Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ತುಮಕೂರು: ಸಾಲುಮರದ ತಿಮ್ಮಕ್ಕ ಅವರ 113ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಕ್ಕೆ ಆಹ್ವಾನಿಸಲು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಶ್ರೀ ಸಿದ್ದಲಿಂಗ ಸ್ವಾಮೀಜಿಯವರೊಂದಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ಇದೇ ವೇಳೆ ಸ್ವಾಮೀಜಿ ಸಾಲುಮರದ ತಿಮ್ಮಕ್ಕ ಅವರನ್ನು ಆಶೀರ್ವದಿಸಿ ಸನ್ಮಾನಿಸಿದರು. ಆಗಸ್ಟ್ 21 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪರಿಸರ ವಾದಗಳು ಸೇರಿದಂತೆ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಪ್ರಾಣವನ್ನೇ ಒತ್ತೆಯಿಟ್ಟು ಕಳ್ಳನನ್ನ ಹಿಡಿದ ಸಾಹಸಿ ಕಾನ್ ಸ್ಟೇಬಲ್ ಗೆ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ ಸಲ್ಲಿಸಿ ಪ್ರಶಂಸ ಪತ್ರವನ್ನು ನೀಡಿದರು. ಕಾನ್ ಸ್ಟೇಬಲ್ ದೊಡ್ಡಲಿಂಗಯ್ಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ತುಮಕೂರು ಎಸ್ ಪಿ ಅಶೋಕ್ ವೆಂಕಟ್, ಇನ್ನೊಬ್ಬ ಕಾನ್ ಸ್ಟೇಬಲ್ ಮೋಹನ್ ಗೂ ಪ್ರಶಂಸನಾ ಪತ್ರ ನೀಡಿ ಅಭಿನಂದನೆ ಸಲ್ಲಿಸಿದರು. ಪೊಲೀಸ್ ಪದಕಕ್ಕೂ ಶಿಫಾರಸು ಮಾಡುವುದಾಗಿ ತುಮಕೂರು ಎಸ್ ಪಿ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ಜಿಲ್ಲಾ ಪೊಲೀಸರು 11 ಕಳ್ಳತನ ಪ್ರಕರಣಗಳಲ್ಲಿ, ಬಂಗಾರ, ಬೆಳ್ಳಿ, ನಗದು ಹಣ, ದ್ವಿಚಕ್ರ ವಾಹನ ಹಾಗೂ ಎಮ್ಮೆ ಕಳ್ಳತನ ಪ್ರಕರಣಗಳಲ್ಲಿ 5 ಜನ ಆರೋಪಿ ಬಂಧನ, 12 ಲಕ್ಷಕ್ಕೂ ಅಧಿಕ ಮೌಲ್ಯದ ಬೆಲೆ ಬಾಳುವ ಸ್ವತ್ತುಗಳ ವಶ ಪಡಿಸಿಕೊಂಡಿದ್ದಾರೆ. ಮೇಲಾಧಿಕಾರಿಗಳ ಮಾರ್ಗದರ್ಶನದಂತೆ, ಜಿಲ್ಲೆಯ ಹುಮನಾಬಾದ, ಭಾಲ್ಕಿ ಉಪ—ವಿಭಾಗದ ನುರಿತ ಅಧಿಕಾರಿ ಸಿಬ್ಬಂದಿಯವರ ಪ್ರತ್ಯೇಕವಾಗಿ ತಮ್ಮ ತಮ್ಮ ಉಪ-ವಿಭಾಗಳಲ್ಲಿ ತಂಡವನ್ನು ರಚಿಸಿದ್ದು, ತಂಡವು ದೇವಗಿರಿ ತಾಂಡಾದ ಮಂದಿರ ಕಳ್ಳತನ ಪ್ರಕರಣದಲ್ಲಿ 11 ಗ್ರಾಂ ಬೆಳ್ಳಿ ಮತ್ತು ಒಂದು ಗ್ರಾಂ ಚಿನ್ನಾಭರಣ, ನಗದು ಹಣ 79,970 ರೂಪಾಯಿ, ಮತ್ತು ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ತೆಲಂಗಾಣ ರಾಜ್ಯದಲ್ಲಿ ಕಳುವಾದ 9 ವಾಹನಗಳು ಮತ್ತು ಹುಮನಾಬಾದ ಠಾಣೆಯ ಒಂದು ದ್ವಿಚಕ್ರ ವಾಹನ ಹೀಗೆ 10 ದ್ವಿಚಕ್ರ ವಾಹನಗಳು, ಒಂದು ಅಪ್ಪಿ ಆಟೋ ವಶ ಪಡಿಸಿಕೊಂಡಿರುತ್ತಾರೆ. ಕಾರ್ಯಾಚರಣೆಯಲ್ಲಿ ಡಿ.