Author: admin

ನವದೆಹಲಿ: ಬಾಂಗ್ಲಾದೇಶದಲ್ಲಿ ಮೀಸಲಾತಿ ಪ್ರತಿಭಟನೆ ತೀವ್ರಗೊಂಡಿದ್ದು, ಹೀಗಾಗಿ ಅಲ್ಲಿಗೆ ಪ್ರಯಾಣಿಸದಂತೆ ಭಾರತ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ. ಇದೇ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರಗಳನ್ನು ಸೋಮವಾರ ಮುಚ್ಚಲಾಗುವುದು ಎಂದು ಢಾಕಾದಲ್ಲಿರುವ ಭಾರತದ ರಾಯಭಾರಿ ಕಚೇರಿ ತಿಳಿಸಿದೆ. ಮುಂದಿನ ಸೂಚನೆ ಬರುವವರೆಗೂ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ಕಟ್ಟುನಿಟ್ಟಿನ ಸಲಹೆ ನೀಡಲಾಗಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದಿರಲು ತಿಳಿಸಲಾಗಿದೆ. ಅನಗತ್ಯವಾಗಿ ಹೊರಗಡೆ ಸುತ್ತುವುದನ್ನು ತಪ್ಪಿಸಿ ಎಂದು ಹೇಳಲಾಗಿದೆ. ತುರ್ತು ಸಂದರ್ಭದಲ್ಲಿ ಢಾಕಾದಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿಯನ್ನು ಸಂಪರ್ಕಿಸಿ ಎಂದು ಸೂಚಿಸಲಾಗಿದೆ ಎಂದು ಅದು ತಿಳಿಸಿದೆ. ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ಆಡಳಿತಾರೂಢ ಅವಾಮಿ ಲೀಗ್‌ ಪಕ್ಷದ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ಸುಮಾರು 100 ಮಂದಿ ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: ಬಿಜೆಪಿ ಮುಖಂಡರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಬಿಜಾಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಿಜೆಪಿ ನಾಯಕರ ವಿರುದ್ಧವೇ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಸೃಷ್ಟಿಸಿದ್ದು, ಹೀಗಾಗಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕೇಂದ್ರ ವರಿಷ್ಟರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಇಲ್ಲವೇ ಶಿಸ್ತುಕ್ರಮ ಜರುಗಿಸಲು ವರಿಷ್ಟರು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಹಾಗೂ ಜೆಡಿಎಸ್‌‍ ಜಂಟಿಯಾಗಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿರುವ ಸಂದರ್ಭದಲ್ಲೇ ಯತ್ನಾಳ್‌ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಹೇಳಿಕೆ ನೀಡಿದ್ದರು. ಇದು ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರಿಗೆ ಇರಿಸುಮುರುಸು ಉಂಟು ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಟಾರ್ಗೆಟ್ ಮಾಡಿ, ಸಾಕಷ್ಟು ಹೇಳಿಕೆಗಳನ್ನು ನೀಡಿದ್ದು, ಯತ್ನಾಳ್ ಅವರ ಹೇಳಿಕೆಯನ್ನು ಕಾಂಗ್ರೆಸ್ ಅಸ್ತ್ರ ಮಾಡಿಕೊಳ್ಳುತ್ತಿದ್ದ, ಯತ್ನಾಳ್ ಹೇಳಿಕೆಗೆ ಸ್ಪಷ್ಟನೆ ನೀಡಿ ಎಂದು ಕಾಂಗ್ರೆಸ್ ನಾಯಕರು ಬಿಜೆಪಿಗೆ ತಿರುಗೇಟು…

