Subscribe to Updates
Get the latest creative news from FooBar about art, design and business.
- ಭೀಕರ ರಸ್ತೆ ಅಪಘಾತ: ಟಾಟಾ ಏಸ್ ಹರಿದು ಇಬ್ಬರು ಯುವಕರು ಸಾವು, ಹೋಟೆಲ್ ಗೆ ನುಗ್ಗಿದ ವಾಹನ!
- ಕೊರಟಗೆರೆಯಲ್ಲಿ ವರುಣನ ಅಬ್ಬರ: ಶಾಲಾ ಆವರಣ, ಬಸ್ ನಿಲ್ದಾಣ ಜಲಾವೃತ, ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ
- ಕಾರ್ಮಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಆಗ್ರಹ: ತುಮಕೂರಿನಲ್ಲಿ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
- ಜನರ ಮನಸ್ಸಿನಲ್ಲಿ ಉಳಿಯುವಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ತಹಶೀಲ್ದಾರ್ ಕೆ.ಮಂಜುನಾಥ್ ಕಿವಿಮಾತು
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ: ಕಂದೇಗಾಲ ಶಿವರಾಜು ಆಗ್ರಹ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಮುಳ್ಳೂರು ಲೋಕೇಶ್ ಒತ್ತಾಯ
- ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
- ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Author: admin
ಶ್ರಾವಣ ಮಾಸ ಅಂದ್ರೆ ಮಳೆಯಾಗುವ ಸಮಯ. ತಂಪಾದ ಗಾಳಿ ಮತ್ತು ಮಳೆಯು ಆಹ್ಲಾದಕರವಾಗಿರುತ್ತದೆ. ಆದರೆ ಈ ಸಮಯದಲ್ಲಿ ವಾತಾವರಣ ಹೆಚ್ಚು ಆರ್ದ್ರತೆಯಿಂದ ಕೂಡಿರುತ್ತದೆ. ಹೀಗಾಗಿ ಬ್ಯಾಕ್ಟೀರಿಯಾ ಮತ್ತು ವೈರಸ್ ಗಳು ಈ ವಾತಾವರಣದಲ್ಲಿ ಬೇಗ ಬೆಳೆಯುತ್ತವೆ. ಹೀಗಾಗಿ ಇದು ಸೋಂಕು, ಫುಡ್ ಪಾಯ್ಸನ್, ಅತಿಸಾರ ಮತ್ತು ಅಜೀರ್ಣದಂತಹ ಸಾಮಾನ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೆಚ್ಚಿನ ಆರ್ದ್ರತೆಯು ಜೀರ್ಣಕ್ರಿಯೆಯ (Digestion) ಮೇಲೆ ಪರಿಣಾಮ ಬೀರುತ್ತದೆ, ಅದಕ್ಕಾಗಿಯೇ ಅನೇಕ ಜನರು ಈ ಋತುವಿನಲ್ಲಿ ಮಾಂಸಾಹಾರಿ ಆಹಾರಗಳು ಮತ್ತು ಮೊಟ್ಟೆಗಳನ್ನು ತಿನ್ನುವುದನ್ನು ತಪ್ಪಿಸುತ್ತಾರೆ. ಹಿಂದೂ ಸಂಪ್ರದಾಯದ (Hindu religion) ಪ್ರಕಾರ, ಪ್ರಾಣಿಗಳ ಸಂತಾನವೃದ್ಧಿ ಕಾಲದಲ್ಲಿ ಅವುಗಳನ್ನು ಕೊಲ್ಲುವುದು ಪಾಪವೆಂದು ಪರಿಗಣಿಸಲಾಗುತ್ತದೆ. ಮಾನ್ಸೂನ್ ಅನೇಕ ಪ್ರಾಣಿಗಳಿಗೆ ಸಂತಾನೋತ್ಪತ್ತಿ ಸಮಯವಾಗಿರುವುದರಿಂದ, ಈ ಅವಧಿಯಲ್ಲಿ ಮಾಂಸಾಹಾರಿ ಮತ್ತು ಮೊಟ್ಟೆಗಳನ್ನು ತಪ್ಪಿಸಲು