Author: admin

ಸಿರಾ: ಸಿರಾ ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ದೊಡ್ಡಾಲದಮರ ಗ್ರಾಮದ ಬುದ್ದಿಮಾಂದ್ಯ ಶಾರದಮ್ಮ ಮತ್ತು ಮಂಜುನಾಥ ಅವರ ಕುಟುಂಬದವರು, ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ದಾಖಲೆಗಳಿಲ್ಲದೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆಂದು ಮನವಿ ಮಾಡಿಕೊಂಡಿದ್ದರು. ಈ ಬಗ್ಗೆ ನಿನ್ನೆ , ಕಳ್ಳಂಬೆಳ್ಳ ನಾಡ ಕಚೇರಿಯ ಉಪ ತಹಶೀಲ್ದಾರ್ ನರಸಿಂಹಮೂರ್ತಿ ಅವರು ದೂರವಾಣಿ ಮೂಲಕ ಮಾತನಾಡಿ, ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅಧಿಕಾರಿಗಳ ಭೇಟಿ: ಇಂದು ಬೆಳಿಗ್ಗೆ 10:30 ಗಂಟೆಗೆ, ಉಪ ತಹಶಿಲ್ದಾರ್ ನರಸಿಂಹಮೂರ್ತಿ ಮತ್ತು ಗ್ರಾಮ ಆಡಳಿತಾಧಿಕಾರಿ ನಟರಾಜು ಅವರು ಶಾರದಮ್ಮ ಮತ್ತು ಮಂಜುನಾಥರ ಸ್ಥಳಕ್ಕೆ ಭೇಟಿ ನೀಡಿದರು. ಅವರು ಸಮಸ್ಯೆ ಆಲಿಸಿ, ತುರ್ತಾಗಿ ಸೌಲಭ್ಯ ಕಲ್ಪಿಸುವುದಾಗಿ ತಿಳಿಸಿದರು. ಉಪ ತಹಶಿಲ್ದಾರ್ ನರಸಿಂಹಮೂರ್ತಿ ಮತ್ತು ಗ್ರಾಮ ಆಡಳಿತಾಧಿಕಾರಿ ನಟರಾಜು ಅವರ ತ್ವರಿತ ಹಾಗೂ ಸಮರ್ಪಕ ಕಾರ್ಯಚಟುವಟಿಕೆಗಳನ್ನು ಸ್ಥಳೀಯರು ಅಭಿನಂದಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಯಾದಗಿರಿ: ನಗರ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಸೈಬರ್ ಕ್ರೈಮ್ ಪಿಎಸ್ ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟರ್ಸ್ ನಿವಾಸದಲ್ಲಿ ಹಠಾತ್ ಹೃದಯಾಘಾತಕ್ಕೊಳಗಾಗಿದ್ದಾರೆ. ಘಟನೆಯ ಬೆನ್ನಲ್ಲೇ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಶಾಸಕರ ಒತ್ತಡದಿಂದ ಹೃದಯಾಘಾತ ಸಂಭವಿಸಿದೆ ಎಂದು ಪರಶುರಾಮ್ ಪತ್ನಿ ಆರೋಪಿಸಿದ್ದಾರೆ. ಪತಿಯ ಸಾವಿಗೆ ನ್ಯಾಯ ದೊರಕಿಸಿ ಕೊಡುವಂತೆ ಪರಶುರಾಮ್ ಪತ್ನಿ ಶ್ವೇತಾ ಪ್ರತಿಭಟನೆ ಮಾಡುತ್ತಿದ್ದಾರೆ. ಇವರು 8 ತಿಂಗಳ ಗರ್ಭಿಣಿಯಾಗಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಶ್ವೇತಾ, ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. 30/ 40 ಲಕ್ಷ ಹಣ ಕೇಳಿದ್ದಾರೆ. ಸಾಕಷ್ಟು ಭಾರೀ ಹಣ ಕೇಳ್ತಿರುವ ಬಗ್ಗೆ ನನಗೆ ಪತಿ ಹೇಳಿದ್ದಾರೆ. ಎಂಎಲ್ ಎ ಹಾಗೂ ಎಂಎಲ್ ಎ ಮಗ ಹಣ ಕೇಳಿದ್ದಾರೆ. ಅವರ…

