Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಢಾಕಾ: ಮೀಸಲಾತಿ ವಿಷಯಕ್ಕೆ ಸಂಬಂಧಿಸಿದ ಪ್ರತಿಭಟನೆ ಹಿಂಸಾರೂಪ ಪಡೆದುಕೊಳ್ಳುತ್ತಿದ್ದಂತೆಯೇ ಬಾಂಗ್ಲಾದೇಶದಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದ ಗದ್ದುಗೆ ಹಿಡಿದಿದ್ದ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾಂಗ್ಲಾದೇಶದಿಂದ ಭಾರತಕ್ಕೆ ಪಲಾಯನ ಮಾಡಿದ್ದಾರೆ. ಹಸೀನಾ ಅವರ ರಕ್ಷಣೆಗೆ ಭಾರತ ಕ್ರಮಕೈಗೊಂಡಿದ್ದು, ಅವರನ್ನು ಬಿಗಿ ಭದ್ರತೆಯೊಂದಿಗೆ ಸುರಕ್ಷಿತವಾಗಿ ಭಾರತದಲ್ಲಿ ಇಳಿಸಿದೆ. ಹಸೀನಾ ಅವರು ಬಾಂಗ್ಲಾದಿಂದ ಹೊರಡುತ್ತಿದ್ದಂತೆ ಭಾರತೀಯ ವಾಯುಪಡೆಯ ರಾಡಾರ್ ಗಳು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತಿದ್ದವು. ಸಂಜೆ 6ರ ಸುಮಾರಿಗೆ ಹಸೀನಾ ಮತ್ತು ಅವರ ಸಹೋದರಿಯನ್ನು ಹೊತ್ತ ಬಾಂಗ್ಲಾದೇಶ ವಾಯುಪಡೆಯ ಸಿ -130 ಸಾರಿಗೆ ವಿಮಾನ AJAX1413 ಗಾಜಿಯಾಬಾದ್ ನ ಹಿಂಡನ್ ವಾಯುನೆಲೆಯನ್ನು ತಲುಪಿತು. ಈ ಸಂದರ್ಭದಲ್ಲಿ ಯಾವುದೇ ತುರ್ತು ಅಗತ್ಯಕ್ಕಾಗಿ ಭಾರತೀಯ ವಾಯುಪಡೆಯ ಸಿಬ್ಬಂದಿ ಎರಡು ರಫೇಲ್ ಯುದ್ಧ ವಿಮಾನಗಳನ್ನು ಸಜ್ಜುಗೊಳಿಸಿದ್ದರು. ಹಸೀನಾ ಅವರ ಜೆಟ್ ವಿಮಾನಕ್ಕೆ ಸುರಕ್ಷತೆ ಒದಗಿಸಲು ಪಶ್ಚಿಮ ಬಂಗಾಳದ ಹಶಿಮಾರಾ ವಾಯುನೆಲೆಯಿಂದ 101 ಸ್ಕ್ವಾಡ್ರನ್ ನ ಎರಡು ರಫೇಲ್ ಯುದ್ಧ ವಿಮಾನಗಳು ಬಿಹಾರ ಮತ್ತು ಜಾರ್ಖಂಡ್ ನಲ್ಲಿ…
ತುಮಕೂರು: ಗುಬ್ಬಿ ಪಟ್ಟಣದಲ್ಲಿ ರಾತ್ರಿ ಧಾರಾಕಾರ ಮಳೆಯಾಗಿದೆ. ಇದರ ಪರಿಣಾಮ ಗುಬ್ಬಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ನುಗ್ಗಿ ಮಳೆ ನೀರು ನುಗ್ಗಿದೆ. ಆಸ್ಪತ್ರೆಯ ವಾರ್ಡ್ ಗೆ ಮಳೆ ನೀರು ನುಗ್ಗಿದ್ದು, ಆಸ್ಪತ್ರೆಯಲ್ಲಿ ರೋಗಿಗಳು ಪರದಾಡುವಂತಾಯಿತು. ಮಳೆ ನೀರು ನೆಲವನ್ನು ವ್ಯಾಪಿಸಿದ್ದರಿಂದ ರೋಗಿಗಳು ಬೆಡ್ ಮೇಲೆ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸರಿಸುಮಾರು 9 ಗಂಟೆಯಿಂದ ಶುರುವಾದ ಮಳೆ, ಒಂದೂವರೆ ಗಂಟೆಗಳ ಕಾಲ ಬಿಡದೇ ಸುರಿದಿದೆ. ಇದರಿಂದಾಗಿ ಮಧ್ಯರಾತ್ರಿವರೆಗೂ ರೋಗಿಗಳು ಪರದಾಡಿದರು. ಆಸ್ಪತ್ರೆಯ ಕೆಳಹಂತಸ್ತಿನ ವಾರ್ಡ್ ಗಳಿಗೆ ಕೂಡ ಮಳೆ ನೀರು ನುಗ್ಗಿದ್ದು, ಆಸ್ಪತ್ರೆಯಲ್ಲಿ ರೋಗಿಗಳು ಮಾತ್ರವಲ್ಲ ಸಿಬ್ಬಂದಿಯೂ ಪರದಾಡುವಂತಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಸ್ಮಶಾನದಲ್ಲಿರೋ ಮಾರುಕಟ್ಟೆಗೆ ನಾನ್ ಹೋಗಲ್ಲ, ನಾನು ಇಲ್ಲಿಯೇ ವ್ಯಾಪಾರ ಮಾಡುತ್ತೇನೆ ಎಂದು ಹೂವಿನ ವ್ಯಾಪಾರ ತರಕಾರಿ ವ್ಯಾಪಾರ ಮಾಡಿಕೊಂಡಿರುವ ವೃದ್ದೆಯೊಬ್ಬರು ಪಟ್ಟು ಹಿಡಿದ ಘಟನೆ ತುಮಕೂರು ವಿವಿ ಬಳಿ ಬಿ.ಎಚ್. ರಸ್ತೆಯಲ್ಲಿ ನಡೆದಿದೆ. ಬೀದಿ ಬದಿ ವ್ಯಾಪಾರಿಗಳ ತೆರವಿಗೆ ತುಮಕೂರು ಮಹಾನಗರ ಪಾಲಿಕೆ ಸಿಬ್ಬಂದಿ ಆಗಮಿಸಿದ ವೇಳೆ ಸ್ಮಶಾನದಲ್ಲಿರುವ ಮಾರುಕಟ್ಟೆಗೆ ನಾನು ಹೋಗುವುದಿಲ್ಲ ಎಂದು ವೃದ್ಧ ಪಟ್ಟು ಹಿಡಿದಿದ್ದಾರೆ. ದೋಬಿಘಾಟ್ ಬಳಿ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ಮಾರುಕಟ್ಟೆ ನಿರ್ಮಿಸಲಾಗಿದೆ. ಕೆಲವು ವ್ಯಾಪಾರಿಗಳು ಆ ಮಾರುಕಟ್ಟೆಯಲ್ಲೇ ವ್ಯಾಪಾರ ಮಾಡುತ್ತಿದ್ದಾರೆ. ಈಗಾಗಲೇ ಆರ್.ಟಿ.ಓ ಕಚೇರಿಯಿಂದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದವರೆಗೆ ಬೀದಿ ಬದಿ ವ್ಯಾಪಾರವನ್ನು ಪಾಲಿಕೆ ನಿರ್ಬಂಧಿಸಿದೆ. ನಿರ್ಬಂಧ ನಡುವೆ ಕೆಲವು ಬೀದಿ ಬದಿ ವ್ಯಾಪಾರಿಗಳು ವಿವಿ ಬಳಿಯ ಫುಟ್ ಪಾತ್ ನಲ್ಲೇ ವ್ಯಾಪಾರ ಮಾಡುತ್ತಿದ್ದಾರೆ. ತುಮಕೂರು ವಿವಿಯ ಸ್ಕೈವಾಕರ್ ಕೆಳಗೆ ವೃದ್ಧೆ ವ್ಯಾಪಾರ ಮಾಡುತ್ತಿದ್ದರು. ಇದೀಗ ಏಕಾಏಕಿ ಸ್ಥಳ ಬದಲಾವಣೆ ಮಾಡಲು ಪಾಲಿಗೆ ಸಿಬ್ಬಂದಿ ಒತ್ತಡ ಹಾಕುತ್ತಿದ್ದಾರೆ. ಆದರೆ ವೃದ್ಧೆ,…
ತುಮಕೂರು: ಈ ಬಾರಿಯ ತುಮಕೂರು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಚಿತ್ರನಟ ಸುದೀಪ್ ಗೆ ಡಾಕ್ಟರೇಟ್ ನೀಡಲು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಅದನ್ನು ಅವರು ನಯವಾಗಿ ತಿರಸ್ಕಾರ ಮಾಡಿದ್ದಾರೆ ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ವಿವಿಧ ಹಂತದಲ್ಲಿ ಅವರನ್ನು