Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ—ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ. ಈ ನಡುವೆ ಈ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾ ಹಗರಣ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಗೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಂದ ನನಗೆ ಬಂದಿರುವುದು ಒಂದೇ ನೋಟಿಸ್, ಆ ನೋಟಿಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ. ಸಿಎಸ್ ರಾಜ್ಯಪಾಲರನ್ನು ಭೇಟಿಯಾಗಿರುವುದು ಬೇರೆ ವಿಚಾರಕ್ಕೆ, ಸಿಎಸ್ ಆಗಿ ನೇಮಕವಾಗಿರುವುದಕ್ಕೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ ಎಂದರು. ರಾಜ್ಯಪಾಲರು ನೀಡಿರುವ ನೋಟಿಸ್ ಗೆ ನಾನು ಈಗಾಗಲೇ ಉತ್ತರ ಕೊಟ್ಟಿದ್ದೇನೆ, ಸಚಿವ ಸಂಪುಟದಿಂದ ನೋಟಿಸ್ ಗೆ ಉತ್ತರ ನೀಡಲಾಗಿದೆ. ಕಾನುನಾತ್ಮಕವಾಗಿ ರಾಜ್ಯಪಾಲರು ಉತ್ತರನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷದ ಅವಾನಿ ಲೀಗ್ ಪಕ್ಷದ ಕಾರ್ಯಕರ್ತರು ಹಾಗೂ ಅವರ ಕುಟುಂಬದವರ ಮಾರಣಹೋಮವೇ ನಡೆಯುತ್ತಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಕುಟುಂಬಸ್ಥರ 29 ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ಶೇಖ್ ಹಸೀನಾ ಭಾರತಕ್ಕೆ ಪರಾರಿಯಾದ ಬೆನ್ನಲೇ ಅವಾನಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ. ಅವಾನಿ ಪಕ್ಷವನ್ನು ಗುರಿಯಾಗಿಸಿ ದಾಳಿ ನಡೆಯುತ್ತಿವೆ. ಸತ್ಕಿರಾ ಪ್ರದೇಶವೊಂದರಲ್ಲೇ ಅವಾನಿ ಪಕ್ಷದ 10 ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ 5 ಮಂದಿ ಅಪ್ರಾಪ್ತರು ಎಂದು ಹೇಳಲಾಗಿದೆ. ಅವಾನಿ ಪಕ್ಷದ ಮುಖಂಡರ ಮನೆ ಹಾಗೂ ಅಂಗೆಇಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಅಂಗಡಿಗಳನ್ನು ಪುಂಡರು ಲೂಟಿ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಬಾಂಗ್ಲಾದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಡೆಲ್ ಕಂಪೆನಿ ಕಳೆದ 15 ತಿಂಗಳುಗಳಲ್ಲಿ ಎರಡನೇ ಸುತ್ತಿನಲ್ಲಿ ಸಾವಿರಾರು ಕಾರ್ಮಿಕರನ್ನು ಕಂಪೆನಿಯಿಂದ ಕೈಬಿಟ್ಟಿದ್ದು, ಕಾರ್ಮಿಕರ ಸಾಮೂಹಿಕ ವಜಾವನ್ನು ಕಂಪೆನಿ ದೃಢಪಡಿಸಿದೆ. ಆದರೆ ಎಷ್ಟು ಕಾರ್ಮಿಕರನ್ನು ವಜಾ ಮಾಡಲು ನಿರ್ಧರಿಸಿದೆ ಎನ್ನುವುದನ್ನು ಬಹಿರಂಗಪಡಿಸಲ ಕಂಪೆನಿ ನಿರಾಕರಿಸಿದೆ. ಎಐ ಉತ್ಪನ್ನಗಳಿಗೆ ಆದ್ಯತೆ ನೀಡಲು ಡೆಲ್ ತನ್ನ ಮಾರಾಟ ತಂಡಗಳನ್ನು ಬದಲಾಯಿಸುತ್ತಿದೆ. ಆಂತರಿಕ ಜ್ಞಾಪಕ ಪತ್ರದಲ್ಲಿ, ‘ನಾವು ನಿರ್ವಹಣೆಯ ಪದರಗಳನ್ನು ಸುವ್ಯವಸ್ಥಿತಗೊಳಿಸುತ್ತಿದ್ದೇವೆ ಮತ್ತು ನಾವು ಎಲ್ಲಿ ಹೂಡಿಕೆ ಮಾಡುತ್ತೇವೆ ಎಂಬುದನ್ನು ಮರುಪರಿಶೀಲಿಸುತ್ತಿದ್ದೇವೆ’ ಎಂದು ಹೇಳಲಾಗಿದೆ. ಡೆಲ್ ಈ ವಾರ 12,500 ಕ್ಕೂ ಹೆಚ್ಚು ಉದ್ಯೋಗಿಗಳನ್ನು ತೆಗೆದುಹಾಕಿದೆ ಮತ್ತು ಇದು ಡೆಲ್ ನ ಮಾರಾಟ ಮತ್ತು ಮಾರ್ಕೆಟಿಂಗ್ ತಂಡಗಳ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಡೆಲ್ 13,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವ್ಯವಸ್ಥೆ ಹಾಗೂ ಕಾರ್ಯವೈಖರಿ ಬಗ್ಗೆ ಕೆಲ ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ಒದಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಕೆಆರ್ ಎಸ್ ಪಕ್ಷವು ಲಂಚಮುಕ್ತ ಅಭಿಯಾನಕ್ಕೆ ಚಾಲನೆ ನೀಡಿತು. ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ತುಕಾರಾಮ ಗೌರೆ, ಕೆಆರ್’ಎಸ್ ಪಕ್ಷವು ಸ್ವಚ್ಛ ಪ್ರಾಮಾಣಿಕ ಮತ್ತು ಜನಪರ ರಾಜಕಾರಣಕ್ಕಾಗಿ ಶ್ರಮಿಸುತ್ತಿದ್ದೇವೆ ಮತ್ತು ಈ ಮೂಲಕ ಜನರ ಏಳಿಗೆಗೆ ಮತ್ತು ಸಂಕಷ್ಟಕ್ಕೆ ನೆರವಾಗಲು ಬಯಸುತ್ತೇವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಮತ್ತು ತಾಲೂಕಿನ ಸರ್ಕಾರಿ ಕಚೇರಿ ಆಸ್ಪತ್ರೆಗಳಲ್ಲಿನ ಅವ್ಯವಸ್ಥೆಯನ್ನು ಕಂಡು ಪರಿಶೀಲಿಸಿ ಅವುಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳಲು ತಮಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ KRS ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿಯಾದ ತುಕಾರಾಮ ಗೌರೇ, ಜಿಲ್ಲಾ ಅಧ್ಯಕ್ಷರಾದ ಹನುಮಂತ ಮಟ್ಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಬಜರಂಗ್ ಪವಾರ್,…
ತುಮಕೂರು: ಉರ್ದು ಭಾಷೆಯ ಶ್ರೀಮಂತಿಕೆಯನ್ನು ಅರಿಯಲು, ಸರ್ಕಾರಿ ಫಸ್ಟ್ ಗ್ರೇಡ್ ಕಾಲೇಜು ತುಮಕೂರು ಕಾಲೇಜಿನಲ್ಲಿ 2024ರ ಉರ್ದು ಉತ್ಸವವನ್ನು ಜುಲೈ 7ರಂದು ವಿಶ್ವಮಾನವ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸಲಾಗುತ್ತಿದೆ. ಮುಖ್ಯ ಅತಿಥಿಗಳು: ಡಾ. ಮಸೂದ್ ಸಿರಾಜ್ ಮತ್ತು ಡಾ. ಮನ್ಸೂರ್ ನೌಮಾನ್ ಅವರು ತಮ್ಮ ಗಂಭೀರವಾದ ಭಾವನೆಗಳನ್ನು ಹಂಚಿಕೊಳ್ಳಲಿದ್ದಾರೆ. ಡಾ. ಮಸೂದ್ ಸಿರಾಜ್ ಅವರು ಉರ್ದು ವಿಭಾಗದ ಮಾಜಿ ಅಧ್ಯಕ್ಷರಾಗಿದ್ದು, ಮಾನಸಗಂಗೋತ್ರಿ, ಮೈಸೂರಿನಲ್ಲಿದ್ದಾಗ ತಮ್ಮ ಕಾರ್ಯಕಾಲದಲ್ಲಿ ಈ ಕ್ಷೇತ್ರದಲ್ಲಿ ಹಲವಾರು ಮಹತ್ವದ ಬದಲಾವಣೆ ತರುವಲ್ಲಿ ಶ್ರಮಿಸಿದ್ದಾರೆ. ಡಾ. ಮನ್ಸೂರ್ ನೌಮಾನ್ ಅವರು ಬೆಂಗಳೂರು ಎಲ್ ಬಿಎಸ್ ಕಾಲೇಜಿನ ಪ್ರಾಂಶುಪಾಲರು ಮತ್ತು ಉರ್ದು ವಿಭಾಗದ ಮುಖ್ಯಸ್ಥರಾಗಿದ್ದು, ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಅಧ್ಯಕ್ಷತೆ: ಪ್ರೊ. ತರ್ನ್ನುಮ್ ನಿಖತ್ ಎಸ್ ಅವರು ನಮ್ಮ ಕಾಲೇಜಿನ ಪ್ರಾಂಶುಪಾಲರು ಮತ್ತು ಉರ್ದು ವಿಭಾಗದ ಮುಖ್ಯಸ್ಥರಾಗಿ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಅವರ ನೇತೃತ್ವದಲ್ಲಿ ಈ ಉತ್ಸವವು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ. ಅತಿಥಿಗಳು: ಹೆಚ್ಚಿನ ಅನೇಕ ಪ್ರಖ್ಯಾತ ವ್ಯಕ್ತಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಅವರಲ್ಲಿ…
ಪಾವಗಡ: ತಾಲ್ಲೂಕಿನಲ್ಲಿ ಆರೋಗ್ಯ ಶಿಕ್ಷಣ ಮತ್ತು ಉದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಬದಲಾವಣೆ ಬೇಕಾಗಿದೆ ಎಂದು ಹೈಕೋರ್ಟ್ ವಕೀಲ ಹರಿರಾಮ್ ತಿಳಿಸಿದರು. ತಾಲ್ಲೂಕಿನ ಬಲ್ಲೇನಹಳ್ಳಿ ಗ್ರಾಮದಲ್ಲಿ ಭಾರತೀಯ ಪರಿವರ್ತನ ಸಂಘ, ನಿಸರ್ಗ ದೃಷ್ಠಿಧಾಮ, ಬೆಂಗಳೂರುರವರ ಸಹಯೋಗದಲ್ಲಿ ಹರಿರಾಮ್ ರವರ ಹುಟ್ಟುಹಬ್ಬದ ಅಂಗವಾಗಿ ಮಂಗಳವಾರದಂದು ಹಮ್ಮಿಕೊಂಡಿದ್ದ ಕಣ್ಣಿನ ತಪಾಸಣೆ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಾಲ್ಲೂಕಿನ ಬಹುತೇಕ ಯುವಕರು ಉದ್ಯೋಗ ಗುಳೆ ಹೋಗುತ್ತಿದ್ದಾರೆ. ಸಣ್ಣ ಆರೋಗ್ಯ ಸಮಸ್ಯೆಗೂ ದೂರದ ನಗರಗಳಿಗೆ ಹೋಗಬೇಕಾದ ಸ್ಥಿತಿ ಇದೆ. ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಎಂಬುದು ಮರೀಚಿಕೆಯಾಗುತ್ತಿದೆ. ಇದೆಲ್ಲವೂ ಬದಲಾಗಬೇಕು ಎಂದರು. ಪತ್ರಿಕೆಯವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ನಾನು ಸದ್ಯಕ್ಕೆ ರಾಜಕೀಯ ಪ್ರವೇಶದ ಚಿಂತನೆಯಲ್ಲಿ ಇಲ್ಲ. ಕೆಲವು ಸಂದರ್ಭದಲ್ಲಿ ಜನತೆಯ ಅಭಿಲಾಷೆಗಳಿಗೆ ಮತ್ತು ಒತ್ತಾಯಗಳಿಗೆ ಸ್ಪಂದಿಸಬೇಕಾಗುತ್ತದೆ. ತಾಲ್ಲೂಕಿನ ಜೀವನ ಮಟ್ಟ ಉತ್ತಮಗೊಳ್ಳಬೇಕಾದರೆ ಜನಾಭಿಪ್ರಾಯ ಮುಖ್ಯವಾಗುತ್ತದೆ ಎಂದರು. ಶಿಬಿರದಲ್ಲಿ ಸುಮಾರು 157 ಜನರ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ಮಾಡಲಾಯಿತು. ಡಾ.ದೇವರಾಜ್ ನಾಯ್ಕರವರ ವೈದ್ಯರ ತಂಡ,…