ಸೂಚಿಸಲಾಗುತ್ತದೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ಮನುಷ್ಯನ ದೇಹದಲ್ಲಿ ಜೀರ್ಣಶಕ್ತಿ ಕಡಿಮೆಯಾಗುತ್ತದೆ. ಸಸ್ಯಾಹಾರಕ್ಕೆ ಹೋಲಿಸಿದರೆ ಮಾಂಸಾಹಾರವು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಅಜೀರ್ಣವಾಗಿ ಮಾಂಸಾಹಾರವು ಕರುಳಿನ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ…
ವೀರಪ್ಪನ್, ರಾಜ್ಕುಮಾರ್ ಅವರನ್ನು ಅಪಹರಿಸಿ 24 ವರ್ಷಗಳಾದವು. ಅಂದಹಾಗೆ ವೀರಪ್ಪನ್, ರಾಜ್ ಕುಮಾರ್ ಅವರನ್ನೇ ಅಪಹರಣ ಮಾಡಿದ್ದು ಏಕೆ? ಮಹಾದಡ್ಡನಾಗಿದ್ದ ವೀರಪ್ಪನ್ ಗೆ ರಾಜ್ ಕುಮಾರ್ ಅವರನ್ನು ಅಪಹರಣ ಮಾಡುವಂತೆ ಐಡಿಯಾ ಕೊಟ್ಟಿದ್ದು ಯಾರು? 24 ವರ್ಷದ ಹಿಂದೆ ಇದೇ ಭೀಮನ ಅಮವಾಸ್ಯೆ ದಿನವೇ ರಾಜ್ಕುಮಾರ್ ಅಪಹರಣವಾಗಿತ್ತು. ಅಷ್ಟಕ್ಕೂ ರಾಜ್ಕುಮಾರ್ ಅವರನ್ನೇ ಅಪಹರಣ ಮಾಡಬೇಕು ಎಂಬ ಐಡಿಯಾ ವೀರಪ್ಪನ್ಗೆ ಬಂದಿದ್ದು ಹೇಗೆ? ಅಸಲಿಗೆ ವೀರಪ್ಪನ್, ಕಾಡಿನಲ್ಲಿ ಕುಕೃತ್ಯಗಳನ್ನು 1980ರಲ್ಲಿಯೇ ಪ್ರಾರಂಭ ಮಾಡಿದ ಆದರೆ 1990ರ ದಶಕದ ಅಂತ್ಯದ ವೇಳೆಗೆ ಪೊಲೀಸ್, ಅರಣ್ಯ ಇಲಾಖೆಯವರ ಶಿಸ್ತಿನ ಕಾರ್ಯಾಚರಣೆಗಳಿಂದ ಗಂಧದ ಕಳ್ಳಸಾಗಣೆ, ಆನೆದಂತದ ವ್ಯಾಪಾರಗಳು ಕ್ಷೀಣಿಸಿದ್ದವು. ಎಸ್ಐಟಿ ಅಧಿಕಾರಿ ಕೆ ವಿಜಯ್ ಕುಮಾರ್ ಹೇಳುವಂತೆ 1995 ರಿಂದ ಆಚೆಗೆ ವೀರಪ್ಪನ್ ಬಳಿ ಹಣವೇ ಇರಲಿಲ್ಲವಂತೆ. ತೀರ ಸಣ್ಣ ಪುಟ್ಟ ಹಣಕ್ಕೂ ಕಾಡಿನಲ್ಲಿ ದರೋಡೆಗಳನ್ನು ಮಾಡಲು ಪ್ರಾರಂಭಿಸಿದ್ದನಂತೆ ವೀರಪ್ಪನ್. ಒಂದು ಬಾರಿಯಂತೂ ತನ್ನ ಕೊರಳಲ್ಲಿದ್ದ ಚಿನ್ನದ ಸರವನ್ನೂ ಸಹ ಅಡವಿಟ್ಟು ಹಣ ಪಡೆದಿದ್ದನಂತೆ. ಅದೇ ಸಮದಯಲ್ಲಿ…
ಔರಾದ್: ಕ್ರೂಸರ್ ಗೆ ದಾರಿಕೊಡಲು ಹೋದ ವೇಳೆ ನಿಯಂತ್ರಣ ತಪ್ಪಿದ ಕಲ್ಯಾಣ ಕನಾ೯ಟಕ ಸಾರಿಗೆ ನಿಗಮದ ಬಸ್ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ವಡಗಾಂವ (ದೇ) -ಬೇಲೂರ ನಡುವೆ ನಡೆದಿದೆ. ಬೀದರ್ ನಿಂದ ಔರಾದ ತಾಲೂಕಿನ ಕರಂಜಿ ಕಡೆಗೆ ತೆರಳಿತ್ತಿದ್ದ ವೇಳೆ ಕಿರಿದಾದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ 32 ಪ್ರಯಾಣಿಕರು ಬಸ್ ನಲ್ಲಿದ್ದರು. ಯಾರಿಗೂ ಪ್ರಾಣಪಾಯವಾಗಿಲ್ಲ ಎಂದು ಚಾಲಕ ಎಡಿಸನ್ ತಿಳಿಸಿದ್ದಾರೆ. ಘಟನೆಯ ನಂತರ ಬಸ್ ರಸ್ತೆ ಮೇಲೆತ್ತಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಆಯಾ ಗ್ರಾಮಗಳಿಗೆ ತಲುಪಿಸಲಾಯಿತು. ಬೀದರ ಘಟಕ 1ರ ಔರಾದ ತಾಲೂಕಿನಲ್ಲಿ ಸಂಚರಿಸುವ ಬಹುತೇಕ ಬಸ್ ಗಳು ಗುಜರಿ. ಹಾಕುವ ಸ್ಥಿತಿಗೆ ಬಂದಿವೆ. ನಿತ್ಯ ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಹೊಸ ಹೊಸ ಗಳನ್ನು ಓಡಿಸಬೇಕು ಎಂದು ವಡಗಾಂವ ಗ್ರಾಮಸ್ಥರು ಆಗ್ರಹಿಸಿ ದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಮುಂಬೈ: ಬಿಜೆಪಿಯು ರಾಜಕೀಯ ಪಕ್ಷಗಳನ್ನು ಒಡೆಯುವ ಮೂಲಕ ಪವರ್ ಜಿಹಾದ್ ನಡೆಸುತ್ತಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ. ಪುಣೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ತನ್ನನ್ನು ಔರಂಗಜೇಬ್ ಅಭಿಮಾನಿಗ ಸಂಘದ ಮುಖ್ಯಸ್ಥ ಎಂದು ಕರೆದಿದ್ದಾರೆ. ಅಮಿತ್ ಷಾ ಅವರು ಪಾಣಿಪತ್ ಯುದ್ಧದಲ್ಲಿ ಮರಾಠರನ್ನು ಸೋಲಿಸಿದ ಆಫ್ಘನ್ ದೊರೆ ಅಹ್ಮದ್ ಷಾ ಅಬ್ದಾಲಿಯ ರಾಜಕೀಯ ವಂಶಸ್ಥರು ಎಂದು ತಿರುಗೇಟು ನೀಡಿದರು. ನಾವು ನಮ್ಮ ಹಿಂದುತ್ವವನ್ನು ವಿವರಿಸಿದ ನಂತರ ಮುಸ್ಲಿಮರು ನಮ್ಮೊಂದಿಗಿದ್ದರೆ, ನಾವು (ಬಿಜೆಪಿ ಪ್ರಕಾರ) ಔರಂಗಜೇಬ್ ಅಭಿಮಾನಿಗಳ ಸಂಘ. ಹಾಗಾದರೆ ರಾಜಕೀಯ ಪಕ್ಷಗಳನ್ನು ಒಡೆದು ನೀವು ಮಾಡುತ್ತಿರುವುದು ಪವರ್ ಜಿಹಾದ್. ಯಾರ ಮನೆಯನ್ನು ಸುಡಬಾರದು ಎಂದು ಹೇಳಿಕೊಟ್ಟ ಛತ್ರಪತಿ ಶಿವಾಜಿ ಮಹಾರಾಜರನ್ನು ಆದರ್ಶವಾಗಿ ಪರಿಗಣಿಸುತ್ತೇವೆ. ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಅವರಂತಹವರು ಹಿಂದುತ್ವವಾದಿಗಳೇ ಎಂಬುದನ್ನು ಬಿಜೆಪಿ ಹೇಳಬೇಕು?ಎಂದು ವ್ಯಂಗ್ಯ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೆಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚನೆ ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ನಾಳೆಯಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ ಎಲ್ಲ…
ಹಿಂದೂಗಳಿಗೆ ಬಹಳ ಶ್ರೇಷ್ಠವಾದ ಹಾಗೂ ವಿಶೇಷವಾದ ಮಾಸ ಶ್ರಾವಣ ಮಾಸ ಆಗಿದೆ. ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿರುತ್ತದೆ. ಹಾಗಾಗಿ ಈ ಮಾಸದಲ್ಲಿ ಶಿವ, ಪಾರ್ವತಿ, ಲಕ್ಷ್ಮಿ, ವಿಷ್ಣು ಸೇರಿದಂತೆ ಅನೇಕ ದೇವಾನುದೇವತೆಗಳ ಪೂಜೆ ಮಾಡುತ್ತಾರೆ. ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸ ಇದಾಗಿದೆ. ಈ ಮಾಸದಲ್ಲಿ ಜಪ–ತಪ, ವ್ರತ–ನಿಯಮ, ಪೂಜೆ–ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ–ಯಾಗ, ಹೋಮ—ಹವನಗಳು ಹೆಚ್ಚಾಗಿ ನಡೆಯುತ್ತದೆ. ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಶ್ರಾವಣ ಬಹಳ ಪ್ರಶಸ್ತವಾಗಿದೆ. ಈ ಮಾಸದಲ್ಲಿ ಪ್ರಕೃತಿಯಲ್ಲಿನ ಗಿಡಮರಗಳು ಚಿಗುರೊಡೆದು ಹಚ್ಚಹಸಿರಾಗಿ, ಹೂಗಳನ್ನು ಬಿಟ್ಟು ಬಣ್ಣಗಳಿಂದ ಕಂಗೊಳಿಸುತ್ತಾ ಸಂತಸದಿಂದ ಇರುತ್ತದೆ. ಹಾಗೇ ಪ್ರಾಣಿ ಪಕ್ಷಿಗಳು ಕೂಡ ಉಲ್ಲಾಸದಿಂದ ಇರುತ್ತದೆಯಂತೆ. ಇದನ್ನು ಕಂಡು ದೈವಾನುದೇವತೆಗಳು ಕೂಡ ಸಂಭ್ರಮ ಪಡುತ್ತಾರೆ ಅನ್ನೋ ನಂಬಿಕೆ ಇದೆ. ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ…
ತುಮಕೂರು: ನಿಧಿ ಆಸೆಗಾಗಿ ಚೋರರು ಬಂಡೆಗಳನ್ನು ಕೊರೆದು ಶೋಧ ನಡೆಸಿರುವ ಘಟನೆ ತುಮಕೂರು ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ವಡ್ಡರಹಳ್ಳಿ ಗ್ರಾಮದ ಬನವಾಸಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ವಡ್ಡರಹಳ್ಳಿ ಗ್ರಾಮದಿಂದ ಹೊರಭಾಗದಲ್ಲಿರುವ ಬನವಾಸಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಿಧಿಗಾಗಿ ಮಧ್ಯರಾತ್ರಿ ಮೂರು ಕಡೆ ಬಂಡೆ ಕೊರೆದಿದ್ದಾರೆ. ಅರಿಶಿನ ಕುಂಕಮ, ತೆಂಗಿನಕಾಯಿ ಹಾಗೂ ವಸ್ತ್ರವನ್ನಿಟ್ಟು ಪೂಜೆ ಮಾಡಿರುವ ಕಿಡಿಗೇಡಿಗಳು. ನಿಧಿ ಸಿಗದೇ ಅರ್ಧಕ್ಕೆ ಬಿಟ್ಟು ಪರಾರಿಯಾಗಿದ್ದಾರೆ. ದೇವಸ್ಥಾನಕ್ಕೆ ಪೂಜೆ ಮಾಡಲು ಬಂದ ಅರ್ಚಕರಿಂದ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಗ್ರಾಮಸ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಸ್ಥಾನಕ್ಕೆ ಭದ್ರತೆ ಕೊಡುವಂತೆ ಪೊಲೀಸರಿಗೆ ಗ್ರಾಮಸ್ಥರಿಂದ ಮನವಿ ಸಲ್ಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಶಾಲಾ ಸಹಪಾಠಿಗಳ ಲೈಂಗಿಕ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ. ಸಿಡೇದಹಳ್ಳಿ ನಿವಾಸಿ ಮಮತಾ (31) ಸಾವಿಗೆ ಶರಣಾದ ಮಹಿಳೆಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜೆ.ಪಿ.