Author: admin

ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತುಮಕೂರು, ಹಾಲಪ್ಪ ಪ್ರತಿಷ್ಠಾನ, ಉದ್ಯೋಗ ಕೋಶ–ಐಕ್ಯೂಎಸಿ ಸಹಯೋಗದೊಂದಿಗೆ ಜುಲೈ 6ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೈಲ್ವೇ ನಿಲ್ದಾಣ ರಸ್ತೆ, ತುಮಕೂರು ಇಲ್ಲಿ ಉದ್ಯೋಗ ಮೇಳ-2024 ಆಯೋಜಿಸಲಾಗಿದೆ. ಬೆಳಗ್ಗೆ 10ಯಿಂದ ಉದ್ಯೋಗ ಮೇಳ ಆರಂಭವಾಗಲಿದೆ. ಗೃಹಸಚಿವ ಡಾ. ಜಿ.ಪರಮೇಶ್ವರ ಉದ್ಯೋಗ ಮೇಳವನ್ನು ಉದ್ಘಾಟಿಸಲಿದ್ದಾರೆ. ಮುರುಲೀಧರ ಹಾಲಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ವಿ. ಸೋಮಣ್ಣ ಭಾಗವಹಿಸಲಿದ್ದು, ಇನ್ನೂ ಹಲವಾರು ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ (BA, BSc, BCom, BBA/BBM, BCA, BSW, BE, BVA), ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸುಮಾರು 30ಕ್ಕೂ ಹೆಚ್ಚು ಕಂಪೆನಿಗಳು ನೇಮಕಾತಿ ಮಾಡುತ್ತಿವೆ. ಉದ್ಯೋಗ ಮೇಳದಲ್ಲಿ ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ. ಈಗಲೇ ನೋಂದಣಿ ಮಾಡಿಕೊಳ್ಳಿ: https://forms.gle/6m4oXtRNUHoie9766 ಮಾಹಿತಿ ಪಡೆಯಲು ವಾಟ್ಸಪ್ ಗ್ರೂಪ್‌ಗೆ ಸೇರಬಹುದು: https://chat.whatsapp.com/Con0HGs2aCSFZv8WBMuNge…

Read More

ತುಮಕೂರು: ಸಮಾಜಕಾರ್ಯ ವಿದ್ಯಾರ್ಥಿಗಳಿಗೆ ಮುಖ್ಯವಾಗಿಕೌಶಲ್ಯ, ಶಿಸ್ತು ಹಾಗೂ ವಿಷಯಗಳನ್ನು ಪರಿಕಲ್ಪನೆ ಮಾಡುವ ಜ್ಞಾನವಿರಬೇಕು ಎಂದು ತುಮಕೂರು ವಿವಿಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗವು ಸೋಮವಾರ ಆಯೋಜಿಸಿದ್ದ ‘ಸಮಾಜಕಾರ್ಯ ಹಬ್ಬ-೨೦೨೪’ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿದರು. ಸಮಾಜಕಾರ್ಯ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿಹೆಚ್ಚು ಶಿಬಿರಗಳನ್ನು ಆಯೋಜಿಸಿ, ಅಲ್ಲಿನಜನರ ವಿಷಯ ವಿಶ್ಲೇಷಣೆ ಮಾಡಬೇಕು. ಸಮಸ್ಯೆಗಳಿಗೆ ಪರಿಹಾರಒದಗಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು.ರೈತರಿಗೆ ಹೆಚ್ಚು ಸಹಾಯ ಮಾಡಬೇಕುಎಂದು ತಿಳಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್ ಮಾತನಾಡಿ, ಸಮಾಜಕಾರ್ಯ ವಿದ್ಯಾರ್ಥಿಗಳು ಸಮಾಜಮುಖಿಯೋಜನೆಗಳನ್ನು ಕಾರ್ಯರೂಪಕ್ಕೆತರಬೇಕು. ಸಮಾಜದ ಏಳ್ಗೆಗಾಗಿ ಶ್ರಮಿಸಬೇಕು. ಆತ್ಮತೃಪ್ತಿ ಬರುವುದು ಸಮಾಜದ ಡೊಂಕುಗಳನ್ನು ಸರಿದಾರಿಗೆ ತಂದಾಗ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ ಮಾತನಾಡಿ, ಸಮಾಜಕಾರ್ಯ ವಿದ್ಯಾರ್ಥಿಗಳ ಕಾರ್ಯವೆಲ್ಲವೂ ವಿಶೇಷ ಹಾಗೂ ವಿಭಿನ್ನವಾಗಿ ಇರುತ್ತದೆ. ಶಿಕ್ಷಕರು ಒಗ್ಗಟ್ಟಾಗಿದ್ದಾರೆ ಮಾತ್ರ ವಿದ್ಯಾರ್ಥಿಗಳು ಒಗ್ಗಟ್ಟಾಗಿ ಮಹತ್ವವಾದುದನ್ನು ಸಾಧಿಸಬಹುದು ಎಂದು ಹೇಳಿದರು. ಸಮಾಜಕಾರ್ಯ ಹಬ್ಬದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ರೇಷ್ಮೆ ಇಲಾಖೆ, ಉಚಿತ…

Read More

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಕುಂಟರಾಮನಹಳ್ಳಿ ಗ್ರಾಮದ ನ್ಯಾಯಬೆಲೆ ಅಂಗಡಿಯವರು ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಪಡಿತರ ಧಾನ್ಯಗಳನ್ನು 2021ರ ಅಕ್ಟೋಬರ್ 24ರಂದು ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದ್ದು, ವಶ ಪಡಿಸಿಕೊಂಡ ಪಡಿತರ ಧಾನ್ಯಗಳನ್ನು ಆಗಸ್ಟ್ 6ರಂದು ಬೆಳಿಗ್ಗೆ 11 ಗಂಟೆಗೆ ಗುಬ್ಬಿ ತಾಲ್ಲೂಕಿನ ಟಿ.ಎ.ಪಿ.ಸಿ.ಎಂ.ಎಸ್. ಸಗಟು ಮಳಿಗೆ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಗುಬ್ಬಿ ತಹಶೀಲ್ದಾರ್ ಆರತಿ ತಿಳಿಸಿದ್ದಾರೆ. ತಹಶೀಲ್ದಾರ್ ಮತ್ತು ಆಹಾರ ನಿರೀಕ್ಷಕರ ತಂಡವು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 13.06 ಕ್ವಿಂಟಾಲ್ (21 ಪ್ಲಾಸ್ಟಿಕ್ ಚೀಲಗಳಲ್ಲಿರುವ) ರಾಗಿ ಹಾಗೂ ಅಕ್ಕಿ, ಗೋಧಿ ಸೇರಿದಂತೆ ವಿವಿಧ ಪಡಿತರ ಧಾನ್ಯಗಳನ್ನು ವಶಪಡಿಸಿಕೊಂಡು ಚೇಳೂರು ಪೊಲೀಸ್ ಠಾಣೆಯ ವಶಕ್ಕೆ ನೀಡಿ ಪ್ರಕರಣವನ್ನು ದಾಖಲಿಸಲಾಗಿತ್ತು. ಸದರಿ ದಾಸ್ತಾನನ್ನು ಗುಬ್ಬಿ ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್. ಸಗಟು ಮಳಿಗೆಯಲ್ಲಿ ದಾಸ್ತಾನು ಮಾಡಲಾಗಿತ್ತು. ಆಸಕ್ತರು ಅಗತ್ಯ ದಾಖಲೆ ಹಾಗೂ ಗುರುತಿನ ಚೀಟಿಯೊಂದಿಗೆ ಬಹಿರಂಗ ಹರಾಜಿನಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮೊತ್ತಕ್ಕೆ ಬಿಡ್ ಮಾಡಿದ ಬಿಡ್‌ದಾರರು ಶೇ.೫೦ರಷ್ಟು ಹಣವನ್ನು ಕಟ್ಟಬೇಕು. ಬಿಡ್ ದಿನ…