ಸರಗೂರು: ಇತ್ತೀಚೆಗೆ ಕಾಡಿನಿಂದ ನಾಡಿಗೆ ಬರುವ ಮೃಗಗಳ ಸಂಖ್ಯೆ ಹೆಚ್ಚುತ್ತಿದೆ. ಸರಗೂರು ತಾಲ್ಲೂಕಿಯಲ್ಲಂತೂ ವಿಪರೀತ ಭಯದ ವಾತಾವರಣ ನಿರ್ಮಾಣವಾಗಿದೆ. ನುಗು ಜಲಾಶಯದ ಹಿನ್ನೀರು ಬಳಿ ಇರುವ ಹೊಸ ಬಿರ್ವಾಳ್ ವಲಯದ ಅರಣ್ಯ ವ್ಯಾಪ್ತಿಯ ಹೊಸಹೆಗ್ಗುಡಿಲು ಗ್ರಾಮದಲ್ಲಿ ಶನಿವಾರದಂದು ಜಮೀನು ಒಂದರಲ್ಲಿ ಹುಲಿ ಹೆಜ್ಜೆಯ ಗುರುತು ಕಾಣಿಸಿಕೊಂಡು ಪ್ರತ್ಯಕ್ಷವಾಗಿ ಆತಂಕ ನಿರ್ಮಿಸಿರುವ ಬೆನ್ನಲ್ಲೇ ಹೊಸಹೆಗ್ಗುಡಿಲು ಗ್ರಾಮದ ಜಮೀನಿನಲ್ಲಿ ಹುಲಿಯೊಂದು ಹೆಜ್ಜೆ ಗುರುತು ಕಾಣಿಸಿಕೊಂಡು ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ. ಹೆಡಿಯಾಲ ಮಾರ್ಗವಾಗಿ ಸರಗೂರು ತಾಲ್ಲೂಕಿನಗೆ ಮಧ್ಯೆ ರಸ್ತೆಯ ಬದಿಯಲ್ಲಿ ಇರುವ ಹೊಸಹೆಗ್ಗುಡಿಲು ಗ್ರಾಮದ ಸಿದ್ದರಾಜು ಎಂಬುವರ ಜಮೀನಲ್ಲಿ ಬಿರ್ವಾಳ್ ಗ್ರಾಮಕ್ಕೆ ತೆರಳುವ ರಸ್ತೆ ಮಧ್ಯೆ ಹುಲಿ ಪ್ರತ್ಯಕ್ಷವಾಗಿದೆ. ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು ಜನರು ಅಕ್ಷರಶಃ ಬೆಚ್ಚಿ ಬಿದ್ದಿದ್ದಾರೆ. ಜಮೀನಲ್ಲಿ ಕಾವಲು ಕಾಯುವ ಸಮಯದಲ್ಲಿ ರೈತರು ಒಬ್ಬರು ದಾಟುತ್ತಿದ್ದ ಹುಲಿಯ ದೃಶ್ಯ ಸೆರೆಯಾಗಿದೆ. ಈ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಚಿರತೆ ಮತ್ತು ಹುಲಿ ಹಾವಳಿಯಿಂದ ಈಗಾಗಲೇ ಭಯ ಹೆಚ್ಚಿದೆ. ಈಗ…
ತುಮಕೂರು: ಹಾಲಪ್ಪ ಪ್ರತಿಷ್ಠಾನ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೈಲ್ವೆ ಸ್ಟೇಷನ್ ರಸ್ತೆ, ತುಮಕೂರು, ಇವರ ನೇತೃತ್ವದಲ್ಲಿ “ಯುವ ಸಬಲೀಕರಣ ಶಿಬಿರ” (ಉದ್ಯೋಗ ಹಾಗೂ ಕೌಶಲ್ಯಮೇಳ)ವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವು ಮಾನ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಜನ್ಮದಿನದ ಅಂಗವಾಗಿ, ಸರ್ಕಾರದ ವಿವಿಧ ಇಲಾಖೆಗಳನ್ನು, ಕಂಪನಿಗಳನ್ನು ಹಾಗೂ ಖಾಸಗಿ ಸಂಸ್ಥೆಗಳ ಸಹಭಾಗಿತ್ವವನ್ನು ಒಳಗೊಂಡಿತ್ತು. ಈ ಉದ್ಯೋಗ ಮೇಳವು ಯುವಜನತೆಗೆ ಸುಭದ್ರ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗಿದ್ದು, ಸುಮಾರು 34 ಕಂಪನಿಗಳು ಹಾಗೂ 3,906 ಅಭ್ಯರ್ಥಿಗಳು ಭಾಗವಹಿಸಿದ್ದಾರೆ. ಈ ಮೇಳದಲ್ಲಿ 203 ಅಭ್ಯರ್ಥಿಗಳು ನೇರವಾಗಿ ನೇಮಕಗೊಂಡಿದ್ದು, 207 ಅಭ್ಯರ್ಥಿಗಳು ಎರಡನೇ ಸಂದರ್ಶನಕ್ಕೆ ಆಯ್ಕೆಗೊಂಡಿದ್ದಾರೆ. 390 ಅಭ್ಯರ್ಥಿಗಳು ತರಬೇತಿಗೆ ಆಯ್ಕೆಯಾದರೆ, 51 ಅಭ್ಯರ್ಥಿಗಳು ಸ್ವಯಂ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಮಹತ್ವದ ಕಾರ್ಯಕ್ರಮವು ಸ್ಥಳೀಯ ಯುವಕರಿಗೆ ಹೊಸ ಅವಕಾಶಗಳನ್ನು ತೆರೆದಿದ್ದು, ಅವರ ಪ್ರತಿಭೆ ಮತ್ತು ಕೌಶಲ್ಯವನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸಿದೆ. ಈ ಮೇಳದ ಯಶಸ್ಸಿಗೆ ಕಾರಣರಾದ ಹಾಲಪ್ಪ ಪ್ರತಿಷ್ಠಾನ, ಸರ್ಕಾರಿ ಪ್ರಥಮ ದರ್ಜೆ…
