Author: admin

ವಿಜಯಪುರ: ಮುಡಾ ಹಗರಣದ ವಿರುದ್ಧ ಬಿಜೆಪಿ ನಾಯಕರು ಪಾದಯಾತ್ರೆ ನಡೆಸುತ್ತಿದ್ದರೆ, ಇತ್ತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಮಾಡಿದ್ರೂ ಮಾಡೋರೆ, ವಿಜಯೇಂದ್ರ ಮಾಡಿರು ಮಾಡೋರೆ, ಅಶೋಕ ಮಾಡಿದ್ರು ಮಾಡೋರೆ. ನೀವೆಲ್ಲಾ ವಿಧಾನಸಭೆಗೆ ಹೋಗಿ ಅಡ್ಜೆಸ್ಟ್ಮೆಂಟ್ ಮಾಡಿಕೊಳ್ತೀರಿ. ನಮ್ಮ‌ ಮುಂದೆ‌ ಮಾತ್ರ ಸುಮ್ನೆ ಇರ್ತೀರ. ನೀವೇ ಡೈರೆಕ್ಷನ್ ಕೊಡ್ತೀರಿ. ಸರ್ ನೀವೆಲ್ಲ ಬಿಲ್ ಗಳನ್ನ ಪಾಸ್ ಮಾಡಿಕೊಳ್ಳಿ. ನಾವೂ ಧರಣಿ ಕೂರುತ್ತೀವಿ. ಅಡ್ಜರ್ನ್ ಮಾಡಿ ಹೀಗೆ ನೀವೂ ಕೊಡುವ ಡೈರೆಕ್ಷನ್ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಆಗ್ತಾ ಇದೆ. ಸುಮ್ಮ ಸುಮ್ಮನೆ ಕೇಸ್ ಹಾಕುತ್ತಾ ಇದ್ದಾರೆ. ಇವತ್ತು ಬಿಜೆಪಿ ಕಾರ್ಯಕರ್ತರು ಹೊರ ಬರುವ ಪರಿಸ್ಥಿತಿ ಇಲ್ಲ. ನೀವ್ ನೋಡುದ್ರೆ ಅಲ್ಲಿ ಹಲ್ಲು ಬಿಡುತ್ತಾ ನಿಲ್ತೀರಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು. ನಾನು ಸಿದ್ದರಾಮಯ್ಯ ಅವರ ಮುಖವನ್ನ ಬರೀ ವಿಧಾನಸೌಧದಲ್ಲಷ್ಟೇ ನೋಡಿದ್ದೀನಿ. ರಾತ್ರಿ ಡಿಕೆಶಿ ಮನೆಗೆ ಹೋಗಿ ಪಾರ್ಟಿ ಮಾಡಿ, ಎಲ್ಲಿ…

Read More

ಬೆಂಗಳೂರು: ಇನ್ನು ಮುಂದೆ ವೈದ್ಯಕೀಯ ಸಂಸ್ಥೆಗಳು ನೋಂದಣಿ ಸಂಖ್ಯೆ, ಸಂಸ್ಥೆ, ಮಾಲೀಕರ ಹೆಸರನ್ನು ಪ್ರದರ್ಶಿಸುವುದು ಕಡ್ಡಾಯ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದು, ಈ ಮೊದಲು ನಿಗದಿಪಡಿಸಿದ ಅಳತೆಯ ಫಲಕಗಳನ್ನು ಕ್ಲಿನಿಕ್ ಗಳಲ್ಲಿ ಅಳವಡಿಸುವುದು ಕಷ್ಟಸಾಧ್ಯ ಎಂದು ತಿಳಿಸಿದ್ದ ಭಾರತೀಯ ವೈದ್ಯಕೀಯ ಸಂಘ, ಅಳತೆಯ ನಿಯಮ ಸಡಿಲಿಸಲು ಕೋರಿತ್ತು. ಹೀಗಾಗಿ, ಮಾಹಿತಿ ಫಲಕದ ಅಳತೆಯನ್ನು ಕನಿಷ್ಠ 5 ಅಡಿ ಅಗಲ ಹಾಗೂ 2.5 ಅಡಿ ಉದ್ದಕ್ಕೆ ನಿಗದಿಪಡಿಸಲಾಗಿದೆ. ಆಸ್ಪತ್ರೆಗಳು ಮೊದಲಿನ ಆದೇಶದಂತೆ ಕನಿಷ್ಠ 7 ಅಡಿ ಅಗಲ, 3 ಅಡಿ ಉದ್ದದ ಫಲಕವನ್ನು ಅಳವಡಿಸಬೇಕು ಎಂದು ಸೂಚಿಸಲಾಗಿದೆ. ಫಲಕದಲ್ಲಿ ಮೂರು ಸಾಲು ಮಾತ್ರ ಇರಬೇಕು. ಮೊದಲ ಸಾಲಿನಲ್ಲಿ ಕೆಪಿಎಂಇ ನೋಂದಣಿ ಸಂಖ್ಯೆ, ಎರಡನೆ ಸಾಲಿನಲ್ಲಿ ಆಸ್ಪತ್ರೆಯ ಹೆಸರು, ಮೂರನೆ ಸಾಲಿನಲ್ಲಿ ಮಾಲೀಕರ ಅಥವಾ ವ್ಯವಸ್ಥಾಪಕ ಹೆಸರನ್ನು ನಮೂದಿಸಬೇಕು. ಫಲಕದಲ್ಲಿ ನಮೂದಿಸಿರುವ ಅಕ್ಷರಗಳು ಎದ್ದು ಕಾಣುವಂತೆ ಕಪ್ಪು ಅಕ್ಷರದಲ್ಲಿ ಇರಬೇಕು. ಅದನ್ನು ಬೇರೆಡೆಗೆ…