Read More

ಬೆಂಗಳೂರು: ಸಿಸಿಬಿ ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ ಅವರು ಬಿಡದಿ ಬಳಿ ಸಾವಿಗೆ  ಶರಣಾಗಿದ್ದಾರೆ. ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ತಿಮ್ಮೇಗೌಡ ಶವ ಪತ್ತೆಯಾಗಿದೆ. ಈ ಘಟನೆ ಬಿಡದಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆದರೆ, ಆತ್ಮಹತ್ಯೆಗೆ ಯಾವ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆಯ ಬಳಿಕ ಇನ್ನಷ್ಟು ವಿವರಗಳು ಲಭ್ಯವಾಗಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತಿಪಟೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದ ಅತ್ತ ಗೃಹಲಕ್ಷ್ಮಿ ಹಣವೂ ಇಲ್ಲ, ಇತ್ತ ವೃದ್ದಾಪ್ಯ ವೇತನವೂ ಇಲ್ಲದೇ  ಹುಚ್ಚಮ್ಮ ಎನ್ನೋ ಅಯೋವೃದ್ದೆ ತುತ್ತು ಅನ್ನಕ್ಕಾಗಿ ಅಲೆಯುವಂತಾಗಿದೆ. ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಗ್ರಾಮದ ವಾಸಿ ಸುಮಾರು 80 ವರ್ಷ ವಯಸ್ಸಿನ ವೃದ್ದೆ ಹುಚ್ಚಮ್ಮ ಅಂಗವಿಕಲೆಯಾಗಿದ್ದು, ಅಪಘಾತದಲ್ಲಿ  ಕಾಲು ಕಳೆದುಕೊಂಡಿದ್ದಾರೆ.  ಇವರಿಗೆ 3 ಜನ ಮಕ್ಕಳಿದ್ದರೂ ಸಾಕದೆ ಇರುವ ಕಾರಣ ವೃದ್ದೆ, ಪ್ರತ್ಯೇಕವಾಗಿ ಗುಡಿಸಲಿನಲ್ಲಿ ವಾಸವಾಗಿದ್ದಾರೆ. ದುಡಿದು ತಿನ್ನಲು ಶಕ್ತಿಇಲ್ಲ, ಮಕ್ಕಳ ಆಸರೆಯೂ ಇಲ್ಲದೆ ಬದುಕು ಸಾಗಿಸುವ ಹುಚ್ಚಮ್ಮ ಬಿನ್ ದುರ್ಗಯ್ಯ   ಅನ್ನಭಾಗ್ಯ ಪಡಿದರ ಧಾನ್ಯದಿಂದ ಜೀವನ ಸಾಗಿಸುತ್ತಿದ್ದರು. ಆದರೇ ಅಧಿಕಾರಿಗಳ ಯಡವಟ್ಟಿನಿಂದ ಕಳೆದ ಒಂದು ವರ್ಷದಿಂದ ವೃದ್ದಾಪ್ಯವೇತನ ಹಾಗೂ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣವೂ ಸಿಗದೆ ವೃದ್ಧೆ ಪರದಾಡುವಂತಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಾಲ್ಕುರಿಕೆ ಗ್ರಾಮಪಂಚಾಯ್ತಿ, ಪೋಸ್ಟ್ ಆಫೀಸ್ ಗೆ ಪ್ರತಿನಿತ್ಯ ಅಲೆದು ಈ ವೃದ್ಧೆ ಸುಸ್ತಾಗಿದ್ದಾರೆ. ಇದೀಗ ಯಾವುದೇ ಹಣ ಇಲ್ಲದ ಕಾರಣ ಇವರು ಭಿಕ್ಷಾಟನೆ ಮಾಡುವಂತಾಗಿದೆ. ಹತ್ತಾರು ಭಾರೀ…

