Author: admin

ಪಾವಗಡ: ಶ್ರೀ ಗುರುಕುಲ ಪದವಿ ಪೂರ್ವ ಕಾಲೇಜು ಪಾವಗಡ ಮತ್ತು ಎಂಪ್ರೆಸ್ ಪದವಿ ಪೂರ್ವ ಕಾಲೇಜು ಲಿಂಗದಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಜರುಗಿದ 2024–25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಹೆಚ್.ವಿ.ವೆಂಕಟೇಶ್ ಭಾಗವಹಿಸಿ, ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ನಂತರ ತಾಲ್ಲೂಕು ಪದವಿ ಪೂರ್ವ ಕಾಲೇಜುಗಳ ಒಕ್ಕೂಟದಿಂದ ಶಾಸಕರಿಗೆ ಸನ್ಮಾನಿಸಿ ಗೌರವಿಸಿ ನೆನಪಿನ ಕಾಣಿಗೆ ನೀಡಿದರು. ಈ ವೇಳೆ ಪುರಸಭಾ ಅಧ್ಯಕ್ಷರಾದ ಪಿ.ಹೆಚ್.ರಾಜೇಶ್, ಸದಸ್ಯರಾದ ಕಲ್ಪವೃಕ್ಷ ರವಿ,ಗೊರ್ತಿ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ, ರಿಜ್ವಾನ್ ಉಲ್ಲಾ, ಬೋರಣ್ಣ, ಮಂಜುನಾಥ್, ಆಲಿ, ವೀರೇಂದ್ರ ಸೇರಿ ಇನ್ನೂ ಮುಂತಾದವರು ಇದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ: 9535156490 Provided by ಮೇಷ ರಾಶಿ: ಈ ದಿನ ಮಾಡುವ ಯಾವುದೇ ಕೆಲಸಗಳಲ್ಲಿ ಯಶಸ್ವಿಯಾಗಬೇಕು ಅಂದರೆ ಗೋಮಾತೆಗೆ ಅರಿಶಿಣವನ್ನು ಸವರಿ ಪೊಂಗಲನ್ನು ತಿನ್ನಲು ಕೊಡಬೇಕು. ಅದೃಷ್ಟದ ಸಂಖ್ಯೆ 43 ವೃಷಭ ರಾಶಿ : ಅತ್ಯಂತ ಸಂತೋಷದ ದಿನದಲ್ಲಿ ಇವತ್ತು ಆಗಿರಬಹುದು ಆದರೆ ಕೆಲವು ಅನಿರೀಕ್ಷಿತ ನಡೆಯದೆ ನಡೆಯಬಾರದಂತ ಘಟನೆಗಳ ನಡೆದು ಮನಸ್ಸಿಗೆ…

Read More

ತುಮಕೂರು:  ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಾದರಿಯಲ್ಲಿ ಬರುವ ಅಕ್ಟೋಬರ್ ಮಾಹೆಯ 11 ಹಾಗೂ 12ರಂದು 2 ದಿನಗಳ ಕಾಲ ತುಮಕೂರು ದಸರಾ ಕಾರ್ಯಕ್ರಮವನ್ನು ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು ಕಳೆದ 36 ವರ್ಷಗಳಿಂದ ವಿವಿಧ ಸಂಘಟನೆಗಳನ್ನೊಳಗೊಂಡ ದಸರಾ ಸಮಿತಿಯಿಂದ ನಗರದಲ್ಲಿ ದಸರಾ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಈ ದಸರಾ ಉತ್ಸವವನ್ನು ಮತ್ತಷ್ಟು ಮೆರಗುಗೊಳಿಸಲು ಜಿಲ್ಲಾಡಳಿತದ ವತಿಯಿಂದ ಈ ವರ್ಷ ಮೊದಲ ಬಾರಿಗೆ ತುಮಕೂರು ದಸರಾ ಉತ್ಸವವನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಉತ್ಸವದ ಯಶಸ್ವಿಗೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು. ತುಮಕೂರು ದಸರಾ ಉತ್ಸವದಲ್ಲಿ ಜಿಲ್ಲೆಯ ಸಾಹಿತ್ಯ, ಸಂಸ್ಕೃತಿ, ಕ್ರೀಡೆಯ ಹಿರಿಮೆಯನ್ನು ಹೆಚ್ಚಿಸುವಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು. ದಸರಾ ಸಾಂಸ್ಕೃತಿಕ ಹಬ್ಬವನ್ನು ಪಕ್ಷಬೇಧವಿಲ್ಲದೆ ಜಿಲ್ಲೆಯ ಶಾಸಕರು, ಸಂಸದರು, ಸಚಿವರು ಸೇರಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು…

