Author: admin

ತುಮಕೂರು:  ಗೃಹ ಸಚಿವ ಪರಮೇಶ್ವರ್  ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅವರಿಗೆ ಬೃಹತ್ ಕೊಬ್ಬರಿ ಹಾರ ಹಾಕಿ ಬೆಳ್ಳಿ ಕಿರೀಟ ತೊಡಿಸಿ, ಬೆಳ್ಳಿ ಖಡ್ಗ  ಕೊಟ್ಟು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಗೌರವಿಸಿದರು. ತುಮಕೂರಿನ ಹೆಗ್ಗೆರೆ ಗ್ರಾಮದಲ್ಲಿ  ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಲಾಯಿತು. ಗ್ರಾಮಾಂತರ ಮಾಜಿ ಶಾಸಕ ಗೌರಿಶಂಕರ್ ಅಭಿಮಾನಿಗಳು, ಕಾರ್ಯಕರ್ತರಿಂದ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. ಮೊದಲಿಗೆ ಗೃಹ ಸಚಿವ ಪರಮೇಶ್ವರ್‌ ಗೆ  ಬೃಹತ್ ಕೊಬ್ಬರಿ ಹಾರ ಹಾಕಿ ಸ್ವಾಗತಿಸಿದ   ಅಭಿಮಾನಿಗಳು ಮೆರವಣಿಗೆ ಮಾಡಿದರು.  ನಂತರ ಬೃಹತ್ ಕೇಕ್ ಕತ್ತರಿಸಿ ಪರಮೇಶ್ವರ್ ಅದ್ದೂರಿ ಹುಟ್ಟುಹಬ್ಬ ಆಚರಣೆ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೀದರ್: ಭಾಲ್ಕಿ ಔರಾದ ಹೀರೆಮಠ ಸಂಸ್ಥಾನ ಪೀಠಾಧಿಪತಿಗಳು ಪೂಜ್ಯ ಮ.ಘ.ಚ. ಗುರುಬಸವ ಪಟ್ಟದೇವರ ಜನ್ಮದಿನದ ಅಂಗವಾಗಿ ಸಂತಪೂರ ಆರೋಗ್ಯ ಕೇಂದ್ರದಲ್ಲಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಡಾ. ಅಬ್ದುಲ್ ವಾಜಿದ್, ಡಾ.ರೇಣುಕಾ, ವೈಜಿನಾಥ, ದಲಿತ ಸಂಘರ್ಷ ಸಮಿತ ಜಿಲ್ಲಾ ಸಂಚಾಲಕ ಧನರಾಜ ಮುಸ್ತಪುರ, ಟಿ.ಎಮ್.ಮಚ್ಚೆ, ಕಿರಣಕುಮಾರ ಬಿರಾದರ್, ಗುರುನಾಧ ಅಂಕುಲಗಿ, ಡಿಜಿ ರಾಣಿ, ಎಸೇಪ್ಪಾ ಶೇಂಬೇಳಿ, ಘಾಳೇಪ್ಪಾ ಶೇಂಬೇಳಿ, ತುಕಾರಾಮ ಹಸ್ಮುಖಿ, ಸುಧೀರ್ ಕಾಂಬಳೆ, ಸೂರ್ಯಕಾಂತ ಸೂನೆ, ವಿಜಯಕುಮಾರ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಔರಾದ್: ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ ಯುವ ಸೈನ್ಯ ಔರಾದ ವತಿಯಿಂದ ತಾಲೂಕಿನ ಚಿಂತಾಕಿ ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ನು ವಿತರಿಸುವ ಮ‌ೂಲಕ ಕೇಕ್ ಕತ್ತರಿಸಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಹುಟ್ಟುಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಚಿಂತಾಕಿ ಪೋಲಿಸ್ ಠಾಣೆಯ ಪಿ ಎಸ್ ಐ ಸಿದ್ಧಲಿಂಗ ಅವರು ಕೆಕ್ ಕತ್ತರಿಸಿ ಮಾತನಾಡಿದರು. ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಭವಿಷ್ಯದ ಪ್ರಜೆಗಳಾಗಿ ತಮ್ಮ ಕುಟುಂಬಕ್ಕೆ ಹಾಗೂ ಗ್ರಾಮದ ಕೀರ್ತಿ ಹೆಚ್ಚಿಸಬೇಕು ಒಳ್ಳೆಯ ಉದ್ಯೋಗ ಪಡೆದುಕೊಳ್ಳಿ ಎಂದು ನುಡಿದರು. ಸುನಿಲ ಮಿತ್ರಾ ಮಾತನಾಡಿ, ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ ಯುವ ಸೈನ್ಯ ವತಿಯಿಂದ ಅವರ ಹುಟ್ಟುಹಬ್ಬವನ್ನು ಪ್ರತಿ ವರ್ಷ ಸರಕಾರಿ ಶಾಲೆಯ ಮಕ್ಕಳ ಸಮ್ಮುಖದಲ್ಲಿ ಅವರಿಗೆ ನೋಟ್ ಬುಕ್ ವಿತರಿಸುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ವಿನೂತನವಾಗಿ ಆಚರಿಸುತ್ತೇವೆ ಎಂದು ನುಡಿದರು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ ಯುವ ಸೈನ್ಯ ಅಧ್ಯಕ್ಷ ದತ್ತಾತ್ರಿ ಚಿಕ್ಲೆ, ಅನೀಲ,…