Read More

ಬೀದರ್: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿಸಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವಂತಹ ಪೋಸ್ಟ್ ಗಳನ್ನು ಹರಿಯಬಿಡುವವರಿಗೆ ಬೀದರ್ ಜಿಲ್ಲಾ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ಔರಾದ–ಬಿ ತಾಲೂಕಿನ  ವ್ಯಕ್ತಿಯೊಬ್ಬ (ಆರೋಪಿ) ತನ್ನ ಮೊಬೈಲ್ ನಂಬರ್ ನಿಂದ ವಾಟ್ಸಾಪ್ ಗ್ರೂಪ್ ನಲ್ಲಿ ಒಂದು ಧರ್ಮದ ಬಗ್ಗೆ ಅಸಹನೆಯ ಭಾವ ಮೂಡಿಸುವಂತೆ,  ಮುಂಬೈಯಲ್ಲಿ ಜೂನ್ ತಿಂಗಳಲ್ಲಿ ಜರುಗಿದ ಘಟನೆಯನ್ನು ಆ ಧರ್ಮಕ್ಕೆ ಸಂಬಂಧವಿಲ್ಲದ ವಿಡಿಯೋದೊಂದಿಗೆ ಸುಳ್ಳು ಸಂದೇಶ ಹರಡಿಸಿ ಸಮಾಜದಲ್ಲಿ ಸೌಹಾರ್ದತೆಗೆ ಧಕ್ಕೆ ತರುವಂತಹ ಹಳೆ ವಿಡಿಯೋವನ್ನು ಹರಿಬಿಟ್ಟಿದ್ದ. ಇವನ ವಿರುದ್ದ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪಿ.ಎ.ಆರ್ ಸಂ: 22/2024, ಕಲಂ: 126 ಬಿ.ಎನ್.ಎಸ್.ಎಸ್ ಪ್ರಕಾರ ಕಾನೂನು ರಿತಿಯ ಕ್ರಮ ಕೈಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಯಬಿಟ್ಟು ಸಮಾಜದಲ್ಲಿ ಅಶಾಂತಿ ಕೆದಡುವಂತಹ ಪೋಸ್ಟ್ ಗಳು ಹರಿಯ ಬಿಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದ್ದು, ಅಂಥವರ  ವಿರುದ್ಧ ಈಗಾಗಲೇ ಜಿಲ್ಲೆಯಲ್ಲಿ ಪ್ರಕರಣಗಳು ದಾಖಲಿಸಿಕೊಳ್ಳಲಾಗುತ್ತಿದೆ. ಈ ಕುರಿತು ಜಿಲ್ಲಾ ಪೊಲೀಸರಿಂದ ಸಾಮಾಜಿಕ ಜಾಲತಾಣದಲ್ಲಿ…

Read More

ತುಮಕೂರು: ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಕೆಎಸ್ಆರ್ ಟಿಸಿ ಬಸ್ ಗೆ ಸಿಲುಕಿ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ. ತುಮಕೂರು ನಗರದ ಚೇತನ ಬಡಾವಣೆ ನಿವಾಸಿ ಚಂದ್ರಶೇಖರ್ (49) ಮೃತ ದುರ್ದೈವಿಯಾಗಿದ್ದಾರೆ. ಬಟವಾಡಿ ಕಡೆಯಿಂದ ಮಹಾತ್ಮ ಗಾಂಧಿ ಸ್ಟೇಡಿಯಂ ಕಡೆಗೆ ಹೋಗ್ತಿದ್ದ ಚಂದ್ರಶೇಖರ್,  ಈ ವೇಳೆ ಬಸ್ ನೇರವಾಗಿ ಬಂದು ಡಿಕ್ಕಿ ಹೊಡೆದಿದೆ. ಬಸ್ ನಡಿ ಸಿಲುಕಿ ಗಂಭೀರ ಗಾಯಗೊಂಡಿದ್ದ ಚಂದ್ರಶೇಖರ್ ರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಬಳಿಕ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯಲ್ಲೇ ನಿರ್ಮಾಣವಾಗ್ತಿದೆ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಸುಮಾರು 25 ಎಕರೆ ಜಾಗ ಈಗಾಗಲೇ ಸರ್ಕಾರ ಮೀಸಲಿಟ್ಟಿದೆ. ಸುಮಾರು 150 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ.  ಈ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಇಂಜಿನಿಯರ್ ಗಳು ಸ್ಥಳ ವೀಕ್ಷಣೆ ನಡೆಸಿದ್ದಾರೆ. ಬಳಿಕ ಟಿ.ಬಿ.ಜಯಚಂದ್ರ ಜೊತೆ ಮಾತುಕತೆ ನಡೆಸಿದ ಅಧಿಕಾರಿಗಳ ವರ್ಗದ ಜೊತೆಗೆ  ಮೂಲಭೂತ ಸೌಕರ್ಯಗಳ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಶಿರಾ ಶಾಸಕ ಟಿ.ಬಿ.ಜಯಚಂದ್ರ  ಸ್ವತಃ ಫೇಸ್ ಬುಕ್ ಫೇಜ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ: ತಾಲೂಕಿನ ಕೊತ್ತೂರು ಸಮೀಪದ ಸಾಕಮ್ಮನಗುಡ್ಡದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಯ ಮೇಲೆ ಭಾನುವಾರ ಮಧ್ಯರಾತ್ರಿ 12 ಗಂಟೆಗೆ ಅರಸೀಕೆರೆ ಠಾಣೆಯ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 2,22,290 ಹಣ ಒಂಬತ್ತು ಜನ ಆರೋಪಿಗಳನ್ನು ಹಾಗೂ ನಾಲ್ಕು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ, ಖಚಿತ ಮಾಹಿತಿಯ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಗಿರೀಶ್  ಅವರ ನೇತೃತ್ವದಲ್ಲಿ ಪಿಎಸ್ ಐ ತಾರಸಿಂಗ್ ಮತ್ತು ಪೊಲೀಸ್ ಪೇದೆಗಳಾದ ಸೌಕತ್, ಕೃಷ್ಣ, ಧಾವಲ್, ಸಂದೇಶರ ತಂಡ ದಾಳಿ ನಡೆಸಿದ್ದು, ಈ ಸಂಬಂಧ ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮಗಳನ್ನು ಅರಸೀಕೆರೆ ಪೊಲೀಸ್ ಠಾಣೆಯ ಪೊಲೀಸರು ಕೈಗೊಂಡಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/JItjEWZ9e5fBWDL6CkTr97