Read More

ತುಮಕೂರು: ಕೊರಟಗೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು ಎಸ್.ಎಸ್.ಎಲ್.ಸಿ. ಮತ್ತು ಮೆಟ್ರಿಕ್ ನಂತರದ ಕೋರ್ಸುಗಳನ್ನು ಪ್ರಥಮ ದರ್ಜೆ ಹಾಗೂ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಇಲಾಖಾ ಜಾಲತಾಣ sw.kar.nic.in ನಲ್ಲಿ ಪ್ರೋತ್ಸಾಹಧನದ ಅರ್ಜಿ(ಹೊಸದು) ಎಂಬ ಲಾಗಿನ್‌ ನಲ್ಲಿ ವಿದ್ಯಾರ್ಥಿಗಳು ನೋಂದಣಿಯಾಗಿ ಆಧಾರ್ ನಂಬರ್ ಅನ್ನು ನಮೂದಿಸಿ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದ್ದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಇಲಾಖಾ ಜಾಲತಾಣದಲ್ಲಿ ಸಲ್ಲಿಸಿದ ಅರ್ಜಿ ಹಾಗೂ ದಾಖಲಾತಿಯನ್ನು ಸಹಾಯಕ ನಿರ್ದೇಶಕರು ಗ್ರೇಡ್–2, ಸಮಾಜ ಕಲ್ಯಾಣ ಇಲಾಖೆ, ಕೊರಟಗೆರೆ ಇವರಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ರಾಜ್ಯದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾದರೆ, ಅದನ್ನು ಹೈಕಮಾಂಡ್‌ ನವರು ನಿಭಾಯಿಸುತ್ತಾರೆ. ಆ ಸಂದರ್ಭ ಬಂದಾಗ ಮುಖ್ಯಮಂತ್ರಿ ಆಗುವವರು ಒಬ್ಬರೇ ಅಲ್ಲವೆ. ಆದ್ರೆ ಆ ಪರಿಸ್ಥಿತಿ ಈಗ ಇಲ್ಲ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾರೆ, ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಸಚಿವ ಸತೀಶ್‌ ಜಾರಕಿಹೊಳಿ ಅವರ ಮನೆಗೆ ನಾನು ಊಟಕ್ಕೆ ಹೋಗಿದ್ದೆ, ಇಬ್ಬರು ರಾಜಕಾರಣಿಗಳು ಭೇಟಿಯಾದಾಗ ಏನು ಮಾತನಾಡಿದ್ದೇವೆ ಎಂದರೆ ಅದ್ರಂತೆ ರಾಜಕೀಯದ ಬಗ್ಗೆ ಮಾತನಾಡಿದ್ದೇನೆ. ಮಾಧ್ಯಮದವರೊಂದಿಗೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದರು. ಸರಕಾರದಲ್ಲಿ ಟೀಕೆ ಟಿಪ್ಪಣಿಗಳನ್ನು ಕೇಳಿದ್ದೇವೆ, ಈಗಾಗಲೇ ನಮಗೆ ಗೊತ್ತಿಲ್ಲದಂತೆ ನ್ಯಾಯಾಲಯದಲ್ಲಿ ನಡೆಯುತ್ತಿದೆ, ಗುತ್ತಿಗೆದಾರರಿಂದ ಬಂದಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದರು. ಬಿಜೆಪಿ ಸರಕಾರದಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದ್ದೇವೆ. ಹಗರಣಗಳ ಬಗ್ಗೆ ನಡೆಯುವ ಅಧ್ಯಯನ ನಡೆದು ಮಧ್ಯಂತರ ವರದಿ ಬಂದಿವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತೆಂಗು (Cocos nucifera) ಮರವನ್ನು “ಕೈಗಾರಿಕೆಗಳ ತಾಯಿ” ಎಂದು ಕರೆಯಲಾಗುತ್ತದೆ. ಪ್ರತಿ ವರ್ಷ ಸೆಪ್ಟೆಂಬರ್ 2 ರಂದು ವಿಶ್ವ ತೆಂಗು ದಿನವನ್ನು ಆಚರಿಸಲಾಗುತ್ತದೆ. ಇದರಲ್ಲಿ ತೆಂಗು ಬೆಳೆಗಾರರು, ಉದ್ಯಮಿಗಳು, ಮತ್ತು ವಿವಿಧ ಸಂಸ್ಥೆಗಳು ತೆಂಗು ಬೆಳೆ ಮತ್ತು ಅದರ ಉತ್ಪನ್ನಗಳ ಮಹತ್ವವನ್ನು ಜಾಗತಿಕವಾಗಿ ಹಂಚಿಕೊಳ್ಳುತ್ತಾರೆ. ತೆಂಗು: ಒಂದೇ ಮರ, ಅನೇಕ ಉಪಯೋಗಗಳು: ತೆಂಗು ಮರವು ಬೆಳವಣಿಗೆಯ ಬಹುಮುಖತೆಯನ್ನು ತೋರಿಸುತ್ತದೆ. ಈ ಒಂದು ಮರದಿಂದ ಅನೇಕ ಪ್ರಮುಖ ಉತ್ಪನ್ನಗಳು ಲಭ್ಯವಾಗುತ್ತವೆ. ತೆಂಗಿನ ಎಣ್ಣೆ: ಆರೋಗ್ಯಕರ ಕೊಬ್ಬುಗಳು ಮತ್ತು ಆ್ಯಂಟಿ–ಆಕ್ಸಿಡೆಂಟ್‌ ಗಳಲ್ಲಿ ಶ್ರೀಮಂತ. ಇದನ್ನು ಅಡುಗೆ, ಸೌಂದರ್ಯವರ್ಧಕ, ಮತ್ತು ಔಷಧೀಯ ಉತ್ಪನ್ನಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ತೆಂಗಿನ ನೀರು: ಪ್ರಕೃತಿಯ ಹಾರ್ಮೋನಿಕ ದ್ರವ. ಇದು ಸೂಪರ್ ಹೈಡ್ರೇಟಿಂಗ್ ಮತ್ತು ವಿದ್ಯುತ್ ಲವಣಗಳಿಂದ ಶ್ರೀಮಂತವಾಗಿದೆ. ಕ್ರೀಡಾಪಟುಗಳಿಂದ ಉತ್ಸಾಹದಿಂದ ಬಳಸದ ಈ ಪಾನೀಯವನ್ನು ನೀರಿನ ಆಯ್ಕೆಯಾಗಿ ಪರಿಗಣಿಸಲಾಗುತ್ತದೆ. ತೆಂಗಿನ ಹಣ್ಣು ಮತ್ತು ಬೊಮ್ಮಲು: ತೆಂಗಿನ ತಾಜಾ ಹಣ್ಣು ಆಹಾರ ಮತ್ತು ಪಾನೀಯಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ. ತೆಂಗಿನ ಬೊಮ್ಮಲು ಬಿಸ್ಕತ್ತು…

Read More

ಇ ಸಿಗರೇಟ್‌ ಮಾರಾಟಕ್ಕೆ ನಿಷೇಧವಿದ್ದರೂ ಮಣಿಪಾಲ ಭಾಗದಲ್ಲಿ ಮತ್ತೆ ಇ ಸಿಗರೇಟ್‌ ಹಾವಳಿ ಕಂಡು ಬರುತ್ತಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ ಸಿಗರೇಟ್‌ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್‌ ಉನೈಶ್‌(25)ಹಾಗೂ ಸಾವಿರಾರು ರೂ.ಮೌಲ್ಯದ ಇ ಸಿಗರೇಟ್‌ ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನಿಷೇಧಿತ ಇ ಸಿಗರೇಟ್‌ ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಮುಂಬಯಿಯಿಂದ ವಸ್ತುಗಳನ್ನು ಖರೀದಿಸುತ್ತಿದ್ದರು. ಕೂಲ್‌ ಡ್ರಿಂಕ್ಸ್‌, ಪಫ್ಯೂರ್ಮ್, ಲೈಟರ್‌ ಗಳಂತಹ ವಸ್ತುಗಳನ್ನು ಮುಂಬಯಿಯಿಂದ ಬಸ್‌ ಹಾಗೂ ರೈಲು ಮಾರ್ಗದ ಮೂಲಕ ಸುಲಭದಲ್ಲಿ ಉಡುಪಿ ಜಿಲ್ಲೆಗೆ ತಂದು ಇಲ್ಲಿ ಮಾರಾಟ ಮಾಡುತ್ತಿರುವ ಅಂಶವೂ ಬೆಳಕಿಗೆ ಬಂದಿದೆ. ಮಣಿಪಾಲದ ವ್ಯಾಪ್ತಿಯ ಕೆಲವೊಂದು ಅಂಗಡಿಗಳಲ್ಲಿ ಕೋವಿಡ್‌ ಅವಧಿಯಲ್ಲಿ ಇ ಸಿಗರೇಟ್‌ ಗಳನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತಿತ್ತು. ಮಣಿಪಾಲ ಪೊಲೀಸರು ನಿರಂತರ ದಾಳಿ ನಡೆಸಿ ಹಲವಾರು ವಸ್ತುಗಳನ್ನು ವಶಕ್ಕೆ ಪಡೆದು ದಂಡ ವಿಧಿಸಿದ್ದರು. ಬಳಿ ಇದರ ಮಾರಾಟ ಅಂಗಡಿಗಳಲ್ಲಿ ಇರಲಿಲ್ಲ. ಪ್ರಸ್ತುತ…