Read More

ಚಿಕ್ಕಬಳ್ಳಾಪುರ: ತಾಯಿಯ ಸಾವಿನಿಂದ ನೊಂದು ಅಕ್ಕ ಹಾಗೂ ತಮ್ಮ ರೈಲಿನ ಹಳಿಯಲ್ಲಿ ಮಲಗಿ ಸಾವಿಗೆ ಶರಣಾಗಿರು ಘಟನೆ ಶಿಡ್ಲಘಟ್ಟದಲ್ಲಿ ನಡೆದಿದೆ. ಪ್ರೇಮನಗರ ನವ್ಯ ಅಲಿಯಾಸ್ ಶಿಲ್ಪ (25) ಮತ್ತು ಪ್ರಭು(23) ಮೃತರು. ಶಿಡ್ಲಘಟ್ಟದ ಮಾರ್ಗವಾಗಿ ಬೆಂಗಳೂರಿನಿಂದ ಕೋಲಾರಕ್ಕೆ ತೆರಳುವ ರೈಲಿಗೆ ಹಳಿ ಮೇಲೆ ಮಲಗಿ ಇವರು ಸಾವಿಗೆ ಶರಣಾಗಿದ್ದಾರೆ. ತಾಯಿಯ ಸಾವು ಇವರಿಬ್ಬರನ್ನು ತೀವ್ರವಾಗಿ ಕಾಡಿತ್ತು ಎನ್ನಲಾಗಿದೆ. ಪ್ರಭು ಈ ಹಿಂದೆ ಮನೆಯ ಮೇಲಿನಿಂದ ಬಿದ್ದು ಸಾವಿಗೆ ಯತ್ನಿಸಿದ್ದ. ಆದರೆ ಅದು ವಿಫಲವಾಗಿತ್ತು. ಇದೀಗ ನವ್ಯ ಹಾಗೂ ಪ್ರಭು ತಮ್ಮಿಬ್ಬರ ಕೈಗಳನ್ನು ದಾರದಿಂದ ಕಟ್ಟಿಕೊಂಡು ಶಿಡ್ಲಘಟ್ಟ ರೈಲ್ವೆ ನಿಲ್ದಾಣಕ್ಕೆ ಕೂಗಳತೆ ದೂರದಲ್ಲಿನ ಶೆಟ್ಟಪ್ಪನವರ ತೋಪಿನ ಪಕ್ಕ ಹಾದು ಹೋಗುವ ರೈಲು ಹಳಿ ಮೇಲೆ ತಲೆ ಯಿಟ್ಟು ಮಲಗಿ ಸಾವಿಗೆ ಶರಣಾಗಿದ್ದಾರೆ. ಸಂಜೆಯಾದರೂ ಮಕ್ಕಳು ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ತಂದೆ ನಟರಾಜ್ ಮರುದಿನ ಸುತ್ತಮುತ್ತಾ ಹುಡುಕಾಡಿದ್ದಾರೆ. ಆದರೆ ಬಳಿಕ ಮಕ್ಕಳು ಸಾವಿಗೆ ಶರಣಾಗಿರುವುದು ತಿಳಿದು ಬಂದಿದೆ. ಲಲಿತಮ್ಮ ಮತ್ತು ನಟರಾಜ್‌ಗೆ ಮೂವರು…