ಎಸ್.ಪಿ. ಯವರಾದ ಜೆ.ಎಸ್.ನ್ಯಾಮಗೌಡರ, ಶಿವಾನಂದ ಪಾವಡಶೆಟ್ಟಿ, ಪ್ರತ್ಯೇಕವಾಗಿ ಹುಮನಾಬಾದ, ಚಿಟಗುಪ್ಪಾ ಸಿ.ಪಿ.ಐ. ಗುರುಲಿಂಗಪ್ಪಾ ಪಾಟೀಲ್, ಶ್ರೀನಿವಾಸ ಅಲ್ಲಾಪೂರೆ,…
ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅಪ್ಪ ಆಗ್ತಿರುವ ಖುಷಿಯಲ್ಲಿದ್ದಾರೆ. ರೆಬೆಲ್ಸ್ಟಾರ್ ಅಂಬರೀಶ್ ಕುಟುಂಬವು ಹೊಸ ಅತಿಥಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಹಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ 2023ರ ಜೂನ್ 5ರಂದು ಅದ್ದೂರಿಯಾಗಿ ಮದುವೆಯಾಗಿದ್ದರು. ಇನ್ನು ವರ್ಷತುಂಬುವಷ್ಟರಲ್ಲಿ ಅಭಿಷೇಕ್ ಅಂಬರೀಶ್ ಪತ್ನಿ ಅವಿವಾ ಗರ್ಭಿಣಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಕನ್ನಡ ಚಿತ್ರರಂಗದ ಜ್ಯೂನಿಯರ್ ರೆಬೆಲ್ಸ್ಟಾರ್ ಖ್ಯಾತಿಯ ಅಭಿಷೇಕ್ ಅಂಬರೀಶ್ ಅವರು ಅಪ್ಪನಾಗುವ ಖುಷಿಯಲ್ಲಿದ್ದಾರೆ. ಮದುವೆಯಾಗಿ ಒಂದು ವರ್ಷದಲ್ಲಿಯೇ ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಲು ಸಿದ್ಧತಾಗಿದ್ದಾರೆ. ಇನ್ನು ಅವರ ಅಭಿಮಾನಿಗಳು ಮತ್ತೆ ರೆಬೆಲ್ ಸ್ಟಾರ್ ಅಂಬರೀಶ್ ಹುಟ್ಟಿಬರಲಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಅಂಬಿ ಕುಟುಂಬದಲ್ಲಿ ಇದೇ ವಾರ ಅವಿವಾ ಅವರಿಗೆ ಅದ್ದೂರಿಯಾಗಿ ಸೀಮಂತ ಮಾಡಲು ಪ್ಲಾನ್ ಮಾಡಲು ಸಿದ್ಧತೆಯನ್ನೂ ಮಾಡಿಕೊಳ್ಳಲಾಗುತ್ತಿದೆ. ಅಭಿಷೇಕ್ ಅಂಬರೀಶ್ ಅವರು ಮುಂದಿನ ಸಿನಿಮಾದಲ್ಲಿ ನಟಿಸುವುದಕ್ಕಾಗಿ ಕಿಕ್ ಬಾಕ್ಸಿಂಗ್ ಕಲಿಯೋಕೆ ವಿದೇಶಕ್ಕೆ ಹೋಗಿದ್ದರು. ಆದರೆ, ಈಗ ಪತ್ನಿ ಗರ್ಭಿಣಿಯಾಗಿದ್ದು, ಸೀಮಂತ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವ ಹಿನ್ನೆಲೆಯಲ್ಲಿಯೇ ನಾಳೆ…
ಈ ವರ್ಷದ ಸ್ವಾತಂತ್ರ್ಯೋತ್ಸವವು ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನ, ಕೊಡುಗೆ, ಹಾಗೂ ಭಾರತ ಸಂವಿಧಾನದ ನಿರ್ಮಾಣದ ಕುರಿತಾದ ವಿಷಯಗಳನ್ನು ಆಧಾರವಾಗಿಟ್ಟುಕೊಂಡು ಆಯೋಜಿಸಲಾಗುತ್ತಿದ್ದು, ಇದರ ಅಂಗವಾಗಿ ಆಗಸ್ಟ್ 8ರಿಂದ 19ರವರೆಗೆ ಲಾಲ್ ಬಾಗ್ ಬೋಟಾನಿಕಲ್ ಗಾರ್ಡನ್, ಬೆಂಗಳೂರು ಇಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಪ್ರದರ್ಶನದ ವಿಶೇಷತೆಗಳು: * ಡಾ. ಅಂಬೇಡ್ಕರ್ ಅವರ ಜೀವನದ ಪ್ರಮುಖ ಘಟನೆಗಳ ಮೂರ್ತಿಗಳು ಮತ್ತು ನೋಟಗಳು. * ಸಂವಿಧಾನ ಕುರಿತ ಪಠ್ಯ, ಚಿತ್ರಗಳು, ಹಾಗೂ ಮಾಹಿತಿ ಫಲಕಗಳು. * ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಪ್ರತಿಬಿಂಬಿಸುವ ಚಿನ್ನದ ಸ್ಮರಣಿಕೆ. * ವಿವಿಧ ಬಗೆಯ ಹೂಗಳು, ಸಸ್ಯಗಳು, ಮತ್ತು ಔಷಧೀಯ ಗಿಡಗಳ ಪ್ರದರ್ಶನ. ಪ್ರವೇಶದ ಟಿಕೆಟ್ ದರಗಳು: ವಯಸ್ಕರು: ₹80 (ಸಾಮಾನ್ಯ ದಿನಗಳಲ್ಲಿ), ₹100 (ರಜೆ ದಿನಗಳಲ್ಲಿ) ಮಕ್ಕಳು: ₹30 ಸಮವಸ್ತ್ರ ಧರಿಸಿದ ಶಾಲಾ ವಿದ್ಯಾರ್ಥಿಗಳು: (ಉಚಿತ ಪ್ರವೇಶ) ಟಿಕೆಟ್ ಸೌಲಭ್ಯಗಳು: * ಲಾಲ್ಬಾಗ್ನ ಎಲ್ಲ ಪ್ರವೇಶ ದ್ವಾರಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರಗಳ ವ್ಯವಸ್ಥೆ. * ಆನ್…
ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಇಲ್ಲಿ ಜಷ್ನೇ ಎ. ಬಹಾರೆ ಎ ಉರ್ದು—2024 ಕಾರ್ಯಕ್ರಮವನ್ನು ಉರ್ದು ವಿಭಾಗದಿಂದ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿ ಮೈಸೂರು ವಿ.ವಿ.ಯ ಉರ್ದು ವಿಭಾಗದ ನಿವೃತ್ತ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನರಾಗಿದ್ದ ಪ್ರೊ. ಎಸ್.ಮಸೂದ್ ಸಿರಾಜ್ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಭಾಷೆ ಒಂದು ಸಂವಹನ ಸಾಧನವಾಗಿದ್ದು, ಉರ್ದು ಭಾಷೆಯು ಅತ್ಯಂತ ಸೌಜನ್ಯಯುತವಾದ ಭಾಷೆಯಾಗಿದೆ. ವ್ಯಕ್ತಿ ಗೌರವಕ್ಕೆ ಅತ್ಯಂತ ಮಹತ್ವ ನೀಡುವಂತಹದ್ದಾಗಿದೆ. ಭಾಷಾ ಜ್ಞಾನವು ಭಾವನೆಗಳನ್ನು ಪ್ರಸರಿಸುವ ಪ್ರಮುಖ ಸಾಧನವಾಗಿದೆ. ಉರ್ದು ಭಾಷೆಯು ಹರಿತವಾದ ವಿಷಯವನ್ನು ಪ್ರೀತಿಯಿಂದ, ಗೌರವದಿಂದ ವ್ಯಕ್ತಪಡಿಸುವ ಪ್ರಮುಖವಾದ ಶ್ರೀಮಂತ ಭಾಷೆ ಎಂದು ಅಭಿಪ್ರಾಯಪಟ್ಟರು. ಲಾಲ್ ಬಹದ್ದೂರು ಶಾಸ್ತ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು ಹಾಗೂ ಉರ್ದು ವಿಭಾಗದ ಮುಖ್ಯಸ್ಥರಾದ ಮನ್ಸೂರು ನೋಮಾನ್ ರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, ಭಾಷೆಯು ಮಾನವ ವ್ಯಕ್ತಿತ್ವವನ್ನು ಸೂಚಿಸುವ ಪ್ರಮುಖ ಸಾಧನವಾಗಿದ್ದು, ಉರ್ದು ಭಾಷೆಯು ಹಲವು ಭಾಷೆಗಳ ಸಂಗವಾಗಿದೆ. ಉರ್ದು ಭಾಷೆಯು ಇಂದು ಬಳಸುವಲ್ಲಿ ನಾವು ವಿಭಿನ್ನ ಭಾಷೆಗಳನ್ನು…