Read More

ಬೆಂಗಳೂರು: ರಾಜ್ಯಪಾಲರು ನೀಡಿದ ಬರೀ ನೋಟಿಸ್ ಗೆ ಗಡಗಡ ನಡುಗುತ್ತಿದ್ದೀರಾ. ಇನ್ನೂ ಅನುಮತಿ ಕೊಟ್ಟರೆ ನಿಮ್ಮ ಕತೆ ಏನಾಗಬಹುದು? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ  ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ–ಜೆಡಿಎಸ್ ಜಂಟಿ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ಮುಳುಗಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಅವರು ಹೇಳಿದರು. ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ದೊಡ್ಡ ಹೋರಾಟವಿದು. ಕರ್ನಾಟಕದ ಇತಿಹಾಸದಲ್ಲಿಯೇ ಹಿಂದೆಂದು ನಡೆಯದ ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದರು. ವಾಲ್ಮೀಕಿ ನಿಗಮದಲ್ಲಿನ ಭ್ರಷ್ಟಾಚಾರ, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗಾಗಿ ನಮ್ಮ ಹೋರಾಟ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು:  ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರನ್ನು ಯಾಕೆ ಬಂಧಿಸಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಪ್ರಶ್ನಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು,  ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರೇ ಇದರ ಕಿಂಗ್‌ಪಿನ್‌. ಅವನನ್ನು ಏಕೆ ಬಂಧಿಸಿಲ್ಲ ಎಂದು ಏಕ ವಚನದಲ್ಲೇ ವಾಗ್ದಾಳಿ ನಡೆಸಿದರು. ಮುಡಾದಲ್ಲಿ ಅಂದಾಜು ನಾಲ್ಕು ಸಾವಿರ ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದರ ಸೂತ್ರಧಾರ ಭೈರತಿ ಸುರೇಶ್‌. ಅವನು ಏಕೆ ಹೊರಗಡೆ ಇದ್ದ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ಸರ್ಕಾರ ಈತನನ್ನು ಏಕೆ ಬಂಧಿಸಿಲ್ಲ? ಎಂದು ಪ್ರಶ್ನೆ ಮಾಡಿದರು. ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಒಬ್ಬ ಸಚಿವರು ಈಗಾಗಲೇ ಜೈಲು ಪಾಲಾಗಿದ್ದಾರೆ. ಇದರಲ್ಲಿ 189 ಕೋಟಿ ಹಗರಣ ಆಗಿದೆ. ಅದಕ್ಕಾಗಿ ಸಚಿವರ ರಾಜೀನಾಮೆ ಪಡೆದು ಅವರನ್ನು ಇ.ಡಿ ಬಂಧಿಸಿದೆ. ಹಾಗಾದರೆ ಭೈರತಿ ಸುರೇಶ್‌ ಯಾವ ಮುಖ ಇಟ್ಟುಕೊಂಡು ಸಚಿವರಾಗಿ ಮುಂದುವರೆದಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು. ನಮ್ಮತುಮಕೂರಿನ ಕ್ಷಣ…

