Subscribe to Updates
Get the latest creative news from FooBar about art, design and business.
- ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಮಹಾಂತ ಶಿವಯೋಗಿ ಜಯಂತಿ ಹಾಗೂ ವ್ಯಸನ ಮುಕ್ತ ದಿನಾಚರಣೆ
- ತುಮಕೂರು: ದೇವರಾಯಪಟ್ಟಣದಲ್ಲಿ ಚಿರತೆ ಹಾವಳಿ, ಇಸ್ರೋ ಆವರಣದಲ್ಲಿ ಕುರಿ ಬಲಿ – ಬೋನು ಅಳವಡಿಕೆ
- ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ
- ಜಿಟಿಟಿಸಿ: ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ
- ರಾಜಕಾರಣದಷ್ಟೇ ಶಿಕ್ಷಣ ವ್ಯವಸ್ಥೆ ಕಲುಷಿತ: ಡಾ.ವೈ.ಎ.ನಾರಾಯಣಸ್ವಾಮಿ ಕಳವಳ
- ತಮಿಳುನಾಡಿಗೆ ನೀರು ಹರಿಸುವ ಆದೇಶಕ್ಕೆ ಸಂಘಟನೆಗಳ ಆಕ್ರೋಶ: ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಒತ್ತಾಯ
- ಸರಗೂರು: ಕೊಟ್ಟಿಗೆಗೆ ನುಗ್ಗಿ ಕಾಡು ಪ್ರಾಣಿ ದಾಳಿ: 6 ಕುರಿ ಬಲಿ, 12 ಕುರಿಗಳಿಗೆ ಗಂಭೀರ ಗಾಯ
- ಸರಗೂರು: ಮೂರನೇ ಆಷಾಢ ಶುಕ್ರವಾರ -– ವಾಹನ ಚಾಲಕರ ಸಂಘದಿಂದ ವಿಶೇಷ ಪೂಜೆ ಹಾಗೂ ಖಾಕಿ ಸಮವಸ್ತ್ರ ವಿತರಣೆ
Author: admin
ಮೇ ತಿಂಗಳಲ್ಲಿ ಹಲವಾರು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಯಾಕೆ ಗೊತ್ತೆ ? ಕರ್ನಾಟಕ ರಾಜ್ಯ ಸರ್ಕಾರ ಇವಾಗ ಡಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾಗಿದ್ದು ಇಲ್ಲಿವರೆಗೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಒಂದು ಕುಟುಂಬದಲ್ಲಿ ಒಂದು ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ ಏನಿಲ್ಲ ಅಂದರೂ 5000 ಪಡೆಯಬಹುದು ಹಾಗಾಗಿ ತುಂಬಾ ಜನರು ಅಕ್ರಮವಾಗಿ ರೇಷನ್ ಕಾರ್ಡ್ ಗಳನ್ನು ಮಾಡಿಸಿದ್ದು ಹಾಗೂ ಶ್ರೀಮಂತರು ಹಾಗೂ ಜಿಎಸ್ಟಿ ಕಟ್ಟುವವರು ಕೂಡ ರೇಷನ್ ಕಾರ್ಡ್ ಹೊಂದಿದ್ದಾರೆ. ಅಂತವರ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುವ ಪ್ರಕ್ರಿಯೆ ನಮ್ಮ ಕರ್ನಾಟಕದಲ್ಲಿ ನಡೆದಿದೆ. ವರ್ಷಕ್ಕೆ ಮೂರು ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿದವರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಇದು ರೇಷನ್ ಕಾರ್ಡ್ ನಲ್ಲಿ ನಿಯಮ ಉಲ್ಲಂಘನೆ ಆಗುತ್ತದೆ ಹಾಗಾಗಿ ಅಂಥವರ ರೇಷನ್ ಕಾರ್ಡ್ ಕೂಡ ರದ್ದು ಮಾಡಲಾಗುತ್ತಿದೆ. ನಗರ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 Provided by ಮೇಷ ರಾಶಿ: ಅನಿರೀಕ್ಷಿತ ತೊಂದರೆಗಳು ಎದುರಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಜಾಗೃತರಾಗಿ ನಿಮ್ಮ ಸ್ನೇಹಿತರೊಡನೆ ಆಗಲಿ ಬಂಧುಗಳೊಡನೆ ಆಗಲಿ ಮಾತನಾಡುವುದು ಒಳಿತು. ಅನೇಕ ಕಷ್ಟಗಳನ್ನು ಎದುರಿಸುವ ಸಾಧ್ಯತೆ!ಈ ದಿನದಲ್ಲಿ ಯಾವುದೇ ಕಷ್ಟಗಳಿದ್ದರೂ ಪರಿಹಾರ ಆಗಬೇಕು ಅನ್ನುವುದಾದರೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ವೀಳ್ಯದೆಲೆಯ ಆಹಾರವನ್ನು ಮಾಡಿ ಪುರೋಹಿತರಿಗೆ ನೀಡಿ…
ದಾಳಿಕೋರರು ಮತ್ತು ಸ್ಕ್ಯಾಮರ್ಗಳು ತಮ್ಮ ಗ್ರಾಹಕರನ್ನ ಗುರಿಯಾಗಿಸಲು ಬಳಸುವ ಸಾಮಾನ್ಯ ಹಗರಣಗಳಲ್ಲಿ ‘ಮೊಬೈಲ್ ಅಪ್ಲಿಕೇಶನ್ ಹಗರಣ’ ಒಂದಾಗಿದೆ. ಈ ಹಗರಣವು ನಿಮ್ಮ ಚಟುವಟಿಕೆಗಳನ್ನ ಮೇಲ್ವಿಚಾರಣೆ ಮಾಡುವುದು ಮತ್ತು ವೈಯಕ್ತಿಕ ಮಾಹಿತಿಯನ್ನ ಕದಿಯುವುದಕ್ಕಿಂತ ಹೆಚ್ಚಿನದನ್ನು ಮಾಡಬಹುದು. ಬ್ಯಾಂಕಿಂಗ್ ವಿವರಗಳು, ಲಾಗಿನ್ ರುಜುವಾತುಗಳು ಮುಂತಾದ ಸೂಕ್ಷ್ಮ ಮಾಹಿತಿಯನ್ನು ಕದಿಯುವುದು ಇಂತಹ ಹಗರಣಗಳ ವ್ಯಾಪಕ ಅನ್ವಯವಾಗಿದೆ. ಈ ಮಾರ್ಗಸೂಚಿಯಲ್ಲಿ, ಮೊಬೈಲ್ ಅಪ್ಲಿಕೇಶನ್ ಹಗರಣಗಳ ಮೂಲಭೂತ ಅಂಶಗಳು, ಅವು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಸುರಕ್ಷಿತವಾಗಿರಲು ಸರ್ಕಾರ ಹಂಚಿಕೊಂಡ ಕೆಲವು ಸಲಹೆಗಳನ್ನು ನಾವು ವಿವರಿಸುತ್ತೇವೆ. ಮೊಬೈಲ್ ಅಪ್ಲಿಕೇಶನ್ ಹಗರಣ, ಉಲ್ಲೇಖಿಸಿದಂತೆ, ಮಾಲ್ವೇರ್-ಪೀಡಿತ ಅಪ್ಲಿಕೇಶನ್ ಆಗಿದ್ದು, ಇದು ನಿಮ್ಮ ಡೇಟಾವನ್ನ ಸ್ಟೀಮ್ ಮಾಡಲು ಮತ್ತು ಲಾಗಿನ್ ರುಜುವಾತುಗಳನ್ನ ಮತ್ತು ಪ್ರೀಮಿಯಂ ಸೇವೆಗಳಿಗೆ ಸ್ವಯಂ-ಚಂದಾದಾರರಾಗಲು ವಿನ್ಯಾಸಗೊಳಿಸಲಾಗಿದೆ. ಈ ಅಪ್ಲಿಕೇಶನ್’ಗಳನ್ನ ನೀವು ಸ್ವೀಕರಿಸಿದ ಯಾದೃಚ್ಛಿಕ ಲಿಂಕ್’ಗಳಂತಹ ವಿವಿಧ ವಿಧಾನಗಳಿಂದ ಅಥವಾ ಚಂದಾದಾರಿಕೆಗಳನ್ನ ಬೈಪಾಸ್ ಮಾಡಲು ಅಥವಾ ಅಪ್ಲಿಕೇಶನ್’ನ ಕಾರ್ಯಕ್ಷಮತೆಯನ್ನ ಸುಧಾರಿಸಲು ಹೆಚ್ಚುವರಿ ವೈಶಿಷ್ಟ್ಯಗಳನ್ನ ಪಡೆಯಲು ಬಳಕೆದಾರರು ಮಾಡುವ ಮೂರನೇ ಪಕ್ಷದ ಸ್ಥಾಪನೆಗಳಂತಹ ವಿವಿಧ…