Read More

ಔರಾದ್: ಬೀದರ ಜಿಲ್ಲಾ ಔರಾದ್ ಪಟ್ಟಣದ ಜನತಾ ಕಾಲೋನಿ ನಿವಾಸಿ ರವಿ (ತಂದೆ ಸುಮಂತ್ ವರ್ಮ)ರವರ ಮನೆಯಲ್ಲಿ ಮಧ್ಯ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡು ಮನೆಯಲ್ಲಿನ ಸಾಮಗ್ರಿಗಳು ಸುಟ್ಟು  ಹೋಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ವಿಷಯ ತಿಳಿದು  ಕಾಂಗ್ರೆಸ್ ಪಕ್ಷದ ಮುಖಂಡರಾದ ಸುಧಾಕರ ಕೊಳ್ಳುರ ಅವರು ರವಿ ವರ್ಮ ರವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ನಿಮ್ಮ ಜೊತೆ ನಾವಿದ್ದೇವೆ ಎಂದು ಹೇಳಿದರು. ಇದೇ ವೇಳೆ  ಔರಾದ ತಹಶೀಲ್ದಾರ್ ಅವರಿಗೆ ದೂರವಾಣಿ ಕರೆ  ಮಾಡಿ, ಘಟನೆಯ ಮಾಹಿತಿ ನೀಡಿದರಲ್ಲದೇ ಕುಟುಂಬಕ್ಕೆ ಪರಿಹಾರ ನೀಡುವಂತೆ  ತಾಲೂಕು ಆಡಳಿತವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಶಂಕು ನಿಷ್ಪತೆ, ಗಣೇಶ್ ಮಡಿವಾಳ, ವಿಜಯ್ ಕುಮಾರ್ ಒಡೆಯರ್, ಯಶೇಪ್ಪಾ ಮುಂತಾದರೂ ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಪಾವಗಡ: ನಾನು ಶಿಕ್ಷಕನಾಗಿ ಅಕ್ಷರ ಬಿತ್ತುವ ಕಾರ್ಯವನ್ನು ಮಾಡಲು ಪ್ರಥಮ ಅವಕಾಶವನ್ನು ಮಾಡಿಕೊಟ್ಟ ನನ್ನ ಸೇವಾ ಪ್ರಥಮ ಶಾಲೆ ಇದ್ದಾಗಿದ್ದು, ಇಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಶಿಕ್ಷಕರಾದ ಜಗನ್ನಾಥ್ ಅರಸು ತಿಳಿಸಿದ್ದಾರೆ. ಪಾವಗಡ ತಾಲ್ಲೂಕು ವೈ.ಎನ್.ಹೊಸಕೋಟೆ ಹೋಬಳಿಯ ತಿಪ್ಪಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ 2000–2002 ಸಾಲಿನ 7ನೇ ತರಗತಿ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಹಳೆಯ ವಿದ್ಯಾರ್ಥಿಗಳು ಇಂದು ಗುರುವಂದನಾ ಕಾರ್ಯಕ್ರಮ ನಡೆಸುತ್ತಿರುವುದು ತುಂಬಾ ಸಂತೋಷದ ವಿಷಯ.  ಗುರುಗಳಿಂದ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೆ ಹೋದಾಗ ಗುರುಗಳ ಬೋಧನೆ ಪರಿಶ್ರಮಕ್ಕೆ ಪ್ರತಿಫಲ ಸಿಕ್ಕಿದಂತೆ ಆಗುತ್ತದೆ ಹಾಗೂ ವಿದ್ಯಾರ್ಥಿಗಳ ಪ್ರಗತಿಯನ್ನು ಕಂಡು ತಂದೆಯಷ್ಟೆ ಗುರುಗಳು ಹೆಮ್ಮೆ ಪಡುತ್ತಾರೆ. ವಿದ್ಯಾರ್ಥಿಗಳು ತಾವು ಕಲಿತ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕರಿಸಿ ಮುಂದಿನ ಪೀಳಿಗೆಯ ಪ್ರಗತಿಗೆ ಸಹಕಾರಿಯಾಗಬೇಕು ಎಂದರು. ಶಿಕ್ಷಕಿ ಸಾವಿತ್ರಮ್ಮ ಮಾತನಾಡಿ, ನಮ್ಮ ಕೈ ಕೆಳಗೆ…