Read More

ಬೆಂಗಳೂರು ಅರ್ಥ್‌ ಮೂವರ್ಸ್ ಲಿಮಿಟಿಡ್‌ ನಲ್ಲಿ (ಬೆಮೆಲ್‌) ವಂದೇ ಭಾರತ್‌ ಸ್ಲೀಪರ್‌ ರೈಲು ನಿರ್ಮಾಣವಾಗಿದೆ. ಮುಂದಿನ ಮೂರು ತಿಂಗಳ ಒಳಗೆ ಸ್ಲೀಪರ್‌ ರೈಲು ಸಂಚಾರ ಆರಂಭಗೊಳ್ಳಲಿದೆ. ಅದಕ್ಕೂ ಮುನ್ನ ಪ್ರಾಯೋಗಿಕ ಸಂಚಾರ ನಡೆಯಲಿದೆ. ಗಂಟೆಗೆ 160 ಕಿ.ಮೀ. ವೇಗದಲ್ಲಿ ಚಲಿಸುವ ಸಾಮರ್ಥ್ಯವಿರುವ ಈ ರೈಲು, ಸುಧಾರಿತ ಅಪಘಾತ ಸುರಕ್ಷಾ ವಿನ್ಯಾಸವನ್ನು ಹೊಂದಿದೆ.ಜೊತೆಗೆ ರೈಲ್ವೆ ಬೋಗಿಗಳು ಐಷಾರಾಮಿ, ಸಕಲ ಸೌಲಭ್ಯದ ಸಂಚಾರಿ ಅನುಭವ ನೀಡಲಿವೆ. ವಂದೇ ಭಾರತ್‌ ಸ್ಲೀಪರ್‌ ರೈಲು ರಾತ್ರಿ ವೇಳೆ 800-1200 ಕಿ.ಮೀ. ದೂರ ಕ್ರಮಿಸಲು ಅನುಕೂಲವಾಗುಂತೆ ರೂಪಿಸಲಾಗಿದೆ. ವಂದೇ ಭಾರತ್‌ ಸ್ಲೀಪರ್‌ ರೈಲಿನಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ರಾಜಧಾನಿ ಎಕ್ಸ್‌ ಪ್ರೆಸ್‌ ರೈಲಿನ ದರಕ್ಕೆ ಸರಿಸಮವಾಗಿ ವಂದೇ ಭಾರತ್‌ ಸ್ಲೀಪರ್‌ ದರ ಇರಲಿದೆ ಎಂದು ಸಚಿವರು ಮಾಹಿತಿ ನೀಡಿದರು. ಈ ರೈಲಿನಲ್ಲಿ 16 ಬೋಗಿಗಳು ಇರಲಿದೆ. ಅವುಗಳಲ್ಲಿ ಥರ್ಡ್ ಎಸಿಯ 10 ಕೋಚ್‌ ಗಳು, ಸೆಕೆಂಡ್ ಎಸಿಯ 4 ಹಾಗೂ ಫಸ್ಟ್‌ ಎಸಿಯ ಒಂದು ಕೋಚ್ ಇರಲಿದೆ.…

Read More

ತುಮಕೂರು: ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಂಸ್ಥೆ ವತಿಯಿಂದ ನೂತನ ಜಿಲ್ಲಾ ಸಮಿತಿ  ರಚನೆ ಸಭೆಯು ಬಿಎಚ್ ರಸ್ತೆಯ ಸಿ ಏನ್ ವಿ ಚೇಂಬರ್ಸ್ ನ ಸಭಾಂಗಣದಲ್ಲಿ ನಡೆಯಿತು. ದೇಶದಲ್ಲಿ ಸುಮಾರು 900ಕ್ಕೂ ಹೆಚ್ಚು ಮಾನವ ಹಕ್ಕುಗಳ ಸಂಘಗಳಿವೆ ಚಿಕ್ಕಮಗಳೂರಿನಲ್ಲಿ ಅನಧಿಕೃತವಾಗಿದ್ದ ಮನೆ ಕಳೆದುಕೊಂಡವರಿಗೆ ಈ ಸಂಸ್ಥೆಯು ಮನೆ ಕಟ್ಟಿಸಿ ಕೊಟ್ಟಿದೆ. ಬಾಲಕಾರ್ಮಿಕರನ್ನು ರಕ್ಷಿಸಿ ಅಕ್ರಮ ಮೈನಿಂಗ್ ಗಣಿಗಾರಿಕೆ ವಿಚಾರದಲ್ಲಿ ಎರಡು ಕಡೆ ಮೇಲಾಧಿಕಾರಿಗಳಿಂದ ಗಣಿಗಾರಿಕೆಯನ್ನು ನಿಲ್ಲಿಸಲಾಗಿರುತ್ತದೆ. ಕಾನೂನು ಸಲಹೆಗಾರರಾದ ದೀಪಕ್ ಡಿ ಕಾರ್ಯಕ್ರಮದಲ್ಲಿ ಮಾತನಾಡಿ,  ಸಂಸ್ಥೆಯ ರಿಜಿಸ್ಟ್ರೇಷನ್ ನಂಬರ್ ಅಳವಡಿಸದೆ ಇರುವುದು ಕಾಣುತ್ತಿದ್ದು ಇದು ಸಂಘದ ನೋಂದಣಿ ಬಗ್ಗೆ ಅನುಮಾನಕ್ಕೆ ಆಸ್ಪದ ಆಗುತ್ತದೆ ಆದ್ದರಿಂದ ನೊಂದಣಿ ಸಂಖ್ಯೆಯನ್ನು ಇನ್ನು ಮುಂದೆ ದಾಖಲಿಸಿ ಎಂದರು. ರಾಜ್ಯ ಕಾರ್ಯಧ್ಯಕ್ಷ, ಕಾನೂನು ಸಲಹೆಗಾರ ಅನಿಲ್ ಕುಮಾರ್  ಉದ್ಘಾಟನೆ ನಂತರ ಮಾತನಾಡಿ,  ಅಂಬೇಡ್ಕರ್ ರವರುನೀಡಿದ ಸಂವಿಧಾನದಲ್ಲಿ ವಾಕ್ ಸ್ವಾತಂತ್ರ, ಧಾರ್ಮಿಕ ಸ್ವಾತಂತ್ರ್ಯ, ಶೈಕ್ಷಣಿಕ ಸ್ವಾತಂತ್ರ್ಯ ಸಂವಿಧಾನಿಕವಾಗಿ, NHRIC ಕಾರ್ಯನಿರ್ವಹಿಸುತ್ತಿದೆ. ಇತ್ತೀಚೆಗೆ ಧಾರವಾಡ ಮತ್ತು ಕಲ್ಬುರ್ಗಿ ಹೈಕೋರ್ಟ್…