ಕನ್ನಡಕಗಳನ್ನ ತೆಗೆದುಹಾಕಲು ಸಹಾಯ ಮಾಡುವ ಹೊಸ ಕಣ್ಣಿನ ಹನಿಗಳನ್ನ ಭಾರತದ ಔಷಧ ನಿಯಂತ್ರಣ ಸಂಸ್ಥೆ ಅನುಮೋದಿಸಿದೆ. ಮುಂಬೈ ಮೂಲದ ಎಂಟೋಡ್ ಫಾರ್ಮಾಸ್ಯುಟಿಕಲ್ಸ್ ಪ್ರೆಸ್ಬಿಯೋಪಿಯಾ ಚಿಕಿತ್ಸೆಗಾಗಿ ಪ್ರೆಸ್ವು ಐ ಡ್ರಾಪ್ಸ್ ಅನ್ನು ಅಭಿವೃದ್ಧಿಪಡಿಸಿದೆ, ಇದು ವಿಶ್ವಾದ್ಯಂತ 1.09 ಬಿಲಿಯನ್ ಮತ್ತು 1.80 ಬಿಲಿಯನ್ ಜನರ ಮೇಲೆ ಪರಿಣಾಮ ಬೀರುತ್ತದೆ. ವಯಸ್ಸಾದಂತೆ ಪ್ರೆಸ್ಬಿಯೋಪಿಯಾ ಸ್ವಾಭಾವಿಕವಾಗಿ ಸಂಭವಿಸುತ್ತದೆ, ಇದು ನಿಕಟ ವಸ್ತುಗಳ ಮೇಲೆ ಕೇಂದ್ರೀಕರಿಸಲು ಕಷ್ಟವಾಗುತ್ತದೆ. ಇದು ಸಾಮಾನ್ಯವಾಗಿ 40ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭವಾಗುತ್ತದೆ ಮತ್ತು ಸುಮಾರು 60ರ ದಶಕದ ಅಂತ್ಯದವರೆಗೆ ಹದಗೆಡುತ್ತದೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ವಿಷಯ ತಜ್ಞರ ಸಮಿತಿ (SEC) ಈ ಹಿಂದೆ ಉತ್ಪನ್ನವನ್ನು ಶಿಫಾರಸು ಮಾಡಿದ ನಂತರ ಇಎನ್ಟಿಒಡಿ ಫಾರ್ಮಾಸ್ಯುಟಿಕಲ್ಸ್ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) ನಿಂದ ಅಂತಿಮ ಅನುಮೋದನೆ ಪಡೆಯಿತು. 40 ವರ್ಷಕ್ಕಿಂತ ಮೇಲ್ಪಟ್ಟ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ವಯಸ್ಸಿಗೆ ಸಂಬಂಧಿಸಿದ ದೃಷ್ಟಿ ಸ್ಥಿತಿಯಾದ ಪ್ರೆಸ್ಬಿಯೋಪಿಯಾ ಹೊಂದಿರುವ ಜನರಲ್ಲಿ ಓದುವ…
ತುಮಕೂರು: ಸರ್ಕಾರವು ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆಯ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆರ್ಥಿಕ ವರ್ಷದ ಪ್ರಾರಂಭವಾದ 30 ದಿನಗಳೊಳಗೆ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಿದ್ದು, ಈ ಅವಧಿಯನ್ನು ಸೆಪ್ಟೆಂಬರ್ 14ರವರೆಗೆ ವಿಸ್ತರಿಸಿದೆ. ಆಸ್ತಿ ತೆರಿಗೆ ಪಾವತಿ ಅವಧಿ ವಿಸ್ತರಣೆಯಾಗಿರುವ ಬಗ್ಗೆ ಕರಪತ್ರಗಳನ್ನು ಹಂಚಲು, ಕಸದ ಗಾಡಿಗಳಲ್ಲಿ ಪ್ರಚುರಪಡಿಸಲು, ನಗರದ ಎಲ್ಲಾ ಎಲ್ ಇಡಿ ಪರದೆಗಳಲ್ಲಿ ಪ್ರದರ್ಶಿಸಲು ಕ್ರಮಕೈಗೊಳ್ಳಬೇಕೆಂದು ಸ್ಥಳೀಯ ಆಡಳಿತ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯಿತಿ ವತಿಯಿಂದ ಅಮೃತ ನಗರೋತ್ಥಾನ ಯೋಜನೆಯಡಿ ಎಂ.