ಸಂಪರ್ಕಿಸಲು ಯತ್ನಿಸಲಾಗಿತ್ತು, ಅಂತಿಮವಾಗಿ ಅವರ ಆಪ್ತ ಸಹಾಯಕರ ಮೂಲಕ ಅವರನ್ನು ಪ್ರಸ್ತಾಪ ಮಾಡಲಾಯಿತು. ಡಾಕ್ಟರೇಟ್ ಪದವಿ ಪಡೆಯುವ ನಿರ್ಧಾರ ತಿಳಿಸಲು ಎರಡು ದಿನಗಳ ಕಾಲಾವಕಾಶ ಕೇಳಿದ್ದರು. ಆನಂತರ ಅವರು ತಮ್ಮ ಆಪ್ತ ಸಹಾಯಕನ ಮೂಲಕವೇ ನನಗಿಂತ ಅನೇಕ ಮಂದಿ ಹೆಚ್ಚು ಸಾಧನೆ ಮಾಡಿದವರು ಇದ್ದಾರೆ ಅವರನ್ನು ಪರಿಗಣಿಸಿ, ಅಲ್ಲದೆ ತುಮಕೂರು ವಿಶ್ವವಿದ್ಯಾಲಯದ ರೀತಿಯ ನಿರ್ಧಾರಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದು ತಿಳಿಸಿದ್ದಾರೆ. ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಮೂಲಕವೂ ಕೂಡ ಸುದೀಪ್ ಅವರನ್ನು ಸಂಪರ್ಕಿಸಿದಾಗಲೂ, ಸುದೀಪ್ ಅವರು ಡಾಕ್ಟರೇಟ್ ಪದವಿ ಪಡೆಯಲು ನಿರಾಕರಿಸಿದ್ದಾರೆ ಎಂದು ವಿವರಿಸಿದರು. ಸುದೀಪ ಅವರು ಶೈಕ್ಷಣಿಕ…
ತುಮಕೂರು : ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವಾರ ಹೋಬಳಿಯ ಉಪ್ಪಾರಪಾಳ್ಯ ಮಜರೆ ಗ್ರಾಮದ ಜನರ ಜೀವನ ಕೆಲವು ಕಾಣದ ಕೈಗಳ ಪ್ರಭಾವದಿಂದ ಮತ್ತು ಗ್ರಾಮದ ಶ್ರೀನಿವಾಸ್ ಎಂಬಾತನಿಂದ ನಿರಂತರವಾಗಿ ಊರು ಬಿಡುವಂತೆ ದೌರ್ಜನ್ಯ ಎಸಗುತ್ತಿರುವುದು ಬೆಳಕಿಗೆ ಬಂದಿದೆ. ಸುಮಾರು 80 ವರ್ಷಗಳಿಂದ ನೂರಾರು ಜನ ಉಪ್ಪಾರಹಳ್ಳಿ ಎಂಬ ಪುಟ್ಟ ಗ್ರಾಮದಲ್ಲಿ ವಾಸವಾಗಿದ್ದು ಗ್ರಾಮದ ಜನರಿಗೆ ನಿವೇಶನ ಹಕ್ಕುಪತ್ರ ಅಂದಿನ ಕಾಲದಲ್ಲಿ ಸರ್ಕಾರ ನೀಡಿದೆ ಖಾತೆ ಕಂದಾಯವನ್ನು ಅಂದಿನಿಂದಲೂ ಇಂದಿನವರೆಗೂ ಜನ ಕಟ್ಟಿಕೊಂಡು ಸರ್ಕಾರಿ ಸೌಲಭ್ಯವನ್ನು ಪಡೆದಿದ್ದಾರೆ ಅಲ್ಲದೇ ಗ್ರಾಮದಲ್ಲಿ ಸಪ್ಪಲಮ್ಮ ದೇವಿಯ ದೇವಾಲಯವಿದ್ದು, ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ, ಮಿನಿ ಅಂಗನವಾಡಿ ಕೇಂದ್ರವು ಇದೆ ಸುಮಾರು 70ಕ್ಕೂ ಹೆಚ್ಚು ಮನೆಗಳಿದ್ದು 400ಕ್ಕೂ ಅಧಿಕ ಜನರಿದ್ದಾರೆ. ಗ್ರಾಮ ಪಂಚಾಯಿತಿಯಿಂದ ಕುಡಿಯುವ ನೀರಿನ ಸೌಲಭ್ಯ, ಸಿಸಿ ರಸ್ತೆ,ಚರಂಡಿ, ವಿದ್ಯುತ್ ದೀಪ ಇನ್ನಿತರೆ ಮೂಲ ಸೌಲಭ್ಯಗಳನ್ನು ಪಡೆದಿರುವ ಗ್ರಾಮವಾಗಿದೆ. ಗ್ರಾಮದ ಜನರ ಹೆಸರಿಗೆ ಸ್ಥಳೀಯ ಗ್ರಾಮ ಪಂಚಾಯಿತಿಯಲ್ಲಿ ಮನೆಗಳ ಮತ್ತು ನಿವೇಶನಗಳ ಖಾತೆಯನ್ನು ಪಡೆದಿದ್ದಾರೆ…
ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಈ ಕೂಡಲೇ ನಿವೃತ್ತಿಯಾಗಿ ಎರಡೂ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸಬೇಕೆಂಬ ನಿರ್ಣಯ ಕೈಗೊಳ್ಳಲಾಗಿದೆ. ಹಿರಿಯ ಗುರುಗಳ ಅವಧಿಯಲ್ಲಿ ರೂಪಿತವಾಗಿದ್ದ ನಿಯಮಗಳ ಪ್ರಕಾರ 60 ವರ್ಷದ ನಂತರ ಪೀಠ ತ್ಯಾಗ ಮಾಡಿ ಉತ್ತರಾಧಿಕಾರಿ ನೇಮಿಸಬೇಕು. ಆ ನಿಯಮ ಪಾಲನೆಯಾಗುತ್ತಿಲ್ಲ.ಈಗಿನ ಜಗದ್ಗುರುಗಳಿಗೆ 78 ವರ್ಷ ವಯಸ್ಸಾಗಿದೆ. ಮರಿ ಗುರುಗಳನ್ನೂ ನೇಮಿಸಿಲ್ಲ ಎಂಬುದು ಭಕ್ತರ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿತ್ತು. ಮಠದ ಸಂಪೂರ್ಣ ಆಡಳಿತವನ್ನು ಸ್ವಾಮೀಜಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. 30 ವರ್ಷಗಳ ಹಿಂದೆ ಟ್ರಸ್ಟ್ ರಚಿಸಿ,ಮಾಡಿರುವ ಏಕ ವ್ಯಕ್ತಿ ಡೀಡ್ ವಿಸರ್ಜಿಸಬೇಕು. ಭಕ್ತರ ತೀರ್ಮಾನವೇ ಅಂತಿಮ ಆಗಬೇಕು ಎಂದು ಸಭೆ ಅಭಿಪ್ರಾಯಪಟ್ಟಿತು. ದಾವಣಗೆರೆ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಬೆಂಗಳೂರು ಸೇರಿ ರಾಜ್ಯದ ನಾನಾ ಜಿಲ್ಲೆಗಳಿಂದ ಮುಖಂಡರು ಆಗಮಿಸಿದ್ದರು. ಭಾನುವಾರ ನಡೆದ ಅಖಿತ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಅಧ್ಯಕ್ಷತೆ ವಹಿಸಿದ್ದ ಶಾಮನೂರು ಶಿವಶಂಕರಪ್ಪ ಸಭೆಯಲ್ಲಿ ಕೈಗೊಂಡಿರುವ ನಿರ್ಣಯದ ಬಗ್ಗೆ…
ಕಳೆದ ದಿನ ಉತ್ತರಪ್ರದೇಶದ ವ್ಯಕ್ತಿಯೊಬ್ಬರು ನಮ್ಮ ಮೆಟ್ರೋ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿನ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಕಳೆದ ದಿನ ಸಂಜೆ 5:45ರ ವೇಳೆಗೆ ನಾಗಸಂದ್ರ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ (ಹಸಿರು) ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ಸದ್ಯ ಈ ವ್ಯಕ್ತಿಯ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿದೆ. ನವೀನ್ ಅರೋರ ಅವರ ಪುತ್ರ ಸ್ವಂತ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದಾರೆ. ಪುತ್ರಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾಳೆ. ನವೀನ್ ಕೆಆರ್ ಮಾರುಕಟ್ಟೆಯಲ್ಲಿ ಹಾರ್ಡ್ವೇರ್ ಅಂಗಡಿ ನಡೆಸುತ್ತಿದ್ದರು. ಚೆನ್ನಾಗಿದ್ದ ವ್ಯಾಪಾರ ಅದ್ಯಾಕೋ ಏನೋ ನೆಲಕ್ಕಚ್ಚಿ ಹೋಯಿತು. ಇದೇ ವಿಚಾರಕ್ಕೆ ಮನೆಯಲ್ಲಿ ಜಗಳವಾಗಿ ನವೀನ್ ಮನೆಯನ್ನು ತೊರೆದಿದ್ದರು. ಜೊತೆಗೆ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಮೃತ ನವೀನ್ ಕಳೆದ ಏಳು ವರ್ಷದಿಂದ ಕುಟುಂಬಸ್ಥರಿಂದ ದೂರವಿದ್ದು ಜೆಪಿ ನಗರದ ಹೋಟೆಲ್ವೊಂದರಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದರು. ಬಳಿಕ ಕೆಆರ್ ಮಾರುಕಟ್ಟೆಯಲ್ಲಿ ರೂಮ್ ಮಾಡಿಕೊಂಡು ಇದ್ದರು. ಕುಟುಂಬಸ್ಥರಿಂದ ಹಣ ತರಿಸಿಕೊಳ್ಳುತ್ತಿದ್ದರು. ಕುಟುಂಬಸ್ಥರು ನೀಡಿದ ಹಣದಲ್ಲಿ ರೂಮ್ ಬಾಡಿಗೆ, ಊಟ, ತಿಂಡಿ…
ತುಮಕೂರು: ಶುಕ್ರವಾರವಷ್ಟೇ ನಿಧನರಾದ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾರವರಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು. ಮೆದುಳು ರಕ್ತಸ್ರಾವದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಶುಕ್ರವಾರ ನಿಧನರಾಗಿದ್ದರು. ಮೃತರ ಗೌರವಾರ್ಥವಾಗಿ ನಗರದ ಪತ್ರಿಕಾಭವನದಲ್ಲಿ ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನುಆಯೋಜಿಸಲಾಗಿದ್ದು, ನೆರೆದಿದ್ದ ಪತ್ರಕರ್ತರು ಮಮತಾರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂತಾಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಮಮತಾರವರು ಅತ್ಯಂತ ಸ್ನೇಹ ಪೂರ್ವಕವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪ್ರತಿಯೊಬ್ಬರೊಂದಿಗೆ ಪ್ರೀತಿಯಿಂದ ಹಾಗೂ ಆತ್ಮೀಯತೆಯರಾಗಿ ವರ್ತಿಸುತ್ತಾ ತಮ್ಮ ಕೆಲಸ ನಿರ್ವಹಿಸುತ್ತಿದ್ದರು. ಅವರು ಇತ್ತೀಚೆಗೆ ತಮ್ಮಅನಾರೋಗ್ಯದ ಬಗ್ಗೆ ಪತ್ರಕರ್ತ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದರು. ಆದರೆ ಇಷ್ಟು ಬೇಗ ಸಾವು ಅವರನ್ನು ಅಪ್ಪಿಕೊಳ್ಳತ್ತದೆ ಎಂಬುದನ್ನು ಊಹಿಸಿರಲಿಲ್ಲ. ಈ ಹಿಂದಿನ ಹಿರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ್ ರವರೂ ಸಹ ಅಕಾಲಿಕ ಮರಣಕ್ಕೆ ತುತ್ತಾಗಿದ್ದು,…
ತುಮಕೂರು: ಪಾಲಿಕೆ ವ್ಯಾಪ್ತಿಗೆ ಸೇರಿದ ಎಲ್ಲಾ ಆಸ್ತಿಗಳನ್ನು ಇ–ಆಸ್ತಿಯಲ್ಲಿ ಕಾಲೋಚಿತಗೊಳಿಸಲು ಆಗಸ್ಟ್ 6 ರಿಂದ 9ರವರೆಗೆ ಇ–ಆಸ್ತಿ ತ್ವರಿತ ಸೇವಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯ 25, 26, 27ನೇ ವಾರ್ಡ್ ಹೊರತುಪಡಿಸಿ ಉಳಿದೆಲ್ಲಾ ವಾರ್ಡ್ ಗಳಲ್ಲಿ ಈ ಅಭಿಯಾನ ನಿಗಧಿತ ದಿನಾಂಕಗಳಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದೆ. ಆಸ್ತಿ ತೆರಿಗೆ ಹೊಣೆಗಾರಿಕೆಯ ವರ್ಗಾವಣೆಯನ್ನು ಸರಳೀಕರಣಗೊಳಿಸುವುದು, ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸುವುದು, ಆಸ್ತಿ ಸಂಪನ್ಮೂಲ ಕ್ರೋಢೀಕರಣಗೊಳಿಸುವುದು. ಕಾವೇರಿ ತಂತ್ರಾಂಶದೊಡನೆ ಇ–ಆಸ್ತಿ ತಂತ್ರಾಂಶವನ್ನು ಜೋಡಿಸುವುದು ಈ ಅಭಿಯಾನದ ಮೂಲ ಉದ್ದೇಶವಾಗಿದೆ. ಈಗಾಗಲೇ ಪಾಲಿಕೆಯಲ್ಲಿ ಆಸ್ತಿ ತೆರಿಗೆ ಹಕ್ಕು ದಾಖಲಿಸಿಕೊಂಡಿರುವ ಆಸ್ತಿ ಮಾಲೀಕರು ಇ–ಆಸ್ತಿಯಲ್ಲಿ ಕಾಲೋಚಿತಗೊಳಿಸಲು ಕ್ರಯಪತ್ರ/ದಾನಪತ್ರ/ವಿಭಾಗ ಪತ್ರ/ಹಕ್ಕು ಪತ್ರ, ಇ.ಸಿ, ಭೂಪರಿವರ್ತನೆ ಆದೇಶ, ಅನುಮೋದಿತ ಲೇಔಟ್ ನಕ್ಷೆ, ನಮೂನೆ-3, ಸ್ವತ್ತಿನ ಭಾವಚಿತ್ರ, ಮಾಲೀಕರ ಭಾವಚಿತ್ರ, ಪಾನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಕಟ್ಟಡ ಪರವಾನಿಗೆ…
ತುಮಕೂರು: ಪಾಲಿಕೆಯ ವಾರ್ಡ್ ಸಂಖ್ಯೆ 17 ಮತ್ತು 28ಕ್ಕೆ ಸಂಬಂಧಿಸಿದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲು ಆಗಸ್ಟ್ 7ರಂದು ಸಂಜೆ 4 ಗಂಟೆಗೆ ಗ್ರಂಥಾಲಯ ಪಾರ್ಕ್ ನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಪಾಲಿಕೆ ಆಯುಕ್ತರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296