ತೆಲುಗು ಚಿತ್ರರಂಗದ ನಿರ್ಮಾಪಕ ಮತ್ತು ನಿರ್ದೇಶಕ ಕೊಮರಿ ಜನಯ್ಯ ನಾಯ್ಡು (44) ಅವರ ಮೃತದೇಹ ಕುಕಟ್ಪಲ್ಲಿಯ ಭಾಗ್ಯ ನಗರದ ಹೋಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಮರಿ ಜನಯ್ಯ ನಾಯ್ಡು ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವುದನ್ನು ಮೊದಲು ಹೊಟೇಲ್ ಸಿಬ್ಬಂದಿ ಗಮನಿಸಿ ಆಡಳಿತ ಮಂಡಳಿ ಹಾಗೂ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ಕೊಮರಿ ಜನಯ್ಯ ನಾಯ್ಡು ಅವರು ಹಲವು ಚಲನ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ತೊಲುಬೊಮ್ಮಲ ಸಿತ್ರಾಲು ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದರು. ಅದರಲ್ಲಿ ‘ಜಿಎಸ್ಟಿ (ಗಾಡ್ ಸೈಥಾನ್ ಟೆಕ್ನಾಲಜಿ)’ ಎಂಬ ಸಣ್ಣ ಚಲನಚಿತ್ರವನ್ನು ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಂಡ್ಯ: ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮೀ ಯೋಜನೆ ಬಂದಿಲ್ಲ ಅಂತ ಫಲಾನುಭವಿಗಳು ಟೆನ್ಷನ್ ನಲ್ಲಿದ್ದಾರೆ. ಈ ನಡುವೆ ಎರಡು ತಿಂಗಳ ಹಣವನ್ನೂ ಒಟ್ಟಿಗೆ ಬ್ಯಾಂಕ್ ಅಕೌಂಟ್ ಗೆ ಜಮಾ ಮಾಡ್ತೀವಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಗೃಹ ಲಕ್ಷ್ಮೀ ಹಣ ಬಂದಿದ್ಯಾ ಅಂತ ಕಳೆದೆರಡು ತಿಂಗಳಿನಿಂದ ಮನೆಯಜಮಾನಿಯರು ಬ್ಯಾಂಕ್ ಗೆ ಬರ್ತಾ ಇದ್ದಾರೆ, ಹೋಗ್ತಾ ಇದ್ದಾರೆ. ಆದರೂ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿರಲಿಲ್ಲ. ಇದೀಗ ಎರಡು ತಿಂಗಳ ಹಣವನ್ನೂ ಒಟ್ಟಿಗೆ ಬ್ಯಾಂಕ್ ಅಕೌಂಟ್ ಗೆ ಜಮಾ ಮಾಡುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಮಂಡ್ಯದಲ್ಲಿ ಮಂಗಳವಾರ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅವರು ತಿಳಿಸಿದರು. ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಿಂದ ಅಧಿಕಾರದಲ್ಲಿದ್ದರೂ ಕರ್ನಾಟಕಕ್ಕೆ ಅವರ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಹಾಕಿಕೊಳ್ಳಲು ಇಂದು ಬಿಜೆಪಿ…