ಬಿ.ಬಿ.ಎಸ್/ಬಿ.ಇ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಪಾಸ್ಪೋರ್ಟ್ ಇತ್ತೀಚಿನ 2 ಭಾವಚಿತ್ರ, ಅಂಗವಿಕಲರಾದಲ್ಲಿ ದೃಢೀಕರಣ ಪತ್ರವನ್ನು ಲಗತ್ತಿಸಿ, ಪ್ರಕಟಣೆ ಪ್ರಕಟಗೊಂಡ 15 ದಿನದೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಕೌಟುಂಬಿಕ ದೌರ್ಜನ್ಯ.ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು. ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಕೌಟುಂಬಿಕ ದೌರ್ಜನ್ಯ ತಡೆಕಾಯ್ದೆಯಡಿ ಮಹಿಳೆಯರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದರು. ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಗತಿ ಕಾರ್ಯಕ್ರಮಗಳ ಮಾಹಿತಿ ಪಡೆದ ಸಚಿವರು, ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ, ಜಿಲ್ಲಾ ಹಾಗೂ ತಾಲ್ಲೂಕು ಶಿಶುಪಾಲನಾ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಲಭ್ಯಗಳು ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ವರ್ಕಿಂಗ್ ವುಮೆನ್ಸ್ ಹಾಸ್ಟೆಲ್: ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸೂಕ್ತ ಜಾಗ ನೀಡಿದರೆ ನಗರದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಸ್ಥಾಪಿಸಲಾಗುವುದು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ರೀಲ್ಸ್ ಗೆ ಪ್ರೋತ್ಸಾಹಿಸಿ: ಗೃಹಲಕ್ಷ್ಮಿ ಯೋಜನೆ ಕುರಿತಂತೆ ರೀಲ್ಸ್ ಮಾಡುವ ಮಹಿಳೆಯರಿಗೆ…
ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದರು. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು. ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು…