Read More

ರಾಮನಗರ: ಸಿದ್ದರಾಮಯ್ಯನವರ ಪತ್ನಿ ಅವರಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು? ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಬಿಜೆಪಿ–ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಪತ್ನಿಗೆ ಅವರ ಸಹೋದರ ಅರಿಶಿನ ಕುಂಕುಮಕ್ಕೆ ದಾನವಾಗಿ ನೀಡಿದ ಜಮೀನಿನ ವಿಚಾರದಲ್ಲಿ ಅಕ್ರಮ ನಡೆದಿದೆಯಾ? ಅವರು ಸರ್ಕಾರಿ ಜಮೀನು ಕಬಳಿಸಿದ್ದಾರಾ? ಅಕ್ರಮವಾಗಿ ಜಮೀನು ಮಂಜೂರಾತಿ ಮಾಡಿಕೊಂಡಿದ್ದಾರಾ? ಅವರ ಜಮೀನನ್ನು ಮುಡಾದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಕಾರಣಕ್ಕೆ ಪರಿಹಾರವಾಗಿ ನಿವೇಶನ ಪಡೆದುಕೊಂಡಿದ್ದಾರೆ. ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು. ನಿಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ, ಬೊಮ್ಮಾಯಿ ಅವರು ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ನಿವೇಶನ ನೀಡಿದ್ದೀರಿ. ಈ ನಿವೇಶನಗಳನ್ನು ಈಗ ಸಚಿವರಾಗಿರುವ ಭೈರತಿ ಸುರೇಶ್ ಕೊಟ್ಟಿದ್ದಾರಾ? ಸಿದ್ದರಾಮಯ್ಯ ಈ ನಿವೇಶನ ನೀಡಲು ಸಹಿ ಹಾಕಿದ್ದಾರಾ? ಬಿಜೆಪಿ ಅಧಿಕಾರದಲ್ಲಿದ್ದಾಗ, ಬಿಜೆಪಿಯವರು ಮುಡಾದಲ್ಲಿ ಅಧಿಕಾರ ಹೊಂದಿದ್ದಾಗ ಈ ನಿವೇಶನ ಹಂಚಿಕೆ ಮಾಡಲಾಗಿದೆ. ಮುಡಾದವರು ತಮ್ಮ ತಪ್ಪಿಗೆ ಪರಿಹಾರವಾಗಿ…

Read More

ಸಾಮಾನ್ಯವಾಗಿ ಫೋನ್ ನೊಂದಿಗೆ ಬರುವ ಚಾರ್ಜರ್ ಗಳು ಕೆಲವು ದಿನಗಳ ನಂತರ ಹಾನಿಗೊಳಗಾಗುತ್ತವೆ. ಅವರು ಮಾರುಕಟ್ಟೆಯಲ್ಲಿ ಲಭ್ಯವಿರುವ ಚಾರ್ಜರ್ ಅನ್ನು ಖರೀದಿಸುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ, ಮೂಲ ಕಂಪನಿಯ ಚಾರ್ಜರ್ ಗಳು ಹೆಚ್ಚು ದುಬಾರಿಯಾಗಿವೆ. ಇದು ಅವರನ್ನು ಕಡಿಮೆ ವೆಚ್ಚದ ಟ್ರಾವೆಲ್ ಚಾರ್ಜರ್ ಗಳನ್ನು ಖರೀದಿಸುವಂತೆ ಮಾಡುತ್ತದೆ. ಆದಾಗ್ಯೂ, ಇವು ನಿಮ್ಮ ಸ್ಮಾರ್ಟ್ಫೋನ್ ಅನ್ನು ಹಾನಿಗೊಳಿಸಬಹುದು. ಬೆರಳಿನಿಂದ ಖರೀದಿಸಿದ ಸ್ಮಾರ್ಟ್ಫೋನ್ ನೂರಾರು ರೂಪಾಯಿಗಳ ಚಾರ್ಜರ್ಗಳಿಂದಾಗಿ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ. ನಕಲಿ ಚಾರ್ಜರ್ ಗಳು ಸಹ ಮಾರುಕಟ್ಟೆಯಲ್ಲಿ ಹೆಚ್ಚುತ್ತಿವೆ. ನೀವು ಬಳಸುತ್ತಿರುವ ಚಾರ್ಜರ್ ಅಸಲಿಯೇ ಅಥವಾ ಅಲ್ಲವೇ ಎಂದು ಕಂಡುಹಿಡಿಯಲು ಲಭ್ಯವಿರುವ ಕೆಲವು ಸಲಹೆಗಳು ಇಲ್ಲಿವೆ. ಅವು ಯಾವುವು ಎಂದು ಈಗ ಕಂಡುಹಿಡಿಯೋಣ.. * ಚಾರ್ಜರ್ ನ ಹಿಂಭಾಗದಲ್ಲಿ ಡಬಲ್ ಸ್ಕ್ವೇರ್ ಚಿಹ್ನೆ ಇದ್ದರೆ. ಇದರರ್ಥ ಮೊಬೈಲ್ ಚಾರ್ಜರ್ ಒಳಗೆ ಬಳಸುವ ವೈರಿಂಗ್ ಡಬಲ್ ಇನ್ಸುಲೇಟೆಡ್ ಆಗಿದೆ. ಈ ಚಾರ್ಜರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಗಳು ಕಡಿಮೆ. ಆದ್ದರಿಂದ ಈ ಚಾರ್ಜರ್ ಅನ್ನು…