Read More

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ೧೭ನೇ ವಾರ್ಷಿಕ ಘಟಿಕೋತ್ಸವವು ಆಗಸ್ಟ್ 7ರಂದು ಕುಲಪತಿಗಳ ಕಚೇರಿ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು. ವಿಶ್ವ ವಿದ್ಯಾನಿಲಯದ ಸರ್ ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿಂದು ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಘಟಿಕೋತ್ಸವದಲ್ಲಿ ಕ್ರೀಡೆ ಮತ್ತು ಸಂಸ್ಕೃತಿ ವಿಭಾಗದಲ್ಲಿ ಜಲಕ್ರೀಡಾ ಸಾಹಸಿಗ ಮತ್ತು ಸಾಮಾಜಿಕ ಕಾರ್ಯಕರ್ತರಾಗಿ ಗುರುತಿಸಿಕೊಂಡಿರುವ ಜಿಲ್ಲೆಯ ಸುಗ್ಗನಪಾಳ್ಯದ ಎಸ್.ಸಿ. ನಾಗಾನಂದಸ್ವಾಮಿ, ಸಮಾಜ ಸೇವಾ ವಿಭಾಗದಲ್ಲಿ ಕೈಗಾರಿಕೋದ್ಯಮಿ ಎಚ್.ಜಿ. ಚಂದ್ರಶೇಖರ್, ಆಧ್ಯಾತ್ಮಿಕ ಮತ್ತು ಸಾಮಾಜಿಕ ಸೇವಾ ವಿಭಾಗದಲ್ಲಿ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀಶ್ರೀಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸೇರಿ ೩ ಮಂದಿಗೆ ಗೌರವ ಡಾಕ್ಟರೇಟ್ ಹಾಗೂ ೩೬ ಅಭ್ಯರ್ಥಿಗಳಿಗೆ ಪಿಎಚ್.ಡಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು. ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯದ ಉನ್ನತ ಶಿಕ್ಷಣ…

Read More

ಬೀದರ: ಸಂಸದ ಸಾಗರ್ ಖಂಡ್ರೆ ಅವರು ಜಿಲ್ಲಾ ಜಿಪಂ ಸಭಾಂಗಣದಲ್ಲಿ ನಡೆದ ಸಲಹಾ ಸಮಿತಿ ಸಭೆಗೂ ಮುನ್ನ ನರೇಗಾ ಕಾಮಗಾರಿ ಸ್ಥಳದಲ್ಲಿ ಹೃದಯಘಾತದಿಂದ ಮೃತಪಟ್ಟ ಕೂಲಿ ಕಾರ್ಮಿಕನ ಕುಟುಂಬಕ್ಕೆ 2 ಲಕ್ಷ ರೂಗಳ ಪರಿಹಾರ ಧನದ ಚೆಕ್ ವಿತರಣೆ ಮಾಡಿದರು. ಇದೇ ವೇಳೆ ನೊಂದ ಕುಟುಂಬಸ್ಥರಿಗೆಸ ಸಾಂತ್ವಾನ ಹೇಳಿದ ಅವರು ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಬದೋಲೆ ಸೇರಿದಂತೆ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಒಂದು ವಿಡಿಯೊ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಈಗಾಗಲೇ 55 ಲಕ್ಷಕ್ಕೂ ಅಧಿಕ ವೀವ್ಸ್‌ ಪಡೆದಿರುವ ವಿಡಿಯೊದಲ್ಲಿ ಅಂಥದ್ದೇನಿದೆ? ಪ್ರಶ್ನೆ ಮತ್ತು ಅದಕ್ಕೊಂದು ಫನ್ನಿ ಉತ್ತರ ಇರುವ ಪೋಸ್ಟ್‌ ಗಳು. ಇವರೊಬ್ಬ ಕಂಟೆಂಟ್‌ ಕ್ರಿಯೇಟರ್‌ ..ಅವರೇ ಹೀಗೆ ಪರೀಕ್ಷೆಯ ಪ್ರಶ್ನೋತ್ತರ ಪರಿಕಲ್ಪನೆಯಲ್ಲಿ ಪೋಸ್ಟ್‌ ಗಳನ್ನು ಮಾಡುತ್ತಾರೆ ಎಂದೂ ಹೇಳಲಾಗಿದೆ. @rohit_hand_writing ಎಂಬ ಇನ್‌ ಸ್ಟಾಗ್ರಾಂ ಅಕೌಂಟ್‌ ನಲ್ಲಿ ವಿಡಿಯೊ ಹಂಚಿಕೊಳ್ಳಲಾಗಿದೆ. ಅದೊಂದು ಪರೀಕ್ಷೆಯ ಪ್ರಶ್ನೆ ಪತ್ರಿಕೆ. ಅದರಲ್ಲಿ ʼಗಾಂಧೀಜಿ ಯಾಕೆ ಎಲ್ಲ ನೋಟುಗಳ ಮೇಲೆ ನಗುತ್ತಿದ್ದಾರೆ.?ʼ ಎಂಬುದು ಪ್ರಶ್ನೆ. ಅದಕ್ಕೆ ವಿದ್ಯಾರ್ಥಿಯು ಕೊಟ್ಟ ಉತ್ತರ ಸಖತ್‌ ರಾಕಿಂಗ್‌ ಆಗಿದೆ..ʼತಾನು ಅತ್ತರೆ ಕಣ್ಣೀರಿನಿಂದ ನೋಟು ಒದ್ದೆಯಾಗುತ್ತದೆ ಎಂಬ ಕಾರಣಕ್ಕೆ ಅವರು ಎಲ್ಲ ನೋಟ್‌ ಗಳ ಮೇಲೆಯೂ ನಗುತ್ತಿದ್ದಾರೆʼ ಎಂದು ಉತ್ತರ ಬರೆಯಲಾಗಿದೆ. ಈ ಉತ್ತರಕ್ಕೆ ಟೀಚರ್‌ ಪೂರ್ತಿಯಾಗಿ 10 ಅಂಕ ಕೊಟ್ಟಿದ್ದಲ್ಲದೆ, ವೆರಿ ಗುಡ್‌ ಎಂದೂ ಬರೆದು ಸಹಿ ಹಾಕಿದ್ದಾರೆ. ಒಂದು ಫನ್ನಿ ಪ್ರಶ್ನೆಗೆ ಅಷ್ಟೇ ಫನ್ನಿಯಾಗಿ, ಸಖತ್‌ ಲೈವ್ಲಿಯಾಗಿ ಕೊಡಲಾದ ಉತ್ತರ ನೆಟ್ಟಿಗರ…