Read More

ಬೀದರ್: ಬೀದರ್ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಗ್ರೇಡ್–1 ಹಾಗೂ ಕಾರ್ಯದರ್ಶಿ ಇವರುಗಳಲ್ಲಿ ಬಹುತೇಕ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡು, ಸರ್ಕಾರದ ಅನುದಾನ ದುರ್ಬಳಕೆ, ಅನಧಿಕೃತವಾಗಿ ಹಾಗೂ ಕಾನೂನು ಬಾಹಿರವಾಗಿ ಇ–ಸ್ವತ್ತು ತಂತ್ರಾಂಶದ ಅಡಿಯಲ್ಲಿ ಡಿಜಿಟಲ್ ಖಾತೆ ವಿತರಿಸುವುದು, ಹೀಗೆ ನಾನಾ ರೀತಿಯ ಅವ್ಯವಹಾರದಲ್ಲಿ ತೊಡಿಸಿಕೊಂಡು ಸರ್ಕಾರಕ್ಕೆ ಕೋಟ್ಯಾಂತರ ಮೊತ್ತದ ಆರ್ಥಿಕ ನಷ್ಟವನ್ನು ಮಾಡುತ್ತಿದ್ದು, ಇದನ್ನು ಮನಗಂಡ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಬಡೋಲೆ ಈ ಅವ್ಯವಹಾರಗಳಿಗೆ ಕಡಿವಾಣ ಹಾಕಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಪಿ.ಡಿ.ಓ, ಕಾರ್ಯದರ್ಶಿ ಗ್ರೇಡ್–1, ಕಾರ್ಯದರ್ಶಿ ಇವರ ಅಕ್ರಮ ಧಂದೆಯನ್ನು ತಡೆದಿರುವುದರಿಂದ ಆಕ್ರೋಶಗೊಂಡು ಸದರಿ ಭ್ರಷ್ಟ ಸರ್ಕಾರಿ ನೌಕರರು, ಹಣಬಲ ಬಳಸಿಕೊಂಡು ಜಿಲ್ಲೆಯ ವಿವಿಧ ಸಂಘಟನೆಗಳೊಂದಿಗೆ ಕೈಜೋಡಿಸಿ ನಿಷ್ಠಾವಂತ ಅಧಿಕಾರಿಯ ವಿರುದ್ಧ ಸುಳ್ಳು ಪ್ರಚಾರ ಮಾಡುವುದು, ಅಧಿಕಾರಿಗಳ ವರ್ಗಾವಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿ ಒಬ್ಬ ನಿಷ್ಠಾವಂತ ಅಧಿಕಾರಿಗಳಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಔರಾದ ತಾಲೂಕಿನ ಗ್ರಾಮ ಪಂಚಾಯತ ಸದಸ್ಯರಾದ…