Read More

ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಹೆಚ್ಚಿನ ಶುಲ್ಕದ ಬರೆ ಬೀಳಲಿದೆ. ಜೋಗ ನಿರ್ವಹಣಾ ಪ್ರಾಧಿಕಾರ ವತಿಯಿಂದ ಸುಮಾರು 183.7 ಕೋಟಿ ರೂ. ವೆಚ್ಚದಲ್ಲಿ ಜಲಪಾತದ ಆವರಣವನ್ನು ಅಂತರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ಮೂಲ ಸೌಕರ್ಯ ಪೂರ್ಣವಾಗುವ ಮೊದಲೇ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ.ಜಲಪಾತ ವೀಕ್ಷಣೆಗೆ ಈ ಹಿಂದೆ ಬಸ್ ಗೆ 150ರೂ. ಇದ್ದ ಪ್ರವೇಶ ಶುಲ್ಕವನ್ನು 200 ರೂ.ಗೆ ಹೆಚ್ಚಳ ಮಾಡಲಾಗಿದೆ. ಟಿಟಿ, ಮಿನಿ ಬಸ್ ದರ 100 ರಿಂದ 150 ರೂ. ಗೆ ಹೆಚ್ಚಳವಾಗಿದೆ. ಆಟೋರಿಕ್ಷಾ 30 ರಿಂದ 40ರೂ., ಬೈಕ್ ಗೆ 20 ರಿಂದ 30 ರೂ. ಗೆ ಶುಲ್ಕ ಹೆಚ್ಚಳ ಮಾಡಲಾಗಿದೆ. ಪ್ರವಾಸಿಗರಿಗೆ 10ರೂ ಪ್ರವೇಶ ದರವಿದ್ದು, ಅದನ್ನು 20 ರೂ. ಗೆ ಹೆಚ್ಚಳ ಮಾಡಲಾಗಿದೆ. 6-16 ವರ್ಷದೊಳಗಿನ ಮಕ್ಕಳಿಗೆ 10 ರೂ. ಶುಲ್ಕ ನಿಗದಿ ಮಾಡಲಾಗಿದೆ. ಕ್ಯಾಮೆರಾ ತೆಗೆದುಕೊಂಡು ಹೋದರೆ 100 ರೂ., ಡ್ರೋನ್ ಗೆ 500…

Read More