ನಗರ ನಿವಾಸಿ, ಆರೋಪಿ ಗಣೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಅಶೋಕ್ ಎಂಬಾತನ ಬಂಧನಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಆರೋಪಿಗಳು ಮಮತಾಳ ಹೈಸ್ಕೂಲ್ ಸಹಪಾಠಿಗಳಾಗಿದ್ದರು. ಆ ನಂತರ ಮಮತಾರಿಗೆ ಕೆಲ ವರ್ಷಗಳ ಹಿಂದೆ ಲೋಕೇಶ್ ಎಂಬಾತನೊಂದಿಗೆ ವಿವಾಹವಾಗಿತ್ತು. ದಂಪತಿಗೆ 6 ವರ್ಷದ ಗಂಡು ಮಗು ಇದ್ದು, ಸಿಡೇದಹಳ್ಳಿಯಲ್ಲಿ ವಾಸವಿದ್ದರು. ಲೋಕೇಶ್ ಫುಡ್ ಡಿಲಿವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದರು. ಬುಧವಾರ ಪತ್ನಿಗೆ ಲೋಕೇಶ್ ಕರೆ ಮಾಡಿದಾಗ ಅವರು ಕಾಲ್ ರಿಸೀವ್ ಮಾಡಿಲ್ಲ. ಹಾಗಾಗಿ ಪಕ್ಕದ ಮನೆಯವರಿಗೆ ಕರೆ ಮಾಡಿದ ವೇಳೆ ಮಮತಾ ಸಾವಿಗೆ ಶರಣಾಗಿರುವುದು ತಿಳಿದು ಬಂದಿದೆ. ಹೈಸ್ಕೂಲ್ನ ಸಹಪಾಠಿಗಳಾದ ಅಶೋಕ್ ಮತ್ತು ಗಣೇಶ್, ಮಮತಾ ಅವರಿಗೆ ಕಿರುಕುಳ ನೀಡುತ್ತಿರುವ ವಿಚಾರವನ್ನು ಅವರು ಡೆತ್ ನೋಟ್…
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಬರೋಬ್ಬರಿ 2.10 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಸಲ್ಲಿಸಿದವರ ಶೈಕ್ಷಣಿಕ ಅರ್ಹತೆಯ ವಿವರಗಳನ್ನು ಬಿಡುಗಡೆ ಮಾಡಿದೆ. ಬಿಎ ಪದವಿ ಪಡೆದ 63,769 ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, 38,692 ಇಂಜಿನಿಯರಿಂಗ್ ಪದವೀಧರರು, 36,091 ಬಿಎಸ್ಸಿ, 34,795 ಬಿಕಾಂ, 6156 ಬಿಟೆಕ್, 3306 ಬಿಸಿಎ, 803 ಎಂಬಿಬಿಎಸ್ ಪದವೀಧರರು ಕೆಎಎಸ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ನೇರ ಪದವಿ, ನೇರ ಸ್ನಾತಕೋತ್ತರ ಪದವಿ ಸೇರಿ ಒಟ್ಟು 144 ಪ್ರಕಾರ ಪದವಿ ಓದಿದವರು ಕೆಎಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಮುಡಾ ಹಗರಣ ಕೆಣಕಿದ ಬಿಜೆಪಿ ನಾಯಕರಿಗೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ಸಜ್ಜಾಗಿದ್ದು, ಬಿಜೆಪಿ ಕಾಲದ ಹಗರಣಗಳ ತನಿಖೆಗೆ ಮುಂದಾಗಿದೆ. ಸದ್ಯ ಕಾರ್ಕಳದಲ್ಲಿ ಪರಶುರಾಮ ಪ್ರತಿಮೆ ವಿವಾದವನ್ನು ಕೈಗೆತ್ತಿಕೊಳ್ಳಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ಪ್ರತಿಮೆ ಸಿದ್ದಪಡಿಸಿದ ಗೋಡೌನ್ ನಲ್ಲಿ ಪೊಲೀಸರು ಮಹಜರು ಮಾಡಿದ್ದಾರೆ. ಕೆಂಗೇರಿ ಬಳಿಯ ಗೋಡೌನ್ ಗೆ ಭೇಟಿ ನೀಡಿದ ಕಾರ್ಕಳ ಟೌನ್ ಠಾಣೆ ಪೊಲೀಸರ ತಂಡ ಪರಿಶೀಲನೆ ನಡೆಸಿದೆ. ಮಹಜರು ಸೇರಿದಂತೆ ಪ್ರತಿಮೆ ನಿರ್ಮಾಣಕ್ಕೆ ಬಳಸಿದ್ದ ವಸ್ತುಗಳನ್ನ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296