Read More

ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ ಗಂಡು ಸಿಂಹವೊಂದು ಅಸುನೀಗಿದೆ. ಹದಿನೆಂಟು ವರ್ಷದ ಗಂಡು ಸಿಂಹ ಆರ್ಯ ಇಂದು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದೆ. ಕಳೆದ ಆರು ತಿಂಗಳುಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಆರ್ಯ ಕಳೆದ ಮೂರು ದಿನಗಳಿಂದ ಆಹಾರವನ್ನು ತ್ಯಜಿಸಿತ್ತು.ಇಂದು ಕೊನೆಯುಸಿರು ಎಳೆಯುವ ಮೂಲಕ ಸಫಾರಿಯ ಆಕರ್ಷಣೀಯ ಕೇಂದ್ರಬಿಂದು ಅಜರಾಮರವಾಗಿದೆ ಸಾಮಾನ್ಯವಾಗಿ ಕಾಡಿನಲ್ಲಿ ಸಿಂಹಗಳು 12 ರಿಂದ 15 ವರ್ಷಗಳ ವರೆಗೆ ಬದುಕಿರುತ್ತವೆ ವಯಸ್ಸಾದ ನಂತರ ಭೇಟೆಯಾಡಲು ಅಶಕ್ತವಾಗಿ ಹಸಿವಿನಿಂದಲೇ ಪ್ರಾಣ ಬಿಡುವ ಹಾಗೂ ಪರಸ್ಪರ ಕಾದಾಟದಿಂದ ಗಾಯಗಳಾಗಿ ಚಿಕಿತ್ಸೆ ಇಲ್ಲದೆ ಸಾವನ್ನಪ್ಪುವ ಸಂಧರ್ಭಗಳೇ ಹೆಚ್ಚು. ಹುಲಿಗಳಂತೆ ಒಂಟಿಯಾಗಿ ಬದುಕದೆ ಗುಂಪಿನಲ್ಲಿ ಸಿಂಹಗಳು ಬದುಕುತ್ತವೆ ಆದರೆ ಗಂಡು ಸಿಂಹಗಳು ಪರಸ್ಪರ ಒಟ್ಟಿಗೆ ಬದುಕುವುದು ಕೂಡ ವಿರಳ. ಆದರೆ ಲಯನ್ ಸಫಾರಿಯಲ್ಲಿ ಸಾಕಲಾಗಿದ್ದ ಆರ್ಯ ಸಿಂಹ ಹದಿನೆಂಟು ವರ್ಷಕ್ಕೆ ವಯೋಸಹಜ ಕಾಯಿಲೆಯಿಂದ ಬಳಲಿ ಇಂದು ಇಹಲೋಕ ತ್ಯಜಿಸಿದೆ. 2008ರಲ್ಲಿ ಮೈಸೂರು ಮೃಗಾಲಯದಿಂದ ಶಿವಮೊಗ್ಗಕ್ಕೆ ಬಂದಿದ್ದ ಆರ್ಯ ಸಿಂಹದ ಅಗಲಿಕೆಯಿಂದ ಈಗ ಹುಲಿ…

Read More

ಕೇಂದ್ರದಲ್ಲಿ ಮೂರನೇ ಬಾರಿಗೆ ಎನ್ಡಿಎ ಸರ್ಕಾರ ರಚನೆಯಾಗುವುದರೊಂದಿಗೆ, ನಡೆಯುತ್ತಿರುವ ಅನೇಕ ಯೋಜನೆಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲಾಗಿದೆ. ಈ ಅನುಕ್ರಮದಲ್ಲಿ, ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡುವ ಯೋಜನೆ ನಡೆಯುತ್ತಿದೆ. ಕೇಂದ್ರ ಸರ್ಕಾರವು ವಿವಿಧ ರೀತಿಯ ವೃತ್ತಿಗಳಿಗೆ ಸಂಬಂಧಿಸಿದ ವಿಶೇಷ ಉಪಕರಣಗಳು ಮತ್ತು ಯಂತ್ರಗಳನ್ನು ಒದಗಿಸುತ್ತದೆ. ಹೊಲಿಗೆ ಯಂತ್ರವೂ ಈ ರೀತಿಯ ಯಂತ್ರವಾಗಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಎಂಬ ಯೋಜನೆಯನ್ನು ನಡೆಸುತ್ತಿದೆ. ಈ ಯೋಜನೆಯಡಿ, ಹೊಲಿಗೆ ಯಂತ್ರವನ್ನು ಖರೀದಿಸಲು ಒಬ್ಬರು 15,000 ರೂ.ಗಳನ್ನು ಪಡೆಯಬಹುದು. ಈ ಹಣವನ್ನು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಇದಲ್ಲದೆ, ಸರ್ಕಾರವು ಒಂದು ವಾರದ ಡಿಜಿಟಲ್ ತರಬೇತಿಯನ್ನು ಸಹ ಒದಗಿಸುತ್ತದೆ. ಆ ಸಮಯದಲ್ಲಿ ಅದು ದಿನಕ್ಕೆ 500 ರೂಪಾಯಿಗಳ ದರದಲ್ಲಿ ಪಾವತಿಸುತ್ತದೆ. ಹೊಲಿಗೆ ಯಂತ್ರವನ್ನು ಖರೀದಿಸಿದ ನಂತರ, ಕೇಂದ್ರವು ಒಂದು ಲಕ್ಷ ರೂಪಾಯಿಗಳ ಸಾಲವನ್ನು ನೀಡುತ್ತದೆ. ಈ ಸಾಲವನ್ನು 18 ತಿಂಗಳಲ್ಲಿ ಮರುಪಾವತಿ ಮಾಡಬಹುದು. ಸಾಲವನ್ನು ಮರುಪಾವತಿ ಮಾಡಿದ ನಂತರ, ನೀವು…

Read More

ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ಕೂಡ ನೀಡಲಾಗುವುದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು. ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಢಾಕಾ: ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಜೈಲಿನಲ್ಲಿರುವ ವಿರೋಧ ಪಕ್ಷದ ನಾಯಕಿ ಮತ್ತು ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಿ ಆದೇಶಿಸಿದ್ದಾರೆ. ವಿರೋಧ ಪಕ್ಷದ ಸದಸ್ಯರೊಂದಿಗೆ ಚರ್ಚೆ ನಡೆಸಿದ ನಂತರ ಖಲೀದಾ ಜಿಯಾ ಅವರನ್ನು ಬಿಡುಗಡೆ ಮಾಡಲಾಗಿದೆ. ಸಭೆಯಲ್ಲಿ ಸೇನಾ ಮುಖ್ಯಸ್ಥ ವಾಕರ್—ಉಜ್–ಜಮಾನ್, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರು ಮತ್ತು ಬಿಎನ್ಪಿ ಮತ್ತು ಜಮಾತ್—ಎ–ಇಸ್ಲಾಮಿ ಸೇರಿದಂತೆ ವಿರೋಧ ಪಕ್ಷಗಳ ಉನ್ನತ ನಾಯಕರು ಭಾಗವಹಿಸಿದ್ದರು. ಖಲೀದಾ ಜಿಯಾ ಅವರು 1991 ರಲ್ಲಿ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾದರು. 1977 ರಿಂದ 1981 ರವರೆಗೆ ಬಾಂಗ್ಲಾದೇಶದ ಅಧ್ಯಕ್ಷರಾಗಿದ್ದ ಮತ್ತು 1978 ರಲ್ಲಿ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯನ್ನು ಸ್ಥಾಪಿಸಿದ ಅವರ ಪತಿ ಜಿಯಾವುರ್ ರಹಮಾನ್ ಅವರ ಹತ್ಯೆಯ ನಂತರ ಅವರ ರಾಜಕೀಯ ಜೀವನ ಪ್ರಾರಂಭವಾಯಿತು. ಜಿಯಾ ಇತ್ತೀಚೆಗೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದಾರೆ ಮತ್ತು ವೈದ್ಯಕೀಯ ಆರೈಕೆಗಾಗಿ ಆಗಾಗ್ಗೆ…

