Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಕಾಪಿ ಹೊಡೆಯಲು ಕೆಲ ಅಭ್ಯರ್ಥಿಗಳು ಮಾಡಿದ್ದೇನು ಗೊತ್ತಾ!?, ಈ ಸ್ಟೋರಿ ನೋಡಿದ್ರೆ ನೀವೆ ದಂಗಾಗ್ತೀರಾ!? ಬೀರ್ಭುಮ್ನ ಸೂರಿಯ ಬೆನಿಮಾಧಬ್ ಇನ್ಸ್ಟಿಟ್ಯೂಷನ್ನಲ್ಲಿ ಎಎನ್ಎಂ ಮತ್ತು ಜಿಎನ್ಎಂ ನರ್ಸಿಂಗ್ ಕೋರ್ಸ್ಗೆ ಪ್ರವೇಶ ಪರೀಕ್ಷೆ ನಡೆಯುತ್ತಿತ್ತು. ಮಾಲ್ಡಾದ ಕೆಲವು ವಿದ್ಯಾರ್ಥಿಗಳು ಸೂರಿಯ ಬೆನಿಮಾಧಬ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗುತ್ತಿದ್ದರು. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಫೋನ್ ಗಳನ್ನು ಅನುಮತಿಸಲಾಗುವುದಿಲ್ಲ ಎಂದು ತಿಳಿಸಲಾಗಿತ್ತು. ಪ್ರತಿಯೊಬ್ಬರನ್ನು ಸರಿಯಾಗಿ ಪರಿಶೀಲನೆ ನಡೆಸಿಯೇ ಮಹಿಳಾ ಸೆಕ್ಯುರಿಟಿ ಗಾರ್ಡ್ಗಳು ಪರೀಕ್ಷಾ ಕೊಠಡಿಗೆ ಹೋಗಲು ಅನುಮತಿಸುತ್ತಿದ್ದರು. ಪರಿಶೀಲನೆ ವೇಳೆ ಹಲವರ ಬಳಿ ಮೊಬೈಲ್, ಕಾಪಿ ಚೀಟಿ ಪತ್ತೆಯಾಗಿತ್ತು. ತಕ್ಷಣ ಅವರಿಂದ ಅದನ್ನು ಸೀಜ್ ಮಾಡಿ ಅವರನ್ನು ಪರೀಕ್ಷ ಕೊಠಡಿಗೆ ಕಳುಹಿಸಲಾಗಿತ್ತು. ಆದರೆ ಇನ್ನು ಕೆಲವರು ಸಿಬ್ಬಂದಿಗಳ ಕಣ್ತಪ್ಪಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದರು. ಪರೀಕ್ಷೆಗಳು ಪ್ರಾರಂಭವಾದ ತಕ್ಷಣ, ಕೊಠಡಿಯೊಳಗೆ ಕೆಲವು ಭದ್ರತಾ ಸಿಬ್ಬಂದಿಗಳಿಗೆ ಮೊಬೈಲ್ ಬಳಕೆ ಅನುಮಾನ ಬಂದಿತು. ನಂತರ ವಿದ್ಯಾರ್ಥಿಗಳನ್ನು ಪರೀಕ್ಷೆಗಾಗಿ ಮತ್ತೊಂದು ಸಭಾಂಗಣಕ್ಕೆ ಕರೆದೊಯ್ಯಲಾಯಿತು. ಅಲ್ಲಿ…
ಕರ್ನಾಟಕ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ಆಯ್ದ ಪ್ರಕೃತಿ ಸೊಬಗಿನ ತಾಣಗಳನ್ನು ಗುರುತಿಸಿ, ಪ್ರಕೃತಿ ಪ್ರಿಯರು ಹಾಗೂ ಸಾಹಸ ಚಾರಣಿಗರ ಅನುಕೂಲಕ್ಕೆಂದು ರಾಜ್ಯ ಸರ್ಕಾರ ಪರಿಸರ ಪ್ರವಾಸೋದ್ಯಮ ಮಂಡಳಿಯನ್ನು ನಿರ್ಮಿಸಿ, ಅದರಡಿ 20ಕ್ಕೂ ಹೆಚ್ಚು ಅಚ್ಚುಮೆಚ್ಚಿನ ಚಾರಣ ಸ್ಥಳಗಳನ್ನು ಮಂಡಳಿಯ ನಿರ್ವಹಣೆಗೆ ಸೂಚಿಸಿತ್ತು. ಚಾರಣಿಗರಿಂದ ಹಣ ಪಡೆದು ಇಲಾಖೆಗೆ ಹಣ ಪಾವತಿಸದ ಆರೋಪ ಎಂದು ವರದಿಯಾಗಿತ್ತು. ಇದರಿಂದ ಎಚ್ಚೆತ್ತ ಅರಣ್ಯ ಇಲಾಖೆ (Forest