Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಲೈಂಗಿಕ ಕ್ರಿಯೆ ನಡೆಸಬೇಕಾದ್ರೆ ನಾನು ಪತ್ನಿಗೆ 1,500(ಅಂದಾಜು 15 ಡಾಲರ್) ರೂ ನೀಡಬೇಕು. ಹಾಗಾಗಿ ನನಗೆ ಆಕೆಯಿಂದ ವಿಚ್ಛೇದನ ನೀಡಿ ಎಂದು ಪತಿಯೊಬ್ಬ ನ್ಯಾಯಾಲಯದ ಮೆಟ್ಟಿಲೇರಿದ್ದು, ಆತನ ಮನವಿಯನ್ನು ಕೋರ್ಟ್ ಪುರಸ್ಕರಿಸಿದೆ. ತೈವಾನ್ ನಲ್ಲಿ ಈ ವಿಲಕ್ಷಣ ಘಟನೆ ನಡೆದಿದೆ. 2014ರಲ್ಲಿ ಈ ಜೋಡಿ ವಿವಾಹವಾಗಿತ್ತು. 3 ವರ್ಷಗಳ ಕಾಲ ಎಲ್ಲವೂ ಚೆನ್ನಾಗಿತ್ತಂತೆ. 2017ರಲ್ಲಿ ತಿಂಗಳಿಗೊಮ್ಮೆ ಲೈಂಗಿಕ ಸಂಪರ್ಕ ಹೊಂದುವ ಸ್ಥಿತಿ ಬಂತು. 2019ರಲ್ಲಿ ಪತ್ನಿ ಲೈಂಗಿಕ ಸಂಪರ್ಕಕ್ಕೆ ಒಪ್ಪಿಗೆ ಸೂಚಿಸಿಲ್ಲ. ಒತ್ತಾಯ ಮಾಡಿದಾಗ ಮಾತನಾಡುವುದನ್ನೇ ಬಿಟ್ಟಿದ್ದಳು ಎಂದು ಪತಿ ಕೋರ್ಟ್ ಮುಂದೆ ಅಳಲು ತೋಡಿಕೊಂಡಿದ್ದಾನೆ. ಇದಾದ ನಂತರ ಪತಿಯ ಬಲವಂತಕ್ಕೆ ಲೈಂಗಿಕ ಸಂಪರ್ಕ ಹೊಂದಲು ಒಪ್ಪಿದ್ದು, ಆದರೆ ಒಂದು ಬಾರಿ ಲೈಂಗಿಕ ಸಂಪರ್ಕ ಹೊಂದಲು 1500 ರೂಪಾಯಿ ಅಂದ್ರೆ ಸುಮಾರು 15 ಡಾಲರ್ ಹಣ ಕೊಡಬೇಕು ಎಂದು ಷರತ್ತು ವಿಧಿಸಿದ್ದಾಳೆ. ಇದು ಮುಂದುವರಿಯುತ್ತಾ ಹೋದಂತೆ ಪತ್ನಿಯೊಂದಿಗೆ ಮಾತನಾಡಲೂ ಹಣ ಕೊಡುವ ಪರಿಸ್ಥಿತಿ ಆತನದ್ದಾಗಿತ್ತು. ಪತ್ನಿ ಮಾತು ಬಿಟ್ಟಿದ್ದಲ್ಲದೇ, ಮಾತನಾಡುವುದಕ್ಕೂ ಹಣ…
ಕುಸ್ತಿಪಟು ವಿನೇಶ್ ಪೋಗಟ್ ಅನರ್ಹತೆ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರ ನಟ ಪ್ರಕಾಶ್ ರಾಜ್ ಕಾರ್ಟೂನ್ ವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ವಿನೇಶ್ ಪೋಗಟ್ ತೂಕ ತಪಾಸಣೆ ಮಾಡುವಾಗ ಹಿಂದಿನಿಂದ ಒಬ್ಬ ವ್ಯಕ್ತಿ ತೂಕದ ಯಂತ್ರದ ಮೇಲೆ ಒಂದು ಕಾಲನ್ನು ಇಟ್ಟಿರುವಂತೆ ಕಾರ್ಟೂನ್ ನಲ್ಲಿ ತೋರಿಸಲಾಗಿದೆ. ಈ ಕಾರ್ಟೂನ್ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಪ್ರಕಾಶ್ ರಾಜ್ ಪ್ರಶ್ನಿಸಿದ್ದು, ಊಹಿಸಿ ಎಂದು ಹೇಳಿದ್ದಾರೆ. ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಂಡ ನಂತರ ಗುರುವಾರ ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದಾರೆ. ಕುಸ್ತಿಯಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. ಅಮ್ಮಾ, ಕುಸ್ತಿ ನನ್ನನ್ನು ಸೋಲಿಸಿದೆ, ನಾನು ಸೋತಿದ್ದೇನೆ. ನಾನು ಸೋತಿದ್ದೇನೆ. ನನ್ನ ಧೈರ್ಯವು ಮುರಿದುಹೋಗಿದೆ, ನನಗೆ ಈಗ ಯಾವುದೇ ಶಕ್ತಿ ಇಲ್ಲ ಎಂದು ವಿನೇಶ್ ಬರೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಸಲಗ ಚಿತ್ರದ ಬಳಿಕ ದುನಿಯಾ ವಿಜಯ್ ಎರಡನೇ ಸಿನಿಮಾದಲ್ಲಿ ನಟಿಸಿ ನಿರ್ದೇಶಿಸಿದ್ದು, ಈ ಚಿತ್ರ ‘ಭೀಮ’ ಆಗಸ್ಟ್ 9ರಂದು ರಾಜ್ಯಾದ್ಯಂತ ತೆರೆ ಕಾಣಲಿದ್ದು, ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರಕ್ಕಾಗಿ ದುನಿಯಾ ವಿಜಯ್ ಸಾಕಷ್ಟು ಪರಿಶ್ರಮಪಟ್ಟಿದ್ದಾರೆ. ದೊಡ್ಡ ಯುವಕರ ತಂಡವೇ ಈ ಚಿತ್ರದಲ್ಲಿ ನಟಿಸಿದ್ದು, ಯುವಕರಿಗೆ ಈ ಚಿತ್ರ ಬಹಳ ಇಷ್ಟವಾಗಬಹುದು ಎಂದು ನಿರೀಕ್ಷಿಸಲಾಗಿದೆ. ದುನಿಯಾ ವಿಜಯ್ ಗೆ ಜೋಡಿಯಾಗಿ ಅಶ್ವಿನಿ ಅಭಿನಯಿಸಿದ್ದು, ರಂಗಾಯಣ ರಘು, ಅಚ್ಯುತ್ ಕುಮಾರ್, ಡ್ರ್ಯಾಗನ್ ಮಂಜು, ಕಲ್ಯಾಣಿ, ರಾಜು, ಪ್ರಿಯಾ, ಶತಮರ್ಶನ್ ಮತ್ತು ಕಾಕ್ರೋಚ್ ಸುಧಿ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಕೃಷ್ಣ ಕ್ರಿಯೇಶನ್ಸ್ ಮತ್ತು ಜಗದೀಶ ಫಿಲಂಸ್ ಬ್ಯಾನರ್ ನಲ್ಲಿ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣ ಮಾಡಿದ್ದಾರೆ. ಚರಣ್ ರಾಜ್ ಮ್ಯೂಸಿಕ್ ಕಂಪೋಸ್ ಮಾಡಿದ್ದು, ದೀಪು ಎಸ್ ಕುಮಾರ್ ಸಂಕಲನ, ಗೌತಮ್ ಸಾಹಸ ನಿರ್ದೇಶನ, ಮಾಸ್ತಿ ಅವರ ಸಂಭಾಷಣೆ ಹಾಗೂ ಶಿವಸೇನಾ ಛಾಯಾಗ್ರಹಣವಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಅಹಮದಾಬಾದ್: ಮೆಡ್ರೋನ್ ತಯಾರಿಕಾ ಘಟಕದ ಮೇಲೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ದಾಳಿ ನಡೆಸಿ Rs 800 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಗುಜರಾತ್ನ ಭರೂಚ್ ಜಿಲ್ಲೆಯ ಔಷಧಿಯ ಕಾರ್ಖಾನೆಯೊಂದರಲ್ಲಿ ಇದೇ ರೀತಿಯ ಕಾರ್ಯಾಚರಣೆ ನಡೆಸಿದ್ದು, RS 31 ಕೋಟಿ ಮೌಲ್ಯದ ದ್ರವ ಟ್ರಾಮಾಡೋಲ್ ಅನ್ನು ವಶಪಡಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡೂ ಸ್ಥಳಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ, ಎಟಿಎಸ್ ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ಪದಾರ್ಥಗಳ ಕಾಯ್ದೆಯಡಿಯಲ್ಲಿ ನಿಷೇಧಿಸಲಾದ ಈ ಮಾದಕ ವಸ್ತುಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ತೊಡಗಿರುವ ನಾಲ್ವರನ್ನು ಬಂಧಿಸಿದೆ ಎಂದು ಉಪ ಪೊಲೀಸ್ ಮಹಾ ನಿರೀಕ್ಷಕ ಸುನೀಲ್ ಜೋಶಿ ತಿಳಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರದ ಭಿವಂಡಿ ಪಟ್ಟಣದ ಅಪಾರ್ಟ್ಮೆಂಟ್ ಮೇಲೆ ಎಟಿಎಸ್ ತಂಡ ದಾಳಿ ನಡೆಸಿತ್ತು. ಈ ವೇಳೆ ಮೊಹಮ್ಮದ್ ಯೂನಸ್ ಶೇಖ್ (41) ಮತ್ತು ಆತನ ಸಹೋದರ ಮೊಹಮ್ಮದ್ ಆದಿಲ್ ಶೇಖ್ (34) ಅವರನ್ನು ಸುಮಾರು 800…
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪಾದಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯ ತಾಲೂಕಿನ ತೂಬಿನಕೆರೆಯಿಂದ ಇಂದು ಪಾದಯಾತ್ರೆ ಹೊರಟಿತು. ಶಂಖನಾದದ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಮಂಡ್ಯದಲ್ಲಿ ನಡೆದ ಪಾದಯಾತ್ರೆಯಲ್ಲಿ ಮಾಜಿ ಸಂಸದೆ ಸುಮಲತಾ ಗೈರು ಹಾಜರಾಗಿದ್ದು, ಪಾದಯಾತ್ರೆಯಲ್ಲಿ ಭಾಗಿಯಾಗದೇ ದೂರ ಉಳಿದಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ HD ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದ್ದರು. ಇದೀಗ ದೋಸ್ತಿಗಳ ಪಾದಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪ್ಯಾರಿಸ್ ಒಲಿಂಪಿಕ್ಸ್ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್ ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್ನಿಂದ ಅನರ್ಹಗೊಳಿಸಲಾಯಿತು. ಒಲಿಂಪಿಕ್ ಕ್ರೀಡಾಕೂಟದ ಫೈನಲ್ ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ ನನ್ನ ವಿರುದ್ಧ ಕುಸ್ತಿ ಗೆದ್ದಿದೆ. ನಾನು ಸೋತಿದ್ದೇನೆ. ಕ್ಷಮಿಸಿ, ಈಗ ನನ್ನಲ್ಲಿ ಹೆಚ್ಚಿನ ಶಕ್ತಿ ಇಲ್ಲ ಎಂದು ಹೇಳುವ ಮೂಲಕ ಕುಸ್ತಿಪಟು ವಿನೇಶ್ ಫೋಗಟ್ ಭಾವುಕ ಸಂದೇಶದೊಂದಿಗೆ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ನನ್ನ ಕನಸು, ನನ್ನ ಧೈರ್ಯ ಎಲ್ಲ ಛಿದ್ರವಾಯಿತು. ನನ್ನ ಧೈರ್ಯ ಸಂಪೂರ್ಣ ಕುಗ್ಗಿದೆ, ಈಗ ಹೆಚ್ಚಿನ ಶಕ್ತಿ…
