ಇದರಿಂದ ಪರಿಸರ ನಾಶವಾಗುತ್ತಿದೆ ಅಲ್ಲದೇ ಮನುಷ್ಯ ಪ್ರಾಣಿ ಸಂಕುಲಕ್ಕೆ ಹಾನಿ ಮತ್ತು ತೊಂದರೆಗಳು ಎದುರಾಗುತ್ತಿವೆ. ರಸ್ತೆಗಳು ದಾರಿ ಮನೆ ಹಾಗೂ ವಿಶಾಲ ಪ್ರದೇಶಗಳು ನೀರಿನಿಂದ ಆವೃತಗೊಂಡಿದೆ. ಜನ ಸಂಚಾರ ವಾಹನ ಚಲಾವಣೆ ಎಲ್ಲವೂ ಸಂಕಷ್ಟಕರವಾಗಿದೆ. ಎಡ ಬಿಡದೆ ಬರುವ ಮಳೆ, ವೇಗವಾಗಿ ಬೀಸುವ ಗಾಳಿ ಮನೆ ಕಟ್ಟಡಗಳಿಗೆ ಹಾಗೂ ಗಿಡ ಮರಗಳು ಧರೆಗುರುಳಿ ಉಂಟಾಗುತ್ತಿರುವ ಹಾನಿಗಳು ಎಲ್ಲವೂ ಮನುಷ್ಯ ರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಜೀವನ್ಮರಣ ಹೋರಾಟದ ನಡುವೆ ಕೆಲವು ಜೀವಗಳು ಮಣ್ಣಿನಲ್ಲಿ ಮಾಯವಾಗಿ ಇನ್ನು ಕೆಲವು ಜೀವಗಳು ಮೃತವಾಗಿ. ಕಣ್ಣು ಮುಂದೆಯೇ ನೀರಿನಲ್ಲಿ ಜನ…
ಬೀದರ್: ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಕ್ಕಳ, ಹೆರಿಗೆ ಹಾಗೂ ಪ್ರಸೂತಿ ವಿಭಾಗ, ರೋಟರಿ ಕ್ಲಬ್ ಆಫ್ ಬೀದರ ನ್ಯಿವ್ ಸಂಚೂರಿ ಸಮುದಾಯ ಆರೋಗ್ಯ ಕೇಂದ್ರ ಸಂತಪೂರ ಇವರ ಸಹಯೋಗದಲ್ಲಿ ವಿಶ್ವ ಸ್ತನಪಾನ್ಯ ಸಪ್ತಾಹ 2024 ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಮಕ್ಕಳ ವೈದ್ಯರಾದ ಡಾ.ಶರಣ ಬುಳ್ಳಾ ನೆರವೇರಿಸಿದರು. ರೋಟರಿ ಕ್ಲಬ್ ಆಫ್ ಬೀದರ ನ್ಯಿವ್ ಸಂಚೂರಿ ಅಧ್ಯಕ್ಷರಾದ ಶಿವಕುಮಾರ ಪಖಾಲ್, ಡಾ.ರೇಣುಕಾ, ಡಾ.ರಾಹುಲ್ ಬೇದ್ರೆ, ಡಾ.ಮುಸ್ತಫಾ, ಡಾ.ರಾಜಕುಮಾರ ಹೆಬ್ಬಾಳೆ ಬ್ರಿಮ್ಸ್ ಸೇರಿದಂತೆ ತಾಯಂದಿರು, ಆಶಾ ಕಾರ್ಯಕರ್ತರು, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರ ಅತಿ ಹೆಚ್ಚು ಸುಧಾರಣೆಯನ್ನು ಕಾಣುತ್ತಿದೆ ಎಂದು ಪಾವಗಡದ ಶಾಸಕ ಎಚ್.ವಿ. ವೆಂಕಟೇಶ್ ತಿಳಿಸಿದ್ದಾರೆ. ಬುಧವಾರ ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ.ಈ.ವೈ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ “ಸೌರಭ –2024 ಕಾಲೇಜು ವಾರ್ಷಿಕೋತ್ಸವ” ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು , ನಾವು ಶಿಕ್ಷಣವನ್ನ ಪಡೆಯುತ್ತಿದ್ದಂತಹ ಸಂದರ್ಭದಲ್ಲಿ ನೆಲದ ಮೇಲೆ ಕುಳಿತು ಪಾಠವನ್ನು ಕೇಳುವಂತಿತ್ತು, ಆದರೆ ಈಗ ಅತ್ಯಾಧುನಿಕ ಪರಿಕರಗಳಿಂದ ಪಾಠ ಕೇಳುವಂತಹ ಭಾಗ್ಯವನ್ನು ತಾವೆಲ್ಲರೂ ಪಡೆದುಕೊಂಡಿದ್ದೀರಾ ಮತ್ತು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉನ್ನತವಾದಂತ ಶಿಕ್ಷಣವನ್ನು ಪಡೆದುಕೊಂಡು ಜೀವನದಲ್ಲಿ ಉನ್ನತ ಸ್ಥಾನಕ್ಕೆ ಬೆಳೆಯಬೇಕು ಕಾಲೇಜಿನಲ್ಲಿ ಹೆಚ್ಚುವರಿ ಕೊಠಡಿ ಮತ್ತು ಆಡಿಟೋರಿಯಂ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಗುದ್ದಲಿ ಪೂಜೆಯನ್ನು ನೆರವೇರಿಸುತ್ತೇವೆ, ಇತ್ತೀಚಿನ ದಿನಗಳಲ್ಲಿ ಕಾಲೇಜು ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಿದ್ದು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ವಿ.ಎನ್.ಮುರಳಿಧರ್ ಮಾತನಾಡಿ, 2024ನೇ ಶೈಕ್ಷಣಿಕ ಸಾಲಿನ…