Read More

ಚಿಕನ್ ಪ್ರಿಯರಿಗೆ ನೆಮ್ಮದಿಯ ಸುದ್ದಿ, ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಕೋಳಿಮಾಂಸದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇಂದಿನಿಂದ ಶ್ರಾವಣ ಮಾಸ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕನ್ ಬೆಲೆಯಲ್ಲಿ ಇಳಿಕೆಗೆ ಕಾರಣ ಎನ್ನಲಾಗಿದೆ. ಚಿಕನ್ ಬೆಲೆ ಹಠಾತ್ ಕುಸಿತಕ್ಕೆ ಮುಖ್ಯ ಕಾರಣ ಶ್ರಾವಣ, ಆಷಾಢ ಮಾಸವು ಭಾನುವಾರ ಕೊನೆಗೊಂಡು ಸೋಮವಾರದಿಂದ ಶ್ರಾವಣ ಮಾಸ ಆರಂಭವಾಗಿದೆ. ಇದರೊಂದಿಗೆ ಇಂದಿನಿಂದ ಶ್ರಾವಣ ಮಾಸ ವ್ರತಗಳು ಆರಂಭವಾಗುತ್ತಿವೆ. ಈ ಹಿನ್ನೆಲೆ ಕೆಲವರು ಶ್ರಾವಣ ಮಾಸ ಮುಗಿಯುವವರೆಗೆ ಮನೆಗಳಿಗೆ ಮಾಂಸವನ್ನು ತರುವುದನ್ನು ನಿಲ್ಲಿಸುತ್ತಾರೆ. ಇಂದಿನಿಂದ ಶ್ರಾವಣ ಮಾಸ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕನ್ ಬೆಲೆಯಲ್ಲಿ ಇಳಿಕೆಗೆ ಕಾರಣ ಎನ್ನಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಕೆಜಿಗೆ 260-280 ರೂ. ಇದ್ದ ಚಿಕನ್ ಬೆಲೆಯಲ್ಲಿ ದಿಢೀರ್ 180-150 ರೂ.ವರೆಗೆ ಇಳಿಕೆಯಾಗಿದೆ. ಕೆಜಿಗೆ 260-280 ರೂ.ವರೆಗೆ ಇದ್ದ ಚಿಕನ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಇಂದು ಕೋಳಿಮಾಂಸದಬೆಲೆ 180 ರೂ.ಗೆಇಳಿದಿದೆ . ಇನ್ನು ಕೆಲವು ಪ್ರದೇಶಗಳಲ್ಲಿ ಒಂದು ಕೆಜಿ ಚಿಕನ್ ಬೆಲೆ ರೂ . ಇದನ್ನು 150…