Read More

ತುಮಕೂರು : ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಪರವಾಗಿ ಅತ್ಯಂತ ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ನ ತೀರ್ಪು ಶ್ಲಾಘನೀಯವಾದದ್ದು, ಇದನ್ನು  ದಲಿತ ಸಂರಕ್ಷಣಾ ಸಮಿತಿ ಹಾಗೂ ದಲಿತಪರ ಸಂಘಟನೆಗಳು  ಸ್ವಾಗತಿಸುವುದರ ಜೊತೆಗೆ ಹರ್ಷ ವ್ಯಕ್ತಪಡಿಸುತ್ತದೆ ಮತ್ತು 30 ವರ್ಷಗಳ ನಿರಂತರವಾದ ಹೋರಾಟಗಾರರ ಹೋರಾಟಕ್ಕೆ ಬೆಲೆ ಸಿಕ್ಕಂತಾಗಿದೆ ಎಂದು ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕರು ಸಾಮಾಜಿಕ ಹೋರಾಟಗಾರ ಚಲನಚಿತ್ರ ನಟ ಜೆಟ್ಟಿ ಅಗ್ರಹಾರ ನಾಗರಾಜು ಟೈಗರ್ ನಾಗ್ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಒಳ ಮೀಸಲಾತಿಯಿಂದ ಸಮಾನತೆಗೆ ಯಾವುದೇ ಧಕ್ಕೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಎಸ್ ಸಿ ಎಸ್ ಟಿ  ಮೀಸಲಾತಿಯಲ್ಲಿ ಉಪ ವರ್ಗೀಕರಣ ಅಧಿಕಾರ ಆಯಾ  ರಾಜ್ಯಗಳಿಗೆ ಇದೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರ ಚೂಡ ಅವರಿಂದ ಸಂವಿಧಾನಿಕ ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ, ಉಪಪಂಗಡಗಳ ಒಳ ಮೀಸಲಾತಿಯಿಂದ ಸಮಾನತೆಯ ನಿಯಮ ಉಲ್ಲಂಘನೆ ಆಗಲ್ಲ ಎಂದು ಒಳ ಮೀಸಲಾತಿ ಪರವಾಗಿ ತೀರ್ಪು ಐತಿಹಾಸಿ ತೀರ್ಪು ನೀಡಿರುವುದು…

Read More

ತುಮಕೂರು: ತುಮಕೂರು ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿಯಾದ ಎಂ.ಆರ್.ಮಮತ ಅವರು ಇಂದು ದೈವಾಧೀನರಾಗಿದ್ದಾರೆ. ಇವರು ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪತಿ ಹಿರಿಯ ಪತ್ರಕರ್ತ ಎಚ್.ಆರ್.ರವೀಶ್, ಮಗ ಪ್ರಜ್ವಲ್ ಹಾಗೂ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ತುಮಕೂರು ತಾಲ್ಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ಆಗಸ್ಟ್ 3ರ ಶನಿವಾರ ಮಧ್ಯಾಹ್ನ ನೆರವೇರಲಿದೆ. ಬೆಂಗಳೂರಿನ ಅವರ ಮನೆಯಲ್ಲಿ ಇಂದು ಸಂಜೆ 8 ಗಂಟೆಯಿಂದ ನಾಳೆ ಬೆಳಿಗ್ಗೆ 8 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು ಕುಟುಂಬ ಮೂಲಗಳು ತಿಳಿಸಿವೆ. ಎಂ.ಆರ್.ಮಮತ ಅವರಿಗೆ ಇತ್ತೀಚೆಗೆ ಅನಾರೋಗ್ಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೆಂದು ಕುಟುಂಬಸ್ಥರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸರಗೂರು: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ ಆದಿಜಾಂಬವ ಸಮುದಾಯದ ಮುಖಂಡರು ಪಟ್ಟಣದಲ್ಲಿ ಶುಕ್ರವಾರ ದಂದು ಸಂಭ್ರಮಾಚರಣೆ ಮಾಡಿದರು. ತಾಲ್ಲೂಕಿನ ಪಟ್ಟಣ ಸಂತೆ ಮಾಸ್ತಮ್ಮ ದೇವಸ್ಥಾನದಿಂದ ಮುಖಂಡರು ಅಲ್ಲಿಂದ ಪಟ್ಟಣ ಪಂಚಾಯಿತಿ ಮುಂಭಾಗದವರೆಗೆ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ಮಾಡಿದರು. ಪರಸ್ಪರ ಸಿಹಿ ಹಂಚಿದರು. ಅಲ್ಲಿಂದ ಪಟ್ಟಣ ಪಂಚಾಯಿತಿ ಮತ್ತು ಬಸ್ ನಿಲ್ದಾಣದ ಮುಂಭಾಗದಲ್ಲಿ ಮುಂದೆ ಪಟಾಗಿ ಸಿಡಿಸಿ, ಕೇಂದ್ರ ಮತ್ತು ರಾಜ್ಯಸರ್ಕಾರದ ಪರ ಘೋಷಣೆಗಳನ್ನು ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು. ನಂತರ ಬಿ ಮಟಕೆರೆ ಗ್ರಾಪಂ ಸದಸ್ಯ ಕುರ್ಣೇಗಾಲ ಬೆಟ್ಟಸ್ವಾಮಿ ಮಾತನಾಡಿ, ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಬೇಕು ಎಂಬುದು 30 ರಿಂದ 40 ವರ್ಷಗಳ ಹೋರಾಟದ ಬೇಡಿಕೆ. ಒಳ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡಿಕೊಂಡು ಬರಲಾಗಿತ್ತು. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಹಲವು ವರ್ಷಗಳ ಈ ಬೇಡಿಕೆಯನ್ನು ಈಡೇರಿಸುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ. ಈ ನಿರ್ಧಾರದಿಂದ ಇಡೀ ರಾಜ್ಯದ ಮಾದಿಗ ಸಮುದಾಯಕ್ಕೆ ಅನುಕೂಲವಾಗಲಿದೆ. ಇಡೀ…