Read More

ಪಾವಗಡ: ತಾಲ್ಲೂಕಿನ ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ ಗುಂಪು ವಿಭಾಗದಲ್ಲಿ ಖೋ ಖೋ ಕ್ರೀಡೆಯಲ್ಲಿ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿವೆ. ಅಲ್ಲದೇ ವೈಯುಕ್ತಿಕ ವಿಭಾಗದಲ್ಲಿ400 ಮೀ. ಓಟದಲ್ಲಿ ಶಿವಮ್ಮ ಪ್ರಥಮ ಸ್ಥಾನ,100 ಮೀ. ಮತ್ತು 200 ಮೀ ಓಟದಲ್ಲಿ ಸತೀಶ್ ದ್ವಿತೀಯ ಸ್ಥಾನ, 800 ಮೀ. ಓಟದಲ್ಲಿ ಶಾಲಿನಿ ಪ್ರಥಮ ಸ್ಥಾನ,1500 ಮೀ. ಓಟದಲ್ಲಿ ಅನಿತಲಕ್ಷ್ಮೀ ಪ್ರಥಮ ಸ್ಥಾನ ಮತ್ತು 3000 ಮೀ. ಓಟದಲ್ಲಿ ಪೂರ್ಣಿಮಾ ದ್ವಿತೀಯ ಸ್ಥಾನಗಳನ್ನು ಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗ ಎಸ್.ಡಿ.ಎಂ.ಸಿ. ಅದ್ಯಕ್ಷರು, ಸರ್ವ ಸದಸ್ಯರು ಅರಸೀಕೆರೆಯ ಗ್ರಾಮಸ್ಥರು ಕ್ರೀಡೆಯಲ್ಲಿ ಗೆದ್ದ ಎಲ್ಲರಿಗೂ ಮತ್ತು ಕ್ರೀಡಾ ತರಬೇತುದಾರ ರಾದ ವಿಮಲಾರವರಿಗೆ, ತರಬೇತಿ ನೀಡಿದ ರಾಜಶೇಖರಯ್ಯ, ಸೋಮನಾಥ,ತ್ರಿಶೂಲ್ ಮತ್ತು ಇತರರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೀದರ್: ಕಮಲನಗರ ತಾಲೂಕಿನ ಬಸನಾಳ–ಕೋರಿಯಾಳ ಗ್ರಾಮಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ಸ್ವಲ್ಪ ಮಳೆಯಾದರೆ ಸಾಕು ಕೆಸರು ಗದ್ದೆಯಂತಾಗುತ್ತದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ. ʼಸುಮಾರು 2–3 ಕಿ.ಮೀ ಇರುವ ಈ ರಸ್ತೆಯಲ್ಲಿ ತಗ್ಗು, ಗುಂಡಿಗಳೇ ತುಂಬಿಕೊಂಡಿವೆ. ರಸ್ತೆಯಲ್ಲಿ ಡಾಂಬರ್ ಎಂಬುದು ಮಾಯವಾಗಿ ಬರೀ ಕೆಸರು ತುಂಬಿಕೊಂಡಿದೆ. ರಸ್ತೆ ಗುಂಡಿಗಳಲ್ಲಿ ಮಳೆ ನೀರು ಸಂಗ್ರಹವಾಗಿ ವಾಹನ ಸವಾರರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಇನ್ನು ದ್ವಿಚಕ್ರ ವಾಹನ ಸವಾರರ ಪರದಾಟ ಹೇಳತೀರದುʼ ಎಂಬುದು ಪ್ರಯಾಣಿಕರ ಅಭಿಪ್ರಾಯ.