Read More

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಫೋಟೋಗೆ ನಿಯಮ ಬಾಹಿರವಾಗಿ ಪೂಜೆ ಸಲ್ಲಿಸಿದ ಅರ್ಚಕನೊಬ್ಬನನ್ನು ಅಮಾನತುಗೊಳಿಸಲಾಗಿದೆ. ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಫೋಟೋ ಇಟ್ಟು ಅದಕ್ಕೆ ಮಂಗಳಾರತಿ ಮಾಡಿ ಪೂಜೆ ನಡೆಸಿದ್ದಾನೆ. ದೇವಾಲಯದ ಸಂಪ್ರದಾಯದ ವಿರುದ್ಧವಾಗಿ ವರ್ತಿಸಿರುವ ಹಿನ್ನೆಲೆ ಅರ್ಚಕ ಮಲ್ಲಿಯನ್ನು ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಢಾಕಾ: ಬಾಂಗ್ಲಾದೇಶದಲ್ಲಿ ಮೀಸಲಾತಿ ಹೋರಾಟ ಸೋಮವಾರ ಭಾರೀ ಪ್ರತಿಭಟನೆಗೆ ತಿರುಗಿದ್ದು, ಸೇನಾ ದಂಗೆಯಾಗಿ ಮಾರ್ಪಟ್ಟಿದೆ. ಇದರ ಬೆನ್ನಲ್ಲೇ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಬಾಂಗ್ಲಾದೇಶವನ್ನು ತೊರೆದರು. ಇದರ ಬೆನ್ನಲ್ಲೇ ಸೇನಾ ಮುಖ್ಯಸ್ಥ ಜನರಲ್ ವೇಕರ್–ಉಜ್–ಜಮಾನ್ ಮಿಲಿಟರಿ ಮಧ್ಯಂತರ ಸರ್ಕಾರವನ್ನು ರಚಿಸುತ್ತದೆ ಎಂದು ಹೇಳಿದರು. ಅಲ್ಲದೇ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಈ ನಡುವೆ ಹಸೀನಾ ಮಿಲಿಟರಿ ವಿಮಾನದಲ್ಲಿ ದೇಶದಿಂದ ಪಲಾಯನ ಮಾಡಿದ್ದಾರೆ ಎನ್ನುವ ವಿಚಾರ ತಿಳಿದು ಹಸೀನಾ ಅವರ ನಿವಾಸಕ್ಕೆ ನುಗ್ಗಿ ಅವರ ಬ್ರಾ ಮತ್ತು ಸೀರೆಗಳು ಸೇರಿದಂತೆ ತಮ್ಮಿಂದ ಸಾಧ್ಯವಾದದ್ದನ್ನು ಲೂಟಿ ಮಾಡಿದರು. ವ್ಯಕ್ತಿಯೊಬ್ಬ ನಾಚಿಕೆಯಿಲ್ಲದೆ ಕೈಯಲ್ಲಿ ಬ್ರಾಗಳನ್ನು ಹಿಡಿದು ವಿಕೃತಿ ಮೆರೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More