Department) ತಡವಾಗಿ ಕ್ರಮ ಕೈಗೊಂಡಿದೆ. ಇದರಿಂದ ಸ್ವತಃ ಅರಣ್ಯ ಇಲಾಖೆಯಿಂದಲೇ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಮಾಡಿಕೊಂಡು ನಿರ್ವಹಣೆ ಮಾಡಲು ಮುಂದಾಗಿದೆ. ಚಾರಣ ಪ್ರಿಯರಿಗೆ ಇಲ್ಲಿದೆ ಕಹಿ ಸುದ್ದಿ ಚಾರಣದ ಟಿಕೆಟ್ ಬುಕಿಂಗ್ ಇಕೋ ಟೂರಿಸಂ ಮಾಡುತ್ತಿತ್ತು. ಇದೀಗ ಇಕೋ ಟೂರಿಸಂ ಬದಲು ಅರಣ್ಯ ಇಲಾಖೆ ಚಾರಣ ನಿರ್ವಹಣೆ ಮಾಡಲು ಮುಂದಾಗಿದೆ. ಇದರಿಂದ ಸೂಕ್ತ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆಗಸ್ಟ್1, 2024 ರಿಂದ ತಾತ್ಕಾಲಿಕವಾಗಿ ಚಾರಣ ತಡೆಹಿಡಿಯಲಾಗಿದೆ ಎಂದು ಚಿಕ್ಕಬಳ್ಳಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ತಿಳಿಸಿದ್ದಾರೆ. ಪ್ರಕೃತಿ ಸೊಬಗು…
ಸಾಮಾನ್ಯವಾಗಿ ರಾತ್ರಿ ಮಲಗುವಾಗ ಸ್ಮಾರ್ಟ್ ಫೋನ್ ಅನ್ನು ದಿಂಬಿನ ಪಕ್ಕದಲ್ಲಿ ಇಟ್ಟು ಮಲಗುತ್ತೇವೆ. ಆದರೆ ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂಬುದು ತಜ್ಞರ ವಾದ.ಹೀಗಿರುವಾಗ ಕೆಲ ಸಮಸ್ಯೆಗಳಿಂದ ದೂರವಿರಬೇಕಾದರೆ, ಮೊಬೈಲ್ ಅನ್ನು ಸಹ ತಲೆ ಬಳಿಯಿಂದ ದೂರವಿಡಬೇಕು. ಅಂದರೆ 3 ರಿಂದ 4 ಅಡಿ ದೂರದಲ್ಲಿ ಫೋನ್ ಇಟ್ಟುಕೊಳ್ಳಬೇಕು. ದೀರ್ಘಕಾಲದವರೆಗೆ ಸ್ಮಾರ್ಟ್ಫೋನ್ ಹತ್ತಿರ ಇರುವುದು ಕಣ್ಣಿನ ಕಿರಿಕಿರಿ, ತಲೆನೋವು ಮತ್ತು ಕಿವಿ ನೋವಿನಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ರಾತ್ರಿಯಲ್ಲಿ ಸ್ಮಾರ್ಟ್ಫೋನ್ ಅನ್ನು ದೂರವಿಡುವುದು ನಿದ್ರೆಯನ್ನು ಸುಧಾರಿಸುವುದಲ್ಲದೆ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಸ್ಮಾರ್ಟ್ಫೋನ್ ಅನ್ನು ದಿಂಬಿನ ಕೆಳಗೆ ಇಡುವುದರಿಂದ ಶಾಖದ ಶೇಖರಣೆಗೆ ಕಾರಣವಾಗಬಹುದು. ಇದು ಫೋನ್ ಹೆಚ್ಚು ಬಿಸಿಯಾಗಲು ಮತ್ತು ಸ್ಫೋಟಗೊಳ್ಳುವ ಅಪಾಯವನ್ನು ಹೆಚ್ಚಿಸುತ್ತದೆ. ಸ್ಮಾರ್ಟ್ಫೋನ್ ಅನ್ನು ದಿಂಬಿನ ಕೆಳಗೆ ಇಡುವುದರಿಂದ ಶಾಖದ ಶೇಖರಣೆಗೆ ಕಾರಣವಾಗಬಹುದು. ಇದು ಫೋನ್ ಹೆಚ್ಚು ಬಿಸಿಯಾಗಲು ಮತ್ತು ಸ್ಫೋಟಗೊಳ್ಳುವ ಅಪಾಯವನ್ನು