ಭಾಲ್ಕಿಯಿಂದ ದಿನಕ್ಕೆ ಒಂದು ಸಲ ಬರುವ ಸಾರಿಗೆ ಬಸ್ ಕೂಡ ರಸ್ತೆ ಸಮಸ್ಯೆ ಕಾರಣಕ್ಕೆ ಕೆಲ ದಿನಗಳಿಂದ ಬರುತ್ತಿಲ್ಲ. ಇದರಿಂದ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಸುತ್ತಲಿನ ಗ್ರಾಮಗಳ ರೈತರು, ಪ್ರಯಾಣಿಕರು ಸಕಾಲಕ್ಕೆ ತಲುಪದೇ ಸಮಸ್ಯೆಯಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ರಸ್ತೆ ದುರಸ್ತಿಗೆ ಮುಂದಾಗಬೇಕು ಎಂದು ಬಸನಾಳ ಗ್ರಾಮದ ನಿವಾಸಿ ಸದಾನಂದ ಪಾಟೀಲ್ ಆಗ್ರಹಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ದೇಶದ ಆಯ್ದ ನಗರಗಳಲ್ಲಿ ಬಿಎಸ್ ಎನ್ ಎಲ್ ತನ್ನ 5ಜಿ ಸಿಮ್ ಬಿಡುಗಡೆಗೊಳಿಸಿದೆ. ಮುಂಬರುವ ದಿನಗಳಲ್ಲಿ ನೆಟ್ ವರ್ಕ್ ಅಪ್‌ಡೇಟ್ ಮಾಡುವ ಮಹತ್ತರ ಯೋಜನೆ ಹೊಂದಿರುವುದಾಗಿ ತಿಳಿಸಿದೆ. ಸದ್ಯ ಆಂಧ್ರ, ತೆಲಂಗಾಣ, ಕೇರಳದಲ್ಲಿ ಈ ಸಿಮ್ ಲಭ್ಯವಿದೆ. ಇಂಟರ್ ನೆಟ್ ಸ್ಪೀಡ್ ಹೆಚ್ಚಿಸಲು ತೀರ್ಮಾನಿಸಿದೆ. ಈ ಭಾಗದ ಜನರಿಗೆ ಅಧಿಕೃತ ಬಿಎಸ್ ಎನ್ ಎಲ್ ಸಿಮ್ ಮಾರಾಟ ಮಾಡುವವರ ಬಳಿ ಸಿಮ್ ಲಭ್ಯವಿದ್ದು, ಹಳೆ ಸಿಮ್ ಗಳನ್ನು 5ಜಿಗೆ ಬದಲಿಸಿಕೊಳ್ಳುವ ಆಯ್ಕೆ ನೀಡಲಾಗಿದೆ. ಹೊಸ 5ಜಿ ಸಿಮ್ ವಿಶಿಷ್ಟ ಮಾದರಿಯಲ್ಲಿದ್ದು, 5ಜಿ ಎಂದು ತ್ರಿವರ್ಣದಲ್ಲಿ ಬರೆದಿದೆ. ಸಂಪೂರ್ಣವಾಗಿ 5ಜಿ ರೂಪಾಂತರಗೊಂಡ ಬಳಿಕ, ಹೊಸ ಸಿಮ್ ಅಗತ್ಯವಿಲ್ಲದೇ ಹಳೆ ಸಿಮ್ ಮೂಲಕವೇ 5ಜಿ ಸೌಲಭ್ಯ ಪಡೆಯಬಹುದು ಎಂದಿದೆ. ಕೇಂದ್ರ ಸರ್ಕಾರದ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಹ್ಯಾಂಡಲ್ ಮೂಲಕ ವೀಡಿಯೊವೊಂದರನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಅವರು 5 ಜಿ ನೆಟ್ವರ್ಕ್ ಮೂಲಕ ವೀಡಿಯೊ ಕಾಲ್ ಮಾಡಿದ್ದಾರೆ.…

Read More

ಬೆಂಗಳೂರು: ವಯನಾಡಿನಲ್ಲಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ಕರ್ನಾಟಕ ಸರ್ಕಾರ ನಿಂತಿದೆ. ಮಾನವೀಯ ನೆಲೆಯಲ್ಲಿ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಮನೆ ನಿರ್ಮಾಣ ಮಾಡಿಕೊಡಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಹೇಳಿದ್ದಾರೆ. ವಯನಾಡಿನ ಚೂರಲ್ಮಾಲ, ಮುಂಡಕ್ಕೈ ಹಾಗೂ ಅಟ್ಟಮಾಲ ಊರುಗಳು ಗುರುತು ಸಿಗದಂತೆ ಅಳಿದು ಹೋಗಿದೆ. ಸಾವನ್ನಪ್ಪಿದವರಿಗಾಗಿ ಇನ್ನೂ ಹುಡುಕಾಟ ನಡೆಯುತ್ತಲೇ ಇದೆ. ರಕ್ಷಣಾ ಕಾರ್ಯಾಚರಣೆಯೂ ಮುಂದುವರಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More