ರಾಯಚೂರು: ಭಾರತ ಸರ್ಕಾರದ ರೈಲ್ವೆ ಸಚಿವಾಲಯ ಮತ್ತು ಜಲ ಶಕ್ತಿ ಸಚಿವಾಲಯದಲ್ಲಿ ಕೇಂದ್ರ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ರಾಯಚೂರು ನಗರದ ರೈಲ್ವೇ ನಿಲ್ದಾಣಕ್ಕೆ ಭೇಟಿ, ನೀಡಿ ಭಾರತ್ ಸ್ಟೇಷನ್ ಕಾಮಗಾರಿಯನ್ನು ಪರಿಶೀಲನೆ ಮಾಡಿದರು. ಈ ವೇಳೆ ಮಾತನಾಡಿ, ಅವರು ಕಾಮಗಾರಿಯು ಗುಣ್ಣಮಟ್ಟ ಹಾಗೂ ನಿಗಧಿತ ಅವಧಿಯಲ್ಲಿ ಪೂರ್ಣಗೊಳ್ಳಿಸಬೇಕು. ನಗರದ ಬೇಡಿಕೆಗೆ ಅನುಗುಣವಾಗಿ ರೈಲು ನಿಲ್ದಾಣಗಳ ಮೂಲಸೌಕರ್ಯಗಳನ್ನು ಹೆಚ್ಚಿಸಿ, ಪ್ರಯಾಣಿಕರ ಸೌಕರ್ಯ, ಅನುಕೂಲ, ಸುರಕ್ಷತೆಗೆ ಆದ್ಯತೆ ನೀಡಲಾಗುವುದು. ಪಾರ್ಕಿಂಗ್, ಮಕ್ಕಳಿಗಾಗಿ ಆಟದ ವಲಯ, ಸ್ಥಳೀಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಸ್ಥಳಾವಕಾಶಗಳ ಇರಲಿದೆ.ಸಾರ್ವಜನಿಕರಿಂದ ಯಾವುದೇ ದೂರಗಳು ಬರದ ರೀತಿಯಲ್ಲಿ ನೋಡಿಕೊಳ್ಳಬೇಕು ಸ್ಥಳದಲ್ಲಿದ್ದ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಂಬಂಧಿಸಿದ ರೈಲ್ವೆ ಡಿಆರ್ಎಂ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಸಲಹಾ ಸಮಿತಿ ರಚಿಸಿ ಚರ್ಚಿಸಿ ಸ್ಥಳೀಯ ಮಟ್ಟದಲ್ಲಿ ಕೆಲ ತೀರ್ಮಾನಗಳನ್ನು ತಗೆದುಕೊಳ್ಳಬೇಕು. ಅವರಿಂದ ಸಲಹೆಗಳನ್ನು ಪಡೆದುಕೊಂಡರೆ ಜನರಿಗೆ ಇನ್ನಷ್ಟು ಅನುಕೂಲ ಆಗುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯವಾಗಲಿದ್ದು, ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚನೆ ನೀಡಿಡದರು.…
ತುಮಕೂರು: ಸಿಎಂ ಚೇರ್ ಖಾಲಿ ಇಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯನವರು ಸಿಎಂ ಒಳ್ಳೆಯ ಕೆಲಸ ಮಾಡ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಒಂದೂ ಕೂಡ ಡಿಲೀಟ್ ಆಗಿಲ್ಲ, ಡಿಲೀಟ್ ಆಗಿರೋದು ತೋರಿಸಿ. ಯಾರು ಜಿಎಸ್ ಟಿ, ಇನ್ ಕಮ್ ಟ್ಯಾಕ್ಸ್ ಪೇ ಮಾಡ್ತಾರೆ ಅಂತಹವರದ್ದು ಆಗಿರಬಹುದು ಎಂದರು. ಅದು ಕೂಡ ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ಅದು ರಿಜಿಸ್ಟ್ರೇಷನ್ ಆಗಿ ಹಣ ತೆಗೆದುಕೊಂಡ ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದರು. ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದೆ. 12-13ನೇ ಕಂತಿನ ಹಣ ಸದ್ಯದಲ್ಲೆ ಬಿಡುಗಡೆ ಮಾಡಲಾಗುತ್ತದೆ ಎಂದರು. ಗೃಹಲಕ್ಷ್ಮೀ ಶುರುವಾಗಿ ಒಂದು ವರ್ಷದ ಸಂಭ್ರಮದಲ್ಲಿದ್ದು ತುಮಕೂರು ಜಿಲ್ಲೆಯಲ್ಲಿ ಇಲಾಖೆಯ ಪರಿಶೀಲನಾ ಸಭೆ ನಡೆಸಲು ಬಂದಿದ್ದೇನೆ.…