Read More

ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ. ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ. ಬೆಂಗಳೂರಿನ ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಆಕೆ ಬಳಿ ಬಂದು ಆಕೆಯನ್ನು ತಬ್ಬಿಕೊಂಡು ಬಲವಂತವಾಗಿ ಮುತ್ತಿಟ್ಟಿದ್ದಾನೆ. ಈ ವೇಳೆ ಮಹಿಳೆ ಆತನಿಂದ ತಪ್ಪಿಸಿಕೊಂಡು ಮುಂದೆ ಹೋಗಿದ್ದು, ಮತ್ತೆ ಆಕೆಯನ್ನು ಹಿಂಬಾಲಿಸಿದ ಆತ ಮತ್ತೆ ಆಕೆಯನ್ನು ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಕೂಡಲೇ ಆತ ಆಕೆಯನ್ನು ಬಿಟ್ಟು ಓಡಿ ಹೋಗಿದ್ದಾನೆ. ಇವಿಷ್ಟೂ ಘಟನೆ ಮನೆಯೊಂದಕ್ಕೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬೆಂಗಳೂರು ಪೊಲೀಸರು ಅಪರಾಧಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 76, 78 ಮತ್ತು 79 ರ…

Read More

ಹಾಜಿಪುರ: ಹೈಟೆನ್ಷನ್‌ ಓವರ್‌ ಹೆಡ್‌ ವಿದ್ಯುತ್ ತಂತಿಯ ಸ್ಪರ್ಶದಿಂದ ಕನಿಷ್ಠ ಒಂಬತ್ತು ಕನ್ವರ್‌ ಯಾತ್ರಿಕರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಕೈಗಾರಿಕಾ ಪೊಲೀಸ್‌‍ ಠಾಣೆ ವ್ಯಾಪ್ತಿಯ ಸುಲ್ತಾನ್‌ ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೈಶಾಲಿ ಜಿಲ್ಲೆಯ ಇಂಡಸ್ಟ್ರಿಯಲ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯ ಸುಲ್ತಾನ್‌ಪುರ ಗ್ರಾಮದಲ್ಲಿ ಹೈ ಟೆನ್ಷನ್‌ ಓವರ್‌ ಹೆಡ್‌ ವೈರ್‌ ವಾಹನದ ಮೇಲೆ  ಬಿದ್ದಿದೆ. ಇದರಿಂದಾಗಿ  ಒಂಬತ್ತು ಯಾತ್ರಾರ್ಥಿಗಳು (ಕನ್ವಾರಿಯಾಗಳು) ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿಯಲ್ಲಿ ಕನ್ವಾರಿಯರು ಜಲಾಭಿಷೇಕ ಮಾಡಲು ಸೋನೆಪುರದ ಬಾಬಾ ಹರಿಹರನಾಥ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ವಯನಾಡ್‌: ಕೇರಳದ ವಯನಾಡ್ ನಲ್ಲಿ ಭೀಕರ ಭೂಕುಸಿತ ಪ್ರಕರಣದಲ್ಲಿ 599 ಮಕ್ಕಳು ಮತ್ತು ಆರು ಗರ್ಭಿಣಿಯರು ಸೇರಿದಂತೆ 2,500 ಕ್ಕೂ ಹೆಚ್ಚು ಜನರು ಪರಿಹಾರ ಶಿಬಿರದಲ್ಲಿ ತಂಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭೂಕುಸಿತದಿಂದ ಪೀಡಿತ ಜನರು ತಂಗಿರುವ ಬೆಟ್ಟದ ಜಿಲ್ಲೆಯ ಮೆಪ್ಪಾಡಿ ಮತ್ತು ಇತರ ಗ್ರಾಮ ಪಂಚಾಯತ್‌ಗಳಲ್ಲಿ ಒಟ್ಟು 16 ರಕ್ಷಣಾ ಶಿಬಿರಗಳಿವೆ. 723 ಕುಟುಂಬಗಳಿಗೆ ಸೇರಿದ 2,514 ಜನರು ಶಿಬಿರಗಳಲ್ಲಿದ್ದಾರೆ. ಅವರಲ್ಲಿ 943 ಪುರುಷರು, 972 ಮಹಿಳೆಯರು ಮತ್ತು 599 ಮಕ್ಕಳು ಎಂದು  ಕೇರಳ ಸಿಎಂ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಅವರಲ್ಲಿ ಕೆಲವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಸಾಧ್ಯವಾದ ನಂತರ ಕಾಣೆಯಾದವರ ಸಂಖ್ಯೆ ಹಿಂದಿನ 206 ರಿಂದ 180 ಕ್ಕೆ ಇಳಿದಿದೆ ಎಂದು ಅವರು ಭಾನುವಾರ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More