Read More

ಬೀದರ್: ಜಿಲ್ಲಾ ಔರಾದ್ ತಾಲೂಕಿನ ಸಂತಪೂರ್ ಗ್ರಾಮಕ್ಕೆ ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ದಿಢೀರ್ ಭೇಟಿ ನೀಡಿದರು. ಇದೇ ವೇಳೆ ಗ್ರಾಮದಲ್ಲಿ ನಡೆದ ಕಳಪೆ ಕಾಮಗಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ತುಕಾರಾಮ್ ಹಸನ್ಮುಖಿ ಗೆಳೆಯರ ಬಳಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಈ ಸಮಯದಲ್ಲಿ ಔರಾದ ತಹಶೀಲ್ದಾರ್ ಮಲ್ಲಿಶೆಟ್ಟಿ ಚಿದ್ರೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: ತಾಲೂಕು ಕಚೇರಿ ಆವರಣದಲ್ಲಿ ಮಹಾತ್ಮ ಶಿವಯೋಗಿ ಸ್ವಾಮೀಜಿಯವರ ಜನ್ಮದಿನ ಆಚರಣೆ ಮಾಡಲಾಯಿತು. ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ಸ್ವಾಮೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ಮದ್ಯಪಾನ, ಧೂಮಪಾನ ಮಾದಕ ವಸ್ತುಗಳ ಸೇವನೆ ವಿರುದ್ಧ ಜಾಥಾ ನಡೆಸಲಾಯಿತು. ಅಧಿಕಾರಿಗಳಿಂದ ಪ್ರತಿಜ್ಞಾವಿಧಿ ಹಾಗೂ ಬೀದಿ ನಾಟಕದ ತಂಡದಿಂದ ಜನಪದ ಗೀತೆಗಳು ಹಾಗೂ ಬೀದಿ ನಾಟಕ ಪ್ರದರ್ಶಿಸಿಸಲಾಯಿತು. ಜಾಗೃತಿ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಮಂಜುನಾಥ್ ಕೆ. ಚಾಲನೆ ನೀಡಿದರು. ತಾಲೂಕು ಕಚೇರಿಯಿಂದ ಮಧ್ಯ ಬಸ್ಟ್ಯಾಂಡ್ ವರೆಗೆ ಕಾಲ್ನಾಡಿಗೆ ಜಾಥಾ ಮೂಲಕ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಮತ್ತು ಬೀದಿ ನಾಟಕದ ತಂಡ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು, ತಾಲೂಕಿನ ಎಲ್ಲ ಶಾಲೆಯ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಬೀದಿ ನಾಟಕ ತಂಡದವರು ಹಾಜರಿದ್ದರು. ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More