ತಿಪಟೂರು: ತಾಲೂಕು ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 206ರ ಪಕ್ಕದಲ್ಲಿ ರಸ್ತೆಗೆ ಅಡ್ಡಲಾಗಿ ಇಟ್ಟಿರುವ ಸಿಮೆಂಟ್ ತಡೆಗೋಡೆಗೆ ಬೈಕ್ ಸವಾರ ಗುದ್ದಿದ ಪರಿಣಾಮ ಸ್ಥಳದಲ್ಲೇ ಅಸುನಿಗಿದ ಘಟನೆ ನಡೆದಿದೆ. ಪ್ರಕರಣ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಧುಗಿರಿ: ಸಾರ್ವಜನಿಕರು ಸಮಸ್ಯೆಗಳ ಬಗ್ಗೆ ಅರ್ಜಿ ಹಿಡಿದು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ಬರುವುದನ್ನು ತಪ್ಪಿಸಲು ಸರ್ಕಾರ ಜನಸ್ಪಂದನ ಕಾರ್ಯಕ್ರಮ ಏರ್ಪಡಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು. ತಾಲೂಕಿನ ನೇರಳೆ ಕೆರೆ ಗ್ರಾಮದ ಶ್ರೀರಂಗನಾಥ ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಗ್ರಾಮಮಟ್ಟದಲ್ಲಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು,ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ಜನ ಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದು, ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದರು. ಪಾವತಿ ಖಾತೆಗಳನ್ನು ಬದಲಾವಣೆ ಮಾಡಿಸಿಕೊಳ್ಳುವ ಮೂಲಕ ಸಮಸ್ಯೆಗಳಿಂದ ಮುಕ್ತರಾಗಬೇಕು, ರೈತರು ಬೆಳೆ ವಿಮೆ ಮಾಡಿಸಿಕೊಳ್ಳು ವುದರಿಂದ ಆರ್ಥಿಕವಾಗಿ ಹೊರೆಯಾಗುವುದರಿಂದ ತಪ್ಪಿಸಿಕೊಳ್ಳಬಹುದು ಎಂದರು. ಕೆ. ಎನ್. ರಾಜಣ್ಣನವರು ನಾಲ್ಕು ಸಾವಿರಕ್ಕೂ ಹೆಚ್ಚು ಮನೆಗಳನ್ನು ತಂದಿದ್ದು, ತಾಲೂಕಿನ ವಸತಿ ರೈತರಿಗೆ ಹಂತ ಹಂತವಾಗಿ ವಿತರಿಸಲಾಗುವುದು. ಯಾವುದೇ ಪಕ್ಷದವರು ಇರಲಿ ಬಡವರನ್ನು ಗುರುತಿಸಿ ಮನೆಗಳನ್ನು ಹಂಚುವಂತೆ ಪಂಚಾಯತಿ ಅಧ್ಯಕ್ಷ — ಪಿ ಡಿ ಓ ಗಳಿಗೆ ಸೂಚಿಸಿದರು. ಆಶ್ರಯ ಮನೆಗಳಿಗೆ ನಿವೇಶನ ನೀಡಿದಾಗ…
ತುಮಕೂರು: ಆಧುನಿಕತೆಯ ಭರಾಟೆಯಲ್ಲಿ ಸಾರಿಗೆ ವ್ಯವಸ್ಥೆ ಅತ್ಯಾಧುನಿಕವಾಗಿ ಮುಂದುವರಿದು ಮೆಟ್ರೋ ಟ್ರೈನ್ ಗಳು ಬಂದಿವೆ. ಬುಲೆಟ್ ಟ್ರೈನ್ ಬರುತ್ತಿವೆ. ಆದರೆ ಗ್ರಾಮವೊಂದು ಇದುವರೆಗೂ ಸರ್ಕಾರಿ ಬಸ್ ನ ಮುಖ ನೋಡಿಲ್ಲ ಅಂದ್ರೆ ನೀವು ನಂಬಲೇಬೇಕು. ಹೌದು ಸ್ವತಂತ್ರ ಭಾರತದ ಇತಿಹಾಸದಲ್ಲಿ ತುಮಕೂರು ಜಿಲ್ಲೆ ಹೆಬ್ಭೂರು ಹೋಬಳಿಯ ಚಿಕ್ಕಯ್ಯನ ಪಾಳ್ಯ ಗ್ರಾಮಕ್ಕೆ ಮೊದಲ ಬಾರಿ ಬಸ್ ಬಂದಿದ್ದು, ಗ್ರಾಮದಲ್ಲಿ ಇನ್ನಿಲ್ಲದ ಸಡಗರ ತರುವಂತೆ ಮಾಡಿದೆ, ಮೊದಲ ಬಾರಿ ಸರ್ಕಾರಿ ಬಸ್ ನೋಡಿದ ಗ್ರಾಮದ ಜನತೆ ಬಸ್ ಗೆ ಪೂಜೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು. ಇನ್ನು ಬಸ್ ಬಂದ ಖುಷಿಯಲ್ಲಿ ಮಾತನಾಡಿದ ಗ್ರಾಮದ ಯುವಕ ರಾಜಶೇಖರ್ ಜೆ.ಆರ್ ರವರು ಗ್ರಾಮದಲ್ಲಿ ನಿತ್ಯ ಹತ್ತಾರು ಮಕ್ಕಳು ನಾಗವಲ್ಲಿ, ಹೆಬ್ಬೂರು, ತುಮಕೂರು ಶಾಲಾ ಕಾಲೇಜಿಗೆ ಹೋಗುತ್ತಾರೆ. ಬಸ್ ಬಿಡಿಸುವಂತೆ ಸಾಕಷ್ಟು ಬಾರಿ ಶಾಸಕರಿಗೆ ಮನವಿ ಮಾಡಿದ್ದೆವು ನಮ್ಮ ಮನವಿಗೆ ಸ್ಪಂದಿಸಿ ಈಗ ಬಸ್ ಬಿಟ್ಟಿರುವುದಕ್ಕೆ ಸಾರಿಗೆ ಇಲಾಖೆಗೂ ಮತ್ತು ಸಚಿವರಿಗೂ ಧನ್ಯವಾದ ಹೇಳುತ್ತೇನೆ ಎಂದು ಹರ್ಷ…
ಸೆಕ್ಯುರಿಟಿ ಗಾರ್ಡ್ ವೊಬ್ಬರು ದೆವ್ವದೊಂದಿಗೆ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ದೃಶ್ಯ ಇದೀಗ ವ್ಯಾಪಕವಾಗಿ ವೈರಲ್ ಆಗಿದೆ. ಮುಂಜಾನೆ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ. ಸೆಕ್ಯುರಿಟಿ ಕಾರ್ಡ್ ಕಚೇರಿಯಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದಾನೆ. ಮುಂಜಾನೆ ಮೂರು ಗಂಟೆಗೆ ಅವನು ಇದ್ದಕ್ಕಿದ್ದಂತೆ ಎದ್ದನು. ಇದ್ದಕ್ಕಿದ್ದಂತೆ ಬಾಗಿಲು ಓಪನ್ ಆಗಿದೆ. ಆ ಸಮಯದಲ್ಲಿ ಯಾರೋ ಬಂದಿದ್ದರು ಎಂದು ವಿವರಗಳನ್ನು ತಮ್ಮ ಲಾಗ್ ಪುಸ್ತಕದಲ್ಲಿ ಬರೆದಿರುವುದನ್ನು ಕಾಣಬಹುದು. ಆತ ಎದುರಿ ಇರುವ ಯಾರೊಂದಿಗೆ ಮಾತನಾಡುತ್ತಿದ್ದಾನೆ. ಆದರೆ ಅಲ್ಲಿ ಯಾರೂ ಇರುವುದು ಕಾಣುವುದಿಲ್ಲ. ನಂತರ ಭದ್ರತಾ ಸಿಬ್ಬಂದಿ ಪುಸ್ತಕವನ್ನು ಮೇಜಿನ ಮೇಲೆ ಇರಿಸಿ ತಕ್ಷಣ ಗಾಲಿಕುರ್ಚಿಯನ್ನು ತಂದರು. ಅವನು ಯಾರಿಗಾದರೂ ಅದರಲ್ಲಿ ಕುಳಿತುಕೊಳ್ಳಲು ಹೇಳುತ್ತಿದ್ದಾನೆ. ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದರೆ ಸೆಕ್ಯುರಿಟಿ ಗಾರ್ಡ್ ಕಾಣದ ವ್ಯಕ್ತಿಯೊಂದಿಗೆ ಮಾತನಾಡುವುದು ಮತ್ತು ಸಹಾಯ ಮಾಡುವುದು ಕಂಡುಬರುತ್ತದೆ. ಆದಾಗ್ಯೂ, ವೀಡಿಯೊದಲ್ಲಿ ವ್ಯಕ್ತಿ ಕಾಣಿಸದ ಕಾರಣ ಎಲ್ಲವೂ ಗೊಂದಲಕ್ಕೊಳಗಾಗಿದೆ ಎಂದು ತೋರುತ್ತದೆ. ಈ…