Read More

ತುಮಕೂರು: ವಯನಾಡಿನ ದುರಂತ ಕಂಡು ಆ್ಯಂಬುಲೆನ್ಸ್ ಚಾಲಕರು ಕರಗಿದ್ದು,  ಅಗತ್ಯ ಸಾಮಗ್ರಿಗಳೊಂದಿಗೆ ಆ್ಯಂಬುಲೆನ್ಸ್  ಚಾಲಕರು ತೆರಳಿದ್ದಾರೆ. ತುಮಕೂರಿನ ಆ್ಯಂಬುಲೆನ್ಸ್ ಚಾಲಕರು ಮತ್ತು ಮಾಲಿಕರ ಸಂಘದಿಂದ ವಯನಾಡ್ ಸಂತ್ರಸ್ತರಿಗೆ ಸಹಾಯ ಹಸ್ತಚಾಚಲಾಯಿತು. ಎರಡು ಆ್ಯಂಬುಲೆನ್ಸ್ ಗಳಲ್ಲಿ ವಯನಾಡ್ ಗೆ 10 ಮಂದಿ ಚಾಲಕರು ತೆರಳಿದರು. ಮಕ್ಕಳು, ಮಹಿಳೆಯರು ಸೇರಿದಂತೆ ಪ್ರವಾಹ ಸಂತ್ರಸ್ಥರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಹೊತ್ತು,  ತುಮಕೂರಿನ ಆ್ಯಂಬುಲೆನ್ಸ್ ಚಾಲಕರು ವಯನಾಡ್ ಗೆ ತೆರಳಿದರು. ದಾನಿಗಳಿಂದ ಹಾಗೂ ತಮ್ಮ ಕೈಲಾದ ಹಣ ಹೊಂದಿಸಿ ಸಹಾಯ ನೀಡಿದ್ದು, ಪ್ರವಾಹ ಸಂತ್ರಸ್ತರಿಗೆ ಬೇಕಾದ ಬಟ್ಟೆ, ಆಹಾರ, ನೀರು ಸೇರಿದಂತೆ ಔಷಧಿಗಳನ್ನು ತೆಗೆದುಕೊಂಡು ಪ್ರಯಾಣ ಬೆಳೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸ್ನೇಹಿತರ ದಿನಾಚರಣೆ ( ಇಂಟರ್ನ್ಯಾಷನಲ್ ಫ್ರೆಂಡ್ಶಿಪ್ ಡೇ ಅಥವಾ ಫ್ರೆಂಡ್ಸ್ ಡೇ ಎಂದೂ ಸಹ ಕರೆಯಲಾಗುತ್ತದೆ ) ಹಲವಾರು ದೇಶಗಳಲ್ಲಿ ಸ್ನೇಹವನ್ನು ಆಚರಿಸುವ ದಿನವಾಗಿದೆ . ಇದನ್ನು ಆರಂಭದಲ್ಲಿ ಗ್ರೀಟಿಂಗ್ ಕಾರ್ಡ್ ಉದ್ಯಮದಿಂದ ಪ್ರಚಾರ ಮಾಡಲಾಯಿತು. ಹಾಲ್ಮಾರ್ಕ್ ಕಾರ್ಡ್ಸ್ನ ಸ್ಥಾಪಕ ಜಾಯ್ಸ್ ಹಾಲ್ 1950 ರ ದಶಕದಲ್ಲಿ ಸ್ನೇಹವನ್ನು ಗೌರವಿಸಲು ಮೀಸಲಾದ ದಿನದ ಕಲ್ಪನೆಯನ್ನು ಮೊದಲು ಉತ್ತೇಜಿಸಿದಾಗ ಇದು ಮೊದಲು ಹುಟ್ಟಿಕೊಂಡಿತು. ಈ ಪರಿಕಲ್ಪನೆಯು ಶೀಘ್ರದಲ್ಲೇ ಯುಎಸ್ನಲ್ಲಿ ಸ್ಥಳೀಯರಲ್ಲಿ ಜನಪ್ರಿಯತೆಯನ್ನು ಗಳಿಸಿತು. ನಂತರ, ಇದು ಅಂತರರಾಷ್ಟ್ರೀಯವಾಗಿ ಹರಡಿತು, ಮತ್ತು 2011 ರಲ್ಲಿ, ವಿಶ್ವಸಂಸ್ಥೆ ಇದನ್ನು ಗುರುತಿಸಿತು. ಗ್ಲೋಬಲ್ ಫ್ರೆಂಡ್ಶಿಪ್ ಡೇ ಕಲ್ಪನೆಯನ್ನು ಮೊದಲ ಬಾರಿಗೆ 20 ಜುಲೈ 1958 ರಂದು ಡಾ. ರಾಮನ್ ಆರ್ಟೆಮಿಯೊ ಬ್ರಾಕೊ ಅವರು ಪರಾಗ್ವೆಯ ಅಸುನ್ಸಿಯಾನ್ನಿಂದ ಉತ್ತರಕ್ಕೆ 200 ಮೈಲಿಗಳು (320 ಕಿಮೀ) ಪರಾಗ್ವೆ ನದಿಯ ಪರಾಗ್ವೆಯ ಪಟ್ಟಣವಾದ ಪೋರ್ಟೊ ಪಿನಾಸ್ಕೋದಲ್ಲಿ ಸ್ನೇಹಿತರೊಂದಿಗೆ ಭೋಜನದ ಸಮಯದಲ್ಲಿ ಪ್ರಸ್ತಾಪಿಸಿದರು . ಈ ಸಭೆಯಲ್ಲಿ ವಿಶ್ವ ಸೌಹಾರ್ದ ಹೋರಾಟ ಹುಟ್ಟಿಕೊಂಡಿತು.…

Read More