ಹೆಚ್ಚಿಸುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಯಶ್ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಅಲ್ಲಿ ಮಂಜುನಾಥನ ದರ್ಶನ ಪಡೆದು ಬಂದಿದ್ದಾರೆ. ಯಶ್ ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಬಂದ ವಿಡಿಯೋ ಹಾಗೂ ಫೋಟೋಗಳು ಎಲ್ಲಡೆ ವೈರಲ್ ಆಗುತ್ತಿವೆ. ಯಶ್ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಲು ಒಂದು ಪ್ರಮುಖ ಕಾರಣ ಇದೆ ಎನ್ನಲಾಗಿದೆ. ಆ ಕಾರಣ ಏನು ಎಂಬುದನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ದರ್ಮಸ್ಥಳ ದರ್ಶನಕ್ಕೆ ಕಾರಣ ಆಗಿದ್ದು ಅವರ ತಂದೆ ಈ ಮೊದಲು ನೀಡಿದ ಹೇಳಿಕೆ ಎಂದು ಹೇಳಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಯಶ್ ಫ್ಯಾನ್ಸ್ ಇದನ್ನು ವೈರಲ್ ಮಾಡಿದ್ದಾರೆ. ಯಶ್ ಅವರು ಈ ಮೊದಲು ನೀಡಿದ್ದ ಹೇಳಿಕೆಯನ್ನು ಯಶ್ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಯಶ್ ಅವರು ಅಂದು ಹೇಳಿದ್ದು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ‘ನಮ್ಮ ಅಪ್ಪ ಯಾವಾಗಲೂ ಹೇಳುತ್ತಾ ಇರುತ್ತಾರೆ. ಧರ್ಮಸ್ಥಳ ಮಂಜುನಾಥನ ಬೇಡಿಕೋ ಎಲ್ಲದೂ ಆಗುತ್ತದೆ. ಆ ನಂಬಿಕೆಯಲ್ಲಿ ಬೆಳೆದು ಬಂದವರು ನಾವು. ಸಂಪೂರ್ಣ ಕರ್ನಾಟಕ ಆ ನಂಬಿಕೆಯಲ್ಲಿ ಬದುಕುತ್ತಾ…
ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಫೈನಲ್ ತಲುಪಿದ್ದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅಂತಿಮ ಕ್ಷಣದಲ್ಲಿ ಅನರ್ಹರಾಗಿದ್ದು, ಭಾರತೀಯ ಕ್ರೀಡಾಪ್ರೇಮಿಗಳಿಗೆ ಬಿಗ್ ಶಾಕ್ ಎದುರಾಗಿದೆ. ವಿನೇಶ್ ಫೋಗಟ್ ಅವರ ದೇಹದ ತೂಕದಲ್ಲಿ 150 ಗ್ರಾಂ ಏರಿಕೆಯಾದ ಪರಿಣಾಮ ಒಲಿಪಿಂಕ್ಸ್ ನಿಯಮದ ಅನುಸಾರ ಅನರ್ಹಗೊಳಿಸಲಾಗಿದೆ. ಈ ಆಘಾತದ ಸುದ್ದಿಯ ಮಧ್ಯೆ ವಿನೇಶ್ ಫೋಗಟ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿನೇಶ್ ಫೋಗಟ್ ಅವರು ನಿನ್ನೆ 50 ಕೆಜಿ ವಿಭಾಗದ ಮಹಿಳಾ ಕುಸ್ತಿ ಪಂದ್ಯದಲ್ಲಿ ಕ್ವಾರ್ಟರ್ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯವನ್ನು ಆಡಿದ್ದರು. ಎರಡೂ ಪಂದ್ಯದಲ್ಲಿ ವೀರಾವೇಶದ ಆಟ ಪ್ರವೇಶಿಸಿದ್ದ ವಿನೇಶ್ ಫೈನಲ್ ಪ್ರವೇಶಿಸಿದ್ದರು. ಇಂದು ರಾತ್ರಿ 9.45ಕ್ಕೆ 50 ಕೆಜಿ ವಿಭಾಗದ ಕುಸ್ತಿ ಪಂದ್ಯ ಫೈನಲ್ ಪಂದ್ಯ ನಿಗದಿಯಾಗಿತ್ತು. ನಿನ್ನೆ 50 ಕೆಜಿಗಿಂತ ಕಡಿಮೆಯೇ ತೂಕ ಇತ್ತು. ಕ್ವಾರ್ಟರ್ ಫೈನಲ್, ಸೆಮಿಫೈನಲ್ ಮುಗಿದ ಮೇಲೆ ನೀರು ಕುಡಿದಿದ್ದಾರೆ. ಇದರ ಜೊತೆಗೆ ಊಟ ಮಾಡಿದ ಮೇಲೆ ವಿನೇಶ್ ಪೋಗಟ್ ಅವರ ದೇಹದ…
82ನೇ ವರ್ಷದಲ್ಲಿ ಪೋಕ್ಸೋ ಕೇಸ್ ಎದುರಿಸಿದ ಯಡಿಯೂರಪ್ಪ ನನ್ನ ಬಗ್ಗೆ ಮಾತನಾಡುವ ನೈತಿಕತೆ ಏನು ಉಳಿಸಿಕೊಂಡಿದ್ದಾರೆ ಅಂತ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಬಿಎಸ್ ವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂಬ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೋರ್ಟ್ ದಯೆಯಿಂದ ಬಚಾವಾಗಿದ್ದಾರೆ ಅವರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಪೋಕ್ಸೋ ಕೇಸ್ ಎದುರಿಸಿದ ಇವರು ನನ್ನ ಬಗ್ಗೆ ಮಾತನಾಡೋದು ಸರೀನಾ? ಎಂದು ಪ್ರಶ್ನಿಸಿದ್ದಾರೆ. 82 ವರ್ಷ ವಯಸ್ಸಿನಲ್ಲಿ ಇದು ಬೇಕಿತ್ತಾ? ಯಡಿಯೂರಪ್ಪಗೆ ಯಾವ ನೈತಿಕತೆ ಇದೆ ನನ್ನ ಬಗ್ಗೆ ಮಾತನಾಡುವುದ್ದಕ್ಕೆ. ಯಡಿಯೂರಪ್ಪ ರಾಜಕೀಯ ಜೀವನದಿಂದ ನಿವೃತ್ತಿಯಾಗಬೇಕಿತ್ತು. ಅವರಿಗೆ ರಾಜಕೀಯ ನಿವೃತ್ತರಾಗಲು ಹೇಳಿ ಎಂದು ಖಡಕ್ ಪ್ರತಿಕ್ರಿಯೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚೆನ್ನೈ: ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಇಶಾ ಫೌಂಡೇಶನ್ನ ಸಂಸ್ಥಾಪಕ, ಆಧ್ಯಾತ್ಮಿಕ ಗುರುಗಳಾದ ಶ್ರೀ ಸದ್ಗುರು ಒತ್ತಾಯಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹಿಂದೂಗಳ ಮೇಲಿನ ದೌರ್ಜನ್ಯ ಬಾಂಗ್ಲಾದೇಶದ ಆಂತರಿಕ ವಿಷಯವಲ್ಲ. ನಮ್ಮ ನೆರೆಹೊರೆಯಲ್ಲಿರುವ ಅಲ್ಪಸಂಖ್ಯಾತರ ಸುರಕ್ಷತೆಗೆ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಒತ್ತಾಯಿಸಿದರು. ಬಾಂಗ್ಲಾದ ಹಿಂದೂಗಳ ಪರವಾಗಿ ನಿಲ್ಲದಿದ್ದರೆ ಭಾರತ ಎಂದಿಗೂ ಮಹಾಭಾರತವಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ದೌರ್ಜನ್ಯಗಳಿಂದ ನಮ್ಮ ಜನಾಂಗವನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ಹೇಳಿದ್ದಾರೆ. ಬಾಂಗ್ಲಾದೇಶದ 27 ಜಿಲ್ಲೆಗಳಲ್ಲಿ ಹಿಂದೂ ನಿವಾಸಗಳು ಮತ್ತು ಅವರ ವ್ಯಾಪಾರ ಸಂಸ್ಥೆಗಳ ಮೇಲೆ ದಾಳಿಗಳು ಮತ್ತು ಲೂಟಿಗಳ ವರದಿಗಳಿವೆ. ಪ್ರಧಾನಿ ರಾಜೀನಾಮೆ ನಂತರವೂ ಹಿಂಸಾತ್ಮಕ ಕೃತ್ಯ ಮುಂದುವರಿದಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸದ್ಯ ಜೈಲಿನಲ್ಲಿದ್ದು, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಅವರ ಬದಲು ಸಚಿವೆ ಅತಿಶಿ ಮರ್ಲೆನಾ ಅವರು ಧ್ವಜಾರೋಹಣ ಮಾಡಲಿದ್ದಾರಂತೆ. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸದ್ಯ ಜೈಲಿನಲ್ಲಿದ್ದಾರೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿನಿಂದ ಲೆಫ್ಟಿನೆಂಟ್ ಗವರ್ನರ್ಗೆ ಪತ್ರ ಬರೆದಿದ್ದು, ತನ್ನ ಬದಲು ಸಚಿವೆ ಅತಿಶಿ ಮರ್ಲೆನಾ ಧ್ವಜ ಹಾರಿಸುವುದಾಗಿ ತಿಳಿಸಿದ್ದಾರೆ. ಪ್ರತಿ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳು ಛಾರ್ ತ್ರಾಸಲ್ ಮೈದಾನದಲ್ಲಿ ನಡೆಯುತ್ತಿತ್ತು. ಅರವಿಂದ ಕೇಜ್ರಿವಾಲ್ ಸಾರ್ವಜನಿಕ ಭಾಷಣ ಮಾಡುತ್ತಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಾರವಾರ: ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿಯ ಮೇಲಿನ ಸೇತುವೆ, ಬುಧವಾರ ರಾತ್ರಿ 1:50 ರ ಸುಮಾರಿಗೆ ಕುಸಿದಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸೇತುವೆ ಕುಸಿತವಾದ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಕಾಳಿನದಿಯ ಸೇತುವೆ ಕುಸಿತಕ್ಕೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಸಾಕಷ್ಟು ಅಧ್ವಾನ ನಡೆದರೂ ಅವರು (ಕೇಂದ್ರ ಸರ್ಕಾರ) ಮೌನವಾಗಿರುವುದು ಅಚ್ಚರಿ ಮೂಡಿಸುತ್ತಿದೆ ಎಂದು ಅವರು ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಯೋಜನೆ ಕೇಂದ್ರ ಸರ್ಕಾರಕ್ಕೆ ಸೇರಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಐ.ಆರ್.ಬಿ ಕಂಪನಿ ಮೇಲೆ ಕೇಂದ್ರದ ಹಿಡಿತವಿದೆ. ಕಂಪನಿ ಈವರೆಗೆ ಹಲವು ಅವೈಜ್ಞಾನಿಕ ಕೆಲಸ ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ ಎಂದರು. ಕಾಳಿ ನದಿಗೆ ಹೊಸ ಸೇತುವೆ ನಿರ್ಮಿಸುವ ವೇಳೆ ಹಳೆಯ ಸೇತುವೆ ಮೇಲೆ ಭಾರದ ಯಂತ್ರೋಪಕರಣ ಇಟ್ಟು ಕೆಲಸ ಮಾಡಿದ್ದರು. ಅಂಕೋಲಾದ ಹಟ್ಟಿಕೇರಿಯಲ್ಲೂ ಅಂತಹ ಕೆಲಸ ನಡೆದಿತ್ತು.…
ತುಮಕೂರು: ಜಿಲ್ಲೆಯ ತಿಪಟೂರು ತಾಲೂಕಿನ ಹಾಲ್ಕುರಿಕೆ ಗ್ರಾಮದ 80 ವರ್ಷದ ವಯೋವೃದ್ಧೆ ಹುಚ್ಚಮ್ಮ ಎಂಬವರು ಗೃಹಲಕ್ಷ್ಮೀ ಹಣದ ಜೊತೆಗೆ ವೃದ್ಧಾಪ್ಯ ವೇತನವೂ ಸಿಗದೇ ಕಷ್ಟಪಡುತ್ತಿರುವುದಾಗಿ ಇತ್ತೀಚೆಗೆ ನಮ್ಮತುಮಕೂರು ಮಾಧ್ಯಮದಲ್ಲಿ ವರದಿ ಪ್ರಕಟವಾಗಿತ್ತು. “ಗೃಹ ಲಕ್ಷ್ಮಿಯ ಹಣವೂ ಇಲ್ಲ, ವೃದ್ದಾಪ್ಯ ವೇತನವೂ ಇಲ್ಲ: ವೃದ್ಧೆಯನ್ನು ಭಿಕ್ಷಾಟನೆ ದೂಡಿದ ಅಧಿಕಾರಿಗಳು” ಎಂಬ ಶೀರ್ಷಿಕೆಯಡಿ ನಮ್ಮತುಮಕೂರು ವರದಿ ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗ ವೃದ್ಧೆಗೆ ನೆರವಾಗಿದೆ. ರಘುರಾಜ್ ಎಂಬವರು ಈ ಕುರಿತ ವರದಿಗಳನ್ನು ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳ ಗಮನಕ್ಕೆ ತಂದಿದ್ದರು. ಇದರ ಬೆನ್ನಲ್ಲೇ ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಅಧಿಕಾರಿಗಳು, ವೃದ್ಧೆ ಹುಚ್ಚಮ್ಮ ಅವರ ಕಷ್ಟಕ್ಕೆ ನೆರವಾಗಿದ್ದಾರೆ. ಆಗಸ್ಟ್ 5 ರಂದು ತಿಪಟೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವೃದ್ಧೆಯ ಮನೆ ಭೇಟಿ ಮಾಡಿ ಸರ್ಕಾರಿ ಸೌಲಭ್ಯಗಳು ದೊರೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಿಳಿದು ಬಂದಿರುವುದೇನೆಂದರೆ, ಹುಚ್ಚಮ್ಮನವರು 2023ರ ಸೆಪ್ಟೆಂಬರ್ ನಲ್ಲಿ ಗೃಹಲಕ್ಷ್ಮಿ ಯೋಜನೆಗೆ…