ತುಮಕೂರು: ಜಿಲ್ಲೆಯ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಸೇರಿದಂತೆ 32 ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಮಂಜೇಶ ಎಂಬಾತನನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಆತನನ್ನು ಬಂಧಿಸುವ ಸಂದರ್ಭದಲ್ಲಿ ಸಾಹಸಮಯವಾಗಿ ಪೊಲೀಸ್ ಪೇದೆ ದೊಡ್ಡಲಿಂಗಯ್ಯ ತೆಗೆದುಕೊಂಡ ಕ್ರಮದ ಬಗ್ಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ. ಕೊರಟಗೆರೆ ಠಾಣಾ ವ್ಯಾಪ್ತಿಯಲ್ಲಿನ ಕೊರಟಗೆರೆ ಟೌನ್ ಡಿಸಿಸಿ ಬ್ಯಾಂಕ್ ಹತ್ತಿರ ಮನೆಯೊಂದರಲ್ಲಿ ಆರೋಪಿ ಮಂಜೇಶ ಕಳ್ಳತನ ಮಾಡಿದ್ದನು. ಆರೋಪಿ ಪತ್ತೆಯ ಬಗ್ಗೆ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಲಾಗಿತ್ತು ಹಾಗೂ ತುಮಕೂರು ಸ್ಮಾರ್ಟ್ ಸಿಟಿ ಕಮ್ಯಾಂಡ್ ಸೆಂಟರ್ ನಲ್ಲಿ ವಾಹನಗಳನ್ನು ಪರಿಶೀಲನೆ ಮಾಡಿದಾಗ ಆರೋಪಿಯು ತುಮಕೂರು ನಗರದಲ್ಲಿ ಸಂಚರಿಸಿ ನಂತರ ದಾಬಸ್ ಪೇಟೆ, ನೆಲಮಂಗಲ ಮೂಲಕ ಬೆಂಗಳೂರು ತಲುಪಿದ್ದು ಆರೋಪಿ ಪತ್ತೆಗಾಗಿ ಅರೋಪಿತನ ವಾಹನ ನಂಬರ್ ನ್ನು ಬೆಂಗಳೂರು ನಗರದ ಟಿ.ಎಂ.ಸಿ. ಯ ಅಲರ್ಟ್ ವಾರ್ನಿಂಗ್ ಸೆಂಟರ್ ಗೆ ತಿಳಿಸಲಾಗಿತ್ತು. ಆಗಸ್ಟ್ 6ರಂದು ಟಿ.ಎಂ.ಸಿ.ಯ ಇಂಜಿನಿಯರ್ ಅಶೋಕ್ ರವರು, ಕೊರಟಗೆರೆ ಪೊಲೀಸ್ ಠಾಣಾ ದೊಡ್ಡಲಿಂಗಯ್ಯ ರವರಿಗೆ ಸದಾಶಿವನಗರ ಟ್ರಾಫಿಕ್ ಜಂಕ್ಷನ್ ಬಳಿ…
ಭಾರತೀಯ ಕುಸ್ತಿ ತಾರೆ ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಲು ಬಹಳ ನಿರೀಕ್ಷಿತರಿದ್ದರು. ಆದಾಗ್ಯೂ, ಅಧಿಕ ತೂಕದ ಕಾರಣದಿಂದಾಗಿ ಅವರು ಒಲಿಂಪಿಕ್ಸ್ ಸ್ಪರ್ಧೆಯಲ್ಲಿ ಅನರ್ಹಗೊಂಡಿದ್ದಾರೆ. ಈ ಘಟನೆ ಕುಸ್ತಿ ಪ್ರಿಯರಲ್ಲಿ ದೊಡ್ಡ ಶೋಕವನ್ನು ಉಂಟುಮಾಡಿದೆ. ವಿನೇಶ್ ಫೋಗಟ್ ಅವರು ತಮ್ಮ ವೃತ್ತಿ ಜೀವನದಲ್ಲಿ ಅನೇಕ ಸಂಕಟಗಳನ್ನು ಹಾಗೂ ಸವಾಲುಗಳನ್ನು ಎದುರಿಸಿದ್ದಾರೆ. ಅವರ ಶ್ರದ್ಧೆ ಮತ್ತು ಪರಿಶ್ರಮದಿಂದಾಗಿ, ಅವರು ಕ್ರೀಡಾ ಲೋಕದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿದ್ದಾರೆ. ಈ ಅನರ್ಹತೆಯು ಅವರು ಮತ್ತು ಅವರ ಅಭಿಮಾನಿಗಳಿಗೆ ದೊಡ್ಡ ಹೊಡೆತವಾಗಿದೆ, ಆದರೆ ಇದು ಅವರ ಹೋರಾಟದ ಹೊಸ ಅಧ್ಯಾಯಕ್ಕೆ ನಾಂದಿ. ತೂಕ ನಿರ್ವಹಣೆ: ಈ ಘಟನೆ, ಕ್ರೀಡಾಪಟುಗಳ ತೂಕ ನಿಯಂತ್ರಣ ಮತ್ತು ಶ್ರೇಷ್ಠ ದೈಹಿಕ ಆರೋಗ್ಯವನ್ನು ನಿರ್ವಹಿಸುವ ಅಗತ್ಯವನ್ನು ಮತ್ತೆ ಒತ್ತಿಹೇಳುತ್ತದೆ. ಕ್ರೀಡಾಪಟುಗಳಿಗೆ ಸೂಕ್ತ ಪೋಷಕಾಂಶ, ವೈಜ್ಞಾನಿಕ ತರಬೇತಿ ಮತ್ತು ಆರೋಗ್ಯದ ನಿರ್ವಹಣೆಯು ಅತ್ಯಂತ ಅವಶ್ಯಕ. ಅಭಿಮಾನಿಗಳ ಬೆಂಬಲ: ವಿನೇಶ್ ಫೋಗಟ್ ಅವರ ಈ ಸವಾಲುಗಳನ್ನು ಎದುರಿಸಲು ಅವರ ಅಭಿಮಾನಿಗಳು ಮತ್ತು…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ‘ಆರೋಗ್ಯ ತುಮಕೂರು’ ಅಭಿಯಾನದ ಅಂಗವಾಗಿ ವಿಶೇಷ ಬೃಹತ್ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಹಾಗೂ ಅಸಾಂಕ್ರಾಮಿಕ ರೋಗಿಗಳಿಗೆ ಔಷಧಿಗಳ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ವೇಳೆ ಕಣ್ಣಿನ ದೃಷ್ಠಿ ತೊಂದರೆ ಅನುಭವಿಸುತ್ತಿದ್ದ ರೋಗಿಗಳನ್ನು ಗುರುತಿಸಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಕಳುಹಿಸಲಾಯಿತು. ಜೊತೆಗೆ, ದೃಷ್ಠಿ ಸಮಸ್ಯೆ ಹಾಗೂ ಶ್ರವಣ ತೊಂದರೆಯಿಂದ ಬಳಲುತ್ತಿದ್ದ ಮಕ್ಕಳಿಗೆ ಕನ್ನಡಕ ಮತ್ತು ಶ್ರವಣ ಯಂತ್ರಗಳನ್ನು ವಿತರಿಸಲಾಯಿತು. ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗಳ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರಗಳನ್ನು ಕೂಡ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತುಮಕೂರು ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ (ಅಭಿವೃದ್ಧಿ, ಆಡಳಿತ), ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು, ಜಿಲ್ಲಾ ಪಂಚಾಯತ್…
ಬೀದರ್: ಸರ್ಕಾರಿ ಪ್ರೌಢ ಶಾಲೆ ಶಿಕ್ಷಕರೊಬ್ಬರು ವರ್ಗಾವಣೆಗೊಂಡ ಕಾರಣಕ್ಕೆ ಮಕ್ಕಳು ಬಿಕ್ಕಿ, ಬಿಕ್ಕಿ ಅತ್ತ ಪ್ರಸಂಗ ಔರಾದ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ಸೋಮವಾರ ನಡೆದಿದೆ. 2013ರಿಂದ ವರ್ಷದಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಗೋಪಾಲ್ ರೆಡ್ಡಿ ಅವರು ಬೀದರ್ ತಾಲೂಕಿನ ಬಗದಲ್ ಸರ್ಕಾರಿ ಪ್ರೌಢ ಶಾಲೆಗೆ ವರ್ಗಾವಣೆಯಾಗಿದ್ದಾರೆ. ಶಾಲೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನೆಚ್ಚಿನ ಶಿಕ್ಷಕ ಬೇರೆಡೆಗೆ ಹೋಗುತ್ತಿರುವುದರಿಂದ ಬೇಸರಗೊಂಡು ವಿದ್ಯಾರ್ಥಿಗಳು ಭಾವುಕರಾಗಿ ಒಲ್ಲದ ಮನಸ್ಸಿನಿಂದ ಕಳಿಸಿಕೊಟ್ಟರು. ದಯವಿಟ್ಟು ನಮ್ಮನ್ನು ಬಿಟ್ಟು ಎಲ್ಲಿಗೂ ಹೋಗ್ಬೇಡಿ ಸರ್ ಎಂದು ಮಕ್ಕಳು ಅಳುತ್ತಾ ತಬ್ಬಿಕೊಂಡರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296